Homeಮುಖಪುಟಕಾರ್ಗಿಲ್ ಯೋಧನ ಕುಟುಂಬಕ್ಕೆ ಭಾರತೀಯ ಪೌರತ್ವ ಸಾಬೀತುಪಡಿಸಲು ಒತ್ತಾಯ: ವರದಿ

ಕಾರ್ಗಿಲ್ ಯೋಧನ ಕುಟುಂಬಕ್ಕೆ ಭಾರತೀಯ ಪೌರತ್ವ ಸಾಬೀತುಪಡಿಸಲು ಒತ್ತಾಯ: ವರದಿ

- Advertisement -
- Advertisement -

ಶನಿವಾರ ತಡರಾತ್ರಿ ಪೊಲೀಸರೊಂದಿಗೆ ಮನೆಗೆ ನುಗ್ಗಿದ 30 ರಿಂದ 40 ಜನರ ಗುಂಪು, ನಮ್ಮ ಭಾರತೀಯ ಪೌರತ್ವ ಸಾಬೀತು ಮಾಡುವಂತೆ ಒತ್ತಾಯಿಸಿದೆ ಎಂದು ಕಾರ್ಗಿಲ್ ಯುದ್ದದಲ್ಲಿ ಪಾಲ್ಗೊಂಡಿದ್ದ ಪುಣೆ ಮೂಲದ ನಿವೃತ್ತ ಹಿರಿಯ ಯೋಧನ ಕುಟುಂಬ ಆರೋಪಿಸಿದೆ.

ತಡರಾತ್ರಿ ಪುಣೆಯ ಚಂದನ್ ನಗರದ ನಮ್ಮ ಮನೆಗೆ ಏಕಾಏಕಿ ಮನೆಗ ನುಗ್ಗಿದ ಗುಂಪು, ನಮ್ಮ ಭಾರತೀಯ ಪೌರತ್ವದ ದಾಖಲೆಗಳನ್ನು ತೋರಿಸುವಂತೆ ಒತ್ತಾಯಿಸಿದೆ. ಅಲ್ಲದೆ, ನಮ್ಮನ್ನು ಪೊಲೀಸ್ ಠಾಣೆಗೆ ಕರೆದೊಯ್ಯಲಾಗಿದೆ ಎಂದು1999ರಲ್ಲಿ ಕಾರ್ಗಿಲ್ ಯುದ್ಧದಲ್ಲಿ ಭಾಗವಹಿಸಿದ್ದ ನಿವೃತ್ತ ಯೋಧ ಹಕೀಮುದ್ದೀನ್ ಶೇಖ್ ಅವರ ಕುಟುಂಬ ಮಂಗಳವಾರ ಹೇಳಿಕೊಂಡಿದೆ.

“ಬೆಳಿಗ್ಗೆ 3 ಗಂಟೆಯವರೆಗೆ ಕಾಯುತ್ತೇವೆ . ಅದರೊಳಗೆ ನೀವು ಪೌರತ್ವ ಸಾಬೀತು ಮಾಡಲು ವಿಫಲರಾದರೆ, ನಿಮ್ಮನ್ನು ಬಾಂಗ್ಲಾದೇಶಿಯರು ಅಥವಾ ರೋಹಿಂಗ್ಯಾಗಳು ಎಂಬುವುದಾಗಿ ಘೋಷಿಸುತ್ತೇವೆ” ಎಂದು ನಮಗೆ ಬೆದರಿಕೆ ಹಾಕಲಾಗಿದೆ ಎಂದು ಯೋಧನ ಕುಟುಂಬ ತಿಳಿಸಿದೆ.

“ಅಕ್ರಮ ವಲಸಿಗರು ಎಂಬ ಶಂಕೆಯ ಮೇಲೆ ಪೊಲೀಸರು ಪರಿಶೀಲನೆ ನಡೆಸಿದ್ದಾರೆ. ನಮ್ಮ ತಂಡ ದಾಖಲೆಗಳನ್ನು ಕೇಳಿತ್ತು. ಅವರು ಭಾರತೀಯರು ಎಂದು ಖಚಿತವಾದ ಬಳಿಕ, ಅವರನ್ನು ಬಿಟ್ಟು ಕಳಿಸಿದ್ದೇವೆ. ಪೊಲೀಸರ ತಂಡದೊಂದಿಗೆ ಹೊರಗಿನವರು ಯಾರು ಇರಲಿಲ್ಲ. ಈ ಬಗ್ಗೆ ವಿಡಿಯೋ ಇದೆ” ಎಂದು ಡಿಸಿಪಿ ಸೋಮೈ ಮುಂಡೆ ಹೆಳಿದ್ದಾರೆ.

