Homeಮುಖಪುಟಕಾರ್ಗಿಲ್ ಯೋಧನ ಕುಟುಂಬಕ್ಕೆ ಭಾರತೀಯ ಪೌರತ್ವ ಸಾಬೀತುಪಡಿಸಲು ಒತ್ತಾಯ: ವರದಿ

ಕಾರ್ಗಿಲ್ ಯೋಧನ ಕುಟುಂಬಕ್ಕೆ ಭಾರತೀಯ ಪೌರತ್ವ ಸಾಬೀತುಪಡಿಸಲು ಒತ್ತಾಯ: ವರದಿ

- Advertisement -
- Advertisement -

ಶನಿವಾರ ತಡರಾತ್ರಿ ಪೊಲೀಸರೊಂದಿಗೆ ಮನೆಗೆ ನುಗ್ಗಿದ 30 ರಿಂದ 40 ಜನರ ಗುಂಪು, ನಮ್ಮ ಭಾರತೀಯ ಪೌರತ್ವ ಸಾಬೀತು ಮಾಡುವಂತೆ ಒತ್ತಾಯಿಸಿದೆ ಎಂದು ಕಾರ್ಗಿಲ್ ಯುದ್ದದಲ್ಲಿ ಪಾಲ್ಗೊಂಡಿದ್ದ ಪುಣೆ ಮೂಲದ ನಿವೃತ್ತ ಹಿರಿಯ ಯೋಧನ ಕುಟುಂಬ ಆರೋಪಿಸಿದೆ.

ತಡರಾತ್ರಿ ಪುಣೆಯ ಚಂದನ್ ನಗರದ ನಮ್ಮ ಮನೆಗೆ ಏಕಾಏಕಿ ಮನೆಗ ನುಗ್ಗಿದ ಗುಂಪು, ನಮ್ಮ ಭಾರತೀಯ ಪೌರತ್ವದ ದಾಖಲೆಗಳನ್ನು ತೋರಿಸುವಂತೆ ಒತ್ತಾಯಿಸಿದೆ. ಅಲ್ಲದೆ, ನಮ್ಮನ್ನು ಪೊಲೀಸ್ ಠಾಣೆಗೆ ಕರೆದೊಯ್ಯಲಾಗಿದೆ ಎಂದು1999ರಲ್ಲಿ ಕಾರ್ಗಿಲ್ ಯುದ್ಧದಲ್ಲಿ ಭಾಗವಹಿಸಿದ್ದ ನಿವೃತ್ತ ಯೋಧ ಹಕೀಮುದ್ದೀನ್ ಶೇಖ್ ಅವರ ಕುಟುಂಬ ಮಂಗಳವಾರ ಹೇಳಿಕೊಂಡಿದೆ.

“ಬೆಳಿಗ್ಗೆ 3 ಗಂಟೆಯವರೆಗೆ ಕಾಯುತ್ತೇವೆ . ಅದರೊಳಗೆ ನೀವು ಪೌರತ್ವ ಸಾಬೀತು ಮಾಡಲು ವಿಫಲರಾದರೆ, ನಿಮ್ಮನ್ನು ಬಾಂಗ್ಲಾದೇಶಿಯರು ಅಥವಾ ರೋಹಿಂಗ್ಯಾಗಳು ಎಂಬುವುದಾಗಿ ಘೋಷಿಸುತ್ತೇವೆ” ಎಂದು ನಮಗೆ ಬೆದರಿಕೆ ಹಾಕಲಾಗಿದೆ ಎಂದು ಯೋಧನ ಕುಟುಂಬ ತಿಳಿಸಿದೆ.

“ಅಕ್ರಮ ವಲಸಿಗರು ಎಂಬ ಶಂಕೆಯ ಮೇಲೆ ಪೊಲೀಸರು ಪರಿಶೀಲನೆ ನಡೆಸಿದ್ದಾರೆ. ನಮ್ಮ ತಂಡ ದಾಖಲೆಗಳನ್ನು ಕೇಳಿತ್ತು. ಅವರು ಭಾರತೀಯರು ಎಂದು ಖಚಿತವಾದ ಬಳಿಕ, ಅವರನ್ನು ಬಿಟ್ಟು ಕಳಿಸಿದ್ದೇವೆ. ಪೊಲೀಸರ ತಂಡದೊಂದಿಗೆ ಹೊರಗಿನವರು ಯಾರು ಇರಲಿಲ್ಲ. ಈ ಬಗ್ಗೆ ವಿಡಿಯೋ ಇದೆ” ಎಂದು ಡಿಸಿಪಿ ಸೋಮೈ ಮುಂಡೆ ಹೆಳಿದ್ದಾರೆ.

