Homeಕರ್ನಾಟಕಸರ್ಕಾರಿ ಸಿಮೆಂಟ್ ಬಳಸಿದ ಆರೋಪಕ್ಕೆ ಕಾರ್ಕಳ ಶಾಸಕ ಸುನೀಲ್ ಕುಮಾರ್ ಸ್ಪಷ್ಟನೆ

ಸರ್ಕಾರಿ ಸಿಮೆಂಟ್ ಬಳಸಿದ ಆರೋಪಕ್ಕೆ ಕಾರ್ಕಳ ಶಾಸಕ ಸುನೀಲ್ ಕುಮಾರ್ ಸ್ಪಷ್ಟನೆ

ನಮ್ಮ ಮನೆಯ ಶಿಲ್ಪ ವಿನ್ಯಾಸ ಜವಾಬ್ದಾರಿಯನ್ನು ಪ್ರಮೋದ್ ಕುಮಾರ್ ವಹಿಸಿಕೊಂಡಿದ್ದಾರೆ. ಹಾಗೆ ಕಟ್ಟಡ ನಿರ್ಮಾಣದ ಸಂಪೂರ್ಣ ಜವಾಬ್ದಾರಿಯನ್ನು ನಂದಿಕೂರಿನ ಸೃಷ್ಟಿ ವೆಂಚರ್ಸ್‌ ಇಂಡಸ್ಟ್ರಿಯವರಿಗೆ ಕೊಟ್ಟಿದ್ದೇನೆ.

- Advertisement -
- Advertisement -

ಕಾರ್ಕಳದ ತಾಲ್ಲೂಕು ಕಛೇರಿ ರಸ್ತೆಯಲ್ಲಿ ಶಾಸಕ ಸುನೀಲ್ ಕುಮಾರ್‌ರವರು ಕಟ್ಟಿಸುತ್ತಿರುವ ಬಂಗಲೆ ಮತ್ತು ಅದಕ್ಕೆ ಬಳಸಿರುವ ಸಿಮೆಂಟ್ ವಿಚಾರಕ್ಕೆ ಎದ್ದಿರುವ ವಿವಾದದ ಕುರಿತು ಸ್ವತಃ ಶಾಸಕರೆ ಸ್ಪಷ್ಟನೆ ನೀಡಿದ್ದಾರೆ.

ಈ ಕುರಿತು ವಿಡಿಯೋ ಬಿಡುಗಡೆ ಮಾಡಿರುವ ಅವರು, ಕಾರ್ಕಳದಲ್ಲಿ ನನ್ನ ಕುಟುಂಬ ಕಟ್ಟಡ ನಿರ್ಮಾಣ ಮಾಡುತ್ತಿರುವುದರ ಕುರಿತು ಎದ್ದಿರುವ ಆರೋಪಗಳು ನಿರಾಧಾರವಾಗಿವೆ ಎಂದಿದ್ದಾರೆ.

ನಮ್ಮ ಮನೆಯ ಶಿಲ್ಪ ವಿನ್ಯಾಸ ಜವಾಬ್ದಾರಿಯನ್ನು ಪ್ರಮೋದ್ ಕುಮಾರ್ ವಹಿಸಿಕೊಂಡಿದ್ದಾರೆ. ಹಾಗೆ ಕಟ್ಟಡ ನಿರ್ಮಾಣದ ಸಂಪೂರ್ಣ ಜವಾಬ್ದಾರಿಯನ್ನು ನಂದಿಕೂರಿನ ಸೃಷ್ಟಿ ವೆಂಚರ್ಸ್‌ ಇಂಡಸ್ಟ್ರಿಯವರಿಗೆ ಕೊಟ್ಟಿದ್ದೇನೆ. ಖರೀದಿ, ಸಾಗಾಣಿಕೆ ಮತ್ತು ಮಾನವ ಸಂಪನ್ಮೂಲಗಳ ಬಳಕೆ ಎಲ್ಲವೂ ಅವರ ಜವಾಬ್ದಾರಿ. ನನ್ನ ಜವಾಬ್ದಾರಿ ಯಾವುದು ಇಲ್ಲ ಎಂದಿದ್ದಾರೆ.

