Homeಕರ್ನಾಟಕಕಾರ್ಕಳ: ಗೋಡ್ಸೆ ಬೋರ್ಡ್ ತೆರವು; ರಸ್ತೆಗೆ ನಾರಾಯಣಗುರುಗಳ ಹೆಸರಿಡುವಂತೆ ಕಾಂಗ್ರೆಸ್ ಆಗ್ರಹ

ಕಾರ್ಕಳ: ಗೋಡ್ಸೆ ಬೋರ್ಡ್ ತೆರವು; ರಸ್ತೆಗೆ ನಾರಾಯಣಗುರುಗಳ ಹೆಸರಿಡುವಂತೆ ಕಾಂಗ್ರೆಸ್ ಆಗ್ರಹ

- Advertisement -
- Advertisement -

ಉಡುಪಿ ಜಿಲ್ಲೆ, ಕಾರ್ಕಳ ತಾಲ್ಲೂಕಿನ ಬೋಳ ಗ್ರಾಮ ಪಂಚಾಯಿತಿಗೆ ಸೇರಿದ ರಸ್ತೆಯೊಂದಕ್ಕೆ ರಾಷ್ಟ್ರಪಿತ ಮಹಾತ್ಮ ಗಾಂಧೀಜಿಯವರನ್ನು ಹತ್ಯೆ ಮಾಡಿದ ‘ನಾಥೂರಾಮ್‌ ಗೋಡ್ಸೆ’ ಹೆಸರನ್ನು ಯಾರೋ ಕಿಡಿಗೇಡಿಗಳು ಇಟ್ಟಿದ್ದು ವಿವಾದದ ಸ್ವರೂಪ ಪಡೆದ ಬೆನ್ನಲ್ಲೇ ಸ್ಥಳೀಯ ಮುಖಂಡರು ಕ್ರಮ ವಹಿಸಿದ್ದಾರೆ.

ಸ್ಥಳಕ್ಕೆ ಧಾವಿಸಿದ ಸ್ಥಳೀಯ ಕಾಂಗ್ರೆಸ್ ಮುಖಂಡರು ಬೋರ್ಡ್ ತೆರವು ಮಾಡಿಸುವಲ್ಲಿ ಯಶಸ್ವಿಯಾಗಿದ್ದು, “ಈ ರಸ್ತೆಗೆ ಗೋಡ್ಸೆ ಹೆಸರಿನ ಬದಲು ಸಮಾಜ ಸುಧಾರಕ ನಾರಾಯಣಗುರುಗಳ ಹೆಸರು ಇಡಬೇಕು” ಎಂದು ಆಗ್ರಹಿಸಿದ್ದಾರೆ.

ಈ ಕುರಿತು ಪ್ರತಿಕ್ರಿಯೆ ನೀಡಿರುವ ಕಾಂಗ್ರೆಸ್ ನಾಯಕ ಬಿ.ಕೆ.ಹರಿಪ್ರಸಾದ್, “ಈ ನೆಲದಲ್ಲಿ ಗೋಡ್ಸೆ ಸಂತತಿಗಳನ್ನ ಬುಡ ಸಮೇತ ಕಿತ್ತು ಹಾಕಬೇಕು. ಅದು ಥೇಟ್ ಕಾರ್ಕಳದ ರಸ್ತೆಗೆ ಇಟ್ಟಿದ್ದ ಗೋಡ್ಸೆಯ ನಾಮಫಲಕವನ್ನ ಕಿತ್ತು ಹಾಕಿದಂತೆ. ನಾಮ ಫಲಕ ತೆರವುಗೊಳಿಸಿ ಅದೇ ಜಾಗದಲ್ಲಿ ಶ್ರೀ ನಾರಾಯಣ ಗುರುಗಳ ಹೆಸರಿಡಲು ಸ್ಥಳೀಯ ಆಡಳಿತಕ್ಕೆ ಮನವಿ ಮಾಡಿರುವ ಯುವ ಕಾಂಗ್ರೆಸ್ ಕಾರ್ಯಕರ್ತರ ಕೆಲಸಕ್ಕೆ ಸಲಾಂ” ಎಂದಿದ್ದಾರೆ.

