Homeಮುಖಪುಟಕಾರ್ಗಿಲ್ ಯೋಧನ ಕುಟುಂಬಕ್ಕೆ ಭಾರತೀಯ ಪೌರತ್ವ ಸಾಬೀತುಪಡಿಸಲು ಒತ್ತಾಯ: ವರದಿ

ಕಾರ್ಗಿಲ್ ಯೋಧನ ಕುಟುಂಬಕ್ಕೆ ಭಾರತೀಯ ಪೌರತ್ವ ಸಾಬೀತುಪಡಿಸಲು ಒತ್ತಾಯ: ವರದಿ

- Advertisement -
- Advertisement -

ಶನಿವಾರ ತಡರಾತ್ರಿ ಪೊಲೀಸರೊಂದಿಗೆ ಮನೆಗೆ ನುಗ್ಗಿದ 30 ರಿಂದ 40 ಜನರ ಗುಂಪು, ನಮ್ಮ ಭಾರತೀಯ ಪೌರತ್ವ ಸಾಬೀತು ಮಾಡುವಂತೆ ಒತ್ತಾಯಿಸಿದೆ ಎಂದು ಕಾರ್ಗಿಲ್ ಯುದ್ದದಲ್ಲಿ ಪಾಲ್ಗೊಂಡಿದ್ದ ಪುಣೆ ಮೂಲದ ನಿವೃತ್ತ ಹಿರಿಯ ಯೋಧನ ಕುಟುಂಬ ಆರೋಪಿಸಿದೆ.

ತಡರಾತ್ರಿ ಪುಣೆಯ ಚಂದನ್ ನಗರದ ನಮ್ಮ ಮನೆಗೆ ಏಕಾಏಕಿ ಮನೆಗ ನುಗ್ಗಿದ ಗುಂಪು, ನಮ್ಮ ಭಾರತೀಯ ಪೌರತ್ವದ ದಾಖಲೆಗಳನ್ನು ತೋರಿಸುವಂತೆ ಒತ್ತಾಯಿಸಿದೆ. ಅಲ್ಲದೆ, ನಮ್ಮನ್ನು ಪೊಲೀಸ್ ಠಾಣೆಗೆ ಕರೆದೊಯ್ಯಲಾಗಿದೆ ಎಂದು1999ರಲ್ಲಿ ಕಾರ್ಗಿಲ್ ಯುದ್ಧದಲ್ಲಿ ಭಾಗವಹಿಸಿದ್ದ ನಿವೃತ್ತ ಯೋಧ ಹಕೀಮುದ್ದೀನ್ ಶೇಖ್ ಅವರ ಕುಟುಂಬ ಮಂಗಳವಾರ ಹೇಳಿಕೊಂಡಿದೆ.

“ಬೆಳಿಗ್ಗೆ 3 ಗಂಟೆಯವರೆಗೆ ಕಾಯುತ್ತೇವೆ . ಅದರೊಳಗೆ ನೀವು ಪೌರತ್ವ ಸಾಬೀತು ಮಾಡಲು ವಿಫಲರಾದರೆ, ನಿಮ್ಮನ್ನು ಬಾಂಗ್ಲಾದೇಶಿಯರು ಅಥವಾ ರೋಹಿಂಗ್ಯಾಗಳು ಎಂಬುವುದಾಗಿ ಘೋಷಿಸುತ್ತೇವೆ” ಎಂದು ನಮಗೆ ಬೆದರಿಕೆ ಹಾಕಲಾಗಿದೆ ಎಂದು ಯೋಧನ ಕುಟುಂಬ ತಿಳಿಸಿದೆ.

“ಅಕ್ರಮ ವಲಸಿಗರು ಎಂಬ ಶಂಕೆಯ ಮೇಲೆ ಪೊಲೀಸರು ಪರಿಶೀಲನೆ ನಡೆಸಿದ್ದಾರೆ. ನಮ್ಮ ತಂಡ ದಾಖಲೆಗಳನ್ನು ಕೇಳಿತ್ತು. ಅವರು ಭಾರತೀಯರು ಎಂದು ಖಚಿತವಾದ ಬಳಿಕ, ಅವರನ್ನು ಬಿಟ್ಟು ಕಳಿಸಿದ್ದೇವೆ. ಪೊಲೀಸರ ತಂಡದೊಂದಿಗೆ ಹೊರಗಿನವರು ಯಾರು ಇರಲಿಲ್ಲ. ಈ ಬಗ್ಗೆ ವಿಡಿಯೋ ಇದೆ” ಎಂದು ಡಿಸಿಪಿ ಸೋಮೈ ಮುಂಡೆ ಹೆಳಿದ್ದಾರೆ.

