Homeಚಳವಳಿಕರ್ನಾಲ್ ರೈತರ ಹಿಂಸಾಚಾರ: ನ್ಯಾಯಾಂಗ ಆಯೋಗ ರದ್ದುಗೊಳಿಸಿದ ಹರಿಯಾಣ ಸರ್ಕಾರ

ಕರ್ನಾಲ್ ರೈತರ ಹಿಂಸಾಚಾರ: ನ್ಯಾಯಾಂಗ ಆಯೋಗ ರದ್ದುಗೊಳಿಸಿದ ಹರಿಯಾಣ ಸರ್ಕಾರ

- Advertisement -
- Advertisement -

ಕಳೆದ ವರ್ಷ ಆಗಸ್ಟ್‌ 28 ರಂದು ಹರಿಯಾಣದ ಕರ್ನಾಲ್‌ನ ಬಸ್ತಾರಾ ಟೋಲ್ ಪ್ಲಾಜಾದಲ್ಲಿ ಪ್ರತಿಭಟನಾ ನಿರತ ರೈತರ ಮೇಲೆ ಪೊಲೀಸರು ಅಮಾನುಷವಾಗಿ ಲಾಠಿ ಚಾರ್ಜ್ ನಡೆಸಿದ್ದ ಘಟನೆ ದೇಶಾದ್ಯಂತ ಆಕ್ರೋಶಕ್ಕೆ ಕಾರಣವಾಗಿತ್ತು. ಈ ಹಿಂಸಾಚಾರದ ತನಿಖೆಗೆ ಏಕವ್ಯಕ್ತಿ ನ್ಯಾಯಾಂಗ ಆಯೋಗ ರಚನೆ ಮಾಡಲಾಗಿತ್ತು.

ಪಂಜಾಬ್ ಮತ್ತು ಹರಿಯಾಣ ಹೈಕೋರ್ಟ್‌ನ ಮಾಜಿ ನ್ಯಾಯಾಧೀಶ ನ್ಯಾಯಮೂರ್ತಿ ಎಸ್‌ಎನ್ ಅಗರ್ವಾಲ್ ನೇತೃತ್ವದಲ್ಲಿ ರಚಿಸಲಾಗಿದ್ದ ತನಿಖಾ ಆಯೋಗವನ್ನು ’ಅನಗತ್ಯ’ ಎಂದಿರುವ ಹರಿಯಾಣ ಸರ್ಕಾರ ಏಕವ್ಯಕ್ತಿ ನ್ಯಾಯಾಂಗ ಆಯೋಗದ ಸಂವಿಧಾನದ ಅಧಿಸೂಚನೆಯನ್ನು ರದ್ದುಗೊಳಿಸಿದೆ.

ತನಿಖಾ ಆಯೋಗವು ಅಸ್ತಿತ್ವದಲ್ಲಿಲ್ಲ ಎಂದು ಘೋಷಿಸುವ ಅಧಿಸೂಚನೆಯನ್ನು ರಾಜ್ಯ ಗೃಹ ಇಲಾಖೆಯು ಜನವರಿ 5 ರಂದು ಹೆಚ್ಚುವರಿ ಮುಖ್ಯ ಕಾರ್ಯದರ್ಶಿ (ಗೃಹ) ರಾಜೀವ್ ಅರೋರಾ ಅವರ ಸಹಿಯೊಂದಿಗೆ ಹೊರಡಿಸಿದೆ.

“ತನಿಖಾ ವರದಿ ಸಿದ್ಧವಾಗಿದೆ ಮತ್ತು ರಾಜ್ಯ ಸರ್ಕಾರ ನನ್ನನ್ನು ಕೇಳಿದಾಗ ವರದಿ ಸಲ್ಲಿಸಲಾಗುವುದು ಎಂದು ನಾನು ಹೈಕೋರ್ಟ್‌ಗೆ ತಿಳಿಸಿದ್ದೇನೆ” ಎಂದು ನ್ಯಾಯಮೂರ್ತಿ (ನಿವೃತ್ತ) ಅಗರ್ವಾಲ್ ಹೇಳಿದ್ದಾರೆ ಎಂದು ಹಿಂದೂಸ್ತಾನ್ ಟೈಮ್ಸ್ ಉಲ್ಲೇಖಿಸಿದೆ.

