Homeಕರ್ನಾಟಕಕಾರ್ಕಳ ಶಾಸಕ ಸುನಿಲ್ ಕುಮಾರ್ ಬಂಗಲೆಗೆ ಸಿಮೆಂಟ್ ಎಲ್ಲಿಯದು?: ಈ ವಿಡಿಯೋವನ್ನು ಸುಳ್ಳೆನ್ನಲು ಸಾಧ್ಯವೇ?

ಕಾರ್ಕಳ ಶಾಸಕ ಸುನಿಲ್ ಕುಮಾರ್ ಬಂಗಲೆಗೆ ಸಿಮೆಂಟ್ ಎಲ್ಲಿಯದು?: ಈ ವಿಡಿಯೋವನ್ನು ಸುಳ್ಳೆನ್ನಲು ಸಾಧ್ಯವೇ?

ಈಗಾಗಲೇ ಈ ಬಂಗಲೆಗೆ 3 ಸಾವಿರ ಸಿಮೆಂಟ್ ಚೀಲ ಬಳಸಲಾಗಿದೆ. ವಿಡಿಯೋದಲ್ಲಿ ನಿರ್ಮಾಣ ಹಂತದಲ್ಲಿರುವ ಬಂಗಲೆಯಲ್ಲಿರುವ ಅಲ್ಟ್ರಾಟೆಕ್ ಕಂಪನಿಯ ಸಿಮೆಂಟ್ ಚೀಲಗಳ ಮೇಲೆ ’ನಾಟ್ ಫಾರ್ ಸೇಲ್’ ಎಂದು ಅಚ್ಚಿಸಿರುವುದು ಕಾಣುತ್ತದೆ.

- Advertisement -
- Advertisement -

ಕಾರ್ಕಳ ತಾಲ್ಲೂಕು ಪಂಚಾಯ್ತಿ ರಸ್ತೆಯಲ್ಲಿ ಭರ್ಜರಿ ಬಂಗ್ಲೆಯೊಂದು ತಲೆಯೆತ್ತುತ್ತಿದೆ. ಮುಂಬೈನ ಶಿವಸೇನೆಯ ಮುಖ್ಯ ಕಚೇರಿಯಲ್ಲಿರುವ ಬೃಹತ್ ಕಂಬಗಳನ್ನು ಹೋಲುವ ಆರು ಎತ್ತರದ ಕಂಬಗಳ ಮನೆಯಿದು. ಒಂದೊಂದು ಕಂಬಕ್ಕೆ ಭರ್ತಿ ಏಳೂ ನೂರು ಮೂಟೆ ಸಿಮೆಂಟ್, ಟನ್‌ಗಟ್ಟಲೆ ಕಬ್ಬಿಣ ಬಳಸಲಾಗಿದೆ ಎನ್ನಲಾಗುತ್ತಿದೆ. ಈ ಬಂಗಲೆಯ ಮುಂದೆ ನಿಂತು ಮನೆ ಕಟ್ಟಿಸುತ್ತಿರುವ ಥ್ರಿಲ್ ಅನುಭವಿಸುತ್ತಿರುವುದು ಬೇರೆ ಯಾರೂ ಅಲ್ಲ, ಕಾರ್ಕಳದ ಬಿಜೆಪಿ ಶಾಸಕ ಸುನಿಲ್ ಕುಮಾರ್.

