Homeಕರ್ನಾಟಕಕಾರ್ಕಳ ಶಾಸಕ ಸುನಿಲ್ ಕುಮಾರ್ ಬಂಗಲೆಗೆ ಸಿಮೆಂಟ್ ಎಲ್ಲಿಯದು?: ಈ ವಿಡಿಯೋವನ್ನು ಸುಳ್ಳೆನ್ನಲು ಸಾಧ್ಯವೇ?

ಕಾರ್ಕಳ ಶಾಸಕ ಸುನಿಲ್ ಕುಮಾರ್ ಬಂಗಲೆಗೆ ಸಿಮೆಂಟ್ ಎಲ್ಲಿಯದು?: ಈ ವಿಡಿಯೋವನ್ನು ಸುಳ್ಳೆನ್ನಲು ಸಾಧ್ಯವೇ?

ಈಗಾಗಲೇ ಈ ಬಂಗಲೆಗೆ 3 ಸಾವಿರ ಸಿಮೆಂಟ್ ಚೀಲ ಬಳಸಲಾಗಿದೆ. ವಿಡಿಯೋದಲ್ಲಿ ನಿರ್ಮಾಣ ಹಂತದಲ್ಲಿರುವ ಬಂಗಲೆಯಲ್ಲಿರುವ ಅಲ್ಟ್ರಾಟೆಕ್ ಕಂಪನಿಯ ಸಿಮೆಂಟ್ ಚೀಲಗಳ ಮೇಲೆ ’ನಾಟ್ ಫಾರ್ ಸೇಲ್’ ಎಂದು ಅಚ್ಚಿಸಿರುವುದು ಕಾಣುತ್ತದೆ.

- Advertisement -
- Advertisement -

ಕಾರ್ಕಳ ತಾಲ್ಲೂಕು ಪಂಚಾಯ್ತಿ ರಸ್ತೆಯಲ್ಲಿ ಭರ್ಜರಿ ಬಂಗ್ಲೆಯೊಂದು ತಲೆಯೆತ್ತುತ್ತಿದೆ. ಮುಂಬೈನ ಶಿವಸೇನೆಯ ಮುಖ್ಯ ಕಚೇರಿಯಲ್ಲಿರುವ ಬೃಹತ್ ಕಂಬಗಳನ್ನು ಹೋಲುವ ಆರು ಎತ್ತರದ ಕಂಬಗಳ ಮನೆಯಿದು. ಒಂದೊಂದು ಕಂಬಕ್ಕೆ ಭರ್ತಿ ಏಳೂ ನೂರು ಮೂಟೆ ಸಿಮೆಂಟ್, ಟನ್‌ಗಟ್ಟಲೆ ಕಬ್ಬಿಣ ಬಳಸಲಾಗಿದೆ ಎನ್ನಲಾಗುತ್ತಿದೆ. ಈ ಬಂಗಲೆಯ ಮುಂದೆ ನಿಂತು ಮನೆ ಕಟ್ಟಿಸುತ್ತಿರುವ ಥ್ರಿಲ್ ಅನುಭವಿಸುತ್ತಿರುವುದು ಬೇರೆ ಯಾರೂ ಅಲ್ಲ, ಕಾರ್ಕಳದ ಬಿಜೆಪಿ ಶಾಸಕ ಸುನಿಲ್ ಕುಮಾರ್.

