Homeಕರ್ನಾಟಕಸರ್ಕಾರಿ ಸಿಮೆಂಟ್ ಬಳಸಿದ ಆರೋಪಕ್ಕೆ ಕಾರ್ಕಳ ಶಾಸಕ ಸುನೀಲ್ ಕುಮಾರ್ ಸ್ಪಷ್ಟನೆ

ಸರ್ಕಾರಿ ಸಿಮೆಂಟ್ ಬಳಸಿದ ಆರೋಪಕ್ಕೆ ಕಾರ್ಕಳ ಶಾಸಕ ಸುನೀಲ್ ಕುಮಾರ್ ಸ್ಪಷ್ಟನೆ

ನಮ್ಮ ಮನೆಯ ಶಿಲ್ಪ ವಿನ್ಯಾಸ ಜವಾಬ್ದಾರಿಯನ್ನು ಪ್ರಮೋದ್ ಕುಮಾರ್ ವಹಿಸಿಕೊಂಡಿದ್ದಾರೆ. ಹಾಗೆ ಕಟ್ಟಡ ನಿರ್ಮಾಣದ ಸಂಪೂರ್ಣ ಜವಾಬ್ದಾರಿಯನ್ನು ನಂದಿಕೂರಿನ ಸೃಷ್ಟಿ ವೆಂಚರ್ಸ್‌ ಇಂಡಸ್ಟ್ರಿಯವರಿಗೆ ಕೊಟ್ಟಿದ್ದೇನೆ.

- Advertisement -
- Advertisement -

ಕಾರ್ಕಳದ ತಾಲ್ಲೂಕು ಕಛೇರಿ ರಸ್ತೆಯಲ್ಲಿ ಶಾಸಕ ಸುನೀಲ್ ಕುಮಾರ್‌ರವರು ಕಟ್ಟಿಸುತ್ತಿರುವ ಬಂಗಲೆ ಮತ್ತು ಅದಕ್ಕೆ ಬಳಸಿರುವ ಸಿಮೆಂಟ್ ವಿಚಾರಕ್ಕೆ ಎದ್ದಿರುವ ವಿವಾದದ ಕುರಿತು ಸ್ವತಃ ಶಾಸಕರೆ ಸ್ಪಷ್ಟನೆ ನೀಡಿದ್ದಾರೆ.

ಈ ಕುರಿತು ವಿಡಿಯೋ ಬಿಡುಗಡೆ ಮಾಡಿರುವ ಅವರು, ಕಾರ್ಕಳದಲ್ಲಿ ನನ್ನ ಕುಟುಂಬ ಕಟ್ಟಡ ನಿರ್ಮಾಣ ಮಾಡುತ್ತಿರುವುದರ ಕುರಿತು ಎದ್ದಿರುವ ಆರೋಪಗಳು ನಿರಾಧಾರವಾಗಿವೆ ಎಂದಿದ್ದಾರೆ.

ನಮ್ಮ ಮನೆಯ ಶಿಲ್ಪ ವಿನ್ಯಾಸ ಜವಾಬ್ದಾರಿಯನ್ನು ಪ್ರಮೋದ್ ಕುಮಾರ್ ವಹಿಸಿಕೊಂಡಿದ್ದಾರೆ. ಹಾಗೆ ಕಟ್ಟಡ ನಿರ್ಮಾಣದ ಸಂಪೂರ್ಣ ಜವಾಬ್ದಾರಿಯನ್ನು ನಂದಿಕೂರಿನ ಸೃಷ್ಟಿ ವೆಂಚರ್ಸ್‌ ಇಂಡಸ್ಟ್ರಿಯವರಿಗೆ ಕೊಟ್ಟಿದ್ದೇನೆ. ಖರೀದಿ, ಸಾಗಾಣಿಕೆ ಮತ್ತು ಮಾನವ ಸಂಪನ್ಮೂಲಗಳ ಬಳಕೆ ಎಲ್ಲವೂ ಅವರ ಜವಾಬ್ದಾರಿ. ನನ್ನ ಜವಾಬ್ದಾರಿ ಯಾವುದು ಇಲ್ಲ ಎಂದಿದ್ದಾರೆ.

