Homeಕರ್ನಾಟಕಸರ್ಕಾರಿ ಸಿಮೆಂಟ್ ಬಳಸಿದ ಆರೋಪಕ್ಕೆ ಕಾರ್ಕಳ ಶಾಸಕ ಸುನೀಲ್ ಕುಮಾರ್ ಸ್ಪಷ್ಟನೆ

ಸರ್ಕಾರಿ ಸಿಮೆಂಟ್ ಬಳಸಿದ ಆರೋಪಕ್ಕೆ ಕಾರ್ಕಳ ಶಾಸಕ ಸುನೀಲ್ ಕುಮಾರ್ ಸ್ಪಷ್ಟನೆ

ನಮ್ಮ ಮನೆಯ ಶಿಲ್ಪ ವಿನ್ಯಾಸ ಜವಾಬ್ದಾರಿಯನ್ನು ಪ್ರಮೋದ್ ಕುಮಾರ್ ವಹಿಸಿಕೊಂಡಿದ್ದಾರೆ. ಹಾಗೆ ಕಟ್ಟಡ ನಿರ್ಮಾಣದ ಸಂಪೂರ್ಣ ಜವಾಬ್ದಾರಿಯನ್ನು ನಂದಿಕೂರಿನ ಸೃಷ್ಟಿ ವೆಂಚರ್ಸ್‌ ಇಂಡಸ್ಟ್ರಿಯವರಿಗೆ ಕೊಟ್ಟಿದ್ದೇನೆ.

- Advertisement -
- Advertisement -

ಕಾರ್ಕಳದ ತಾಲ್ಲೂಕು ಕಛೇರಿ ರಸ್ತೆಯಲ್ಲಿ ಶಾಸಕ ಸುನೀಲ್ ಕುಮಾರ್‌ರವರು ಕಟ್ಟಿಸುತ್ತಿರುವ ಬಂಗಲೆ ಮತ್ತು ಅದಕ್ಕೆ ಬಳಸಿರುವ ಸಿಮೆಂಟ್ ವಿಚಾರಕ್ಕೆ ಎದ್ದಿರುವ ವಿವಾದದ ಕುರಿತು ಸ್ವತಃ ಶಾಸಕರೆ ಸ್ಪಷ್ಟನೆ ನೀಡಿದ್ದಾರೆ.

ಈ ಕುರಿತು ವಿಡಿಯೋ ಬಿಡುಗಡೆ ಮಾಡಿರುವ ಅವರು, ಕಾರ್ಕಳದಲ್ಲಿ ನನ್ನ ಕುಟುಂಬ ಕಟ್ಟಡ ನಿರ್ಮಾಣ ಮಾಡುತ್ತಿರುವುದರ ಕುರಿತು ಎದ್ದಿರುವ ಆರೋಪಗಳು ನಿರಾಧಾರವಾಗಿವೆ ಎಂದಿದ್ದಾರೆ.

ನಮ್ಮ ಮನೆಯ ಶಿಲ್ಪ ವಿನ್ಯಾಸ ಜವಾಬ್ದಾರಿಯನ್ನು ಪ್ರಮೋದ್ ಕುಮಾರ್ ವಹಿಸಿಕೊಂಡಿದ್ದಾರೆ. ಹಾಗೆ ಕಟ್ಟಡ ನಿರ್ಮಾಣದ ಸಂಪೂರ್ಣ ಜವಾಬ್ದಾರಿಯನ್ನು ನಂದಿಕೂರಿನ ಸೃಷ್ಟಿ ವೆಂಚರ್ಸ್‌ ಇಂಡಸ್ಟ್ರಿಯವರಿಗೆ ಕೊಟ್ಟಿದ್ದೇನೆ. ಖರೀದಿ, ಸಾಗಾಣಿಕೆ ಮತ್ತು ಮಾನವ ಸಂಪನ್ಮೂಲಗಳ ಬಳಕೆ ಎಲ್ಲವೂ ಅವರ ಜವಾಬ್ದಾರಿ. ನನ್ನ ಜವಾಬ್ದಾರಿ ಯಾವುದು ಇಲ್ಲ ಎಂದಿದ್ದಾರೆ.

