Homeಕರ್ನಾಟಕಕಾರ್ಕಳ ಶಾಸಕ ಸುನಿಲ್ ಕುಮಾರ್ ಬಂಗಲೆಗೆ ಸಿಮೆಂಟ್ ಎಲ್ಲಿಯದು?: ಈ ವಿಡಿಯೋವನ್ನು ಸುಳ್ಳೆನ್ನಲು ಸಾಧ್ಯವೇ?

ಕಾರ್ಕಳ ಶಾಸಕ ಸುನಿಲ್ ಕುಮಾರ್ ಬಂಗಲೆಗೆ ಸಿಮೆಂಟ್ ಎಲ್ಲಿಯದು?: ಈ ವಿಡಿಯೋವನ್ನು ಸುಳ್ಳೆನ್ನಲು ಸಾಧ್ಯವೇ?

ಈಗಾಗಲೇ ಈ ಬಂಗಲೆಗೆ 3 ಸಾವಿರ ಸಿಮೆಂಟ್ ಚೀಲ ಬಳಸಲಾಗಿದೆ. ವಿಡಿಯೋದಲ್ಲಿ ನಿರ್ಮಾಣ ಹಂತದಲ್ಲಿರುವ ಬಂಗಲೆಯಲ್ಲಿರುವ ಅಲ್ಟ್ರಾಟೆಕ್ ಕಂಪನಿಯ ಸಿಮೆಂಟ್ ಚೀಲಗಳ ಮೇಲೆ ’ನಾಟ್ ಫಾರ್ ಸೇಲ್’ ಎಂದು ಅಚ್ಚಿಸಿರುವುದು ಕಾಣುತ್ತದೆ.

- Advertisement -
- Advertisement -

ಕಾರ್ಕಳ ತಾಲ್ಲೂಕು ಪಂಚಾಯ್ತಿ ರಸ್ತೆಯಲ್ಲಿ ಭರ್ಜರಿ ಬಂಗ್ಲೆಯೊಂದು ತಲೆಯೆತ್ತುತ್ತಿದೆ. ಮುಂಬೈನ ಶಿವಸೇನೆಯ ಮುಖ್ಯ ಕಚೇರಿಯಲ್ಲಿರುವ ಬೃಹತ್ ಕಂಬಗಳನ್ನು ಹೋಲುವ ಆರು ಎತ್ತರದ ಕಂಬಗಳ ಮನೆಯಿದು. ಒಂದೊಂದು ಕಂಬಕ್ಕೆ ಭರ್ತಿ ಏಳೂ ನೂರು ಮೂಟೆ ಸಿಮೆಂಟ್, ಟನ್‌ಗಟ್ಟಲೆ ಕಬ್ಬಿಣ ಬಳಸಲಾಗಿದೆ ಎನ್ನಲಾಗುತ್ತಿದೆ. ಈ ಬಂಗಲೆಯ ಮುಂದೆ ನಿಂತು ಮನೆ ಕಟ್ಟಿಸುತ್ತಿರುವ ಥ್ರಿಲ್ ಅನುಭವಿಸುತ್ತಿರುವುದು ಬೇರೆ ಯಾರೂ ಅಲ್ಲ, ಕಾರ್ಕಳದ ಬಿಜೆಪಿ ಶಾಸಕ ಸುನಿಲ್ ಕುಮಾರ್.

