Homeಕರ್ನಾಟಕಸರ್ಕಾರಿ ಸಿಮೆಂಟ್ ಬಳಸಿದ ಆರೋಪಕ್ಕೆ ಕಾರ್ಕಳ ಶಾಸಕ ಸುನೀಲ್ ಕುಮಾರ್ ಸ್ಪಷ್ಟನೆ

ಸರ್ಕಾರಿ ಸಿಮೆಂಟ್ ಬಳಸಿದ ಆರೋಪಕ್ಕೆ ಕಾರ್ಕಳ ಶಾಸಕ ಸುನೀಲ್ ಕುಮಾರ್ ಸ್ಪಷ್ಟನೆ

ನಮ್ಮ ಮನೆಯ ಶಿಲ್ಪ ವಿನ್ಯಾಸ ಜವಾಬ್ದಾರಿಯನ್ನು ಪ್ರಮೋದ್ ಕುಮಾರ್ ವಹಿಸಿಕೊಂಡಿದ್ದಾರೆ. ಹಾಗೆ ಕಟ್ಟಡ ನಿರ್ಮಾಣದ ಸಂಪೂರ್ಣ ಜವಾಬ್ದಾರಿಯನ್ನು ನಂದಿಕೂರಿನ ಸೃಷ್ಟಿ ವೆಂಚರ್ಸ್‌ ಇಂಡಸ್ಟ್ರಿಯವರಿಗೆ ಕೊಟ್ಟಿದ್ದೇನೆ.

- Advertisement -
- Advertisement -

ಕಾರ್ಕಳದ ತಾಲ್ಲೂಕು ಕಛೇರಿ ರಸ್ತೆಯಲ್ಲಿ ಶಾಸಕ ಸುನೀಲ್ ಕುಮಾರ್‌ರವರು ಕಟ್ಟಿಸುತ್ತಿರುವ ಬಂಗಲೆ ಮತ್ತು ಅದಕ್ಕೆ ಬಳಸಿರುವ ಸಿಮೆಂಟ್ ವಿಚಾರಕ್ಕೆ ಎದ್ದಿರುವ ವಿವಾದದ ಕುರಿತು ಸ್ವತಃ ಶಾಸಕರೆ ಸ್ಪಷ್ಟನೆ ನೀಡಿದ್ದಾರೆ.

ಈ ಕುರಿತು ವಿಡಿಯೋ ಬಿಡುಗಡೆ ಮಾಡಿರುವ ಅವರು, ಕಾರ್ಕಳದಲ್ಲಿ ನನ್ನ ಕುಟುಂಬ ಕಟ್ಟಡ ನಿರ್ಮಾಣ ಮಾಡುತ್ತಿರುವುದರ ಕುರಿತು ಎದ್ದಿರುವ ಆರೋಪಗಳು ನಿರಾಧಾರವಾಗಿವೆ ಎಂದಿದ್ದಾರೆ.

ನಮ್ಮ ಮನೆಯ ಶಿಲ್ಪ ವಿನ್ಯಾಸ ಜವಾಬ್ದಾರಿಯನ್ನು ಪ್ರಮೋದ್ ಕುಮಾರ್ ವಹಿಸಿಕೊಂಡಿದ್ದಾರೆ. ಹಾಗೆ ಕಟ್ಟಡ ನಿರ್ಮಾಣದ ಸಂಪೂರ್ಣ ಜವಾಬ್ದಾರಿಯನ್ನು ನಂದಿಕೂರಿನ ಸೃಷ್ಟಿ ವೆಂಚರ್ಸ್‌ ಇಂಡಸ್ಟ್ರಿಯವರಿಗೆ ಕೊಟ್ಟಿದ್ದೇನೆ. ಖರೀದಿ, ಸಾಗಾಣಿಕೆ ಮತ್ತು ಮಾನವ ಸಂಪನ್ಮೂಲಗಳ ಬಳಕೆ ಎಲ್ಲವೂ ಅವರ ಜವಾಬ್ದಾರಿ. ನನ್ನ ಜವಾಬ್ದಾರಿ ಯಾವುದು ಇಲ್ಲ ಎಂದಿದ್ದಾರೆ.