ಸರ್ಕಾರಿ ಸಿಮೆಂಟ್ ಬಳಸಿದ್ದಾರೆ ಎಂದು ನನ್ನ ಮೇಲೆ ಆರೋಪಿಸಲಾಗಿದೆ. ಸಿಮೆಂಟ್ ಖರೀದಿಯಲ್ಲಿ ಟ್ರೇಡ್ ಸಿಮೆಂಟ್ ಮತ್ತು ನಾನ್ ಟ್ರೇಡ್ ಸಿಮೆಂಟ್ ಎಂಬ ಎರಡು ವಿಧಗಳಿವೆ. ಉತ್ಪಾದಕರಿಂದ ಡೀಲರ್‌ಗೆ ಬಂದು ಅಲ್ಲಿಂದ ಗ್ರಾಹಕರಿಗೆ ಮಾರುವುದು ಟ್ರೇಡ್ ಸಿಮೆಂಟ್. ಇನ್ನು ಉತ್ಪಾಕದರಿಂದ ನೇರ ಗ್ರಾಹಕರು ತೆಗೆದುಕೊಳ್ಳುವುದು ನಾನ್ ಟ್ರೇಡ್ ಸಿಮೆಂಟ್. ಹಾಗಾಗಿ ನಮ್ಮ ಮನೆ ನಿರ್ಮಾಣಕ್ಕೆ ಯಾವುದು ತೆಗೆದುಕೊಂಡಿದ್ದಾರೆ ಎಂಬುದು ನನ್ನ ಗುತ್ತಿಗೆದಾರರಿಗೆ ಬಿಟ್ಟ ವಿಚಾರ. ಇದ್ಯಾವುದಕ್ಕೂ ನಾನು ಜವಾಬ್ದಾರನಲ್ಲ ಎಂದಿದ್ದಾರೆ.

ನಮ್ಮ ಮನೆ ಕಟ್ಟಿಸುವ ಜವಾಬ್ದಾರಿ ಗುತ್ತಿಗೆದಾರರಿಗೆ ನೀಡಿದ್ದೇನೆ: ಸರ್ಕಾರಿ ಸಿಮೆಂಟ್ ಬಳಸಿದ ಆರೋಪಕ್ಕೆ ಕಾರ್ಕಳ ಶಾಸಕ ಸುನೀಲ್ ಕುಮಾರ್ ಸ್ಪಷ್ಟನೆ

Posted by Naanu Gauri on Friday, July 17, 2020

ಜರ್ಮನ್ ತಂತ್ರಜ್ಞಾನ ಮತ್ತು ಇಕೋವಲ್‌ಪ್ಯಾನಲ್‌ ತಂತ್ರಜ್ಞಾನ ಬಳಸಿ ಕಟ್ಟಡ ಕಟ್ಟಲಾಗುತ್ತಿದೆ. ಡಿಸೆಂಬರ್ ಅಂತ್ಯದೊಳಗೆ ಮನೆ ಕಟ್ಟಿ ಮುಗಿಸಿವಂತೆ ಗುತ್ತಿಗೆದಾರರ ಜೊತೆಗೆ ಒಪ್ಪಂದ ಮಾಡಿಕೊಂಡಿದ್ದೇನೆ ಎಂದು ಸಹ ಸುನೀಲ್ ಕುಮಾರ್ ತಿಳಿಸಿದ್ದಾರೆ.

ವಿರೋಧಿಗಳು ಮತ್ತು ಕಾಂಗ್ರೆಸ್‌ ನನ್ನ ಮೇಲೆ ಆರೋಪ ಮಾಡುತ್ತಿದ್ದಾರೆ. ಅವರ ಎಲ್ಲಾ ತನಿಖೆಗಳಿಗೆ ನಾನು ಸಿದ್ಧನಿದ್ದೇನೆ. ಈ ಹಿಂದೆಯೂ ಹಲವು ವಿಚಾರದಲ್ಲಿ ನನ್ನ ಮೇಲೆ ಆರೋಪಗಳನ್ನು ಹೊರಿಸಲಾಗಿತ್ತು. ಆದರೆ ಯಾವುದನ್ನು ಸ್ಪಷ್ಟಪಡಿಸಲು ಸಾಧ್ಯವಾಗಿಲ್ಲ. ಈಗ ನನ್ನ ಮೇಲೆ ನಿರಾಧಾರ ಆರೋಪ ಮಾಡಿರುವುದಕ್ಕೆ ಒಂದು ವಾರದಲ್ಲಿ ದೂರು ದಾಖಲಿಸುತ್ತೇನೆ ಎಂದು ಸುನೀಲ್ ಕುಮಾರ್ ಹೇಳಿದ್ದಾರೆ.