ಸರ್ಕಾರಿ ಸಿಮೆಂಟ್ ಬಳಸಿದ್ದಾರೆ ಎಂದು ನನ್ನ ಮೇಲೆ ಆರೋಪಿಸಲಾಗಿದೆ. ಸಿಮೆಂಟ್ ಖರೀದಿಯಲ್ಲಿ ಟ್ರೇಡ್ ಸಿಮೆಂಟ್ ಮತ್ತು ನಾನ್ ಟ್ರೇಡ್ ಸಿಮೆಂಟ್ ಎಂಬ ಎರಡು ವಿಧಗಳಿವೆ. ಉತ್ಪಾದಕರಿಂದ ಡೀಲರ್‌ಗೆ ಬಂದು ಅಲ್ಲಿಂದ ಗ್ರಾಹಕರಿಗೆ ಮಾರುವುದು ಟ್ರೇಡ್ ಸಿಮೆಂಟ್. ಇನ್ನು ಉತ್ಪಾಕದರಿಂದ ನೇರ ಗ್ರಾಹಕರು ತೆಗೆದುಕೊಳ್ಳುವುದು ನಾನ್ ಟ್ರೇಡ್ ಸಿಮೆಂಟ್. ಹಾಗಾಗಿ ನಮ್ಮ ಮನೆ ನಿರ್ಮಾಣಕ್ಕೆ ಯಾವುದು ತೆಗೆದುಕೊಂಡಿದ್ದಾರೆ ಎಂಬುದು ನನ್ನ ಗುತ್ತಿಗೆದಾರರಿಗೆ ಬಿಟ್ಟ ವಿಚಾರ. ಇದ್ಯಾವುದಕ್ಕೂ ನಾನು ಜವಾಬ್ದಾರನಲ್ಲ ಎಂದಿದ್ದಾರೆ.

ನಮ್ಮ ಮನೆ ಕಟ್ಟಿಸುವ ಜವಾಬ್ದಾರಿ ಗುತ್ತಿಗೆದಾರರಿಗೆ ನೀಡಿದ್ದೇನೆ: ಸರ್ಕಾರಿ ಸಿಮೆಂಟ್ ಬಳಸಿದ ಆರೋಪಕ್ಕೆ ಕಾರ್ಕಳ ಶಾಸಕ ಸುನೀಲ್ ಕುಮಾರ್ ಸ್ಪಷ್ಟನೆ

Posted by Naanu Gauri on Friday, July 17, 2020

ಜರ್ಮನ್ ತಂತ್ರಜ್ಞಾನ ಮತ್ತು ಇಕೋವಲ್‌ಪ್ಯಾನಲ್‌ ತಂತ್ರಜ್ಞಾನ ಬಳಸಿ ಕಟ್ಟಡ ಕಟ್ಟಲಾಗುತ್ತಿದೆ. ಡಿಸೆಂಬರ್ ಅಂತ್ಯದೊಳಗೆ ಮನೆ ಕಟ್ಟಿ ಮುಗಿಸಿವಂತೆ ಗುತ್ತಿಗೆದಾರರ ಜೊತೆಗೆ ಒಪ್ಪಂದ ಮಾಡಿಕೊಂಡಿದ್ದೇನೆ ಎಂದು ಸಹ ಸುನೀಲ್ ಕುಮಾರ್ ತಿಳಿಸಿದ್ದಾರೆ.

ವಿರೋಧಿಗಳು ಮತ್ತು ಕಾಂಗ್ರೆಸ್‌ ನನ್ನ ಮೇಲೆ ಆರೋಪ ಮಾಡುತ್ತಿದ್ದಾರೆ. ಅವರ ಎಲ್ಲಾ ತನಿಖೆಗಳಿಗೆ ನಾನು ಸಿದ್ಧನಿದ್ದೇನೆ. ಈ ಹಿಂದೆಯೂ ಹಲವು ವಿಚಾರದಲ್ಲಿ ನನ್ನ ಮೇಲೆ ಆರೋಪಗಳನ್ನು ಹೊರಿಸಲಾಗಿತ್ತು. ಆದರೆ ಯಾವುದನ್ನು ಸ್ಪಷ್ಟಪಡಿಸಲು ಸಾಧ್ಯವಾಗಿಲ್ಲ. ಈಗ ನನ್ನ ಮೇಲೆ ನಿರಾಧಾರ ಆರೋಪ ಮಾಡಿರುವುದಕ್ಕೆ ಒಂದು ವಾರದಲ್ಲಿ ದೂರು ದಾಖಲಿಸುತ್ತೇನೆ ಎಂದು ಸುನೀಲ್ ಕುಮಾರ್ ಹೇಳಿದ್ದಾರೆ.