ಸರ್ಕಾರಿ ಸಿಮೆಂಟ್ ಬಳಸಿದ್ದಾರೆ ಎಂದು ನನ್ನ ಮೇಲೆ ಆರೋಪಿಸಲಾಗಿದೆ. ಸಿಮೆಂಟ್ ಖರೀದಿಯಲ್ಲಿ ಟ್ರೇಡ್ ಸಿಮೆಂಟ್ ಮತ್ತು ನಾನ್ ಟ್ರೇಡ್ ಸಿಮೆಂಟ್ ಎಂಬ ಎರಡು ವಿಧಗಳಿವೆ. ಉತ್ಪಾದಕರಿಂದ ಡೀಲರ್‌ಗೆ ಬಂದು ಅಲ್ಲಿಂದ ಗ್ರಾಹಕರಿಗೆ ಮಾರುವುದು ಟ್ರೇಡ್ ಸಿಮೆಂಟ್. ಇನ್ನು ಉತ್ಪಾಕದರಿಂದ ನೇರ ಗ್ರಾಹಕರು ತೆಗೆದುಕೊಳ್ಳುವುದು ನಾನ್ ಟ್ರೇಡ್ ಸಿಮೆಂಟ್. ಹಾಗಾಗಿ ನಮ್ಮ ಮನೆ ನಿರ್ಮಾಣಕ್ಕೆ ಯಾವುದು ತೆಗೆದುಕೊಂಡಿದ್ದಾರೆ ಎಂಬುದು ನನ್ನ ಗುತ್ತಿಗೆದಾರರಿಗೆ ಬಿಟ್ಟ ವಿಚಾರ. ಇದ್ಯಾವುದಕ್ಕೂ ನಾನು ಜವಾಬ್ದಾರನಲ್ಲ ಎಂದಿದ್ದಾರೆ.

ನಮ್ಮ ಮನೆ ಕಟ್ಟಿಸುವ ಜವಾಬ್ದಾರಿ ಗುತ್ತಿಗೆದಾರರಿಗೆ ನೀಡಿದ್ದೇನೆ: ಸರ್ಕಾರಿ ಸಿಮೆಂಟ್ ಬಳಸಿದ ಆರೋಪಕ್ಕೆ ಕಾರ್ಕಳ ಶಾಸಕ ಸುನೀಲ್ ಕುಮಾರ್ ಸ್ಪಷ್ಟನೆ

Posted by Naanu Gauri on Friday, July 17, 2020

ಜರ್ಮನ್ ತಂತ್ರಜ್ಞಾನ ಮತ್ತು ಇಕೋವಲ್‌ಪ್ಯಾನಲ್‌ ತಂತ್ರಜ್ಞಾನ ಬಳಸಿ ಕಟ್ಟಡ ಕಟ್ಟಲಾಗುತ್ತಿದೆ. ಡಿಸೆಂಬರ್ ಅಂತ್ಯದೊಳಗೆ ಮನೆ ಕಟ್ಟಿ ಮುಗಿಸಿವಂತೆ ಗುತ್ತಿಗೆದಾರರ ಜೊತೆಗೆ ಒಪ್ಪಂದ ಮಾಡಿಕೊಂಡಿದ್ದೇನೆ ಎಂದು ಸಹ ಸುನೀಲ್ ಕುಮಾರ್ ತಿಳಿಸಿದ್ದಾರೆ.

ವಿರೋಧಿಗಳು ಮತ್ತು ಕಾಂಗ್ರೆಸ್‌ ನನ್ನ ಮೇಲೆ ಆರೋಪ ಮಾಡುತ್ತಿದ್ದಾರೆ. ಅವರ ಎಲ್ಲಾ ತನಿಖೆಗಳಿಗೆ ನಾನು ಸಿದ್ಧನಿದ್ದೇನೆ. ಈ ಹಿಂದೆಯೂ ಹಲವು ವಿಚಾರದಲ್ಲಿ ನನ್ನ ಮೇಲೆ ಆರೋಪಗಳನ್ನು ಹೊರಿಸಲಾಗಿತ್ತು. ಆದರೆ ಯಾವುದನ್ನು ಸ್ಪಷ್ಟಪಡಿಸಲು ಸಾಧ್ಯವಾಗಿಲ್ಲ. ಈಗ ನನ್ನ ಮೇಲೆ ನಿರಾಧಾರ ಆರೋಪ ಮಾಡಿರುವುದಕ್ಕೆ ಒಂದು ವಾರದಲ್ಲಿ ದೂರು ದಾಖಲಿಸುತ್ತೇನೆ ಎಂದು ಸುನೀಲ್ ಕುಮಾರ್ ಹೇಳಿದ್ದಾರೆ.