ಇದನ್ನೂ ಓದಿ: ಕಾರ್ಕಳ ಶಾಸಕ ಸುನಿಲ್ ಕುಮಾರ್ ಬಂಗಲೆಗೆ ಸಿಮೆಂಟ್ ಎಲ್ಲಿಯದು?: ಈ ವಿಡಿಯೋವನ್ನು ಸುಳ್ಳೆನ್ನಲು ಸಾಧ್ಯವೇ?

 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ದೆಹಲಿ ಗಲಭೆ ಪ್ರಕರಣದಿಂದ ಒಂಬತ್ತು ಜನರನ್ನು ಖುಲಾಸೆಗೊಳಿಸಿದ ನ್ಯಾಯಾಲಯ

2020 ರ ದೆಹಲಿ ಗಲಭೆಗೆ ಸಂಬಂಧಿಸಿದ ಪ್ರಕರಣದಲ್ಲಿ ಒಂಬತ್ತು ಜನರನ್ನು ನ್ಯಾಯಾಲಯವು ಖುಲಾಸೆಗೊಳಿಸಿದೆ. ಸಾಕ್ಷ್ಯಗಳು ನಿರ್ದಿಷ್ಟತೆಯ ಕೊರತೆ ಮತ್ತು ಸಾಮಾನ್ಯ ಸ್ವರೂಪದ್ದಾಗಿರುವುದರಿಂದ ಪ್ರಕರಣದಲ್ಲಿ ಅವುಗಳನ್ನು ನಂಬಲಾಗುವುದಿಲ್ಲ ಎಂ ನ್ಯಾಯಾಲಯ ಹೇಳಿದೆ. ಹೆಚ್ಚುವರಿ ಸೆಷನ್ಸ್ ನ್ಯಾಯಾಧೀಶ...

ಚುನಾವಣಾ ಕಾರ್ಯಕ್ಕೆ ಅರಣ್ಯ ಸಿಬ್ಬಂದಿ : ಅಸ್ಸಾಂ ಸರ್ಕಾರದ ಆದೇಶಕ್ಕೆ ಎನ್‌ಜಿಟಿ ತಡೆ

ವಿಧಾನಸಭೆ ಚುನಾವಣೆಗೆ ಅಸ್ಸಾಂ ಅರಣ್ಯ ಸಂರಕ್ಷಣಾ ಪಡೆಯ 1,600 ಸಿಬ್ಬಂದಿಯನ್ನು ನಿಯೋಜಿಸಲು ಕೋರಿದ್ದ ಅಸ್ಸಾಂ ಸರ್ಕಾರದ ಆದೇಶವನ್ನು ರಾಷ್ಟ್ರೀಯ ಹಸಿರು ನ್ಯಾಯಮಂಡಳಿಯ (ಎನ್‌ಜಿಟಿ) ಪೂರ್ವ ವಲಯ ಪೀಠ ಗುರುವಾರ (ಮಾ.2) ತಡೆಹಿಡಿದಿದೆ. ಈ ಆದೇಶವನ್ನು...

‘ಕರೂರು ದುರಂತದಲ್ಲಿ ಪಿತೂರಿ ಇದೆ’ ಈ ಘಟನೆಯಲ್ಲಿ ನನಗೂ ನ್ಯಾಯ ಬೇಕು: ಟಿವಿಕೆ ಮುಖ್ಯಸ್ಥ ನಟ, ರಾಜಕಾರಣಿ ವಿಜಯ್ ಆರೋಪ  

ಕರೂರಿನಲ್ಲಿ ನಡೆದ ದುರಂತ ಕಾಲ್ತುಳಿತ ಮತ್ತು ಅವರ ಕೊನೆಯ ಚಿತ್ರ ಜನನಾಯಗನ್ ಬಿ ಡುಗಡೆಯ ಹಿಂದೆ ಜಂಟಿ ಕುತಂತ್ರ ಮತ್ತು ಪಿತೂರಿ ಇದೆ ಎಂದು ಟಿವಿಕೆ ಮುಖ್ಯಸ್ಥ ವಿಜಯ್ ಗುರುವಾರ ಆರೋಪಿಸಿದ್ದಾರೆ ಮತ್ತು...

