Homeಮುಖಪುಟಕಾರ್ಗಿಲ್ ಯೋಧನ ಕುಟುಂಬಕ್ಕೆ ಭಾರತೀಯ ಪೌರತ್ವ ಸಾಬೀತುಪಡಿಸಲು ಒತ್ತಾಯ: ವರದಿ

ಕಾರ್ಗಿಲ್ ಯೋಧನ ಕುಟುಂಬಕ್ಕೆ ಭಾರತೀಯ ಪೌರತ್ವ ಸಾಬೀತುಪಡಿಸಲು ಒತ್ತಾಯ: ವರದಿ

- Advertisement -
- Advertisement -

ಶನಿವಾರ ತಡರಾತ್ರಿ ಪೊಲೀಸರೊಂದಿಗೆ ಮನೆಗೆ ನುಗ್ಗಿದ 30 ರಿಂದ 40 ಜನರ ಗುಂಪು, ನಮ್ಮ ಭಾರತೀಯ ಪೌರತ್ವ ಸಾಬೀತು ಮಾಡುವಂತೆ ಒತ್ತಾಯಿಸಿದೆ ಎಂದು ಕಾರ್ಗಿಲ್ ಯುದ್ದದಲ್ಲಿ ಪಾಲ್ಗೊಂಡಿದ್ದ ಪುಣೆ ಮೂಲದ ನಿವೃತ್ತ ಹಿರಿಯ ಯೋಧನ ಕುಟುಂಬ ಆರೋಪಿಸಿದೆ.

ತಡರಾತ್ರಿ ಪುಣೆಯ ಚಂದನ್ ನಗರದ ನಮ್ಮ ಮನೆಗೆ ಏಕಾಏಕಿ ಮನೆಗ ನುಗ್ಗಿದ ಗುಂಪು, ನಮ್ಮ ಭಾರತೀಯ ಪೌರತ್ವದ ದಾಖಲೆಗಳನ್ನು ತೋರಿಸುವಂತೆ ಒತ್ತಾಯಿಸಿದೆ. ಅಲ್ಲದೆ, ನಮ್ಮನ್ನು ಪೊಲೀಸ್ ಠಾಣೆಗೆ ಕರೆದೊಯ್ಯಲಾಗಿದೆ ಎಂದು1999ರಲ್ಲಿ ಕಾರ್ಗಿಲ್ ಯುದ್ಧದಲ್ಲಿ ಭಾಗವಹಿಸಿದ್ದ ನಿವೃತ್ತ ಯೋಧ ಹಕೀಮುದ್ದೀನ್ ಶೇಖ್ ಅವರ ಕುಟುಂಬ ಮಂಗಳವಾರ ಹೇಳಿಕೊಂಡಿದೆ.

“ಬೆಳಿಗ್ಗೆ 3 ಗಂಟೆಯವರೆಗೆ ಕಾಯುತ್ತೇವೆ . ಅದರೊಳಗೆ ನೀವು ಪೌರತ್ವ ಸಾಬೀತು ಮಾಡಲು ವಿಫಲರಾದರೆ, ನಿಮ್ಮನ್ನು ಬಾಂಗ್ಲಾದೇಶಿಯರು ಅಥವಾ ರೋಹಿಂಗ್ಯಾಗಳು ಎಂಬುವುದಾಗಿ ಘೋಷಿಸುತ್ತೇವೆ” ಎಂದು ನಮಗೆ ಬೆದರಿಕೆ ಹಾಕಲಾಗಿದೆ ಎಂದು ಯೋಧನ ಕುಟುಂಬ ತಿಳಿಸಿದೆ.

“ಅಕ್ರಮ ವಲಸಿಗರು ಎಂಬ ಶಂಕೆಯ ಮೇಲೆ ಪೊಲೀಸರು ಪರಿಶೀಲನೆ ನಡೆಸಿದ್ದಾರೆ. ನಮ್ಮ ತಂಡ ದಾಖಲೆಗಳನ್ನು ಕೇಳಿತ್ತು. ಅವರು ಭಾರತೀಯರು ಎಂದು ಖಚಿತವಾದ ಬಳಿಕ, ಅವರನ್ನು ಬಿಟ್ಟು ಕಳಿಸಿದ್ದೇವೆ. ಪೊಲೀಸರ ತಂಡದೊಂದಿಗೆ ಹೊರಗಿನವರು ಯಾರು ಇರಲಿಲ್ಲ. ಈ ಬಗ್ಗೆ ವಿಡಿಯೋ ಇದೆ” ಎಂದು ಡಿಸಿಪಿ ಸೋಮೈ ಮುಂಡೆ ಹೆಳಿದ್ದಾರೆ.