58 ವರ್ಷದ ನಿವೃತ್ತ ಯೋಧ ಹಕೀಮುದ್ದೀನ್ ಅವರು, 1984ರಿಂದ 2000ವರೆಗೆ ಭಾರತೀಯ ಸೇನೆಯ 269ನೇ ಇಂಜಿನಿಯರ್ ರೆಜೆಮೆಂಟ್‌ನಲ್ಲಿ 16 ವರ್ಷದ ಸೇವೆ ಸಲ್ಲಿಸಿದವರು. “ಕಾರ್ಗಿಲ್ ಯುದ್ದದಲ್ಲಿ ನಾನು ಈ ದೇಶಕ್ಕೋಸ್ಕರ ಹೋರಾಡಿದವನು. ನನ್ನ ಇಡೀ ಕುಟುಂಬ ಈ ದೇಶಕ್ಕೆ ಸಮರ್ಪಿತವಾಗಿದೆ. ನಮ್ಮನ್ನೇಕೆ ಪೌರತ್ವ ಸಾಬೀತುಪಡಿಸಲು ಕೇಳಿದ್ದು? ಎಂದು ಹಕೀಮುದ್ದೀನ್ ಪ್ರಶ್ನಿಸಿದ್ದಾರೆ.

ಹಕೀಮುದ್ದೀನ್ ಅವರ ಕುಟುಂಬಸ್ಥರು ಮೂಲತಃ ಉತ್ತರ ಪ್ರದೇಶದ ಪ್ರತಾಪ್‌ಘಡದವರು, 1960ರಿಂದ ಪುಣೆಯಲ್ಲಿ ವಾಸಿಸುತ್ತಿದ್ದಾರೆ. ಹಕೀಮುದ್ದೀನ್ 2013ರಲ್ಲಿ ತನ್ನ ಸ್ವಗ್ರಾಮಕ್ಕೆ ಹಿಂದಿರುಗಿದ್ದಾರೆ. ಅವರ ಸಹೋದರ,ಇತರ ಕುಟುಂಬಸ್ಥರು ಮತ್ತು ಸಂಬಂಧಿಕರು ಪುಣೆಯಲ್ಲೇ ಇದ್ದಾರೆ.

ಅಪರಿಚಿತ ಪುರುಷರ ಗುಂಪೊಂದು ಘೋಷಣೆಗಳನ್ನು ಕೂಗುತ್ತಾ ನಮ್ಮ ಮನೆ ಬಳಿಗೆ ಬಂತು. ಬಾಗಿಲಿಗೆ ಒದ್ದು ಏಕಾಏಕಿ ಮನೆಯೊಳಗೆ ನುಗ್ಗಿತು. ದಾಖಲೆಗಳನ್ನು ನೀಡುವಂತೆ ಒತ್ತಾಯಿಸಿತು. ಸಿವಿಲ್ ಡ್ರೆಸ್‌ನಲ್ಲಿದ್ದ ಅಧಿಕಾರಿಯೊಬ್ಬರು ಅವರನ್ನು ಶಾಂತಗೊಳಿಸಲು ಪ್ರಯತ್ನಿಸಿದರು. ಪೊಲೀಸ್ ವ್ಯಾನ್ ರಸ್ತೆಯಲ್ಲಿ ಕಾಯುತ್ತಿತ್ತು” ಎಂದು ಹಕೀಮುದ್ದೀನ್ ಅವರ ಸಹೋದರ ಇರ್ಷಾದ್ ಶೇಖ್ ಹೇಳಿದ್ದಾರೆ.