ತೆಲಂಗಾಣ| ಗೋಮಾಂಸ ಮಾರಾಟ ಆರೋಪ; ಮುಸ್ಲಿಂ ಸಮುದಾಯದ ತಂದೆ-ಮಗನ ಮೇಲೆ ಹಲ್ಲೆ

ಹನುಮಾನ್ ಜಯಂತಿ ಸಂದರ್ಭದಲ್ಲಿ ಗೋಮಾಂಸ ಮಾರಾಟ ಮಾಡಿದ ಆರೋಪದ ಮೇಲೆ ಹಿಂದುತ್ವವಾದಿ ಗುಂಪೊಂದು 60 ವರ್ಷದ ಮುಸ್ಲಿಂ ವ್ಯಕ್ತಿ ಮತ್ತು ಆತನ ಹದಿಹರೆಯದ ಮಗನ ಮೇಲೆ ಹಲ್ಲೆ ನಡೆಸಿರುವ ಘಟನೆ ತೆಲಂಗಾಣದ ಜಗ್ತಿಯಾಲ್...

‘ಕೇವಲ ಮುಸ್ಲಿಮರೇ ಶಾಸಕರಾಗಿದ್ದಾರೆ’..ಚುನಾವಣೆ ಗೆಲ್ಲಲು ಧರ್ಮ ಮುಂದಿಟ್ಟ ಗುರುವಾಯೂರು ಬಿಜೆಪಿ ಅಭ್ಯರ್ಥಿ

ಕೇರಳದ ಗುರುವಾಯೂರು ವಿಧಾನಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಬಿ. ಗೋಪಾಲಕೃಷ್ಣನ್ ಚುನಾವಣೆ ಗೆಲ್ಲಲು ಧರ್ಮವನ್ನೇ ಮುಖ್ಯ ಅಸ್ತ್ರವನ್ನಾಗಿ ಬಳಸಿಕೊಂಡಿದ್ದು, ಕಳೆದ 50 ವರ್ಷಗಳಲ್ಲಿ ಕೇವಲ ಮುಸ್ಲಿಮರೇ ಶಾಸಕರಾಗಿದ್ದಾರೆ ಎಂಬುವುದನ್ನು ಪುನರುಚ್ಚರಿಸಿದ್ದಾರೆ. ಚುನಾವಣಾ ಪ್ರಚಾರದ ಭಾಗವಾಗಿ...

ಹೊಸ ಹಿಂದೂ ದೇವಾಲಯಕ್ಕೆ ಭೂಮಿ ಮಂಜೂರು ಮಾಡಿದ ಸಿಂಗಾಪುರ ಆಡಳಿತ

ಸಿಂಗಪುರದಲ್ಲಿ ಹೆಚ್ಚುತ್ತಿರುವ ಹಿಂದೂ ಸಮುದಾಯದ ಅಗತ್ಯಗಳನ್ನು ಪೂರೈಸಲು ಸಿಂಗಾಪುರ ಸರ್ಕಾರವು ನಗರ-ರಾಜ್ಯದ ಯಿಶುನ್ ಅವೆನ್ಯೂ 3 ರಲ್ಲಿ ಹೊಸ ಹಿಂದೂ ದೇವಾಲಯವನ್ನು ನಿರ್ಮಿಸಲು ಭೂಮಿ ಮಂಜೂರು ಮಾಡಿದೆ. ಏಪ್ರಿಲ್ 1 ರ ಬುಧವಾರದ ಮಾಧ್ಯಮ...

ಕೇರಳ ಚುನಾವಣೆಗೆ ಮುನ್ನ ಕಾಂಗ್ರೆಸ್ ನೇತೃತ್ವದ ಯುಡಿಎಫ್ ಗೆ ಬೆಂಬಲ ಘೋಷಿಸಿದ ‘ಅಂಬೇಡ್ಕರ್‌ವಾದಿ ಪ್ರಜಾಸತ್ತಾತ್ಮಕ ರಂಗ’

ಎಡ ಸರ್ಕಾರ ಕೈಗೊಂಡ ಅಭಿವೃದ್ಧಿ ಉಪಕ್ರಮಗಳು ಆದಿವಾಸಿ, ದಲಿತ ಮತ್ತು ಇತರ ಅಂಚಿನಲ್ಲಿರುವ ಸಮುದಾಯಗಳನ್ನು ಬದಿಗಿಟ್ಟಿವೆ ಎಂದು ಆರೋಪಿಸಿ, ಅಂಬೇಡ್ಕರ್‌ವಾದಿ ಪ್ರಜಾಸತ್ತಾತ್ಮಕ ರಂಗ (ಎಡಿಎಫ್) ಬುಧವಾರ ಕಾಂಗ್ರೆಸ್ ನೇತೃತ್ವದ ಯುನೈಟೆಡ್ ಪ್ರಜಾಸತ್ತಾತ್ಮಕ ರಂಗ...