ಕಾರ್ಕಳ ವಿಧಾನಸಭಾ ಕ್ಷೇತ್ರವನ್ನು ರಾಜ್ಯದ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಚಿವ ಸುನಿಲ್‌ಕುಮಾರ್‌ ಅವರು ಪ್ರತಿನಿಧಿಸುತ್ತಿರುವುದು ವಿವಾದದ ಕೇಂದ್ರ ಸ್ಥಾನ ಪಡೆದ ಬಳಿಕ ‘ಗೋಡ್ಸೆ ರಸ್ತೆ’ ಫಲಕ ತೆರವಾಗಿದೆ.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others

ಯುವ ಕಾಂಗ್ರೆಸ್ ಮುಖಂಡ ದೀಪಕ್‌ ಕೋಟ್ಯಾನ್‌ ಮಾತನಾಡಿ, “ಯಾರೋ ಕಿಡಿಗೇಡಿಗಳು ದೇಶದ ಮೊದಲ ಭಯೋತ್ಪಾದಕ ನಾಥೂರಾಮ್‌ ಗೋಡ್ಸೆ ಹೆಸರನ್ನು ಇಟ್ಟಿದ್ದರು. ಬ್ಲಾಕ್‌ ಕಾಂಗ್ರೆಸ್ ಮುಖಂಡರು ಪ್ರತಿಭಟನೆಯ ಎಚ್ಚರಿಕೆ ನೀಡಿದೆವು. ಇದರಿಂದ ಎಚ್ಚೆತ್ತ ಬೋಳ ಗ್ರಾಪಂ ಪಿಡಿಒ ಹಾಗೂ ಆಡಳಿತ ವರ್ಗ ಬೋರ್ಡ್ ತೆರವುಗೊಳಿಸಿದೆ” ಎಂದು ತಿಳಿಸಿದ್ದಾರೆ.

“ಬೋರ್ಡ್ ಹಾಕುವಂತಹ ಘಟನೆಗಳು ಖಂಡನೀಯ ಹಾಗೂ ಖೇದಕರ. ಬಿಜೆಪಿ ಸರ್ಕಾರದ ಅವಧಿಯಲ್ಲಿ ದೇಶ ಎತ್ತ ಸಾಗುತ್ತಿದೆ? ಯುವಕರಿಗೆ ಎಂತಹ ಸಂದೇಶವನ್ನು ನೀಡುತ್ತಿದ್ದಾರೆ ಎಂಬುದು ಕಳವಳಕಾರಿ ವಿಚಾರವಾಗಿದೆ. ಮುಂದೆ ಏನಾದರೂ ಇದು ಮರುಕಳುಸಿದರೆ ಉಡುಪಿ ಕಾಂಗ್ರೆಸ್‌ ಘಟಕವು ಉಗ್ರ ಹೋರಾಟವನ್ನು ಹಮ್ಮಿಕೊಳ್ಳಲಿದೆ” ಎಂದು ಎಚ್ಚರಿಕೆ ನೀಡಿದ್ದಾರೆ.

“ಬೋಳ ಗ್ರಾಮ ಪಂಚಾಯತ್‌- ಪಡುಗಿರಿ ನಾಥೂರಾಮ್‌ ಗೋಡ್ಸೆ ರಸ್ತೆ” ಎಂದು ಬರೆಯಲಾಗಿರುವ ಮಾರ್ಗಸೂಚಿ ಫಲಕ ಹಾಕಲಾಗಿತ್ತು. ಬೋಳ ಗ್ರಾಮ ಪಂಚಾಯಿತಿ ಅಧ್ಯಕ್ಷರಾದ ಸುಧಾ ಎಸ್.ಪೂಜಾರಿ ಅವರೊಂದಿಗೆ ‘ನಾನುಗೌರಿ.ಕಾಂ’ ಪ್ರತಿನಿಧಿ ಮಾತನಾಡಿದಾಗ, “ಹೌದು ಈ ಫಲಕ ಇರುವುದು ನಿಜ. ಆದರೆ ಯಾರು ಇದನ್ನು ಹಾಕಿದ್ದಾರೆಂಬ ಮಾಹಿತಿ ಇಲ್ಲ. ಯಾರೋ ಖಾಸಗಿ ವ್ಯಕ್ತಿಗಳು ಈ ರೀತಿಯ ಫಲಕವನ್ನು ಪಡುಗಿರಿ ರಸ್ತೆಯಲ್ಲಿ ನೆಟ್ಟಿದ್ದಾರೆ. ಕ್ರಮ ವಹಿಸಲಾಗುವುದು” ಎಂದು ತಿಳಿಸಿದ್ದರು.