ಇದನ್ನೂ ಓದಿ: ಕಾರ್ಕಳ ಶಾಸಕ ಸುನಿಲ್ ಕುಮಾರ್ ಬಂಗಲೆಗೆ ಸಿಮೆಂಟ್ ಎಲ್ಲಿಯದು?: ಈ ವಿಡಿಯೋವನ್ನು ಸುಳ್ಳೆನ್ನಲು ಸಾಧ್ಯವೇ?

 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ದಲಿತ ವಿದ್ಯಾರ್ಥಿನಿ ಕೊಲೆ ಪ್ರಕರಣ: ಪ್ರತಿಭಟನಾಕಾರರ ಮೇಲೆ ಪೊಲೀಸ್ ಲಾಠಿಚಾರ್ಜ್; ಯೋಗಿ ಸರ್ಕಾರದ ವಿರುದ್ಧ ತೀವ್ರ ಆಕ್ರೋಶ

ನವದೆಹಲಿ: ಜುಲೈ 8 ರಂದು ಮೀರತ್‌ನಲ್ಲಿ ನಡೆದ ದಲಿತ ವಿದ್ಯಾರ್ಥಿನಿಯ ಹತ್ಯೆಯನ್ನು ಖಂಡಿಸಿ ಪ್ರತಿಭಟನೆ ನಡೆಸುತ್ತಿದ್ದ ದಲಿತ ಕಾರ್ಯಕರ್ತರು ಮತ್ತು ಮೃತರ ಕುಟುಂಬ ಸದಸ್ಯರ ಮೇಲೆ ಉತ್ತರ ಪ್ರದೇಶ ಪೊಲೀಸರು ಭೀಕರ ಹಲ್ಲೆ,...

ಒಮಾನ್ ಕರಾವಳಿಯಲ್ಲಿ ಮತ್ತೊಂದು ಹಡಗಿನ ಮೇಲೆ ದಾಳಿ: ಭಾರತೀಯ ಪ್ರಜೆ ನಾಪತ್ತೆ, 10 ಜನರ ರಕ್ಷಣೆ: ವಿದೇಶಾಂಗ ಸಚಿವಾಲಯ ಮಾಹಿತಿ

ನವದೆಹಲಿ: ಜುಲೈ 12 ರಂದು ಒಮಾನ್ ಕರಾವಳಿಯ ಅಂತರರಾಷ್ಟ್ರೀಯ ಜಲಮಾರ್ಗದಲ್ಲಿ ಸಾಗುತ್ತಿದ್ದ ‘ಜಿಎಫ್‌ಎಸ್ ಗ್ಯಾಲಕ್ಸಿ’ (GFS Galaxy) ಎಂಬ ವಾಣಿಜ್ಯ ಹಡಗಿನ ಮೇಲೆ ನಡೆದ ದಾಳಿಯನ್ನು ಭಾರತ ಸರ್ಕಾರ ತೀವ್ರವಾಗಿ ಖಂಡಿಸಿದೆ. ಭೀಕರ...

SIR ಪ್ರಕ್ರಿಯೆಯಲ್ಲಿ ಎಐ ಬಳಕೆ, ಭಾರೀ ಪ್ರಮಾಣದಲ್ಲಿ ಮತದಾರರ ಹೆಸರು ಡಿಲೀಟ್ : ಕಳವಳ ವ್ಯಕ್ತಪಡಿಸಿದ ವಿಶ್ವಸಂಸ್ಥೆಯ ವಿಶೇಷ ವರದಿಗಾರರು

ಭಾರತೀಯ ಚುನಾವಣಾ ಆಯೋಗ (ಇಸಿಐ) ಕೈಗೊಂಡ ಮತದಾರರ ಪಟ್ಟಿಗಳ ವಿಶೇಷ ತೀವ್ರ ಪರಿಷ್ಕರಣೆಯು (ಎಸ್‌ಐಆರ್) ವ್ಯಾಪಕ ಪ್ರಮಾಣದಲ್ಲಿ ಮತದಾರರ ಹೆಸರುಗಳ ಅಳಿಸುವಿಕೆಗೆ ಕಾರಣವಾಗಿದೆ ಮತ್ತು ಇದು ಮುಸ್ಲಿಮರು ಹಾಗೂ ಇತರ ಅಲ್ಪಸಂಖ್ಯಾತ ಸಮುದಾಯಗಳ...