58 ವರ್ಷದ ನಿವೃತ್ತ ಯೋಧ ಹಕೀಮುದ್ದೀನ್ ಅವರು, 1984ರಿಂದ 2000ವರೆಗೆ ಭಾರತೀಯ ಸೇನೆಯ 269ನೇ ಇಂಜಿನಿಯರ್ ರೆಜೆಮೆಂಟ್‌ನಲ್ಲಿ 16 ವರ್ಷದ ಸೇವೆ ಸಲ್ಲಿಸಿದವರು. “ಕಾರ್ಗಿಲ್ ಯುದ್ದದಲ್ಲಿ ನಾನು ಈ ದೇಶಕ್ಕೋಸ್ಕರ ಹೋರಾಡಿದವನು. ನನ್ನ ಇಡೀ ಕುಟುಂಬ ಈ ದೇಶಕ್ಕೆ ಸಮರ್ಪಿತವಾಗಿದೆ. ನಮ್ಮನ್ನೇಕೆ ಪೌರತ್ವ ಸಾಬೀತುಪಡಿಸಲು ಕೇಳಿದ್ದು? ಎಂದು ಹಕೀಮುದ್ದೀನ್ ಪ್ರಶ್ನಿಸಿದ್ದಾರೆ.

ಹಕೀಮುದ್ದೀನ್ ಅವರ ಕುಟುಂಬಸ್ಥರು ಮೂಲತಃ ಉತ್ತರ ಪ್ರದೇಶದ ಪ್ರತಾಪ್‌ಘಡದವರು, 1960ರಿಂದ ಪುಣೆಯಲ್ಲಿ ವಾಸಿಸುತ್ತಿದ್ದಾರೆ. ಹಕೀಮುದ್ದೀನ್ 2013ರಲ್ಲಿ ತನ್ನ ಸ್ವಗ್ರಾಮಕ್ಕೆ ಹಿಂದಿರುಗಿದ್ದಾರೆ. ಅವರ ಸಹೋದರ,ಇತರ ಕುಟುಂಬಸ್ಥರು ಮತ್ತು ಸಂಬಂಧಿಕರು ಪುಣೆಯಲ್ಲೇ ಇದ್ದಾರೆ.

ಅಪರಿಚಿತ ಪುರುಷರ ಗುಂಪೊಂದು ಘೋಷಣೆಗಳನ್ನು ಕೂಗುತ್ತಾ ನಮ್ಮ ಮನೆ ಬಳಿಗೆ ಬಂತು. ಬಾಗಿಲಿಗೆ ಒದ್ದು ಏಕಾಏಕಿ ಮನೆಯೊಳಗೆ ನುಗ್ಗಿತು. ದಾಖಲೆಗಳನ್ನು ನೀಡುವಂತೆ ಒತ್ತಾಯಿಸಿತು. ಸಿವಿಲ್ ಡ್ರೆಸ್‌ನಲ್ಲಿದ್ದ ಅಧಿಕಾರಿಯೊಬ್ಬರು ಅವರನ್ನು ಶಾಂತಗೊಳಿಸಲು ಪ್ರಯತ್ನಿಸಿದರು. ಪೊಲೀಸ್ ವ್ಯಾನ್ ರಸ್ತೆಯಲ್ಲಿ ಕಾಯುತ್ತಿತ್ತು” ಎಂದು ಹಕೀಮುದ್ದೀನ್ ಅವರ ಸಹೋದರ ಇರ್ಷಾದ್ ಶೇಖ್ ಹೇಳಿದ್ದಾರೆ.