ಫಲಕ ಹಾಕಿದ್ದ ಘಟನೆ ಬಗ್ಗೆ ಸಚಿವ ಸುನೀಲ್‌ ಕುಮಾರ್ ಪ್ರತಿಕ್ರಿಯಿಸಿದ್ದು, “ಫಲಕ ಹಾಕುವುದು ಅಥವಾ ಗೋಡ್ಸೆ ಹೆಸರಿಡುವುದು ಪಂಚಾಯತ್‌ನ ನಿರ್ಧಾರವಲ್ಲ. ಫಲಕವನ್ನು ಪಂಚಾಯತ್‌ ಹಾಕಿಲ್ಲ, ಯಾರೋ ಖಾಸಗಿ ವ್ಯಕ್ತಿಗಳು ಹಾಕಿದ್ದಾರೆ. ತನಿಖೆ ನಡೆಸಿ, ವಸ್ತುಸ್ಥಿತಿಯನ್ನು ಮುಂದಿಡಲಾಗುತ್ತದೆ” ಎಂದು ಹೇಳಿದ್ದಾರೆ.

ಆ ನಂತರದಲ್ಲಿ ಪಂಚಾಯತ್‌ ಸದಸ್ಯರು, ಕಾಂಗ್ರೆಸ್ ಮುಖಂಡರು, ಅಧಿಕಾರಿಗಳ ನೇತೃತ್ವದಲ್ಲಿ ತೆರಳಿ ಫಲಕ ತೆರವಿಗೆ ಕ್ರಮ ವಹಿಸಿದ್ದಾರೆ.

“ನಾಥೂರಾಮ್‌ ಗೋಡ್ಸೆ ಫಲಕವನ್ನು ಇಂದು ಬೆಳಿಗ್ಗೆ ತೆರವು ಮಾಡಲಾಗಿದೆ” ಎಂದು ಬೋಳ ಗ್ರಾಪಂ ಉಪಾಧ್ಯಕ್ಷ ಕಿರಣ್‌ಕುಮಾರ್ ಶೆಟ್ಟಿಯವರು ‘ನಾನುಗೌರಿ.ಕಾಂ’ಗೆ ತಿಳಿಸಿದ್ದಾರೆ.

ಘಟನೆ ಬೆಳಕಿಗೆ ಬಂದ ತಕ್ಷಣವೇ ಟ್ವೀಟ್ ಮಾಡಿರುವ ಕಾಂಗ್ರೆಸ್ ನಾಯಕ ಪ್ರಕಾಶ್ ರಾಥೋಡ್‌, “ತಾಲಿಬಾನಿಗಳನ್ನು ಬಿಜೆಪಿ ಉಗ್ರಗಾಮಿಗಳು ಎಂದು ಕರೆಯುತ್ತಿತ್ತು. ಭಾರತದಲ್ಲಿ ತಾಲಿಬಾನ್ ನಿಷೇಧಿತ ಸಂಘಟನೆ. ಆದರೆ, ಕೇಂದ್ರ ಸರ್ಕಾರ ಗೋಧಿ, ಔಷಧ, ಹಣ ಮುಂತಾದ ನೆರವನ್ನು ಅಫ್ಘನ್ ಸರ್ಕಾರಕ್ಕೆ ರವಾನೆ ಮಾಡಿ ತಾಲಿಬಾನಿಗಳ ಜತೆ ಸ್ನೇಹ-ಪ್ರೀತಿಯ ಅಪ್ಪುಗೆ ಮಾಡುತ್ತಿದ್ದಂತೆ ಉಡುಪಿಯಲ್ಲಿ ದೇಶದ್ರೋಹಿ ಗೋಡ್ಸೆ ರಸ್ತೆ ತಲೆ ಎತ್ತಿದೆ” ಎಂದು ಆಕ್ರೋಶ ವ್ಯಕ್ತಿಸಿದರು.

ಇದನ್ನೂ ಓದಿರಿ: ಪಠ್ಯ ಪುಸ್ತಕದಲ್ಲಿ ‘ಆಡಿಸಿ ನೋಡು ಬೀಳಿಸಿ ನೋಡು’ ಹಾಡು: ಬರೆದವರ ಹೆಸರನ್ನೇ ಬದಲಿಸಿದ ಚಕ್ರತೀರ್ಥ ಸಮಿತಿ!