ಮಹಾರಾಷ್ಟ್ರ: ನಂದೂರ್ಬಾರ್‌ನ ಸರ್ಕಾರಿ ಹಾಸ್ಟೆಲ್‌ನಲ್ಲಿ ಕಲುಷಿತ ಆಹಾರ ಸೇವಿಸಿ 40 ವಿದ್ಯಾರ್ಥಿಗಳು ಅಸ್ವಸ್ಥ; ತೀವ್ರಗೊಂಡ ತನಿಖೆ 

ನಂದೂರ್ಬಾರ್ (ಮಹಾರಾಷ್ಟ್ರ): ಮಹಾರಾಷ್ಟ್ರದ ನಂದೂರ್ಬಾರ್ ಜಿಲ್ಲೆಯ ಶಹಾಡಾ ತಾಲೂಕಿನಲ್ಲಿರುವ ಸರ್ಕಾರಿ ಸಮಾಜ ಕಲ್ಯಾಣ ಇಲಾಖೆಯ ವಸತಿನಿಲಯದಲ್ಲಿ ಶಂಕಿತ ವಿಷಪೂರಿತ ಆಹಾರ ಸೇವಿಸಿ ಸುಮಾರು 40 ವಿದ್ಯಾರ್ಥಿಗಳು ತೀವ್ರವಾಗಿ ಅಸ್ವಸ್ಥಗೊಂಡಿರುವ ಕಳವಳಕಾರಿ ಘಟನೆ ವರದಿಯಾಗಿದೆ.  ಹಾಸ್ಟೆಲ್‌ನಲ್ಲಿ...

ಇರಾನ್‌ನ 140 ಸ್ಥಳಗಳನ್ನು ಗುರಿಯಾಗಿಸಿ ಅಮೆರಿಕದಿಂದ ದಾಳಿ : ಬಹ್ರೇನ್, ಕತಾರ್, ಯುಎಇ ಮೇಲೆ ಇರಾನ್‌ನಿಂದ ಪ್ರತಿದಾಳಿ

ಹಾರ್ಮುಝ್ ಜಲಸಂಧಿಯಲ್ಲಿ ಇರಾನ್ ನಡೆಸಿದ ದಾಳಿಯಿಂದಾಗಿ ಸರಕು ಸಾಗಣೆ ಹಡಗೊಂದು ಹೊತ್ತಿ ಉರಿದು, ಅದರಲ್ಲಿದ್ದ ಸಿಬ್ಬಂದಿ ಹಡಗು ಬಿಟ್ಟು ಹೊರಡುವಂತಾಗಿತ್ತು. ಈ ಘಟನೆಯನ್ನು ಖಂಡಿಸಿ ಅಮೆರಿಕ ಭಾನುವಾರ (ಜು.12) ಮುಂಜಾನೆ ಇರಾನ್ ಮೇಲೆ...

31 ವರ್ಷಗಳ ಹಳೇ ಸಾಲ ತೀರಿಸಲು 1200 ಕಿ.ಮೀ ಪ್ರಯಾಣಿಸಿದ ಕೇರಳದ ಇಸ್ಮಾಯಿಲ್

"ನನ್ನ ಕಣ್ಣುಗಳಿಂದ ಆನಂದಬಾಷ್ಪಗಳು ಉದುರಿದವು. ನನ್ನ ಮನಸ್ಸಿಗೆ ಅದೆಷ್ಟು ನೆಮ್ಮದಿ ಸಿಕ್ಕಿತೆಂದರೆ, ಅದನ್ನು ವಿವರಿಸಲು ಪದಗಳೇ ಸಾಲದು. ಆತನಿಗೂ ಅಷ್ಟೇ ದೊಡ್ಡ ಸಮಾಧಾನ." ಹೀಗೆ ಭಾವುಕರಾಗಿ ನುಡಿಯುತ್ತಾರೆ ಮೊಹಮ್ಮದ್ ಇಸ್ಮಾಯಿಲ್. 1995ರಲ್ಲಿ ಸೌದಿ...

