Homeಕರ್ನಾಟಕಕಾರ್ಕಳ: ಗೋಡ್ಸೆ ಬೋರ್ಡ್ ತೆರವು; ರಸ್ತೆಗೆ ನಾರಾಯಣಗುರುಗಳ ಹೆಸರಿಡುವಂತೆ ಕಾಂಗ್ರೆಸ್ ಆಗ್ರಹ

ಕಾರ್ಕಳ: ಗೋಡ್ಸೆ ಬೋರ್ಡ್ ತೆರವು; ರಸ್ತೆಗೆ ನಾರಾಯಣಗುರುಗಳ ಹೆಸರಿಡುವಂತೆ ಕಾಂಗ್ರೆಸ್ ಆಗ್ರಹ

- Advertisement -
- Advertisement -

ಉಡುಪಿ ಜಿಲ್ಲೆ, ಕಾರ್ಕಳ ತಾಲ್ಲೂಕಿನ ಬೋಳ ಗ್ರಾಮ ಪಂಚಾಯಿತಿಗೆ ಸೇರಿದ ರಸ್ತೆಯೊಂದಕ್ಕೆ ರಾಷ್ಟ್ರಪಿತ ಮಹಾತ್ಮ ಗಾಂಧೀಜಿಯವರನ್ನು ಹತ್ಯೆ ಮಾಡಿದ ‘ನಾಥೂರಾಮ್‌ ಗೋಡ್ಸೆ’ ಹೆಸರನ್ನು ಯಾರೋ ಕಿಡಿಗೇಡಿಗಳು ಇಟ್ಟಿದ್ದು ವಿವಾದದ ಸ್ವರೂಪ ಪಡೆದ ಬೆನ್ನಲ್ಲೇ ಸ್ಥಳೀಯ ಮುಖಂಡರು ಕ್ರಮ ವಹಿಸಿದ್ದಾರೆ.

ಸ್ಥಳಕ್ಕೆ ಧಾವಿಸಿದ ಸ್ಥಳೀಯ ಕಾಂಗ್ರೆಸ್ ಮುಖಂಡರು ಬೋರ್ಡ್ ತೆರವು ಮಾಡಿಸುವಲ್ಲಿ ಯಶಸ್ವಿಯಾಗಿದ್ದು, “ಈ ರಸ್ತೆಗೆ ಗೋಡ್ಸೆ ಹೆಸರಿನ ಬದಲು ಸಮಾಜ ಸುಧಾರಕ ನಾರಾಯಣಗುರುಗಳ ಹೆಸರು ಇಡಬೇಕು” ಎಂದು ಆಗ್ರಹಿಸಿದ್ದಾರೆ.

ಈ ಕುರಿತು ಪ್ರತಿಕ್ರಿಯೆ ನೀಡಿರುವ ಕಾಂಗ್ರೆಸ್ ನಾಯಕ ಬಿ.ಕೆ.ಹರಿಪ್ರಸಾದ್, “ಈ ನೆಲದಲ್ಲಿ ಗೋಡ್ಸೆ ಸಂತತಿಗಳನ್ನ ಬುಡ ಸಮೇತ ಕಿತ್ತು ಹಾಕಬೇಕು. ಅದು ಥೇಟ್ ಕಾರ್ಕಳದ ರಸ್ತೆಗೆ ಇಟ್ಟಿದ್ದ ಗೋಡ್ಸೆಯ ನಾಮಫಲಕವನ್ನ ಕಿತ್ತು ಹಾಕಿದಂತೆ. ನಾಮ ಫಲಕ ತೆರವುಗೊಳಿಸಿ ಅದೇ ಜಾಗದಲ್ಲಿ ಶ್ರೀ ನಾರಾಯಣ ಗುರುಗಳ ಹೆಸರಿಡಲು ಸ್ಥಳೀಯ ಆಡಳಿತಕ್ಕೆ ಮನವಿ ಮಾಡಿರುವ ಯುವ ಕಾಂಗ್ರೆಸ್ ಕಾರ್ಯಕರ್ತರ ಕೆಲಸಕ್ಕೆ ಸಲಾಂ” ಎಂದಿದ್ದಾರೆ.

