Homeಕರ್ನಾಟಕಸರ್ಕಾರಿ ಸಿಮೆಂಟ್ ಬಳಸಿದ ಆರೋಪಕ್ಕೆ ಕಾರ್ಕಳ ಶಾಸಕ ಸುನೀಲ್ ಕುಮಾರ್ ಸ್ಪಷ್ಟನೆ

ಸರ್ಕಾರಿ ಸಿಮೆಂಟ್ ಬಳಸಿದ ಆರೋಪಕ್ಕೆ ಕಾರ್ಕಳ ಶಾಸಕ ಸುನೀಲ್ ಕುಮಾರ್ ಸ್ಪಷ್ಟನೆ

ನಮ್ಮ ಮನೆಯ ಶಿಲ್ಪ ವಿನ್ಯಾಸ ಜವಾಬ್ದಾರಿಯನ್ನು ಪ್ರಮೋದ್ ಕುಮಾರ್ ವಹಿಸಿಕೊಂಡಿದ್ದಾರೆ. ಹಾಗೆ ಕಟ್ಟಡ ನಿರ್ಮಾಣದ ಸಂಪೂರ್ಣ ಜವಾಬ್ದಾರಿಯನ್ನು ನಂದಿಕೂರಿನ ಸೃಷ್ಟಿ ವೆಂಚರ್ಸ್‌ ಇಂಡಸ್ಟ್ರಿಯವರಿಗೆ ಕೊಟ್ಟಿದ್ದೇನೆ.

- Advertisement -
- Advertisement -

ಕಾರ್ಕಳದ ತಾಲ್ಲೂಕು ಕಛೇರಿ ರಸ್ತೆಯಲ್ಲಿ ಶಾಸಕ ಸುನೀಲ್ ಕುಮಾರ್‌ರವರು ಕಟ್ಟಿಸುತ್ತಿರುವ ಬಂಗಲೆ ಮತ್ತು ಅದಕ್ಕೆ ಬಳಸಿರುವ ಸಿಮೆಂಟ್ ವಿಚಾರಕ್ಕೆ ಎದ್ದಿರುವ ವಿವಾದದ ಕುರಿತು ಸ್ವತಃ ಶಾಸಕರೆ ಸ್ಪಷ್ಟನೆ ನೀಡಿದ್ದಾರೆ.

ಈ ಕುರಿತು ವಿಡಿಯೋ ಬಿಡುಗಡೆ ಮಾಡಿರುವ ಅವರು, ಕಾರ್ಕಳದಲ್ಲಿ ನನ್ನ ಕುಟುಂಬ ಕಟ್ಟಡ ನಿರ್ಮಾಣ ಮಾಡುತ್ತಿರುವುದರ ಕುರಿತು ಎದ್ದಿರುವ ಆರೋಪಗಳು ನಿರಾಧಾರವಾಗಿವೆ ಎಂದಿದ್ದಾರೆ.

ನಮ್ಮ ಮನೆಯ ಶಿಲ್ಪ ವಿನ್ಯಾಸ ಜವಾಬ್ದಾರಿಯನ್ನು ಪ್ರಮೋದ್ ಕುಮಾರ್ ವಹಿಸಿಕೊಂಡಿದ್ದಾರೆ. ಹಾಗೆ ಕಟ್ಟಡ ನಿರ್ಮಾಣದ ಸಂಪೂರ್ಣ ಜವಾಬ್ದಾರಿಯನ್ನು ನಂದಿಕೂರಿನ ಸೃಷ್ಟಿ ವೆಂಚರ್ಸ್‌ ಇಂಡಸ್ಟ್ರಿಯವರಿಗೆ ಕೊಟ್ಟಿದ್ದೇನೆ. ಖರೀದಿ, ಸಾಗಾಣಿಕೆ ಮತ್ತು ಮಾನವ ಸಂಪನ್ಮೂಲಗಳ ಬಳಕೆ ಎಲ್ಲವೂ ಅವರ ಜವಾಬ್ದಾರಿ. ನನ್ನ ಜವಾಬ್ದಾರಿ ಯಾವುದು ಇಲ್ಲ ಎಂದಿದ್ದಾರೆ.