ಬಂಡಾಯದ ಬಳಿಕ ಟಿಎಂಸಿಗೆ ಮತ್ತೊಂದು ಸವಾಲು : ಪಕ್ಷದ ಬ್ಯಾಂಕ್ ಖಾತೆಗಳು ಫ್ರೀಝ್

ಮಮತಾ ಬ್ಯಾನರ್ಜಿ ನೇತೃತ್ವದ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಪಕ್ಷದ ಮೂರು ಬ್ಯಾಂಕ್ ಖಾತೆಗಳಲ್ಲಿರುವ 440 ಕೋಟಿ ರೂಪಾಯಿ ಹಣವನ್ನು ಭಾಗಶಃ ಬಳಸಲು ಕಲ್ಕತ್ತಾ ಹೈಕೋರ್ಟ್ ಅನುಮತಿ ನೀಡಿದ ಮರುದಿನವೇ, ಪಶ್ಚಿಮ ಬಂಗಾಳ ಪೊಲೀಸರು...

ಮಂದಿರ ನಿರ್ಮಾಣದ ಕ್ರೆಡಿಟ್‌ಗೆ ಇದ್ದ ಯಜಮಾನಿಕೆ, ಕೊಳ್ಳೆ ಹೊಡೆದಾಗ ಯಾಕಿಲ್ಲ ಸೇವಕರೇ?

ಬಾಲರಾಮನ ಪ್ರಾಣಪ್ರತಿಷ್ಠಾಪನೆಗೆ ಮುನ್ನ ಪ್ರಧಾನಿಯವರು 11 ದಿನಗಳ ಕಾಲ ಕಠಿಣ ಉಪವಾಸ ವ್ರತ ಆಚರಿಸಿದ್ದರು, ಕೇವಲ ಎಳನೀರು ಕುಡಿದರು, ನೆಲದ ಮೇಲೆ ಮಲಗಿದರು ಎಂದು ಇಡೀ ದೇಶಕ್ಕೆ ಸಾರಲಾಗಿತ್ತು. ಅಯೋಧ್ಯೆಯಿಂದ ಹೊಸ ಕಾಲದ...

‘ಫ್ರೀ ಪ್ಯಾಲೆಸ್ತೀನ್’ ಘೋಷಣೆಯನ್ನು ತಮಾಷೆ ಮಾಡಿದ ಸೈಫ್ ಅಲಿ ಖಾನ್ – ನಿರೂಪಕಿ ಅನುಪಮಾ ಚೋಪ್ರಾ

ಸ್ಪ್ಯಾನಿಷ್ ನಟ ಜೇವಿಯರ್ ಬಾರ್ಡೆಮ್ ಅವರ "ಫ್ರೀ ಪ್ಯಾಲೆಸ್ತೀನ್" ಹೇಳಿಕೆ ಕುರಿತು ಸೈಫ್ ಅಲಿ ಖಾನ್ ಮತ್ತು ಚಲನಚಿತ್ರ ಪತ್ರಕರ್ತೆ ಅನುಪಮಾ ಚೋಪ್ರಾ ನಗುತ್ತಿರುವ ಕ್ಲಿಪ್ ಆನ್‌ಲೈನ್‌ನಲ್ಲಿ ವೈರಲ್ ಆಗಿದ್ದು, ನಟನ ಅಸೂಕ್ಷ್ಮ...

ತೆಲಂಗಾಣ : ಪೋಕ್ಸೋ ಪ್ರಕರಣದ ಆರೋಪಿಯಿಂದ ಸಂತ್ರಸ್ತೆ ಸೇರಿ 6 ಜನರ ಹತ್ಯೆ

ಪೋಕ್ಸೋ ಪ್ರಕರಣದ ಆರೋಪಿಯೊಬ್ಬ ಸಂತ್ರಸ್ತೆ ಸೇರಿದಂತೆ ಒಟ್ಟು ಆರು ಜನರನ್ನು ಭೀಕರವಾಗಿ ಹತ್ಯೆ ಮಾಡಿರುವ ಘಟನೆ ತೆಲಂಗಾಣದ ರಂಗಾರೆಡ್ಡಿ ಜಿಲ್ಲೆಯ ಶಾಬಾದ್ ಮಂಡಲದಲ್ಲಿ ಶುಕ್ರವಾರ (ಜು.10) ರಾತ್ರಿ ನಡೆದಿದೆ. 28 ವರ್ಷ ವಯಸ್ಸಿನ...