ಕಾರ್ಕಳ ವಿಧಾನಸಭಾ ಕ್ಷೇತ್ರವನ್ನು ರಾಜ್ಯದ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಚಿವ ಸುನಿಲ್‌ಕುಮಾರ್‌ ಅವರು ಪ್ರತಿನಿಧಿಸುತ್ತಿರುವುದು ವಿವಾದದ ಕೇಂದ್ರ ಸ್ಥಾನ ಪಡೆದ ಬಳಿಕ ‘ಗೋಡ್ಸೆ ರಸ್ತೆ’ ಫಲಕ ತೆರವಾಗಿದೆ.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others

ಯುವ ಕಾಂಗ್ರೆಸ್ ಮುಖಂಡ ದೀಪಕ್‌ ಕೋಟ್ಯಾನ್‌ ಮಾತನಾಡಿ, “ಯಾರೋ ಕಿಡಿಗೇಡಿಗಳು ದೇಶದ ಮೊದಲ ಭಯೋತ್ಪಾದಕ ನಾಥೂರಾಮ್‌ ಗೋಡ್ಸೆ ಹೆಸರನ್ನು ಇಟ್ಟಿದ್ದರು. ಬ್ಲಾಕ್‌ ಕಾಂಗ್ರೆಸ್ ಮುಖಂಡರು ಪ್ರತಿಭಟನೆಯ ಎಚ್ಚರಿಕೆ ನೀಡಿದೆವು. ಇದರಿಂದ ಎಚ್ಚೆತ್ತ ಬೋಳ ಗ್ರಾಪಂ ಪಿಡಿಒ ಹಾಗೂ ಆಡಳಿತ ವರ್ಗ ಬೋರ್ಡ್ ತೆರವುಗೊಳಿಸಿದೆ” ಎಂದು ತಿಳಿಸಿದ್ದಾರೆ.

“ಬೋರ್ಡ್ ಹಾಕುವಂತಹ ಘಟನೆಗಳು ಖಂಡನೀಯ ಹಾಗೂ ಖೇದಕರ. ಬಿಜೆಪಿ ಸರ್ಕಾರದ ಅವಧಿಯಲ್ಲಿ ದೇಶ ಎತ್ತ ಸಾಗುತ್ತಿದೆ? ಯುವಕರಿಗೆ ಎಂತಹ ಸಂದೇಶವನ್ನು ನೀಡುತ್ತಿದ್ದಾರೆ ಎಂಬುದು ಕಳವಳಕಾರಿ ವಿಚಾರವಾಗಿದೆ. ಮುಂದೆ ಏನಾದರೂ ಇದು ಮರುಕಳುಸಿದರೆ ಉಡುಪಿ ಕಾಂಗ್ರೆಸ್‌ ಘಟಕವು ಉಗ್ರ ಹೋರಾಟವನ್ನು ಹಮ್ಮಿಕೊಳ್ಳಲಿದೆ” ಎಂದು ಎಚ್ಚರಿಕೆ ನೀಡಿದ್ದಾರೆ.

“ಬೋಳ ಗ್ರಾಮ ಪಂಚಾಯತ್‌- ಪಡುಗಿರಿ ನಾಥೂರಾಮ್‌ ಗೋಡ್ಸೆ ರಸ್ತೆ” ಎಂದು ಬರೆಯಲಾಗಿರುವ ಮಾರ್ಗಸೂಚಿ ಫಲಕ ಹಾಕಲಾಗಿತ್ತು. ಬೋಳ ಗ್ರಾಮ ಪಂಚಾಯಿತಿ ಅಧ್ಯಕ್ಷರಾದ ಸುಧಾ ಎಸ್.ಪೂಜಾರಿ ಅವರೊಂದಿಗೆ ‘ನಾನುಗೌರಿ.ಕಾಂ’ ಪ್ರತಿನಿಧಿ ಮಾತನಾಡಿದಾಗ, “ಹೌದು ಈ ಫಲಕ ಇರುವುದು ನಿಜ. ಆದರೆ ಯಾರು ಇದನ್ನು ಹಾಕಿದ್ದಾರೆಂಬ ಮಾಹಿತಿ ಇಲ್ಲ. ಯಾರೋ ಖಾಸಗಿ ವ್ಯಕ್ತಿಗಳು ಈ ರೀತಿಯ ಫಲಕವನ್ನು ಪಡುಗಿರಿ ರಸ್ತೆಯಲ್ಲಿ ನೆಟ್ಟಿದ್ದಾರೆ. ಕ್ರಮ ವಹಿಸಲಾಗುವುದು” ಎಂದು ತಿಳಿಸಿದ್ದರು.