ಇದನ್ನೂ ಓದಿ: ಹರಿಯಾಣ: ಪ್ರತಿಭಟನಾ ನಿರತ ರೈತರ ಮೇಲೆ ಲಾಠಿ ಚಾರ್ಜ್‌; 10 ಜನರಿಗೆ ಗಾಯ

ಆಗಸ್ಟ್ 28 ರಂದು ಕರ್ನಾಲ್‌ನಲ್ಲಿ ಪೊಲೀಸರು ರೈತರ ವಿರುದ್ಧ ಅಮಾನುಚವಾಗಿ ನಡೆಸಿದ್ದ ಲಾಠಿಚಾರ್ಜ್ ಒಳಗೊಂಡಂತೆ, ಹಿಂಸಾತ್ಮಕ ಪರಿಸ್ಥಿತಿಗೆ ಕಾರಣರಾದ ವ್ಯಕ್ತಿಗಳನ್ನು ಪತ್ತೆಹಚ್ಚಲು ಮತ್ತು ಆಗಿನ ಕರ್ನಾಲ್ ಉಪ ವಿಭಾಗೀಯ ಮ್ಯಾಜಿಸ್ಟ್ರೇಟ್ (ಎಸ್‌ಡಿಎಂ) ಆಯುಷ್ ಸಿನ್ಹಾ ಅವರ ಪಾತ್ರದ ಬಗ್ಗೆ ವಿಚಾರಣೆ ನಡೆಸುವುದು ಈ ಆಯೋಗದ ಕೆಲಸವಾಗಿತ್ತು.

ಹಿಂಸಾಚಾರ ಘಟನೆಯಲ್ಲಿ ರೈತರ ಮೇಲೆ ಪೊಲೀಸರು ಪ್ರಕರಣ ದಾಖಲಿಸಿದ್ದರು ಎಂದು ಮೂಲಗಳು ತಿಳಿಸಿವೆ. ರೈತರ ಮೇಲೆ ನಡೆದ ಹಲ್ಲೆಯನ್ನು ವಿರೋಧಿಸಿ ಕರ್ನಾಲ್‌ನಲ್ಲಿರುವ ಜಿಲ್ಲಾಧಿಕಾರಿ ಕಚೇರಿಯ ಹೊರಗೆ ರೈತರು ಧರಣಿ ಕುಳಿತಿದ್ದರಿಂದ ತನಿಖಾ ಆಯೋಗವನ್ನು ರಚಿಸಲಾಯಿತು. ನ್ಯಾಯಾಂಗ ತನಿಖೆಗೆ ಆದೇಶಿಸಲಾಗುವುದು ಎಂದು ಭರವಸೆ ನೀಡಿದ ನಂತರವೇ ಪ್ರತಿಭಟನೆ ತೆಗೆದುಕೊಳ್ಳಲಾಗಿತ್ತು. ಬಳಿಕ ಏಕವ್ಯಕ್ತಿ ನ್ಯಾಯಾಂಗ ಆಯೋಗ ರಚನೆ ಮಾಡಲಾಗಿತ್ತು.

”ರೈತ ಸಂಘಗಳು ರಾಜ್ಯ ಸರಕಾರದೊಂದಿಗೆ ಒಪ್ಪಂದ ಮಾಡಿಕೊಂಡಿವೆ. ರೈತರ ಮೇಲೆ ದಾಖಲಾದ ಎಲ್ಲಾ ಪ್ರಕರಣಗಳನ್ನು ಸರ್ಕಾರ ಹಿಂಪಡೆಯಲಿದ್ದು, ನಮ್ಮ ದೂರನ್ನು ಹಿಂಪಡೆಯಲು ನಿರ್ಧರಿಸಿದ್ದೇವೆ. ಹಾಗಾಗಿ, ಬಸ್ತಾರಾ ಘಟನೆಗೆ ಸಂಬಂಧಿಸಿದಂತೆ ನಾವು ದೂರನ್ನು ಹಿಂಪಡೆದಿದ್ದೇವೆ” ಎಂದು ಹರಿಯಾಣ ಬಿಕೆಯು ನಾಯಕ ಗುರ್ನಾಮ್ ಸಿಂಗ್ ಚಾರುಣಿ ಹೇಳಿದ್ದಾರೆ.