58 ವರ್ಷದ ನಿವೃತ್ತ ಯೋಧ ಹಕೀಮುದ್ದೀನ್ ಅವರು, 1984ರಿಂದ 2000ವರೆಗೆ ಭಾರತೀಯ ಸೇನೆಯ 269ನೇ ಇಂಜಿನಿಯರ್ ರೆಜೆಮೆಂಟ್‌ನಲ್ಲಿ 16 ವರ್ಷದ ಸೇವೆ ಸಲ್ಲಿಸಿದವರು. “ಕಾರ್ಗಿಲ್ ಯುದ್ದದಲ್ಲಿ ನಾನು ಈ ದೇಶಕ್ಕೋಸ್ಕರ ಹೋರಾಡಿದವನು. ನನ್ನ ಇಡೀ ಕುಟುಂಬ ಈ ದೇಶಕ್ಕೆ ಸಮರ್ಪಿತವಾಗಿದೆ. ನಮ್ಮನ್ನೇಕೆ ಪೌರತ್ವ ಸಾಬೀತುಪಡಿಸಲು ಕೇಳಿದ್ದು? ಎಂದು ಹಕೀಮುದ್ದೀನ್ ಪ್ರಶ್ನಿಸಿದ್ದಾರೆ.

ಹಕೀಮುದ್ದೀನ್ ಅವರ ಕುಟುಂಬಸ್ಥರು ಮೂಲತಃ ಉತ್ತರ ಪ್ರದೇಶದ ಪ್ರತಾಪ್‌ಘಡದವರು, 1960ರಿಂದ ಪುಣೆಯಲ್ಲಿ ವಾಸಿಸುತ್ತಿದ್ದಾರೆ. ಹಕೀಮುದ್ದೀನ್ 2013ರಲ್ಲಿ ತನ್ನ ಸ್ವಗ್ರಾಮಕ್ಕೆ ಹಿಂದಿರುಗಿದ್ದಾರೆ. ಅವರ ಸಹೋದರ,ಇತರ ಕುಟುಂಬಸ್ಥರು ಮತ್ತು ಸಂಬಂಧಿಕರು ಪುಣೆಯಲ್ಲೇ ಇದ್ದಾರೆ.

ಅಪರಿಚಿತ ಪುರುಷರ ಗುಂಪೊಂದು ಘೋಷಣೆಗಳನ್ನು ಕೂಗುತ್ತಾ ನಮ್ಮ ಮನೆ ಬಳಿಗೆ ಬಂತು. ಬಾಗಿಲಿಗೆ ಒದ್ದು ಏಕಾಏಕಿ ಮನೆಯೊಳಗೆ ನುಗ್ಗಿತು. ದಾಖಲೆಗಳನ್ನು ನೀಡುವಂತೆ ಒತ್ತಾಯಿಸಿತು. ಸಿವಿಲ್ ಡ್ರೆಸ್‌ನಲ್ಲಿದ್ದ ಅಧಿಕಾರಿಯೊಬ್ಬರು ಅವರನ್ನು ಶಾಂತಗೊಳಿಸಲು ಪ್ರಯತ್ನಿಸಿದರು. ಪೊಲೀಸ್ ವ್ಯಾನ್ ರಸ್ತೆಯಲ್ಲಿ ಕಾಯುತ್ತಿತ್ತು” ಎಂದು ಹಕೀಮುದ್ದೀನ್ ಅವರ ಸಹೋದರ ಇರ್ಷಾದ್ ಶೇಖ್ ಹೇಳಿದ್ದಾರೆ.

