Homeಮುಖಪುಟಕಾರ್ಗಿಲ್ ಯೋಧನ ಕುಟುಂಬಕ್ಕೆ ಭಾರತೀಯ ಪೌರತ್ವ ಸಾಬೀತುಪಡಿಸಲು ಒತ್ತಾಯ: ವರದಿ

ಕಾರ್ಗಿಲ್ ಯೋಧನ ಕುಟುಂಬಕ್ಕೆ ಭಾರತೀಯ ಪೌರತ್ವ ಸಾಬೀತುಪಡಿಸಲು ಒತ್ತಾಯ: ವರದಿ

- Advertisement -
- Advertisement -

ಶನಿವಾರ ತಡರಾತ್ರಿ ಪೊಲೀಸರೊಂದಿಗೆ ಮನೆಗೆ ನುಗ್ಗಿದ 30 ರಿಂದ 40 ಜನರ ಗುಂಪು, ನಮ್ಮ ಭಾರತೀಯ ಪೌರತ್ವ ಸಾಬೀತು ಮಾಡುವಂತೆ ಒತ್ತಾಯಿಸಿದೆ ಎಂದು ಕಾರ್ಗಿಲ್ ಯುದ್ದದಲ್ಲಿ ಪಾಲ್ಗೊಂಡಿದ್ದ ಪುಣೆ ಮೂಲದ ನಿವೃತ್ತ ಹಿರಿಯ ಯೋಧನ ಕುಟುಂಬ ಆರೋಪಿಸಿದೆ.

ತಡರಾತ್ರಿ ಪುಣೆಯ ಚಂದನ್ ನಗರದ ನಮ್ಮ ಮನೆಗೆ ಏಕಾಏಕಿ ಮನೆಗ ನುಗ್ಗಿದ ಗುಂಪು, ನಮ್ಮ ಭಾರತೀಯ ಪೌರತ್ವದ ದಾಖಲೆಗಳನ್ನು ತೋರಿಸುವಂತೆ ಒತ್ತಾಯಿಸಿದೆ. ಅಲ್ಲದೆ, ನಮ್ಮನ್ನು ಪೊಲೀಸ್ ಠಾಣೆಗೆ ಕರೆದೊಯ್ಯಲಾಗಿದೆ ಎಂದು1999ರಲ್ಲಿ ಕಾರ್ಗಿಲ್ ಯುದ್ಧದಲ್ಲಿ ಭಾಗವಹಿಸಿದ್ದ ನಿವೃತ್ತ ಯೋಧ ಹಕೀಮುದ್ದೀನ್ ಶೇಖ್ ಅವರ ಕುಟುಂಬ ಮಂಗಳವಾರ ಹೇಳಿಕೊಂಡಿದೆ.

“ಬೆಳಿಗ್ಗೆ 3 ಗಂಟೆಯವರೆಗೆ ಕಾಯುತ್ತೇವೆ . ಅದರೊಳಗೆ ನೀವು ಪೌರತ್ವ ಸಾಬೀತು ಮಾಡಲು ವಿಫಲರಾದರೆ, ನಿಮ್ಮನ್ನು ಬಾಂಗ್ಲಾದೇಶಿಯರು ಅಥವಾ ರೋಹಿಂಗ್ಯಾಗಳು ಎಂಬುವುದಾಗಿ ಘೋಷಿಸುತ್ತೇವೆ” ಎಂದು ನಮಗೆ ಬೆದರಿಕೆ ಹಾಕಲಾಗಿದೆ ಎಂದು ಯೋಧನ ಕುಟುಂಬ ತಿಳಿಸಿದೆ.

“ಅಕ್ರಮ ವಲಸಿಗರು ಎಂಬ ಶಂಕೆಯ ಮೇಲೆ ಪೊಲೀಸರು ಪರಿಶೀಲನೆ ನಡೆಸಿದ್ದಾರೆ. ನಮ್ಮ ತಂಡ ದಾಖಲೆಗಳನ್ನು ಕೇಳಿತ್ತು. ಅವರು ಭಾರತೀಯರು ಎಂದು ಖಚಿತವಾದ ಬಳಿಕ, ಅವರನ್ನು ಬಿಟ್ಟು ಕಳಿಸಿದ್ದೇವೆ. ಪೊಲೀಸರ ತಂಡದೊಂದಿಗೆ ಹೊರಗಿನವರು ಯಾರು ಇರಲಿಲ್ಲ. ಈ ಬಗ್ಗೆ ವಿಡಿಯೋ ಇದೆ” ಎಂದು ಡಿಸಿಪಿ ಸೋಮೈ ಮುಂಡೆ ಹೆಳಿದ್ದಾರೆ.

