Homeಕರ್ನಾಟಕಕಾರ್ಕಳ ಶಾಸಕ ಸುನಿಲ್ ಕುಮಾರ್ ಬಂಗಲೆಗೆ ಸಿಮೆಂಟ್ ಎಲ್ಲಿಯದು?: ಈ ವಿಡಿಯೋವನ್ನು ಸುಳ್ಳೆನ್ನಲು ಸಾಧ್ಯವೇ?

ಕಾರ್ಕಳ ಶಾಸಕ ಸುನಿಲ್ ಕುಮಾರ್ ಬಂಗಲೆಗೆ ಸಿಮೆಂಟ್ ಎಲ್ಲಿಯದು?: ಈ ವಿಡಿಯೋವನ್ನು ಸುಳ್ಳೆನ್ನಲು ಸಾಧ್ಯವೇ?

ಈಗಾಗಲೇ ಈ ಬಂಗಲೆಗೆ 3 ಸಾವಿರ ಸಿಮೆಂಟ್ ಚೀಲ ಬಳಸಲಾಗಿದೆ. ವಿಡಿಯೋದಲ್ಲಿ ನಿರ್ಮಾಣ ಹಂತದಲ್ಲಿರುವ ಬಂಗಲೆಯಲ್ಲಿರುವ ಅಲ್ಟ್ರಾಟೆಕ್ ಕಂಪನಿಯ ಸಿಮೆಂಟ್ ಚೀಲಗಳ ಮೇಲೆ ’ನಾಟ್ ಫಾರ್ ಸೇಲ್’ ಎಂದು ಅಚ್ಚಿಸಿರುವುದು ಕಾಣುತ್ತದೆ.

- Advertisement -
- Advertisement -

ಕಾರ್ಕಳ ತಾಲ್ಲೂಕು ಪಂಚಾಯ್ತಿ ರಸ್ತೆಯಲ್ಲಿ ಭರ್ಜರಿ ಬಂಗ್ಲೆಯೊಂದು ತಲೆಯೆತ್ತುತ್ತಿದೆ. ಮುಂಬೈನ ಶಿವಸೇನೆಯ ಮುಖ್ಯ ಕಚೇರಿಯಲ್ಲಿರುವ ಬೃಹತ್ ಕಂಬಗಳನ್ನು ಹೋಲುವ ಆರು ಎತ್ತರದ ಕಂಬಗಳ ಮನೆಯಿದು. ಒಂದೊಂದು ಕಂಬಕ್ಕೆ ಭರ್ತಿ ಏಳೂ ನೂರು ಮೂಟೆ ಸಿಮೆಂಟ್, ಟನ್‌ಗಟ್ಟಲೆ ಕಬ್ಬಿಣ ಬಳಸಲಾಗಿದೆ ಎನ್ನಲಾಗುತ್ತಿದೆ. ಈ ಬಂಗಲೆಯ ಮುಂದೆ ನಿಂತು ಮನೆ ಕಟ್ಟಿಸುತ್ತಿರುವ ಥ್ರಿಲ್ ಅನುಭವಿಸುತ್ತಿರುವುದು ಬೇರೆ ಯಾರೂ ಅಲ್ಲ, ಕಾರ್ಕಳದ ಬಿಜೆಪಿ ಶಾಸಕ ಸುನಿಲ್ ಕುಮಾರ್.