ಇಷ್ಟು ದಿನ ಬಿಜೆಪಿ ಕಚೇರಿಯಿದ್ದ ಈ ಜಾಗವನ್ನು ಸುನೀಲ್ ಬೇನಾಮಿಯಾಗಿ ತನ್ನ ಹೆಂಡತಿಯ ತಾಯಿ (ಅತ್ತೆ) ಹೆಸರಿನಲ್ಲಿ ಖರೀದಿಸಿದ್ದಾರೆ ಎಂಬ ಆರೋಪ ಬಿಜೆಪಿ ಕಾರ್ಯಕರ್ತರದು. ಒಂದು ಅಂದಾಜಿನಂತೆ ಈ ಬಂಗ್ಲೆಯ ಕಟ್ಟಡಕ್ಕೇ ಐದು ಕೋಟಿ ರೂ ಬೇಕು. ಆ ನಂತರ ಅಂದ-ಚಂದ ಫಿನಿಶಿಂಗ್ ಅಂತೆಲ್ಲ ಇನ್ನೆರಡು ಕೋಟಿ ಅನಿವಾರ್ಯವಂತೆ. ಅವರು ಎಷ್ಟಾದರೂ ಖರ್ಚು ಮಾಡಿ ಬಂಗಲೆ ಕಟ್ಟಲಿ. ಆದರೆ ಆ ಬಂಗಲೆ ಕಟ್ಟಲು ಬಳಸುತ್ತಿರುವ ಸಿಮೆಂಟ್‌ ಮಾತ್ರ ಸರ್ಕಾರದ್ದು ಎಂಬ ಆರೋಪವನ್ನು ಬಿಜೆಪಿ ಕಾರ್ಯಕರ್ತರೆ ಹೊರಿಸಿದ್ದು, ವಿಡಿಯೋ ದಾಖಲೆ ಸಹ ಬಿಡುಗಡೆ ಮಾಡಿದ್ದಾರೆ.

ಈಗಾಗಲೇ ಈ ಬಂಗಲೆಗೆ 3 ಸಾವಿರ ಸಿಮೆಂಟ್ ಚೀಲ ಬಳಸಲಾಗಿದೆ. ವಿಡಿಯೋದಲ್ಲಿ ನಿರ್ಮಾಣ ಹಂತದಲ್ಲಿರುವ ಬಂಗಲೆಯಲ್ಲಿನ ಅಲ್ಟ್ರಾಟೆಕ್ ಕಂಪನಿಯ ಸಿಮೆಂಟ್ ಚೀಲಗಳ ಮೇಲೆ ’ನಾಟ್ ಫಾರ್ ಸೇಲ್’ ಎಂದು ಅಚ್ಚಿಸಿರುವುದು ಕಾಣುತ್ತದೆ. ಅಂದರೆ ಈ ಸಿಮೆಂಟ್ ಪ್ರಾಮಾಣಿಕವಾಗಿ ಖರೀದಿಸಿದ್ದಲ್ಲ. ಸರ್ಕಾರಿ ಗೋದಾಮುಗಳಿಂದ ತಂದದ್ದು ಅಥವಾ ಸರ್ಕಾರಿ ಗುತ್ತಿಗೆದಾರರ ಹೆದರಿಸಿ ತರಿಸಿಕೊಂಡಿದ್ದು ಎಂಬುದು ಕಾರ್ಯಕರ್ತರ ಆರೋಪ. ನಾನುಗೌರಿ.ಕಾಂಗೆ ಸಿಕ್ಕ ವಿಡಿಯೋ ದಾಖಲೆಯಂತೆ ಇವತ್ತಿಗೂ ಈ ನಿರ್ಮಾಣ ಹಂತದ ಮನೆಯಲ್ಲಿ ಸರ್ಕಾರದ ಸೀಲ್ ಇರುವ ಸಿಮೆಂಟ್ ಮೂಟೆಗಳಿರುವುದು ಕಂಡುಬಂದಿದೆ.

ವಿಡಿಯೋ ನೋಡಿ

ಕಾರ್ಕಳ ಶಾಸಕ ಸುನಿಲ್ ಕುಮಾರ್ ಬಂಗಲೆಗೆ ಸಿಮೆಂಟ್ ಎಲ್ಲಿಯದು?: ಈ ವಿಡಿಯೋವನ್ನು ಸುಳ್ಳೆನ್ನಲು ಸಾಧ್ಯವೇ?ಸರ್ಕಾರಿ ಕಾಮಗಾರಿಗಳಿಗೆ…