ಇದನ್ನೂ ಓದಿ: ಕಾರ್ಕಳ ಶಾಸಕ ಸುನಿಲ್ ಕುಮಾರ್ ಬಂಗಲೆಗೆ ಸಿಮೆಂಟ್ ಎಲ್ಲಿಯದು?: ಈ ವಿಡಿಯೋವನ್ನು ಸುಳ್ಳೆನ್ನಲು ಸಾಧ್ಯವೇ?

 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಭೂ ಕಬಳಿಕೆ ಆರೋಪ : ಸದನದಲ್ಲಿ ಚರ್ಚೆಗೆ ಸಿದ್ದ ಎಂದ ಸಚಿವ ಕೃಷ್ಣ ಬೈರೇಗೌಡ

"ಸದನದ ಸದಸ್ಯನಾಗಿ ನನ್ನ ಹಕ್ಕನ್ನು ಬಿಟ್ಟುಕೊಡಲು ಸಿದ್ದನಿದ್ದೇನೆ. ನನ್ನ ಬಗ್ಗೆ ಎತ್ತಿರುವ ವೈಯಕ್ತಿಕ ಆರೋಪದ ಬಗ್ಗೆ ಚರ್ಚೆಗೆ ಸಿದ್ದ" ಎಂದು ಸಚಿವ ಕೃಷ್ಣ ಬೈರೇಗೌಡ ಹೇಳಿದರು. ಗುರುವಾರ (ಡಿ.18) ವಿಧಾನಸಭೆಯ ಶೂನ್ಯ ವೇಳೆಯಲ್ಲಿ, ವಿಧಾನಪರಿಷತ್...

ಡಿಸೆಂಬರ್ 15 ರ ಪ್ರತಿಭಟನೆಯಲ್ಲಿ ಭಾಗವಹಿಸಿದ್ದಕ್ಕಾಗಿ ಜಾಮಿಯಾ ಮಿಲಿಯಾ ವಿದ್ಯಾರ್ಥಿಗಳಿಗೆ ವಿಶ್ವವಿದ್ಯಾಲಯದಿಂದ ಶೋಕಾಸ್ ನೋಟಿಸ್‌

2019 ರಲ್ಲಿ ವಿದ್ಯಾರ್ಥಿಗಳ ಮೇಲಿನ ಹಿಂಸಾಚಾರ ನಡೆದು ಆರು ವರ್ಷಗಳು ತುಂಬಿದ್ದು, ಅದರ ವಾರ್ಷಿಕ ನೆನಪಿನಲ್ಲಿ ಜಾಮಿಯಾ ಮಿಲಿಯಾ ಇಸ್ಲಾಮಿಯಾ ವಿದ್ಯಾರ್ಥಿಗಳು ಡಿಸೆಂಬರ್ 15 ರಂದು ಕ್ಯಾಂಪಸ್ ಒಳಗೆ ದೊಡ್ಡ ಪ್ರತಿಭಟನೆ ನಡೆಸಿದ್ದರು....

ಅಮೆರಿಕದ ಸುಂಕಗಳು ತಮಿಳುನಾಡಿನ ರಫ್ತು ಕೈಗಾರಿಕೆಗಳನ್ನು ಅಂಚಿಗೆ ತಳ್ಳುತ್ತವೆ: ಪ್ರಧಾನಿ ಮೋದಿಗೆ ಸಿಎಂ ಸ್ಟಾಲಿನ್ ಎಚ್ಚರಿಕೆ

ತಮಿಳುನಾಡು ಮುಖ್ಯಮಂತ್ರಿ ಎಂ.ಕೆ. ಸ್ಟಾಲಿನ್ ಅವರು ಪ್ರಧಾನಿ ನರೇಂದ್ರ ಮೋದಿ ಅವರಿಗೆ ಪತ್ರ ಬರೆದಿದ್ದು, ಭಾರತದ ರಫ್ತಿನ ಮೇಲೆ ಅಮೆರಿಕ ವಿಧಿಸಿರುವ ಭಾರೀ ಸುಂಕಗಳು ರಾಜ್ಯದ ಕೆಲವು ಉದ್ಯೋಗ- ಕೈಗಾರಿಕೆಗಳನ್ನು ತೀವ್ರ ಬಿಕ್ಕಟ್ಟಿನತ್ತ...