ಹಕೀಮುದ್ದೀನ್ ಮಾತ್ರವಲ್ಲದೆ ನಮ್ಮ ಕುಟುಂಬದಲ್ಲಿ ಶೇಖ್ ನಯೀಮುದ್ದೀನ್ ಮತ್ತು ಶೇಖ್ ಮೊಹಮ್ಮದ್ ಸಲೀಂ ಎಂಬ ಇನ್ನಿಬ್ಬರು ನಿವೃತ್ತ ಯೋಧರಿದ್ದಾರೆ. ಅವರು 1965 ಮತ್ತು 1971ರ ಯುದ್ಧಗಳಲ್ಲಿ ದೇಶಕ್ಕಾಗಿ ಹೋರಾಡಿವದರು. “ಸೈನಿಕರ ಕುಟುಂಬಗಳನ್ನು ಹೀಗೆ ನಡೆಸಿಕೊಳ್ಳುತ್ತಾರಾ? ಎಂದು ಇರ್ಷಾದ್ ಪ್ರಶ್ನಿಸಿದ್ದಾರೆ. ಸಿಕ್ಕ ಸಿಕ್ಕವರು ಬಾಗಿಲು ತಟ್ಟಿದಾಗಲೆಲ್ಲಾ ನಮ್ಮ ಪೌರತ್ವ ಸಾಬೀತುಪಡಿಸಬೇಕಾದರೆ ನಾವು ಭಾರತೀಯರಾಗಿರುವುದರ ಅರ್ಥವೇನು? ಎಂದಿದ್ದಾರೆ.

ಮನೆಗೆ ನುಗ್ಗಿದ ಗುಂಪು ದಾಖಲೆಗಳನ್ನು ತೋರಿಸಿದರೂ ಅದನ್ನು ನಿರಾಕರಿಸಿದೆ ಎಂದು ಆರೋಪಿಸಲಾಗಿದೆ. ನಾವು ಆಧಾರ್ ಕಾರ್ಡ್ ತೋರಿಸಿದರೂ, ಅದು ನಕಲಿ ಎಂದು ಗುಂಪು ಅಪಹಾಸ್ಯ ಮಾಡಿತು ಎಂದು ಯೋಧ ಹಕೀಮುದ್ದೀನ್ ಅವರ ಸೋದರಳಿಯರಾದ ನೌಶಾದ್ ಮತ್ತು ನವಾಬ್ ಶೇಖ್ ಹೇಳಿದ್ದಾರೆ. ಅವರು ಗೂಂಡಾಗಳಂತೆ ವರ್ತಿಸಿದ್ದಾರೆ ಎಂದು ನೌಶಾದ್ ಆರೋಪಿಸಿದ್ದು, ಅವರು ಬಾಗಿಲಿಗೆ ಒದ್ದರು, ಮಹಿಳೆಯರ ಮುಂದೆ ದಾಖಲೆ ತೋರಿಸುವಂತೆ ಅಬ್ಬರಿಸಿದರು ಎಂದು ಹೇಳಿದ್ದಾರೆ.

ಭಾನುವಾರ ಕೂಡ ನಮ್ಮನ್ನು ಪೊಲೀಸ್ ಠಾಣೆಗೆ ಕರೆಸಲಾಗಿತ್ತು. ಅಲ್ಲಿ ನಮ್ಮ ದಾಖಲೆಗಳನ್ನು ಪಡೆದು ಎರಡು ಗಂಟೆ ಕಾಯಿಸಿದರು. ನಂತರ ಇನ್‌ಸ್ಪೆಕ್ಟರ್ ಬರಲ್ಲ ಎಂದು ಕಳಿಸಿದರು. ನಮ್ಮ ದಾಖಲೆಗಳು ಈಗಲೂ ಅವರ ಬಳಿಯಿದೆ ಎಂದು ಮತ್ತೊಬ್ಬರು ಶಂಶಾದ್ ಶೇಖ್ ತಿಳಿಸಿದ್ದಾರೆ.

ಈ ಪ್ರಕರಣದ ತನಿಖೆ ನಡೆಸಲಾಗುತ್ತಿದೆ ಎಂದು ಪೊಲೀಸ್ ಆಯುಕ್ತ ಅಮಿತೇಶ್ ಕುಮಾರ್ ಹೇಳಿದ್ದು, “ನಿರ್ಲಕ್ಷ್ಯ ಕಂಡುಬಂದರೆ ಕ್ರಮ ಕೈಗೊಳ್ಳಲಾಗುವುದು. ಪ್ರಾಥಮಿಕ ಮಾಹಿತಿ ಪ್ರಕಾರ ಪೊಲೀಸರು ಬಲವಂತವಾಗಿ ಮನೆಗೆ ಪ್ರವೇಶಿಸಿಲ್ಲ” ಎಂದಿದ್ದಾರೆ.