ಇಷ್ಟು ದಿನ ಬಿಜೆಪಿ ಕಚೇರಿಯಿದ್ದ ಈ ಜಾಗವನ್ನು ಸುನೀಲ್ ಬೇನಾಮಿಯಾಗಿ ತನ್ನ ಹೆಂಡತಿಯ ತಾಯಿ (ಅತ್ತೆ) ಹೆಸರಿನಲ್ಲಿ ಖರೀದಿಸಿದ್ದಾರೆ ಎಂಬ ಆರೋಪ ಬಿಜೆಪಿ ಕಾರ್ಯಕರ್ತರದು. ಒಂದು ಅಂದಾಜಿನಂತೆ ಈ ಬಂಗ್ಲೆಯ ಕಟ್ಟಡಕ್ಕೇ ಐದು ಕೋಟಿ ರೂ ಬೇಕು. ಆ ನಂತರ ಅಂದ-ಚಂದ ಫಿನಿಶಿಂಗ್ ಅಂತೆಲ್ಲ ಇನ್ನೆರಡು ಕೋಟಿ ಅನಿವಾರ್ಯವಂತೆ. ಅವರು ಎಷ್ಟಾದರೂ ಖರ್ಚು ಮಾಡಿ ಬಂಗಲೆ ಕಟ್ಟಲಿ. ಆದರೆ ಆ ಬಂಗಲೆ ಕಟ್ಟಲು ಬಳಸುತ್ತಿರುವ ಸಿಮೆಂಟ್‌ ಮಾತ್ರ ಸರ್ಕಾರದ್ದು ಎಂಬ ಆರೋಪವನ್ನು ಬಿಜೆಪಿ ಕಾರ್ಯಕರ್ತರೆ ಹೊರಿಸಿದ್ದು, ವಿಡಿಯೋ ದಾಖಲೆ ಸಹ ಬಿಡುಗಡೆ ಮಾಡಿದ್ದಾರೆ.

ಈಗಾಗಲೇ ಈ ಬಂಗಲೆಗೆ 3 ಸಾವಿರ ಸಿಮೆಂಟ್ ಚೀಲ ಬಳಸಲಾಗಿದೆ. ವಿಡಿಯೋದಲ್ಲಿ ನಿರ್ಮಾಣ ಹಂತದಲ್ಲಿರುವ ಬಂಗಲೆಯಲ್ಲಿನ ಅಲ್ಟ್ರಾಟೆಕ್ ಕಂಪನಿಯ ಸಿಮೆಂಟ್ ಚೀಲಗಳ ಮೇಲೆ ’ನಾಟ್ ಫಾರ್ ಸೇಲ್’ ಎಂದು ಅಚ್ಚಿಸಿರುವುದು ಕಾಣುತ್ತದೆ. ಅಂದರೆ ಈ ಸಿಮೆಂಟ್ ಪ್ರಾಮಾಣಿಕವಾಗಿ ಖರೀದಿಸಿದ್ದಲ್ಲ. ಸರ್ಕಾರಿ ಗೋದಾಮುಗಳಿಂದ ತಂದದ್ದು ಅಥವಾ ಸರ್ಕಾರಿ ಗುತ್ತಿಗೆದಾರರ ಹೆದರಿಸಿ ತರಿಸಿಕೊಂಡಿದ್ದು ಎಂಬುದು ಕಾರ್ಯಕರ್ತರ ಆರೋಪ. ನಾನುಗೌರಿ.ಕಾಂಗೆ ಸಿಕ್ಕ ವಿಡಿಯೋ ದಾಖಲೆಯಂತೆ ಇವತ್ತಿಗೂ ಈ ನಿರ್ಮಾಣ ಹಂತದ ಮನೆಯಲ್ಲಿ ಸರ್ಕಾರದ ಸೀಲ್ ಇರುವ ಸಿಮೆಂಟ್ ಮೂಟೆಗಳಿರುವುದು ಕಂಡುಬಂದಿದೆ.

ವಿಡಿಯೋ ನೋಡಿ

ಕಾರ್ಕಳ ಶಾಸಕ ಸುನಿಲ್ ಕುಮಾರ್ ಬಂಗಲೆಗೆ ಸಿಮೆಂಟ್ ಎಲ್ಲಿಯದು?: ಈ ವಿಡಿಯೋವನ್ನು ಸುಳ್ಳೆನ್ನಲು ಸಾಧ್ಯವೇ?ಸರ್ಕಾರಿ ಕಾಮಗಾರಿಗಳಿಗೆ…