ಹಕೀಮುದ್ದೀನ್ ಮಾತ್ರವಲ್ಲದೆ ನಮ್ಮ ಕುಟುಂಬದಲ್ಲಿ ಶೇಖ್ ನಯೀಮುದ್ದೀನ್ ಮತ್ತು ಶೇಖ್ ಮೊಹಮ್ಮದ್ ಸಲೀಂ ಎಂಬ ಇನ್ನಿಬ್ಬರು ನಿವೃತ್ತ ಯೋಧರಿದ್ದಾರೆ. ಅವರು 1965 ಮತ್ತು 1971ರ ಯುದ್ಧಗಳಲ್ಲಿ ದೇಶಕ್ಕಾಗಿ ಹೋರಾಡಿವದರು. “ಸೈನಿಕರ ಕುಟುಂಬಗಳನ್ನು ಹೀಗೆ ನಡೆಸಿಕೊಳ್ಳುತ್ತಾರಾ? ಎಂದು ಇರ್ಷಾದ್ ಪ್ರಶ್ನಿಸಿದ್ದಾರೆ. ಸಿಕ್ಕ ಸಿಕ್ಕವರು ಬಾಗಿಲು ತಟ್ಟಿದಾಗಲೆಲ್ಲಾ ನಮ್ಮ ಪೌರತ್ವ ಸಾಬೀತುಪಡಿಸಬೇಕಾದರೆ ನಾವು ಭಾರತೀಯರಾಗಿರುವುದರ ಅರ್ಥವೇನು? ಎಂದಿದ್ದಾರೆ.

ಮನೆಗೆ ನುಗ್ಗಿದ ಗುಂಪು ದಾಖಲೆಗಳನ್ನು ತೋರಿಸಿದರೂ ಅದನ್ನು ನಿರಾಕರಿಸಿದೆ ಎಂದು ಆರೋಪಿಸಲಾಗಿದೆ. ನಾವು ಆಧಾರ್ ಕಾರ್ಡ್ ತೋರಿಸಿದರೂ, ಅದು ನಕಲಿ ಎಂದು ಗುಂಪು ಅಪಹಾಸ್ಯ ಮಾಡಿತು ಎಂದು ಯೋಧ ಹಕೀಮುದ್ದೀನ್ ಅವರ ಸೋದರಳಿಯರಾದ ನೌಶಾದ್ ಮತ್ತು ನವಾಬ್ ಶೇಖ್ ಹೇಳಿದ್ದಾರೆ. ಅವರು ಗೂಂಡಾಗಳಂತೆ ವರ್ತಿಸಿದ್ದಾರೆ ಎಂದು ನೌಶಾದ್ ಆರೋಪಿಸಿದ್ದು, ಅವರು ಬಾಗಿಲಿಗೆ ಒದ್ದರು, ಮಹಿಳೆಯರ ಮುಂದೆ ದಾಖಲೆ ತೋರಿಸುವಂತೆ ಅಬ್ಬರಿಸಿದರು ಎಂದು ಹೇಳಿದ್ದಾರೆ.

ಭಾನುವಾರ ಕೂಡ ನಮ್ಮನ್ನು ಪೊಲೀಸ್ ಠಾಣೆಗೆ ಕರೆಸಲಾಗಿತ್ತು. ಅಲ್ಲಿ ನಮ್ಮ ದಾಖಲೆಗಳನ್ನು ಪಡೆದು ಎರಡು ಗಂಟೆ ಕಾಯಿಸಿದರು. ನಂತರ ಇನ್‌ಸ್ಪೆಕ್ಟರ್ ಬರಲ್ಲ ಎಂದು ಕಳಿಸಿದರು. ನಮ್ಮ ದಾಖಲೆಗಳು ಈಗಲೂ ಅವರ ಬಳಿಯಿದೆ ಎಂದು ಮತ್ತೊಬ್ಬರು ಶಂಶಾದ್ ಶೇಖ್ ತಿಳಿಸಿದ್ದಾರೆ.

ಈ ಪ್ರಕರಣದ ತನಿಖೆ ನಡೆಸಲಾಗುತ್ತಿದೆ ಎಂದು ಪೊಲೀಸ್ ಆಯುಕ್ತ ಅಮಿತೇಶ್ ಕುಮಾರ್ ಹೇಳಿದ್ದು, “ನಿರ್ಲಕ್ಷ್ಯ ಕಂಡುಬಂದರೆ ಕ್ರಮ ಕೈಗೊಳ್ಳಲಾಗುವುದು. ಪ್ರಾಥಮಿಕ ಮಾಹಿತಿ ಪ್ರಕಾರ ಪೊಲೀಸರು ಬಲವಂತವಾಗಿ ಮನೆಗೆ ಪ್ರವೇಶಿಸಿಲ್ಲ” ಎಂದಿದ್ದಾರೆ.