ಸರ್ಕಾರಿ ಸಿಮೆಂಟ್ ಬಳಸಿದ್ದಾರೆ ಎಂದು ನನ್ನ ಮೇಲೆ ಆರೋಪಿಸಲಾಗಿದೆ. ಸಿಮೆಂಟ್ ಖರೀದಿಯಲ್ಲಿ ಟ್ರೇಡ್ ಸಿಮೆಂಟ್ ಮತ್ತು ನಾನ್ ಟ್ರೇಡ್ ಸಿಮೆಂಟ್ ಎಂಬ ಎರಡು ವಿಧಗಳಿವೆ. ಉತ್ಪಾದಕರಿಂದ ಡೀಲರ್‌ಗೆ ಬಂದು ಅಲ್ಲಿಂದ ಗ್ರಾಹಕರಿಗೆ ಮಾರುವುದು ಟ್ರೇಡ್ ಸಿಮೆಂಟ್. ಇನ್ನು ಉತ್ಪಾಕದರಿಂದ ನೇರ ಗ್ರಾಹಕರು ತೆಗೆದುಕೊಳ್ಳುವುದು ನಾನ್ ಟ್ರೇಡ್ ಸಿಮೆಂಟ್. ಹಾಗಾಗಿ ನಮ್ಮ ಮನೆ ನಿರ್ಮಾಣಕ್ಕೆ ಯಾವುದು ತೆಗೆದುಕೊಂಡಿದ್ದಾರೆ ಎಂಬುದು ನನ್ನ ಗುತ್ತಿಗೆದಾರರಿಗೆ ಬಿಟ್ಟ ವಿಚಾರ. ಇದ್ಯಾವುದಕ್ಕೂ ನಾನು ಜವಾಬ್ದಾರನಲ್ಲ ಎಂದಿದ್ದಾರೆ.

ನಮ್ಮ ಮನೆ ಕಟ್ಟಿಸುವ ಜವಾಬ್ದಾರಿ ಗುತ್ತಿಗೆದಾರರಿಗೆ ನೀಡಿದ್ದೇನೆ: ಸರ್ಕಾರಿ ಸಿಮೆಂಟ್ ಬಳಸಿದ ಆರೋಪಕ್ಕೆ ಕಾರ್ಕಳ ಶಾಸಕ ಸುನೀಲ್ ಕುಮಾರ್ ಸ್ಪಷ್ಟನೆ

Posted by Naanu Gauri on Friday, July 17, 2020

ಜರ್ಮನ್ ತಂತ್ರಜ್ಞಾನ ಮತ್ತು ಇಕೋವಲ್‌ಪ್ಯಾನಲ್‌ ತಂತ್ರಜ್ಞಾನ ಬಳಸಿ ಕಟ್ಟಡ ಕಟ್ಟಲಾಗುತ್ತಿದೆ. ಡಿಸೆಂಬರ್ ಅಂತ್ಯದೊಳಗೆ ಮನೆ ಕಟ್ಟಿ ಮುಗಿಸಿವಂತೆ ಗುತ್ತಿಗೆದಾರರ ಜೊತೆಗೆ ಒಪ್ಪಂದ ಮಾಡಿಕೊಂಡಿದ್ದೇನೆ ಎಂದು ಸಹ ಸುನೀಲ್ ಕುಮಾರ್ ತಿಳಿಸಿದ್ದಾರೆ.

ವಿರೋಧಿಗಳು ಮತ್ತು ಕಾಂಗ್ರೆಸ್‌ ನನ್ನ ಮೇಲೆ ಆರೋಪ ಮಾಡುತ್ತಿದ್ದಾರೆ. ಅವರ ಎಲ್ಲಾ ತನಿಖೆಗಳಿಗೆ ನಾನು ಸಿದ್ಧನಿದ್ದೇನೆ. ಈ ಹಿಂದೆಯೂ ಹಲವು ವಿಚಾರದಲ್ಲಿ ನನ್ನ ಮೇಲೆ ಆರೋಪಗಳನ್ನು ಹೊರಿಸಲಾಗಿತ್ತು. ಆದರೆ ಯಾವುದನ್ನು ಸ್ಪಷ್ಟಪಡಿಸಲು ಸಾಧ್ಯವಾಗಿಲ್ಲ. ಈಗ ನನ್ನ ಮೇಲೆ ನಿರಾಧಾರ ಆರೋಪ ಮಾಡಿರುವುದಕ್ಕೆ ಒಂದು ವಾರದಲ್ಲಿ ದೂರು ದಾಖಲಿಸುತ್ತೇನೆ ಎಂದು ಸುನೀಲ್ ಕುಮಾರ್ ಹೇಳಿದ್ದಾರೆ.