Posted by Naanu Gauri on Tuesday, July 14, 2020

ಸರ್ಕಾರಿ ಕಾಮಗಾರಿಗಳಿಗೆ ಸಿಮೆಂಟ್-ಕಬ್ಬಿಣ ಮತ್ತಿತರ ಸಾಮಗ್ರಿ ಒದಗಿಸುವ ಕೆ.ಆರ್.ಐ.ಡಿ.ಎಲ್ ಎಂಬ ಸಂಸ್ಥೆಯಿದೆ. ಸರ್ಕಾರಿ ಕಾಮಗಾರಿ ನಡೆಸುವ ಗುತ್ತಿಗೆದಾರರಿಗೆ ಈ ಸರ್ಕಾರಿ ಸಂಸ್ಥೆ ಮಾರುಕಟ್ಟೆ ದರಕ್ಕಿಂತಲೂ ಕಡಿಮೆ ಬೆಲೆಗೆ ಸಾಮಗ್ರಿ ಪೂರೈಸುತ್ತದೆ. ಇದನ್ನು ಗುತ್ತಿಗೆದಾರ ಯಾರಿಗೂ ದಾನ ಅಥವಾ ಮಾರಾಟ ಮಾಡುವಂತಿಲ್ಲ. ಹಾಗಿದ್ದರೆ ಶಾಸಕ ಸುನಿಲ್ ಬಂಗಲೆಗೆ ಈ ಸರ್ಕಾರಿ ಸಿಮೆಂಟ್ ಹೇಗೆ ಬಂತು? ಮೂಲಗಳ ಪ್ರಕಾರ ಕೋಟ್ಯಾಂತರ ರೂ.ಗಳ ಕೆ.ಆರ್.ಐ.ಡಿ.ಎಲ್ ಕಾಮಗಾರಿ ಕಾರ್ಕಳದಲ್ಲಿ ನಡೆಯುತ್ತಿದ್ದು ಆ ಕಾಮಗಾರಿ ಕಂಟ್ರಾಕ್ಟರ್‌ಗಳಿಂದ ಲೋಡ್‌ಗಟ್ಟಲೆ ಸಿಮೆಂಟ್ ಶಾಸಕ ಸಾಹೇಬರಿಗೆ ಸರಬರಾಜಾಗಿದೆ ಎನ್ನಲಾಗಿದೆ.

ಕಾರ್ಕಳದಲ್ಲಿ ನಡೆಯುತ್ತಿರುವ 108 ಕೋಟಿ ರೂ.ಗಳ ಏತ ನೀರಾವರಿ ಯೋಜನೆಯ ಗುತ್ತೇಗೆದಾರ ಕಂಪನಿಯು ಶಾಸಕರಿಗೆ ಕಾಣಿಕೆಯಾಗಿ ಸಿಮೆಂಟ್ ನೀಡಿರಬಹುದು ಎಂದು ಕೆಲವರು ಆರೋಪಿಸುತ್ತಾರೆ. ಇನ್ನೊಂದೆಡೆ ಸದರಿ ಕಾಮಗಾರಿ ಉಸ್ತುವಾರಿ ನೋಡಿಕೊಳ್ಳುತ್ತಿರುವುದು ಜಿಲ್ಲಾ ಯುವ ಬಿಜೆಪಿ ಅಧ್ಯಕ್ಷನೂ ಶಾಸಕರ ಪರಮಾಪ್ತ ಸರ್ಕಾರಿ ಗುತ್ತಿಗೆದಾರನೂ ಆಗಿರುವವರು ಕಾರ್ಕಳ ವಿಖ್ಯಾತ್ ಶೆಟ್ಟಿ. ಕಾರ್ಕಳದ ಬಹುತೇಕ ಸರ್ಕಾರಿ ಗುತ್ತಿಗೆಗಳೆಲ್ಲಾ ಇವರಿಗೆ ದಕ್ಕುವುದರಲ್ಲಿ ಶಾಸಕರ ಪಾತ್ರವಿದೆಯೇ? ಅದಕ್ಕಾಗಿ ಶಾಸಕರಿಗೆ ಈ ರೀತಿಯ ಕಾಣಿಕೆಗಳು ಸಿಗುತ್ತವೆಯೇ ಎಂದು ಕಾರ್ಯಕರ್ತರು ಪ್ರಶ್ನಿಸುತ್ತಿದ್ದಾರೆ. ಉತ್ತರಿಸುವ ಕೆಲಸ ಶಾಸಕರದಾಗಿದೆ.