58 ವರ್ಷದ ನಿವೃತ್ತ ಯೋಧ ಹಕೀಮುದ್ದೀನ್ ಅವರು, 1984ರಿಂದ 2000ವರೆಗೆ ಭಾರತೀಯ ಸೇನೆಯ 269ನೇ ಇಂಜಿನಿಯರ್ ರೆಜೆಮೆಂಟ್‌ನಲ್ಲಿ 16 ವರ್ಷದ ಸೇವೆ ಸಲ್ಲಿಸಿದವರು. “ಕಾರ್ಗಿಲ್ ಯುದ್ದದಲ್ಲಿ ನಾನು ಈ ದೇಶಕ್ಕೋಸ್ಕರ ಹೋರಾಡಿದವನು. ನನ್ನ ಇಡೀ ಕುಟುಂಬ ಈ ದೇಶಕ್ಕೆ ಸಮರ್ಪಿತವಾಗಿದೆ. ನಮ್ಮನ್ನೇಕೆ ಪೌರತ್ವ ಸಾಬೀತುಪಡಿಸಲು ಕೇಳಿದ್ದು? ಎಂದು ಹಕೀಮುದ್ದೀನ್ ಪ್ರಶ್ನಿಸಿದ್ದಾರೆ.

ಹಕೀಮುದ್ದೀನ್ ಅವರ ಕುಟುಂಬಸ್ಥರು ಮೂಲತಃ ಉತ್ತರ ಪ್ರದೇಶದ ಪ್ರತಾಪ್‌ಘಡದವರು, 1960ರಿಂದ ಪುಣೆಯಲ್ಲಿ ವಾಸಿಸುತ್ತಿದ್ದಾರೆ. ಹಕೀಮುದ್ದೀನ್ 2013ರಲ್ಲಿ ತನ್ನ ಸ್ವಗ್ರಾಮಕ್ಕೆ ಹಿಂದಿರುಗಿದ್ದಾರೆ. ಅವರ ಸಹೋದರ,ಇತರ ಕುಟುಂಬಸ್ಥರು ಮತ್ತು ಸಂಬಂಧಿಕರು ಪುಣೆಯಲ್ಲೇ ಇದ್ದಾರೆ.

ಅಪರಿಚಿತ ಪುರುಷರ ಗುಂಪೊಂದು ಘೋಷಣೆಗಳನ್ನು ಕೂಗುತ್ತಾ ನಮ್ಮ ಮನೆ ಬಳಿಗೆ ಬಂತು. ಬಾಗಿಲಿಗೆ ಒದ್ದು ಏಕಾಏಕಿ ಮನೆಯೊಳಗೆ ನುಗ್ಗಿತು. ದಾಖಲೆಗಳನ್ನು ನೀಡುವಂತೆ ಒತ್ತಾಯಿಸಿತು. ಸಿವಿಲ್ ಡ್ರೆಸ್‌ನಲ್ಲಿದ್ದ ಅಧಿಕಾರಿಯೊಬ್ಬರು ಅವರನ್ನು ಶಾಂತಗೊಳಿಸಲು ಪ್ರಯತ್ನಿಸಿದರು. ಪೊಲೀಸ್ ವ್ಯಾನ್ ರಸ್ತೆಯಲ್ಲಿ ಕಾಯುತ್ತಿತ್ತು” ಎಂದು ಹಕೀಮುದ್ದೀನ್ ಅವರ ಸಹೋದರ ಇರ್ಷಾದ್ ಶೇಖ್ ಹೇಳಿದ್ದಾರೆ.