ಐಎಎಸ್‌ ಅಧಿಕಾರಿ ರೋಹಿಣಿ ಸಿಂಧೂರಿ ವಿರುದ್ಧ ತನಿಖೆಗೆ ಪೂರ್ವಾನುಮತಿ ನೀಡಲು ಹೈಕೋರ್ಟ್ ನಿರ್ದೇಶನ

ಪರಿಸರ ಸ್ನೇಹಿ ಬಟ್ಟೆ ಚೀಲಗಳ ಖರೀದಿಯಲ್ಲಿ ನಡೆದಿದೆ ಎನ್ನಲಾದ ಅಕ್ರಮಗಳಿಗೆ ಸಂಬಂಧಿಸಿದಂತೆ, ಐಎಎಸ್ ಅಧಿಕಾರಿ ರೋಹಿಣಿ ಸಿಂಧೂರಿ ವಿರುದ್ಧ ಎಫ್‌ಐಆರ್ ದಾಖಲಿಸಲು ಅನುಮತಿಸುವಂತೆ ಹೈಕೋರ್ಟ್ ರಾಜ್ಯ ಸರ್ಕಾರಕ್ಕೆ ನಿರ್ದೇಶನ ನೀಡಿದೆ ಎಂದು ವರದಿಯಾಗಿದೆ....

ನ್ಯಾಯಾಂಗ ಅಧಿಕಾರಿಗಳನ್ನು ರಕ್ಷಿಸುವಲ್ಲಿ ಚುನಾವಣಾ ಆಯೋಗ ವಿಫಲವಾಗಿದೆ: ಮಮತಾ ಬ್ಯಾನರ್ಜಿ

ಪಶ್ಚಿಮ ಬಂಗಾಳದ ಮಾಲ್ಡಾ ಜಿಲ್ಲೆಯಲ್ಲಿ ಎಸ್‌ಐಆರ್ ಕಾರ್ಯದಲ್ಲಿ ತೊಡಗಿರುವ ನ್ಯಾಯಾಂಗ ಅಧಿಕಾರಿಗಳನ್ನು 'ರಕ್ಷಿಸುವಲ್ಲಿ ಚುನಾವಣಾ ಆಯೋಗ ವಿಫಲವಾಗಿದೆ' ಎಂದು ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ದೂಷಿಸಿದ್ದಾರೆ. ಮತದಾರರ ಪಟ್ಟಿಯಿಂದ ಹೆಸರುಗಳನ್ನು ಅಳಿಸಿಹಾಕಿದ್ದಕ್ಕಾಗಿ ಬುಧವಾರ ಪ್ರತಿಭಟನಾಕಾರರು ಹಲವಾರು...

ಎಎಪಿಯ ರಾಜ್ಯಸಭಾ ಉಪನಾಯಕ ಸ್ಥಾನದಿಂದ ರಾಘವ್ ಚಡ್ಡಾಗೆ ಕೋಕ್, ಅಶೋಕ್ ಮಿತ್ತಲ್ ಗೆ ಅಧಿಕಾರ: ವರದಿ

ಮಹತ್ವದ ಬೆಳವಣಿಗೆಯೊಂದರಲ್ಲಿ, ಆಮ್ ಆದ್ಮಿ ಪಕ್ಷ (ಎಎಪಿ) ರಾಜ್ಯಸಭೆಯಲ್ಲಿ ರಾಘವ್ ಚಡ್ಡಾ ಅವರನ್ನು ಉಪನಾಯಕ ಹುದ್ದೆಯಿಂದ ಬದಲಾಯಿಸಲು ಮುಂದಾಗಿದ್ದು, ಇದು ಪಕ್ಷದೊಳಗಿನ ಆಂತರಿಕ ಬಿರುಕು ಉಂಟಾಗಿರುವ ಲಕ್ಷಣಗಳನ್ನು ಸೂಚಿಸುತ್ತದೆ. ಮೇಲ್ಮನೆಯಲ್ಲಿ ಪಕ್ಷದ ಹೊಸ...