ಸರ್ಕಾರಿ ಸಿಮೆಂಟ್ ಬಳಸಿದ್ದಾರೆ ಎಂದು ನನ್ನ ಮೇಲೆ ಆರೋಪಿಸಲಾಗಿದೆ. ಸಿಮೆಂಟ್ ಖರೀದಿಯಲ್ಲಿ ಟ್ರೇಡ್ ಸಿಮೆಂಟ್ ಮತ್ತು ನಾನ್ ಟ್ರೇಡ್ ಸಿಮೆಂಟ್ ಎಂಬ ಎರಡು ವಿಧಗಳಿವೆ. ಉತ್ಪಾದಕರಿಂದ ಡೀಲರ್‌ಗೆ ಬಂದು ಅಲ್ಲಿಂದ ಗ್ರಾಹಕರಿಗೆ ಮಾರುವುದು ಟ್ರೇಡ್ ಸಿಮೆಂಟ್. ಇನ್ನು ಉತ್ಪಾಕದರಿಂದ ನೇರ ಗ್ರಾಹಕರು ತೆಗೆದುಕೊಳ್ಳುವುದು ನಾನ್ ಟ್ರೇಡ್ ಸಿಮೆಂಟ್. ಹಾಗಾಗಿ ನಮ್ಮ ಮನೆ ನಿರ್ಮಾಣಕ್ಕೆ ಯಾವುದು ತೆಗೆದುಕೊಂಡಿದ್ದಾರೆ ಎಂಬುದು ನನ್ನ ಗುತ್ತಿಗೆದಾರರಿಗೆ ಬಿಟ್ಟ ವಿಚಾರ. ಇದ್ಯಾವುದಕ್ಕೂ ನಾನು ಜವಾಬ್ದಾರನಲ್ಲ ಎಂದಿದ್ದಾರೆ.

ನಮ್ಮ ಮನೆ ಕಟ್ಟಿಸುವ ಜವಾಬ್ದಾರಿ ಗುತ್ತಿಗೆದಾರರಿಗೆ ನೀಡಿದ್ದೇನೆ: ಸರ್ಕಾರಿ ಸಿಮೆಂಟ್ ಬಳಸಿದ ಆರೋಪಕ್ಕೆ ಕಾರ್ಕಳ ಶಾಸಕ ಸುನೀಲ್ ಕುಮಾರ್ ಸ್ಪಷ್ಟನೆ

Posted by Naanu Gauri on Friday, July 17, 2020

ಜರ್ಮನ್ ತಂತ್ರಜ್ಞಾನ ಮತ್ತು ಇಕೋವಲ್‌ಪ್ಯಾನಲ್‌ ತಂತ್ರಜ್ಞಾನ ಬಳಸಿ ಕಟ್ಟಡ ಕಟ್ಟಲಾಗುತ್ತಿದೆ. ಡಿಸೆಂಬರ್ ಅಂತ್ಯದೊಳಗೆ ಮನೆ ಕಟ್ಟಿ ಮುಗಿಸಿವಂತೆ ಗುತ್ತಿಗೆದಾರರ ಜೊತೆಗೆ ಒಪ್ಪಂದ ಮಾಡಿಕೊಂಡಿದ್ದೇನೆ ಎಂದು ಸಹ ಸುನೀಲ್ ಕುಮಾರ್ ತಿಳಿಸಿದ್ದಾರೆ.

ವಿರೋಧಿಗಳು ಮತ್ತು ಕಾಂಗ್ರೆಸ್‌ ನನ್ನ ಮೇಲೆ ಆರೋಪ ಮಾಡುತ್ತಿದ್ದಾರೆ. ಅವರ ಎಲ್ಲಾ ತನಿಖೆಗಳಿಗೆ ನಾನು ಸಿದ್ಧನಿದ್ದೇನೆ. ಈ ಹಿಂದೆಯೂ ಹಲವು ವಿಚಾರದಲ್ಲಿ ನನ್ನ ಮೇಲೆ ಆರೋಪಗಳನ್ನು ಹೊರಿಸಲಾಗಿತ್ತು. ಆದರೆ ಯಾವುದನ್ನು ಸ್ಪಷ್ಟಪಡಿಸಲು ಸಾಧ್ಯವಾಗಿಲ್ಲ. ಈಗ ನನ್ನ ಮೇಲೆ ನಿರಾಧಾರ ಆರೋಪ ಮಾಡಿರುವುದಕ್ಕೆ ಒಂದು ವಾರದಲ್ಲಿ ದೂರು ದಾಖಲಿಸುತ್ತೇನೆ ಎಂದು ಸುನೀಲ್ ಕುಮಾರ್ ಹೇಳಿದ್ದಾರೆ.