Posted by Naanu Gauri on Tuesday, July 14, 2020

ಸರ್ಕಾರಿ ಕಾಮಗಾರಿಗಳಿಗೆ ಸಿಮೆಂಟ್-ಕಬ್ಬಿಣ ಮತ್ತಿತರ ಸಾಮಗ್ರಿ ಒದಗಿಸುವ ಕೆ.ಆರ್.ಐ.ಡಿ.ಎಲ್ ಎಂಬ ಸಂಸ್ಥೆಯಿದೆ. ಸರ್ಕಾರಿ ಕಾಮಗಾರಿ ನಡೆಸುವ ಗುತ್ತಿಗೆದಾರರಿಗೆ ಈ ಸರ್ಕಾರಿ ಸಂಸ್ಥೆ ಮಾರುಕಟ್ಟೆ ದರಕ್ಕಿಂತಲೂ ಕಡಿಮೆ ಬೆಲೆಗೆ ಸಾಮಗ್ರಿ ಪೂರೈಸುತ್ತದೆ. ಇದನ್ನು ಗುತ್ತಿಗೆದಾರ ಯಾರಿಗೂ ದಾನ ಅಥವಾ ಮಾರಾಟ ಮಾಡುವಂತಿಲ್ಲ. ಹಾಗಿದ್ದರೆ ಶಾಸಕ ಸುನಿಲ್ ಬಂಗಲೆಗೆ ಈ ಸರ್ಕಾರಿ ಸಿಮೆಂಟ್ ಹೇಗೆ ಬಂತು? ಮೂಲಗಳ ಪ್ರಕಾರ ಕೋಟ್ಯಾಂತರ ರೂ.ಗಳ ಕೆ.ಆರ್.ಐ.ಡಿ.ಎಲ್ ಕಾಮಗಾರಿ ಕಾರ್ಕಳದಲ್ಲಿ ನಡೆಯುತ್ತಿದ್ದು ಆ ಕಾಮಗಾರಿ ಕಂಟ್ರಾಕ್ಟರ್‌ಗಳಿಂದ ಲೋಡ್‌ಗಟ್ಟಲೆ ಸಿಮೆಂಟ್ ಶಾಸಕ ಸಾಹೇಬರಿಗೆ ಸರಬರಾಜಾಗಿದೆ ಎನ್ನಲಾಗಿದೆ.

ಕಾರ್ಕಳದಲ್ಲಿ ನಡೆಯುತ್ತಿರುವ 108 ಕೋಟಿ ರೂ.ಗಳ ಏತ ನೀರಾವರಿ ಯೋಜನೆಯ ಗುತ್ತೇಗೆದಾರ ಕಂಪನಿಯು ಶಾಸಕರಿಗೆ ಕಾಣಿಕೆಯಾಗಿ ಸಿಮೆಂಟ್ ನೀಡಿರಬಹುದು ಎಂದು ಕೆಲವರು ಆರೋಪಿಸುತ್ತಾರೆ. ಇನ್ನೊಂದೆಡೆ ಸದರಿ ಕಾಮಗಾರಿ ಉಸ್ತುವಾರಿ ನೋಡಿಕೊಳ್ಳುತ್ತಿರುವುದು ಜಿಲ್ಲಾ ಯುವ ಬಿಜೆಪಿ ಅಧ್ಯಕ್ಷನೂ ಶಾಸಕರ ಪರಮಾಪ್ತ ಸರ್ಕಾರಿ ಗುತ್ತಿಗೆದಾರನೂ ಆಗಿರುವವರು ಕಾರ್ಕಳ ವಿಖ್ಯಾತ್ ಶೆಟ್ಟಿ. ಕಾರ್ಕಳದ ಬಹುತೇಕ ಸರ್ಕಾರಿ ಗುತ್ತಿಗೆಗಳೆಲ್ಲಾ ಇವರಿಗೆ ದಕ್ಕುವುದರಲ್ಲಿ ಶಾಸಕರ ಪಾತ್ರವಿದೆಯೇ? ಅದಕ್ಕಾಗಿ ಶಾಸಕರಿಗೆ ಈ ರೀತಿಯ ಕಾಣಿಕೆಗಳು ಸಿಗುತ್ತವೆಯೇ ಎಂದು ಕಾರ್ಯಕರ್ತರು ಪ್ರಶ್ನಿಸುತ್ತಿದ್ದಾರೆ. ಉತ್ತರಿಸುವ ಕೆಲಸ ಶಾಸಕರದಾಗಿದೆ.