ಇದನ್ನೂ ಓದಿ: ಕಾರ್ಕಳ ಶಾಸಕ ಸುನಿಲ್ ಕುಮಾರ್ ಬಂಗಲೆಗೆ ಸಿಮೆಂಟ್ ಎಲ್ಲಿಯದು?: ಈ ವಿಡಿಯೋವನ್ನು ಸುಳ್ಳೆನ್ನಲು ಸಾಧ್ಯವೇ?

 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಶ್ರೀಲಂಕಾ | 2019ರ ಈಸ್ಟರ್ ಬಾಂಬ್ ಸ್ಫೋಟ ಪ್ರಕರಣ: ಇಬ್ಬರು ಮಾಜಿ ಅಧಿಕಾರಿಗಳಿಗೆ ಮರಣದಂಡನೆ ವಿಧಿಸಿದ ಕೋರ್ಟ್

ಬರೋಬ್ಬರಿ 260ಕ್ಕೂ ಹೆಚ್ಚು ಜನರ ಸಾವಿಗೆ ಕಾರಣವಾಗಿದ್ದ 2019ರ ಶ್ರೀಲಂಕಾದ 'ಈಸ್ಟರ್ ಸಂಡೇ' ಬಾಂಬ್ ಸ್ಫೋಟ ಪ್ರಕರಣದಲ್ಲಿ ಕ್ರಿಮಿನಲ್ ನಿರ್ಲಕ್ಷ್ಯ ಆರೋಪ ಸಾಬೀತಾದ ಹಿನ್ನೆಲೆ, ಪೊಲೀಸ್ ಮಾಜಿ ಮುಖ್ಯಸ್ಥ ಮತ್ತು ರಕ್ಷಣಾ ಸಚಿವಾಲಯದ...

ಅಮೆರಿಕ ಓದಿಗೆ ಎಲ್ಲಿಂದ ಬಂತು ಹಣ? CJP ಸ್ಥಾಪಕ ಅಭಿಜೀತ್ ದೀಪ್ಕೆ ತಂದೆಯ ಆಸ್ತಿ ತನಿಖೆಗೆ RTI ಕಾರ್ಯಕರ್ತ ಆಗ್ರಹ

ಕಾಕ್ರೋಚ್ ಜನತಾ ಪಾರ್ಟಿ (CJP) ಸ್ಥಾಪಕ ಅಭಿಜೀತ್ ದೀಪ್ಕೆ ಅವರ ತಂದೆ, ಮಹಾರಾಷ್ಟ್ರ ಸರ್ಕಾರದ ನಿವೃತ್ತ ಉದ್ಯೋಗಿ ಭಗವಾನ್‌ರಾವ್ ದೀಪ್ಕೆ ಅವರ ಆದಾಯ ಮತ್ತು ಅಕ್ರಮ ಆಸ್ತಿ ಗಳಿಕೆ ಕುರಿತು ಸಮಗ್ರ ತನಿಖೆ...

ಕಾವೇರಿ ವಿಚಾರದಲ್ಲಿ ರಾಜಕೀಯ ಪಕ್ಕಕ್ಕಿಟ್ಟು ರಾಜ್ಯದ ಹಿತ ಕಾಯೋಣ: ಸರ್ವಪಕ್ಷ ಸಭೆಯಲ್ಲಿ ಸಿಎಂ ಡಿ.ಕೆ. ಶಿವಕುಮಾರ್ ಕರೆ

ಕಾವೇರಿ ನದಿ ನೀರು ಹಂಚಿಕೆ ವಿಚಾರವಾಗಿ ಪರಿಸ್ಥಿತಿ ಸುಧಾರಿಸುವ ಲಕ್ಷಣಗಳು ಕಂಡುಬರುತ್ತಿದ್ದು, ನದಿ ನೀರಿನ ಹಂಚಿಕೆಯಲ್ಲಿ ಸೌಹಾರ್ದಯುತವಾಗಿ ಸಮಸ್ಯೆ ನಿವಾರಿಸುವುದೇ ಸರ್ಕಾರದ ಮೊದಲ ಆದ್ಯತೆಯಾಗಿದೆ ಎಂದು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ತಿಳಿಸಿದ್ದಾರೆ. ಕಾವೇರಿ...

