Homeಕರ್ನಾಟಕಕಾರ್ಕಳ | ಪರಶುರಾಮ ಥೀಮ್ ಪಾರ್ಕ್ ಅಕ್ರಮ : ತಲೆಮರೆಸಿಕೊಂಡಿದ್ದ ಶಿಲ್ಪಿ ಕೃಷ್ಣ ನಾಯಕ್ ಬಂಧನ

ಕಾರ್ಕಳ | ಪರಶುರಾಮ ಥೀಮ್ ಪಾರ್ಕ್ ಅಕ್ರಮ : ತಲೆಮರೆಸಿಕೊಂಡಿದ್ದ ಶಿಲ್ಪಿ ಕೃಷ್ಣ ನಾಯಕ್ ಬಂಧನ

- Advertisement -
- Advertisement -

ಉಡುಪಿ ಜಿಲ್ಲೆ ಕಾರ್ಕಳದ ಬೈಲೂರಿನ ಪರಶುರಾಮ ಥೀಮ್ ಪಾರ್ಕ್‌ನಲ್ಲಿ ನಕಲಿ ಪರಶುರಾಮ ಪ್ರತಿಮೆ ನಿರ್ಮಿಸಿ ಸರ್ಕಾರಕ್ಕೆ ವಂಚಿಸಿರುವ ಆರೋಪದ ಮೇಲೆ ಪ್ರತಿಮೆಯ ಶಿಲ್ಪಿ ಕೃಷ್ಣ ನಾಯಕ್ ಅವರನ್ನು ಪೊಲೀಸರು ಬಂಧಿಸಿದ್ದಾರೆ ಎಂದು ವರದಿಯಾಗಿದೆ.

ಕೃಷ್ಣ ನಾಯಕ್ ‘ಕೃಷ್ ಆರ್ಟ್ ವರ್ಲ್ಡ್’ ಎಂಬ ಸಂಸ್ಥೆಯ ಮೂಲಕ ಥೀಮ್ ಪಾರ್ಕ್‌ನಲ್ಲಿ ಕಂಚಿನ ಪರಶುರಾಮ ಪ್ರತಿಮೆ ಸ್ಥಾಪಿಸಲು ಉಡುಪಿ ನಿರ್ಮಿತಿ ಕೇಂದ್ರದಿಂದ 1.25 ಕೋಟಿ ರೂಪಾಯಿ ಹಣ ಪಡೆದುಕೊಂಡು, ಕಂಚಿನ ಪ್ರತಿಮೆ ಮಾಡದೇ ನಕಲಿ ಫೈಬರ್ ಪ್ರತಿಮೆ ನಿರ್ಮಿಸಿ ಸರ್ಕಾರಕ್ಕೆ ವಂಚಿಸಿದ್ದಾರೆ ಎಂದು ನಲ್ಲೂರಿನ ಕೃಷ್ಣ ಶೆಟ್ಟಿ ಜೂನ್ ತಿಂಗಳಲ್ಲಿ ದೂರು ನೀಡಿದ್ದರು. ದೂರು ಆಧರಿಸಿ ಕಾರ್ಕಳ ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು.

ಈ ಪ್ರಕರಣ ರದ್ಧುಗೊಳಿಸುವಂತೆ ಕೋರಿ ಕೃಷ್ಣ ನಾಯಕ್ ಹೈಕೋರ್ಟ್‌ಗೆ ಅರ್ಜಿ ಸಲ್ಲಿಸಿದ್ದರು. ಹೈಕೋರ್ಟ್ ಅಕ್ಟೋಬರ್ 21ರಂದು ಅರ್ಜಿಯನ್ನು ವಜಾಗೊಳಿಸಿತ್ತು. ಈ ಹಿನ್ನೆಲೆ ಕೃಷ್ಣ ನಾಯಕ್ ನಿರೀಕ್ಷಣಾ ಜಾಮೀನು ಕೋರಿ ಉಡುಪಿ ಹೆಚ್ಚುವರಿ ಜಿಲ್ಲಾ ಮತ್ತು ಸತ್ರ ನ್ಯಾಯಾಲಯಕ್ಕೆ ಅರ್ಜಿ ಸಲ್ಲಿಸಿದ್ದರು. ಅರ್ಜಿ ವಿಚಾರಣೆ ನಡೆಸಿದ್ದ ನ್ಯಾಯಾಲಯ, ತಿರಸ್ಕರಿಸಿತ್ತು.