Courtesy: timesofindia.indiatimes.com

ಅಸ್ಸಾಂನ ಗೋಲಾಘಾಟ್‌ನಲ್ಲಿ ಬೃಹತ್ ತೆರವು ಕಾರ್ಯಾಚರಣೆ: ನೆಲೆ ಕಳೆದುಕೊಳ್ಳಲಿರುವ 1,500ಕ್ಕೂ ಹೆಚ್ಚು ಮುಸ್ಲಿಂ ಕುಟುಂಬಗಳು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರೈಲುಗಳಲ್ಲಿ ಹಲಾಲ್ ಮಾಂಸ; ರೈಲ್ವೆಗೆ ಮಾನವ ಹಕ್ಕುಗಳ ಆಯೋಗ ನೋಟಿಸ್

ಭಾರತೀಯ ರೈಲ್ವೆ ತನ್ನ ರೈಲುಗಳಲ್ಲಿ ಹಲಾಲ್-ಸಂಸ್ಕರಿಸಿದ ಮಾಂಸವನ್ನು ಮಾತ್ರ ಪೂರೈಸುತ್ತದೆ ಎಂಬ ದೂರು ಬಂದ ನಂತರ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ (ಎನ್‌ಎಚ್‌ಆರ್‌ಸಿ) ರೈಲ್ವೆ ಮಂಡಳಿಗೆ ನೋಟಿಸ್ ನೀಡಿದೆ. "ಇದು ತಾರತಮ್ಯವನ್ನು ಸೃಷ್ಟಿಸುತ್ತದೆ,...

ಕರ್ತವ್ಯದಲ್ಲಿದ್ದಾಗ ಧಾರ್ಮಿಕ ಆಚರಣೆಗೆ ನಿರಾಕರಣೆ; ಹೈದರಾಬಾದ್ ಪೊಲೀಸರ ವಿರುದ್ಧ ಹಿಂದುತ್ವ ಗುಂಪಿನಿಂದ ಪ್ರತಿಭಟನೆ

ಕರ್ತವ್ಯದಲ್ಲಿರುವಾಗ ಸಬ್-ಇನ್ಸ್‌ಪೆಕ್ಟರ್ ಅವರಿಗೆ ಅಯ್ಯಪ್ಪ ದೀಕ್ಷಾ ಪದ್ಧತಿಗಳನ್ನು ಅನುಸರಿಸಲು ಅನುಮತಿ ನಿರಾಕರಿಸಿದ ಪೊಲೀಸ್ ಆಂತರಿಕ ಜ್ಞಾಪಕ ಪತ್ರವು ಸಾರ್ವಜನಿಕವಾಗಿ ಪ್ರಸಾರವಾದ ನಂತರ ಹೈದರಾಬಾದ್‌ನ ಆಗ್ನೇಯ ವಲಯ ಪೊಲೀಸರು ರಾಜಕೀಯ ವಿವಾದದ ಮಧ್ಯದಲ್ಲಿ ಸಿಲುಕಿದ್ದಾರೆ. ಮೇಲಧಿಕಾರಿಗಳು...

ಆನ್‌ಲೈನ್‌ ವಿಷಯಗಳ ನಿಯಂತ್ರಣ : ಸ್ವಾಯತ್ತ ಸಂಸ್ಥೆಯ ಅಗತ್ಯವಿದೆ ಎಂದ ಸುಪ್ರೀಂ ಕೋರ್ಟ್

ಆನ್‌ಲೈನ್ ಪ್ಲಾಟ್‌ಫಾರ್ಮ್‌ಗಳಲ್ಲಿ ಅಶ್ಲೀಲ, ಆಕ್ರಮಣಕಾರಿ ಅಥವಾ ಕಾನೂನುಬಾಹಿರ ವಿಷಯವನ್ನು ನಿಯಂತ್ರಿಸಲು 'ತಟಸ್ಥ, ಸ್ವತಂತ್ರ ಮತ್ತು ಸ್ವಾಯತ್ತ' ಸಂಸ್ಥೆಯ ಅಗತ್ಯವಿದೆ ಎಂದು ಸುಪ್ರೀಂ ಕೋರ್ಟ್ ಗುರುವಾರ (ನ. 27) ಒತ್ತಿ ಹೇಳಿದೆ. ಮಾಧ್ಯಮ ಸಂಸ್ಥೆಗಳು...