“ಮಹಾತ್ಮಗಾಂಧಿಯನ್ನು ಕೊಲ್ಲುವ ಮೂಲಕ ಸ್ವತಂತ್ರ ಭಾರತದಲ್ಲಿ ಭಯೋತ್ಪಾದನೆ ಉದ್ಘಾಟಿಸಿದ ಉಗ್ರ ನಾಥೂ ಗೋಡ್ಸೆ. ಭಾರತೀಯರ ಪಾಲಿಗೆ ಈತ ತಾಲಿಬಾನಿಗಳಿಗಿಂತ ಅತ್ಯುಗ್ರ ಪಾಪಿ. ತಾಲಿಬಾನಿಗಳ ಸ್ನೇಹಕ್ಕೆ ಕೈ ಚಾಚಿದ ಬಳಿಕ ಬಿಜೆಪಿಗೆ ಉಗ್ರರ ಬಗ್ಗೆ ಪ್ರೀತಿ ಹೆಚ್ಚಾಗುತ್ತಿದೆಯೇ?” ಎಂದು ಪ್ರಶ್ನಿಸಿದರು.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

LEAVE A REPLY

Please enter your comment!
Please enter your name here

- Advertisment -

ಇರಾನ್‌ ಹಿಂಸಾಚಾರ : ಸಾವಿನ ಸಂಖ್ಯೆ 116ಕ್ಕೆ ಏರಿಕೆ

ಕಳೆದ ಎರಡು ವಾರಗಳಿಂದ ಇರಾನ್‌ನಲ್ಲಿ ನಡೆಯುತ್ತಿರುವ ಸರ್ಕಾರಿ ವಿರೋಧಿ ಪ್ರತಿಭಟನೆಗಳಲ್ಲಿ ಕನಿಷ್ಠ 116 ಜನರು ಸಾವನ್ನಪ್ಪಿದ್ದಾರೆ. ಅಧಿಕಾರಿಗಳು ಪ್ರತಿಭಟನಾ ನಿರತರ ಮೇಲೆ ಕಠಿಣ ಕ್ರಮದ ಎಚ್ಚರಿಕೆ ನೀಡಿದ್ದಾರೆ ಎಂದು ವರದಿಯಾಗಿದೆ. ಡಿಸೆಂಬರ್ 28ರಂದು ಪ್ರಾರಂಭವಾದ...

ಪಾಕಿಸ್ತಾನದ ಸಿಂಧ್‌ನಲ್ಲಿ 23 ವರ್ಷದ ಹಿಂದೂ ರೈತನನ್ನು ಗುಂಡಿಕ್ಕಿ ಕೊಂದ ಭೂಮಾಲೀಕರು 

ಕರಾಚಿ: ಪಾಕಿಸ್ತಾನದ ಸಿಂಧ್ ಪ್ರಾಂತ್ಯದಲ್ಲಿ 23 ವರ್ಷದ ಹಿಂದೂ ರೈತನೊಬ್ಬ ತನ್ನ ಜಮೀನಿನಲ್ಲಿ ಆಶ್ರಯ ಮನೆ ನಿರ್ಮಿಸಿದ್ದಕ್ಕಾಗಿ ಆತನ ಮನೆ ಮಾಲೀಕರು ಗುಂಡಿಕ್ಕಿ ಕೊಂದಿದ್ದಾರೆ, ಇದು ಹಿಂದೂ ಸಮುದಾಯದಿಂದ ವ್ಯಾಪಕ ಪ್ರತಿಭಟನೆಗೆ ಎಂದು...

ದ್ವೇಷ ಭಾಷಣ ಮಸೂದೆ ರಾಜ್ಯಪಾಲರಿಂದ ತಿರಸ್ಕೃತವಾಗಿಲ್ಲ: ಸಿಎಂ ಸಿದ್ದರಾಮಯ್ಯ

ದ್ವೇಷ ಭಾಷಣ ಮಸೂದೆ ಸರ್ವಾನುಮತದಿಂದ ಅಂಗೀಕಾರವಾಗಿದ್ದು, ರಾಜ್ಯಪಾಲರು ಅದನ್ನು ವಾಪಸ್ ಕಳಿಸಿಲ್ಲ, ತಿರಸ್ಕರಿಸಿಲ್ಲ, ಅಂಕಿತವನ್ನೂ ಹಾಕಿಲ್ಲ. ಅವರು ಕರೆದಾಗ ಈ ಬಗ್ಗೆ ವಿವರಣೆ ನೀಡಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು. ಭಾನುವಾರ (ಜ.11) ಮಂಗಳೂರಿನಲ್ಲಿ...