58 ವರ್ಷದ ನಿವೃತ್ತ ಯೋಧ ಹಕೀಮುದ್ದೀನ್ ಅವರು, 1984ರಿಂದ 2000ವರೆಗೆ ಭಾರತೀಯ ಸೇನೆಯ 269ನೇ ಇಂಜಿನಿಯರ್ ರೆಜೆಮೆಂಟ್‌ನಲ್ಲಿ 16 ವರ್ಷದ ಸೇವೆ ಸಲ್ಲಿಸಿದವರು. “ಕಾರ್ಗಿಲ್ ಯುದ್ದದಲ್ಲಿ ನಾನು ಈ ದೇಶಕ್ಕೋಸ್ಕರ ಹೋರಾಡಿದವನು. ನನ್ನ ಇಡೀ ಕುಟುಂಬ ಈ ದೇಶಕ್ಕೆ ಸಮರ್ಪಿತವಾಗಿದೆ. ನಮ್ಮನ್ನೇಕೆ ಪೌರತ್ವ ಸಾಬೀತುಪಡಿಸಲು ಕೇಳಿದ್ದು? ಎಂದು ಹಕೀಮುದ್ದೀನ್ ಪ್ರಶ್ನಿಸಿದ್ದಾರೆ.

ಹಕೀಮುದ್ದೀನ್ ಅವರ ಕುಟುಂಬಸ್ಥರು ಮೂಲತಃ ಉತ್ತರ ಪ್ರದೇಶದ ಪ್ರತಾಪ್‌ಘಡದವರು, 1960ರಿಂದ ಪುಣೆಯಲ್ಲಿ ವಾಸಿಸುತ್ತಿದ್ದಾರೆ. ಹಕೀಮುದ್ದೀನ್ 2013ರಲ್ಲಿ ತನ್ನ ಸ್ವಗ್ರಾಮಕ್ಕೆ ಹಿಂದಿರುಗಿದ್ದಾರೆ. ಅವರ ಸಹೋದರ,ಇತರ ಕುಟುಂಬಸ್ಥರು ಮತ್ತು ಸಂಬಂಧಿಕರು ಪುಣೆಯಲ್ಲೇ ಇದ್ದಾರೆ.

ಅಪರಿಚಿತ ಪುರುಷರ ಗುಂಪೊಂದು ಘೋಷಣೆಗಳನ್ನು ಕೂಗುತ್ತಾ ನಮ್ಮ ಮನೆ ಬಳಿಗೆ ಬಂತು. ಬಾಗಿಲಿಗೆ ಒದ್ದು ಏಕಾಏಕಿ ಮನೆಯೊಳಗೆ ನುಗ್ಗಿತು. ದಾಖಲೆಗಳನ್ನು ನೀಡುವಂತೆ ಒತ್ತಾಯಿಸಿತು. ಸಿವಿಲ್ ಡ್ರೆಸ್‌ನಲ್ಲಿದ್ದ ಅಧಿಕಾರಿಯೊಬ್ಬರು ಅವರನ್ನು ಶಾಂತಗೊಳಿಸಲು ಪ್ರಯತ್ನಿಸಿದರು. ಪೊಲೀಸ್ ವ್ಯಾನ್ ರಸ್ತೆಯಲ್ಲಿ ಕಾಯುತ್ತಿತ್ತು” ಎಂದು ಹಕೀಮುದ್ದೀನ್ ಅವರ ಸಹೋದರ ಇರ್ಷಾದ್ ಶೇಖ್ ಹೇಳಿದ್ದಾರೆ.

