Homeಕರ್ನಾಟಕಕಾರ್ಕಳ ಶಾಸಕ ಸುನಿಲ್ ಕುಮಾರ್ ಬಂಗಲೆಗೆ ಸಿಮೆಂಟ್ ಎಲ್ಲಿಯದು?: ಈ ವಿಡಿಯೋವನ್ನು ಸುಳ್ಳೆನ್ನಲು ಸಾಧ್ಯವೇ?

ಕಾರ್ಕಳ ಶಾಸಕ ಸುನಿಲ್ ಕುಮಾರ್ ಬಂಗಲೆಗೆ ಸಿಮೆಂಟ್ ಎಲ್ಲಿಯದು?: ಈ ವಿಡಿಯೋವನ್ನು ಸುಳ್ಳೆನ್ನಲು ಸಾಧ್ಯವೇ?

ಈಗಾಗಲೇ ಈ ಬಂಗಲೆಗೆ 3 ಸಾವಿರ ಸಿಮೆಂಟ್ ಚೀಲ ಬಳಸಲಾಗಿದೆ. ವಿಡಿಯೋದಲ್ಲಿ ನಿರ್ಮಾಣ ಹಂತದಲ್ಲಿರುವ ಬಂಗಲೆಯಲ್ಲಿರುವ ಅಲ್ಟ್ರಾಟೆಕ್ ಕಂಪನಿಯ ಸಿಮೆಂಟ್ ಚೀಲಗಳ ಮೇಲೆ ’ನಾಟ್ ಫಾರ್ ಸೇಲ್’ ಎಂದು ಅಚ್ಚಿಸಿರುವುದು ಕಾಣುತ್ತದೆ.

- Advertisement -
- Advertisement -

ಕಾರ್ಕಳ ತಾಲ್ಲೂಕು ಪಂಚಾಯ್ತಿ ರಸ್ತೆಯಲ್ಲಿ ಭರ್ಜರಿ ಬಂಗ್ಲೆಯೊಂದು ತಲೆಯೆತ್ತುತ್ತಿದೆ. ಮುಂಬೈನ ಶಿವಸೇನೆಯ ಮುಖ್ಯ ಕಚೇರಿಯಲ್ಲಿರುವ ಬೃಹತ್ ಕಂಬಗಳನ್ನು ಹೋಲುವ ಆರು ಎತ್ತರದ ಕಂಬಗಳ ಮನೆಯಿದು. ಒಂದೊಂದು ಕಂಬಕ್ಕೆ ಭರ್ತಿ ಏಳೂ ನೂರು ಮೂಟೆ ಸಿಮೆಂಟ್, ಟನ್‌ಗಟ್ಟಲೆ ಕಬ್ಬಿಣ ಬಳಸಲಾಗಿದೆ ಎನ್ನಲಾಗುತ್ತಿದೆ. ಈ ಬಂಗಲೆಯ ಮುಂದೆ ನಿಂತು ಮನೆ ಕಟ್ಟಿಸುತ್ತಿರುವ ಥ್ರಿಲ್ ಅನುಭವಿಸುತ್ತಿರುವುದು ಬೇರೆ ಯಾರೂ ಅಲ್ಲ, ಕಾರ್ಕಳದ ಬಿಜೆಪಿ ಶಾಸಕ ಸುನಿಲ್ ಕುಮಾರ್.