ಆರು ವರ್ಷದ ಬಾಲಕಿ ಮೇಲೆ ಅತ್ಯಾಚಾರ: ಕೃತ್ಯ ಎಸಗಿದವನನ್ನು ಗಲ್ಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಆಗ್ರಹ

ಮಧ್ಯಪ್ರದೇಶದ ಪಂಜ್ರಾ ಗ್ರಾಮದಲ್ಲಿ ಆರು ವರ್ಷದ ಬಾಲಕಿಯ ಮೇಲೆ ನಡೆದ ಅತ್ಯಾಚಾರ ಪ್ರಕರಣ ಪ್ರತಿಭಟನೆಗೆ ಕಾರಣವಾಯಿತು. ಕೃತ್ಯ ಎಸಗಿದ ಸಲ್ಮಾನ್‌ನನ್ನು ಗಲಗಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಒಗ್ಗಟ್ಟಾಗಿ ಆಗ್ರಹಿಸಿದೆ. ನ್ಯಾಯಕ್ಕಾಗಿ ಒತ್ತಾಯಿಸುತ್ತಿರುವ ಎರಡೂ ಸಮುದಾಯಗಳು ಕೃತ್ಯವನ್ನು...

ತೆಲಂಗಾಣ ಮಾಜಿ ಸರಪಂಚ್ ಭೀಕರ ಹತ್ಯೆ ಪ್ರಕರಣ; ಸುಪಾರಿ ಗ್ಯಾಂಗ್ ಬಂಧನ

ತೆಲಂಗಾಣ ರಾಜ್ಯದ ಗದ್ವಾಲ ಜಿಲ್ಲೆಯ ನಂದಿನ್ನಿ ಗ್ರಾಮದ ಮಾಜಿ ಸರಪಂಚ ಚಿನ್ನ ಭೀಮರಾಯ ಎಂಬುವವರನ್ನು ಕಳೆದ ಶುಕ್ರವಾರ ಮಧ್ಯಾಹ್ನ ಜಾಂಪಲ್ಲಿ ಗ್ರಾಮದ ಹತ್ತಿರ ದ್ವಿಚಕ್ರ ವಾಹನಕ್ಕೆ ಕಾರಿನಿಂದ ಡಿಕ್ಕಿ ಹೊಡೆದು ಕೊಲೆ ಮಾಡಲಾಗಿತ್ತು....

ಹಿರಿಯ ನಾಯಕರೊಂದಿಗೆ ಚರ್ಚಿಸಿ ಸಿಎಂ ಬದಲಾವಣೆ ಗೊಂದಲಕ್ಕೆ ತೆರೆ : ಮಲ್ಲಿಕಾರ್ಜುನ ಖರ್ಗೆ

ಕರ್ನಾಟಕದಲ್ಲಿ ಹೆಚ್ಚುತ್ತಿರುವ ನಾಯಕತ್ವದ ಜಗಳವನ್ನು ಪರಿಹರಿಸಲು ರಾಹುಲ್ ಗಾಂಧಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಸೇರಿದಂತೆ ಪಕ್ಷದ ಹಿರಿಯ ನಾಯಕರೊಂದಿಗೆ ನವದೆಹಲಿಯಲ್ಲಿ ಸಭೆ ನಡೆಸುವುದಾಗಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ...

ದಲಿತ ಎಂಬ ಕಾರಣಕ್ಕೆ ಅಯೋಧ್ಯೆ ಧ್ವಜಾರೋಹಣಕ್ಕೆ ನನ್ನನ್ನು ಆಹ್ವಾನಿಸಿಲ್ಲ: ಎಸ್‌ಪಿ ಸಂಸದ ಅವಧೇಶ್ ಪ್ರಸಾದ್

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಾಲಯದಲ್ಲಿ ನಡೆದ ಧ್ವಜಾರೋಹಣ ಸಮಾರಂಭಕ್ಕೆ ತಮ್ಮನ್ನು ಆಹ್ವಾನಿಸಲಾಗಿಲ್ಲ ಎಂದು ಸಮಾಜವಾದಿ ಪಕ್ಷದ ಸಂಸದ ಅವಧೇಶ್ ಪ್ರಸಾದ್ ಹೇಳಿದ್ದಾರೆ. ದಲಿತ ಸಮುದಾಯಕ್ಕೆ ಸೇರಿದವರಾಗಿರುವುದರಿಂದ ನನ್ನನ್ನು ಹೊರಗಿಡಲಾಗಿದೆ ಎಂದು ಅವರು...

