Homeಕರ್ನಾಟಕಕಾರ್ಕಳ ಶಾಸಕ ಸುನಿಲ್ ಕುಮಾರ್ ಬಂಗಲೆಗೆ ಸಿಮೆಂಟ್ ಎಲ್ಲಿಯದು?: ಈ ವಿಡಿಯೋವನ್ನು ಸುಳ್ಳೆನ್ನಲು ಸಾಧ್ಯವೇ?

ಕಾರ್ಕಳ ಶಾಸಕ ಸುನಿಲ್ ಕುಮಾರ್ ಬಂಗಲೆಗೆ ಸಿಮೆಂಟ್ ಎಲ್ಲಿಯದು?: ಈ ವಿಡಿಯೋವನ್ನು ಸುಳ್ಳೆನ್ನಲು ಸಾಧ್ಯವೇ?

ಈಗಾಗಲೇ ಈ ಬಂಗಲೆಗೆ 3 ಸಾವಿರ ಸಿಮೆಂಟ್ ಚೀಲ ಬಳಸಲಾಗಿದೆ. ವಿಡಿಯೋದಲ್ಲಿ ನಿರ್ಮಾಣ ಹಂತದಲ್ಲಿರುವ ಬಂಗಲೆಯಲ್ಲಿರುವ ಅಲ್ಟ್ರಾಟೆಕ್ ಕಂಪನಿಯ ಸಿಮೆಂಟ್ ಚೀಲಗಳ ಮೇಲೆ ’ನಾಟ್ ಫಾರ್ ಸೇಲ್’ ಎಂದು ಅಚ್ಚಿಸಿರುವುದು ಕಾಣುತ್ತದೆ.

- Advertisement -
- Advertisement -

ಕಾರ್ಕಳ ತಾಲ್ಲೂಕು ಪಂಚಾಯ್ತಿ ರಸ್ತೆಯಲ್ಲಿ ಭರ್ಜರಿ ಬಂಗ್ಲೆಯೊಂದು ತಲೆಯೆತ್ತುತ್ತಿದೆ. ಮುಂಬೈನ ಶಿವಸೇನೆಯ ಮುಖ್ಯ ಕಚೇರಿಯಲ್ಲಿರುವ ಬೃಹತ್ ಕಂಬಗಳನ್ನು ಹೋಲುವ ಆರು ಎತ್ತರದ ಕಂಬಗಳ ಮನೆಯಿದು. ಒಂದೊಂದು ಕಂಬಕ್ಕೆ ಭರ್ತಿ ಏಳೂ ನೂರು ಮೂಟೆ ಸಿಮೆಂಟ್, ಟನ್‌ಗಟ್ಟಲೆ ಕಬ್ಬಿಣ ಬಳಸಲಾಗಿದೆ ಎನ್ನಲಾಗುತ್ತಿದೆ. ಈ ಬಂಗಲೆಯ ಮುಂದೆ ನಿಂತು ಮನೆ ಕಟ್ಟಿಸುತ್ತಿರುವ ಥ್ರಿಲ್ ಅನುಭವಿಸುತ್ತಿರುವುದು ಬೇರೆ ಯಾರೂ ಅಲ್ಲ, ಕಾರ್ಕಳದ ಬಿಜೆಪಿ ಶಾಸಕ ಸುನಿಲ್ ಕುಮಾರ್.

ಇಷ್ಟು ದಿನ ಬಿಜೆಪಿ ಕಚೇರಿಯಿದ್ದ ಈ ಜಾಗವನ್ನು ಸುನೀಲ್ ಬೇನಾಮಿಯಾಗಿ ತನ್ನ ಹೆಂಡತಿಯ ತಾಯಿ (ಅತ್ತೆ) ಹೆಸರಿನಲ್ಲಿ ಖರೀದಿಸಿದ್ದಾರೆ ಎಂಬ ಆರೋಪ ಬಿಜೆಪಿ ಕಾರ್ಯಕರ್ತರದು. ಒಂದು ಅಂದಾಜಿನಂತೆ ಈ ಬಂಗ್ಲೆಯ ಕಟ್ಟಡಕ್ಕೇ ಐದು ಕೋಟಿ ರೂ ಬೇಕು. ಆ ನಂತರ ಅಂದ-ಚಂದ ಫಿನಿಶಿಂಗ್ ಅಂತೆಲ್ಲ ಇನ್ನೆರಡು ಕೋಟಿ ಅನಿವಾರ್ಯವಂತೆ. ಅವರು ಎಷ್ಟಾದರೂ ಖರ್ಚು ಮಾಡಿ ಬಂಗಲೆ ಕಟ್ಟಲಿ. ಆದರೆ ಆ ಬಂಗಲೆ ಕಟ್ಟಲು ಬಳಸುತ್ತಿರುವ ಸಿಮೆಂಟ್‌ ಮಾತ್ರ ಸರ್ಕಾರದ್ದು ಎಂಬ ಆರೋಪವನ್ನು ಬಿಜೆಪಿ ಕಾರ್ಯಕರ್ತರೆ ಹೊರಿಸಿದ್ದು, ವಿಡಿಯೋ ದಾಖಲೆ ಸಹ ಬಿಡುಗಡೆ ಮಾಡಿದ್ದಾರೆ.