ಇಷ್ಟು ದಿನ ಬಿಜೆಪಿ ಕಚೇರಿಯಿದ್ದ ಈ ಜಾಗವನ್ನು ಸುನೀಲ್ ಬೇನಾಮಿಯಾಗಿ ತನ್ನ ಹೆಂಡತಿಯ ತಾಯಿ (ಅತ್ತೆ) ಹೆಸರಿನಲ್ಲಿ ಖರೀದಿಸಿದ್ದಾರೆ ಎಂಬ ಆರೋಪ ಬಿಜೆಪಿ ಕಾರ್ಯಕರ್ತರದು. ಒಂದು ಅಂದಾಜಿನಂತೆ ಈ ಬಂಗ್ಲೆಯ ಕಟ್ಟಡಕ್ಕೇ ಐದು ಕೋಟಿ ರೂ ಬೇಕು. ಆ ನಂತರ ಅಂದ-ಚಂದ ಫಿನಿಶಿಂಗ್ ಅಂತೆಲ್ಲ ಇನ್ನೆರಡು ಕೋಟಿ ಅನಿವಾರ್ಯವಂತೆ. ಅವರು ಎಷ್ಟಾದರೂ ಖರ್ಚು ಮಾಡಿ ಬಂಗಲೆ ಕಟ್ಟಲಿ. ಆದರೆ ಆ ಬಂಗಲೆ ಕಟ್ಟಲು ಬಳಸುತ್ತಿರುವ ಸಿಮೆಂಟ್‌ ಮಾತ್ರ ಸರ್ಕಾರದ್ದು ಎಂಬ ಆರೋಪವನ್ನು ಬಿಜೆಪಿ ಕಾರ್ಯಕರ್ತರೆ ಹೊರಿಸಿದ್ದು, ವಿಡಿಯೋ ದಾಖಲೆ ಸಹ ಬಿಡುಗಡೆ ಮಾಡಿದ್ದಾರೆ.

ಈಗಾಗಲೇ ಈ ಬಂಗಲೆಗೆ 3 ಸಾವಿರ ಸಿಮೆಂಟ್ ಚೀಲ ಬಳಸಲಾಗಿದೆ. ವಿಡಿಯೋದಲ್ಲಿ ನಿರ್ಮಾಣ ಹಂತದಲ್ಲಿರುವ ಬಂಗಲೆಯಲ್ಲಿನ ಅಲ್ಟ್ರಾಟೆಕ್ ಕಂಪನಿಯ ಸಿಮೆಂಟ್ ಚೀಲಗಳ ಮೇಲೆ ’ನಾಟ್ ಫಾರ್ ಸೇಲ್’ ಎಂದು ಅಚ್ಚಿಸಿರುವುದು ಕಾಣುತ್ತದೆ. ಅಂದರೆ ಈ ಸಿಮೆಂಟ್ ಪ್ರಾಮಾಣಿಕವಾಗಿ ಖರೀದಿಸಿದ್ದಲ್ಲ. ಸರ್ಕಾರಿ ಗೋದಾಮುಗಳಿಂದ ತಂದದ್ದು ಅಥವಾ ಸರ್ಕಾರಿ ಗುತ್ತಿಗೆದಾರರ ಹೆದರಿಸಿ ತರಿಸಿಕೊಂಡಿದ್ದು ಎಂಬುದು ಕಾರ್ಯಕರ್ತರ ಆರೋಪ. ನಾನುಗೌರಿ.ಕಾಂಗೆ ಸಿಕ್ಕ ವಿಡಿಯೋ ದಾಖಲೆಯಂತೆ ಇವತ್ತಿಗೂ ಈ ನಿರ್ಮಾಣ ಹಂತದ ಮನೆಯಲ್ಲಿ ಸರ್ಕಾರದ ಸೀಲ್ ಇರುವ ಸಿಮೆಂಟ್ ಮೂಟೆಗಳಿರುವುದು ಕಂಡುಬಂದಿದೆ.

ವಿಡಿಯೋ ನೋಡಿ

ಕಾರ್ಕಳ ಶಾಸಕ ಸುನಿಲ್ ಕುಮಾರ್ ಬಂಗಲೆಗೆ ಸಿಮೆಂಟ್ ಎಲ್ಲಿಯದು?: ಈ ವಿಡಿಯೋವನ್ನು ಸುಳ್ಳೆನ್ನಲು ಸಾಧ್ಯವೇ?ಸರ್ಕಾರಿ ಕಾಮಗಾರಿಗಳಿಗೆ…

Posted by Naanu Gauri on Tuesday, July 14, 2020

ಸರ್ಕಾರಿ ಕಾಮಗಾರಿಗಳಿಗೆ ಸಿಮೆಂಟ್-ಕಬ್ಬಿಣ ಮತ್ತಿತರ ಸಾಮಗ್ರಿ ಒದಗಿಸುವ ಕೆ.ಆರ್.ಐ.ಡಿ.ಎಲ್ ಎಂಬ ಸಂಸ್ಥೆಯಿದೆ. ಸರ್ಕಾರಿ ಕಾಮಗಾರಿ ನಡೆಸುವ ಗುತ್ತಿಗೆದಾರರಿಗೆ ಈ ಸರ್ಕಾರಿ ಸಂಸ್ಥೆ ಮಾರುಕಟ್ಟೆ ದರಕ್ಕಿಂತಲೂ ಕಡಿಮೆ ಬೆಲೆಗೆ ಸಾಮಗ್ರಿ ಪೂರೈಸುತ್ತದೆ. ಇದನ್ನು ಗುತ್ತಿಗೆದಾರ ಯಾರಿಗೂ ದಾನ ಅಥವಾ ಮಾರಾಟ ಮಾಡುವಂತಿಲ್ಲ. ಹಾಗಿದ್ದರೆ ಶಾಸಕ ಸುನಿಲ್ ಬಂಗಲೆಗೆ ಈ ಸರ್ಕಾರಿ ಸಿಮೆಂಟ್ ಹೇಗೆ ಬಂತು? ಮೂಲಗಳ ಪ್ರಕಾರ ಕೋಟ್ಯಾಂತರ ರೂ.ಗಳ ಕೆ.ಆರ್.ಐ.ಡಿ.ಎಲ್ ಕಾಮಗಾರಿ ಕಾರ್ಕಳದಲ್ಲಿ ನಡೆಯುತ್ತಿದ್ದು ಆ ಕಾಮಗಾರಿ ಕಂಟ್ರಾಕ್ಟರ್‌ಗಳಿಂದ ಲೋಡ್‌ಗಟ್ಟಲೆ ಸಿಮೆಂಟ್ ಶಾಸಕ ಸಾಹೇಬರಿಗೆ ಸರಬರಾಜಾಗಿದೆ ಎನ್ನಲಾಗಿದೆ.

ಕಾರ್ಕಳದಲ್ಲಿ ನಡೆಯುತ್ತಿರುವ 108 ಕೋಟಿ ರೂ.ಗಳ ಏತ ನೀರಾವರಿ ಯೋಜನೆಯ ಗುತ್ತೇಗೆದಾರ ಕಂಪನಿಯು ಶಾಸಕರಿಗೆ ಕಾಣಿಕೆಯಾಗಿ ಸಿಮೆಂಟ್ ನೀಡಿರಬಹುದು ಎಂದು ಕೆಲವರು ಆರೋಪಿಸುತ್ತಾರೆ. ಇನ್ನೊಂದೆಡೆ ಸದರಿ ಕಾಮಗಾರಿ ಉಸ್ತುವಾರಿ ನೋಡಿಕೊಳ್ಳುತ್ತಿರುವುದು ಜಿಲ್ಲಾ ಯುವ ಬಿಜೆಪಿ ಅಧ್ಯಕ್ಷನೂ ಶಾಸಕರ ಪರಮಾಪ್ತ ಸರ್ಕಾರಿ ಗುತ್ತಿಗೆದಾರನೂ ಆಗಿರುವವರು ಕಾರ್ಕಳ ವಿಖ್ಯಾತ್ ಶೆಟ್ಟಿ. ಕಾರ್ಕಳದ ಬಹುತೇಕ ಸರ್ಕಾರಿ ಗುತ್ತಿಗೆಗಳೆಲ್ಲಾ ಇವರಿಗೆ ದಕ್ಕುವುದರಲ್ಲಿ ಶಾಸಕರ ಪಾತ್ರವಿದೆಯೇ? ಅದಕ್ಕಾಗಿ ಶಾಸಕರಿಗೆ ಈ ರೀತಿಯ ಕಾಣಿಕೆಗಳು ಸಿಗುತ್ತವೆಯೇ ಎಂದು ಕಾರ್ಯಕರ್ತರು ಪ್ರಶ್ನಿಸುತ್ತಿದ್ದಾರೆ. ಉತ್ತರಿಸುವ ಕೆಲಸ ಶಾಸಕರದಾಗಿದೆ.


ಇದನ್ನೂ ಓದಿ: ಎಲ್ಲಾ ಅವ್ರೆ ಸ್ವಾಮಿ, ಗಿಜಿಗಿಜಿ ಅಂತಾರೆ – ಕೊರೊನಾ ರೋಗಿಗಳ ಕುರಿತು ಸಚಿವ ಸೋಮಣ್ಣ ವಿವಾದಾತ್ಮಕ ಹೇಳಿಕೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

LEAVE A REPLY

Please enter your comment!
Please enter your name here

- Advertisment -

ಜಾತಿವಾದಿ ಹೇಳಿಕೆ: ಜೆಎನ್‌ಯು ಉಪಕುಲಪತಿ ರಾಜೀನಾಮೆಗೆ ವಿದ್ಯಾರ್ಥಿ ಸಂಘ ಆಗ್ರಹ

ದೆಹಲಿಯ ಜವಾಹರಲಾಲ್ ನೆಹರು ವಿಶ್ವ ವಿದ್ಯಾಲಯದ (ಜೆಎನ್‌ಯು) ಉಪಕುಲಪತಿ ಶಾಂತಿಶ್ರೀ ಧೂಳಿಪುಡಿ ಪಂಡಿತ್ ಅವರು 'ದ ಸಂಡೇ ಗಾರ್ಡಿಯನ್' ಯೂಟ್ಯೂಬ್‌ ಚಾನೆಲ್‌ನ ಪಾಡ್‌ಕಾಸ್ಟ್‌ನಲ್ಲಿ 'ಜಾತಿ ಮತ್ತು ವಿಕ್ಟಿಮ್ ಕಾರ್ಡ್' ಕುರಿತು ನೀಡಿದ ಹೇಳಿಕೆ...

10 ವರ್ಷಗಳಲ್ಲಿ 33 ಬಾಲಕರ ಮೇಲೆ ಲೈಂಗಿಕ ದೌರ್ಜನ್ಯ : ದಂಪತಿಗೆ ಮರಣದಂಡನೆ

ಸುಮಾರು 10 ವರ್ಷಗಳಲ್ಲಿ 33 ಬಾಲಕರ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಪ್ರಕರಣದಲ್ಲಿ ದಂಪತಿಗೆ ಮರಣದಂಡನೆ ವಿಧಿಸಿ ಉತ್ತರ ಪ್ರದೇಶದ ಬಂಡಾ ವಿಶೇಷ ಪೋಕ್ಸೋ ನ್ಯಾಯಾಲಯ ಶುಕ್ರವಾರ (ಫೆ.20) ಆದೇಶಿಸಿದೆ. ಉತ್ತರ ಪ್ರದೇಶದ...

ರಾಜ್ಯಸಭೆ ಚುನಾವಣೆ : ಬಿಹಾರದಲ್ಲಿ ಕಿಂಗ್ ಮೇಕರ್ ಆದ ಓವೈಸಿ ಪಕ್ಷ

ಮಾರ್ಚ್ 16ರಂದು ನಡೆಯಲಿರುವ ಬಿಹಾರದ ಐದು ರಾಜ್ಯಸಭಾ ಸ್ಥಾನಗಳ ಚುನಾವಣೆಯಲ್ಲಿ ಹೈದರಾಬಾದ್ ಸಂಸದ ಅಸಾದುದ್ದೀನ್ ಓವೈಸಿ ಅವರ ಎಐಎಂಐಎಂ ಪಕ್ಷವು 'ಕಿಂಗ್ ಮೇಕರ್' ಆಗಿ ಹೊರಹೊಮ್ಮಿದೆ. ಬಿಹಾರದಲ್ಲಿ ಒಂದು ರಾಜ್ಯಸಭಾ ಸ್ಥಾನ ಗೆಲ್ಲಲು ಕನಿಷ್ಠ...

ದೆಹಲಿ : ಪ್ರಧಾನಿ ಮನೆ ಬಳಿಯ ಕೊಳಗೇರಿಗಳ 717 ಕುಟುಂಬಗಳಿಗೆ ಮನೆ ಖಾಲಿ ಮಾಡುವಂತೆ ನೋಟಿಸ್

ನವದೆಹಲಿಯ ಪ್ರಧಾನಿ ನಿವಾಸದ ಬಳಿಯ ಮೂರು ಕೊಳಗೇರಿಗಳಲ್ಲಿ ವಾಸಿಸುತ್ತಿರುವ ಏಳುನೂರ ಹದಿನೇಳು ಕುಟುಂಬಗಳು ಮಾರ್ಚ್ 6ರೊಳಗೆ ತಮ್ಮ ಮನೆಗಳನ್ನು ಖಾಲಿ ಮಾಡುವಂತೆ ಸೂಚಿಸಲಾಗಿದೆ. ಇಲ್ಲದಿದ್ದರೆ ಕಾನೂನು ಕ್ರಮ ಎದುರಿಸಲು ಸಿದ್ದರಾಗುವಂತೆ ಎಚ್ಚರಿಕೆ ನೀಡಲಾಗಿದೆ...

ಹೊಸ ಅಸ್ತ್ರ ಪ್ರಯೋಗಿಸಿದ ಟ್ರಂಪ್ : ಎಲ್ಲಾ ರಾಷ್ಟ್ರಗಳ ಆಮದು ಮೇಲೆ ಶೇ.10ರಷ್ಟು ಜಾಗತಿಕ ಸುಂಕ ಘೋಷಣೆ

ಎಲ್ಲಾ ದೇಶಗಳ ಆಮದುಗಳ ಮೇಲೆ ಹೊಸದಾಗಿ ಶೇಕಡ 10 ಸುಂಕ ವಿಧಿಸುವ ಕಾರ್ಯನಿರ್ವಾಹಕ ಆದೇಶಕ್ಕೆ ಸಹಿ ಹಾಕಿರುವುದಾಗಿ ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಶುಕ್ರವಾರ (ಫೆ.20) ಘೋಷಿಸಿದ್ದಾರೆ. ಇದಕ್ಕೂ ಕೆಲ ಗಂಟೆಗಳ ಮೊದಲು,...

ಭಾರತದೊಂದಿಗಿನ ವ್ಯಾಪಾರ ಒಪ್ಪಂದದಲ್ಲಿ ಯಾವುದೇ ಬದಲಾವಣೆ ಇಲ್ಲ: ಸುಪ್ರೀಂ ಕೋರ್ಟ್ ತೀರ್ಪಿನ ಬಳಿಕ ಟ್ರಂಪ್ ಹೇಳಿಕೆ

ಅಮೆರಿಕ ಸುಪ್ರೀಂ ಕೋರ್ಟ್ ಪ್ರತಿ ಸುಂಕ (Reciprocal tariffs) ನೀತಿಯನ್ನು ರದ್ದುಗೊಳಿಸಿದರೂ, ಭಾರತ-ಅಮೆರಿಕ ನಡುವಿನ ವ್ಯಾಪಾರ ಒಪ್ಪಂದದಲ್ಲಿ ಯಾವುದೇ ಬದಲಾವಣೆ ಆಗುವುದಿಲ್ಲ ಎಂದು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಶುಕ್ರವಾರ (ಫೆ.20) ತಿಳಿಸಿದ್ದಾರೆ. ಶ್ವೇತಭವನದಲ್ಲಿ...

ಗುಜರಾತ್: ‘ಲವ್ ಜಿಹಾದ್’ ತಡೆಗೆ ವಿವಾಹ ನೋಂದಣಿ ಪ್ರಕ್ರಿಯೆಯಲ್ಲಿ ಗಮನಾರ್ಹ ಬದಲಾವಣೆಗಳನ್ನು ಮಾಡುತ್ತೇವೆ; ಡಿಸಿಎಂ ಹರ್ಷ ಸಾಂಘವಿ ಘೋಷಣೆ

ಅಹಮದಾಬಾದ್: ಗುಜರಾತ್‌ನ ಉಪಮುಖ್ಯಮಂತ್ರಿ ಹರ್ಷ ಸಾಂಘವಿ ಶುಕ್ರವಾರ, ರಾಜ್ಯ ಸರ್ಕಾರವು ವಿವಾಹ ನೋಂದಣಿ ಕಾರ್ಯವಿಧಾನದಲ್ಲಿ ಬದಲಾವಣೆಗಳನ್ನು ತರಲಿದೆ ಎಂದು ಘೋಷಿಸಿದ್ದು, "ಸಮಾಜ ವಿರೋಧಿ ಶಕ್ತಿಗಳು", ವಿಶೇಷವಾಗಿ ಗುಜರಾತ್‌ನ ಹೆಣ್ಣುಮಕ್ಕಳನ್ನು "ಲವ್ ಜಿಹಾದ್" ಗಾಗಿ...

