Homeಕರ್ನಾಟಕಕಾರ್ಕಳ ಶಾಸಕ ಸುನಿಲ್ ಕುಮಾರ್ ಬಂಗಲೆಗೆ ಸಿಮೆಂಟ್ ಎಲ್ಲಿಯದು?: ಈ ವಿಡಿಯೋವನ್ನು ಸುಳ್ಳೆನ್ನಲು ಸಾಧ್ಯವೇ?

ಕಾರ್ಕಳ ಶಾಸಕ ಸುನಿಲ್ ಕುಮಾರ್ ಬಂಗಲೆಗೆ ಸಿಮೆಂಟ್ ಎಲ್ಲಿಯದು?: ಈ ವಿಡಿಯೋವನ್ನು ಸುಳ್ಳೆನ್ನಲು ಸಾಧ್ಯವೇ?

ಈಗಾಗಲೇ ಈ ಬಂಗಲೆಗೆ 3 ಸಾವಿರ ಸಿಮೆಂಟ್ ಚೀಲ ಬಳಸಲಾಗಿದೆ. ವಿಡಿಯೋದಲ್ಲಿ ನಿರ್ಮಾಣ ಹಂತದಲ್ಲಿರುವ ಬಂಗಲೆಯಲ್ಲಿರುವ ಅಲ್ಟ್ರಾಟೆಕ್ ಕಂಪನಿಯ ಸಿಮೆಂಟ್ ಚೀಲಗಳ ಮೇಲೆ ’ನಾಟ್ ಫಾರ್ ಸೇಲ್’ ಎಂದು ಅಚ್ಚಿಸಿರುವುದು ಕಾಣುತ್ತದೆ.

- Advertisement -
- Advertisement -

ಕಾರ್ಕಳ ತಾಲ್ಲೂಕು ಪಂಚಾಯ್ತಿ ರಸ್ತೆಯಲ್ಲಿ ಭರ್ಜರಿ ಬಂಗ್ಲೆಯೊಂದು ತಲೆಯೆತ್ತುತ್ತಿದೆ. ಮುಂಬೈನ ಶಿವಸೇನೆಯ ಮುಖ್ಯ ಕಚೇರಿಯಲ್ಲಿರುವ ಬೃಹತ್ ಕಂಬಗಳನ್ನು ಹೋಲುವ ಆರು ಎತ್ತರದ ಕಂಬಗಳ ಮನೆಯಿದು. ಒಂದೊಂದು ಕಂಬಕ್ಕೆ ಭರ್ತಿ ಏಳೂ ನೂರು ಮೂಟೆ ಸಿಮೆಂಟ್, ಟನ್‌ಗಟ್ಟಲೆ ಕಬ್ಬಿಣ ಬಳಸಲಾಗಿದೆ ಎನ್ನಲಾಗುತ್ತಿದೆ. ಈ ಬಂಗಲೆಯ ಮುಂದೆ ನಿಂತು ಮನೆ ಕಟ್ಟಿಸುತ್ತಿರುವ ಥ್ರಿಲ್ ಅನುಭವಿಸುತ್ತಿರುವುದು ಬೇರೆ ಯಾರೂ ಅಲ್ಲ, ಕಾರ್ಕಳದ ಬಿಜೆಪಿ ಶಾಸಕ ಸುನಿಲ್ ಕುಮಾರ್.