ಈಗಾಗಲೇ ಈ ಬಂಗಲೆಗೆ 3 ಸಾವಿರ ಸಿಮೆಂಟ್ ಚೀಲ ಬಳಸಲಾಗಿದೆ. ವಿಡಿಯೋದಲ್ಲಿ ನಿರ್ಮಾಣ ಹಂತದಲ್ಲಿರುವ ಬಂಗಲೆಯಲ್ಲಿನ ಅಲ್ಟ್ರಾಟೆಕ್ ಕಂಪನಿಯ ಸಿಮೆಂಟ್ ಚೀಲಗಳ ಮೇಲೆ ’ನಾಟ್ ಫಾರ್ ಸೇಲ್’ ಎಂದು ಅಚ್ಚಿಸಿರುವುದು ಕಾಣುತ್ತದೆ. ಅಂದರೆ ಈ ಸಿಮೆಂಟ್ ಪ್ರಾಮಾಣಿಕವಾಗಿ ಖರೀದಿಸಿದ್ದಲ್ಲ. ಸರ್ಕಾರಿ ಗೋದಾಮುಗಳಿಂದ ತಂದದ್ದು ಅಥವಾ ಸರ್ಕಾರಿ ಗುತ್ತಿಗೆದಾರರ ಹೆದರಿಸಿ ತರಿಸಿಕೊಂಡಿದ್ದು ಎಂಬುದು ಕಾರ್ಯಕರ್ತರ ಆರೋಪ. ನಾನುಗೌರಿ.ಕಾಂಗೆ ಸಿಕ್ಕ ವಿಡಿಯೋ ದಾಖಲೆಯಂತೆ ಇವತ್ತಿಗೂ ಈ ನಿರ್ಮಾಣ ಹಂತದ ಮನೆಯಲ್ಲಿ ಸರ್ಕಾರದ ಸೀಲ್ ಇರುವ ಸಿಮೆಂಟ್ ಮೂಟೆಗಳಿರುವುದು ಕಂಡುಬಂದಿದೆ.

ವಿಡಿಯೋ ನೋಡಿ

ಕಾರ್ಕಳ ಶಾಸಕ ಸುನಿಲ್ ಕುಮಾರ್ ಬಂಗಲೆಗೆ ಸಿಮೆಂಟ್ ಎಲ್ಲಿಯದು?: ಈ ವಿಡಿಯೋವನ್ನು ಸುಳ್ಳೆನ್ನಲು ಸಾಧ್ಯವೇ?ಸರ್ಕಾರಿ ಕಾಮಗಾರಿಗಳಿಗೆ…