ಬಂಗಾಳ ಎಸ್ಐಆರ್ ಪ್ರಕ್ರಿಯೆ: ಚುನಾವಣಾ ಆಯೋಗದ ಸಹಾಯಕ್ಕೆ ನ್ಯಾಯಾಂಗ ಅಧಿಕಾರಿಗಳನ್ನು ನೇಮಿಸಲು ಕಲ್ಕತ್ತಾ ಹೈಕೋರ್ಟ್‌ಗೆ ಸುಪ್ರೀಂ ಸೂಚನೆ

ನವದೆಹಲಿ: ಪಶ್ಚಿಮ ಬಂಗಾಳ ಸರ್ಕಾರ ಮತ್ತು ಚುನಾವಣಾ ಆಯೋಗದ ನಡುವೆ ಮತದಾರರ ಪಟ್ಟಿ ಶುದ್ಧೀಕರಣ ಅಭಿಯಾನಕ್ಕೆ ಸಂಬಂಧಿಸಿದಂತೆ ದುರದೃಷ್ಟಕರ ಆರೋಪದ ಆಟ ನಡೆಯುತ್ತಿದೆ ಎಂದು ಪ್ರತಿಕ್ರಿಯಿಸಿರುವ ಸುಪ್ರೀಂ ಕೋರ್ಟ್, ವಿಶೇಷ ತೀವ್ರ ಪರಿಷ್ಕರಣೆ...

ಬಾಲಿವುಡ್ ನಟ ರಣವೀರ್ ಸಿಂಗ್ ಗೆ ಬಿಷ್ಣೋಯಿ ಗ್ಯಾಂಗ್ ನಿಂದ ಜೀವಬೆದರಿಕೆ: ಅಮೆರಿಕಾ ನಂಬರ್ ನಿಂದ 10ಕೋಟಿ ರೂ. ಬೇಡಿಕೆ 

ಬಿಷ್ಣೋಯ್ ಗ್ಯಾಂಗ್ ಬಾಲಿವುಡ್ ನಟ ರಣವೀರ್ ಸಿಂಗ್ ಅವರಿಂದ 10 ಕೋಟಿ ರೂ.ಗೆ ಬೇಡಿಕೆ ಇಟ್ಟಿದೆ ಎನ್ನಲಾಗಿದೆ. ಅಮೆರಿಕದ ಸಂಖ್ಯೆಯಿಂದ ಬಂದ ವಾಯ್ಸ್ ನೋಟ್ ಮೂಲಕ ಬೆದರಿಕೆ ಹಾಕಲಾಗಿದೆ ಎಂದು ವರದಿಯಾಗಿದೆ. ಮುಂಬೈ ಪೊಲೀಸ್...

‘ರಾಜಿ ಮಾಡಿಕೊಂಡ ಪ್ರಧಾನಿ’: ಎಐ ಇಂಪ್ಯಾಕ್ಟ್ ಶೃಂಗಸಭೆಯಲ್ಲಿ ಯುವ ಕಾಂಗ್ರೆಸ್‌ ಕಾರ್ಯಕರ್ತರಿಂದ ಶರ್ಟ್‌ ಬಿಚ್ಚಿ ಪ್ರತಿಭಟನೆ

ಎಐ ಇಂಪ್ಯಾಕ್ಟ್ ಶೃಂಗಸಭೆಗೆ ಸಂಬಂಧಿಸಿದಂತೆ ಪ್ರಧಾನಿ ನರೇಂದ್ರ ಮೋದಿಯವರನ್ನು ಗುರಿಯಾಗಿಸಿಕೊಂಡು ಮತ್ತು ಪ್ರಧಾನಿ "ರಾಜಿ ಮಾಡಿಕೊಂಡಿದ್ದಾರೆ" ಎಂದು ಆರೋಪಿಸಿ ಭಾರತೀಯ ಯುವ ಕಾಂಗ್ರೆಸ್ ಕಾರ್ಯಕರ್ತರು ಶುಕ್ರವಾರ ಭಾರತ್ ಮಂಟಪದಲ್ಲಿ ಶರ್ಟ್ ಧರಿಸದೆ ಪ್ರತಿಭಟನೆ...