ಫಲಕ ಹಾಕಿದ್ದ ಘಟನೆ ಬಗ್ಗೆ ಸಚಿವ ಸುನೀಲ್‌ ಕುಮಾರ್ ಪ್ರತಿಕ್ರಿಯಿಸಿದ್ದು, “ಫಲಕ ಹಾಕುವುದು ಅಥವಾ ಗೋಡ್ಸೆ ಹೆಸರಿಡುವುದು ಪಂಚಾಯತ್‌ನ ನಿರ್ಧಾರವಲ್ಲ. ಫಲಕವನ್ನು ಪಂಚಾಯತ್‌ ಹಾಕಿಲ್ಲ, ಯಾರೋ ಖಾಸಗಿ ವ್ಯಕ್ತಿಗಳು ಹಾಕಿದ್ದಾರೆ. ತನಿಖೆ ನಡೆಸಿ, ವಸ್ತುಸ್ಥಿತಿಯನ್ನು ಮುಂದಿಡಲಾಗುತ್ತದೆ” ಎಂದು ಹೇಳಿದ್ದಾರೆ.

ಆ ನಂತರದಲ್ಲಿ ಪಂಚಾಯತ್‌ ಸದಸ್ಯರು, ಕಾಂಗ್ರೆಸ್ ಮುಖಂಡರು, ಅಧಿಕಾರಿಗಳ ನೇತೃತ್ವದಲ್ಲಿ ತೆರಳಿ ಫಲಕ ತೆರವಿಗೆ ಕ್ರಮ ವಹಿಸಿದ್ದಾರೆ.

“ನಾಥೂರಾಮ್‌ ಗೋಡ್ಸೆ ಫಲಕವನ್ನು ಇಂದು ಬೆಳಿಗ್ಗೆ ತೆರವು ಮಾಡಲಾಗಿದೆ” ಎಂದು ಬೋಳ ಗ್ರಾಪಂ ಉಪಾಧ್ಯಕ್ಷ ಕಿರಣ್‌ಕುಮಾರ್ ಶೆಟ್ಟಿಯವರು ‘ನಾನುಗೌರಿ.ಕಾಂ’ಗೆ ತಿಳಿಸಿದ್ದಾರೆ.

ಘಟನೆ ಬೆಳಕಿಗೆ ಬಂದ ತಕ್ಷಣವೇ ಟ್ವೀಟ್ ಮಾಡಿರುವ ಕಾಂಗ್ರೆಸ್ ನಾಯಕ ಪ್ರಕಾಶ್ ರಾಥೋಡ್‌, “ತಾಲಿಬಾನಿಗಳನ್ನು ಬಿಜೆಪಿ ಉಗ್ರಗಾಮಿಗಳು ಎಂದು ಕರೆಯುತ್ತಿತ್ತು. ಭಾರತದಲ್ಲಿ ತಾಲಿಬಾನ್ ನಿಷೇಧಿತ ಸಂಘಟನೆ. ಆದರೆ, ಕೇಂದ್ರ ಸರ್ಕಾರ ಗೋಧಿ, ಔಷಧ, ಹಣ ಮುಂತಾದ ನೆರವನ್ನು ಅಫ್ಘನ್ ಸರ್ಕಾರಕ್ಕೆ ರವಾನೆ ಮಾಡಿ ತಾಲಿಬಾನಿಗಳ ಜತೆ ಸ್ನೇಹ-ಪ್ರೀತಿಯ ಅಪ್ಪುಗೆ ಮಾಡುತ್ತಿದ್ದಂತೆ ಉಡುಪಿಯಲ್ಲಿ ದೇಶದ್ರೋಹಿ ಗೋಡ್ಸೆ ರಸ್ತೆ ತಲೆ ಎತ್ತಿದೆ” ಎಂದು ಆಕ್ರೋಶ ವ್ಯಕ್ತಿಸಿದರು.

ಇದನ್ನೂ ಓದಿರಿ: ಪಠ್ಯ ಪುಸ್ತಕದಲ್ಲಿ ‘ಆಡಿಸಿ ನೋಡು ಬೀಳಿಸಿ ನೋಡು’ ಹಾಡು: ಬರೆದವರ ಹೆಸರನ್ನೇ ಬದಲಿಸಿದ ಚಕ್ರತೀರ್ಥ ಸಮಿತಿ!

“ಮಹಾತ್ಮಗಾಂಧಿಯನ್ನು ಕೊಲ್ಲುವ ಮೂಲಕ ಸ್ವತಂತ್ರ ಭಾರತದಲ್ಲಿ ಭಯೋತ್ಪಾದನೆ ಉದ್ಘಾಟಿಸಿದ ಉಗ್ರ ನಾಥೂ ಗೋಡ್ಸೆ. ಭಾರತೀಯರ ಪಾಲಿಗೆ ಈತ ತಾಲಿಬಾನಿಗಳಿಗಿಂತ ಅತ್ಯುಗ್ರ ಪಾಪಿ. ತಾಲಿಬಾನಿಗಳ ಸ್ನೇಹಕ್ಕೆ ಕೈ ಚಾಚಿದ ಬಳಿಕ ಬಿಜೆಪಿಗೆ ಉಗ್ರರ ಬಗ್ಗೆ ಪ್ರೀತಿ ಹೆಚ್ಚಾಗುತ್ತಿದೆಯೇ?” ಎಂದು ಪ್ರಶ್ನಿಸಿದರು.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

LEAVE A REPLY

Please enter your comment!
Please enter your name here

- Advertisment -

ಪ.ಬಂಗಾಳ ಎಸ್‌ಐಆರ್‌ : ದೇಶ ಕಾದ ಯೋಧನಿಂದ ತೀರ್ಪು ಕೊಟ್ಟ ನ್ಯಾಯಾಧೀಶರವರೆಗೆ.. ಮತ ಹಕ್ಕು ಕಳೆದುಕೊಂಡ ಲಕ್ಷಾಂತರ ಜನರು

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ದೇಶದಲ್ಲಿ ಪ್ರಸ್ತುತ ಚರ್ಚೆಯಲ್ಲಿರುವ ಪ್ರಮುಖ ವಿಚಾರ. ಹಲವು ಗೊಂದಲಗಳ ನಡುವೆ ಮೊದಲ ಹಂತದಲ್ಲಿ ಬಿಹಾರದಲ್ಲಿ ಎಸ್‌ಐಆರ್‌ ಪೂರ್ತಿಗೊಳಿಸಿದ ಚುನಾವಣಾ ಆಯೋಗ, ನಂತರ ಅಲ್ಲಿ ವಿಧಾನಸಭಾ...

ತೆಲಂಗಾಣ ಜಾತಿ ಸಮೀಕ್ಷೆ: ಜನರ ಆರ್ಥಿಕ ಭವಿಷ್ಯ ನಿರ್ಧರಿಸುತ್ತಿರುವ ಜಾತಿ ಹಿನ್ನೆಲೆ

ತೆಲಂಗಾಣದಲ್ಲಿರುವ ಎಲ್ಲಾ ಪರಿಶಿಷ್ಟ ಜಾತಿ ಕಾರ್ಮಿಕರಲ್ಲಿ ಸುಮಾರು ಅರ್ಧದಷ್ಟು ಜನರು ದಿನಗೂಲಿ ಕಾರ್ಮಿಕರು. ಆದರೆ, ಸಾಮಾನ್ಯ ಜಾತಿ ಕಾರ್ಮಿಕರಲ್ಲಿ 10 ರಲ್ಲಿ ಒಬ್ಬರು ಮಾತ್ರ ದಿನಗೂಲಿ ಮಾಡುತ್ತಾರೆ. ಬ್ರಾಹ್ಮಣರು ಎಸ್‌ಟಿ ಸಮುದಾಯದ ಕೋಲಂಗಿಂತ...

ಲೆಬನಾನ್‌ನಲ್ಲಿ ಯೇಸುವಿನ ಪ್ರತಿಮೆ ಧ್ವಂಸ ಮಾಡಿದ ಇಸ್ರೇಲಿ ಸೈನಿಕ; ಫೋಟೋ ವೈರಲ್

ಇಸ್ರೇಲಿ ಸೈನಿಕನೊಬ್ಬ ದಕ್ಷಿಣ ಲೆಬನಾನ್‌ನಲ್ಲಿ ಸ್ಲೆಡ್ಜ್ ಹ್ಯಾಮರ್‌ನಿಂದ ಯೇಸುಕ್ರಿಸ್ತನ ಪ್ರತಿಮೆಯನ್ನು ಧ್ವಂಸ ಮಾಡುತ್ತಿರುವುದನ್ನು ತೋರಿಸುವ ವೈರಲ್ ಚಿತ್ರದ ಸತ್ಯಾಸತ್ಯತೆಯನ್ನು ಇಸ್ರೇಲ್ ರಕ್ಷಣಾ ಪಡೆಗಳು (ಐಡಿಎಫ್‌) ದೃಢಪಡಿಸಿದ್ದು, ವ್ಯಾಪಕ ಆಕ್ರೋಶಕ್ಕೆ ಕಾರಣವಾಗಿದೆ. ಎಕ್ಸ್ ನಲ್ಲಿ 6.8...