ಇಷ್ಟು ದಿನ ಬಿಜೆಪಿ ಕಚೇರಿಯಿದ್ದ ಈ ಜಾಗವನ್ನು ಸುನೀಲ್ ಬೇನಾಮಿಯಾಗಿ ತನ್ನ ಹೆಂಡತಿಯ ತಾಯಿ (ಅತ್ತೆ) ಹೆಸರಿನಲ್ಲಿ ಖರೀದಿಸಿದ್ದಾರೆ ಎಂಬ ಆರೋಪ ಬಿಜೆಪಿ ಕಾರ್ಯಕರ್ತರದು. ಒಂದು ಅಂದಾಜಿನಂತೆ ಈ ಬಂಗ್ಲೆಯ ಕಟ್ಟಡಕ್ಕೇ ಐದು ಕೋಟಿ ರೂ ಬೇಕು. ಆ ನಂತರ ಅಂದ-ಚಂದ ಫಿನಿಶಿಂಗ್ ಅಂತೆಲ್ಲ ಇನ್ನೆರಡು ಕೋಟಿ ಅನಿವಾರ್ಯವಂತೆ. ಅವರು ಎಷ್ಟಾದರೂ ಖರ್ಚು ಮಾಡಿ ಬಂಗಲೆ ಕಟ್ಟಲಿ. ಆದರೆ ಆ ಬಂಗಲೆ ಕಟ್ಟಲು ಬಳಸುತ್ತಿರುವ ಸಿಮೆಂಟ್‌ ಮಾತ್ರ ಸರ್ಕಾರದ್ದು ಎಂಬ ಆರೋಪವನ್ನು ಬಿಜೆಪಿ ಕಾರ್ಯಕರ್ತರೆ ಹೊರಿಸಿದ್ದು, ವಿಡಿಯೋ ದಾಖಲೆ ಸಹ ಬಿಡುಗಡೆ ಮಾಡಿದ್ದಾರೆ.

ಈಗಾಗಲೇ ಈ ಬಂಗಲೆಗೆ 3 ಸಾವಿರ ಸಿಮೆಂಟ್ ಚೀಲ ಬಳಸಲಾಗಿದೆ. ವಿಡಿಯೋದಲ್ಲಿ ನಿರ್ಮಾಣ ಹಂತದಲ್ಲಿರುವ ಬಂಗಲೆಯಲ್ಲಿನ ಅಲ್ಟ್ರಾಟೆಕ್ ಕಂಪನಿಯ ಸಿಮೆಂಟ್ ಚೀಲಗಳ ಮೇಲೆ ’ನಾಟ್ ಫಾರ್ ಸೇಲ್’ ಎಂದು ಅಚ್ಚಿಸಿರುವುದು ಕಾಣುತ್ತದೆ. ಅಂದರೆ ಈ ಸಿಮೆಂಟ್ ಪ್ರಾಮಾಣಿಕವಾಗಿ ಖರೀದಿಸಿದ್ದಲ್ಲ. ಸರ್ಕಾರಿ ಗೋದಾಮುಗಳಿಂದ ತಂದದ್ದು ಅಥವಾ ಸರ್ಕಾರಿ ಗುತ್ತಿಗೆದಾರರ ಹೆದರಿಸಿ ತರಿಸಿಕೊಂಡಿದ್ದು ಎಂಬುದು ಕಾರ್ಯಕರ್ತರ ಆರೋಪ. ನಾನುಗೌರಿ.ಕಾಂಗೆ ಸಿಕ್ಕ ವಿಡಿಯೋ ದಾಖಲೆಯಂತೆ ಇವತ್ತಿಗೂ ಈ ನಿರ್ಮಾಣ ಹಂತದ ಮನೆಯಲ್ಲಿ ಸರ್ಕಾರದ ಸೀಲ್ ಇರುವ ಸಿಮೆಂಟ್ ಮೂಟೆಗಳಿರುವುದು ಕಂಡುಬಂದಿದೆ.

ವಿಡಿಯೋ ನೋಡಿ

ಕಾರ್ಕಳ ಶಾಸಕ ಸುನಿಲ್ ಕುಮಾರ್ ಬಂಗಲೆಗೆ ಸಿಮೆಂಟ್ ಎಲ್ಲಿಯದು?: ಈ ವಿಡಿಯೋವನ್ನು ಸುಳ್ಳೆನ್ನಲು ಸಾಧ್ಯವೇ?ಸರ್ಕಾರಿ ಕಾಮಗಾರಿಗಳಿಗೆ…