ಇಷ್ಟು ದಿನ ಬಿಜೆಪಿ ಕಚೇರಿಯಿದ್ದ ಈ ಜಾಗವನ್ನು ಸುನೀಲ್ ಬೇನಾಮಿಯಾಗಿ ತನ್ನ ಹೆಂಡತಿಯ ತಾಯಿ (ಅತ್ತೆ) ಹೆಸರಿನಲ್ಲಿ ಖರೀದಿಸಿದ್ದಾರೆ ಎಂಬ ಆರೋಪ ಬಿಜೆಪಿ ಕಾರ್ಯಕರ್ತರದು. ಒಂದು ಅಂದಾಜಿನಂತೆ ಈ ಬಂಗ್ಲೆಯ ಕಟ್ಟಡಕ್ಕೇ ಐದು ಕೋಟಿ ರೂ ಬೇಕು. ಆ ನಂತರ ಅಂದ-ಚಂದ ಫಿನಿಶಿಂಗ್ ಅಂತೆಲ್ಲ ಇನ್ನೆರಡು ಕೋಟಿ ಅನಿವಾರ್ಯವಂತೆ. ಅವರು ಎಷ್ಟಾದರೂ ಖರ್ಚು ಮಾಡಿ ಬಂಗಲೆ ಕಟ್ಟಲಿ. ಆದರೆ ಆ ಬಂಗಲೆ ಕಟ್ಟಲು ಬಳಸುತ್ತಿರುವ ಸಿಮೆಂಟ್‌ ಮಾತ್ರ ಸರ್ಕಾರದ್ದು ಎಂಬ ಆರೋಪವನ್ನು ಬಿಜೆಪಿ ಕಾರ್ಯಕರ್ತರೆ ಹೊರಿಸಿದ್ದು, ವಿಡಿಯೋ ದಾಖಲೆ ಸಹ ಬಿಡುಗಡೆ ಮಾಡಿದ್ದಾರೆ.

ಈಗಾಗಲೇ ಈ ಬಂಗಲೆಗೆ 3 ಸಾವಿರ ಸಿಮೆಂಟ್ ಚೀಲ ಬಳಸಲಾಗಿದೆ. ವಿಡಿಯೋದಲ್ಲಿ ನಿರ್ಮಾಣ ಹಂತದಲ್ಲಿರುವ ಬಂಗಲೆಯಲ್ಲಿನ ಅಲ್ಟ್ರಾಟೆಕ್ ಕಂಪನಿಯ ಸಿಮೆಂಟ್ ಚೀಲಗಳ ಮೇಲೆ ’ನಾಟ್ ಫಾರ್ ಸೇಲ್’ ಎಂದು ಅಚ್ಚಿಸಿರುವುದು ಕಾಣುತ್ತದೆ. ಅಂದರೆ ಈ ಸಿಮೆಂಟ್ ಪ್ರಾಮಾಣಿಕವಾಗಿ ಖರೀದಿಸಿದ್ದಲ್ಲ. ಸರ್ಕಾರಿ ಗೋದಾಮುಗಳಿಂದ ತಂದದ್ದು ಅಥವಾ ಸರ್ಕಾರಿ ಗುತ್ತಿಗೆದಾರರ ಹೆದರಿಸಿ ತರಿಸಿಕೊಂಡಿದ್ದು ಎಂಬುದು ಕಾರ್ಯಕರ್ತರ ಆರೋಪ. ನಾನುಗೌರಿ.ಕಾಂಗೆ ಸಿಕ್ಕ ವಿಡಿಯೋ ದಾಖಲೆಯಂತೆ ಇವತ್ತಿಗೂ ಈ ನಿರ್ಮಾಣ ಹಂತದ ಮನೆಯಲ್ಲಿ ಸರ್ಕಾರದ ಸೀಲ್ ಇರುವ ಸಿಮೆಂಟ್ ಮೂಟೆಗಳಿರುವುದು ಕಂಡುಬಂದಿದೆ.

ವಿಡಿಯೋ ನೋಡಿ

ಕಾರ್ಕಳ ಶಾಸಕ ಸುನಿಲ್ ಕುಮಾರ್ ಬಂಗಲೆಗೆ ಸಿಮೆಂಟ್ ಎಲ್ಲಿಯದು?: ಈ ವಿಡಿಯೋವನ್ನು ಸುಳ್ಳೆನ್ನಲು ಸಾಧ್ಯವೇ?ಸರ್ಕಾರಿ ಕಾಮಗಾರಿಗಳಿಗೆ…