ಹಕೀಮುದ್ದೀನ್ ಮಾತ್ರವಲ್ಲದೆ ನಮ್ಮ ಕುಟುಂಬದಲ್ಲಿ ಶೇಖ್ ನಯೀಮುದ್ದೀನ್ ಮತ್ತು ಶೇಖ್ ಮೊಹಮ್ಮದ್ ಸಲೀಂ ಎಂಬ ಇನ್ನಿಬ್ಬರು ನಿವೃತ್ತ ಯೋಧರಿದ್ದಾರೆ. ಅವರು 1965 ಮತ್ತು 1971ರ ಯುದ್ಧಗಳಲ್ಲಿ ದೇಶಕ್ಕಾಗಿ ಹೋರಾಡಿವದರು. “ಸೈನಿಕರ ಕುಟುಂಬಗಳನ್ನು ಹೀಗೆ ನಡೆಸಿಕೊಳ್ಳುತ್ತಾರಾ? ಎಂದು ಇರ್ಷಾದ್ ಪ್ರಶ್ನಿಸಿದ್ದಾರೆ. ಸಿಕ್ಕ ಸಿಕ್ಕವರು ಬಾಗಿಲು ತಟ್ಟಿದಾಗಲೆಲ್ಲಾ ನಮ್ಮ ಪೌರತ್ವ ಸಾಬೀತುಪಡಿಸಬೇಕಾದರೆ ನಾವು ಭಾರತೀಯರಾಗಿರುವುದರ ಅರ್ಥವೇನು? ಎಂದಿದ್ದಾರೆ.

ಮನೆಗೆ ನುಗ್ಗಿದ ಗುಂಪು ದಾಖಲೆಗಳನ್ನು ತೋರಿಸಿದರೂ ಅದನ್ನು ನಿರಾಕರಿಸಿದೆ ಎಂದು ಆರೋಪಿಸಲಾಗಿದೆ. ನಾವು ಆಧಾರ್ ಕಾರ್ಡ್ ತೋರಿಸಿದರೂ, ಅದು ನಕಲಿ ಎಂದು ಗುಂಪು ಅಪಹಾಸ್ಯ ಮಾಡಿತು ಎಂದು ಯೋಧ ಹಕೀಮುದ್ದೀನ್ ಅವರ ಸೋದರಳಿಯರಾದ ನೌಶಾದ್ ಮತ್ತು ನವಾಬ್ ಶೇಖ್ ಹೇಳಿದ್ದಾರೆ. ಅವರು ಗೂಂಡಾಗಳಂತೆ ವರ್ತಿಸಿದ್ದಾರೆ ಎಂದು ನೌಶಾದ್ ಆರೋಪಿಸಿದ್ದು, ಅವರು ಬಾಗಿಲಿಗೆ ಒದ್ದರು, ಮಹಿಳೆಯರ ಮುಂದೆ ದಾಖಲೆ ತೋರಿಸುವಂತೆ ಅಬ್ಬರಿಸಿದರು ಎಂದು ಹೇಳಿದ್ದಾರೆ.

ಭಾನುವಾರ ಕೂಡ ನಮ್ಮನ್ನು ಪೊಲೀಸ್ ಠಾಣೆಗೆ ಕರೆಸಲಾಗಿತ್ತು. ಅಲ್ಲಿ ನಮ್ಮ ದಾಖಲೆಗಳನ್ನು ಪಡೆದು ಎರಡು ಗಂಟೆ ಕಾಯಿಸಿದರು. ನಂತರ ಇನ್‌ಸ್ಪೆಕ್ಟರ್ ಬರಲ್ಲ ಎಂದು ಕಳಿಸಿದರು. ನಮ್ಮ ದಾಖಲೆಗಳು ಈಗಲೂ ಅವರ ಬಳಿಯಿದೆ ಎಂದು ಮತ್ತೊಬ್ಬರು ಶಂಶಾದ್ ಶೇಖ್ ತಿಳಿಸಿದ್ದಾರೆ.

ಈ ಪ್ರಕರಣದ ತನಿಖೆ ನಡೆಸಲಾಗುತ್ತಿದೆ ಎಂದು ಪೊಲೀಸ್ ಆಯುಕ್ತ ಅಮಿತೇಶ್ ಕುಮಾರ್ ಹೇಳಿದ್ದು, “ನಿರ್ಲಕ್ಷ್ಯ ಕಂಡುಬಂದರೆ ಕ್ರಮ ಕೈಗೊಳ್ಳಲಾಗುವುದು. ಪ್ರಾಥಮಿಕ ಮಾಹಿತಿ ಪ್ರಕಾರ ಪೊಲೀಸರು ಬಲವಂತವಾಗಿ ಮನೆಗೆ ಪ್ರವೇಶಿಸಿಲ್ಲ” ಎಂದಿದ್ದಾರೆ.