Posted by Naanu Gauri on Tuesday, July 14, 2020

ಸರ್ಕಾರಿ ಕಾಮಗಾರಿಗಳಿಗೆ ಸಿಮೆಂಟ್-ಕಬ್ಬಿಣ ಮತ್ತಿತರ ಸಾಮಗ್ರಿ ಒದಗಿಸುವ ಕೆ.ಆರ್.ಐ.ಡಿ.ಎಲ್ ಎಂಬ ಸಂಸ್ಥೆಯಿದೆ. ಸರ್ಕಾರಿ ಕಾಮಗಾರಿ ನಡೆಸುವ ಗುತ್ತಿಗೆದಾರರಿಗೆ ಈ ಸರ್ಕಾರಿ ಸಂಸ್ಥೆ ಮಾರುಕಟ್ಟೆ ದರಕ್ಕಿಂತಲೂ ಕಡಿಮೆ ಬೆಲೆಗೆ ಸಾಮಗ್ರಿ ಪೂರೈಸುತ್ತದೆ. ಇದನ್ನು ಗುತ್ತಿಗೆದಾರ ಯಾರಿಗೂ ದಾನ ಅಥವಾ ಮಾರಾಟ ಮಾಡುವಂತಿಲ್ಲ. ಹಾಗಿದ್ದರೆ ಶಾಸಕ ಸುನಿಲ್ ಬಂಗಲೆಗೆ ಈ ಸರ್ಕಾರಿ ಸಿಮೆಂಟ್ ಹೇಗೆ ಬಂತು? ಮೂಲಗಳ ಪ್ರಕಾರ ಕೋಟ್ಯಾಂತರ ರೂ.ಗಳ ಕೆ.ಆರ್.ಐ.ಡಿ.ಎಲ್ ಕಾಮಗಾರಿ ಕಾರ್ಕಳದಲ್ಲಿ ನಡೆಯುತ್ತಿದ್ದು ಆ ಕಾಮಗಾರಿ ಕಂಟ್ರಾಕ್ಟರ್‌ಗಳಿಂದ ಲೋಡ್‌ಗಟ್ಟಲೆ ಸಿಮೆಂಟ್ ಶಾಸಕ ಸಾಹೇಬರಿಗೆ ಸರಬರಾಜಾಗಿದೆ ಎನ್ನಲಾಗಿದೆ.

ಕಾರ್ಕಳದಲ್ಲಿ ನಡೆಯುತ್ತಿರುವ 108 ಕೋಟಿ ರೂ.ಗಳ ಏತ ನೀರಾವರಿ ಯೋಜನೆಯ ಗುತ್ತೇಗೆದಾರ ಕಂಪನಿಯು ಶಾಸಕರಿಗೆ ಕಾಣಿಕೆಯಾಗಿ ಸಿಮೆಂಟ್ ನೀಡಿರಬಹುದು ಎಂದು ಕೆಲವರು ಆರೋಪಿಸುತ್ತಾರೆ. ಇನ್ನೊಂದೆಡೆ ಸದರಿ ಕಾಮಗಾರಿ ಉಸ್ತುವಾರಿ ನೋಡಿಕೊಳ್ಳುತ್ತಿರುವುದು ಜಿಲ್ಲಾ ಯುವ ಬಿಜೆಪಿ ಅಧ್ಯಕ್ಷನೂ ಶಾಸಕರ ಪರಮಾಪ್ತ ಸರ್ಕಾರಿ ಗುತ್ತಿಗೆದಾರನೂ ಆಗಿರುವವರು ಕಾರ್ಕಳ ವಿಖ್ಯಾತ್ ಶೆಟ್ಟಿ. ಕಾರ್ಕಳದ ಬಹುತೇಕ ಸರ್ಕಾರಿ ಗುತ್ತಿಗೆಗಳೆಲ್ಲಾ ಇವರಿಗೆ ದಕ್ಕುವುದರಲ್ಲಿ ಶಾಸಕರ ಪಾತ್ರವಿದೆಯೇ? ಅದಕ್ಕಾಗಿ ಶಾಸಕರಿಗೆ ಈ ರೀತಿಯ ಕಾಣಿಕೆಗಳು ಸಿಗುತ್ತವೆಯೇ ಎಂದು ಕಾರ್ಯಕರ್ತರು ಪ್ರಶ್ನಿಸುತ್ತಿದ್ದಾರೆ. ಉತ್ತರಿಸುವ ಕೆಲಸ ಶಾಸಕರದಾಗಿದೆ.


