Homeಕರ್ನಾಟಕಸರ್ಕಾರಿ ಸಿಮೆಂಟ್ ಬಳಸಿದ ಆರೋಪಕ್ಕೆ ಕಾರ್ಕಳ ಶಾಸಕ ಸುನೀಲ್ ಕುಮಾರ್ ಸ್ಪಷ್ಟನೆ

ಸರ್ಕಾರಿ ಸಿಮೆಂಟ್ ಬಳಸಿದ ಆರೋಪಕ್ಕೆ ಕಾರ್ಕಳ ಶಾಸಕ ಸುನೀಲ್ ಕುಮಾರ್ ಸ್ಪಷ್ಟನೆ

ನಮ್ಮ ಮನೆಯ ಶಿಲ್ಪ ವಿನ್ಯಾಸ ಜವಾಬ್ದಾರಿಯನ್ನು ಪ್ರಮೋದ್ ಕುಮಾರ್ ವಹಿಸಿಕೊಂಡಿದ್ದಾರೆ. ಹಾಗೆ ಕಟ್ಟಡ ನಿರ್ಮಾಣದ ಸಂಪೂರ್ಣ ಜವಾಬ್ದಾರಿಯನ್ನು ನಂದಿಕೂರಿನ ಸೃಷ್ಟಿ ವೆಂಚರ್ಸ್‌ ಇಂಡಸ್ಟ್ರಿಯವರಿಗೆ ಕೊಟ್ಟಿದ್ದೇನೆ.

- Advertisement -
- Advertisement -

ಕಾರ್ಕಳದ ತಾಲ್ಲೂಕು ಕಛೇರಿ ರಸ್ತೆಯಲ್ಲಿ ಶಾಸಕ ಸುನೀಲ್ ಕುಮಾರ್‌ರವರು ಕಟ್ಟಿಸುತ್ತಿರುವ ಬಂಗಲೆ ಮತ್ತು ಅದಕ್ಕೆ ಬಳಸಿರುವ ಸಿಮೆಂಟ್ ವಿಚಾರಕ್ಕೆ ಎದ್ದಿರುವ ವಿವಾದದ ಕುರಿತು ಸ್ವತಃ ಶಾಸಕರೆ ಸ್ಪಷ್ಟನೆ ನೀಡಿದ್ದಾರೆ.

ಈ ಕುರಿತು ವಿಡಿಯೋ ಬಿಡುಗಡೆ ಮಾಡಿರುವ ಅವರು, ಕಾರ್ಕಳದಲ್ಲಿ ನನ್ನ ಕುಟುಂಬ ಕಟ್ಟಡ ನಿರ್ಮಾಣ ಮಾಡುತ್ತಿರುವುದರ ಕುರಿತು ಎದ್ದಿರುವ ಆರೋಪಗಳು ನಿರಾಧಾರವಾಗಿವೆ ಎಂದಿದ್ದಾರೆ.

ನಮ್ಮ ಮನೆಯ ಶಿಲ್ಪ ವಿನ್ಯಾಸ ಜವಾಬ್ದಾರಿಯನ್ನು ಪ್ರಮೋದ್ ಕುಮಾರ್ ವಹಿಸಿಕೊಂಡಿದ್ದಾರೆ. ಹಾಗೆ ಕಟ್ಟಡ ನಿರ್ಮಾಣದ ಸಂಪೂರ್ಣ ಜವಾಬ್ದಾರಿಯನ್ನು ನಂದಿಕೂರಿನ ಸೃಷ್ಟಿ ವೆಂಚರ್ಸ್‌ ಇಂಡಸ್ಟ್ರಿಯವರಿಗೆ ಕೊಟ್ಟಿದ್ದೇನೆ. ಖರೀದಿ, ಸಾಗಾಣಿಕೆ ಮತ್ತು ಮಾನವ ಸಂಪನ್ಮೂಲಗಳ ಬಳಕೆ ಎಲ್ಲವೂ ಅವರ ಜವಾಬ್ದಾರಿ. ನನ್ನ ಜವಾಬ್ದಾರಿ ಯಾವುದು ಇಲ್ಲ ಎಂದಿದ್ದಾರೆ.

