Homeಕರ್ನಾಟಕಕಾರ್ಕಳ: ಗೋಡ್ಸೆ ಬೋರ್ಡ್ ತೆರವು; ರಸ್ತೆಗೆ ನಾರಾಯಣಗುರುಗಳ ಹೆಸರಿಡುವಂತೆ ಕಾಂಗ್ರೆಸ್ ಆಗ್ರಹ

ಕಾರ್ಕಳ: ಗೋಡ್ಸೆ ಬೋರ್ಡ್ ತೆರವು; ರಸ್ತೆಗೆ ನಾರಾಯಣಗುರುಗಳ ಹೆಸರಿಡುವಂತೆ ಕಾಂಗ್ರೆಸ್ ಆಗ್ರಹ

- Advertisement -
- Advertisement -

ಉಡುಪಿ ಜಿಲ್ಲೆ, ಕಾರ್ಕಳ ತಾಲ್ಲೂಕಿನ ಬೋಳ ಗ್ರಾಮ ಪಂಚಾಯಿತಿಗೆ ಸೇರಿದ ರಸ್ತೆಯೊಂದಕ್ಕೆ ರಾಷ್ಟ್ರಪಿತ ಮಹಾತ್ಮ ಗಾಂಧೀಜಿಯವರನ್ನು ಹತ್ಯೆ ಮಾಡಿದ ‘ನಾಥೂರಾಮ್‌ ಗೋಡ್ಸೆ’ ಹೆಸರನ್ನು ಯಾರೋ ಕಿಡಿಗೇಡಿಗಳು ಇಟ್ಟಿದ್ದು ವಿವಾದದ ಸ್ವರೂಪ ಪಡೆದ ಬೆನ್ನಲ್ಲೇ ಸ್ಥಳೀಯ ಮುಖಂಡರು ಕ್ರಮ ವಹಿಸಿದ್ದಾರೆ.

ಸ್ಥಳಕ್ಕೆ ಧಾವಿಸಿದ ಸ್ಥಳೀಯ ಕಾಂಗ್ರೆಸ್ ಮುಖಂಡರು ಬೋರ್ಡ್ ತೆರವು ಮಾಡಿಸುವಲ್ಲಿ ಯಶಸ್ವಿಯಾಗಿದ್ದು, “ಈ ರಸ್ತೆಗೆ ಗೋಡ್ಸೆ ಹೆಸರಿನ ಬದಲು ಸಮಾಜ ಸುಧಾರಕ ನಾರಾಯಣಗುರುಗಳ ಹೆಸರು ಇಡಬೇಕು” ಎಂದು ಆಗ್ರಹಿಸಿದ್ದಾರೆ.

ಈ ಕುರಿತು ಪ್ರತಿಕ್ರಿಯೆ ನೀಡಿರುವ ಕಾಂಗ್ರೆಸ್ ನಾಯಕ ಬಿ.ಕೆ.ಹರಿಪ್ರಸಾದ್, “ಈ ನೆಲದಲ್ಲಿ ಗೋಡ್ಸೆ ಸಂತತಿಗಳನ್ನ ಬುಡ ಸಮೇತ ಕಿತ್ತು ಹಾಕಬೇಕು. ಅದು ಥೇಟ್ ಕಾರ್ಕಳದ ರಸ್ತೆಗೆ ಇಟ್ಟಿದ್ದ ಗೋಡ್ಸೆಯ ನಾಮಫಲಕವನ್ನ ಕಿತ್ತು ಹಾಕಿದಂತೆ. ನಾಮ ಫಲಕ ತೆರವುಗೊಳಿಸಿ ಅದೇ ಜಾಗದಲ್ಲಿ ಶ್ರೀ ನಾರಾಯಣ ಗುರುಗಳ ಹೆಸರಿಡಲು ಸ್ಥಳೀಯ ಆಡಳಿತಕ್ಕೆ ಮನವಿ ಮಾಡಿರುವ ಯುವ ಕಾಂಗ್ರೆಸ್ ಕಾರ್ಯಕರ್ತರ ಕೆಲಸಕ್ಕೆ ಸಲಾಂ” ಎಂದಿದ್ದಾರೆ.