Posted by Naanu Gauri on Tuesday, July 14, 2020

ಸರ್ಕಾರಿ ಕಾಮಗಾರಿಗಳಿಗೆ ಸಿಮೆಂಟ್-ಕಬ್ಬಿಣ ಮತ್ತಿತರ ಸಾಮಗ್ರಿ ಒದಗಿಸುವ ಕೆ.ಆರ್.ಐ.ಡಿ.ಎಲ್ ಎಂಬ ಸಂಸ್ಥೆಯಿದೆ. ಸರ್ಕಾರಿ ಕಾಮಗಾರಿ ನಡೆಸುವ ಗುತ್ತಿಗೆದಾರರಿಗೆ ಈ ಸರ್ಕಾರಿ ಸಂಸ್ಥೆ ಮಾರುಕಟ್ಟೆ ದರಕ್ಕಿಂತಲೂ ಕಡಿಮೆ ಬೆಲೆಗೆ ಸಾಮಗ್ರಿ ಪೂರೈಸುತ್ತದೆ. ಇದನ್ನು ಗುತ್ತಿಗೆದಾರ ಯಾರಿಗೂ ದಾನ ಅಥವಾ ಮಾರಾಟ ಮಾಡುವಂತಿಲ್ಲ. ಹಾಗಿದ್ದರೆ ಶಾಸಕ ಸುನಿಲ್ ಬಂಗಲೆಗೆ ಈ ಸರ್ಕಾರಿ ಸಿಮೆಂಟ್ ಹೇಗೆ ಬಂತು? ಮೂಲಗಳ ಪ್ರಕಾರ ಕೋಟ್ಯಾಂತರ ರೂ.ಗಳ ಕೆ.ಆರ್.ಐ.ಡಿ.ಎಲ್ ಕಾಮಗಾರಿ ಕಾರ್ಕಳದಲ್ಲಿ ನಡೆಯುತ್ತಿದ್ದು ಆ ಕಾಮಗಾರಿ ಕಂಟ್ರಾಕ್ಟರ್‌ಗಳಿಂದ ಲೋಡ್‌ಗಟ್ಟಲೆ ಸಿಮೆಂಟ್ ಶಾಸಕ ಸಾಹೇಬರಿಗೆ ಸರಬರಾಜಾಗಿದೆ ಎನ್ನಲಾಗಿದೆ.

ಕಾರ್ಕಳದಲ್ಲಿ ನಡೆಯುತ್ತಿರುವ 108 ಕೋಟಿ ರೂ.ಗಳ ಏತ ನೀರಾವರಿ ಯೋಜನೆಯ ಗುತ್ತೇಗೆದಾರ ಕಂಪನಿಯು ಶಾಸಕರಿಗೆ ಕಾಣಿಕೆಯಾಗಿ ಸಿಮೆಂಟ್ ನೀಡಿರಬಹುದು ಎಂದು ಕೆಲವರು ಆರೋಪಿಸುತ್ತಾರೆ. ಇನ್ನೊಂದೆಡೆ ಸದರಿ ಕಾಮಗಾರಿ ಉಸ್ತುವಾರಿ ನೋಡಿಕೊಳ್ಳುತ್ತಿರುವುದು ಜಿಲ್ಲಾ ಯುವ ಬಿಜೆಪಿ ಅಧ್ಯಕ್ಷನೂ ಶಾಸಕರ ಪರಮಾಪ್ತ ಸರ್ಕಾರಿ ಗುತ್ತಿಗೆದಾರನೂ ಆಗಿರುವವರು ಕಾರ್ಕಳ ವಿಖ್ಯಾತ್ ಶೆಟ್ಟಿ. ಕಾರ್ಕಳದ ಬಹುತೇಕ ಸರ್ಕಾರಿ ಗುತ್ತಿಗೆಗಳೆಲ್ಲಾ ಇವರಿಗೆ ದಕ್ಕುವುದರಲ್ಲಿ ಶಾಸಕರ ಪಾತ್ರವಿದೆಯೇ? ಅದಕ್ಕಾಗಿ ಶಾಸಕರಿಗೆ ಈ ರೀತಿಯ ಕಾಣಿಕೆಗಳು ಸಿಗುತ್ತವೆಯೇ ಎಂದು ಕಾರ್ಯಕರ್ತರು ಪ್ರಶ್ನಿಸುತ್ತಿದ್ದಾರೆ. ಉತ್ತರಿಸುವ ಕೆಲಸ ಶಾಸಕರದಾಗಿದೆ.