ಸರ್ಕಾರಿ ಸಿಮೆಂಟ್ ಬಳಸಿದ್ದಾರೆ ಎಂದು ನನ್ನ ಮೇಲೆ ಆರೋಪಿಸಲಾಗಿದೆ. ಸಿಮೆಂಟ್ ಖರೀದಿಯಲ್ಲಿ ಟ್ರೇಡ್ ಸಿಮೆಂಟ್ ಮತ್ತು ನಾನ್ ಟ್ರೇಡ್ ಸಿಮೆಂಟ್ ಎಂಬ ಎರಡು ವಿಧಗಳಿವೆ. ಉತ್ಪಾದಕರಿಂದ ಡೀಲರ್‌ಗೆ ಬಂದು ಅಲ್ಲಿಂದ ಗ್ರಾಹಕರಿಗೆ ಮಾರುವುದು ಟ್ರೇಡ್ ಸಿಮೆಂಟ್. ಇನ್ನು ಉತ್ಪಾಕದರಿಂದ ನೇರ ಗ್ರಾಹಕರು ತೆಗೆದುಕೊಳ್ಳುವುದು ನಾನ್ ಟ್ರೇಡ್ ಸಿಮೆಂಟ್. ಹಾಗಾಗಿ ನಮ್ಮ ಮನೆ ನಿರ್ಮಾಣಕ್ಕೆ ಯಾವುದು ತೆಗೆದುಕೊಂಡಿದ್ದಾರೆ ಎಂಬುದು ನನ್ನ ಗುತ್ತಿಗೆದಾರರಿಗೆ ಬಿಟ್ಟ ವಿಚಾರ. ಇದ್ಯಾವುದಕ್ಕೂ ನಾನು ಜವಾಬ್ದಾರನಲ್ಲ ಎಂದಿದ್ದಾರೆ.

ನಮ್ಮ ಮನೆ ಕಟ್ಟಿಸುವ ಜವಾಬ್ದಾರಿ ಗುತ್ತಿಗೆದಾರರಿಗೆ ನೀಡಿದ್ದೇನೆ: ಸರ್ಕಾರಿ ಸಿಮೆಂಟ್ ಬಳಸಿದ ಆರೋಪಕ್ಕೆ ಕಾರ್ಕಳ ಶಾಸಕ ಸುನೀಲ್ ಕುಮಾರ್ ಸ್ಪಷ್ಟನೆ

Posted by Naanu Gauri on Friday, July 17, 2020

ಜರ್ಮನ್ ತಂತ್ರಜ್ಞಾನ ಮತ್ತು ಇಕೋವಲ್‌ಪ್ಯಾನಲ್‌ ತಂತ್ರಜ್ಞಾನ ಬಳಸಿ ಕಟ್ಟಡ ಕಟ್ಟಲಾಗುತ್ತಿದೆ. ಡಿಸೆಂಬರ್ ಅಂತ್ಯದೊಳಗೆ ಮನೆ ಕಟ್ಟಿ ಮುಗಿಸಿವಂತೆ ಗುತ್ತಿಗೆದಾರರ ಜೊತೆಗೆ ಒಪ್ಪಂದ ಮಾಡಿಕೊಂಡಿದ್ದೇನೆ ಎಂದು ಸಹ ಸುನೀಲ್ ಕುಮಾರ್ ತಿಳಿಸಿದ್ದಾರೆ.

ವಿರೋಧಿಗಳು ಮತ್ತು ಕಾಂಗ್ರೆಸ್‌ ನನ್ನ ಮೇಲೆ ಆರೋಪ ಮಾಡುತ್ತಿದ್ದಾರೆ. ಅವರ ಎಲ್ಲಾ ತನಿಖೆಗಳಿಗೆ ನಾನು ಸಿದ್ಧನಿದ್ದೇನೆ. ಈ ಹಿಂದೆಯೂ ಹಲವು ವಿಚಾರದಲ್ಲಿ ನನ್ನ ಮೇಲೆ ಆರೋಪಗಳನ್ನು ಹೊರಿಸಲಾಗಿತ್ತು. ಆದರೆ ಯಾವುದನ್ನು ಸ್ಪಷ್ಟಪಡಿಸಲು ಸಾಧ್ಯವಾಗಿಲ್ಲ. ಈಗ ನನ್ನ ಮೇಲೆ ನಿರಾಧಾರ ಆರೋಪ ಮಾಡಿರುವುದಕ್ಕೆ ಒಂದು ವಾರದಲ್ಲಿ ದೂರು ದಾಖಲಿಸುತ್ತೇನೆ ಎಂದು ಸುನೀಲ್ ಕುಮಾರ್ ಹೇಳಿದ್ದಾರೆ.