ಕಾರ್ಕಳ ವಿಧಾನಸಭಾ ಕ್ಷೇತ್ರವನ್ನು ರಾಜ್ಯದ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಚಿವ ಸುನಿಲ್‌ಕುಮಾರ್‌ ಅವರು ಪ್ರತಿನಿಧಿಸುತ್ತಿರುವುದು ವಿವಾದದ ಕೇಂದ್ರ ಸ್ಥಾನ ಪಡೆದ ಬಳಿಕ ‘ಗೋಡ್ಸೆ ರಸ್ತೆ’ ಫಲಕ ತೆರವಾಗಿದೆ.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others

ಯುವ ಕಾಂಗ್ರೆಸ್ ಮುಖಂಡ ದೀಪಕ್‌ ಕೋಟ್ಯಾನ್‌ ಮಾತನಾಡಿ, “ಯಾರೋ ಕಿಡಿಗೇಡಿಗಳು ದೇಶದ ಮೊದಲ ಭಯೋತ್ಪಾದಕ ನಾಥೂರಾಮ್‌ ಗೋಡ್ಸೆ ಹೆಸರನ್ನು ಇಟ್ಟಿದ್ದರು. ಬ್ಲಾಕ್‌ ಕಾಂಗ್ರೆಸ್ ಮುಖಂಡರು ಪ್ರತಿಭಟನೆಯ ಎಚ್ಚರಿಕೆ ನೀಡಿದೆವು. ಇದರಿಂದ ಎಚ್ಚೆತ್ತ ಬೋಳ ಗ್ರಾಪಂ ಪಿಡಿಒ ಹಾಗೂ ಆಡಳಿತ ವರ್ಗ ಬೋರ್ಡ್ ತೆರವುಗೊಳಿಸಿದೆ” ಎಂದು ತಿಳಿಸಿದ್ದಾರೆ.

“ಬೋರ್ಡ್ ಹಾಕುವಂತಹ ಘಟನೆಗಳು ಖಂಡನೀಯ ಹಾಗೂ ಖೇದಕರ. ಬಿಜೆಪಿ ಸರ್ಕಾರದ ಅವಧಿಯಲ್ಲಿ ದೇಶ ಎತ್ತ ಸಾಗುತ್ತಿದೆ? ಯುವಕರಿಗೆ ಎಂತಹ ಸಂದೇಶವನ್ನು ನೀಡುತ್ತಿದ್ದಾರೆ ಎಂಬುದು ಕಳವಳಕಾರಿ ವಿಚಾರವಾಗಿದೆ. ಮುಂದೆ ಏನಾದರೂ ಇದು ಮರುಕಳುಸಿದರೆ ಉಡುಪಿ ಕಾಂಗ್ರೆಸ್‌ ಘಟಕವು ಉಗ್ರ ಹೋರಾಟವನ್ನು ಹಮ್ಮಿಕೊಳ್ಳಲಿದೆ” ಎಂದು ಎಚ್ಚರಿಕೆ ನೀಡಿದ್ದಾರೆ.

“ಬೋಳ ಗ್ರಾಮ ಪಂಚಾಯತ್‌- ಪಡುಗಿರಿ ನಾಥೂರಾಮ್‌ ಗೋಡ್ಸೆ ರಸ್ತೆ” ಎಂದು ಬರೆಯಲಾಗಿರುವ ಮಾರ್ಗಸೂಚಿ ಫಲಕ ಹಾಕಲಾಗಿತ್ತು. ಬೋಳ ಗ್ರಾಮ ಪಂಚಾಯಿತಿ ಅಧ್ಯಕ್ಷರಾದ ಸುಧಾ ಎಸ್.ಪೂಜಾರಿ ಅವರೊಂದಿಗೆ ‘ನಾನುಗೌರಿ.ಕಾಂ’ ಪ್ರತಿನಿಧಿ ಮಾತನಾಡಿದಾಗ, “ಹೌದು ಈ ಫಲಕ ಇರುವುದು ನಿಜ. ಆದರೆ ಯಾರು ಇದನ್ನು ಹಾಕಿದ್ದಾರೆಂಬ ಮಾಹಿತಿ ಇಲ್ಲ. ಯಾರೋ ಖಾಸಗಿ ವ್ಯಕ್ತಿಗಳು ಈ ರೀತಿಯ ಫಲಕವನ್ನು ಪಡುಗಿರಿ ರಸ್ತೆಯಲ್ಲಿ ನೆಟ್ಟಿದ್ದಾರೆ. ಕ್ರಮ ವಹಿಸಲಾಗುವುದು” ಎಂದು ತಿಳಿಸಿದ್ದರು.