Courtesy: timesofindia.indiatimes.com

ಅಸ್ಸಾಂನ ಗೋಲಾಘಾಟ್‌ನಲ್ಲಿ ಬೃಹತ್ ತೆರವು ಕಾರ್ಯಾಚರಣೆ: ನೆಲೆ ಕಳೆದುಕೊಳ್ಳಲಿರುವ 1,500ಕ್ಕೂ ಹೆಚ್ಚು ಮುಸ್ಲಿಂ ಕುಟುಂಬಗಳು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಚುನಾವಣಾ ಸಮಯದಲ್ಲಿ ಉಚಿತ ಕೊಡುಗೆಗಳ ಪ್ರವೃತ್ತಿ ಪ್ರಶ್ನಿಸಿದ ಸುಪ್ರೀಂ ಕೋರ್ಟ್

ರಾಜಕೀಯ ಪಕ್ಷಗಳು ಮತ್ತು ರಾಜ್ಯ ಸರ್ಕಾರಗಳು ಚುನಾವಣೆಗೆ ಮುನ್ನ "ಉಚಿತ ಕೊಡುಗೆಗಳ" ಜಾಹೀರಾತು ನೀಡುವ ಅಭ್ಯಾಸ ಹೆಚ್ಚುತ್ತಿರುವ ಬಗ್ಗೆ ಸುಪ್ರೀಂ ಕೋರ್ಟ್ ಗುರುವಾರ ಬಲವಾದ ಮೌಖಿಕ ಅವಲೋಕನಗಳನ್ನು ನೀಡಿದೆ. ವಿದ್ಯುತ್ (ತಿದ್ದುಪಡಿ) ನಿಯಮಗಳು, 2024...

ರಾಹುಲ್ ಗಾಂಧಿಗೆ ಕರ್ಣಿ ಸೇನೆಯಿಂದ ಜೀವ ಬೆದರಿಕೆ: ಬಿಜೆಪಿ-ಆರ್‌ಎಸ್‌ಎಸ್ ಜಾಲವೇ ‘ಗೋಡ್ಸೆ ಕಾರ್ಖಾನೆ’ ಎಂದ ಕಾಂಗ್ರೆಸ್

ನವದೆಹಲಿ: ಲೋಕಸಭಾ ಸ್ಪೀಕರ್ ಓಂ ಬಿರ್ಲಾ ವಿರುದ್ಧ ನಡೆದ ಪ್ರತಿಭಟನೆಗೆ ಸಂಬಂಧಿಸಿದಂತೆ ಲೋಕಸಭೆಯ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಅವರಿಗೆ ಕರ್ಣಿ ಸೇನೆ ಜೀವ ಬೆದರಿಕೆ ಹಾಕಿದ್ದು, ಇದು "ಏಕಾಂಗಿ ಸ್ಫೋಟವಲ್ಲ"...

ಬಿಹಾರ| ವಿಧಾನಸಭೆಯಲ್ಲಿ ‘ತಂಬಾಕು’ ತಿಂದ ಉಪಮುಖ್ಯಮಂತ್ರಿ ಸಾಮ್ರಾಟ್ ಚೌಧರಿ

ಬಿಹಾರ ವಿಧಾನಸಭೆಯ ಬಜೆಟ್ ಅಧಿವೇಶನದ ವಿಡಿಯೋ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆದ ಬಳಿಕ ರಾಜಕೀಯ ವಿವಾದಕ್ಕೆ ಕಾರಣವಾಗಿದೆ. ವಿಡಿಯೋದಲ್ಲಿ, ಉಪಮುಖ್ಯಮಂತ್ರಿ ಹಾಗೂ ಹಿರಿಯ ಬಿಜೆಪಿ ನಾಯಕ ಸಾಮ್ರಾಟ್ ಚೌಧರಿ ಕಲಾಪದ ಸಮಯದಲ್ಲಿ ವಸ್ತುವೊಂದನ್ನು...