Courtesy: timesofindia.indiatimes.com

ಅಸ್ಸಾಂನ ಗೋಲಾಘಾಟ್‌ನಲ್ಲಿ ಬೃಹತ್ ತೆರವು ಕಾರ್ಯಾಚರಣೆ: ನೆಲೆ ಕಳೆದುಕೊಳ್ಳಲಿರುವ 1,500ಕ್ಕೂ ಹೆಚ್ಚು ಮುಸ್ಲಿಂ ಕುಟುಂಬಗಳು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕೋಟ್ಯಾಂತರ ವಿದ್ಯಾರ್ಥಿಗಳ ಭವಿಷ್ಯದ ಜೊತೆ NTA ಚೆಲ್ಲಾಟ: RTI ನಲ್ಲಿ ಬಯಲಾಯ್ತು NTA ಕರ್ಮಕಾಂಡ

ನ್ಯಾಷನಲ್ ಟೆಸ್ಟಿಂಗ್ ಏಜೆನ್ಸಿ (NTA) ಎನ್ನುವ ಈ ಸರ್ಕಾರಿ ಸಂಸ್ಥೆಯ ಮೇಲೆ ಪ್ರತಿವರ್ಷ ಕೋಟ್ಯಂತರ ವಿದ್ಯಾರ್ಥಿಗಳು ತಮ್ಮ ಭವಿಷ್ಯದ ಕನಸುಗಳನ್ನು ಇಟ್ಟುಕೊಳ್ಳುತ್ತಾರೆ. 2018ರಲ್ಲಿ ಸ್ಥಾಪನೆಯಾದ ದಿನದಿಂದ ಇಲ್ಲಿಯವರೆಗೆ ಎನ್‌ಟಿಎ ಸುಮಾರು 270ಕ್ಕೂ ಹೆಚ್ಚು...

ಬಾಗಲಕೋಟೆ: ಪತಿಯಿಂದ 23 ವರ್ಷದ ಪತ್ನಿಯ ಕ್ರೂರ ಕೊಲೆ, ಪೋಷಕರಿಗೆ ವೀಡಿಯೊ ಕರೆ ಮಾಡಿ ಮಗಳ ಸಾವು-ಬದುಕಿನ ಹೋರಾಟ ತೋರಿಸಿದ ವಿಕೃತ ಪತಿ

ಬಾಗಲಕೋಟೆ: ಪತಿಯೋರ್ವ ತನ್ನ 23 ವರ್ಷದ ಪತ್ನಿಯ ಮೇಲೆ ವಿವಾಹೇತರ ಅನೈತಿಕ ಸಂಬಂಧದ ಶಂಕೆ ವ್ಯಕ್ತಪಡಿಸಿ, ಆಕೆಯ ಮೇಲೆ ಮರದ ದಿಮ್ಮಿಯಿಂದ ಕ್ರೂರವಾಗಿ ಹಲ್ಲೆ ನಡೆಸಿ, ತದನಂತರ ನೇಣಿಗೆ ಬಿಗಿದು ಅತ್ಯಂತ ಅಮಾನವೀಯವಾಗಿ...

ಕಾನೂನು-ಸುವ್ಯವಸ್ಥೆಗೆ ವಿದ್ಯಾರ್ಥಿಗಳು ಸಮಸ್ಯೆಯಾಗುತ್ತಾರೆ ಎಂದು ಪರಿಗಣಿಸಿದ್ದು ಏಕೆ: ಅಭಿಷೇಕ್ ಬ್ಯಾನರ್ಜಿ

ರಾಷ್ಟ್ರ ರಾಜಧಾನಿ ದೆಹಲಿ ಮತ್ತು ದೆಶದಾದ್ಯಂತ ಕಾಕ್ರೋಚ್ ಜನತಾ ಪಕ್ಷದ (ಸಿಜೆಪಿ) ನೇತೃತ್ವದಲ್ಲಿ ನಡೆದ ಪ್ರತಿಭಟನೆಗಳ ಸಂದರ್ಭದಲ್ಲಿ ವಿದ್ಯಾರ್ಥಿಗಳ ಮೇಲೆ ನಡೆದ ಭಾರೀ ಪೊಲೀಸ್ ಬಲಪ್ರಯೋವನ್ನು ವಿಪಕ್ಷಗಳು ಇಂದು ಲೋಕಸಭೆಯಲ್ಲಿ ಖಂಡಿಸಿವೆ. ವಿದ್ಯಾರ್ಥಿಗಳ...