ಇದನ್ನೂ ಓದಿ: ಎಲ್ಲಾ ಅವ್ರೆ ಸ್ವಾಮಿ, ಗಿಜಿಗಿಜಿ ಅಂತಾರೆ – ಕೊರೊನಾ ರೋಗಿಗಳ ಕುರಿತು ಸಚಿವ ಸೋಮಣ್ಣ ವಿವಾದಾತ್ಮಕ ಹೇಳಿಕೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

LEAVE A REPLY

Please enter your comment!
Please enter your name here

- Advertisment -

ಶ್ರೀಲಂಕಾ | 2019ರ ಈಸ್ಟರ್ ಬಾಂಬ್ ಸ್ಫೋಟ ಪ್ರಕರಣ: ಇಬ್ಬರು ಮಾಜಿ ಅಧಿಕಾರಿಗಳಿಗೆ ಮರಣದಂಡನೆ ವಿಧಿಸಿದ ಕೋರ್ಟ್

ಬರೋಬ್ಬರಿ 260ಕ್ಕೂ ಹೆಚ್ಚು ಜನರ ಸಾವಿಗೆ ಕಾರಣವಾಗಿದ್ದ 2019ರ ಶ್ರೀಲಂಕಾದ 'ಈಸ್ಟರ್ ಸಂಡೇ' ಬಾಂಬ್ ಸ್ಫೋಟ ಪ್ರಕರಣದಲ್ಲಿ ಕ್ರಿಮಿನಲ್ ನಿರ್ಲಕ್ಷ್ಯ ಆರೋಪ ಸಾಬೀತಾದ ಹಿನ್ನೆಲೆ, ಪೊಲೀಸ್ ಮಾಜಿ ಮುಖ್ಯಸ್ಥ ಮತ್ತು ರಕ್ಷಣಾ ಸಚಿವಾಲಯದ...

ಅಮೆರಿಕ ಓದಿಗೆ ಎಲ್ಲಿಂದ ಬಂತು ಹಣ? CJP ಸ್ಥಾಪಕ ಅಭಿಜೀತ್ ದೀಪ್ಕೆ ತಂದೆಯ ಆಸ್ತಿ ತನಿಖೆಗೆ RTI ಕಾರ್ಯಕರ್ತ ಆಗ್ರಹ

ಕಾಕ್ರೋಚ್ ಜನತಾ ಪಾರ್ಟಿ (CJP) ಸ್ಥಾಪಕ ಅಭಿಜೀತ್ ದೀಪ್ಕೆ ಅವರ ತಂದೆ, ಮಹಾರಾಷ್ಟ್ರ ಸರ್ಕಾರದ ನಿವೃತ್ತ ಉದ್ಯೋಗಿ ಭಗವಾನ್‌ರಾವ್ ದೀಪ್ಕೆ ಅವರ ಆದಾಯ ಮತ್ತು ಅಕ್ರಮ ಆಸ್ತಿ ಗಳಿಕೆ ಕುರಿತು ಸಮಗ್ರ ತನಿಖೆ...

ಕಾವೇರಿ ವಿಚಾರದಲ್ಲಿ ರಾಜಕೀಯ ಪಕ್ಕಕ್ಕಿಟ್ಟು ರಾಜ್ಯದ ಹಿತ ಕಾಯೋಣ: ಸರ್ವಪಕ್ಷ ಸಭೆಯಲ್ಲಿ ಸಿಎಂ ಡಿ.ಕೆ. ಶಿವಕುಮಾರ್ ಕರೆ

ಕಾವೇರಿ ನದಿ ನೀರು ಹಂಚಿಕೆ ವಿಚಾರವಾಗಿ ಪರಿಸ್ಥಿತಿ ಸುಧಾರಿಸುವ ಲಕ್ಷಣಗಳು ಕಂಡುಬರುತ್ತಿದ್ದು, ನದಿ ನೀರಿನ ಹಂಚಿಕೆಯಲ್ಲಿ ಸೌಹಾರ್ದಯುತವಾಗಿ ಸಮಸ್ಯೆ ನಿವಾರಿಸುವುದೇ ಸರ್ಕಾರದ ಮೊದಲ ಆದ್ಯತೆಯಾಗಿದೆ ಎಂದು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ತಿಳಿಸಿದ್ದಾರೆ. ಕಾವೇರಿ...