ಹಕೀಮುದ್ದೀನ್ ಮಾತ್ರವಲ್ಲದೆ ನಮ್ಮ ಕುಟುಂಬದಲ್ಲಿ ಶೇಖ್ ನಯೀಮುದ್ದೀನ್ ಮತ್ತು ಶೇಖ್ ಮೊಹಮ್ಮದ್ ಸಲೀಂ ಎಂಬ ಇನ್ನಿಬ್ಬರು ನಿವೃತ್ತ ಯೋಧರಿದ್ದಾರೆ. ಅವರು 1965 ಮತ್ತು 1971ರ ಯುದ್ಧಗಳಲ್ಲಿ ದೇಶಕ್ಕಾಗಿ ಹೋರಾಡಿವದರು. “ಸೈನಿಕರ ಕುಟುಂಬಗಳನ್ನು ಹೀಗೆ ನಡೆಸಿಕೊಳ್ಳುತ್ತಾರಾ? ಎಂದು ಇರ್ಷಾದ್ ಪ್ರಶ್ನಿಸಿದ್ದಾರೆ. ಸಿಕ್ಕ ಸಿಕ್ಕವರು ಬಾಗಿಲು ತಟ್ಟಿದಾಗಲೆಲ್ಲಾ ನಮ್ಮ ಪೌರತ್ವ ಸಾಬೀತುಪಡಿಸಬೇಕಾದರೆ ನಾವು ಭಾರತೀಯರಾಗಿರುವುದರ ಅರ್ಥವೇನು? ಎಂದಿದ್ದಾರೆ.

ಮನೆಗೆ ನುಗ್ಗಿದ ಗುಂಪು ದಾಖಲೆಗಳನ್ನು ತೋರಿಸಿದರೂ ಅದನ್ನು ನಿರಾಕರಿಸಿದೆ ಎಂದು ಆರೋಪಿಸಲಾಗಿದೆ. ನಾವು ಆಧಾರ್ ಕಾರ್ಡ್ ತೋರಿಸಿದರೂ, ಅದು ನಕಲಿ ಎಂದು ಗುಂಪು ಅಪಹಾಸ್ಯ ಮಾಡಿತು ಎಂದು ಯೋಧ ಹಕೀಮುದ್ದೀನ್ ಅವರ ಸೋದರಳಿಯರಾದ ನೌಶಾದ್ ಮತ್ತು ನವಾಬ್ ಶೇಖ್ ಹೇಳಿದ್ದಾರೆ. ಅವರು ಗೂಂಡಾಗಳಂತೆ ವರ್ತಿಸಿದ್ದಾರೆ ಎಂದು ನೌಶಾದ್ ಆರೋಪಿಸಿದ್ದು, ಅವರು ಬಾಗಿಲಿಗೆ ಒದ್ದರು, ಮಹಿಳೆಯರ ಮುಂದೆ ದಾಖಲೆ ತೋರಿಸುವಂತೆ ಅಬ್ಬರಿಸಿದರು ಎಂದು ಹೇಳಿದ್ದಾರೆ.

ಭಾನುವಾರ ಕೂಡ ನಮ್ಮನ್ನು ಪೊಲೀಸ್ ಠಾಣೆಗೆ ಕರೆಸಲಾಗಿತ್ತು. ಅಲ್ಲಿ ನಮ್ಮ ದಾಖಲೆಗಳನ್ನು ಪಡೆದು ಎರಡು ಗಂಟೆ ಕಾಯಿಸಿದರು. ನಂತರ ಇನ್‌ಸ್ಪೆಕ್ಟರ್ ಬರಲ್ಲ ಎಂದು ಕಳಿಸಿದರು. ನಮ್ಮ ದಾಖಲೆಗಳು ಈಗಲೂ ಅವರ ಬಳಿಯಿದೆ ಎಂದು ಮತ್ತೊಬ್ಬರು ಶಂಶಾದ್ ಶೇಖ್ ತಿಳಿಸಿದ್ದಾರೆ.

ಈ ಪ್ರಕರಣದ ತನಿಖೆ ನಡೆಸಲಾಗುತ್ತಿದೆ ಎಂದು ಪೊಲೀಸ್ ಆಯುಕ್ತ ಅಮಿತೇಶ್ ಕುಮಾರ್ ಹೇಳಿದ್ದು, “ನಿರ್ಲಕ್ಷ್ಯ ಕಂಡುಬಂದರೆ ಕ್ರಮ ಕೈಗೊಳ್ಳಲಾಗುವುದು. ಪ್ರಾಥಮಿಕ ಮಾಹಿತಿ ಪ್ರಕಾರ ಪೊಲೀಸರು ಬಲವಂತವಾಗಿ ಮನೆಗೆ ಪ್ರವೇಶಿಸಿಲ್ಲ” ಎಂದಿದ್ದಾರೆ.