ಇದನ್ನೂ ಓದಿ: ಕಾರ್ಕಳ ಶಾಸಕ ಸುನಿಲ್ ಕುಮಾರ್ ಬಂಗಲೆಗೆ ಸಿಮೆಂಟ್ ಎಲ್ಲಿಯದು?: ಈ ವಿಡಿಯೋವನ್ನು ಸುಳ್ಳೆನ್ನಲು ಸಾಧ್ಯವೇ?

 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಪ.ಬಂಗಾಳ ಎಸ್‌ಐಆರ್‌ : ದೇಶ ಕಾದ ಯೋಧನಿಂದ ತೀರ್ಪು ಕೊಟ್ಟ ನ್ಯಾಯಾಧೀಶರವರೆಗೆ.. ಮತ ಹಕ್ಕು ಕಳೆದುಕೊಂಡ ಲಕ್ಷಾಂತರ ಜನರು

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ದೇಶದಲ್ಲಿ ಪ್ರಸ್ತುತ ಚರ್ಚೆಯಲ್ಲಿರುವ ಪ್ರಮುಖ ವಿಚಾರ. ಹಲವು ಗೊಂದಲಗಳ ನಡುವೆ ಮೊದಲ ಹಂತದಲ್ಲಿ ಬಿಹಾರದಲ್ಲಿ ಎಸ್‌ಐಆರ್‌ ಪೂರ್ತಿಗೊಳಿಸಿದ ಚುನಾವಣಾ ಆಯೋಗ, ನಂತರ ಅಲ್ಲಿ ವಿಧಾನಸಭಾ...

ತೆಲಂಗಾಣ ಜಾತಿ ಸಮೀಕ್ಷೆ: ಜನರ ಆರ್ಥಿಕ ಭವಿಷ್ಯ ನಿರ್ಧರಿಸುತ್ತಿರುವ ಜಾತಿ ಹಿನ್ನೆಲೆ

ತೆಲಂಗಾಣದಲ್ಲಿರುವ ಎಲ್ಲಾ ಪರಿಶಿಷ್ಟ ಜಾತಿ ಕಾರ್ಮಿಕರಲ್ಲಿ ಸುಮಾರು ಅರ್ಧದಷ್ಟು ಜನರು ದಿನಗೂಲಿ ಕಾರ್ಮಿಕರು. ಆದರೆ, ಸಾಮಾನ್ಯ ಜಾತಿ ಕಾರ್ಮಿಕರಲ್ಲಿ 10 ರಲ್ಲಿ ಒಬ್ಬರು ಮಾತ್ರ ದಿನಗೂಲಿ ಮಾಡುತ್ತಾರೆ. ಬ್ರಾಹ್ಮಣರು ಎಸ್‌ಟಿ ಸಮುದಾಯದ ಕೋಲಂಗಿಂತ...

ಲೆಬನಾನ್‌ನಲ್ಲಿ ಯೇಸುವಿನ ಪ್ರತಿಮೆ ಧ್ವಂಸ ಮಾಡಿದ ಇಸ್ರೇಲಿ ಸೈನಿಕ; ಫೋಟೋ ವೈರಲ್

ಇಸ್ರೇಲಿ ಸೈನಿಕನೊಬ್ಬ ದಕ್ಷಿಣ ಲೆಬನಾನ್‌ನಲ್ಲಿ ಸ್ಲೆಡ್ಜ್ ಹ್ಯಾಮರ್‌ನಿಂದ ಯೇಸುಕ್ರಿಸ್ತನ ಪ್ರತಿಮೆಯನ್ನು ಧ್ವಂಸ ಮಾಡುತ್ತಿರುವುದನ್ನು ತೋರಿಸುವ ವೈರಲ್ ಚಿತ್ರದ ಸತ್ಯಾಸತ್ಯತೆಯನ್ನು ಇಸ್ರೇಲ್ ರಕ್ಷಣಾ ಪಡೆಗಳು (ಐಡಿಎಫ್‌) ದೃಢಪಡಿಸಿದ್ದು, ವ್ಯಾಪಕ ಆಕ್ರೋಶಕ್ಕೆ ಕಾರಣವಾಗಿದೆ. ಎಕ್ಸ್ ನಲ್ಲಿ 6.8...