‘ಬೆದರಿಕೆ, ಚಿತ್ರಹಿಂಸೆ, ಅತ್ಯಾಚಾರ ‘: ಇಸ್ರೇಲ್‌ ಜೈಲಿನ ದೌರ್ಜನ್ಯ ಬಿಚ್ಚಿಟ್ಟ ಪ್ಯಾಲೆಸ್ತೀನ್ ಪತ್ರಕರ್ತರು

ಇಸ್ರೇಲ್ ಜೈಲುಗಳಲ್ಲಿ ಬಂಧಿತರಾಗಿರುವ ಪ್ಯಾಲೆಸ್ತೀನ್ ಪತ್ರಕರ್ತರು ತೀವ್ರವಾದ ದೌರ್ಜನ್ಯಗಳನ್ನು ಎದುರಿಸುತ್ತಿದ್ದಾರೆ ಎಂದು ಅಂತಾರಾಷ್ಟ್ರೀಯ ಪತ್ರಕರ್ತರ ರಕ್ಷಣಾ ಸಮಿತಿ (ಸಿಪಿಜೆ) ಹೇಳಿದೆ. ಬಂಧನದಿಂದ ಬಿಡುಗಡೆಯಾಗಿರುವ ಪತ್ರಕರ್ತರನ್ನು ಸಂದರ್ಶಿಸಿರುವ ಸಿಪಿಜೆ, ಜೈಲಿನಲ್ಲಿರುವ ಪತ್ರಕರ್ತರು ನಿರಂತರವಾಗಿ ದೈಹಿಕ...

ಪಾಕಿಸ್ತಾನದ ಕರಾಚಿಯಲ್ಲಿ ಶಂಕಿತ ಅನಿಲ ಸೋರಿಕೆ: ಮಕ್ಕಳು ಸೇರಿದಂತೆ 16 ಮಂದಿ ಸಾವು

ಕರಾಚಿ: ಪಾಕಿಸ್ತಾನದ ಕರಾಚಿಯಲ್ಲಿ ಗುರುವಾರ ಬೆಳಿಗ್ಗೆ ವಸತಿ ಕಟ್ಟಡವೊಂದರಲ್ಲಿ ಶಂಕಿತ ಅನಿಲ ಸೋರಿಕೆಯಿಂದಾಗಿ ಸ್ಫೋಟ ಸಂಭವಿಸಿ, ಮಕ್ಕಳು ಸೇರಿದಂತೆ ಕನಿಷ್ಠ 16 ಜನರು ಸಾವನ್ನಪ್ಪಿದ್ದು, 14 ಜನರು ಗಾಯಗೊಂಡಿದ್ದಾರೆ. "ಓಲ್ಡ್ ಸೋಲ್ಜರ್ ಬಜಾರ್...

ಮಹಾರಾಷ್ಟ್ರ| 10 ದಿನಗಳ ಮಗುವಿನೊಂದಿಗೆ 12 ನೇ ತರಗತಿ ಪರೀಕ್ಷೆ ಬರೆದ ಮಹಿಳೆ

ಮಹಾರಾಷ್ಟ್ರದ ನಾಂದೇಡ್ ನಗರದಲ್ಲಿ 12 ನೇ ತರಗತಿಯ ಮಹಾರಾಷ್ಟ್ರ ಬೋರ್ಡ್ ಪರೀಕ್ಷೆಗೆ ಹಾಜರಾದ ಮಹಿಳೆಯೊಬ್ಬರು ತನ್ನ 10 ದಿನಗಳ ಮಗುವನ್ನು ಪರೀಕ್ಷಾ ಕೇಂದ್ರಕ್ಕೆ ಕರೆತಂದಿದ್ದಾರೆ. ಮಹಿಳೆ ಪರೀಕ್ಷೆ ಬರೆಯುವ ಕಾರಣಕ್ಕೆ ಕೇಂದ್ರದ ವಿಶೇಷ...

ಒಡಿಶಾ| ದಲಿತರು ವಾಸಿಸುವ ಪ್ರದೇಶಕ್ಕೆ ಕುಡಿಯುವ ನೀರು-ವಿದ್ಯುತ್ ಸಂಪರ್ಕ ಕಡಿತ

ಒಡಿಶಾದ ಬಲಂಗೀರ್ ಜಿಲ್ಲೆಯಲ್ಲಿ ಜಾತಿ ಆಧಾರಿತ ತಾರತಮ್ಯವಿದೆ ಎಂದು ಸ್ಥಳೀಯ ನಿವಾಸಿಗಳು ಆರೋಪಿಸಿದ್ದಾರೆ. ಆದರೆ, ಗ್ರಾಮದ ಅಧಿಕಾರಿಯೊಬ್ಬರು ಈ ಅಡಚಣೆಗೆ ಸ್ಥಳೀಯ ಕಲಹ ಕಾರಣ ಎಂದು ಆರೋಪಿಸಿದ್ದಾರೆ. ಜಿಲ್ಲೆಯ ತುರೆಕೆಲಾ ಬ್ಲಾಕ್‌ನ ಡುಮೆರ್ಚುವಾನ್ ಗ್ರಾಮದಲ್ಲಿ...