ಇದನ್ನೂ ಓದಿ: ಎಲ್ಲಾ ಅವ್ರೆ ಸ್ವಾಮಿ, ಗಿಜಿಗಿಜಿ ಅಂತಾರೆ – ಕೊರೊನಾ ರೋಗಿಗಳ ಕುರಿತು ಸಚಿವ ಸೋಮಣ್ಣ ವಿವಾದಾತ್ಮಕ ಹೇಳಿಕೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

LEAVE A REPLY

Please enter your comment!
Please enter your name here

- Advertisment -

ದಲಿತ ವಿದ್ಯಾರ್ಥಿನಿ ಕೊಲೆ ಪ್ರಕರಣ: ಪ್ರತಿಭಟನಾಕಾರರ ಮೇಲೆ ಪೊಲೀಸ್ ಲಾಠಿಚಾರ್ಜ್; ಯೋಗಿ ಸರ್ಕಾರದ ವಿರುದ್ಧ ತೀವ್ರ ಆಕ್ರೋಶ

ನವದೆಹಲಿ: ಜುಲೈ 8 ರಂದು ಮೀರತ್‌ನಲ್ಲಿ ನಡೆದ ದಲಿತ ವಿದ್ಯಾರ್ಥಿನಿಯ ಹತ್ಯೆಯನ್ನು ಖಂಡಿಸಿ ಪ್ರತಿಭಟನೆ ನಡೆಸುತ್ತಿದ್ದ ದಲಿತ ಕಾರ್ಯಕರ್ತರು ಮತ್ತು ಮೃತರ ಕುಟುಂಬ ಸದಸ್ಯರ ಮೇಲೆ ಉತ್ತರ ಪ್ರದೇಶ ಪೊಲೀಸರು ಭೀಕರ ಹಲ್ಲೆ,...

ಒಮಾನ್ ಕರಾವಳಿಯಲ್ಲಿ ಮತ್ತೊಂದು ಹಡಗಿನ ಮೇಲೆ ದಾಳಿ: ಭಾರತೀಯ ಪ್ರಜೆ ನಾಪತ್ತೆ, 10 ಜನರ ರಕ್ಷಣೆ: ವಿದೇಶಾಂಗ ಸಚಿವಾಲಯ ಮಾಹಿತಿ

ನವದೆಹಲಿ: ಜುಲೈ 12 ರಂದು ಒಮಾನ್ ಕರಾವಳಿಯ ಅಂತರರಾಷ್ಟ್ರೀಯ ಜಲಮಾರ್ಗದಲ್ಲಿ ಸಾಗುತ್ತಿದ್ದ ‘ಜಿಎಫ್‌ಎಸ್ ಗ್ಯಾಲಕ್ಸಿ’ (GFS Galaxy) ಎಂಬ ವಾಣಿಜ್ಯ ಹಡಗಿನ ಮೇಲೆ ನಡೆದ ದಾಳಿಯನ್ನು ಭಾರತ ಸರ್ಕಾರ ತೀವ್ರವಾಗಿ ಖಂಡಿಸಿದೆ. ಭೀಕರ...

SIR ಪ್ರಕ್ರಿಯೆಯಲ್ಲಿ ಎಐ ಬಳಕೆ, ಭಾರೀ ಪ್ರಮಾಣದಲ್ಲಿ ಮತದಾರರ ಹೆಸರು ಡಿಲೀಟ್ : ಕಳವಳ ವ್ಯಕ್ತಪಡಿಸಿದ ವಿಶ್ವಸಂಸ್ಥೆಯ ವಿಶೇಷ ವರದಿಗಾರರು

ಭಾರತೀಯ ಚುನಾವಣಾ ಆಯೋಗ (ಇಸಿಐ) ಕೈಗೊಂಡ ಮತದಾರರ ಪಟ್ಟಿಗಳ ವಿಶೇಷ ತೀವ್ರ ಪರಿಷ್ಕರಣೆಯು (ಎಸ್‌ಐಆರ್) ವ್ಯಾಪಕ ಪ್ರಮಾಣದಲ್ಲಿ ಮತದಾರರ ಹೆಸರುಗಳ ಅಳಿಸುವಿಕೆಗೆ ಕಾರಣವಾಗಿದೆ ಮತ್ತು ಇದು ಮುಸ್ಲಿಮರು ಹಾಗೂ ಇತರ ಅಲ್ಪಸಂಖ್ಯಾತ ಸಮುದಾಯಗಳ...

ಮಹಾರಾಷ್ಟ್ರ: ನಂದೂರ್ಬಾರ್‌ನ ಸರ್ಕಾರಿ ಹಾಸ್ಟೆಲ್‌ನಲ್ಲಿ ಕಲುಷಿತ ಆಹಾರ ಸೇವಿಸಿ 40 ವಿದ್ಯಾರ್ಥಿಗಳು ಅಸ್ವಸ್ಥ; ತೀವ್ರಗೊಂಡ ತನಿಖೆ 

ನಂದೂರ್ಬಾರ್ (ಮಹಾರಾಷ್ಟ್ರ): ಮಹಾರಾಷ್ಟ್ರದ ನಂದೂರ್ಬಾರ್ ಜಿಲ್ಲೆಯ ಶಹಾಡಾ ತಾಲೂಕಿನಲ್ಲಿರುವ ಸರ್ಕಾರಿ ಸಮಾಜ ಕಲ್ಯಾಣ ಇಲಾಖೆಯ ವಸತಿನಿಲಯದಲ್ಲಿ ಶಂಕಿತ ವಿಷಪೂರಿತ ಆಹಾರ ಸೇವಿಸಿ ಸುಮಾರು 40 ವಿದ್ಯಾರ್ಥಿಗಳು ತೀವ್ರವಾಗಿ ಅಸ್ವಸ್ಥಗೊಂಡಿರುವ ಕಳವಳಕಾರಿ ಘಟನೆ ವರದಿಯಾಗಿದೆ.  ಹಾಸ್ಟೆಲ್‌ನಲ್ಲಿ...

ಇರಾನ್‌ನ 140 ಸ್ಥಳಗಳನ್ನು ಗುರಿಯಾಗಿಸಿ ಅಮೆರಿಕದಿಂದ ದಾಳಿ : ಬಹ್ರೇನ್, ಕತಾರ್, ಯುಎಇ ಮೇಲೆ ಇರಾನ್‌ನಿಂದ ಪ್ರತಿದಾಳಿ

ಹಾರ್ಮುಝ್ ಜಲಸಂಧಿಯಲ್ಲಿ ಇರಾನ್ ನಡೆಸಿದ ದಾಳಿಯಿಂದಾಗಿ ಸರಕು ಸಾಗಣೆ ಹಡಗೊಂದು ಹೊತ್ತಿ ಉರಿದು, ಅದರಲ್ಲಿದ್ದ ಸಿಬ್ಬಂದಿ ಹಡಗು ಬಿಟ್ಟು ಹೊರಡುವಂತಾಗಿತ್ತು. ಈ ಘಟನೆಯನ್ನು ಖಂಡಿಸಿ ಅಮೆರಿಕ ಭಾನುವಾರ (ಜು.12) ಮುಂಜಾನೆ ಇರಾನ್ ಮೇಲೆ...

31 ವರ್ಷಗಳ ಹಳೇ ಸಾಲ ತೀರಿಸಲು 1200 ಕಿ.ಮೀ ಪ್ರಯಾಣಿಸಿದ ಕೇರಳದ ಇಸ್ಮಾಯಿಲ್

"ನನ್ನ ಕಣ್ಣುಗಳಿಂದ ಆನಂದಬಾಷ್ಪಗಳು ಉದುರಿದವು. ನನ್ನ ಮನಸ್ಸಿಗೆ ಅದೆಷ್ಟು ನೆಮ್ಮದಿ ಸಿಕ್ಕಿತೆಂದರೆ, ಅದನ್ನು ವಿವರಿಸಲು ಪದಗಳೇ ಸಾಲದು. ಆತನಿಗೂ ಅಷ್ಟೇ ದೊಡ್ಡ ಸಮಾಧಾನ." ಹೀಗೆ ಭಾವುಕರಾಗಿ ನುಡಿಯುತ್ತಾರೆ ಮೊಹಮ್ಮದ್ ಇಸ್ಮಾಯಿಲ್. 1995ರಲ್ಲಿ ಸೌದಿ...

ಬಂಡಾಯದ ಬಳಿಕ ಟಿಎಂಸಿಗೆ ಮತ್ತೊಂದು ಸವಾಲು : ಪಕ್ಷದ ಬ್ಯಾಂಕ್ ಖಾತೆಗಳು ಫ್ರೀಝ್

ಮಮತಾ ಬ್ಯಾನರ್ಜಿ ನೇತೃತ್ವದ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಪಕ್ಷದ ಮೂರು ಬ್ಯಾಂಕ್ ಖಾತೆಗಳಲ್ಲಿರುವ 440 ಕೋಟಿ ರೂಪಾಯಿ ಹಣವನ್ನು ಭಾಗಶಃ ಬಳಸಲು ಕಲ್ಕತ್ತಾ ಹೈಕೋರ್ಟ್ ಅನುಮತಿ ನೀಡಿದ ಮರುದಿನವೇ, ಪಶ್ಚಿಮ ಬಂಗಾಳ ಪೊಲೀಸರು...

ಮಂದಿರ ನಿರ್ಮಾಣದ ಕ್ರೆಡಿಟ್‌ಗೆ ಇದ್ದ ಯಜಮಾನಿಕೆ, ಕೊಳ್ಳೆ ಹೊಡೆದಾಗ ಯಾಕಿಲ್ಲ ಸೇವಕರೇ?

ಬಾಲರಾಮನ ಪ್ರಾಣಪ್ರತಿಷ್ಠಾಪನೆಗೆ ಮುನ್ನ ಪ್ರಧಾನಿಯವರು 11 ದಿನಗಳ ಕಾಲ ಕಠಿಣ ಉಪವಾಸ ವ್ರತ ಆಚರಿಸಿದ್ದರು, ಕೇವಲ ಎಳನೀರು ಕುಡಿದರು, ನೆಲದ ಮೇಲೆ ಮಲಗಿದರು ಎಂದು ಇಡೀ ದೇಶಕ್ಕೆ ಸಾರಲಾಗಿತ್ತು. ಅಯೋಧ್ಯೆಯಿಂದ ಹೊಸ ಕಾಲದ...

‘ಫ್ರೀ ಪ್ಯಾಲೆಸ್ತೀನ್’ ಘೋಷಣೆಯನ್ನು ತಮಾಷೆ ಮಾಡಿದ ಸೈಫ್ ಅಲಿ ಖಾನ್ – ನಿರೂಪಕಿ ಅನುಪಮಾ ಚೋಪ್ರಾ

ಸ್ಪ್ಯಾನಿಷ್ ನಟ ಜೇವಿಯರ್ ಬಾರ್ಡೆಮ್ ಅವರ "ಫ್ರೀ ಪ್ಯಾಲೆಸ್ತೀನ್" ಹೇಳಿಕೆ ಕುರಿತು ಸೈಫ್ ಅಲಿ ಖಾನ್ ಮತ್ತು ಚಲನಚಿತ್ರ ಪತ್ರಕರ್ತೆ ಅನುಪಮಾ ಚೋಪ್ರಾ ನಗುತ್ತಿರುವ ಕ್ಲಿಪ್ ಆನ್‌ಲೈನ್‌ನಲ್ಲಿ ವೈರಲ್ ಆಗಿದ್ದು, ನಟನ ಅಸೂಕ್ಷ್ಮ...

ತೆಲಂಗಾಣ : ಪೋಕ್ಸೋ ಪ್ರಕರಣದ ಆರೋಪಿಯಿಂದ ಸಂತ್ರಸ್ತೆ ಸೇರಿ 6 ಜನರ ಹತ್ಯೆ

ಪೋಕ್ಸೋ ಪ್ರಕರಣದ ಆರೋಪಿಯೊಬ್ಬ ಸಂತ್ರಸ್ತೆ ಸೇರಿದಂತೆ ಒಟ್ಟು ಆರು ಜನರನ್ನು ಭೀಕರವಾಗಿ ಹತ್ಯೆ ಮಾಡಿರುವ ಘಟನೆ ತೆಲಂಗಾಣದ ರಂಗಾರೆಡ್ಡಿ ಜಿಲ್ಲೆಯ ಶಾಬಾದ್ ಮಂಡಲದಲ್ಲಿ ಶುಕ್ರವಾರ (ಜು.10) ರಾತ್ರಿ ನಡೆದಿದೆ. 28 ವರ್ಷ ವಯಸ್ಸಿನ...