TCS ನಾಸಿಕ್ ಪ್ರಕರಣ : ಮಾಧ್ಯಮಗಳ ಸುಳ್ಳು ಮತ್ತು ಕಂಪನಿ ಹೇಳಿದ ಸತ್ಯ

ಮಹಾರಾಷ್ಟ್ರದ ನಾಸಿಕ್‌ನಲ್ಲಿರುವ ಟಾಟಾ ಕನ್ಸಲ್ಟೆನ್ಸಿ ಸರ್ವಿಸಸ್ (ಟಿಸಿಎಸ್‌) ಕಂಪನಿಯ ಬಿಪಿಒ ಘಟಕದಲ್ಲಿ ನಡೆದಿದೆ ಎನ್ನಲಾದ ಪ್ರಕರಣವೊಂದು ಪ್ರಸ್ತುತ ಇಡೀ ದೇಶದಾದ್ಯಂತ ಭಾರೀ ಚರ್ಚೆಯ ವಿಷಯವಾಗಿದೆ. ಈ ಪ್ರಕರಣದಲ್ಲಿ ಮುಖ್ಯವಾಗಿ ಲೈಂಗಿಕ ಕಿರುಕುಳ ಮತ್ತು...

‘ಅಮೆರಿಕದೊಂದಿಗೆ ಮಾತುಕತೆ ಇಲ್ಲ..’; ಇಸ್ಲಾಮಾಬಾದ್‌ ಸಭೆಯಲ್ಲಿ ಇರಾನ್ ಭಾಗವಹಿಸುವುದು ಅನುಮಾನ

ಯುನೈಟೆಡ್ ಸ್ಟೇಟ್ಸ್ (ಅಮೆರಿಕ) ಜೊತೆ ಹೊಸ ಸುತ್ತಿನ ಮಾತುಕತೆಗಾಗಿ ಇಸ್ಲಾಮಾಬಾದ್‌ಗೆ ಸಂಧಾನಕಾರರನ್ನು ಕಳುಹಿಸುವ ಯಾವುದೇ ಯೋಜನೆ ಇಲ್ಲ ಎಂದು ಇರಾನ್ ಸೂಚಿಸಿದೆ. ಕದನ ವಿರಾಮ ಮುಕ್ತಾಯಗೊಳ್ಳಲು 48 ಗಂಟೆಗಳ ಮೊದಲು ಯುದ್ಧ ನಿರತ...

ಇರಾನ್, ಇಸ್ರೇಲ್-ಅಮೆರಿಕ ಯುದ್ಧ : ವಿನಾಶದ ನಡುವೆಯೂ ಲಾಭ ಪಡೆದವರು ಯಾರು?

ಅಂತಾರಾಷ್ಟ್ರೀಯ ಹಣಕಾಸು ನಿಧಿ (ಐಎಂಎಫ್‌) 2026ರ ಜಾಗತಿಕ ಬೆಳವಣಿಗೆಯ ಅಂದಾಜನ್ನು ಶೇಕಡ 3.3 ರಿಂದ 3.1ಕ್ಕೆ ಇಳಿಸಿದೆ. ಇರಾನ್ ವಿರುದ್ಧದ ಅಮೆರಿಕ-ಇಸ್ರೇಲ್ ಯುದ್ಧದ ಪರಿಣಾಮ ಮತ್ತು ಹಾರ್ಮುಝ್ ಜಲಸಂಧಿಯನ್ನು ಮುಚ್ಚಿರುವುದು ವಿಶ್ವ ಆರ್ಥಿಕತೆಯ...

ಕ್ಷೇತ್ರ ಮರುವಿಂಗಡಣೆ ವಿರುದ್ಧ ದಕ್ಷಿಣದ ರಾಜ್ಯಗಳ ಪಟ್ಟು: ಭವಿಷ್ಯದ ಮರುಚಿಂತನೆಗೆ ಇದುವೇ ಸೂಕ್ತ ಕಾಲ

ಲೋಕಸಭೆಯಲ್ಲಿ 131 ನೇ ಸಾಂವಿಧಾನಿಕ ತಿದ್ದುಪಡಿ ಮಸೂದೆಯನ್ನು ತಿರಸ್ಕರಿಸಿರುವುದು ಭಾರತದ ಪ್ರಜಾಪ್ರಭುತ್ವ ಪಥದಲ್ಲಿ ಮಹತ್ವದ ಕ್ಷಣವಾಗಿದೆ. ಇದು ಕೇವಲ ಶಾಸಕಾಂಗದ ಹಿನ್ನಡೆಯನ್ನು ಮಾತ್ರವಲ್ಲ, ಒಕ್ಕೂಟ ವ್ಯವಸ್ಥೆಯ ಸೂಕ್ಷ್ಮ ಸಮತೋಲನವನ್ನು ಹಾಳುಮಾಡುವ ಅಪಾಯವನ್ನುಂಟುಮಾಡುವ ಪ್ರಸ್ತಾಪಗಳ...