ಪಬ್ಲಿಕ್ ಟಿವಿ ನಿರೂಪಕ ಅರುಣ್ ಬಡಿಗೇರ್ ವಿರುದ್ದ ಮೈಸೂರಿನಲ್ಲಿ ದೂರು ದಾಖಲು

ಸಂವಿಧಾನಬದ್ಧ ಮೀಸಲಾತಿಯ ಕುರಿತು ಅತ್ಯಂತ ನಿಂದನಾತ್ಮಕ, ಅವಹೇಳನಕಾರಿ ಹಾಗೂ ಸಮಾಜದಲ್ಲಿ ದ್ವೇಷ ಪ್ರಚೋದಿಸುವ ರೀತಿಯ ಹೇಳಿಕೆ ನೀಡಿರುವ 'ಪಬ್ಲಿಕ್ ಟಿವಿ' ನಿರೂಪಕ ಅರುಣ್ ಬಡಿಗೇರ್ ವಿರುದ್ಧ ಮೈಸೂರಿನಲ್ಲಿ ಕಾನೂನು ಕ್ರಮಕ್ಕೆ ಆಗ್ರಹಿಸಿ ಪೊಲೀಸ್‌...

ಕೇರಳ: ತಪ್ಪು ಪ್ರಕರಣದಲ್ಲಿ ಪೊಲೀಸರಿಂದ ಚಿತ್ರಹಿಂಸೆ: 29 ವರ್ಷದ ಮುಸ್ಲಿಂ ಯುವಕ ಸಾವು: ಕುಟುಂಬಕ್ಕಿದ್ದ ಒಂದೇ ಆಧಾರ ಕಳೆದುಕೊಂಡ ಪೋಷಕರು

ತಪ್ಪು ಗ್ರಹಿಕೆಯಿಂದ ಪೊಲೀಸ್ ಕಸ್ಟಡಿಗೆ ಪಡೆದ 29 ವರ್ಷದ ಮುಸ್ಲಿಂ ಯುವಕನೋರ್ವ, ಪೊಲೀಸರ ಕಠೋರ ಕಸ್ಟಡಿ ಚಿತ್ರಹಿಂಸೆಯಿಂದಾಗಿ ಪಕ್ಕೆಲುಬು ಮುರಿತಕ್ಕೊಳಗಾಗಿ, ಶ್ವಾಸಕೋಶದ ಸೋಂಕು ತೀವ್ರಗೊಂಡು ಚಿಕಿತ್ಸೆ ಫಲಕಾರಿಯಾಗದೆ ಸಾವನ್ನಪ್ಪಿರುವ ಅಮಾನವೀಯ ಹಾಗೂ ಆಘಾತಕಾರಿ...

ಮಾಧ್ಯಮ ತನಿಖಾ ವರದಿಗೆ ಹೆದರಿ ₹ 99 ಲಕ್ಷ ಸಬ್ಸಿಡಿ ವಾಪಸ್ ಮಾಡಿದ ಕೇಂದ್ರ BJP ಸಚಿವ

ತಮ್ಮದೇ ಸಚಿವಾಲಯದ ಯೋಜನೆಯಡಿ ಬರೋಬ್ಬರಿ 99 ಲಕ್ಷ ರೂಪಾಯಿ ಸರ್ಕಾರಿ ಸಬ್ಸಿಡಿ ಪಡೆದು ಸಾರ್ವಜನಿಕರ ಆಕ್ರೋಶಕ್ಕೆ ಗುರಿಯಾಗಿದ್ದ ಕೇಂದ್ರ ಕೃಷಿ ಮತ್ತು ರೈತರ ಕಲ್ಯಾಣ ರಾಜ್ಯ ಸಚಿವ ಭಾಗೀರಥ್ ಚೌಧರಿ, ಕೊನೆಗೂ ಆ...

ಕಾಮನ್‌ವೆಲ್ತ್ ಕ್ರೀಡಾಕೂಟ: ಚಿನ್ನದ ಪದಕ ಗೆದ್ದ ಭಾರತದ ಮೊದಲ ಪ್ಯಾರಾ-ಅಥ್ಲೀಟ್ ಶರ್ಮಿಳಾ ಧನ್ಖರ್