ನಿರೀಕ್ಷಣಾ ಜಾಮೀನು ಅರ್ಜಿ ತಿರಸ್ಕೃತಗೊಂಡ ಬಳಿಕ, ಕೃಷ್ಣ ನಾಯಕ್ ತಲೆಮರೆಸಿಕೊಂಡಿದ್ದರು. ಅವರನ್ನು ಕೇರಳದ ಕ್ಯಾಲಿಕಟ್‌ನಿಂದ ಭಾನುವಾರ (ನ.10) ಬಂಧಿಸಲಾಗಿದೆ ಎಂದು ತಿಳಿದು ಬಂದಿದೆ.

ಪ್ರಕರಣದ ಹಿನ್ನೆಲೆ : ಈ ಹಿಂದಿನ ಬಿಜೆಪಿ ಸರ್ಕಾರದ ಅವಧಿಯಲ್ಲಿ ಕನ್ನಡ ಮತ್ತು ಸಂಸ್ಕೃತಿ ಸಚಿವರಾಗಿದ್ದ ಕಾರ್ಕಳದ ಶಾಸಕ ಸುನಿಲ್ ಕುಮಾರ್ ಅವರ ನೇತೃತ್ವದಲ್ಲಿ ಕಾರ್ಕಳದ ಬೈಲೂರಿನ ಉಮ್ಮಿಕಲ್ ಬೆಟ್ಟದ ಮೇಲೆ ಪರಶುರಾಮ ಥೀಮ್ ಪಾರ್ಕ್ ನಿರ್ಮಿಸಲಾಗಿತ್ತು.

ಮಾಜಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅದನ್ನು ಉದ್ಘಾಟಿಸಿದ್ದರು. ಬಳಿಕ ಕೆಲ ದಿನಗಳಲ್ಲೇ ಪಾರ್ಕ್ ಕಾಮಗಾರಿ ಪೂರ್ಣಗೊಂಡಿಲ್ಲ ಎಂಬ ಕಾರಣಕ್ಕೆ ಪ್ರವಾಸಿಗರ ಭೇಟಿ ನಿಷೇಧಿಸಲಾಗಿತ್ತು.
ಇದು ಜನರಲ್ಲಿ ಅನುಮಾನ ಮೂಡುವಂತೆ ಮಾಡಿತ್ತು.

ನಂತರ ಕಾಂಗ್ರೆಸ್ ನಾಯಕರು ಸೇರಿದಂತೆ ಹಲವರು ಥೀಮ್ ಪಾರ್ಕ್‌ನಲ್ಲಿರುವ ಪರಶುರಾಮ ಪ್ರತಿಮೆ ಕಂಚಿನದ್ದಲ್ಲ, ಅದು ನಕಲಿ ಫೈಬರ್ ಪ್ರತಿಮೆ ಎಂದು ಆರೋಪಿಸಿದ್ದರು. ಈ ಆರೋಪವನ್ನು ಅಲ್ಲಗಳೆದಿದ್ದ ಶಾಸಕ ಸುನಿಲ್ ಕುಮಾರ್ ಆಪ್ತರು ಮತ್ತು ಬಿಜೆಪಿ ನಾಯಕರು ಪ್ರತಿಮೆಯ ಬಳಿಗೆ ತೆರಳಿ ಸುತ್ತಿಗೆ ಮೂಲಕ ಹೊಡೆದು ಅದು ಕಂಚಿನ ಪ್ರತಿಮೆಯೇ? ಎಂದು ಸಾಬೀತುಪಡಿಸುವ ಪ್ರಯತ್ನ ಮಾಡಿದ್ದರು. ನಂತರ ಪ್ರತಿಮೆ ಏಕಾಏಕಿ ಕಾಣೆಯಾಗಿತ್ತು.

ಈ ಎಲ್ಲಾ ಬೆಳವಣಿಗೆಗಳ ನಡುವೆ ಚುನಾವಣೆ ನಡೆದು ಹೊಸ ಕಾಂಗ್ರೆಸ್ ಸರ್ಕಾರ ರಾಜ್ಯದಲ್ಲಿ ಅಧಿಕಾರಕ್ಕೆ ಬಂತು. ಥೀಮ್ ಪಾರ್ಕ್ ಅಕ್ರಮದ ಬಗ್ಗೆ ಸರ್ಕಾರ ತನಿಖೆಗೆ ಆದೇಶಿಸಿತು. ಹೈಕೋರ್ಟ್‌ನಲ್ಲಿ ಪ್ರಕರಣ ದಾಖಲಾಗಿ ಪ್ರಸ್ತುತ ಸಿಐಡಿ ತನಿಖೆ ನಡೆಯುತ್ತಿದೆ.