ಉತ್ತರ ಪ್ರದೇಶ : 33 ವರ್ಷಗಳ ಬಳಿಕ ದೇಶದ್ರೋಹ ಪ್ರಕರಣದಿಂದ ಮುಸ್ಲಿಂ ವ್ಯಕ್ತಿ ಖುಲಾಸೆ

ಪ್ರಾಸಿಕ್ಯೂಷನ್ ಆರೋಪಗಳನ್ನು ಸಾಂದರ್ಭಿಕ ಪುರಾವೆಗಳೊಂದಿಗೆ ಸಾಬೀತುಪಡಿಸಲು ವಿಫಲವಾಗಿದೆ ಮತ್ತು ಆರೋಪಿಯನ್ನು ಕೃತ್ಯಕ್ಕೆ ಲಿಂಕ್ ಮಾಡುವ ಪ್ರಮುಖ ಪುರಾವೆಗಳು ಕಾಣೆಯಾಗಿವೆ ಎಂದು ಅಭಿಪ್ರಾಯಪಟ್ಟ ಲಕ್ನೋದ ವಿಶೇಷ ರಾಷ್ಟ್ರೀಯ ತನಿಖಾ ದಳ (ಎನ್ಐಎ) ನ್ಯಾಯಾಲಯ, ದೇಶದ್ರೋಹ...

‘ಊರು ಕೊಳ್ಳೆ ಹೊಡೆದ ಮೇಲೆ ದಿಡ್ಡಿ ಬಾಗಿಲು ಹಾಕಿದರು’ ಎಂಬಂತೆ NTA ಯಿಂದ ₹7.5 ಕೋಟಿಯ ಬೃಹತ್ ಸೆಕ್ಯೂರಿಟಿ ಟೆಂಡರ್

ನೀಟ್ ಪ್ರಶ್ನೆಪತ್ರಿಕೆ ಸೋರಿಕೆಯಾಗಿ, ಅಮಾಯಕ ವಿದ್ಯಾರ್ಥಿಗಳ ಜೀವ-ಭವಿಷ್ಯ ಹಾಳಾದ ಮೇಲೆ, ಊರು ಕೊಳ್ಳೆ ಹೊಡೆದ ಮೇಲೆ ದಿಡ್ಡಿ ಬಾಗಿಲು ಹಾಕಿದರು ಎಂಬಂತೆ ಈಗ ಎನ್‌ಟಿಎ (NTA) ₹7.5 ಕೋಟಿ ವೆಚ್ಚದ ಭದ್ರತಾ ಟೆಂಡರ್...

SIR: ನಮೂನೆಯೂ ಇಲ್ಲ, ನೋಟಿಸ್‌ ಇಲ್ಲ ಸ್ವಂತ ಮನೆಯಲ್ಲಿದ್ದವರ ಹೆಸರನ್ನೇ ಅಳಿಸಿಹಾಕಿದ ಚುನಾವಣಾ ಆಯೋಗ

ರಾಜ್ಯದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ಒಂದಾದ ಮೇಲೊಂದರಂತೆ ಆತಂಕಕಾರಿ ಪ್ರಕರಣಗಳು ಬೆಳಕಿಗೆ ಬರುತ್ತಿವೆ. ಮನೆಮನೆಗೆ ತೆರಳಿ ಎನ್ಯುಮರೇಷನ್ ನಮೂನೆ ವಿತರಿಸುವ ಮೊದಲ ಹಂತದ ಪ್ರಕ್ರಿಯೆ...

ಲೈಂಗಿಕ ಕಿರುಕುಳ ಪ್ರಕರಣದಲ್ಲಿ ಅಮಾನತುಗೊಂಡಿದ್ದ ಯುಪಿ ಪೊಲೀಸ್ ಕಾನ್‌ಸ್ಟೇಬಲ್; ಮರುನೇಮಕದ ಬೆನ್ನಲ್ಲೇ ಬಾಲಕಿಯ ಅತ್ಯಾಚಾರ, ಕೊಲೆ!

ಹತ್ತು ವರ್ಷದ ಬಾಲಕಿಯ ಮೇಲೆ ಅತ್ಯಾಚಾರಕ್ಕೆ ಯತ್ನಿಸಿ, ಆಕೆಯ ಸಾವಿಗೆ ಕಾರಣನಾದ ಆರೋಪದ ಮೇಲೆ ಬಂಧಿತನಾದ ಉತ್ತರ ಪ್ರದೇಶದ ಪೊಲೀಸ್ ಕಾನ್‌ಸ್ಟೇಬಲ್ ಅಭಿಷೇಕ್ ಯಾದವ್‌ನನ್ನು ವೈದ್ಯಕೀಯ ತಪಾಸಣೆಗಾಗಿ ಗೋರಖ್‌ಪುರದ ಜಿಲ್ಲಾಸ್ಪತ್ರೆಗೆ ಕರೆತಂದಾಗ, ಅಲ್ಲಿನ...