ಇದನ್ನೂ ಓದಿ: ಎಲ್ಲಾ ಅವ್ರೆ ಸ್ವಾಮಿ, ಗಿಜಿಗಿಜಿ ಅಂತಾರೆ – ಕೊರೊನಾ ರೋಗಿಗಳ ಕುರಿತು ಸಚಿವ ಸೋಮಣ್ಣ ವಿವಾದಾತ್ಮಕ ಹೇಳಿಕೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

LEAVE A REPLY

Please enter your comment!
Please enter your name here

- Advertisment -

ಕರಾವಳಿ ಸಮಸ್ಯೆಗೆ ಶಾಶ್ವತ ಪರಿಹಾರದ ಭರವಸೆ: ಸಚಿವ ಕೆ.ಎಸ್.ಬಸವಂತಪ್ಪ

ರಾಜ್ಯದ ಕರಾವಳಿ ಭಾಗದಲ್ಲಿ ಮೀನುಗಾರಿಕೆ ಕ್ಷೇತ್ರದ ಅಭಿವೃದ್ಧಿ ಕುಂಠಿತವಾಗುತ್ತಿರುವ ಕುರಿತು ಕಳವಳ ವ್ಯಕ್ತವಾಗುತ್ತಿರುವ ಬೆನ್ನಲ್ಲೇ, ಸ್ಥಳೀಯ ಸಮಸ್ಯೆಗಳಿಗೆ ಸ್ಪಂದಿಸಲು ಸರ್ಕಾರ ಮುಂದಾಗಿದೆ. ಕರಾವಳಿ ವ್ಯಾಪ್ತಿಯ ಬಂದರುಗಳು, ಮೀನು ಮಾರುಕಟ್ಟೆಗಳು, ಬ್ರೇಕ್‌ವಾಟರ್‌ಗಳು ಹಾಗೂ ಜೆಟ್ಟಿಗಳಿಗೆ...

SIR ಪ್ರಕ್ರಿಯೆಯಲ್ಲಿ ಯಾರ ಹೆಸರು ಬಿಟ್ಟುಹೋಗಬಾರದು: PRC ನೀಡಲು ವಿಳಂಬ ಬೇಡ ಡಾ. ಜಿ. ಪರಮೇಶ್ವರ್

ಉದ್ಯೋಗ ಅಥವಾ ವಿವಿಧ ಕಾರಣಗಳಿಂದಾಗಿ ತಮ್ಮ ಸ್ವಂತ ಊರು ತೊರೆದು ಬೇರೆಡೆಗೆ ಸ್ಥಳಾಂತರಗೊಂಡು ನೆಲೆಸಿರುವ ರಾಜ್ಯದ ಯಾವುದೇ ನಾಗರಿಕರು ಯಾವುದೇ ಕಾರಣಕ್ಕೂ ಮತದಾರರ ಪಟ್ಟಿಯಿಂದ ಹೊರಗುಳಿಯಬಾರದು ಎಂದು ಉಪಮುಖ್ಯಮಂತ್ರಿ ಹಾಗೂ ಕಂದಾಯ ಸಚಿವರಾದ...

ಬಿಹಾರ ಪ್ರವಾಹದ ನಡುವೆ ಮೋದಿ ಹುಟ್ಟುಹಬ್ಬದ ಪ್ರಯುಕ್ತ ದೀಪೋತ್ಸವ; ‘ಆಶೀರ್ವಾದ್ ಕಾ ದಿಯಾ’ ಕಾರ್ಯಕ್ರಮಕ್ಕೆ ತೇಜಸ್ವಿ ಯಾದವ್ ಆಕ್ಷೇಪ

ಬಿಹಾರದಲ್ಲಿ ಪ್ರವಾಹ ಪರಿಸ್ಥಿತಿ ಮುಂದುವರಿದಿರುವ ನಡುವೆಯೇ ಪ್ರಧಾನಿ ನರೇಂದ್ರ ಮೋದಿ ಅವರ ಹುಟ್ಟುಹಬ್ಬದ ಅಂಗವಾಗಿ ಸೆಪ್ಟೆಂಬರ್ 17ರಂದು ‘ಆಶೀರ್ವಾದ್ ಕಾ ದಿಯಾ’ ಕಾರ್ಯಕ್ರಮ ಆಯೋಜಿಸಿರುವುದು ರಾಜಕೀಯ ಚರ್ಚೆಗೆ ಕಾರಣವಾಗಿದೆ. ರಾಜ್ಯದ 15 ಜಿಲ್ಲೆಗಳಲ್ಲಿ...