Posted by Naanu Gauri on Tuesday, July 14, 2020

ಸರ್ಕಾರಿ ಕಾಮಗಾರಿಗಳಿಗೆ ಸಿಮೆಂಟ್-ಕಬ್ಬಿಣ ಮತ್ತಿತರ ಸಾಮಗ್ರಿ ಒದಗಿಸುವ ಕೆ.ಆರ್.ಐ.ಡಿ.ಎಲ್ ಎಂಬ ಸಂಸ್ಥೆಯಿದೆ. ಸರ್ಕಾರಿ ಕಾಮಗಾರಿ ನಡೆಸುವ ಗುತ್ತಿಗೆದಾರರಿಗೆ ಈ ಸರ್ಕಾರಿ ಸಂಸ್ಥೆ ಮಾರುಕಟ್ಟೆ ದರಕ್ಕಿಂತಲೂ ಕಡಿಮೆ ಬೆಲೆಗೆ ಸಾಮಗ್ರಿ ಪೂರೈಸುತ್ತದೆ. ಇದನ್ನು ಗುತ್ತಿಗೆದಾರ ಯಾರಿಗೂ ದಾನ ಅಥವಾ ಮಾರಾಟ ಮಾಡುವಂತಿಲ್ಲ. ಹಾಗಿದ್ದರೆ ಶಾಸಕ ಸುನಿಲ್ ಬಂಗಲೆಗೆ ಈ ಸರ್ಕಾರಿ ಸಿಮೆಂಟ್ ಹೇಗೆ ಬಂತು? ಮೂಲಗಳ ಪ್ರಕಾರ ಕೋಟ್ಯಾಂತರ ರೂ.ಗಳ ಕೆ.ಆರ್.ಐ.ಡಿ.ಎಲ್ ಕಾಮಗಾರಿ ಕಾರ್ಕಳದಲ್ಲಿ ನಡೆಯುತ್ತಿದ್ದು ಆ ಕಾಮಗಾರಿ ಕಂಟ್ರಾಕ್ಟರ್‌ಗಳಿಂದ ಲೋಡ್‌ಗಟ್ಟಲೆ ಸಿಮೆಂಟ್ ಶಾಸಕ ಸಾಹೇಬರಿಗೆ ಸರಬರಾಜಾಗಿದೆ ಎನ್ನಲಾಗಿದೆ.

ಕಾರ್ಕಳದಲ್ಲಿ ನಡೆಯುತ್ತಿರುವ 108 ಕೋಟಿ ರೂ.ಗಳ ಏತ ನೀರಾವರಿ ಯೋಜನೆಯ ಗುತ್ತೇಗೆದಾರ ಕಂಪನಿಯು ಶಾಸಕರಿಗೆ ಕಾಣಿಕೆಯಾಗಿ ಸಿಮೆಂಟ್ ನೀಡಿರಬಹುದು ಎಂದು ಕೆಲವರು ಆರೋಪಿಸುತ್ತಾರೆ. ಇನ್ನೊಂದೆಡೆ ಸದರಿ ಕಾಮಗಾರಿ ಉಸ್ತುವಾರಿ ನೋಡಿಕೊಳ್ಳುತ್ತಿರುವುದು ಜಿಲ್ಲಾ ಯುವ ಬಿಜೆಪಿ ಅಧ್ಯಕ್ಷನೂ ಶಾಸಕರ ಪರಮಾಪ್ತ ಸರ್ಕಾರಿ ಗುತ್ತಿಗೆದಾರನೂ ಆಗಿರುವವರು ಕಾರ್ಕಳ ವಿಖ್ಯಾತ್ ಶೆಟ್ಟಿ. ಕಾರ್ಕಳದ ಬಹುತೇಕ ಸರ್ಕಾರಿ ಗುತ್ತಿಗೆಗಳೆಲ್ಲಾ ಇವರಿಗೆ ದಕ್ಕುವುದರಲ್ಲಿ ಶಾಸಕರ ಪಾತ್ರವಿದೆಯೇ? ಅದಕ್ಕಾಗಿ ಶಾಸಕರಿಗೆ ಈ ರೀತಿಯ ಕಾಣಿಕೆಗಳು ಸಿಗುತ್ತವೆಯೇ ಎಂದು ಕಾರ್ಯಕರ್ತರು ಪ್ರಶ್ನಿಸುತ್ತಿದ್ದಾರೆ. ಉತ್ತರಿಸುವ ಕೆಲಸ ಶಾಸಕರದಾಗಿದೆ.