ಉತ್ತರ ಪ್ರದೇಶ : 33 ವರ್ಷಗಳ ಬಳಿಕ ದೇಶದ್ರೋಹ ಪ್ರಕರಣದಿಂದ ಮುಸ್ಲಿಂ ವ್ಯಕ್ತಿ ಖುಲಾಸೆ

ಪ್ರಾಸಿಕ್ಯೂಷನ್ ಆರೋಪಗಳನ್ನು ಸಾಂದರ್ಭಿಕ ಪುರಾವೆಗಳೊಂದಿಗೆ ಸಾಬೀತುಪಡಿಸಲು ವಿಫಲವಾಗಿದೆ ಮತ್ತು ಆರೋಪಿಯನ್ನು ಕೃತ್ಯಕ್ಕೆ ಲಿಂಕ್ ಮಾಡುವ ಪ್ರಮುಖ ಪುರಾವೆಗಳು ಕಾಣೆಯಾಗಿವೆ ಎಂದು ಅಭಿಪ್ರಾಯಪಟ್ಟ ಲಕ್ನೋದ ವಿಶೇಷ ರಾಷ್ಟ್ರೀಯ ತನಿಖಾ ದಳ (ಎನ್ಐಎ) ನ್ಯಾಯಾಲಯ, ದೇಶದ್ರೋಹ...

‘ಊರು ಕೊಳ್ಳೆ ಹೊಡೆದ ಮೇಲೆ ದಿಡ್ಡಿ ಬಾಗಿಲು ಹಾಕಿದರು’ ಎಂಬಂತೆ NTA ಯಿಂದ ₹7.5 ಕೋಟಿಯ ಬೃಹತ್ ಸೆಕ್ಯೂರಿಟಿ ಟೆಂಡರ್

ನೀಟ್ ಪ್ರಶ್ನೆಪತ್ರಿಕೆ ಸೋರಿಕೆಯಾಗಿ, ಅಮಾಯಕ ವಿದ್ಯಾರ್ಥಿಗಳ ಜೀವ-ಭವಿಷ್ಯ ಹಾಳಾದ ಮೇಲೆ, ಊರು ಕೊಳ್ಳೆ ಹೊಡೆದ ಮೇಲೆ ದಿಡ್ಡಿ ಬಾಗಿಲು ಹಾಕಿದರು ಎಂಬಂತೆ ಈಗ ಎನ್‌ಟಿಎ (NTA) ₹7.5 ಕೋಟಿ ವೆಚ್ಚದ ಭದ್ರತಾ ಟೆಂಡರ್...

SIR: ನಮೂನೆಯೂ ಇಲ್ಲ, ನೋಟಿಸ್‌ ಇಲ್ಲ ಸ್ವಂತ ಮನೆಯಲ್ಲಿದ್ದವರ ಹೆಸರನ್ನೇ ಅಳಿಸಿಹಾಕಿದ ಚುನಾವಣಾ ಆಯೋಗ

ರಾಜ್ಯದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ಒಂದಾದ ಮೇಲೊಂದರಂತೆ ಆತಂಕಕಾರಿ ಪ್ರಕರಣಗಳು ಬೆಳಕಿಗೆ ಬರುತ್ತಿವೆ. ಮನೆಮನೆಗೆ ತೆರಳಿ ಎನ್ಯುಮರೇಷನ್ ನಮೂನೆ ವಿತರಿಸುವ ಮೊದಲ ಹಂತದ ಪ್ರಕ್ರಿಯೆ...

ಲೈಂಗಿಕ ಕಿರುಕುಳ ಪ್ರಕರಣದಲ್ಲಿ ಅಮಾನತುಗೊಂಡಿದ್ದ ಯುಪಿ ಪೊಲೀಸ್ ಕಾನ್‌ಸ್ಟೇಬಲ್; ಮರುನೇಮಕದ ಬೆನ್ನಲ್ಲೇ ಬಾಲಕಿಯ ಅತ್ಯಾಚಾರ, ಕೊಲೆ!