Courtesy: timesofindia.indiatimes.com

ಅಸ್ಸಾಂನ ಗೋಲಾಘಾಟ್‌ನಲ್ಲಿ ಬೃಹತ್ ತೆರವು ಕಾರ್ಯಾಚರಣೆ: ನೆಲೆ ಕಳೆದುಕೊಳ್ಳಲಿರುವ 1,500ಕ್ಕೂ ಹೆಚ್ಚು ಮುಸ್ಲಿಂ ಕುಟುಂಬಗಳು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಲೋಕಸಭೆ ಸ್ಪೀಕರ್ ಓಂ ಬಿರ್ಲಾ ವಿರುದ್ಧದ ಅವಿಶ್ವಾಸ ನಿರ್ಣಯಕ್ಕೆ ಸೋಲು

ಲೋಕಸಭೆ ಸ್ಪೀಕರ್ ಓಂ ಬಿರ್ಲಾ ವಿರುದ್ಧ ವಿರೋಧ ಪಕ್ಷಗಳು ಮಂಡಿಸಿದ್ದ ಅವಿಶ್ವಾಸ ನಿರ್ಣಯವು ಬುಧವಾರ (ಮಾ.11) ಧ್ವನಿ ಮತದ ಮೂಲಕ ತಿರಸ್ಕಾರಗೊಂಡಿದೆ. ಸದನದಲ್ಲಿ ವಿರೋಧ ಪಕ್ಷಗಳ ತೀವ್ರ ಗದ್ದಲ ಮತ್ತು ಘೋಷಣೆಗಳ ನಡುವೆಯೇ ಸ್ಪೀಕರ್...

ಉತ್ತರ ಪ್ರದೇಶ| ರಸ್ತೆ ಗುಂಡಿಗೆ ಇಳಿದ ಆಂಬ್ಯುಲೆನ್ಸ್; ಮರುಜೀವ ಪಡೆದ ಮೆದುಳು ನಿಷ್ಕ್ರಿಯಗೊಂಡಿದ್ದ ಮಹಿಳೆ!

ಉತ್ತರ ಪ್ರದೇಶದ ಬರೇಲಿಯ ಖಾಸಗಿ ಆಸ್ಪತ್ರೆಯೊಂದರ ವೈದ್ಯರು ಮೆದುಳು ನಿಷ್ಕ್ರಿಯ ಎಂದು ಘೋಷಿಸಿದ್ದು, ಮಹಿಳೆಯೊಬ್ಬರ ಮೃತದೇಹವನ್ನು ಅಂತ್ಯಕ್ರಿಯೆಗಾಗಿ ಮನೆಗೆ ಸಾಗಿಸುತ್ತಿದ್ದಾಗ ಆಂಬ್ಯುಲೆನ್ಸ್ ರಸ್ತೆಯ ಗುಂಡಿಗೆ ಇಳಿದ ನಂತರ ಆಕೆ ಜೀವಂತವಾಗಿರುವ ಲಕ್ಷಣಗಳು ಕಂಡುಬಂದು...

ಪಶ್ಚಿಮ ಏಷ್ಯಾ ಸಂಘರ್ಷ: ದುಬೈ ವಿಮಾನ ನಿಲ್ದಾಣದ ಮೇಲೆ ಇರಾನ್​ ಡ್ರೋನ್​ ದಾಳಿ; ಭಾರತೀಯ ಪ್ರಜೆ ಸೇರಿ ನಾಲ್ವರಿಗೆ ಗಾಯ

ದುಬೈ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದ ಬಳಿ ಇರಾನಿನ ಎರಡು ಡ್ರೋಣಗಳಿಂದ ದಾಳಿ ನಡೆದಿದೆ. ಈ ದಾಳಿಯಲ್ಲಿ ಓರ್ವ ಭಾರತೀಯ ಸೇರಿದಂತೆ ನಾಲ್ವರು ಗಾಯಗೊಂಡಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಅಲ್ಲಿನ ಸರ್ಕಾರದ ಪರವಾಗಿ ಪ್ರಕಟಣೆ ಹೊರಡಿಸಿರುವ...