ತಮಿಳುನಾಡು ವಿಧಾನಸಭಾ ಚುನಾವಣೆ: ಡಿಎಂಕೆ ನೇತೃತ್ವದ ಮೈತ್ರಿಕೂಟಕ್ಕೆ ಡಿಎಂಡಿಕೆ ಸೇರ್ಪಡೆ

ಚೆನ್ನೈ: ದಿವಂಗತ ನಟ ವಿಜಯಕಾಂತ್ ಅವರ ದೇಶೀಯ ಮುರ್ಪೋಕ್ಕು ದ್ರಾವಿಡ ಕಳಗಂ (ಡಿಎಂಡಿಕೆ) ಗುರುವಾರ ದ್ರಾವಿಡ ಮುನ್ನೇತ್ರ ಕಳಗಂ ನೇತೃತ್ವದ ಜಾತ್ಯತೀತ ಪ್ರಗತಿಪರ ಒಕ್ಕೂಟ (ಎಸ್‌ಪಿಎ)ವನ್ನು 21ವರ್ಷಗಳ ಅಸ್ತಿತ್ವದ ನಂತರ ಮೊದಲ ಬಾರಿಗೆ...

ಟ್ರಕ್ ಚಾಲಕ ರಸ್ತೆಯಲ್ಲಿ ನಮಾಝ್ ಮಾಡಿದ್ದರಿಂದ ಟ್ರಾಫಿಕ್ ಜಾಮ್ ಎಂದು ಸುಳ್ಳು ಸುದ್ದಿ ಪ್ರಸಾರ : ಝೀ ನ್ಯೂಸ್‌ಗೆ 1 ಲಕ್ಷ ರೂ. ದಂಡ

ಮುಸ್ಲಿಂ ವ್ಯಕ್ತಿಯೊಬ್ಬರು ನಮಾಝ್ ಮಾಡಲು ಹೆದ್ದಾರಿ ಮಧ್ಯೆ ಟ್ರಕ್‌ ನಿಲ್ಲಿಸಿದ್ದರಿಂದ ಟ್ರಾಫಿಕ್ ಜಾಮ್‌ ಉಂಟಾಗಿದೆ ಎಂದು ಸುಳ್ಳು ಸುದ್ದಿ ಹಬ್ಬಿದ ಝೀ ನ್ಯೂಸ್‌ ಚಾನೆಲ್‌ಗೆ ಸುದ್ದಿ ಪ್ರಸಾರಕರು ಮತ್ತು ಡಿಜಿಟಲ್ ಮಾನದಂಡಗಳ ಪ್ರಾಧಿಕಾರ(ಎನ್‌ಬಿಡಿಎಸ್‌ಎ)...

ಗುಜರಾತ್‌| ಜಾತಿ ಆಧಾರಿತ ಜಗಳದಲ್ಲಿ ದಲಿತ ಯುವಕನ ಮೇಲೆ ಚಾಕುವಿನಿಂದ ದಾಳಿ

ಶನಿವಾರ ತಡರಾತ್ರಿ ರಾಣಿಪ್‌ನಲ್ಲಿ ನಡೆದ ಸಣ್ಣ ಭಿನ್ನಾಭಿಪ್ರಾಯವೊಂದು ಹಿಂಸಾಚಾರಕ್ಕೆ ತಿರುಗಿದ್ದು, 25 ವರ್ಷದ ದಲಿತ ಯುವಕ ಸಾಹಿಲ್ ವಘೇಲಾ ಮೇಲೆ ಚಾಕುವಿನಿಂದ ಹಲ್ಲೆ ನಡೆಸಲಾಗಿದೆ. ಯುವಕ ಗಂಭೀರವಾಗಿ ಗಾಯಗೊಂಡಿದ್ದು, ಘಟನೆಯು ಈ ಪ್ರದೇಶದಲ್ಲಿ...