ಇಷ್ಟು ದಿನ ಬಿಜೆಪಿ ಕಚೇರಿಯಿದ್ದ ಈ ಜಾಗವನ್ನು ಸುನೀಲ್ ಬೇನಾಮಿಯಾಗಿ ತನ್ನ ಹೆಂಡತಿಯ ತಾಯಿ (ಅತ್ತೆ) ಹೆಸರಿನಲ್ಲಿ ಖರೀದಿಸಿದ್ದಾರೆ ಎಂಬ ಆರೋಪ ಬಿಜೆಪಿ ಕಾರ್ಯಕರ್ತರದು. ಒಂದು ಅಂದಾಜಿನಂತೆ ಈ ಬಂಗ್ಲೆಯ ಕಟ್ಟಡಕ್ಕೇ ಐದು ಕೋಟಿ ರೂ ಬೇಕು. ಆ ನಂತರ ಅಂದ-ಚಂದ ಫಿನಿಶಿಂಗ್ ಅಂತೆಲ್ಲ ಇನ್ನೆರಡು ಕೋಟಿ ಅನಿವಾರ್ಯವಂತೆ. ಅವರು ಎಷ್ಟಾದರೂ ಖರ್ಚು ಮಾಡಿ ಬಂಗಲೆ ಕಟ್ಟಲಿ. ಆದರೆ ಆ ಬಂಗಲೆ ಕಟ್ಟಲು ಬಳಸುತ್ತಿರುವ ಸಿಮೆಂಟ್‌ ಮಾತ್ರ ಸರ್ಕಾರದ್ದು ಎಂಬ ಆರೋಪವನ್ನು ಬಿಜೆಪಿ ಕಾರ್ಯಕರ್ತರೆ ಹೊರಿಸಿದ್ದು, ವಿಡಿಯೋ ದಾಖಲೆ ಸಹ ಬಿಡುಗಡೆ ಮಾಡಿದ್ದಾರೆ.

ಈಗಾಗಲೇ ಈ ಬಂಗಲೆಗೆ 3 ಸಾವಿರ ಸಿಮೆಂಟ್ ಚೀಲ ಬಳಸಲಾಗಿದೆ. ವಿಡಿಯೋದಲ್ಲಿ ನಿರ್ಮಾಣ ಹಂತದಲ್ಲಿರುವ ಬಂಗಲೆಯಲ್ಲಿನ ಅಲ್ಟ್ರಾಟೆಕ್ ಕಂಪನಿಯ ಸಿಮೆಂಟ್ ಚೀಲಗಳ ಮೇಲೆ ’ನಾಟ್ ಫಾರ್ ಸೇಲ್’ ಎಂದು ಅಚ್ಚಿಸಿರುವುದು ಕಾಣುತ್ತದೆ. ಅಂದರೆ ಈ ಸಿಮೆಂಟ್ ಪ್ರಾಮಾಣಿಕವಾಗಿ ಖರೀದಿಸಿದ್ದಲ್ಲ. ಸರ್ಕಾರಿ ಗೋದಾಮುಗಳಿಂದ ತಂದದ್ದು ಅಥವಾ ಸರ್ಕಾರಿ ಗುತ್ತಿಗೆದಾರರ ಹೆದರಿಸಿ ತರಿಸಿಕೊಂಡಿದ್ದು ಎಂಬುದು ಕಾರ್ಯಕರ್ತರ ಆರೋಪ. ನಾನುಗೌರಿ.ಕಾಂಗೆ ಸಿಕ್ಕ ವಿಡಿಯೋ ದಾಖಲೆಯಂತೆ ಇವತ್ತಿಗೂ ಈ ನಿರ್ಮಾಣ ಹಂತದ ಮನೆಯಲ್ಲಿ ಸರ್ಕಾರದ ಸೀಲ್ ಇರುವ ಸಿಮೆಂಟ್ ಮೂಟೆಗಳಿರುವುದು ಕಂಡುಬಂದಿದೆ.

ವಿಡಿಯೋ ನೋಡಿ

ಕಾರ್ಕಳ ಶಾಸಕ ಸುನಿಲ್ ಕುಮಾರ್ ಬಂಗಲೆಗೆ ಸಿಮೆಂಟ್ ಎಲ್ಲಿಯದು?: ಈ ವಿಡಿಯೋವನ್ನು ಸುಳ್ಳೆನ್ನಲು ಸಾಧ್ಯವೇ?ಸರ್ಕಾರಿ ಕಾಮಗಾರಿಗಳಿಗೆ…