ಹಕೀಮುದ್ದೀನ್ ಮಾತ್ರವಲ್ಲದೆ ನಮ್ಮ ಕುಟುಂಬದಲ್ಲಿ ಶೇಖ್ ನಯೀಮುದ್ದೀನ್ ಮತ್ತು ಶೇಖ್ ಮೊಹಮ್ಮದ್ ಸಲೀಂ ಎಂಬ ಇನ್ನಿಬ್ಬರು ನಿವೃತ್ತ ಯೋಧರಿದ್ದಾರೆ. ಅವರು 1965 ಮತ್ತು 1971ರ ಯುದ್ಧಗಳಲ್ಲಿ ದೇಶಕ್ಕಾಗಿ ಹೋರಾಡಿವದರು. “ಸೈನಿಕರ ಕುಟುಂಬಗಳನ್ನು ಹೀಗೆ ನಡೆಸಿಕೊಳ್ಳುತ್ತಾರಾ? ಎಂದು ಇರ್ಷಾದ್ ಪ್ರಶ್ನಿಸಿದ್ದಾರೆ. ಸಿಕ್ಕ ಸಿಕ್ಕವರು ಬಾಗಿಲು ತಟ್ಟಿದಾಗಲೆಲ್ಲಾ ನಮ್ಮ ಪೌರತ್ವ ಸಾಬೀತುಪಡಿಸಬೇಕಾದರೆ ನಾವು ಭಾರತೀಯರಾಗಿರುವುದರ ಅರ್ಥವೇನು? ಎಂದಿದ್ದಾರೆ.

ಮನೆಗೆ ನುಗ್ಗಿದ ಗುಂಪು ದಾಖಲೆಗಳನ್ನು ತೋರಿಸಿದರೂ ಅದನ್ನು ನಿರಾಕರಿಸಿದೆ ಎಂದು ಆರೋಪಿಸಲಾಗಿದೆ. ನಾವು ಆಧಾರ್ ಕಾರ್ಡ್ ತೋರಿಸಿದರೂ, ಅದು ನಕಲಿ ಎಂದು ಗುಂಪು ಅಪಹಾಸ್ಯ ಮಾಡಿತು ಎಂದು ಯೋಧ ಹಕೀಮುದ್ದೀನ್ ಅವರ ಸೋದರಳಿಯರಾದ ನೌಶಾದ್ ಮತ್ತು ನವಾಬ್ ಶೇಖ್ ಹೇಳಿದ್ದಾರೆ. ಅವರು ಗೂಂಡಾಗಳಂತೆ ವರ್ತಿಸಿದ್ದಾರೆ ಎಂದು ನೌಶಾದ್ ಆರೋಪಿಸಿದ್ದು, ಅವರು ಬಾಗಿಲಿಗೆ ಒದ್ದರು, ಮಹಿಳೆಯರ ಮುಂದೆ ದಾಖಲೆ ತೋರಿಸುವಂತೆ ಅಬ್ಬರಿಸಿದರು ಎಂದು ಹೇಳಿದ್ದಾರೆ.

ಭಾನುವಾರ ಕೂಡ ನಮ್ಮನ್ನು ಪೊಲೀಸ್ ಠಾಣೆಗೆ ಕರೆಸಲಾಗಿತ್ತು. ಅಲ್ಲಿ ನಮ್ಮ ದಾಖಲೆಗಳನ್ನು ಪಡೆದು ಎರಡು ಗಂಟೆ ಕಾಯಿಸಿದರು. ನಂತರ ಇನ್‌ಸ್ಪೆಕ್ಟರ್ ಬರಲ್ಲ ಎಂದು ಕಳಿಸಿದರು. ನಮ್ಮ ದಾಖಲೆಗಳು ಈಗಲೂ ಅವರ ಬಳಿಯಿದೆ ಎಂದು ಮತ್ತೊಬ್ಬರು ಶಂಶಾದ್ ಶೇಖ್ ತಿಳಿಸಿದ್ದಾರೆ.

ಈ ಪ್ರಕರಣದ ತನಿಖೆ ನಡೆಸಲಾಗುತ್ತಿದೆ ಎಂದು ಪೊಲೀಸ್ ಆಯುಕ್ತ ಅಮಿತೇಶ್ ಕುಮಾರ್ ಹೇಳಿದ್ದು, “ನಿರ್ಲಕ್ಷ್ಯ ಕಂಡುಬಂದರೆ ಕ್ರಮ ಕೈಗೊಳ್ಳಲಾಗುವುದು. ಪ್ರಾಥಮಿಕ ಮಾಹಿತಿ ಪ್ರಕಾರ ಪೊಲೀಸರು ಬಲವಂತವಾಗಿ ಮನೆಗೆ ಪ್ರವೇಶಿಸಿಲ್ಲ” ಎಂದಿದ್ದಾರೆ.