ಫಲಕ ಹಾಕಿದ್ದ ಘಟನೆ ಬಗ್ಗೆ ಸಚಿವ ಸುನೀಲ್‌ ಕುಮಾರ್ ಪ್ರತಿಕ್ರಿಯಿಸಿದ್ದು, “ಫಲಕ ಹಾಕುವುದು ಅಥವಾ ಗೋಡ್ಸೆ ಹೆಸರಿಡುವುದು ಪಂಚಾಯತ್‌ನ ನಿರ್ಧಾರವಲ್ಲ. ಫಲಕವನ್ನು ಪಂಚಾಯತ್‌ ಹಾಕಿಲ್ಲ, ಯಾರೋ ಖಾಸಗಿ ವ್ಯಕ್ತಿಗಳು ಹಾಕಿದ್ದಾರೆ. ತನಿಖೆ ನಡೆಸಿ, ವಸ್ತುಸ್ಥಿತಿಯನ್ನು ಮುಂದಿಡಲಾಗುತ್ತದೆ” ಎಂದು ಹೇಳಿದ್ದಾರೆ.

ಆ ನಂತರದಲ್ಲಿ ಪಂಚಾಯತ್‌ ಸದಸ್ಯರು, ಕಾಂಗ್ರೆಸ್ ಮುಖಂಡರು, ಅಧಿಕಾರಿಗಳ ನೇತೃತ್ವದಲ್ಲಿ ತೆರಳಿ ಫಲಕ ತೆರವಿಗೆ ಕ್ರಮ ವಹಿಸಿದ್ದಾರೆ.

“ನಾಥೂರಾಮ್‌ ಗೋಡ್ಸೆ ಫಲಕವನ್ನು ಇಂದು ಬೆಳಿಗ್ಗೆ ತೆರವು ಮಾಡಲಾಗಿದೆ” ಎಂದು ಬೋಳ ಗ್ರಾಪಂ ಉಪಾಧ್ಯಕ್ಷ ಕಿರಣ್‌ಕುಮಾರ್ ಶೆಟ್ಟಿಯವರು ‘ನಾನುಗೌರಿ.ಕಾಂ’ಗೆ ತಿಳಿಸಿದ್ದಾರೆ.

ಘಟನೆ ಬೆಳಕಿಗೆ ಬಂದ ತಕ್ಷಣವೇ ಟ್ವೀಟ್ ಮಾಡಿರುವ ಕಾಂಗ್ರೆಸ್ ನಾಯಕ ಪ್ರಕಾಶ್ ರಾಥೋಡ್‌, “ತಾಲಿಬಾನಿಗಳನ್ನು ಬಿಜೆಪಿ ಉಗ್ರಗಾಮಿಗಳು ಎಂದು ಕರೆಯುತ್ತಿತ್ತು. ಭಾರತದಲ್ಲಿ ತಾಲಿಬಾನ್ ನಿಷೇಧಿತ ಸಂಘಟನೆ. ಆದರೆ, ಕೇಂದ್ರ ಸರ್ಕಾರ ಗೋಧಿ, ಔಷಧ, ಹಣ ಮುಂತಾದ ನೆರವನ್ನು ಅಫ್ಘನ್ ಸರ್ಕಾರಕ್ಕೆ ರವಾನೆ ಮಾಡಿ ತಾಲಿಬಾನಿಗಳ ಜತೆ ಸ್ನೇಹ-ಪ್ರೀತಿಯ ಅಪ್ಪುಗೆ ಮಾಡುತ್ತಿದ್ದಂತೆ ಉಡುಪಿಯಲ್ಲಿ ದೇಶದ್ರೋಹಿ ಗೋಡ್ಸೆ ರಸ್ತೆ ತಲೆ ಎತ್ತಿದೆ” ಎಂದು ಆಕ್ರೋಶ ವ್ಯಕ್ತಿಸಿದರು.

ಇದನ್ನೂ ಓದಿರಿ: ಪಠ್ಯ ಪುಸ್ತಕದಲ್ಲಿ ‘ಆಡಿಸಿ ನೋಡು ಬೀಳಿಸಿ ನೋಡು’ ಹಾಡು: ಬರೆದವರ ಹೆಸರನ್ನೇ ಬದಲಿಸಿದ ಚಕ್ರತೀರ್ಥ ಸಮಿತಿ!