Posted by Naanu Gauri on Tuesday, July 14, 2020

ಸರ್ಕಾರಿ ಕಾಮಗಾರಿಗಳಿಗೆ ಸಿಮೆಂಟ್-ಕಬ್ಬಿಣ ಮತ್ತಿತರ ಸಾಮಗ್ರಿ ಒದಗಿಸುವ ಕೆ.ಆರ್.ಐ.ಡಿ.ಎಲ್ ಎಂಬ ಸಂಸ್ಥೆಯಿದೆ. ಸರ್ಕಾರಿ ಕಾಮಗಾರಿ ನಡೆಸುವ ಗುತ್ತಿಗೆದಾರರಿಗೆ ಈ ಸರ್ಕಾರಿ ಸಂಸ್ಥೆ ಮಾರುಕಟ್ಟೆ ದರಕ್ಕಿಂತಲೂ ಕಡಿಮೆ ಬೆಲೆಗೆ ಸಾಮಗ್ರಿ ಪೂರೈಸುತ್ತದೆ. ಇದನ್ನು ಗುತ್ತಿಗೆದಾರ ಯಾರಿಗೂ ದಾನ ಅಥವಾ ಮಾರಾಟ ಮಾಡುವಂತಿಲ್ಲ. ಹಾಗಿದ್ದರೆ ಶಾಸಕ ಸುನಿಲ್ ಬಂಗಲೆಗೆ ಈ ಸರ್ಕಾರಿ ಸಿಮೆಂಟ್ ಹೇಗೆ ಬಂತು? ಮೂಲಗಳ ಪ್ರಕಾರ ಕೋಟ್ಯಾಂತರ ರೂ.ಗಳ ಕೆ.ಆರ್.ಐ.ಡಿ.ಎಲ್ ಕಾಮಗಾರಿ ಕಾರ್ಕಳದಲ್ಲಿ ನಡೆಯುತ್ತಿದ್ದು ಆ ಕಾಮಗಾರಿ ಕಂಟ್ರಾಕ್ಟರ್‌ಗಳಿಂದ ಲೋಡ್‌ಗಟ್ಟಲೆ ಸಿಮೆಂಟ್ ಶಾಸಕ ಸಾಹೇಬರಿಗೆ ಸರಬರಾಜಾಗಿದೆ ಎನ್ನಲಾಗಿದೆ.

ಕಾರ್ಕಳದಲ್ಲಿ ನಡೆಯುತ್ತಿರುವ 108 ಕೋಟಿ ರೂ.ಗಳ ಏತ ನೀರಾವರಿ ಯೋಜನೆಯ ಗುತ್ತೇಗೆದಾರ ಕಂಪನಿಯು ಶಾಸಕರಿಗೆ ಕಾಣಿಕೆಯಾಗಿ ಸಿಮೆಂಟ್ ನೀಡಿರಬಹುದು ಎಂದು ಕೆಲವರು ಆರೋಪಿಸುತ್ತಾರೆ. ಇನ್ನೊಂದೆಡೆ ಸದರಿ ಕಾಮಗಾರಿ ಉಸ್ತುವಾರಿ ನೋಡಿಕೊಳ್ಳುತ್ತಿರುವುದು ಜಿಲ್ಲಾ ಯುವ ಬಿಜೆಪಿ ಅಧ್ಯಕ್ಷನೂ ಶಾಸಕರ ಪರಮಾಪ್ತ ಸರ್ಕಾರಿ ಗುತ್ತಿಗೆದಾರನೂ ಆಗಿರುವವರು ಕಾರ್ಕಳ ವಿಖ್ಯಾತ್ ಶೆಟ್ಟಿ. ಕಾರ್ಕಳದ ಬಹುತೇಕ ಸರ್ಕಾರಿ ಗುತ್ತಿಗೆಗಳೆಲ್ಲಾ ಇವರಿಗೆ ದಕ್ಕುವುದರಲ್ಲಿ ಶಾಸಕರ ಪಾತ್ರವಿದೆಯೇ? ಅದಕ್ಕಾಗಿ ಶಾಸಕರಿಗೆ ಈ ರೀತಿಯ ಕಾಣಿಕೆಗಳು ಸಿಗುತ್ತವೆಯೇ ಎಂದು ಕಾರ್ಯಕರ್ತರು ಪ್ರಶ್ನಿಸುತ್ತಿದ್ದಾರೆ. ಉತ್ತರಿಸುವ ಕೆಲಸ ಶಾಸಕರದಾಗಿದೆ.