ಜಾರ್ಖಂಡ್| ಆಂಬ್ಯುಲೆನ್ಸ್ ನಿರಾಕರಿಸಿದ ಆಸ್ಪತ್ರೆ ಸಿಬ್ಬಂದಿ; ಕಾರ್ಡ್‌ಬೋರ್ಡ್‌ನಲ್ಲಿ ಮಗುವಿನ ಶವ ಸಾಗಿಸಿದ ತಂದೆ

ಆಸ್ಪತ್ರೆ ಸಿಬ್ಬಂದಿ ಆಂಬ್ಯುಲೆನ್ಸ್ ನಿರಾಕರಿಸಿದ್ದರಿಂದ ಕೂಲಿಕಾರ ತಂದೆಯೊಬ್ಬ ಕಾರ್ಡ್‌ಬೋರ್ಡ್‌ನಲ್ಲಿ ಮಗುವಿನ ಶವ ಸಾಗಿಸಿರುವ ಹೃದಯವಿದ್ರಾವಕ ಘಟನೆಯೊಂದು ಜಾರ್ಖಂಡ್‌ನ ಪಶ್ಚಿಮ ಸಿಂಗ್ಭೂಮ್ ಜಿಲ್ಲೆಯಲ್ಲಿ ಬೆಳಕಿಗೆ ಬಂದಿದೆ. ಕಳೆದ ಶನಿವಾರ ನಡೆದಿದೆ ಎನ್ನಲಾದ...

ಮಧುರಾಂತಕಂ ಬಳಿ 14 ವರ್ಷದ ಬಾಲಕಿಯ ಮೇಲೆ ಸಾಮೂಹಿಕ ಅತ್ಯಾಚಾರ: ಪೋಕ್ಸೋ ಪ್ರಕರಣದಡಿ ಓರ್ವ ರೌಡಿ ಶೀಟರ್ ಬಂಧನ

ಚೆನ್ನೈ (ಚೆಂಗಲ್ಪಟ್ಟು): ಸೋಮವಾರ ರಾತ್ರಿ ಮಧುರಾಂಟಕಂ ಬಳಿಯ ಜಲಮೂಲದ ದಡದಲ್ಲಿ 14 ವರ್ಷದ ಬಾಲಕಿಯ ಮೇಲೆ ರೌಡಿ ಶೀಟರ್ ಮತ್ತು ಆತನ ಸಹಚರರು ಸಾಮೂಹಿಕ ಅತ್ಯಾಚಾರ ಎಸಗಿದ್ದಾರೆ ಎಂದು ವರದಿಯಾಗಿದೆ. ಪ್ರಕರಣ ಸಂಬಂಧ ಪೋಕ್ಸೋ...

ಮುಸ್ಲಿಂ ಮಹಿಳೆಯರ ವಿರುದ್ಧದ ಷರಿಯಾ ಕಾನೂನಿಗೆ ಏಕರೂಪ ನಾಗರಿಕ ಸಂಹಿತೆ ಪರಿಹಾರ: ಸುಪ್ರೀಂ ಕೋರ್ಟ್

"ಮುಸ್ಲಿಂ ವೈಯಕ್ತಿಕ ಕಾನೂನಿನಡಿಯಲ್ಲಿ ತಾರತಮ್ಯದ ಆನುವಂಶಿಕ ನಿಬಂಧನೆಗಳನ್ನು ಪರಿಹರಿಸಲು ಏಕರೂಪ ನಾಗರಿಕ ಸಂಹಿತೆ (ಯುಸಿಸಿ) ಅತ್ಯಂತ ಪರಿಣಾಮಕಾರಿ ಪರಿಹಾರ ಎಂದು ಸುಪ್ರೀಂ ಕೋರ್ಟ್ ಮಂಗಳವಾರ (ಮಾ.20) ಹೇಳಿದೆ. ಮುಖ್ಯ ನ್ಯಾಯಮೂರ್ತಿ ಸೂರ್ಯ...

ಮುಂಬೈ: ಬಜೆಟ್ ಅಧಿವೇಶನದ ನಡುವೆ ವಿಧಾನ ಭವನದ ಬಳಿ ವ್ಯಕ್ತಿಯೊಬ್ಬನಿಂದ ಆತ್ಮಹತ್ಯೆಗೆ ಯತ್ನ: ವಶಕ್ಕೆ ಪಡೆದ ಪೊಲೀಸರು

ಮುಂಬೈ: ಮಾರ್ಚ್ 11, ಬುಧವಾರ ಮಹಾರಾಷ್ಟ್ರ ವಿಧಾನ ಭವನದ ಹೊರಗೆ ವ್ಯಕ್ತಿಯೊಬ್ಬರು ಆತ್ಮಾಹುತಿ ಮಾಡಿಕೊಳ್ಳಲು ಯತ್ನಿಸಿರುವುದಾಗಿ ವರದಿಯಾಗಿದೆ. ತಕ್ಷಣವೇ ಮುಂಬೈ ಪೊಲೀಸರು ಆತನನ್ನು ಬಂಧಿಸಿದ್ದಾರೆ.  2026 ರ ಮಹಾರಾಷ್ಟ್ರ ಬಜೆಟ್ ಅಧಿವೇಶನ ವಿಧಾನ ಭವನದಲ್ಲಿ...