Courtesy: timesofindia.indiatimes.com

ಅಸ್ಸಾಂನ ಗೋಲಾಘಾಟ್‌ನಲ್ಲಿ ಬೃಹತ್ ತೆರವು ಕಾರ್ಯಾಚರಣೆ: ನೆಲೆ ಕಳೆದುಕೊಳ್ಳಲಿರುವ 1,500ಕ್ಕೂ ಹೆಚ್ಚು ಮುಸ್ಲಿಂ ಕುಟುಂಬಗಳು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಟಿ. ನರಸೀಪುರ ಪ್ರತಿಭಟನೆ ವೇಳೆ ವಾಕ್ಸಮರ: ಪ್ರತಾಪ್ ಸಿಂಹ ಹಾಗೂ ಎಲ್. ನಾಗೇಂದ್ರ ನಡುವೆ ಬಹಿರಂಗ ನೂಕಾಟ-ತಳ್ಳಾಟ!

ಟಿ. ನರಸೀಪುರದಲ್ಲಿ ಗಣೇಶೋತ್ಸವ ಮೆರವಣಿಗೆಗೆ ಸಂಬಂಧಿಸಿದ ವಿವಾದದ ಹಿನ್ನೆಲೆಯಲ್ಲಿ ಬಿಜೆಪಿ ಹಮ್ಮಿಕೊಂಡಿದ್ದ ಪ್ರತಿಭಟನೆ ವೇಳೆ ಮೈಸೂರು ಬಿಜೆಪಿಯಲ್ಲಿನ ಆಂತರಿಕ ಭಿನ್ನಮತ ಬಹಿರಂಗಗೊಂಡಿದೆ. ಪೊಲೀಸ್ ಇನ್ಸ್‌ಪೆಕ್ಟರ್ ಧನಂಜಯ್ ವಿರುದ್ಧ ನಡೆದ ಪ್ರತಿಭಟನೆಯ ಸಂದರ್ಭದಲ್ಲಿ ಮಾಜಿ...

ಉಮರ್ ಖಾಲಿದ್ ಕುರಿತ ಸಾಕ್ಷ್ಯಚಿತ್ರ ಪ್ರದರ್ಶನ ಮುಂದೂಡಿದ NLSIU ವಿದ್ಯಾರ್ಥಿ ಸಂಘ; ಯಾವುದೇ ಒತ್ತಡಕ್ಕೆ ಮಣಿದಿಲ್ಲವೆಂದು ಸ್ಪಷ್ಟನೆ

ಬೆಂಗಳೂರಿನ ನ್ಯಾಷನಲ್ ಲಾ ಸ್ಕೂಲ್ ಆಫ್ ಇಂಡಿಯಾ ಯೂನಿವರ್ಸಿಟಿಯ (NLSIU) ಲಾ ಅಂಡ್ ಸೊಸೈಟಿ ಕಮಿಟಿಯು (LawSoc) ಉಮರ್ ಖಾಲಿದ್ ಅವರ ಜೈಲುವಾಸದ ಕುರಿತು ಲಲಿತ್ ವಾಚಾನಿ ನಿರ್ಮಿಸಿರುವ 'ಪ್ರಿಸನರ್ ನಂ. 626710...

2029ರ ವೇಳೆಗೆ 21 NDA ಆಡಳಿತದ ರಾಜ್ಯಗಳಲ್ಲಿ ಏಕರೂಪ ನಾಗರಿಕ ಸಂಹಿತೆ ಜಾರಿ: ಮುಂಬೈನಲ್ಲಿ ಗೃಹ ಸಚಿವ ಅಮಿತ್ ಶಾ ಘೋಷಣೆ

ವಿವಾಹ, ವಿಚ್ಛೇದನ, ಪಿತ್ರಾರ್ಜಿತ ಆಸ್ತಿ ಮತ್ತು ದತ್ತು ಸ್ವೀಕಾರದಂತಹ ವೈಯಕ್ತಿಕ ಕಾನೂನುಗಳಲ್ಲಿ ಧರ್ಮಾತೀತವಾಗಿ ಏಕರೂಪತೆ ತರುವ 'ಏಕರೂಪ ನಾಗರಿಕ ಸಂಹಿತೆ'ಯನ್ನು (UCC) 2029ರ ವೇಳೆಗೆ ಬಿಜೆಪಿ ನೇತೃತ್ವದ ಎನ್‌ಡಿಎ ಆಡಳಿತವಿರುವ ಎಲ್ಲಾ 21...