ಇದನ್ನೂ ಓದಿ: ಎಲ್ಲಾ ಅವ್ರೆ ಸ್ವಾಮಿ, ಗಿಜಿಗಿಜಿ ಅಂತಾರೆ – ಕೊರೊನಾ ರೋಗಿಗಳ ಕುರಿತು ಸಚಿವ ಸೋಮಣ್ಣ ವಿವಾದಾತ್ಮಕ ಹೇಳಿಕೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

LEAVE A REPLY

Please enter your comment!
Please enter your name here

- Advertisment -

ಶಾಲೆ, ಪೂಜಾ ಸ್ಥಳ, ಬಸ್ ನಿಲ್ದಾಣಗಳ ಬಳಿ ಇರುವ 717 ಮದ್ಯದಂಗಡಿಗಳನ್ನು ಮುಚ್ಚಲು ತಮಿಳುನಾಡು ಸಿಎಂ ಜೋಸೆಫ್ ವಿಜಯ್ ಆದೇಶ 

ಅಧಿಕಾರ ವಹಿಸಿಕೊಂಡ ನಂತರ ತಮ್ಮ ಮೊದಲ ಪ್ರಮುಖ ಆಡಳಿತಾತ್ಮಕ ನಿರ್ದೇಶನದಲ್ಲಿ, ಸಿ. ಜೋಸೆಫ್ ವಿಜಯ್ ಸೋಮವಾರ, ತಮಿಳುನಾಡು ಸರ್ಕಾರವು ಪೂಜಾ ಸ್ಥಳಗಳು, ಶಿಕ್ಷಣ ಸಂಸ್ಥೆಗಳು ಮತ್ತು ಬಸ್ ನಿಲ್ದಾಣಗಳಿಂದ 500 ಮೀಟರ್ ಒಳಗೆ...

FACT CHECK: ಭಾರತೀಯರು ಚಿನ್ನ ಖರೀದಿಸಬೇಡಿ ಎಂದು 1967ರಲ್ಲೇ ಇಂದಿರಾ ಗಾಂಧಿ ಹೇಳಿದ್ರಾ?

ಪ್ರಧಾನಿ ನರೇಂದ್ರ ಮೋದಿಯವರು ಇತ್ತೀಚೆಗೆ ತೆಲಂಗಾಣದ ಸಿಕಂದರಾಬಾದ್ ರ‍್ಯಾಲಿಯಲ್ಲಿ ಮಾತನಾಡುತ್ತಾ, ಆರ್ಥಿಕ ಬಿಕ್ಕಟ್ಟು ತಪ್ಪಿಸಲು "ಒಂದು ವರ್ಷ ಚಿನ್ನ ಖರೀದಿಸಬೇಡಿ" ಎಂದು ಜನರಲ್ಲಿ ಮನವಿ ಮಾಡಿದ್ದರು. ಇದರ ಬೆನ್ನಲ್ಲೇ, 1967ರಲ್ಲಿ ಅಂದಿನ ಪ್ರಧಾನಿ...

ಪಶ್ಚಿಮ ಬಂಗಾಳ| ಧ್ವನಿವರ್ಧಕಗಳ ನಿಯಂತ್ರಣಕ್ಕೆ ಆದೇಶಿಸಿದ ನೂತನ ಸಿಎಂ ಅಧಿಕಾರಿ; ಧಾರ್ಮಿಕ ಸಭೆ ನೆಪದಲ್ಲಿ ರಸ್ತೆ ತಡೆಗೆ ನಿಷೇಧ

ಪಶ್ಚಿಮ ಬಂಗಾಳದಲ್ಲಿ ಬಿಜೆಪಿ ನೇತೃತ್ವದ ಸರ್ಕಾರವು ಧಾರ್ಮಿಕ ಸ್ಥಳಗಳಲ್ಲಿ ಧ್ವನಿವರ್ಧಕಗಳ ಬಳಕೆಯನ್ನು ನಿಯಂತ್ರಿಸಲು ಮತ್ತು ಪ್ರಾರ್ಥನೆ ಅಥವಾ ಧಾರ್ಮಿಕ ಸಭೆ ನೆಪದಲ್ಲಿ ಸಾರ್ವಜನಿಕ ರಸ್ತೆಗಳನ್ನು ನಿರ್ಬಂಧಿಸದಂತೆ ನೋಡಿಕೊಳ್ಳಲು ಪೊಲೀಸ್ ಅಧಿಕಾರಿಗಳಿಗೆ ಹೊಸ ಸೂಚನೆಗಳನ್ನು...