BJP ವಿರುದ್ಧದ ಆಕ್ರೋಶವೇ Gen-Z ಹೋರಾಟದ ಮೂಲ: ವಿಪಕ್ಷಗಳಿಗೆ ಇದು ದೊಡ್ಡ ಪಾಠ

ಜಂತರ್ ಮಂತರ್‌ನಲ್ಲಿ ನಡೆದ ವಿದ್ಯಾರ್ಥಿಗಳ ಹೋರಾಟವನ್ನು ನಿಮ್ಮ ರಾಜಕೀಯ ದೃಷ್ಟಿಕೋನಕ್ಕೆ ತಕ್ಕಂತೆ ನೀವು ಕ್ರಾಂತಿ ಎಂದಾದರೂ ನೋಡಬಹುದು, ಅಥವಾ ಕ್ಷಣಿಕವಾಗಿ ಎದ್ದ ಬಿರುಗಾಳಿ ಎಂದಾದರೂ ಭಾವಿಸಬಹುದು. ಆದರೆ ಇಲ್ಲಿ ನಿಜವಾಗಿಯೂ ಆಗಿದ್ದೇನು ಮತ್ತು...

ಇನ್‌ಸ್ಟಾಗ್ರಾಮ್‌ನಲ್ಲಿ ಕ್ಷಮಿಸಿದರೆ ಸಾಲದು, ವಿದ್ಯಾರ್ಥಿಗಳ ಮೇಲಿನ ಕೇಸ್ ವಾಪಸ್ ಪಡೆಯಿರಿ: ಪ್ರಧಾನಿಗೆ ದೀಪ್ಕೆ ನೇರ ಪ್ರಶ್ನೆ

ಪ್ರಧಾನಿ ನರೇಂದ್ರ ಮೋದಿ ಅವರು ಇನ್‌ಸ್ಟಾಗ್ರಾಮ್ ವಿಡಿಯೋವೊಂದರಲ್ಲಿ ತಮ್ಮ ವಿರುದ್ಧ ನಿಂದನಾತ್ಮಕ ಪದ ಬಳಸಿದ್ದ ‘ಕಾಕ್ರೋಚ್ ಜನತಾ ಪಾರ್ಟಿ’ (CJP) ಪ್ರತಿಭಟನಾ ನಿರತ ವಿದ್ಯಾರ್ಥಿಗಳನ್ನು ಕ್ಷಮಿಸಿದ್ದೇನೆ ಎಂದು ಹೇಳಿರುವುದಕ್ಕೆ ಸಿಜೆಪಿ ಸಂಸ್ಥಾಪಕ ಅಭಿಜೀತ್...

ಪ್ರತಿಭಟನೆ ಭೀತಿ : ಸಿಜೆಐ ಸೂರ್ಯಕಾಂತ್ ಭಾಗವಹಿಸಬೇಕಿದ್ದ ಘಟಿಕೋತ್ಸವ ದಿಢೀರ್ ಮುಂದೂಡಿದ TISS

ಮುಂಬೈನ ಟಾಟಾ ಇನ್‌ಸ್ಟಿಟ್ಯೂಟ್ ಆಫ್ ಸೋಷಿಯಲ್ ಸೈನ್ಸಸ್ (ಟಿಐಎಸ್‌ಎಸ್‌) ಸಂಸ್ಥೆಯು ಆಗಸ್ಟ್ 2ರಂದು ನಡೆಸಲು ನಿಗದಿಪಡಿಸಿದ್ದ ತನ್ನ 86ನೇ ವಾರ್ಷಿಕ ಘಟಿಕೋತ್ಸವವನ್ನು ದಿಢೀರ್ ಮುಂದೂಡಿದೆ. ಕ್ಯಾಂಪಸ್ ಭದ್ರತೆಯ ಬಗೆಗಿನ ಕಳವಳಗಳು ಮತ್ತು ವಿದ್ಯಾರ್ಥಿಗಳ...