KPSC ಯನ್ನು ರದ್ದು ಮಾಡುತ್ತಾ ಸರ್ಕಾರ? ಹೊಸ ಚರ್ಚೆ ಹುಟ್ಟುಹಾಕಿದ ಸಚಿವ ಈಶ್ವರ್ ಖಂಡ್ರೆ ಹೇಳಿಕೆ

ಕರ್ನಾಟಕ ಲೋಕಸೇವಾ ಆಯೋಗವನ್ನು (KPSC) ಮುಚ್ಚುವ ಅಥವಾ ಸಂಪೂರ್ಣವಾಗಿ ರದ್ದುಗೊಳಿಸುವ ಕುರಿತು ಅರಣ್ಯ ಹಾಗೂ ಜೀವಿಶಾಸ್ತ್ರ ಸಚಿವ ಈಶ್ವರ್ ಖಂಡ್ರೆ ನೀಡಿರುವ ಹೇಳಿಕೆಯು ರಾಜ್ಯ ರಾಜಕಾರಣದಲ್ಲಿ ತೀವ್ರ ಸಂಚಲನ ಮೂಡಿಸಿದ್ದು, ಲಕ್ಷಾಂತರ ಸ್ಪರ್ಧಾತ್ಮಕ...

ಹುಬ್ಬಳ್ಳಿಯಲ್ಲಿ ಗಣೇಶ ಮೆರವಣಿಗೆ ವೇಳೆ ಮಹಿಳೆಯರೊಂದಿಗೆ ಅಸಭ್ಯ ವರ್ತನೆ

ಹುಬ್ಬಳ್ಳಿಯಲ್ಲಿ ಗಣೇಶೋತ್ಸವದ ಮೂರ್ತಿ ತರುವ ಸಂಭ್ರಮದ ಮೆರವಣಿಗೆಯನ್ನೇ ನೆಪವಾಗಿಸಿಕೊಂಡು ಅಪರಿಚಿತ ಕಿಡಿಗೇಡಿಗಳು ಮಹಿಳೆಯರ ಜೊತೆ ಅಸಭ್ಯವಾಗಿ ವರ್ತಿಸಿದ ಆಘಾತಕಾರಿ ಘಟನೆ ಬೆಳಕಿಗೆ ಬಂದಿದೆ. ಹಬ್ಬದ ನೆಪದಲ್ಲಿ ಸಾರ್ವಜನಿಕ ಸೌಹಾರ್ದತೆ ಮತ್ತು ಮಹಿಳೆಯರ ಸುರಕ್ಷತೆಗೆ...

ಗಣಪತಿ ಹಬ್ಬದ ನೆಪದಲ್ಲಿ ಮೈಸೂರಿನಲ್ಲಿ ಸೌಹಾರ್ದತೆ ಕೆಡಿಸಲು ಯತ್ನ? ಭದ್ರತಾ ನಿಯಮಗಳನ್ನೇ ಧಿಕ್ಕರಿಸಿದ BJP ನಾಯಕರು

ಗಣೇಶೋತ್ಸವದ ಮೆರವಣಿಗೆಗಳನ್ನು ನೆಪವಾಗಿಸಿಕೊಂಡು ಕೋಮು ಸೌಹಾರ್ದತೆಗೆ ಧಕ್ಕೆ ತರುವ, ಸೂಕ್ಷ್ಮ ಪ್ರದೇಶಗಳಲ್ಲಿ ಪ್ರಚೋದನಾಕಾರಿ ಘೋಷಣೆಗಳನ್ನು ಕೂಗಿ ಗಲಭೆಗೆ ಪ್ರೇರೇಪಿಸುವ ರಕ್ತದಾಹಿ ಕೃತ್ಯಗಳಿಗೆ ಬ್ರೇಕ್ ಹಾಕಲು ಪೊಲೀಸ್ ಇಲಾಖೆ ಕಟ್ಟುನಿಟ್ಟಿನ ಮುನ್ನೆಚ್ಚರಿಕಾ ಕ್ರಮಗಳನ್ನು ಕೈಗೊಂಡಿದೆ....

SIR: ವಿಶೇಷ ತೀವ್ರ ಪರಿಷ್ಕರಣೆ’ ಎಂಬ ಪ್ರಹಸನ, ಆಯೋಗದ ತಪ್ಪುಗಳಿಗೆ ಮತದಾರರು ಪ್ರಾಯಶ್ಚಿತ್ತ ಪಡಬೇಕೇ?