ರಾಜಸ್ಥಾನದಲ್ಲಿ ನೀಟ್‌-ಯುಜಿ ಪ್ರಶ್ನೆ ಪತ್ರಿಕೆ ಸೋರಿಕೆ; ಸಿಬಿಐ ತನಿಖೆಗೆ ಆದೇಶಿಸಿದ ಸರ್ಕಾರ

ಮೇ 3 ರಂದು ನಡೆಸಲಾದ ನೀಟ್ (ಯುಜಿ) 2026 ಅನ್ನು ರದ್ದುಗೊಳಿಸುವುದಾಗಿ ರಾಷ್ಟ್ರೀಯ ಪರೀಕ್ಷಾ ಸಂಸ್ಥೆ (ಎನ್‌ಟಿಎ) ಮಂಗಳವಾರ (ಮೇ 12) ಘೋಷಿಸಿದೆ. ಪ್ರತ್ಯೇಕವಾಗಿ ತಿಳಿಸಲಾಗುವ ದಿನಾಂಕಗಳಲ್ಲಿ ಮರು ಪರೀಕ್ಷೆಯನ್ನು ನಡೆಸಲಾಗುವುದು, ಪರೀಕ್ಷೆಗೆ...

ಇತ್ಯರ್ಥವಾಗದ ಚುನಾವಣಾ ತಕರಾರು : ಮತ ಹಾಕಿದ ಜನರಿಗೆ ದಿನಕ್ಕೊಬ್ಬ ಶಾಸಕ

ರಾಜ್ಯದಲ್ಲಿ ಪ್ರಸ್ತುತ ಆಡಳಿತ ನಡೆಸುತ್ತಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್ ಸರ್ಕಾರ ಮೂರು ವರ್ಷಗಳನ್ನು ಪೂರೈಸಿದೆ. ಚುನಾವಣೆ ನಡೆಯಲು ಇನ್ನು ಎರಡು ವರ್ಷಗಳು ಬಾಕಿಯಿದೆ. ಅಂದರೆ, ಸರ್ಕಾರದ ಐದು ವರ್ಷಗಳ ಅವಧಿಯಲ್ಲಿ ಮುಕ್ಕಾಲು...

“ಸನಾತನವನ್ನು ನಿರ್ಮೂಲನೆ ಮಾಡಬೇಕು…”; ವಿಧಾನಸಭೆಯಲ್ಲೇ ತನ್ನ ಹಿಂದಿನ ಹೇಳಿಕೆ ಪುನರುಚ್ಚರಿಸಿದ ಉದಯನಿಧಿ ಸ್ಟಾಲಿನ್

ತಮಿಳುನಾಡು ವಿರೋಧ ಪಕ್ಷದ ನಾಯಕ ಮತ್ತು ಡಿಎಂಕೆ ನಾಯಕ ಉದಯನಿಧಿ ಸ್ಟಾಲಿನ್ ಮಂಗಳವಾರ ತಮಿಳುನಾಡು ವಿಧಾನಸಭೆಯಲ್ಲಿ ನಡೆದ ಅಧಿವೇಶನದಲ್ಲಿ, ಸನಾತನ ಧರ್ಮದ ನಿರ್ಮೂಲನೆಗೆ ಮತ್ತೊಮ್ಮೆ ಕರೆ ನೀಡಿದ್ದಾರೆ. ಸದನದಲ್ಲಿ ಮಾತನಾಡಿದ ಅವರು, "ಜನರನ್ನು ವಿಭಜಿಸುವ...

‘ಅಮೃತಕಾಲ’ದ ಸ್ವಪ್ನದಿಂದ ‘ಬಿಕ್ಕಟ್ಟಿನ ಕಾಲ’ಕ್ಕೆ: ಕಳಚಿಕೊಳ್ಳುತ್ತಿರುವ ಮೋದಿಯವರ ‘ಆತ್ಮನಿರ್ಭರ’ ಮುಖವಾಡ 

ನಾಲ್ಕು ರಾಜ್ಯಗಳು ಮತ್ತು ಒಂದು ಕೇಂದ್ರಾಡಳಿತ ಪ್ರದೇಶದ ವಿಧಾನಸಭೆ ಚುನಾವಣೆಗೂ ಮುನ್ನ ದೇಶವು ಎಲ್‌ಪಿಜಿ ಸಿಲಿಂಡರ್‌ಗಳ ಕೊರತೆಯಿಂದ ಬಳಲುತ್ತಿದ್ದಾಗ, ಬಿಜೆಪಿ ನಾಯಕರು ಮತ್ತು ಕೇಂದ್ರ ಸರ್ಕಾರದ ಮಂತ್ರಿಗಳು ಮೋದಿಯವರ ‘ದಯೆ’ಯಿಂದ ಭಾರತಕ್ಕೆ ಯಾವುದೇ...