ಇದನ್ನೂ ಓದಿ: ಎಲ್ಲಾ ಅವ್ರೆ ಸ್ವಾಮಿ, ಗಿಜಿಗಿಜಿ ಅಂತಾರೆ – ಕೊರೊನಾ ರೋಗಿಗಳ ಕುರಿತು ಸಚಿವ ಸೋಮಣ್ಣ ವಿವಾದಾತ್ಮಕ ಹೇಳಿಕೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

LEAVE A REPLY

Please enter your comment!
Please enter your name here

- Advertisment -

ಐ-ಪ್ಯಾಕ್ ಮೇಲೆ ದಾಳಿ ಪ್ರಕರಣ: ಮಮತಾ ಬ್ಯಾನರ್ಜಿ ದೂರಿನ ಬೆನ್ನಲ್ಲೇ ಜಾರಿ ನಿರ್ದೇಶನಾಲಯದ ವಿರುದ್ಧ ಎಫ್‌ಐಆರ್

ಕೋಲ್ಕತ್ತಾ: ರಾಜಕೀಯ ಸಲಹಾ ಸಂಸ್ಥೆ ಐ-ಪಿಎಸಿ (ಐ-ಪ್ಯಾಕ್) ಕಚೇರಿ ಮತ್ತು ಅದರ ಮುಖ್ಯಸ್ಥ ಪ್ರತೀಕ್ ಜೈನ್ ಅವರ ನಿವಾಸದ ಮೇಲೆ ಜಾರಿ ನಿರ್ದೇಶನಾಲಯ ನಡೆಸಿದ ದಾಳಿಗೆ ಸಂಬಂಧಿಸಿದಂತೆ ಟಿಎಂಸಿ ಅಧ್ಯಕ್ಷೆ ಮಮತಾ ಬ್ಯಾನರ್ಜಿ...

‘ಭ್ರಷ್ಟ ಜನತಾ ಪಾರ್ಟಿ’: ಬಿಜೆಪಿ ಡಬಲ್ ಎಂಜಿನ್ ಆಡಳಿತದ ವಿರುದ್ಧ ರಾಹುಲ್ ಗಾಂಧಿ ವಾಗ್ದಾಳಿ

ನವದೆಹಲಿ: ವಿವಿಧ ರಾಜ್ಯಗಳಲ್ಲಿ ಬಿಜೆಪಿಯ ಡಬಲ್ ಎಂಜಿನ್ ಸರ್ಕಾರಗಳ ವಿರುದ್ಧ ಲೋಕಸಭೆ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಾಗ್ದಾಳಿ ನಡೆಸಿದ್ದಾರೆ.  ತಮ್ಮ ಸಾಮಾಜಿಕ ಮಾಧ್ಯಮ ಎಕ್ಸ್‌ನಲ್ಲಿ ಪೋಸ್ಟ್ ಮಾಡಿರುವ ರಾಹುಲ್, ಉತ್ತರಾಖಂಡದಲ್ಲಿ ಅಂಕಿತ...

ಇಂದೋರ್‌ನಲ್ಲಿ ಕಲುಷಿತ ನೀರಿಗೆ 8 ಮಂದಿ ಬಲಿ: ಆರ್‌ಎಸ್‌ಎಸ್ ಕಚೇರಿಯಲ್ಲಿ ಜಿಲ್ಲಾಧಿಕಾರಿ ಮತ್ತು ಮೇಯರ್: ಭುಗಿಲೆದ್ದ ವಿವಾದ

ಇಂದೋರ್: ಆರ್‌ಎಸ್‌ಎಸ್ ಕಚೇರಿಯಲ್ಲಿ ಬುಧವಾರ ತಡರಾತ್ರಿ ನಡೆದ ಸಭೆಯಲ್ಲಿ ಜಿಲ್ಲಾಧಿಕಾರಿ ಮತ್ತು ಮೇಯರ್ ಭಾಗವಹಿಸಿದ್ದು ಕಂಡುಬಂದ ನಂತರ ಗುರುವಾರ ಇಂದೋರ್‌ನಲ್ಲಿ ರಾಜಕೀಯ ವಿವಾದ ಭುಗಿಲೆದ್ದಿದೆ.  ಕನಿಷ್ಠ ಎಂಟು ಮಂದಿ ಜೀವಗಳನ್ನು ಬಲಿ ಪಡೆದಿರುವ ಕಲುಷಿತ...