ಐಸಿಸ್ ಗುರಿ ಮಾಡಿ ಸಿರಿಯಾ ಮೇಲೆ ವೈಮಾನಿಕ ದಾಳಿ ನಡೆಸಿದ ಅಮೆರಿಕ

ಸಿರಿಯಾದ ಇಸ್ಲಾಮಿಕ್ ಸ್ಟೇಟ್ (ಐಎಸ್) ಗುಂಪಿನ ತಾಣಗಳ ಮೇಲೆ ಅಮೆರಿಕ ಮತ್ತು ಅದರ ಪಾಲುದಾರ ಪಡೆಗಳು ದೊಡ್ಡ ಪ್ರಮಾಣದ ದಾಳಿಗಳನ್ನು ನಡೆಸಿವೆ ಎಂದು ಅಮೆರಿಕದ ಸೆಂಟ್ರಲ್ ಕಮಾಂಡ್ (ಸೆಂಟ್‌ಕಾಮ್) ಘೋಷಿಸಿದೆ. ಡಿಸೆಂಬರ್ 13ರಂದು ಸಿರಿಯಾದಲ್ಲಿ...

ವೆನೆಜುವೆಲಾದ ತೈಲ ಖರೀದಿಗೆ ಅಮೆರಿಕದ ಅನುಮತಿ ಪಡೆಯಲು ರಿಲಯನ್ಸ್ ಮಾತುಕತೆ : ವರದಿ

ಭಾರತದ ರಿಲಯನ್ಸ್ ಇಂಡಸ್ಟ್ರೀಸ್ ವೆನೆಜುವೆಲಾದ ಕಚ್ಚಾ ತೈಲ ಖರೀದಿಯನ್ನು ಪುನರಾರಂಭಿಸಲು ಅಮೆರಿಕದ ಅನುಮೋದನೆಯನ್ನು ಕೋರುತ್ತಿದೆ ಎಂದು ಈ ವಿಷಯದ ಬಗ್ಗೆ ಗೊತ್ತಿರುವ ಎರಡು ಮೂಲಗಳು ಶುಕ್ರವಾರ ತಿಳಿಸಿವೆ ಎಂದು ಸುದ್ದಿ ಸಂಸ್ಥೆ ರಾಯಿಟರ್ಸ್...

ಐ-ಪ್ಯಾಕ್‌ ಮೇಲೆ ದಾಳಿ | ಇಡಿ ಅಧಿಕಾರಿಗಳ ವಿರುದ್ಧ ತನಿಖೆ ಪ್ರಾರಂಭಿಸಿದ ಕೋಲ್ಕತ್ತಾ ಪೊಲೀಸರು : ಸುಪ್ರೀಂ ಕೋರ್ಟ್‌ನಲ್ಲಿ ಕೇವಿಯಟ್ ಸಲ್ಲಿಸಿದ ಪ. ಬಂಗಾಳ ಸರ್ಕಾರ

ಐ-ಪ್ಯಾಕ್ ಕಚೇರಿ ಮತ್ತು ಅದರ ಮುಖ್ಯಸ್ಥ ಪ್ರತೀಕ್ ಜೈನ್ ಅವರ ಮನೆ ಮೇಲೆ ಜಾರಿ ನಿರ್ದೇಶನಾಲಯ (ಇಡಿ) ದಾಳಿ ನಡೆಸಿದ ಸಂದರ್ಭದಲ್ಲಿ ದಾಖಲೆಗಳ ಕಳ್ಳತನದ ಆರೋಪದ ಮೇಲೆ ಕೋಲ್ಕತ್ತಾ ಪೊಲೀಸರು ಶನಿವಾರ (ಜ.10)...

ಟ್ರಂಪ್ ಸಂಚಿಗೆ ತಿರುಗೇಟು : ನಾವು ಯಾರ ಅಡಿಯಾಳಾಗಲು ಸಿದ್ದರಿಲ್ಲ ಎಂದ ಗ್ರೀನ್‌ಲ್ಯಾಂಡ್‌ನ ರಾಜಕೀಯ ಪಕ್ಷಗಳು

ವೆನೆಜುವೆಲಾ ಬಳಿಕ ಖನಿಜ-ಸಮೃದ್ಧ ಡ್ಯಾನಿಶ್ (ಡೆನ್ಮಾರ್ಕ್‌) ಸ್ವಾಯತ್ತ ಪ್ರದೇಶವಾದ ಗ್ರೀನ್‌ ಲ್ಯಾಂಡ್‌ ಮೇಲೆ ಬಲಪ್ರಯೋಗ ಮಾಡಲು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಯೋಜಿಸುತ್ತಿದ್ದಾರೆ. ಈ ಬಗ್ಗೆ ಪ್ರತಿಕ್ರಿಯೆ ನೀಡಿರುವ ಗ್ರೀನ್‌ಲ್ಯಾಂಡ್‌ನ ರಾಜಕೀಯ ಪಕ್ಷಗಳು...