ಇದನ್ನೂ ಓದಿ: ‘ರೈತರ ತಲೆ ಒಡೆಯಿರಿ’ ಎಂದು ಆದೇಶಿಸಿದ ಅಧಿಕಾರಿಯ ವಿರುದ್ಧ ಕ್ರಮ: ಹರಿಯಾಣ ಡಿಸಿಎಂ ಹೇಳಿಕೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

LEAVE A REPLY

Please enter your comment!
Please enter your name here

- Advertisment -

ಸ್ವಕ್ಷೇತ್ರ ತಿರುವನಂತಪುರದಲ್ಲಿ ಬಿಜೆಪಿ ಭರ್ಜರಿ ಗೆಲುವು : ‘ಪ್ರಜಾಪ್ರಭುತ್ವದ ಸೌಂದರ್ಯ’ ಎಂದ ಕಾಂಗ್ರೆಸ್ ಸಂಸದ ಶಶಿ ತರೂರ್

ಕೇರಳದ ಸ್ಥಳೀಯ ಸಂಸ್ಥೆ ಚುನಾವಣೆಯ ಫಲಿತಾಂಶ ಇಂದು (ಡಿ.13) ಪ್ರಕಟಗೊಂಡಿದ್ದು, ತಿರುವನಂತಪುರಂ ಮಹಾನಗರ ಪಾಲಿಕೆಯಲ್ಲಿ ಬಿಜೆಪಿ ನೇತೃತ್ವದ ಎನ್‌ಡಿಎ ಭರ್ಜರಿ ಗೆಲುವು ದಾಖಲಿಸಿದೆ. ಈ ಮೂಲಕ 45 ವರ್ಷಗಳ ಸಿಪಿಐ(ಎಂ) ನೇತೃತ್ವದ ಎಲ್‌ಡಿಎಫ್‌...

ಕೇರಳ ಸ್ಥಳೀಯ ಸಂಸ್ಥೆ ಚುನಾವಣೆ : ಯುಡಿಎಫ್‌ ಸ್ಪಷ್ಟ ಮೇಲುಗೈ

ಇಂದು (2025 ಡಿಸೆಂಬರ್ 13, ಶನಿವಾರ) ಪ್ರಕಟಗೊಂಡ ಕೇರಳದ ಸ್ಥಳೀಯ ಸಂಸ್ಥೆಗಳ ಚುನಾವಣಾ ಫಲಿತಾಂಶದಲ್ಲಿ ವಿರೋಧ ಪಕ್ಷಗಳ ಒಕ್ಕೂಟವಾದ ಯುನೈಟೆಡ್ ಡೆಮಾಕ್ರಟಿಕ್ ಫ್ರಂಟ್ (ಯುಡಿಎಫ್) ಸ್ಪಷ್ಟ ಮೇಲುಗೈ ಸಾಧಿಸಿದೆ. ಈ ಮೂಲಕ ರಾಜ್ಯ...

ಕೋಲ್ಕತ್ತಾ ಮೆಸ್ಸಿ ಕಾರ್ಯಕ್ರಮದಲ್ಲಿ ಗಲಾಟೆ | ಕ್ಷಮೆ ಯಾಚಿಸಿದ ಸಿಎಂ ಮಮತಾ ಬ್ಯಾನರ್ಜಿ, ತನಿಖೆಗೆ ಸಮಿತಿ ರಚನೆ; ಆಯೋಜಕನ ಬಂಧನ