ಐದು ವರ್ಷಗಳಲ್ಲಿ 84 ಸಾವಿರ ಸರ್ಕಾರಿ ಶಾಲೆಗಳು ಬಿಸಿಯೂಟ ಯೋಜನೆಯಿಂದ ಹೊರಕ್ಕೆ : ಸಂಸತ್ತಿಗೆ ತಿಳಿಸಿದ ಕೇಂದ್ರ

ಕಳೆದ ಐದು ವರ್ಷಗಳಲ್ಲಿ 84 ಸಾವಿರ ಸರ್ಕಾರಿ ಶಾಲೆಗಳು 'ಪ್ರಧಾನಮಂತ್ರಿ ಪೋಷಣ್ ಯೋಜನೆ'ಯಿಂದ (ಮಧ್ಯಾಹ್ನದ ಬಿಸಿಯೂಟ) ಹೊರ ಬಿದ್ದಿವೆ. 2020-21ರಲ್ಲಿ 11.19 ಲಕ್ಷ ಇದ್ದ ಶಾಲೆಗಳ ಸಂಖ್ಯೆ 2024-25ರಲ್ಲಿ 10.35ಕ್ಕೆ ಕುಸಿದಿದೆ ಎಂದು...

ಭೀಮಾ ಕೋರೆಗಾಂವ್ ಪ್ರಕರಣ: ಗೌತಮ್ ನವಲಖಾಗೆ ಜಾಮೀನಿನ ಮೇಲೆ ದೆಹಲಿಗೆ ತೆರಳಲು ಅನುಮತಿ ನೀಡಿದ ಬಾಂಬೆ ಹೈಕೋರ್ಟ್

ಭೀಮಾ ಕೋರೆಗಾಂವ್ ಯುಎಪಿಎ ಪ್ರಕರಣದಲ್ಲಿ ಜಾಮೀನಿನ ಮೇಲೆ ಹೊರಗಿರುವ ಮಾನವ ಹಕ್ಕುಗಳ ಕಾರ್ಯಕರ್ತ ಗೌತಮ್ ನವಲಖಾ ಅವರಿಗೆ ಪ್ರಕರಣದ ವಿಚಾರಣೆ ನಡೆಯುತ್ತಿರುವಾಗ ನವದೆಹಲಿಯಲ್ಲಿ ವಾಸಿಸಲು ಬಾಂಬೆ ಹೈಕೋರ್ಟ್ ಬುಧವಾರ ಅನುಮತಿ ನೀಡಿದೆ. ಆದಾಗಲೂ, ಮಾನವ...

ಕಾರವಾರ ನೌಕಾ ಪ್ರದೇಶದ ಸುತ್ತಮುತ್ತ ಆತಂಕ ಮೂಡಿಸಿದ ‘ಸೀಗಲ್‌’ ಪಕ್ಷಿ; ಚೀನಾ ನಿರ್ಮಿತ ಜಿಪಿಎಸ್ ಸಾಧನ ಪತ್ತೆ

ಉತ್ತರ ಕನ್ನಡ ಜಿಲ್ಲೆಯ ಕಾರವಾರದ ಕರಾವಳಿ ಪ್ರದೇಶದ ಬಳಿ, ಸೂಕ್ಷ್ಮ ನೌಕಾ ವಲಯದ ಬಳಿ ಚೀನಾ ನಿರ್ಮಿತ ಜಿಪಿಎಸ್ ಟ್ರ್ಯಾಕಿಂಗ್ ಸಾಧನವೊಂದು 'ಸೀಗಲ್' (ಸಮುದ್ರಹಕ್ಕಿ) ಪಕ್ಷಿಗೆ ಅಳವಡಿಸಿರುವುದು ಕಂಡುಬಂದ ನಂತರ ಭದ್ರತಾ ಸಂಸ್ಥೆಗಳು...

ಅಣು ಶಕ್ತಿಯ ಖಾಸಗೀಕರಣ : ‘ಶಾಂತಿ’ ಮಸೂದೆಗೆ ಲೋಕಸಭೆ ಅಸ್ತು

ಭಾರತದ ಅಣು ವಿದ್ಯುತ್ ಕ್ಷೇತ್ರದಲ್ಲಿ ಖಾಸಗಿ ವಲಯದ ಪ್ರವೇಶಕ್ಕೆ ದಾರಿ ಮಾಡಿಕೊಡುವ, 'ಭಾರತದ ಪ್ರಗತಿಗಾಗಿ ಅಣು ಶಕ್ತಿಯ ಸುಸ್ಥಿರ ಉತ್ಪಾದನೆ (ಎಸ್‌ಎಚ್‌ಎಎನ್‌ಟಿಐ– ಶಾಂತಿ ಮಸೂದೆ) ಮಸೂದೆಯನ್ನು ಲೋಕಸಭೆ ಬುಧವಾರ (ಡಿ.17) ಅಂಗೀಕರಿಸಿತು. ವಿಪಕ್ಷಗಳ ಸದಸ್ಯರು...