ಉಮರ್ ಖಾಲಿದ್ ಅವರನ್ನು ‘ದೇಶಪ್ರೇಮಿ’ ಎಂದ ಬಿ.ಕೆ. ಹರಿಪ್ರಸಾದ್; ವಿಧಾನಸೌಧ ಪೊಲೀಸ್ ಠಾಣೆಯಲ್ಲಿ ದೂರು ದಾಖಲು

ಬೆಂಗಳೂರಿನ ರಾಷ್ಟ್ರೀಯ ಕಾನೂನು ಶಾಲೆ (ಎನ್‌ಎಲ್‌ಎಸ್‌ಐಯು) ಯೂನಿವರ್ಸಿಟಿಯಲ್ಲಿ ಜೈಲಿನಲ್ಲಿರುವ ಹೋರಾಟಗಾರ ಉಮರ್ ಖಾಲಿದ್ ಕುರಿತಾದ ಸಾಕ್ಷ್ಯಚಿತ್ರಕ್ಕೆ ಸಂಬಂಧಿಸಿದಂತೆ ನಡೆಯುತ್ತಿರುವ ವಿವಾದದ ನಡುವೆ, ಅವರನ್ನು "ರಾಷ್ಟ್ರಪ್ರೇಮಿ" ಎಂದು ಕರೆದಿರುವ ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ...

ಇಂದಿರಾ ಗಾಂಧಿಯಂತೆ ನೇರವಾಗಿ ನಿಲ್ಲಿ, ಟ್ರಂಪ್ ಮುಂದೆ ಮಂಡಿಯೂರುತ್ತಿದ್ದೀರಿ: ‘UPI ಟ್ಯಾಕ್ಸ್’ ಬಗ್ಗೆ ಮೋದಿ ವಿರುದ್ಧ ರಾಹುಲ್ ವಾಗ್ದಾಳಿ!

ಯುಪಿಐ (UPI) ವಹಿವಾಟುಗಳಿಗೆ ಸಂಬಂಧಿಸಿದಂತೆ ಜಾರಿಯಾಗುತ್ತಿರುವ ಹೊಸ 'ಮರ್ಚೆಂಟ್ ಡಿಸ್ಕೌಂಟ್ ರೇಟ್' (MDR) ವ್ಯವಸ್ಥೆ ಇದೀಗ ತೀವ್ರ ರಾಜಕೀಯ ಸಂಘರ್ಷಕ್ಕೆ ಕಾರಣವಾಗಿದೆ. ಇದನ್ನು "ಬ್ಯಾಂಕ್‌ಗಳು ವಿಧಿಸುವ ಸೇವಾ ಶುಲ್ಕ" ಎಂದು ಸರ್ಕಾರ ಸಮರ್ಥಿಸಿಕೊಳ್ಳುತ್ತಿದ್ದರೂ,...

ಲಿಯೋನೆಲ್ ಮೆಸ್ಸಿ ಕೇರಳ ಭೇಟಿ ಪ್ರಕರಣ: ಕೊಚ್ಚಿಯ ‘ರಿಪೋರ್ಟರ್ ಟಿವಿ’ ಕಚೇರಿಯಲ್ಲಿ ಪೊಲೀಸರಿಂದ ಶೋಧ

ಮಲಯಾಳಂ ಸುದ್ದಿ ವಾಹಿನಿ 'ರಿಪೋರ್ಟರ್ ಟಿವಿ'ಯ ಕೊಚ್ಚಿ ಪ್ರಧಾನ ಕಚೇರಿಯಲ್ಲಿ ಬುಧವಾರ (ಸೆ.16) ಮುಂಜಾನೆ ಪೊಲೀಸ್ ತಂಡವೊಂದು ಶೋಧ ಕಾರ್ಯ ನಡೆಸಿದ್ದು, ಇದರಿಂದಾಗಿ ತನ್ನ ಸುದ್ದಿ ಪ್ರಸಾರ ಕಾರ್ಯಾಚರಣೆಗೆ ಅಡಚಣೆಯಾಗಿದೆ ಎಂದು ವಾಹಿನಿ...