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (SIR) ಹೆಸರಿನಲ್ಲಿ ರಾಜ್ಯಾದ್ಯಂತ ಮತದಾರರನ್ನು 2002ರ ಮತದಾರರ ಪಟ್ಟಿಯೊಂದಿಗೆ ‘ಮ್ಯಾಪಿಂಗ್’ ಮಾಡುವ ಬೃಹತ್ ಪ್ರಕ್ರಿಯೆಯನ್ನು ಚುನಾವಣಾ ಆಯೋಗವು ಕೈಗೆತ್ತಿಕೊಂಡಿದೆ. 2002ರಲ್ಲಿದ್ದ ದತ್ತಾಂಶವನ್ನು ಇಂದಿನ ಪಟ್ಟಿಯೊಂದಿಗೆ ಹೋಲಿಸಿ,...

ಯೋಗಿ ಆದಿತ್ಯನಾಥ್ ಅವರನ್ನು ಪ್ರಶ್ನಿಸಿದ್ದ ಪತ್ರಕರ್ತೆ ದಿವ್ಯಾ ಶ್ರೀವಾಸ್ತವ್‌ಗೆ ಬೆದರಿಕೆ

ಶನಿವಾರ (ಸೆ. 12) ನಡೆದಿದ್ದ ಸುದ್ದಿಗೋಷ್ಠಿಯೊಂದರಲ್ಲಿ ಉತ್ತರ ಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಅವರನ್ನು ಪ್ರಶ್ನಿಸಿದ ಪತ್ರಕರ್ತೆ ದಿವ್ಯಾ ಶ್ರೀವಾಸ್ತವ ಅವರ ವೀಡಿಯೊ ವೈರಲ್ ಆದ ಬಳಿಕ, ಅವರು ಆನ್‌ಲೈನ್ ಬೆದರಿಕೆಗಳು ಮತ್ತು...

ಅಲಿಗಢ ಮುಸ್ಲಿಂ ವಿವಿ ಪ್ರತಿಭಟನೆಯ ‘ಪಕ್ಷಪಾತಿ’ ನಿರೂಪಣೆ : ಝೀ ನ್ಯೂಸ್‌ಗೆ ₹2 ಲಕ್ಷ ದಂಡ ವಿಧಿಸಿದ ಎನ್‌ಬಿಡಿಎಸ್‌ಎ

ಅಲಿಗಢ ಮುಸ್ಲಿಂ ವಿಶ್ವವಿದ್ಯಾಲಯದಲ್ಲಿ (AMU) ನಡೆದ ವಿದ್ಯಾರ್ಥಿ ಪ್ರತಿಭಟನೆಯ ವೇಳೆ ಪ್ಯಾಲೆಸ್ತೀನ್ ಪರ ಘೋಷಣೆಗಳನ್ನು ಕೂಗಿದ ಘಟನೆಯನ್ನು ವರದಿ ಮಾಡುವಾಗ ಪ್ರಸಾರ ನೀತಿ ಸಂಹಿತೆಯನ್ನು ಉಲ್ಲಂಘಿಸಿದೆ ಎಂದು ಪರಿಗಣಿಸಿ, 'ಝೀ ನ್ಯೂಸ್' (Zee...

‘ಕೆಲವರು ಮುಸ್ಲಿಮರನ್ನು ಬೈದ್ರೆ ಮಾತ್ರ ಲೀಡರ್‌ ಆಗೋದು ಅನ್ಕೊಂಡಿದಾರೆ!’: ಆರ್‌. ಅಶೋಕ್‌ ಹಳೆಯ ಹೇಳಿಕೆ ಮುಂದಿಟ್ಟು ಪ್ರಿಯಾಂಕ್ ಖರ್ಗೆ ಟೀಕೆ!

ಮೈಸೂರಿನ ಟಿ. ನರಸೀಪುರದಲ್ಲಿ ಗಣಪತಿ ಮೆರವಣಿಗೆ ಸಾಗುವ ಮಾರ್ಗದ ವಿಚಾರವಾಗಿ ಬಿಜೆಪಿ ಪ್ರತಿಭಟನೆಗೆ ಮುಂದಾಗಿರುವ ಬೆನ್ನಲ್ಲೇ, ವಿಧಾನಸಭೆ ವಿರೋಧ ಪಕ್ಷದ ನಾಯಕ ಆರ್‌. ಅಶೋಕ್‌ ವಿರುದ್ಧ ಗೃಹ ಸಚಿವ ಪ್ರಿಯಾಂಕ್ ಖರ್ಗೆ ವಾಗ್ದಾಳಿ...