ಮಾದಕ ದ್ರವ್ಯ ಸೇವನೆ, ಲೈಂಗಿಕ ಕಿರುಕುಳಕ್ಕೆ 3 ಲಕ್ಷ ರೂ. ದಂಡ ವಸೂಲಿ: ಬೆಂಗಳೂರಿನ ಅಪಾರ್ಟ್‌ಮೆಂಟ್ ಅಸೋಸಿಯೇಷನ್ ​​ವಿರುದ್ಧ ಪ್ರಕರಣ ದಾಖಲು

ಬೆಂಗಳೂರು: ಪಶ್ಚಿಮ ಬೆಂಗಳೂರಿನ ದೊಡ್ಡಬೆಲೆ ಬಳಿಯ ವಸತಿ ಸಂಕೀರ್ಣವೊಂದರ ಅಪಾರ್ಟ್‌ಮೆಂಟ್ ಮಾಲೀಕರ ಸಂಘದ ವಿರುದ್ಧ ಅಪರಾಧ ಚಟುವಟಿಕೆಗಳಲ್ಲಿ ತೊಡಗಿರುವ ನಿವಾಸಿಗಳಿಂದ ದಂಡ ವಸೂಲಿ ಮಾಡಿದ ಮತ್ತು ಅಪರಾಧಗಳನ್ನು ಮುಚ್ಚಿಟ್ಟ ಆರೋಪದ ಮೇಲೆ ಕುಂಬಳಗೋಡು...

2020ರ ದೆಹಲಿ ಗಲಭೆ ಪ್ರಕರಣ: ಐವರು ಆರೋಪಿಗಳನ್ನು ಖುಲಾಸೆಗೊಳಿಸಿದ ನ್ಯಾಯಾಲಯ

2020 ರ ದೆಹಲಿ ಗಲಭೆಗೆ ಸಂಬಂಧಿಸಿದಂತೆ ಬೆಂಕಿ ಹಚ್ಚುವಿಕೆ, ಗಲಭೆ ಮತ್ತು ವಿಧ್ವಂಸಕ ಕೃತ್ಯದ ಆರೋಪ ಹೊತ್ತಿರುವ ಐವರನ್ನು ನ್ಯಾಯಾಲಯ ಖುಲಾಸೆಗೊಳಿಸಿದೆ. ಅಬ್ದುಲ್ ಸತ್ತಾರ್, ಮುಹಮ್ಮದ್ ಖಾಲಿದ್, ಹುನೈನ್, ತನ್ವೀರ್ ಮತ್ತು ಆರಿಫ್ ವಿರುದ್ಧದ...

ಕಾರ್‌ ಚಲಾಯಿಸುವಾಗ ಫೋನ್‌ನಲ್ಲಿ ಮಾತನಾಡದಂತೆ ಹೇಳಿದ್ದಕ್ಕೆ ಪತ್ರಕರ್ತನ ಮೇಲೆ ರಾಡ್‌ನಿಂದ ಹಲ್ಲೆ

ಆ್ಯಪ್ ಆಧಾರಿತ ಟ್ಯಾಕ್ಸಿ ಬುಕಿಂಗ್‌ ಮಾಡುವ ಪ್ರಯಾಣಿಕರ ಸುರಕ್ಷತೆ ಮತ್ತು ಚಾಲಕರ ನಡವಳಿಕೆಯ ಕುರಿತ ಕಳವಳವಳಕಾರಿ ಘಟನೆಯೊಂದು ಹರಿಯಾಣದ ಫರಿದಾಬಾದ್‌ನಲ್ಲಿ ಬೆಳಕಿಗೆ ಬಂದಿದೆ. ರ್ಯಾಪಿಡೋ ಟ್ಯಾಕ್ಸಿ ಚಾಲಕನೊಬ್ಬ ಪ್ರಯಾಣಿಕನ ಮೇಲೆ ಕಬ್ಬಿಣದ ರಾಡ್‌ನಿಂದ...