ಮತ್ತೆ ಒಂದಾದ ಎನ್‌ಸಿಪಿ ಬಣಗಳು : ಸುಪ್ರಿಯಾ ಸುಳೆ ಜೊತೆ ವೇದಿಕೆ ಹಂಚಿಕೊಂಡ ಅಜಿತ್ ಪವಾರ್, ಜಂಟಿ ಪ್ರಣಾಳಿಕೆ ಬಿಡುಗಡೆ

ಮಹಾರಾಷ್ಟ್ರದ ಉಪಮುಖ್ಯಮಂತ್ರಿ ಅಜಿತ್ ಪವಾರ್ ನೇತೃತ್ವದ ಎನ್‌ಸಿಪಿ ಮತ್ತು ಅವರ ಚಿಕ್ಕಪ್ಪ ಶರದ್ ಪವಾರ್ ನೇತೃತ್ವದ ಎನ್‌ಸಿಪಿ (ಎಸ್‌ಪಿ) ಶನಿವಾರ (ಜ.10) ಪುಣೆ ಮಹಾನಗರ ಪಾಲಿಕೆಗೆ ನಡೆಯಲಿರುವ ಚುನಾವಣೆಗೆ ಜಂಟಿ ಪ್ರಣಾಳಿಕೆಯನ್ನು ಬಿಡುಗಡೆ...

ಮಹಾರಾಷ್ಟ್ರ : ಲೈಂಗಿಕ ದೌರ್ಜನ್ಯ ಪ್ರಕರಣದ ಆರೋಪಿಯನ್ನು ಕೌನ್ಸಿಲರ್ ಮಾಡಿದ ಬಿಜೆಪಿ

ಬದ್ಲಾಪುರ ಲೈಂಗಿಕ ದೌರ್ಜನ್ಯ ಪ್ರಕರಣದ ಸಹ ಆರೋಪಿ ಮತ್ತು ಶಾಲೆಯೊಂದರ ಮಾಜಿ ಕಾರ್ಯದರ್ಶಿ ತುಷಾರ್ ಆಪ್ಟೆ ಎಂಬಾತನನ್ನು ಥಾಣೆ ಜಿಲ್ಲೆಯ ಕುಲ್ಗಾಂವ್-ಬದ್ಲಾಪುರ ಮುನ್ಸಿಪಲ್ ಕೌನ್ಸಿಲ್‌ಗೆ ಬಿಜೆಪಿ ನಾಮನಿರ್ದೇಶನ ಮಾಡಿದೆ. ಮುನ್ಸಿಪಲ್ ಕೌನ್ಸಿಲ್ ಅಧ್ಯಕ್ಷೆ ರುಚಿತಾ...

ಕಳ್ಳನೆಂದು ಸುಳ್ಳಾರೋಪ ಹೊರಿಸಿ ಜೈಲಿಗಟ್ಟಿದ ಪೊಲೀಸರು : ಸಂತ್ರಸ್ತಗೆ 14 ಲಕ್ಷ ರೂ. ಪರಿಹಾರ ನೀಡಲು ಕೋರ್ಟ್ ಆದೇಶ

ಕಳ್ಳನೆಂದು ಸುಳ್ಳಾರೋಪ ಹೊರಿಸಿ ಪೊಲೀಸರು ಜೈಲಿಗಟ್ಟಿದ ವ್ಯಕ್ತಿಗೆ 14 ಲಕ್ಷ ರೂಪಾಯಿ ಪರಿಹಾರ ಒದಗಿಸುವಂತೆ ಕೇರಳ ಸರ್ಕಾರಕ್ಕೆ ಹೈಕೋರ್ಟ್ ಆದೇಶಿಸಿದೆ. ಕಣ್ಣೂರು ಮೂಲದ ವಿ.ಕೆ ತಾಜುದ್ದೀನ್ ಕಾನೂನು ಹೋರಾಟದಲ್ಲಿ ಗೆದ್ದು ಪರಿಹಾರ ಪಡೆದ ವ್ಯಕ್ತಿ....