ಮೋದಿ ಸರ್ಕಾರದ ಯೂಟರ್ನ್ : ಜನಸಂಖ್ಯಾ ಸ್ಫೋಟದ ಕಳವಳದಿಂದ ಹೆಚ್ಚು ಜನಸಂಖ್ಯೆಯ ರಾಜ್ಯಗಳಿಗೆ ಗಿಫ್ಟ್ ಕೊಡುವವರೆಗೆ

ಭಾರತದ ಜನಸಂಖ್ಯೆಯ ಬಗ್ಗೆ ಪ್ರಧಾನಮಂತ್ರಿ ನರೇಂದ್ರ ಮೋದಿ ಮತ್ತು ಅವರ ಸರ್ಕಾರ ನಿಜವಾಗಿಯೂ ಬಹಳ ಕಳವಳ ವ್ಯಕ್ತಪಡಿಸುತ್ತಿದೆ– ಅಥವಾ ಅವರು ನಮಗೆ ಆ ರೀತಿ ನಂಬುವಂತೆ ಮಾಡಿದ್ದಾರೆ. ಏಕೆಂದರೆ... 2019ರ ಸ್ವಾತಂತ್ರ್ಯ ದಿನಾಚರಣೆಯಂದು ಮೋದಿಯವರು,...

ದೇಶವನ್ನುದ್ದೇಶಿಸಿ ಮೋದಿ ಭಾಷಣ : ಚುನಾವಣಾ ನೀತಿ ಸಂಹಿತೆಯ ಉಲ್ಲಂಘನೆ

ಕ್ಷೇತ್ರ ಮರುವಿಂಗಡನೆಗೆ ಉದ್ದೇಶಿಸಿದ್ದ ಸಂವಿಧಾನದ 131ನೇ ತಿದ್ದುಪಡಿ ಮಸೂದೆಗೆ ಲೋಕಸಭೆಯಲ್ಲಿ ಸೋಲಾದ ಬೆನ್ನಲ್ಲೇ ಶನಿವಾರ (ಏ.18) ದೇಶವನ್ನುದ್ದೇಶಿಸಿ ಮಾತನಾಡಿದ ಪ್ರಧಾನಿ ನರೇಂದ್ರ ಮೋದಿ, ಪ್ರತಿಪಕ್ಷಗಳ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ದು, ಸಂಸತ್ತಿನಲ್ಲಿ ವಿರೋಧ...

ಫ್ಯಾಕ್ಟ್‌ಚೆಕ್ : ಅತ್ಯಾಚಾರ ಅಪರಾಧಿ ಪರ ವಕೀಲೆಗೆ ಟಿಎಂಸಿಯಿಂದ ರಾಜ್ಯಸಭೆ ಸೀಟ್; ಬಿಜೆಪಿ ಆರೋಪದ ಸತ್ಯಾಸತ್ಯತೆ ಏನು?

ಪಶ್ಚಿಮ ಬಂಗಾಳ ವಿಧಾನಸಭೆ ಚುನಾವಣೆಗೆ ಪಾಣಿಹತಿ ಕ್ಷೇತ್ರದಿಂದ ಬಿಜೆಪಿ ಅಭ್ಯರ್ಥಿಯಾಗಿರುವ ಆರ್‌ಜಿ ಕರ್‌ ಸಂತ್ರಸ್ತೆಯ ತಾಯಿ ಮತ್ತು ವಕೀಲೆ ಹಾಗೂ ತೃಣಮೂಲ ಕಾಂಗ್ರೆಸ್ (ಟಿಎಂಸಿ) ರಾಜ್ಯಸಭಾ ಸದಸ್ಯೆ ಮೇನಕಾ ಗುರುಸ್ವಾಮಿ ಅವರ ಎಐ-ರಚಿತ...