ಪಶ್ಚಿಮ ಬಂಗಾಳ| ಚುನಾವಣಾ ಫಲಿತಾಂಶದ ಬಳಿಕ ಮುಸ್ಲಿಂ ಸಮುದಾಯದ ಮನೆ- ಅಂಗಡಿಗಳ ಮೇಲೆ ದಾಳಿ: ಎಪಿಸಿಆರ್

ಪಶ್ಚಿಮ ಬಂಗಾಳದ ಇತ್ತೀಚಿನ ಚುನಾವಣಾ ಫಲಿತಾಂಶದ ಬಳಿಕ ಭಾರತೀಯ ಜನತಾ ಪಕ್ಷದ ಸದಸ್ಯರು ಸರಣಿ ಹಿಂಸಾತ್ಮಕ ಘಟನೆಗಳನ್ನು ನಡೆಸಿದ್ದಾರೆ ಎಂದು ನಾಗರಿಕ ಹಕ್ಕುಗಳ ರಕ್ಷಣಾ ಸಂಘ (ಎಪಿಸಿಆರ್) ದಾಖಲಿಸಿದೆ. ವಿಶೇಷವಾಗಿ, ಮುಸ್ಲಿಮರ ವಿರುದ್ಧ...

ದುಬಾರಿ ರ‍್ಯಾಲಿ, ರೋಡ್ ಶೋ ನಡೆಸುತ್ತಾ ದೇಶದ ಜನರಿಗೆ ಮಿತವ್ಯಯದ ಸಲಹೆ ನೀಡಿದ ಪ್ರಧಾನಿ ಮೋದಿ

ನಾಲ್ಕು ರಾಜ್ಯಗಳು ಮತ್ತು ಒಂದು ಕೇಂದ್ರಾಡಳಿತ ಪ್ರದೇಶದ ವಿಧಾನಸಭೆ ಚುನಾವಣೆಗಳು ಪೂರ್ಣಗೊಂಡ ಬಳಿಕ, ಮೇ 10ರಂದು ಪ್ರಧಾನಿ ನರೇಂದ್ರ ಮೋದಿಯವರು ದೇಶದ ಜನರಿಗೆ ಕೆಲವು ಸಲಹೆಗಳನ್ನು ನೀಡಿದ್ದು, ಕೋವಿಡ್ ಸಂದರ್ಭದ ಮಿತಿಗಳನ್ನು ಹಾಕಿಕೊಳ್ಳುವಂತೆ...

ಮೇ 15 ರಂದು ರಾಷ್ಟ್ರವ್ಯಾಪಿ ಮನರೇಗಾ ಕಾರ್ಮಿಕರ ಮುಷ್ಕರ; ದೇಶದಾದ್ಯಂತ ಕಾರ್ಮಿಕ ಸಂಘಟನೆಗಳ ಬೆಂಬಲ

ವಿಬಿ ಜಿರಾಮ್‌ (ಜಿ) ಕಾಯ್ದೆಯನ್ನು ಹಿಂಪಡೆಯುವ ಜೊತೆಗೆ ಗ್ರಾಮೀಣ ಉದ್ಯೋಗ ಯೋಜನೆಯಡಿಯಲ್ಲಿ ಬಲವಾದ ಉದ್ಯೋಗ ಖಾತರಿಗಳನ್ನು ನೀಡುವಂತೆ ಒತ್ತಾಯಿಸಿ ಕೃಷಿ ಮತ್ತು ಗ್ರಾಮೀಣ ಕಾರ್ಮಿಕರ ಸಂಘಗಳ ಜಂಟಿ ವೇದಿಕೆ ಮತ್ತು ಮನರೇಗಾ ಸಂಘರ್ಷ...