ಇದನ್ನೂ ಓದಿ: ಕಾರ್ಕಳ ಶಾಸಕ ಸುನಿಲ್ ಕುಮಾರ್ ಬಂಗಲೆಗೆ ಸಿಮೆಂಟ್ ಎಲ್ಲಿಯದು?: ಈ ವಿಡಿಯೋವನ್ನು ಸುಳ್ಳೆನ್ನಲು ಸಾಧ್ಯವೇ?

 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಸ್ವಇಚ್ಛೆಯಿಂದ ಇಸ್ಲಾಂ ಸ್ವೀಕಾರ : ಆಯುಷ್ ಮಲಿಕ್‌ರನ್ನು ಗೃಹಬಂಧನದಿಂದ ಬಿಡುಗಡೆಗೊಳಿಸಿದ ಅಲಹಾಬಾದ್ ಹೈಕೋರ್ಟ್

ತಾನು ಸ್ವಇಚ್ಛೆಯಿಂದ ಇಸ್ಲಾಂ ಧರ್ಮವನ್ನು ಸ್ವೀಕರಿಸಿರುವುದಾಗಿ ಮತ್ತು ಆ ನಂತರ ತನ್ನ ತಂದೆಯೇ ತನಗೆ ಬೆದರಿಕೆ ಹಾಕಿ, ಕಾನೂನುಬಾಹಿರವಾಗಿ ಗೃಹಬಂಧನದಲ್ಲಿ ಇರಿಸಿದ್ದರು ಎಂದು ಆರೋಪಿಸಿದ್ದ ಆಯುಷ್ ಮಲಿಕ್ ಎಂಬ 31 ವರ್ಷದ ಯುವಕನನ್ನು...

ಬಿಜ್ನೋರ್‌ನಲ್ಲಿ ಮುಸ್ಲಿಂ ಶಿಕ್ಷಕನ ಗುಂಡಿಕ್ಕಿ ಹತ್ಯೆ: ‘ಲವ್ ಜಿಹಾದ್’ ಆರೋಪ; ವೈಯಕ್ತಿಕ ದ್ವೇಷದ ಬಗ್ಗೆಯೂ ಪೊಲೀಸರಿಂದ ತನಿಖೆ 

ಬಿಜ್ನೋರ್: ಉತ್ತರ ಪ್ರದೇಶದ ಬಿಜ್ನೋರ್ ಜಿಲ್ಲೆಯಲ್ಲಿ 43 ವರ್ಷದ ಮುಸ್ಲಿಂ ಸರ್ಕಾರಿ ಪ್ರಾಥಮಿಕ ಶಾಲಾ ಶಿಕ್ಷಕನೊಬ್ಬರನ್ನು ರೈತನೊಬ್ಬ ಗುಂಡಿಕ್ಕಿ ಹತ್ಯೆ ಮಾಡಿರುವ ಘಟನೆ ನಡೆದಿದೆ. ಶಿಕ್ಷಕ ನೌಶಾದ್ ಅಹ್ಮದ್ ಅವರು ‘ಲವ್ ಜಿಹಾದ್’...

ತುಳು ನುಡಿಗೆ ಹೆಚ್ಚುವರಿ ಅಧಿಕೃತ ಭಾಷೆಯ ಮಾನ್ಯತೆ ನೀಡಿ: ಕರವೇ ರಾಜ್ಯಾಧ್ಯಕ್ಷ ಟಿ.ಎ.ನಾರಾಯಣಗೌಡ

"ಮಂಗಳೂರಿನಲ್ಲಿ ಶುಕ್ರವಾರ ಕರ್ನಾಟಕ ಸರ್ಕಾರದ ಸಚಿವ ಸಂಪುಟ ಸಭೆ ನಡೆಯಲಿದೆ; ಇದೊಂದು ಐತಿಹಾಸಿಕ ಸಂದರ್ಭ. ರಾಜ್ಯ ಸರ್ಕಾರ ತುಳು ನುಡಿಯನ್ನು ತುಳು ಮಾತನಾಡುವ ಪ್ರದೇಶಗಳಲ್ಲಿ ಹೆಚ್ಚುವರಿ ಅಧಿಕೃತ ಭಾಷೆಯಾಗಿ ಮಾನ್ಯತೆ ನೀಡುವ ನಿರ್ಧಾರವನ್ನು...