‘ಏಕರೂಪತೆ ಸಮಾನತೆಯಲ್ಲ’: 2029ಕ್ಕೂ ಮುನ್ನ 21 ರಾಜ್ಯಗಳಲ್ಲಿ ಯುಸಿಸಿ ಜಾರಿ ಘೋಷಿಸಿದ ಅಮಿತ್ ಶಾಗೆ ಪ್ರತಿಪಕ್ಷಗಳ ತೀವ್ರ ತಿರುಗೇಟು

ನವದೆಹಲಿ/ಮುಂಬೈ: 2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ನೇತೃತ್ವದ ಎನ್‌ಡಿಎ ಸರ್ಕಾರಗಳಿರುವ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ ಸಂಹಿತೆ (ಯುಸಿಸಿ) ಜಾರಿಗೆ ತರಲಾಗುವುದು ಎಂಬ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ...

KPSC ಅಧ್ಯಕ್ಷರ ಪುತ್ರಿಯ ನಕಲಿ ಪ್ರಮಾಣಪತ್ರ ಹಗರಣ: ಅಕ್ರಮಕ್ಕೆ ಸಾಥ್ ನೀಡಿದ್ದ ಅಧಿಕಾರಿಯ ಜಾಮೀನು ಅರ್ಜಿ ವಜಾ

ಕೆಪಿಎಸ್‌ಸಿ (KPSC) ಅಧ್ಯಕ್ಷರ ಪುತ್ರಿಗೆ ಅಕ್ರಮವಾಗಿ ನಕಲಿ ಆದಾಯ ಪ್ರಮಾಣಪತ್ರ ನೀಡಿದ ಆರೋಪ ಎದುರಿಸುತ್ತಿರುವ ಕಂದಾಯ ಅಧಿಕಾರಿಯ ನಿರೀಕ್ಷಣಾ ಜಾಮೀನು ಅರ್ಜಿಯನ್ನು ಬೆಂಗಳೂರಿನ ನಗರ ಸಿವಿಲ್ ಮತ್ತು ಸೆಷನ್ಸ್ ನ್ಯಾಯಾಲಯ ಮಂಗಳವಾರ ವಜಾಗೊಳಿಸಿದೆ....

ಬಂಗಾಳದಲ್ಲಿ ಬಿಜೆಪಿ ಸರ್ಕಾರದ ನಿರ್ಬಂಧ; ನೆಲಕಚ್ಚಿದ ದನದ ಮಾಂಸ ವ್ಯಾಪಾರ

ಪಶು ಹತ್ಯೆಯ ಕುರಿತು ಮುಖ್ಯಮಂತ್ರಿ ಸುವೇಂಧು ಅಧಿಕಾರಿ ನೇತೃತ್ವದ ಪಶ್ಚಿಮ ಬಂಗಾಳ ಸರ್ಕಾರವು ಸೂಚನೆ ಹೊರಡಿಸಿದ ನಂತರ, ಮಾಂಸದ ವ್ಯಾಪಾರಿ ಮುಷ್ತಾಕ್ ಕಳೆದ ಮೂರು ತಿಂಗಳಿನಿಂದ ಒಂದು ಪೈಸೆಯನ್ನೂ ಗಳಿಸಿಲ್ಲ. "ಚುನಾವಣೆಯ ಕಾರಣದಿಂದ...

ತೀವ್ರಗೊಂಡ ಸೌದಿ-ಹೌತಿ ಸಂಘರ್ಷ : ಮಕ್ಕಾ ಗುರಿಯಾಗಿಸಿದ್ದ ಡ್ರೋನ್ ಹೊಡೆದುರುಳಿಸಿದ್ದೇವೆ ಎಂದ ಸೌದಿ; ತಳ್ಳಿಹಾಕಿದ ಹೌತಿ

ಯೆಮನ್‌ನ ರೆಬೆಲ್ ಗ್ರೂಪ್ ಹೌತಿ ಮತ್ತು ಸೌದಿ ಬೆಂಬಲಿತ ಪಡೆಗಳ ಸಂಘರ್ಷ ತೀವ್ರಗೊಂಡಿದ್ದು, ಇತಿಹಾಸದಲ್ಲೇ ಮೊದಲ ಬಾರಿಗೆ ಮುಸ್ಲಿಮರ ಪವಿತ್ರ ನಗರ ಮಕ್ಕಾದಲ್ಲಿ ಸೌದಿ ಅರೇಬಿಯಾದ ನಾಗರಿಕ ರಕ್ಷಣಾ (ಸಿವಿಲ್ ಡಿಫೆನ್ಸ್) ಇಲಾಖೆಯು...