ಪ್ರಕರಣ ಸಂಬಂಧ ಈಗಾಗಲೇ ನಿರ್ಮಿತಿ ಕೇಂದ್ರದ ನಿರ್ದೇಶಕ ಅರುಣ್ ಕುಮಾರ್ ಅವರನ್ನು ಉಡುಪಿ ಜಿಲ್ಲಾಧಿಕಾರಿ ಡಾ.ಕೆ ವಿದ್ಯಾ ಕುಮಾರಿ ಅಮಾನತು ಮಾಡಿದ್ದಾರೆ. ಈಗ ಶಿಲ್ಪಿ ಕೃಷ್ಣ ನಾಯಕ್ ಬಂಧನವಾಗಿದೆ.

ಇದನ್ನೂ ಓದಿ : ಅತ್ಯಾಚಾರ ಪ್ರಕರಣ: ಜೆಡಿಎಸ್ ಮಾಜಿ ಸಂಸದ ಪ್ರಜ್ವಲ್ ರೇವಣ್ಣ ಜಾಮೀನು ಅರ್ಜಿ ತಿರಸ್ಕರಿಸಿದ ಸುಪ್ರೀಂ ಕೋರ್ಟ್

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ವೆನೆಜುವೆಲಾದ ತೈಲ ಖರೀದಿಗೆ ಅಮೆರಿಕದ ಅನುಮತಿ ಪಡೆಯಲು ರಿಲಯನ್ಸ್ ಮಾತುಕತೆ : ವರದಿ

ಭಾರತದ ರಿಲಯನ್ಸ್ ಇಂಡಸ್ಟ್ರೀಸ್ ವೆನೆಜುವೆಲಾದ ಕಚ್ಚಾ ತೈಲ ಖರೀದಿಯನ್ನು ಪುನರಾರಂಭಿಸಲು ಅಮೆರಿಕದ ಅನುಮೋದನೆಯನ್ನು ಕೋರುತ್ತಿದೆ ಎಂದು ಈ ವಿಷಯದ ಬಗ್ಗೆ ಗೊತ್ತಿರುವ ಎರಡು ಮೂಲಗಳು ಶುಕ್ರವಾರ ತಿಳಿಸಿವೆ ಎಂದು ಸುದ್ದಿ ಸಂಸ್ಥೆ ರಾಯಿಟರ್ಸ್...

ಐ-ಪ್ಯಾಕ್‌ ಮೇಲೆ ದಾಳಿ | ಇಡಿ ಅಧಿಕಾರಿಗಳ ವಿರುದ್ಧ ತನಿಖೆ ಪ್ರಾರಂಭಿಸಿದ ಕೋಲ್ಕತ್ತಾ ಪೊಲೀಸರು : ಸುಪ್ರೀಂ ಕೋರ್ಟ್‌ನಲ್ಲಿ ಕೇವಿಯಟ್ ಸಲ್ಲಿಸಿದ ಪ. ಬಂಗಾಳ ಸರ್ಕಾರ

ಐ-ಪ್ಯಾಕ್ ಕಚೇರಿ ಮತ್ತು ಅದರ ಮುಖ್ಯಸ್ಥ ಪ್ರತೀಕ್ ಜೈನ್ ಅವರ ಮನೆ ಮೇಲೆ ಜಾರಿ ನಿರ್ದೇಶನಾಲಯ (ಇಡಿ) ದಾಳಿ ನಡೆಸಿದ ಸಂದರ್ಭದಲ್ಲಿ ದಾಖಲೆಗಳ ಕಳ್ಳತನದ ಆರೋಪದ ಮೇಲೆ ಕೋಲ್ಕತ್ತಾ ಪೊಲೀಸರು ಶನಿವಾರ (ಜ.10)...

ಟ್ರಂಪ್ ಸಂಚಿಗೆ ತಿರುಗೇಟು : ನಾವು ಯಾರ ಅಡಿಯಾಳಾಗಲು ಸಿದ್ದರಿಲ್ಲ ಎಂದ ಗ್ರೀನ್‌ಲ್ಯಾಂಡ್‌ನ ರಾಜಕೀಯ ಪಕ್ಷಗಳು

ವೆನೆಜುವೆಲಾ ಬಳಿಕ ಖನಿಜ-ಸಮೃದ್ಧ ಡ್ಯಾನಿಶ್ (ಡೆನ್ಮಾರ್ಕ್‌) ಸ್ವಾಯತ್ತ ಪ್ರದೇಶವಾದ ಗ್ರೀನ್‌ ಲ್ಯಾಂಡ್‌ ಮೇಲೆ ಬಲಪ್ರಯೋಗ ಮಾಡಲು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಯೋಜಿಸುತ್ತಿದ್ದಾರೆ. ಈ ಬಗ್ಗೆ ಪ್ರತಿಕ್ರಿಯೆ ನೀಡಿರುವ ಗ್ರೀನ್‌ಲ್ಯಾಂಡ್‌ನ ರಾಜಕೀಯ ಪಕ್ಷಗಳು...