ಇದನ್ನೂ ಓದಿ: ಎಲ್ಲಾ ಅವ್ರೆ ಸ್ವಾಮಿ, ಗಿಜಿಗಿಜಿ ಅಂತಾರೆ – ಕೊರೊನಾ ರೋಗಿಗಳ ಕುರಿತು ಸಚಿವ ಸೋಮಣ್ಣ ವಿವಾದಾತ್ಮಕ ಹೇಳಿಕೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

LEAVE A REPLY

Please enter your comment!
Please enter your name here

- Advertisment -

2020ರ ದೆಹಲಿ ಗಲಭೆ ಪ್ರಕರಣ: ಐವರು ಆರೋಪಿಗಳನ್ನು ಖುಲಾಸೆಗೊಳಿಸಿದ ನ್ಯಾಯಾಲಯ

2020 ರ ದೆಹಲಿ ಗಲಭೆಗೆ ಸಂಬಂಧಿಸಿದಂತೆ ಬೆಂಕಿ ಹಚ್ಚುವಿಕೆ, ಗಲಭೆ ಮತ್ತು ವಿಧ್ವಂಸಕ ಕೃತ್ಯದ ಆರೋಪ ಹೊತ್ತಿರುವ ಐವರನ್ನು ನ್ಯಾಯಾಲಯ ಖುಲಾಸೆಗೊಳಿಸಿದೆ. ಅಬ್ದುಲ್ ಸತ್ತಾರ್, ಮುಹಮ್ಮದ್ ಖಾಲಿದ್, ಹುನೈನ್, ತನ್ವೀರ್ ಮತ್ತು ಆರಿಫ್ ವಿರುದ್ಧದ...

ಕಾರ್‌ ಚಲಾಯಿಸುವಾಗ ಫೋನ್‌ನಲ್ಲಿ ಮಾತನಾಡದಂತೆ ಹೇಳಿದ್ದಕ್ಕೆ ಪತ್ರಕರ್ತನ ಮೇಲೆ ರಾಡ್‌ನಿಂದ ಹಲ್ಲೆ

ಆ್ಯಪ್ ಆಧಾರಿತ ಟ್ಯಾಕ್ಸಿ ಬುಕಿಂಗ್‌ ಮಾಡುವ ಪ್ರಯಾಣಿಕರ ಸುರಕ್ಷತೆ ಮತ್ತು ಚಾಲಕರ ನಡವಳಿಕೆಯ ಕುರಿತ ಕಳವಳವಳಕಾರಿ ಘಟನೆಯೊಂದು ಹರಿಯಾಣದ ಫರಿದಾಬಾದ್‌ನಲ್ಲಿ ಬೆಳಕಿಗೆ ಬಂದಿದೆ. ರ್ಯಾಪಿಡೋ ಟ್ಯಾಕ್ಸಿ ಚಾಲಕನೊಬ್ಬ ಪ್ರಯಾಣಿಕನ ಮೇಲೆ ಕಬ್ಬಿಣದ ರಾಡ್‌ನಿಂದ...

ರಾಜಸ್ಥಾನ| ಎಥೆನಾಲ್ ಸ್ಥಾವರದ ವಿರುದ್ಧ ಪ್ರತಿಭಟನೆ: 40 ಜನರ ಬಂಧನ

ರಾಜಸ್ಥಾನದ ಹನುಮಾನ್‌ಗಢ ಜಿಲ್ಲೆಯ ರೈತರು, ಪ್ರಸ್ತಾವಿತ ಎಥೆನಾಲ್ ಕಾರ್ಖಾನೆಯ ವಿರುದ್ಧ ಎರಡನೇ ದಿನವೂ ಪ್ರತಿಭಟನೆ ಮುಂದುವರೆಸಿದ್ದಾರೆ, ಈ ಪ್ರದೇಶದಲ್ಲಿ ಹೆಚ್ಚಿನ ಭದ್ರತೆ ಮತ್ತು ಇಂಟರ್ನೆಟ್ ಸೇವೆಗಳನ್ನು ಸ್ಥಗಿತಗೊಳಿಸಲಾಗಿದೆ. ಗುರುವಾರ ಮುಂಜಾನೆ ಟಿಬ್ಬಿ ಬಳಿಯ ಗುರುದ್ವಾರದಲ್ಲಿ...