ಕೋವಿಡ್ ಲಸಿಕೆ ಕೆಲ ಸಾವುಗಳಿಗೆ ಕಾರಣವಾಗಿದೆ ಎಂದು ಅಧಿಕೃತ ದತ್ತಾಂಶ ತೋರಿಸಿದೆ, ಸರ್ಕಾರ ಜವಾಬ್ದಾರಿಯಿಂದ ನುಣುಚಿಕೊಳ್ಳಲು ಸಾಧ್ಯವಿಲ್ಲ : ಸುಪ್ರೀಂ ಕೋರ್ಟ್

ಸರ್ಕಾರದ ಅಧೀನದ ಸಾರ್ವಜನಿಕ ಆರೋಗ್ಯ ವ್ಯವಸ್ಥೆಯ ಮೂಲಕ ಕೋವಿಡ್ ಲಸಿಕೆಯನ್ನು ವಿತರಿಸಲಾಗಿದೆ. ಕೋವಿಡ್ ಲಸಿಕೆ ಪಡೆದ ಬಳಿಕ ಕೆಲ ಸಾವುಗಳು ಸಂಭವಿಸಿರುವುದನ್ನು ಅಧಿಕೃತ ದತ್ತಾಂಶಗಳೇ ದೃಢಪಡಿಸಿವೆ. ಹೀಗಿರುವಾಗ, ಲಸಿಕೆ ಹಾಕಿಸಿಕೊಂಡ ನಂತರ ಸಾವು...

ತಮಿಳುನಾಡು| ಪೊಲೀಸ್ ದೌರ್ಜನ್ಯದಿಂದ ಎರಡು ತಿಂಗಳಲ್ಲಿ ನಾಲ್ವರು ದಲಿತರು ಸಾವು

ವಿಧಾನಸಭೆ ಚುನಾವಣೆ ಹೊಸ್ತಿಲಲ್ಲಿರುವ ತಮಿಳುನಾಡಿನಲ್ಲಿ ಕಾನೂನು ಸುವ್ಯವಸ್ಥೆ ಹದಗೆಡುತ್ತಿರುವುದನ್ನು ಪ್ರತಿಬಿಂಬಿಸುವ ಆತಂಕಕಾರಿ ವಿಚಾರವೊಂದು ಮುನ್ನಲೆಗೆ ಬಂದಿದ್ದು, ಪೊಲೀಸ್ ಹಿಂಸಾಚಾರದಿಂದಾಗಿ ಎರಡು ತಿಂಗಳ ಅವಧಿಯಲ್ಲಿ ನಾಲ್ವರು ದಲಿತರು ಸಾವನ್ನಪ್ಪಿದ್ದಾರೆ. ಈ ಸಾವುಗಳಲ್ಲಿ, ಎರಡು ಪ್ರಕರಣಗಳನ್ನು...

ಪಶ್ಚಿಮ ಏಷ್ಯಾ ಸಂಘರ್ಷ| ಹಾರ್ಮುಜ್ ಜಲಸಂಧಿಯಲ್ಲಿ ಇರಾನಿನ 16 ಹಡಗುಗಳನ್ನು ನಾಶಪಡಿಸಿದ್ದಾಗಿ ವಿಡಿಯೋ ಹಂಚಿಕೊಂಡ ಅಮೆರಿಕ ಸೇನೆ

ಪಶ್ಚಿಮ ಏಷ್ಯಾದಿಂದ ತೈಲ ರಫ್ತನ್ನು ತಡೆಯಲು ಇರಾನ್ ಪ್ರಯತ್ನಿಸುತ್ತಿರುವುದರಿಂದ ಹಾರ್ಮುಜ್ ಜಲಸಂಧಿಯಲ್ಲಿ ಇರಾನಿನ 16 ಹಡಗುಗಳನ್ನು ನಾಶಪಡಿಸಿರುವುದಾಗಿ ಅಮೆರಿಕ ಸೇನೆ ಹೇಳಿಕೊಂಡಿದೆ.  ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಈ ಹಿಂದೆ ಇರಾನ್ ಜಲಸಂಧಿಯಲ್ಲಿ ಗಣಿಗಳನ್ನು...