ಮತ್ತೆ ಒಂದಾದ ಎನ್‌ಸಿಪಿ ಬಣಗಳು : ಸುಪ್ರಿಯಾ ಸುಳೆ ಜೊತೆ ವೇದಿಕೆ ಹಂಚಿಕೊಂಡ ಅಜಿತ್ ಪವಾರ್, ಜಂಟಿ ಪ್ರಣಾಳಿಕೆ ಬಿಡುಗಡೆ

ಮಹಾರಾಷ್ಟ್ರದ ಉಪಮುಖ್ಯಮಂತ್ರಿ ಅಜಿತ್ ಪವಾರ್ ನೇತೃತ್ವದ ಎನ್‌ಸಿಪಿ ಮತ್ತು ಅವರ ಚಿಕ್ಕಪ್ಪ ಶರದ್ ಪವಾರ್ ನೇತೃತ್ವದ ಎನ್‌ಸಿಪಿ (ಎಸ್‌ಪಿ) ಶನಿವಾರ (ಜ.10) ಪುಣೆ ಮಹಾನಗರ ಪಾಲಿಕೆಗೆ ನಡೆಯಲಿರುವ ಚುನಾವಣೆಗೆ ಜಂಟಿ ಪ್ರಣಾಳಿಕೆಯನ್ನು ಬಿಡುಗಡೆ...

ಮಹಾರಾಷ್ಟ್ರ : ಲೈಂಗಿಕ ದೌರ್ಜನ್ಯ ಪ್ರಕರಣದ ಆರೋಪಿಯನ್ನು ಕೌನ್ಸಿಲರ್ ಮಾಡಿದ ಬಿಜೆಪಿ

ಬದ್ಲಾಪುರ ಲೈಂಗಿಕ ದೌರ್ಜನ್ಯ ಪ್ರಕರಣದ ಸಹ ಆರೋಪಿ ಮತ್ತು ಶಾಲೆಯೊಂದರ ಮಾಜಿ ಕಾರ್ಯದರ್ಶಿ ತುಷಾರ್ ಆಪ್ಟೆ ಎಂಬಾತನನ್ನು ಥಾಣೆ ಜಿಲ್ಲೆಯ ಕುಲ್ಗಾಂವ್-ಬದ್ಲಾಪುರ ಮುನ್ಸಿಪಲ್ ಕೌನ್ಸಿಲ್‌ಗೆ ಬಿಜೆಪಿ ನಾಮನಿರ್ದೇಶನ ಮಾಡಿದೆ. ಮುನ್ಸಿಪಲ್ ಕೌನ್ಸಿಲ್ ಅಧ್ಯಕ್ಷೆ ರುಚಿತಾ...

ಕಳ್ಳನೆಂದು ಸುಳ್ಳಾರೋಪ ಹೊರಿಸಿ ಜೈಲಿಗಟ್ಟಿದ ಪೊಲೀಸರು : ಸಂತ್ರಸ್ತಗೆ 14 ಲಕ್ಷ ರೂ. ಪರಿಹಾರ ನೀಡಲು ಕೋರ್ಟ್ ಆದೇಶ

ಕಳ್ಳನೆಂದು ಸುಳ್ಳಾರೋಪ ಹೊರಿಸಿ ಪೊಲೀಸರು ಜೈಲಿಗಟ್ಟಿದ ವ್ಯಕ್ತಿಗೆ 14 ಲಕ್ಷ ರೂಪಾಯಿ ಪರಿಹಾರ ಒದಗಿಸುವಂತೆ ಕೇರಳ ಸರ್ಕಾರಕ್ಕೆ ಹೈಕೋರ್ಟ್ ಆದೇಶಿಸಿದೆ. ಕಣ್ಣೂರು ಮೂಲದ ವಿ.ಕೆ ತಾಜುದ್ದೀನ್ ಕಾನೂನು ಹೋರಾಟದಲ್ಲಿ ಗೆದ್ದು ಪರಿಹಾರ ಪಡೆದ ವ್ಯಕ್ತಿ....