ಕರಾವಳಿ ಸಮಸ್ಯೆಗೆ ಶಾಶ್ವತ ಪರಿಹಾರದ ಭರವಸೆ: ಸಚಿವ ಕೆ.ಎಸ್.ಬಸವಂತಪ್ಪ

ರಾಜ್ಯದ ಕರಾವಳಿ ಭಾಗದಲ್ಲಿ ಮೀನುಗಾರಿಕೆ ಕ್ಷೇತ್ರದ ಅಭಿವೃದ್ಧಿ ಕುಂಠಿತವಾಗುತ್ತಿರುವ ಕುರಿತು ಕಳವಳ ವ್ಯಕ್ತವಾಗುತ್ತಿರುವ ಬೆನ್ನಲ್ಲೇ, ಸ್ಥಳೀಯ ಸಮಸ್ಯೆಗಳಿಗೆ ಸ್ಪಂದಿಸಲು ಸರ್ಕಾರ ಮುಂದಾಗಿದೆ. ಕರಾವಳಿ ವ್ಯಾಪ್ತಿಯ ಬಂದರುಗಳು, ಮೀನು ಮಾರುಕಟ್ಟೆಗಳು, ಬ್ರೇಕ್‌ವಾಟರ್‌ಗಳು ಹಾಗೂ ಜೆಟ್ಟಿಗಳಿಗೆ...

SIR ಪ್ರಕ್ರಿಯೆಯಲ್ಲಿ ಯಾರ ಹೆಸರು ಬಿಟ್ಟುಹೋಗಬಾರದು: PRC ನೀಡಲು ವಿಳಂಬ ಬೇಡ ಡಾ. ಜಿ. ಪರಮೇಶ್ವರ್

ಉದ್ಯೋಗ ಅಥವಾ ವಿವಿಧ ಕಾರಣಗಳಿಂದಾಗಿ ತಮ್ಮ ಸ್ವಂತ ಊರು ತೊರೆದು ಬೇರೆಡೆಗೆ ಸ್ಥಳಾಂತರಗೊಂಡು ನೆಲೆಸಿರುವ ರಾಜ್ಯದ ಯಾವುದೇ ನಾಗರಿಕರು ಯಾವುದೇ ಕಾರಣಕ್ಕೂ ಮತದಾರರ ಪಟ್ಟಿಯಿಂದ ಹೊರಗುಳಿಯಬಾರದು ಎಂದು ಉಪಮುಖ್ಯಮಂತ್ರಿ ಹಾಗೂ ಕಂದಾಯ ಸಚಿವರಾದ...

ಬಿಹಾರ ಪ್ರವಾಹದ ನಡುವೆ ಮೋದಿ ಹುಟ್ಟುಹಬ್ಬದ ಪ್ರಯುಕ್ತ ದೀಪೋತ್ಸವ; ‘ಆಶೀರ್ವಾದ್ ಕಾ ದಿಯಾ’ ಕಾರ್ಯಕ್ರಮಕ್ಕೆ ತೇಜಸ್ವಿ ಯಾದವ್ ಆಕ್ಷೇಪ

ಬಿಹಾರದಲ್ಲಿ ಪ್ರವಾಹ ಪರಿಸ್ಥಿತಿ ಮುಂದುವರಿದಿರುವ ನಡುವೆಯೇ ಪ್ರಧಾನಿ ನರೇಂದ್ರ ಮೋದಿ ಅವರ ಹುಟ್ಟುಹಬ್ಬದ ಅಂಗವಾಗಿ ಸೆಪ್ಟೆಂಬರ್ 17ರಂದು ‘ಆಶೀರ್ವಾದ್ ಕಾ ದಿಯಾ’ ಕಾರ್ಯಕ್ರಮ ಆಯೋಜಿಸಿರುವುದು ರಾಜಕೀಯ ಚರ್ಚೆಗೆ ಕಾರಣವಾಗಿದೆ. ರಾಜ್ಯದ 15 ಜಿಲ್ಲೆಗಳಲ್ಲಿ...