ಹತ್ತು ವರ್ಷದ ಬಾಲಕಿಯ ಮೇಲೆ ಅತ್ಯಾಚಾರಕ್ಕೆ ಯತ್ನಿಸಿ, ಆಕೆಯ ಸಾವಿಗೆ ಕಾರಣನಾದ ಆರೋಪದ ಮೇಲೆ ಬಂಧಿತನಾದ ಉತ್ತರ ಪ್ರದೇಶದ ಪೊಲೀಸ್ ಕಾನ್‌ಸ್ಟೇಬಲ್ ಅಭಿಷೇಕ್ ಯಾದವ್‌ನನ್ನು ವೈದ್ಯಕೀಯ ತಪಾಸಣೆಗಾಗಿ ಗೋರಖ್‌ಪುರದ ಜಿಲ್ಲಾಸ್ಪತ್ರೆಗೆ ಕರೆತಂದಾಗ, ಅಲ್ಲಿನ...

BJP ವಿರುದ್ಧದ ಆಕ್ರೋಶವೇ Gen-Z ಹೋರಾಟದ ಮೂಲ: ವಿಪಕ್ಷಗಳಿಗೆ ಇದು ದೊಡ್ಡ ಪಾಠ

ಜಂತರ್ ಮಂತರ್‌ನಲ್ಲಿ ನಡೆದ ವಿದ್ಯಾರ್ಥಿಗಳ ಹೋರಾಟವನ್ನು ನಿಮ್ಮ ರಾಜಕೀಯ ದೃಷ್ಟಿಕೋನಕ್ಕೆ ತಕ್ಕಂತೆ ನೀವು ಕ್ರಾಂತಿ ಎಂದಾದರೂ ನೋಡಬಹುದು, ಅಥವಾ ಕ್ಷಣಿಕವಾಗಿ ಎದ್ದ ಬಿರುಗಾಳಿ ಎಂದಾದರೂ ಭಾವಿಸಬಹುದು. ಆದರೆ ಇಲ್ಲಿ ನಿಜವಾಗಿಯೂ ಆಗಿದ್ದೇನು ಮತ್ತು...

ಇನ್‌ಸ್ಟಾಗ್ರಾಮ್‌ನಲ್ಲಿ ಕ್ಷಮಿಸಿದರೆ ಸಾಲದು, ವಿದ್ಯಾರ್ಥಿಗಳ ಮೇಲಿನ ಕೇಸ್ ವಾಪಸ್ ಪಡೆಯಿರಿ: ಪ್ರಧಾನಿಗೆ ದೀಪ್ಕೆ ನೇರ ಪ್ರಶ್ನೆ

ಪ್ರಧಾನಿ ನರೇಂದ್ರ ಮೋದಿ ಅವರು ಇನ್‌ಸ್ಟಾಗ್ರಾಮ್ ವಿಡಿಯೋವೊಂದರಲ್ಲಿ ತಮ್ಮ ವಿರುದ್ಧ ನಿಂದನಾತ್ಮಕ ಪದ ಬಳಸಿದ್ದ ‘ಕಾಕ್ರೋಚ್ ಜನತಾ ಪಾರ್ಟಿ’ (CJP) ಪ್ರತಿಭಟನಾ ನಿರತ ವಿದ್ಯಾರ್ಥಿಗಳನ್ನು ಕ್ಷಮಿಸಿದ್ದೇನೆ ಎಂದು ಹೇಳಿರುವುದಕ್ಕೆ ಸಿಜೆಪಿ ಸಂಸ್ಥಾಪಕ ಅಭಿಜೀತ್...

ಪ್ರತಿಭಟನೆ ಭೀತಿ : ಸಿಜೆಐ ಸೂರ್ಯಕಾಂತ್ ಭಾಗವಹಿಸಬೇಕಿದ್ದ ಘಟಿಕೋತ್ಸವ ದಿಢೀರ್ ಮುಂದೂಡಿದ TISS

ಮುಂಬೈನ ಟಾಟಾ ಇನ್‌ಸ್ಟಿಟ್ಯೂಟ್ ಆಫ್ ಸೋಷಿಯಲ್ ಸೈನ್ಸಸ್ (ಟಿಐಎಸ್‌ಎಸ್‌) ಸಂಸ್ಥೆಯು ಆಗಸ್ಟ್ 2ರಂದು ನಡೆಸಲು ನಿಗದಿಪಡಿಸಿದ್ದ ತನ್ನ 86ನೇ ವಾರ್ಷಿಕ ಘಟಿಕೋತ್ಸವವನ್ನು ದಿಢೀರ್ ಮುಂದೂಡಿದೆ. ಕ್ಯಾಂಪಸ್ ಭದ್ರತೆಯ ಬಗೆಗಿನ ಕಳವಳಗಳು ಮತ್ತು ವಿದ್ಯಾರ್ಥಿಗಳ...