“ಮಹಾತ್ಮಗಾಂಧಿಯನ್ನು ಕೊಲ್ಲುವ ಮೂಲಕ ಸ್ವತಂತ್ರ ಭಾರತದಲ್ಲಿ ಭಯೋತ್ಪಾದನೆ ಉದ್ಘಾಟಿಸಿದ ಉಗ್ರ ನಾಥೂ ಗೋಡ್ಸೆ. ಭಾರತೀಯರ ಪಾಲಿಗೆ ಈತ ತಾಲಿಬಾನಿಗಳಿಗಿಂತ ಅತ್ಯುಗ್ರ ಪಾಪಿ. ತಾಲಿಬಾನಿಗಳ ಸ್ನೇಹಕ್ಕೆ ಕೈ ಚಾಚಿದ ಬಳಿಕ ಬಿಜೆಪಿಗೆ ಉಗ್ರರ ಬಗ್ಗೆ ಪ್ರೀತಿ ಹೆಚ್ಚಾಗುತ್ತಿದೆಯೇ?” ಎಂದು ಪ್ರಶ್ನಿಸಿದರು.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

LEAVE A REPLY

Please enter your comment!
Please enter your name here

- Advertisment -

ಪ್ರತಿಭಟನೆ ಭೀತಿ : ಸಿಜೆಐ ಸೂರ್ಯಕಾಂತ್ ಭಾಗವಹಿಸಬೇಕಿದ್ದ ಘಟಿಕೋತ್ಸವ ದಿಢೀರ್ ಮುಂದೂಡಿದ TISS

ಮುಂಬೈನ ಟಾಟಾ ಇನ್‌ಸ್ಟಿಟ್ಯೂಟ್ ಆಫ್ ಸೋಷಿಯಲ್ ಸೈನ್ಸಸ್ (ಟಿಐಎಸ್‌ಎಸ್‌) ಸಂಸ್ಥೆಯು ಆಗಸ್ಟ್ 2ರಂದು ನಡೆಸಲು ನಿಗದಿಪಡಿಸಿದ್ದ ತನ್ನ 86ನೇ ವಾರ್ಷಿಕ ಘಟಿಕೋತ್ಸವವನ್ನು ದಿಢೀರ್ ಮುಂದೂಡಿದೆ. ಕ್ಯಾಂಪಸ್ ಭದ್ರತೆಯ ಬಗೆಗಿನ ಕಳವಳಗಳು ಮತ್ತು ವಿದ್ಯಾರ್ಥಿಗಳ...

ಪ್ರಧಾನಿಗಳೇ ನಿಮ್ಮ ರೀಲ್‌ಗಳನ್ನು ಅಂಧಭಕ್ತರು ಮೆಚ್ಚಬಹುದು, ಆದರೆ ಇತಿಹಾಸ ನಿಮ್ಮನ್ನು ಕ್ಷಮಿಸುವುದಿಲ್ಲ: ಬಿ.ಕೆ. ಹರಿಪ್ರಸಾದ್

ಪ್ರಧಾನಿ ನರೇಂದ್ರ ಮೋದಿ ಬಿಡುಗಡೆ ಮಾಡಿರುವ ಇತ್ತೀಚಿನ ವಿಡಿಯೋ (ರೀಲ್) ಕುರಿತು ಕಾಂಗ್ರೆಸ್ ಹಿರಿಯ ನಾಯಕ ಮತ್ತು ಕೆಪಿಸಿಸಿ ಅಧ್ಯಕ್ಷರಾದ ಬಿ.ಕೆ. ಹರಿಪ್ರಸಾದ್ ತೀವ್ರ ವಾಗ್ದಾಳಿ ನಡೆಸಿದ್ದಾರೆ. ತಾನು ಮಾಡಿದರೆ ರಾಜತಂತ್ರ, ಬೇರೆಯವರು...

ಪ್ರಧಾನಿ ಮೋದಿ ವಿರುದ್ಧ ನಿಂದನೆ: ನನಗೆ ಕೇವಲ 15 ವರ್ಷ ‘ಅನ್ಯರ ಪ್ರಭಾವಕ್ಕೆ ಒಳಗಾಗಿದ್ದೆ’ ಎಂದು ಕ್ಷಮೆ ಕೇಳಿದ ವಿದ್ಯಾರ್ಥಿನಿ ವಿಡಿಯೋ ವೈರಲ್

ಪ್ರಧಾನಮಂತ್ರಿ ನರೇಂದ್ರ ಮೋದಿ ಅವರ ವಿರುದ್ಧ ಆಕ್ಷೇಪಾರ್ಹ ಹೇಳಿಕೆ ನೀಡಿ ಭಾರಿ ಆಕ್ರೋಶಕ್ಕೆ ಗುರಿಯಾಗಿದ್ದ ಸಿಜೆಪಿ (CJP) ಪ್ರತಿಭಟನಾಕಾರ ಯುವತಿಯೊಬ್ಬಳು ಸೋಶಿಯಲ್ ಮೀಡಿಯಾದಲ್ಲಿ ಕ್ಷಮೆಯಾಚಿಸಿದ್ದಾಳೆ ಎನ್ನಲಾದ ವೀಡಿಯೊವೊಂದು ಹರಿದಾಡುತ್ತಿದೆ. ಸಾಮಾಜಿಕ ಮಾಧ್ಯಮಗಳಲ್ಲಿ ವೈರಲ್...

ಸ್ಪೇನ್‌ಗೆ ನುಗ್ಗಿದ ಸಾವಿರಾರು ಮೊರಾಕನ್ನರು : ಬೃಹತ್ ವಲಸೆಯ ಹಿಂದೆ ಇಸ್ರೇಲ್ ಕುತಂತ್ರ?

ಮೊರಾಕೊದಿಂದ ಸ್ಪೇನ್‌ನ ಸಿಯುಟಾ ನಗರಕ್ಕೆ ಸಾವಿರಾರು ವಲಸಿಗರು ನುಗ್ಗಿದ ಬಿಕ್ಕಟ್ಟಿನ ಹಿಂದೆ ಇಸ್ರೇಲ್ ಕೈವಾಡವಿದೆ ಎಂಬ ಆರೋಪಗಳು ಕೇಳಿ ಬಂದಿದ್ದು, ಸಾಮಾಜಿಕ ಜಾಲತಾಣಗಳಲ್ಲಿ ಇಸ್ರೇಲ್‌ನ ಕುತಂತ್ರ ಬುದ್ದಿಯ ಬಗ್ಗೆ ಭಾರೀ ಚರ್ಚೆಗಳು ನಡೆಯುತ್ತಿವೆ. ಇದೇ...

‘ಸಾವರ್ಕರ್ ದೇವರನ್ನು, ಧಾರ್ಮಿಕ ನಂಬಿಕೆಗಳನ್ನು ಪ್ರಶ್ನಿಸಿದ್ದರು’: ಪುಣೆ ನ್ಯಾಯಾಲಯದಲ್ಲಿ ಮೊಮ್ಮಗ ಸತ್ಯಕಿ ಸಾವರ್ಕರ್ ಒಪ್ಪಿಗೆ

ಪುಣೆ: ಕಾಂಗ್ರೆಸ್ ನಾಯಕ ಹಾಗೂ ಸಂಸತ್ತಿನ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯ ವಿಚಾರಣೆಯು ಅತ್ಯಂತ ಕುತೂಹಲಕಾರಿ ಮತ್ತು ರಾಜಕೀಯ-ಸೈದ್ಧಾಂತಿಕ ತಿರುವನ್ನು ಪಡೆದುಕೊಂಡಿದೆ. ವಿನಾಯಕ ದಾಮೋದರ್...

ಮಾಜಿ ಸಚಿವ ಧರ್ಮೇಂದ್ರ ಪ್ರಧಾನ್ ಮಗಳ ಫೋನ್ ಬಿಲ್ ವಿವಾದ: ₹68 ಸಾವಿರ ಬಿಲ್-ಪೇ ಆಗಿದ್ದು ಸರ್ಕಾರಿ ಹಣದಲ್ಲಾ?

ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ಪುತ್ರಿ ನೈಮಿಷಾ ಪ್ರಧಾನ್ ಅವರು ಮತ್ತೊಮ್ಮೆ ವಿವಾದದ ಕೇಂದ್ರಬಿಂದುವಾಗಿದ್ದಾರೆ. ವಾರಗಳ ಹಿಂದೆ ನೀಟ್ ಪರೀಕ್ಷೆಯ ಪತ್ರಿಕೆ ಸೋರಿಕೆ ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ...

ಇರಾನ್ ವಸತಿ ಕಟ್ಟಡದ ಮೇಲೆ ಅಮೆರಿಕಾ ದಾಳಿ: ಎರಡು ವರ್ಷದ ಮಗು ಸೇರಿ ಒಂದೇ ಕುಟುಂಬದ ಮೂವರ ಸಾವು

ಮಧ್ಯಪ್ರಾಚ್ಯದಲ್ಲಿ ಅಮೆರಿಕ ತನ್ನ ಸಾಮ್ರಾಜ್ಯಶಾಹಿ ಆಧಿಪತ್ಯ ಸ್ಥಾಪನೆಗಾಗಿ ನಡೆಸುತ್ತಿರುವ ಯುದ್ಧಕೋರ ನೀತಿ ಮತ್ತೊಮ್ಮೆ ನಿರಪರಾಧಿ ಸಾರ್ವಜನಿಕರ ರಕ್ತ ಹರಿಸಿದೆ. ಇರಾನ್ ಮೇಲಿನ ಅಮೆರಿಕ ಪಡೆಗಳ ಸರಣಿ ಮತ್ತು ಭೀಕರ ಬಾಂಬ್ ದಾಳಿಗಳು ಕೇವಲ...

SIR: ASDDO ಪಟ್ಟಿಯಲ್ಲಿ ಬೆಂಗಳೂರಿಗೆ ಪ್ರಥಮ ಸ್ಥಾನ, ರಾಜ್ಯದಲ್ಲಿ 2 ಕೋಟಿ ಮತದಾರರ ಹೆಸರು ರದ್ದಾಗುವ ಬೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ರಾಜಧಾನಿ ಬೆಂಗಳೂರು ಅತ್ಯಂತ ಪ್ರಮುಖ ಹಾಗೂ ಕಳವಳಕಾರಿ ಕೇಂದ್ರವಾಗಿ ಹೊರಹೊಮ್ಮಿದೆ. ರಾಜ್ಯದಲ್ಲಿರುವ ಒಟ್ಟು 5.54 ಕೋಟಿ ನೋಂದಾಯಿತ ಮತದಾರರ ಪೈಕಿ...

ಉಮರ್ ಖಾಲಿದ್ ಜಾಮೀನು ಅರ್ಜಿ; ಪೊಲೀಸರ ನಿಲುವು ಕೇಳಿದ ದೆಹಲಿ ಹೈಕೋರ್ಟ್

ಫೆಬ್ರವರಿ 2020 ರಲ್ಲಿ ಈಶಾನ್ಯ ದೆಹಲಿಯಲ್ಲಿ ನಡೆದ ಗಲಭೆಯ ಹಿಂದಿನ "ದೊಡ್ಡ ಪಿತೂರಿ"ಗೆ ಸಂಬಂಧಿಸಿದಂತೆ ಭಯೋತ್ಪಾದನಾ ವಿರೋಧಿ ಕಾನೂನು ಯುಎಪಿಎ ಅಡಿಯಲ್ಲಿ ಪ್ರಕರಣದಲ್ಲಿ ಜಾಮೀನು ಕೋರಿ ಉಮರ್ ಖಾಲಿದ್ ಸಲ್ಲಿಸಿದ ಅರ್ಜಿಯ ಕುರಿತು...

ಮುಂಬೈ: ‘ಶಾಲಾ ಜಿಹಾದ್’ ಎಂಬ ಬಿಜೆಪಿ ನಾಯಕನ ಕೋಮುದ್ವೇಷಕ್ಕೆ ಶಾಲೆಗೆ ನುಗ್ಗಿದ ಬುಲ್ಡೋಜರ್: ಬಿಎಂಸಿಗೆ ಚಾಟಿ ಬೀಸಿದ ಬಾಂಬೆ ಹೈಕೋರ್ಟ್

ಬಿಜೆಪಿ ನಾಯಕ ಕಿರೀಟ್ ಸೋಮಯ್ಯ ಅವರ “ಶಾಲಾ ಜಿಹಾದ್” ಎಂಬ ವಿಷಕಾರಿ ಹೇಳಿಕೆಯ ನಂತರ ಮುಂಬೈನ ಗೋವಂಡಿಯಲ್ಲಿ ಬಡ ಮುಸ್ಲಿಂ ಮಕ್ಕಳ ಶಿಕ್ಷಣದ ಆಶಾಕಿರಣವಾಗಿದ್ದ ತೆಹ್ಜೀಬ್ ಇಸ್ಲಾಮಿಕ್ ಇಂಗ್ಲಿಷ್ ಶಾಲೆಯನ್ನು ಬೃಹನ್ಮುಂಬೈ ಮುನ್ಸಿಪಲ್...