ಉಮರ್ ಖಾಲಿದ್ ಅವರನ್ನು ‘ದೇಶಪ್ರೇಮಿ’ ಎಂದ ಬಿ.ಕೆ. ಹರಿಪ್ರಸಾದ್; ವಿಧಾನಸೌಧ ಪೊಲೀಸ್ ಠಾಣೆಯಲ್ಲಿ ದೂರು ದಾಖಲು

ಬೆಂಗಳೂರಿನ ರಾಷ್ಟ್ರೀಯ ಕಾನೂನು ಶಾಲೆ (ಎನ್‌ಎಲ್‌ಎಸ್‌ಐಯು) ಯೂನಿವರ್ಸಿಟಿಯಲ್ಲಿ ಜೈಲಿನಲ್ಲಿರುವ ಹೋರಾಟಗಾರ ಉಮರ್ ಖಾಲಿದ್ ಕುರಿತಾದ ಸಾಕ್ಷ್ಯಚಿತ್ರಕ್ಕೆ ಸಂಬಂಧಿಸಿದಂತೆ ನಡೆಯುತ್ತಿರುವ ವಿವಾದದ ನಡುವೆ, ಅವರನ್ನು "ರಾಷ್ಟ್ರಪ್ರೇಮಿ" ಎಂದು ಕರೆದಿರುವ ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ...

ಇಂದಿರಾ ಗಾಂಧಿಯಂತೆ ನೇರವಾಗಿ ನಿಲ್ಲಿ, ಟ್ರಂಪ್ ಮುಂದೆ ಮಂಡಿಯೂರುತ್ತಿದ್ದೀರಿ: ‘UPI ಟ್ಯಾಕ್ಸ್’ ಬಗ್ಗೆ ಮೋದಿ ವಿರುದ್ಧ ರಾಹುಲ್ ವಾಗ್ದಾಳಿ!

ಯುಪಿಐ (UPI) ವಹಿವಾಟುಗಳಿಗೆ ಸಂಬಂಧಿಸಿದಂತೆ ಜಾರಿಯಾಗುತ್ತಿರುವ ಹೊಸ 'ಮರ್ಚೆಂಟ್ ಡಿಸ್ಕೌಂಟ್ ರೇಟ್' (MDR) ವ್ಯವಸ್ಥೆ ಇದೀಗ ತೀವ್ರ ರಾಜಕೀಯ ಸಂಘರ್ಷಕ್ಕೆ ಕಾರಣವಾಗಿದೆ. ಇದನ್ನು "ಬ್ಯಾಂಕ್‌ಗಳು ವಿಧಿಸುವ ಸೇವಾ ಶುಲ್ಕ" ಎಂದು ಸರ್ಕಾರ ಸಮರ್ಥಿಸಿಕೊಳ್ಳುತ್ತಿದ್ದರೂ,...

ಲಿಯೋನೆಲ್ ಮೆಸ್ಸಿ ಕೇರಳ ಭೇಟಿ ಪ್ರಕರಣ: ಕೊಚ್ಚಿಯ ‘ರಿಪೋರ್ಟರ್ ಟಿವಿ’ ಕಚೇರಿಯಲ್ಲಿ ಪೊಲೀಸರಿಂದ ಶೋಧ

ಮಲಯಾಳಂ ಸುದ್ದಿ ವಾಹಿನಿ 'ರಿಪೋರ್ಟರ್ ಟಿವಿ'ಯ ಕೊಚ್ಚಿ ಪ್ರಧಾನ ಕಚೇರಿಯಲ್ಲಿ ಬುಧವಾರ (ಸೆ.16) ಮುಂಜಾನೆ ಪೊಲೀಸ್ ತಂಡವೊಂದು ಶೋಧ ಕಾರ್ಯ ನಡೆಸಿದ್ದು, ಇದರಿಂದಾಗಿ ತನ್ನ ಸುದ್ದಿ ಪ್ರಸಾರ ಕಾರ್ಯಾಚರಣೆಗೆ ಅಡಚಣೆಯಾಗಿದೆ ಎಂದು ವಾಹಿನಿ...

‘ಏಕರೂಪತೆ ಸಮಾನತೆಯಲ್ಲ’: 2029ಕ್ಕೂ ಮುನ್ನ 21 ರಾಜ್ಯಗಳಲ್ಲಿ ಯುಸಿಸಿ ಜಾರಿ ಘೋಷಿಸಿದ ಅಮಿತ್ ಶಾಗೆ ಪ್ರತಿಪಕ್ಷಗಳ ತೀವ್ರ ತಿರುಗೇಟು

ನವದೆಹಲಿ/ಮುಂಬೈ: 2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ನೇತೃತ್ವದ ಎನ್‌ಡಿಎ ಸರ್ಕಾರಗಳಿರುವ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ ಸಂಹಿತೆ (ಯುಸಿಸಿ) ಜಾರಿಗೆ ತರಲಾಗುವುದು ಎಂಬ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ...