Homeಕರ್ನಾಟಕಕಾರ್ಕಳ: ರಸ್ತೆಗೆ ಗೋಡ್ಸೆ ಹೆಸರು; ಬೋರ್ಡ್ ತೆರವು ಮಾಡಿಸಿದ ಕಾಂಗ್ರೆಸ್ ಮುಖಂಡರು

ಕಾರ್ಕಳ: ರಸ್ತೆಗೆ ಗೋಡ್ಸೆ ಹೆಸರು; ಬೋರ್ಡ್ ತೆರವು ಮಾಡಿಸಿದ ಕಾಂಗ್ರೆಸ್ ಮುಖಂಡರು

- Advertisement -
- Advertisement -

ಉಡುಪಿ ಜಿಲ್ಲೆ, ಕಾರ್ಕಳ ತಾಲ್ಲೂಕಿನ ಬೋಳ ಗ್ರಾಮ ಪಂಚಾಯಿತಿಗೆ ಸೇರಿದ ರಸ್ತೆಯೊಂದಕ್ಕೆ ರಾಷ್ಟ್ರಪಿತ ಮಹಾತ್ಮ ಗಾಂಧೀಜಿಯವರನ್ನು ಹತ್ಯೆ ಮಾಡಿದ ‘ನಾಥೂರಾಮ್‌ ಗೋಡ್ಸೆ’ ಹೆಸರನ್ನು ಯಾರೋ ಕಿಡಿಗೇಡಿಗಳು ಇಟ್ಟಿದ್ದು ವಿವಾದ ಸ್ವರೂಪ ಪಡೆದ ಬೆನ್ನಲ್ಲೇ ಸ್ಥಳೀಯ ಮುಖಂಡರು ಕ್ರಮ ವಹಿಸಿದ್ದಾರೆ.

ಕಾರ್ಕಳ ವಿಧಾನಸಭಾ ಕ್ಷೇತ್ರವನ್ನು ರಾಜ್ಯದ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಚಿವ ಸುನಿಲ್‌ಕುಮಾರ್‌ ಅವರು ಪ್ರತಿನಿಧಿಸುತ್ತಿರುವುದು ವಿವಾದದ ಕೇಂದ್ರ ಸ್ಥಾನ ಪಡೆದ ಬಳಿಕ ‘ಗೋಡ್ಸೆ ರಸ್ತೆ’ ಫಲಕ ತೆರವಾಗಿದೆ.

“ಬೋಳ ಗ್ರಾಮ ಪಂಚಾಯತ್‌- ಪಡುಗಿರಿ ನಾಥೂರಾಮ್‌ ಗೋಡ್ಸೆ ರಸ್ತೆ” ಎಂದು ಬರೆಯಲಾಗಿರುವ ಮಾರ್ಗಸೂಚಿ ಫಲಕ ಹಾಕಲಾಗಿತ್ತು. ಬೋಳ ಗ್ರಾಮ ಪಂಚಾಯಿತಿ ಅಧ್ಯಕ್ಷರಾದ ಸುಧಾ ಎಸ್.ಪೂಜಾರಿ ಅವರೊಂದಿಗೆ ‘ನಾನುಗೌರಿ.ಕಾಂ’ ಪ್ರತಿನಿಧಿ ಮಾತನಾಡಿದಾಗ, “ಹೌದು ಈ ಫಲಕ ಇರುವುದು ನಿಜ. ಆದರೆ ಯಾರು ಇದನ್ನು ಹಾಕಿದ್ದಾರೆಂಬ ಮಾಹಿತಿ ಇಲ್ಲ. ಯಾರೋ ಖಾಸಗಿ ವ್ಯಕ್ತಿಗಳು ಈ ರೀತಿಯ ಫಲಕವನ್ನು ಪಡುಗಿರಿ ರಸ್ತೆಯಲ್ಲಿ ನೆಟ್ಟಿದ್ದಾರೆ. ಕ್ರಮ ವಹಿಸಲಾಗುವುದು” ಎಂದು ತಿಳಿಸಿದ್ದರು.

ಫಲಕ ಹಾಕಿದ್ದ ಘಟನೆ ಬಗ್ಗೆ ಸಚಿವ ಸುನೀಲ್‌ ಕುಮಾರ್ ಪ್ರತಿಕ್ರಿಯಿಸಿದ್ದು, “ಫಲಕ ಹಾಕುವುದು ಅಥವಾ ಗೋಡ್ಸೆ ಹೆಸರಿಡುವುದು ಪಂಚಾಯತ್‌ನ ನಿರ್ಧಾರವಲ್ಲ. ಫಲಕವನ್ನು ಪಂಚಾಯತ್‌ ಹಾಕಿಲ್ಲ, ಯಾರೋ ಖಾಸಗಿ ವ್ಯಕ್ತಿಗಳು ಹಾಕಿದ್ದಾರೆ. ತನಿಖೆ ನಡೆಸಿ, ವಸ್ತುಸ್ಥಿತಿಯನ್ನು ಮುಂದಿಡಲಾಗುತ್ತದೆ” ಎಂದು ಹೇಳಿದ್ದಾರೆ.

ಆ ನಂತರದಲ್ಲಿ ಪಂಚಾಯತ್‌ ಸದಸ್ಯರು, ಕಾಂಗ್ರೆಸ್ ಮುಖಂಡರು, ಅಧಿಕಾರಿಗಳ ನೇತೃತ್ವದಲ್ಲಿ ತೆರಳಿ ಫಲಕ ತೆರವಿಗೆ ಕ್ರಮ ವಹಿಸಿದ್ದಾರೆ.

“ನಾಥೂರಾಮ್‌ ಗೋಡ್ಸೆ ಫಲಕವನ್ನು ಇಂದು ಬೆಳಿಗ್ಗೆ ತೆರವು ಮಾಡಲಾಗಿದೆ” ಎಂದು ಬೋಳ ಗ್ರಾಪಂ ಉಪಾಧ್ಯಕ್ಷ ಕಿರಣ್‌ಕುಮಾರ್ ಶೆಟ್ಟಿಯವರು ‘ನಾನುಗೌರಿ.ಕಾಂ’ಗೆ ತಿಳಿಸಿದ್ದಾರೆ.

ಸ್ಥಳಕ್ಕೆ ಆಗಮಿಸಿದ ಯುವ ಕಾಂಗ್ರೆಸ್ ಮುಖಂಡರು ಪ್ರತಿಭಟನೆಯ ಎಚ್ಚರಿಕೆಯನ್ನು ನೀಡಿದ್ದರು.

ಯುವ ಕಾಂಗ್ರೆಸ್ ಮುಖಂಡ ದೀಪಕ್‌ ಕೋಟ್ಯಾನ್‌ ಮಾತನಾಡಿ, “ಯಾರೋ ಕಿಡಿಗೇಡಿಗಳು ದೇಶದ ಮೊದಲ ಭಯೋತ್ಪಾದಕ ನಾಥೂರಾಮ್‌ ಗೋಡ್ಸೆ ಹೆಸರನ್ನು ಯಾರೋ ಇಟ್ಟಿದ್ದರು. ಬ್ಲಾಕ್‌ ಕಾಂಗ್ರೆಸ್ ಮುಖಂಡರು ಪ್ರತಿಭಟನೆಯ ಎಚ್ಚರಿಕೆ ನೀಡಿದೆವು. ಇದರಿಂದ ಎಚ್ಚೆತ್ತ ಬೋಳ ಗ್ರಾಪಂ ಪಿಡಿಒ ಹಾಗೂ ಆಡಳಿತ ವರ್ಗ ಬೋರ್ಡ್ ತೆರವುಗೊಳಿಸಿದೆ” ಎಂದು ತಿಳಿಸಿದ್ದಾರೆ.

“ಬೋರ್ಡ್ ಹಾಕುವಂತಹ ಘಟನೆಗಳು ಖಂಡನೀಯ ಹಾಗೂ ಖೇದಕರ. ಬಿಜೆಪಿ ಸರ್ಕಾರದ ಅವಧಿಯಲ್ಲಿ ದೇಶ ಎತ್ತ ಸಾಗುತ್ತಿದೆ? ಯುವಕರಿಗೆ ಎಂತಹ ಸಂದೇಶವನ್ನು ನೀಡುತ್ತಿದ್ದಾರೆ ಎಂಬುದು ಕಳವಳಕಾರಿ ವಿಚಾರವಾಗಿದೆ. ಮುಂದೆ ಏನಾದರೂ ಇದು ಮರುಕಳುಸಿದರೆ ಉಡುಪಿ ಕಾಂಗ್ರೆಸ್‌ ಘಟಕವು ಉಗ್ರ ಹೋರಾಟವನ್ನು ಹಮ್ಮಿಕೊಳ್ಳಲಿದೆ” ಎಂದು ಎಚ್ಚರಿಕೆ ನೀಡಿದ್ದಾರೆ.

ಕಾಂಗ್ರೆಸ್ ನಾಯಕರಾದ ಬಿ.ಕೆ.ಹರಿಪ್ರಸಾದ್‌ ಪ್ರತಿಕ್ರಿಯೆ ನೀಡಿದ್ದು, “ಈ ನೆಲದಲ್ಲಿ ಗೋಡ್ಸೆ ಸಂತತಿಗಳನ್ನ ಬುಡ ಸಮೇತ ಕಿತ್ತು ಹಾಕಬೇಕು. ಅದು ಥೇಟ್ ಕಾರ್ಕಳದ ರಸ್ತೆಗೆ ಇಟ್ಟಿದ್ದ ಗೋಡ್ಸೆಯ ನಾಮಫಲಕವನ್ನ ಕಿತ್ತು ಹಾಕಿದಂತೆ. ನಾಮ ಫಲಕ ತೆರವುಗೊಳಿಸಿ ಅದೇ ಜಾಗದಲ್ಲಿ ಶ್ರೀ ನಾರಾಯಣ ಗುರುಗಳ ಹೆಸರಿಡಲು ಸ್ಥಳೀಯ ಆಡಳಿತಕ್ಕೆ ಮನವಿ ಮಾಡಿರುವ ಯುವ ಕಾಂಗ್ರೆಸ್ ಕಾರ್ಯಕರ್ತರ ಕೆಲಸಕ್ಕೆ ಸಲಾಂ” ಎಂದಿದ್ದಾರೆ.

ಘಟನೆ ಬೆಳಕಿಗೆ ಬಂದ ತಕ್ಷಣ ಟ್ವೀಟ್ ಮಾಡಿರುವ ಕಾಂಗ್ರೆಸ್ ನಾಯಕ ಪ್ರಕಾಶ್ ರಾಥೋಡ್‌, “ತಾಲಿಬಾನಿಗಳನ್ನು ಬಿಜೆಪಿ ಉಗ್ರಗಾಮಿಗಳು ಎಂದು ಕರೆಯುತ್ತಿತ್ತು. ಭಾರತದಲ್ಲಿ ತಾಲಿಬಾನ್ ನಿಷೇಧಿತ ಸಂಘಟನೆ. ಆದರೆ, ಕೇಂದ್ರ ಸರ್ಕಾರ ಗೋಧಿ, ಔಷಧ, ಹಣ ಮುಂತಾದ ನೆರವನ್ನು ಅಫ್ಘನ್ ಸರ್ಕಾರಕ್ಕೆ ರವಾನೆ ಮಾಡಿ ತಾಲಿಬಾನಿಗಳ ಜತೆ ಸ್ನೇಹ-ಪ್ರೀತಿಯ ಅಪ್ಪುಗೆ ಮಾಡುತ್ತಿದ್ದಂತೆ ಉಡುಪಿಯಲ್ಲಿ ದೇಶದ್ರೋಹಿ ಗೋಡ್ಸೆ ರಸ್ತೆ ತಲೆ ಎತ್ತಿದೆ” ಎಂದಿದ್ದಾರೆ.

ಇದನ್ನೂ ಓದಿರಿ: ಪಠ್ಯ ಪುಸ್ತಕದಲ್ಲಿ ‘ಆಡಿಸಿ ನೋಡು ಬೀಳಿಸಿ ನೋಡು’ ಹಾಡು: ಬರೆದವರ ಹೆಸರನ್ನೇ ಬದಲಿಸಿದ ಚಕ್ರತೀರ್ಥ ಸಮಿತಿ!

“ಮಹಾತ್ಮಗಾಂಧಿಯನ್ನು ಕೊಲ್ಲುವ ಮೂಲಕ ಸ್ವತಂತ್ರ ಭಾರತದಲ್ಲಿ ಭಯೋತ್ಪಾದನೆ ಉದ್ಘಾಟಿಸಿದ ಉಗ್ರ ನಾಥೂ ಗೋಡ್ಸೆ. ಭಾರತೀಯರ ಪಾಲಿಗೆ ಈತ ತಾಲಿಬಾನಿಗಳಿಗಿಂತ ಅತ್ಯುಗ್ರ ಪಾಪಿ. ತಾಲಿಬಾನಿಗಳ ಸ್ನೇಹಕ್ಕೆ ಕೈ ಚಾಚಿದ ಬಳಿಕ ಬಿಜೆಪಿಗೆ ಉಗ್ರರ ಬಗ್ಗೆ ಪ್ರೀತಿ ಹೆಚ್ಚಾಗುತ್ತಿದೆಯೇ?” ಎಂದು ಪ್ರಶ್ನಿಸಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

  1. ತಕ್ಷಣ ಎಚ್ಚೆತ್ತು ಫಲಕ ಕಿತ್ತೆಸೆದ ಎಲ್ಲರೂ ಅಭಿನಂದನಾರ್ಹರು! ಹೀಗೆ ಬಿಟ್ಟರೆ ಒಂದು ದಿನ, ನರಹಂತಕ ವೀರಪ್ಪನ್ ನಿಂದ ಹಿಡಿದು ನರಭಕ್ಷಕ ಇದೀ ಅಮೀನ್ ವರೆಗೆ ಎಲ್ಲಾ ಜನದ್ರೋಹಿಗಳೂ ನಾಗರೀಕ ಸಮಾಜದಲ್ಲಿ ಸ್ಮರಣೆಯ ಸ್ಥಾನ ಪಡೆಯುತ್ತಾರೆ – ‘ಚಕ್ರ’ದಿಂದ ‘ತೀರ್ಥ’ ಬಂದಂತೆ!

LEAVE A REPLY

Please enter your comment!
Please enter your name here

- Advertisment -

ಸಂವಿಧಾನದ ಬುಡಕ್ಕೆ ಕೊಡಲಿ ಏಟು: ಆರ್‌ಎಸ್‌ಎಸ್-ಬಿಜೆಪಿಯ ಷಡ್ಯಂತ್ರ ಸೋಲಿಸಲು ಎರಡನೇ ಸ್ವಾತಂತ್ರ್ಯ ಸಂಗ್ರಾಮ ಅನಿವಾರ್ಯ – ಬಿ.ಕೆ. ಹರಿಪ್ರಸಾದ್

ಎಸ್‌ಐಆರ್ (SIR) ವಿರೋಧಿ ಹೋರಾಟದಲ್ಲಿ ನಮ್ಮ ಪಕ್ಷ ನಿಮ್ಮ ಜೊತೆಗಿದೆ ಎಂದು ಹೇಳಲು ಸರ್ಕಾರದ ಪ್ರತಿನಿಧಿಯಾಗಿ ನಾನು ಇಲ್ಲಿ ಬಂದಿದ್ದೇನೆ. ನೀವು ಮಂಡಿಸಿರುವ ಹಕ್ಕೊತ್ತಾಯಗಳ ಕುರಿತು ನೂತನ ಮುಖ್ಯಮಂತ್ರಿಗಳು, ಸಿದ್ದರಾಮಯ್ಯ ಸೇರಿದಂತೆ ಪಕ್ಷದ...

ಮತದಾರರ ಪಟ್ಟಿಯಿಂದ 65 ಲಕ್ಷ ಜನರನ್ನು ಹೊರಹಾಕಿದ್ದು ಯಾರು? ಈ ಅಕ್ರಮಕ್ಕೆ ಚುನಾವಣಾ ಆಯೋಗವೇ ಉತ್ತರಿಸಬೇಕು: ಮೊಹಮ್ಮದ್ ಯೂಸುಫ್ ಕನ್ನಿ

"ಬ್ರಿಟಿಷರ ವಿರುದ್ಧ ಹೋರಾಡಿ ದೇಶಕ್ಕೆ ಸ್ವಾತಂತ್ರ್ಯ ತಂದುಕೊಟ್ಟಿದ್ದೇವೆ. 1952ರ ಮೊದಲ ಚುನಾವಣೆಯ ಸಂದರ್ಭದಲ್ಲಿ ಸುಮಾರು 17.32 ಕೋಟಿ ಮತದಾರರಿದ್ದರು. 1955ರಲ್ಲಿ ಸಿಟಿಜನ್‌ಶಿಪ್ ಆಕ್ಟ್ ಜಾರಿಯಾದ ಬಳಿಕ ನಡೆದ 1957ರ ಚುನಾವಣೆಯಲ್ಲಿ ಈ ಸಂಖ್ಯೆ...

ಸರ್ಕಾರ-ನ್ಯಾಯಾಂಗ ವ್ಯವಸ್ಥೆ ಕೈಬಿಟ್ಟರೆ ರಾಜ್ಯದ ಜನ ಅನಾಥರಾಗುತ್ತಾರೆ : ಹಿರಿಯ ಸಾಹಿತಿ ಬಿ.ಟಿ. ಲಲಿತಾ ನಾಯ್ಕ್

ಎಸ್‌ಐಆರ್‌ ವಿಚಾರದಲ್ಲಿ ಇಂದು ನಾಡಿನ ಜನತೆ ಭೀಕರ ಸಂಕಷ್ಟದಲ್ಲಿದ್ದಾರೆ. ಈ ಗೊಂದಲವನ್ನು ಉಂಟು ಮಾಡಿದವರು ಯಾರು? ಕೇಂದ್ರ ಸರ್ಕಾರವೋ ಅಥವಾ ಕರ್ನಾಟಕ ಸರ್ಕಾರದ ಅಲಕ್ಷ್ಯ ಇದಕ್ಕೆ ಕಾರಣವೇ? ಅಥವಾ ನಮಗೆ ಸಂಬಂಧವೇ ಇಲ್ಲ...

ಎಸ್ಐಆರ್ ಹೆಸರಿನಲ್ಲಿ ನಡೆಯುತ್ತಿರುವ ಜನವಿರೋಧಿ ಹುನ್ನಾರಗಳನ್ನು ಸೋಲಿಸಬೇಕಿದೆ: ಎಸ್. ವರಲಕ್ಷ್ಮಿ

ಬೆಂಗಳೂರು: ರಾಜ್ಯಾದ್ಯಂತ ಎಸ್ಐಆರ್ (SIR) ವಿರುದ್ಧ ನಡೆಯುತ್ತಿರುವ ಸಮಾವೇಶವು ಆಕ್ರಮಣಕಾರಿ ಧೋರಣೆಯ ವಿರುದ್ಧದ ಬೃಹತ್ ಪ್ರತಿರೋಧವಾಗಿದೆ ಎಂದು ಸಿಐಟಿಯು ರಾಜ್ಯ ಪ್ರಧಾನ ಕಾರ್ಯದರ್ಶಿ ಎಸ್. ವರಲಕ್ಷ್ಮಿ ತಿಳಿಸಿದರು. ಎಸ್ಐಆರ್ ಸಮಸ್ಯೆಯಲ್ಲ ಎಂದು ಬಿಂಬಿಸುವ ಸಂಘಪರಿವಾರದವರ...