ಐ-ಪ್ಯಾಕ್ ಮೇಲೆ ಇಡಿ ದಾಳಿ: ಕೋಲ್ಕತ್ತಾದಲ್ಲಿ ಮಮತಾ ಪ್ರತಿಭಟನೆ: ಅಮಿತ್ ಶಾ ಕಚೇರಿಯ ಹೊರಗೆ ಪ್ರತಿಭಟಿಸುತ್ತಿದ್ದ ಟಿಎಂಸಿ ಶಾಸಕರ ಬಂಧನ

ಗುರುವಾರ (ಜ.8) ಬೆಳಿಗ್ಗೆ ಕೋಲ್ಕತ್ತಾದ ಸಾಲ್ಟ್ ಲೇಕ್‌ನಲ್ಲಿರುವ ರಾಜಕೀಯ ಸಲಹಾ ಸಂಸ್ಥೆ ಐ-ಪಿಎಸಿ (ಐ-ಪ್ಯಾಕ್) ಕಚೇರಿ ಮತ್ತು ಅದರ ಮುಖ್ಯಸ್ಥ ಪ್ರತೀಕ್ ಜೈನ್ ಅವರ ಮನೆ ಮೇಲೆ ಜಾರಿ ನಿರ್ದೇಶನಾಲಯ (ಇಡಿ) ನಡೆಸಿದ...

ಮಹಾರಾಷ್ಟ್ರ ಜಲ್ನಾ ಮಹಾನಗರ ಪಾಲಿಕೆ ಚುನಾವಣೆಯಲ್ಲಿ ಪತ್ರಕರ್ತೆ ಗೌರಿ ಲಂಕೇಶ್ ಹತ್ಯೆ ಪ್ರಕರಣದ ಪ್ರಮುಖ ಆರೋಪಿ ಸ್ಪರ್ಧೆ!

ಪತ್ರಕರ್ತೆ ಗೌರಿ ಲಂಕೇಶ್ ಹತ್ಯೆಯ ಆರೋಪಿ ಶ್ರೀಕಾಂತ್ ಪಂಗಾರ್ಕರ್ ಮುಂಬರುವ ಜಲ್ನಾ ಮುನ್ಸಿಪಲ್ ಕಾರ್ಪೊರೇಷನ್ ಚುನಾವಣೆಯಲ್ಲಿ ಸ್ವತಂತ್ರ ಅಭ್ಯರ್ಥಿಯಾಗಿ ಸ್ಪರ್ಧಿಸುತ್ತಿದ್ದಾರೆ ಎಂಬ ಸುದ್ದಿ  ಹಲವು ರಾಷ್ಟ್ರೀಯ ಮಾಧ್ಯಮಗಳಲ್ಲಿ ವರದಿಯಾಗಿದೆ.  ಗೌರಿ ಲಂಕೇಶ್ ಹತ್ಯೆ ಸೇರಿದಂತೆ...

‘ಮೋದಿ ಟ್ರಂಪ್‌ಗೆ ಕರೆ ಮಾಡದ ಕಾರಣ ಭಾರತ-ಯುಎಸ್ ವ್ಯಾಪಾರ ಒಪ್ಪಂದ ನಡೆಯಲಿಲ್ಲ’: ಹೊವಾರ್ಡ್ ಲುಟ್ನಿಕ್ 

ಪ್ರಧಾನಿ ನರೇಂದ್ರ ಮೋದಿ ಅವರು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರಿಗೆ ಸರಿಯಾದ ಸಮಯಕ್ಕೆ ಕರೆ ಮಾಡದ ಕಾರಣ ಭಾರತದೊಂದಿಗಿನ ವ್ಯಾಪಾರ ಒಪ್ಪಂದ ನಡೆಯಲಿಲ್ಲ ಎಂದು ಅಮೆರಿಕದ ವಾಣಿಜ್ಯ ಕಾರ್ಯದರ್ಶಿ ಹೊವಾರ್ಡ್ ಲುಟ್ನಿಕ್...

‘ರೈಲ್ವೆ ಸಚಿವಾಲಯವನ್ನು ವೈಯಕ್ತಿಕ ಆಸ್ತಿಯಾಗಿ ಬಳಸಿಕೊಳ್ಳಲಾಗಿದೆ’: ಲಾಲು ಮತ್ತು ಕುಟುಂಬದ ವಿರುದ್ಧ ದೆಹಲಿ ನ್ಯಾಯಾಲಯ ಆರೋಪ

ನವದೆಹಲಿ: ಉದ್ಯೋಗಕ್ಕಾಗಿ ಭೂಮಿ ಹಗರಣದಲ್ಲಿ ಆರ್‌ಜೆಡಿ ಮುಖ್ಯಸ್ಥ ಮತ್ತು ಮಾಜಿ ರೈಲ್ವೆ ಸಚಿವ ಲಾಲು ಪ್ರಸಾದ್ ಯಾದವ್, ಅವರ ಕುಟುಂಬದ ಸದಸ್ಯರು ಮತ್ತು ಇತರರ ವಿರುದ್ಧ ದೆಹಲಿ ನ್ಯಾಯಾಲಯ ಗಂಭೀರ ಆರೋಪಗಳನ್ನು ಮಾಡಿದೆ.  ಯಾದವ್...