ಇರಾನ್‌ನಲ್ಲಿ ತೀವ್ರಗೊಂಡ ಆಡಳಿತ ವಿರೋಧಿ ಪ್ರತಿಭಟನೆ : ಟ್ರಂಪ್ ಮಧ್ಯಪ್ರವೇಶ ಕೋರಿದ ಮಾಜಿ ದೊರೆಯ ಮಗ

ಇರಾನ್‌ನಲ್ಲಿ ಭುಗಿಲೆದ್ದಿರುವ ಆಡಳಿತ ವಿರೋಧಿ ಪ್ರತಿಭಟನೆ ತೀವ್ರ ಸ್ವರೂಪ ಪಡೆದುಕೊಂಡಿದೆ. 2025ರ ಡಿಸೆಂಬರ್ 28ರಂದು ಪ್ರಾರಂಭಗೊಂಡ ಪ್ರತಿಭಟನೆಗಳು ಹಿಂಸಾಚಾರ ರೂಪ ಪಡೆದುಕೊಂಡು 13ನೇ ದಿನವೂ ಮುಂದುವರಿದಿದೆ. ಆರ್ಥಿಕ ಬಿಕ್ಕಟ್ಟಿನ ವಿರುದ್ದ (ರಿಯಾಲ್ ಕರೆನ್ಸಿ ಮೌಲ್ಯ...

ಮತದಾರರ ಹೆಸರು ಅಳಿಸಲು ಯತ್ನ : ಬಿಜೆಪಿ ವಿರುದ್ಧ 5 ವಿಪಕ್ಷಗಳಿಂದ ದೂರು ದಾಖಲು

ಅಸ್ಸಾಂನ ಐದು ವಿರೋಧ ಪಕ್ಷಗಳು ಶುಕ್ರವಾರ (ಜ.9) ಪೊಲೀಸ್ ದೂರು ದಾಖಲಿಸಿದ್ದು, ಆಡಳಿತಾರೂಢ ಭಾರತೀಯ ಜನತಾ ಪಾರ್ಟಿ (ಬಿಜೆಪಿ) ರಾಜ್ಯದ ಮತದಾರರ ಪಟ್ಟಿಯಿಂದ ಹೆಚ್ಚಿನ ಸಂಖ್ಯೆಯ ನಿಜವಾದ ಮತದಾರರ ಹೆಸರನ್ನು ಅಳಿಸಲು ಸಂಚು...

ಐ-ಪ್ಯಾಕ್ ಮೇಲೆ ದಾಳಿ ಪ್ರಕರಣ: ಮಮತಾ ಬ್ಯಾನರ್ಜಿ ದೂರಿನ ಬೆನ್ನಲ್ಲೇ ಜಾರಿ ನಿರ್ದೇಶನಾಲಯದ ವಿರುದ್ಧ ಎಫ್‌ಐಆರ್

ಕೋಲ್ಕತ್ತಾ: ರಾಜಕೀಯ ಸಲಹಾ ಸಂಸ್ಥೆ ಐ-ಪಿಎಸಿ (ಐ-ಪ್ಯಾಕ್) ಕಚೇರಿ ಮತ್ತು ಅದರ ಮುಖ್ಯಸ್ಥ ಪ್ರತೀಕ್ ಜೈನ್ ಅವರ ನಿವಾಸದ ಮೇಲೆ ಜಾರಿ ನಿರ್ದೇಶನಾಲಯ ನಡೆಸಿದ ದಾಳಿಗೆ ಸಂಬಂಧಿಸಿದಂತೆ ಟಿಎಂಸಿ ಅಧ್ಯಕ್ಷೆ ಮಮತಾ ಬ್ಯಾನರ್ಜಿ...

‘ಭ್ರಷ್ಟ ಜನತಾ ಪಾರ್ಟಿ’: ಬಿಜೆಪಿ ಡಬಲ್ ಎಂಜಿನ್ ಆಡಳಿತದ ವಿರುದ್ಧ ರಾಹುಲ್ ಗಾಂಧಿ ವಾಗ್ದಾಳಿ

ನವದೆಹಲಿ: ವಿವಿಧ ರಾಜ್ಯಗಳಲ್ಲಿ ಬಿಜೆಪಿಯ ಡಬಲ್ ಎಂಜಿನ್ ಸರ್ಕಾರಗಳ ವಿರುದ್ಧ ಲೋಕಸಭೆ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಾಗ್ದಾಳಿ ನಡೆಸಿದ್ದಾರೆ.  ತಮ್ಮ ಸಾಮಾಜಿಕ ಮಾಧ್ಯಮ ಎಕ್ಸ್‌ನಲ್ಲಿ ಪೋಸ್ಟ್ ಮಾಡಿರುವ ರಾಹುಲ್, ಉತ್ತರಾಖಂಡದಲ್ಲಿ ಅಂಕಿತ...