ಮತದಾನ ನಮ್ಮ ಜನ್ಮಸಿದ್ದ ಹಕ್ಕು, ಎಸ್‌ಐಆರ್ ಕುರಿತು ಜನ ಜಾಗೃತಿ ಅಗತ್ಯ: ಪೀಟರ್ ಮಚಾಡೋ

'ಮತದಾನ ನಮ್ಮ ಜನ್ಮಸಿದ್ದ ಹಕ್ಕು ಅದನ್ನು ನಾವು ಬಿಟ್ಟು ಕೊಡುವುದಿಲ್ಲ' ಎಂದು ಕರ್ನಾಟಕ ಕ್ರೈಸ್ತ ಸಮುದಾಯದ ಮಹಾ ಧರ್ಮಾಧ್ಯಕ್ಷ ರೆವೆಂಡರ್ ಫಾದರ್ ಪೀಟರ್ ಮಚಾಡೋ ಹೇಳಿದರು. ಬೆಂಗಳೂರಿನ ಫ್ರೀಡಂ ಪಾರ್ಕ್‌ನಲ್ಲಿ...

ಸುರಿವ ಮಳೆಯಲ್ಲಿಯೂ ಎಸ್‌ಐಆರ್ ವಿರೋಧಿ ಜಾಥಾಕ್ಕೆ ಜೊತೆಯಾದ ಮಳವಳ್ಳಿ, ಮದ್ದೂರು, ಮಂಡ್ಯ ಜನತೆ

ಮಂಡ್ಯ: ಮಳವಳ್ಳಿಯ ಬಸ್ ನಿಲ್ದಾಣದ ಬಳಿ ಸುರಿವ ಮಳೆಯಲ್ಲಿಯೂ 'ಎಸ್‌ಐಆರ್ (SIR) ವಿರೋಧಿ ಕರ್ನಾಟಕ' ಜಾಥಾಕ್ಕೆ ಹೋರಾಟಗಾರರು, ಬರಹಗಾರರು, ಜನಚಳವಳಿಗಳ ಮುಖಂಡರು ಹಾಗೂ ಪ್ರಗತಿಪರರು ಬೆಂಬಲ ವ್ಯಕ್ತಪಡಿಸಿದರು‌. ಈ ವೇಳೆ ಎಸ್‌ಐಆರ್ ಕುರಿತು ಮಾತನಾಡಿದ...

ಚಿತ್ರದುರ್ಗದಲ್ಲಿ ಸಮಾರೋಪಗೊಂಡ ಮಾರ್ಗ -3 SIR ವಿರೋಧಿ ಜನಜಾಗೃತಿ ಜಾಥ: ಜೂನ್ 20ರ ಸಮಾವೇಶದ ಯಶಸ್ಸಿಗೆ ಕರೆ

ಚುನಾವಣಾ ಆಯೋಗ ಜಾರಿಗೆ ತರಲು ಹೊರಟಿರುವ ಎಸ್‌ಐಆರ್ (SIR) ವ್ಯವಸ್ಥೆಯನ್ನು ವಿರೋಧಿಸಿ ಹಮ್ಮಿಕೊಳ್ಳಲಾಗಿದ್ದ ‘ಎಸ್‌ಐಆರ್ ವಿರೋಧಿ ಜನಜಾಗೃತಿ ಜಾಥಾ’ವು ದಾವಣಗೆರೆಯಲ್ಲಿ ಪ್ರಚಾರ ಮುಗಿಸಿ ಚಿತ್ರದುರ್ಗವನ್ನು ತಲುಪಿದ್ದು, ಇಲ್ಲಿ ಯಶಸ್ವಿಯಾಗಿ ಸಮಾರೋಪಗೊಂಡಿದೆ. ಎದ್ದೇಳು ಕರ್ನಾಟಕ,...