‘ಕೇರಳದ ಮಲಯಾಳಂ ಮಸೂದೆಯನ್ನು ವಿರೋಧಿಸಲು ಸಾಧ್ಯವಿರುವ ಎಲ್ಲವನ್ನೂ ಮಾಡುತ್ತೇವೆ’: ಸಿಎಂ ಸಿದ್ದರಾಮಯ್ಯ

ಬೆಂಗಳೂರು: ಕನ್ನಡ ಮಾಧ್ಯಮ ಶಾಲೆಗಳಲ್ಲಿಯೂ ಮಲಯಾಳಂ ಅನ್ನು ಪ್ರಥಮ ಭಾಷೆಯನ್ನಾಗಿ ಮಾಡುವ ಕೇರಳದ ಪ್ರಸ್ತಾವಿತ ಕಾನೂನನ್ನು ವಿರೋಧಿಸಲು ಕರ್ನಾಟಕ "ಸಾಧ್ಯವಾದಷ್ಟು ಪ್ರಯತ್ನಿಸುತ್ತದೆ" ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ.   ಪ್ರಸ್ತಾವಿತ ಮಲಯಾಳಂ ಭಾಷಾ ಮಸೂದೆಯು "ಕೇರಳದ...

ಜಾರ್ಖಂಡ್‌ನಲ್ಲಿ ಮತ್ತೊಂದು ಗುಂಪುಹತ್ಯೆ: ದನ ಕಳ್ಳತನದ ಶಂಕೆಯಲ್ಲಿ ಮುಸ್ಲಿಂ ವ್ಯಕ್ತಿಯನ್ನು ಥಳಿಸಿ ಕೊಂದ ಗುಂಪು

ಜಾರ್ಖಂಡ್‌ನ ಗೊಡ್ಡಾ ಜಿಲ್ಲೆಯಲ್ಲಿ ಬುಧವಾರ ದನಗಳನ್ನು ಕದ್ದಿದ್ದಾನೆ ಎಂಬ ಶಂಕೆಯಲ್ಲಿ 45 ವರ್ಷದ ಮುಸ್ಲಿಂ ವ್ಯಕ್ತಿಯನ್ನು ಅಪರಿಚಿತ ಜನರ ಗುಂಪೊಂದು ಹೊಡೆದು ಕೊಂದಿದೆ ಎಂದು ಪಿಟಿಐ ವರದಿ ಮಾಡಿದೆ. ಪೊಲೀಸ್ ಅಧಿಕಾರಿಗಳನ್ನು ಉಲ್ಲೇಖಿಸಿ ವರದಿ...

ನ್ಯಾಷನಲ್ ಹೆರಾಲ್ಡ್ ಜಾಹೀರಾತು ವಿವಾದ: ಹಣಕಾಸಿನ ದಾಖಲೆ ಕೇಳಿ ಡಿಕೆ ಸಹೋದರರಿಗೆ ನೋಟಿಸ್  

ಕಾಂಗ್ರೆಸ್ ನೇತೃತ್ವದ ಕರ್ನಾಟಕ ಸರ್ಕಾರದಿಂದ ನ್ಯಾಷನಲ್ ಹೆರಾಲ್ಡ್ ಪತ್ರಿಕೆಗೆ ಬೇರೆ ಯಾವುದೇ ರಾಷ್ಟ್ರೀಯ ದಿನಪತ್ರಿಕೆಗಿಂತ ಹೆಚ್ಚಿನ ಜಾಹೀರಾತು ನಿಧಿ ದೊರೆತಿದೆ ಎಂದು ವರದಿಯಾಗಿದೆ, ಇದು ಸಾರ್ವಜನಿಕ ಹಣದ ಬಳಕೆಯ ಬಗ್ಗೆ ಪ್ರಶ್ನೆಗಳನ್ನು ಹುಟ್ಟುಹಾಕಿದೆ....