ಎರಡು ವರ್ಷವಿದ್ದಾಗ ಪೋಲಿಯೊದಿಂದ ಅಂಗವಿಕಲಳಾಗಿ, ಬಾಲ್ಯದಲ್ಲಿ ದೌರ್ಜನ್ಯಕ್ಕೊಳಗಾದ, ವಿವಾಹದ ಆಘಾತದಿಂದ ಬದುಕುಳಿದ ಮಹಿಳೆ ಶರ್ಮಿಳಾ ಧನ್ಖರ್, ಕಾಮನ್‌ವೆಲ್ತ್ ಕ್ರೀಡಾಕೂಟದಲ್ಲಿ ಚಿನ್ನದ ಪದಕ ಗೆದ್ದ ಭಾರತದ ಮೊದಲ ಪ್ಯಾರಾ-ಅಥ್ಲೀಟ್ ಎಂಬ ಹೆಗ್ಗಳಿಕೆಗೆ ಪಾತ್ರರಾಗಿದ್ದಾರೆ. ಗ್ಲ್ಯಾಸ್ಗೋದಲ್ಲಿ...

ಬಿಹಾರ: ವಿದ್ಯಾರ್ಥಿಗಳ ವಿರುದ್ಧ ಎಕೆ-47 ರೈಫಲ್ ಬಳಕೆ: ಗುಂಡು ಹಾರಿಸಲು ಆದೇಶಿಸಿದವರ ವಿರುದ್ಧ ತನಿಖೆಗೆ ಮನೋಜ್ ಝಾ ಆಗ್ರಹ; ಸುಪ್ರೀಂ ಮೆಟ್ಟಿಲೇರಿದ ಪ್ರಕರಣ

ನೀಟ್ (NEET) ಪ್ರಶ್ನೆ ಪತ್ರಿಕೆ ಸೋರಿಕೆ ಆರೋಪವನ್ನು ಖಂಡಿಸಿ ನಡೆದ ಪ್ರತಿಭಟನೆಯ ಸಂದರ್ಭದಲ್ಲಿ, ಬಿಹಾರದ ಸಿವಾನ್ ಜಿಲ್ಲೆಯಲ್ಲಿ ಪೊಲೀಸ್ ಸಿಬ್ಬಂದಿಯೊಬ್ಬರು ಎಕೆ-47 ರೈಫಲ್‌ನಿಂದ ಗಾಳಿಯಲ್ಲಿ ಗುಂಡು ಹಾರಿಸುತ್ತಿದ್ದ ವೀಡಿಯೊ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್...

ಧರ್ಮೇಂದ್ರ ಪ್ರಧಾನ್ ಖಾತೆ ಬದಲಾವಣೆ ಪ್ರಸ್ತಾವನೆ ತಿರಸ್ಕರಿಸಿದ್ದ ಸಿಜೆಪಿ: ವರದಿ

ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಜುಲೈ 25 ರಂದು ಪ್ರಧಾನಿ ನರೇಂದ್ರ ಮೋದಿ ಅವರಿಗೆ ತಮ್ಮ ರಾಜೀನಾಮೆ ಸಲ್ಲಿಸಿದ್ದಾರೆ. ಆದರೆ, ಅದಕ್ಕೂ ಮೊದಲು ಕೇಂದ್ರ ಸರ್ಕಾರವು ಕಾಕ್ರೋಚ್ ಜನತಾ ಪಕ್ಷ (ಸಿಜೆಪಿ)...

ಹೈದರಾಬಾದ್| ಎಕ್ಸ್‌ಪ್ರೆಸ್‌ವೇನಲ್ಲಿ ನೇಮಕಾತಿ ಪರೀಕ್ಷೆ ಓಎಂಆರ್ ಹಾಳೆಗಳು ಪತ್ತೆ: ತನಿಖೆಗೆ ಆದೇಶ

ನೇಮಕಾತಿ ಪರೀಕ್ಷೆಯ ಮೂಲ ಆಪ್ಟಿಕಲ್ ಮಾರ್ಕ್ ರೆಕಗ್ನಿಷನ್ (ಒಎಂಆರ್) ಹಾಳೆಗಳು ಹೈದರಾಬಾದ್‌ನ ರಸ್ತೆಬದಿಯಲ್ಲಿ ರಾಶಿ ರಾಶಿಯಾಗಿ ಬಿದ್ದಿರುವುದು ಕಂಡುಬಂದ ನಂತರ ತೆಲಂಗಾಣ ಸಾರ್ವಜನಿಕ ಸೇವಾ ಆಯೋಗ (ಟಿಜಿಪಿಎಸ್‌ಸಿ) ತನಿಖೆಗೆ ಆದೇಶಿಸಿದೆ. 2018 ರ ಹಾಸ್ಟೆಲ್...