ನೂರಾರು ಹುಡುಗಿಯರ ಮೇಲೆ ಲೈಂಗಿಕ ದೌರ್ಜನ್ಯ, ಜೈಲಿನಲ್ಲಿ ನಿಗೂಢ ಸಾವು : ಅಮೆರಿಕವನ್ನು ತಲ್ಲಣಗೊಳಿಸಿದ ಜೆಫ್ರಿ ಎಪ್‌ಸ್ಟೀನ್ ಯಾರು?

ಜೆಫ್ರಿ ಎಪ್‌ಸ್ಟೀನ್ ಎಂಬ ಅಮೆರಿಕದ ಈ ಪ್ರಭಾವಿ ವ್ಯಕ್ತಿಯ ಹೆಸರು ಕಳೆದ ದಿನಗಳಿಂದ ಭಾರೀ ಚರ್ಚೆಯಲ್ಲಿದೆ. 2019ರಿಂದಲೂ ಈತನ ಬಗ್ಗೆ ಜಾಗತಿಕ ಮಟ್ಟದಲ್ಲಿ ಚರ್ಚೆಗಳು ನಡೆದರೂ, ಈಗ ಮತ್ತೊಮ್ಮೆ ಈತನ ವಿಷಯ ಮುನ್ನೆಲೆಗೆ...

ಎಕ್ಸ್‌ಪ್ರೆಸ್ ರೈಲಿನಲ್ಲಿ ನೂಡಲ್ಸ್‌ ಬೇಯಿಸಿದ ಮಹಿಳೆ ಪುಣೆಯಲ್ಲಿ ಪತ್ತೆ; ಕ್ಷಮೆಯಾಚನೆ

ಎಕ್ಸ್‌ಪ್ರೆಸ್ ರೈಲಿನ ಕೋಚ್‌ನ ಪವರ್ ಸಾಕೆಟ್‌ಗೆ ಪ್ಲಗ್ ಮಾಡಲಾದ ಎಲೆಕ್ಟ್ರಿಕ್ ಕೆಟಲ್‌ನಿಂದ ಬಳಸಿ ನೂಡಲ್ಸ್ ತಯಾರಿಸುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿತ್ತು; ಆ ಮಹಿಳೆಯನ್ನು ಕೇಂದ್ರ ರೈಲ್ವೆ ಪತ್ತೆಹಚ್ಚಿದೆ. ಸರಿತಾ ಲಿಂಗಾಯತ್...

ಬೆಂಗಳೂರು ಪೊಲೀಸರಲ್ಲಿ ವಿಶ್ವಾಸಾರ್ಹತೆಯ ಬಿಕ್ಕಟ್ಟು: ಕಳೆದ ಹತ್ತು ತಿಂಗಳಲ್ಲಿ 124 ಪೊಲೀಸ್ ಸಿಬ್ಬಂದಿ ಅಮಾನತು

ಕಳೆದ ಹತ್ತು ತಿಂಗಳಲ್ಲಿ ಬೆಂಗಳೂರಿನಲ್ಲಿ ಕಾನ್‌ಸ್ಟೆಬಲ್‌ಗಳಿಂದ ಹಿಡಿದು ಐಪಿಎಸ್ ಅಧಿಕಾರಿಗಳವರೆಗೆ ಸುಮಾರು 124 ಪೊಲೀಸ್ ಸಿಬ್ಬಂದಿಯನ್ನು, ಭ್ರಷ್ಟಾಚಾರ, ಸುಲಿಗೆ, ದರೋಡೆ, ಕರ್ತವ್ಯ ಲೋಪ ಮತ್ತು ಮಾದಕವಸ್ತು ಮಾರಾಟದಂತಹ ಅಪರಾಧಗಳಿಗಾಗಿ ಅಮಾನತುಗೊಳಿಸಲಾಗಿದೆ. ಆದರೆ ಯಾವುದೇ ಪ್ರಕರಣವೂ...