ಗದಗ | ಮನುವಾದದ ಜಾರಿಗೆ ಎಸ್‌ಐಆರ್‌ ಹೇರಿಕೆ : ಡಾ.ಇಸಾಬೆಲ್ಲ ಝೇವಿಯರ್

ದೇಶದಲ್ಲಿ ಮನುವಾದ ಜಾರಿಗೆ ತರುವುದು ಆರ್‌ಎಸ್‌ಎಸ್‌-ಸಂಘಪರಿವಾರದ ಮೂಲ ಉದ್ದೇಶ, ಅದಕ್ಕಾಗಿ ಜನರ ಮೇಲೆ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ಯಂತಹ ಹೊಸ ಹೊಸ ಪ್ರಕ್ರಿಯೆಗಳನ್ನು ಹೇರಲಾಗುತ್ತಿದೆ ಎಂದು ಸಾಮಾಜಿಕ ಹೋರಾಟಗಾರ್ತಿ...

ಸಂವಿಧಾನ ವಿರೋಧಿ ‘SIR’ಗೆ ಹರಿಹರದಲ್ಲಿ ತೀವ್ರ ವಿರೋಧ: ಜನಜಾಗೃತಿ ಜಾಥಾದ ಮೂಲಕ ಕೇಂದ್ರ ಸರ್ಕಾರದ ವಿರುದ್ಧ ನಾಗರಿಕರ ಆಕ್ರೋಶ

ದಾವಣಗೆರೆ ಜಿಲ್ಲೆಯ ಹರಿಹರ ತಾಲ್ಲೂಕಿನಲ್ಲಿ ಇತ್ತೀಚೆಗೆ ಕೇಂದ್ರ ಚುನಾವಣಾ ಆಯೋಗದ 'SIR' (ವಿಶೇಷ ಗುರುತಿನ ಪರಿಶೀಲನೆ/ಮರುಪರಿಶೀಲನಾ ಕ್ರಮ) ಯೋಜನೆ ವಿರುದ್ಧ ಬೃಹತ್ ಜನಜಾಗೃತಿ ಜಾಥಾ ಯಶಸ್ವಿಯಾಗಿ ಸಂಚರಿಸಿತು. ಸಾರ್ವಜನಿಕರಲ್ಲಿ ಈ ಯೋಜನೆಯ ಕುರಿತು...

“ಎಸ್ಐಆರ್ ಮೂಲಕ ಮನುವಾದದ ಜಾರಿಗೆ ಕುತಂತ್ರ ರೂಪಿಸುತ್ತಿರುವ ಬಿಜೆಪಿ ಗೆಲ್ಲಲು ಬಿಡುವುದಿಲ್ಲ”:  ಮೈಸೂರಿನಲ್ಲಿ ಜನಾಕ್ರೋಶ

2026 ಜೂನ್ 16 ರಂದು ಹುಣುಸೂರು, ಹೆಚ್.ಡಿ ಕೋಟೆ, ಮೈಸೂರಿನಲ್ಲಿ ಸಾಗಿದ ಎಸ್ಐಆರ್ ವಿರೋಧಿ ಕರ್ನಾಟಕ ಜಾಥಾಕ್ಕೆ ಹುಣುಸೂರಿನ ಸಂವಿಧಾನ ಸರ್ಕಲ್ ನಿಂದ ಅಭೂತಪೂರ್ವ ಬೆಂಬಲ ಸಿಕ್ಕಿತು. ಬೆಳಗ್ಗೆ 8 ಗಂಟೆ ಸುಮಾರಿಗೆ ಎಸ್ಐಆರ್...