TCS ನಾಸಿಕ್ ಪ್ರಕರಣ : ಮಾಧ್ಯಮಗಳ ಸುಳ್ಳು ಮತ್ತು ಕಂಪನಿ ಹೇಳಿದ ಸತ್ಯ

ಮಹಾರಾಷ್ಟ್ರದ ನಾಸಿಕ್‌ನಲ್ಲಿರುವ ಟಾಟಾ ಕನ್ಸಲ್ಟೆನ್ಸಿ ಸರ್ವಿಸಸ್ (ಟಿಸಿಎಸ್‌) ಕಂಪನಿಯ ಬಿಪಿಒ ಘಟಕದಲ್ಲಿ ನಡೆದಿದೆ ಎನ್ನಲಾದ ಪ್ರಕರಣವೊಂದು ಪ್ರಸ್ತುತ ಇಡೀ ದೇಶದಾದ್ಯಂತ ಭಾರೀ ಚರ್ಚೆಯ ವಿಷಯವಾಗಿದೆ. ಈ ಪ್ರಕರಣದಲ್ಲಿ ಮುಖ್ಯವಾಗಿ ಲೈಂಗಿಕ ಕಿರುಕುಳ ಮತ್ತು...

‘ಅಮೆರಿಕದೊಂದಿಗೆ ಮಾತುಕತೆ ಇಲ್ಲ..’; ಇಸ್ಲಾಮಾಬಾದ್‌ ಸಭೆಯಲ್ಲಿ ಇರಾನ್ ಭಾಗವಹಿಸುವುದು ಅನುಮಾನ

ಯುನೈಟೆಡ್ ಸ್ಟೇಟ್ಸ್ (ಅಮೆರಿಕ) ಜೊತೆ ಹೊಸ ಸುತ್ತಿನ ಮಾತುಕತೆಗಾಗಿ ಇಸ್ಲಾಮಾಬಾದ್‌ಗೆ ಸಂಧಾನಕಾರರನ್ನು ಕಳುಹಿಸುವ ಯಾವುದೇ ಯೋಜನೆ ಇಲ್ಲ ಎಂದು ಇರಾನ್ ಸೂಚಿಸಿದೆ. ಕದನ ವಿರಾಮ ಮುಕ್ತಾಯಗೊಳ್ಳಲು 48 ಗಂಟೆಗಳ ಮೊದಲು ಯುದ್ಧ ನಿರತ...

ಇರಾನ್, ಇಸ್ರೇಲ್-ಅಮೆರಿಕ ಯುದ್ಧ : ವಿನಾಶದ ನಡುವೆಯೂ ಲಾಭ ಪಡೆದವರು ಯಾರು?

ಅಂತಾರಾಷ್ಟ್ರೀಯ ಹಣಕಾಸು ನಿಧಿ (ಐಎಂಎಫ್‌) 2026ರ ಜಾಗತಿಕ ಬೆಳವಣಿಗೆಯ ಅಂದಾಜನ್ನು ಶೇಕಡ 3.3 ರಿಂದ 3.1ಕ್ಕೆ ಇಳಿಸಿದೆ. ಇರಾನ್ ವಿರುದ್ಧದ ಅಮೆರಿಕ-ಇಸ್ರೇಲ್ ಯುದ್ಧದ ಪರಿಣಾಮ ಮತ್ತು ಹಾರ್ಮುಝ್ ಜಲಸಂಧಿಯನ್ನು ಮುಚ್ಚಿರುವುದು ವಿಶ್ವ ಆರ್ಥಿಕತೆಯ...

ಕ್ಷೇತ್ರ ಮರುವಿಂಗಡಣೆ ವಿರುದ್ಧ ದಕ್ಷಿಣದ ರಾಜ್ಯಗಳ ಪಟ್ಟು: ಭವಿಷ್ಯದ ಮರುಚಿಂತನೆಗೆ ಇದುವೇ ಸೂಕ್ತ ಕಾಲ

ಲೋಕಸಭೆಯಲ್ಲಿ 131 ನೇ ಸಾಂವಿಧಾನಿಕ ತಿದ್ದುಪಡಿ ಮಸೂದೆಯನ್ನು ತಿರಸ್ಕರಿಸಿರುವುದು ಭಾರತದ ಪ್ರಜಾಪ್ರಭುತ್ವ ಪಥದಲ್ಲಿ ಮಹತ್ವದ ಕ್ಷಣವಾಗಿದೆ. ಇದು ಕೇವಲ ಶಾಸಕಾಂಗದ ಹಿನ್ನಡೆಯನ್ನು ಮಾತ್ರವಲ್ಲ, ಒಕ್ಕೂಟ ವ್ಯವಸ್ಥೆಯ ಸೂಕ್ಷ್ಮ ಸಮತೋಲನವನ್ನು ಹಾಳುಮಾಡುವ ಅಪಾಯವನ್ನುಂಟುಮಾಡುವ ಪ್ರಸ್ತಾಪಗಳ...

ಮೋದಿ ಸರ್ಕಾರದ ಯೂಟರ್ನ್ : ಜನಸಂಖ್ಯಾ ಸ್ಫೋಟದ ಕಳವಳದಿಂದ ಹೆಚ್ಚು ಜನಸಂಖ್ಯೆಯ ರಾಜ್ಯಗಳಿಗೆ ಗಿಫ್ಟ್ ಕೊಡುವವರೆಗೆ

ಭಾರತದ ಜನಸಂಖ್ಯೆಯ ಬಗ್ಗೆ ಪ್ರಧಾನಮಂತ್ರಿ ನರೇಂದ್ರ ಮೋದಿ ಮತ್ತು ಅವರ ಸರ್ಕಾರ ನಿಜವಾಗಿಯೂ ಬಹಳ ಕಳವಳ ವ್ಯಕ್ತಪಡಿಸುತ್ತಿದೆ– ಅಥವಾ ಅವರು ನಮಗೆ ಆ ರೀತಿ ನಂಬುವಂತೆ ಮಾಡಿದ್ದಾರೆ. ಏಕೆಂದರೆ... 2019ರ ಸ್ವಾತಂತ್ರ್ಯ ದಿನಾಚರಣೆಯಂದು ಮೋದಿಯವರು,...

ದೇಶವನ್ನುದ್ದೇಶಿಸಿ ಮೋದಿ ಭಾಷಣ : ಚುನಾವಣಾ ನೀತಿ ಸಂಹಿತೆಯ ಉಲ್ಲಂಘನೆ

ಕ್ಷೇತ್ರ ಮರುವಿಂಗಡನೆಗೆ ಉದ್ದೇಶಿಸಿದ್ದ ಸಂವಿಧಾನದ 131ನೇ ತಿದ್ದುಪಡಿ ಮಸೂದೆಗೆ ಲೋಕಸಭೆಯಲ್ಲಿ ಸೋಲಾದ ಬೆನ್ನಲ್ಲೇ ಶನಿವಾರ (ಏ.18) ದೇಶವನ್ನುದ್ದೇಶಿಸಿ ಮಾತನಾಡಿದ ಪ್ರಧಾನಿ ನರೇಂದ್ರ ಮೋದಿ, ಪ್ರತಿಪಕ್ಷಗಳ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ದು, ಸಂಸತ್ತಿನಲ್ಲಿ ವಿರೋಧ...

ಫ್ಯಾಕ್ಟ್‌ಚೆಕ್ : ಅತ್ಯಾಚಾರ ಅಪರಾಧಿ ಪರ ವಕೀಲೆಗೆ ಟಿಎಂಸಿಯಿಂದ ರಾಜ್ಯಸಭೆ ಸೀಟ್; ಬಿಜೆಪಿ ಆರೋಪದ ಸತ್ಯಾಸತ್ಯತೆ ಏನು?

ಪಶ್ಚಿಮ ಬಂಗಾಳ ವಿಧಾನಸಭೆ ಚುನಾವಣೆಗೆ ಪಾಣಿಹತಿ ಕ್ಷೇತ್ರದಿಂದ ಬಿಜೆಪಿ ಅಭ್ಯರ್ಥಿಯಾಗಿರುವ ಆರ್‌ಜಿ ಕರ್‌ ಸಂತ್ರಸ್ತೆಯ ತಾಯಿ ಮತ್ತು ವಕೀಲೆ ಹಾಗೂ ತೃಣಮೂಲ ಕಾಂಗ್ರೆಸ್ (ಟಿಎಂಸಿ) ರಾಜ್ಯಸಭಾ ಸದಸ್ಯೆ ಮೇನಕಾ ಗುರುಸ್ವಾಮಿ ಅವರ ಎಐ-ರಚಿತ...