ವಿಧಾನಸಭೆಯಲ್ಲಿ ‘ಗೃಹಲಕ್ಷ್ಮಿ’ ಗದ್ದಲ : ಬಿಜೆಪಿ ಸದಸ್ಯರಿಂದ ಸಭಾತ್ಯಾಗ, ಕ್ಷಮೆ ಕೋರಿದ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್

ಗೃಹಲಕ್ಷಿ ಯೋಜನೆಯ ಹಣ ಬಿಡುಗಡೆ ಸಂಬಂಧ ಸಚಿವರು ಸದನಕ್ಕೆ ತಪ್ಪು ಮಾಹಿತಿ ನೀಡಿದ್ದಾರೆ ಎಂಬ ವಿಚಾರ ಇಂದು (ಡಿ.17 ಬುಧವಾರ) ವಿಧಾನಸಭೆಯಲ್ಲಿ ದೊಡ್ಡ ಮಟ್ಟದ ವಾಗ್ವಾದ, ಆರೋಪ-ಪ್ರತ್ಯಾರೋಪ, ಗದ್ದಲ, ಪ್ರತಿಭಟನೆ, ಸಭಾತ್ಯಾಗ ಮತ್ತು...

ತಂಪು ಪಾನೀಯದಲ್ಲಿ ಮತ್ತು ಬರುವ ಔಷಧ ಬೆರೆಸಿ ಅಪ್ರಾಪ್ತ ಬಾಲಕಿಯರ ಮೇಲೆ ಅತ್ಯಾಚಾರ: ಆರೋಪಿ ಬಂಧನ

ಮುಂಬೈ ನಗರವನ್ನೇ ಬೆಚ್ಚಿಬೀಳಿಸಿದ ಆಘಾತಕಾರಿ ಘಟನೆಯಲ್ಲಿ, ವಕ್ತಿಯೋರ್ವ ಮತ್ತು ಬರುವ ತಂಪು ಪಾನೀಯ ನೀಡಿ ಅಪ್ರಾಪ್ತ ಬಾಲಕಿಯರ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ್ದಾನೆ. ಅಪರಾಧದ ಅಶ್ಲೀಲ ವೀಡಿಯೊಗಳನ್ನು ರೆಕಾರ್ಡ್ ಮಾಡಿ, ನಂತರ ವೀಡಿಯೊಗಳನ್ನು...

ಮನರೇಗಾ ಬದಲು ವಿಬಿ-ಜಿ ರಾಮ್ ಜಿ : ಲೋಕಸಭೆಯಲ್ಲಿ ಮಸೂದೆ ಅಂಗೀಕಾರದ ವೇಳೆ ಸಭಾತ್ಯಾಗಕ್ಕೆ ನಿರ್ಧರಿಸಿದ ವಿಪಕ್ಷಗಳು

ನರೇಗಾ ಬದಲು ತಂದಿರುವ ವಿಕಸಿತ್ ಭಾರತ್-ಗ್ಯಾರಂಟಿ ಫಾರ್ ರೋಜ್‌ಗಾರ್ ಅಂಡ್ ಅಜೀವಿಕಾ ಮಿಷನ್ (ಗ್ರಾಮೀಣ್) ಮಸೂದೆ, 2025 (ವಿಬಿ–ಜಿ ರಾಮ್ ಜಿ ಮಸೂದೆ) ಲೋಕಸಭೆಯಲ್ಲಿ ಅಂಗೀಕಾರದ ವೇಳೆ ಸಹಕರಿಸದಿರಲು ವಿರೋಧ ಪಕ್ಷಗಳ ಸಂಸದರು...

ಅಪ್ರಾಪ್ತ ಬಾಲಕಿ ಮೇಲೆ ಅತ್ಯಾಚಾರ ಆರೋಪ: ಮ್ಯೂಸಿಕ್ ಮೈಲಾರಿ ಮೇಲೆ ಪೋಕ್ಸೋ ಪ್ರಕರಣ ದಾಖಲು 

ಬೆಂಗಳೂರು: ಉತ್ತರ ಕರ್ನಾಟಕದ ಜನಪದ ಗಾಯಕ ಹಾಗೂ ಯೂಟ್ಯೂಬ್ ಸ್ಟಾರ್ ಎಂದೇ ಖ್ಯಾತಿ ಪಡೆದಿದ್ದ ‘ಮ್ಯೂಸಿಕ್ ಮೈಲಾರಿ’ಎಂಬಾತನನ್ನು ಅಪ್ರಾಪ್ತೆ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪದಡಿ ಮಹಾಲಿಂಗಪುರ ಪೊಲೀಸರು ಬಂಧಿಸಿದ್ದಾರೆ. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಮೈಲಾರಿ...

ಇಂಧನ ಖರೀದಿಗೆ ‘ಮಾಲಿನ್ಯ ನಿಯಂತ್ರಣ ಪ್ರಮಾಣಪತ್ರ’ ಕಡ್ಡಾಯಗೊಳಿಸಿದ ದೆಹಲಿ ಸರ್ಕಾರ

ರಾಷ್ಟ್ರ ರಾಜಧಾನಿ ದೆಹಲಿಯ ವಾಹನ ಮಾಲೀಕರು ಕಟ್ಟುನಿಟ್ಟಾದ ಆದೇಶ ಎದುರಿಸುತ್ತಾರೆ. ಡಿಸೆಂಬರ್ 18 ರಿಂದ ನಗರದಾದ್ಯಂತದ ಪೆಟ್ರೋಲ್ ಬಂಕ್‌ಗಳಲ್ಲಿ ಇಂಧನ ಖರೀದಿಗೆ ಮಾಲಿನ್ಯ ನಿಯಂತ್ರಣ ಪ್ರಮಾಣಪತ್ರ (ಪಿಯುಸಿ) ಕಡ್ಡಾಯಗೊಳಿಸಲಾಗಿದೆ. ದೆಹಲಿ ಪರಿಸರ ಸಚಿವ ಮಂಜಿಂದರ್...

ವೈದ್ಯೆಯ ಹಿಜಾಬ್ ಎಳೆದ ಬಿಹಾರ ಸಿಎಂ, ಅವಹೇಳನ ಮಾಡಿದ ಯುಪಿ ಸಚಿವನ ವಿರುದ್ದ ದೂರು ದಾಖಲು

ವೈದ್ಯೆಯ ಹಿಜಾಬ್ ಎಳೆದ ಬಿಹಾರದ ಮುಖ್ಯಮಂತ್ರಿ ನಿತೀಶ್ ಕುಮಾರ್ ಮತ್ತು ಈ ಘಟನೆಯ ಕುರಿತು ಮಾತನಾಡುವಾಗ ಮಹಿಳೆಯನ್ನು ಅವಮಾನಿಸಿದ ಉತ್ತರ ಪ್ರದೇಶದ ಸಂಪುಟ ಸಚಿವ ಸಂಜಯ್ ನಿಶಾದ್ ವಿರುದ್ದ ಲಕ್ನೋದ ಕೈಸರ್‌ಬಾಗ್ ಪೊಲೀಸ್...

1 ಲಕ್ಷ ರೂಪಾಯಿ ಸಾಲ 74 ಲಕ್ಷ ರೂಪಾಯಿಗೆ ಏರಿಕೆ, ಸಾಲ ತೀರಿಸಲು ಕಿಡ್ನಿ ಮಾರಿದ ರೈತ 

ಅಕ್ರಮವಾಗಿ ಸಾಲ ನೀಡುವವರಿಂದ 1 ಲಕ್ಷ ಸಾಲ ಪಡೆದಿದ್ದು, ಅದಕ್ಕೆ ಹೆಚ್ಚಿನ ದಿನದ ಬಡ್ಡಿ ಸೇರಿ 75 ಲಕ್ಷ ಸಾಲ ಏರಿಕೆಯಾದ ಕಾರಣ ವ್ಯಕ್ತಿಯೊಬ್ಬ ತನ್ನ ಕಿಡ್ನಿಯನ್ನೇ ಮಾರಾಟ ಮಾಡಿರುವ ಘಟನೆ ಮಹಾರಾಷ್ಟ್ರದಲ್ಲಿ...