ಫುಟ್ಬಾಲ್ ತಾರೆ ಲಿಯೋನೆಲ್ ಮೆಸ್ಸಿ ಭೇಟಿಯ ವೇಳೆ ಶನಿವಾರ (ಡಿಸೆಂಬರ್ 13) ಕೋಲ್ಕತ್ತಾದ ಸಾಲ್ಟ್ ಲೇಕ್ ಕ್ರೀಡಾಂಗಣದಲ್ಲಿ ಉಂಟಾದ ಗಲಾಟೆಗೆ ಸಂಬಂಧಿಸಿದಂತೆ ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಕ್ಷಮೆಯಾಚಿಸಿದ್ದು, ನಿವೃತ್ತ ನ್ಯಾಯಮೂರ್ತಿ...

ಮೆಸ್ಸಿ ನೋಡಲು 25 ಸಾವಿರ ರೂ. ಪಾವತಿಸಿದವರಿಗೆ ನಿರಾಶೆ; ಕೋಪಗೊಂಡ ಅಭಿಮಾನಿಗಳಿಂದ ಕ್ರೀಡಾಂಗಣದಲ್ಲಿ ದಾಂಧಲೆ

ಶನಿವಾರ ನಡೆದ ಲಿಯೋನೆಲ್ ಮೆಸ್ಸಿ ಅವರ ಬಹು ನಿರೀಕ್ಷಿತ "ಗೋಟ್ ಇಂಡಿಯಾ ಟೂರ್" ಕೋಲ್ಕತ್ತಾದಲ್ಲಿ ಅಸ್ತವ್ಯಸ್ತವಾಯಿತು. ಯುವ ಭಾರತಿ ಕ್ರಿರಂಗನ್‌ನಲ್ಲಿ ರೊಚ್ಚಿಗೆದ್ದ ಅಭಿಮಾನಿಗಳ ದಾಂಧಲೆಯಿಂದ ಕ್ರೀಡಾಂಗಣ ಅವ್ಯವಸ್ಥೆಗೆ ಒಳಗಾಯಿತು. ಸಾವಿರಾರು ಅಭಿಮಾನಿಗಳು ಅರ್ಜೆಂಟೀನಾದ...

ಡ್ರಗ್‌ ಪೆಡ್ಲರ್‌ಗಳ ಮನೆ ಒಡೆದು ಹಾಕುವ ಹೇಳಿಕೆ : ಪರಮೇಶ್ವರ್ ಮಾತಿಗೆ ಆತಂಕ ವ್ಯಕ್ತಪಡಿಸಿದ ಕಾಂಗ್ರೆಸ್ ಹಿರಿಯ ನಾಯಕ ಚಿದಂಬರಂ

"ಡ್ರಗ್‌ ಪೆಡ್ಲರ್‌ಗಳ ಬಾಡಿಗೆ ಮನೆಗಳನ್ನು ಒಡೆದು ಹಾಕುವ ಹಂತಕ್ಕೆ ಹೋಗಿದ್ದೇವೆ" ಎಂಬ ಗೃಹ ಸಚಿವ ಜಿ.ಪರಮೇಶ್ವರ್ ಹೇಳಿಕೆಗೆ ಕಾಂಗ್ರೆಸ್ ಹಿರಿಯ ನಾಯಕ, ಮಾಜಿ ಕೇಂದ್ರ ಸಚಿವ ಪಿ. ಚಿದಂಬರಂ ಆತಂಕ ವ್ಯಕ್ತಪಡಿಸಿದ್ದಾರೆ. ಸಾಮಾಜಿಕ...

ಕೇರಳ ಸ್ಥಳೀಯ ಸಂಸ್ಥೆಗಳ ಚುನಾವಣೆ: ಶಶಿ ತರೂರ್ ಕ್ಷೇತ್ರ ತಿರುವನಂತಪುರಂನಲ್ಲಿ ಬಿಜೆಪಿ ಮುನ್ನಡೆ

ಕೇರಳ ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ, ವಿಶೇಷವಾಗಿ ತಿರುವನಂತಪುರಂನಲ್ಲಿ ಭಾರತೀಯ ಜನತಾ ಪಕ್ಷದ ಸಾಧನೆಯನ್ನು ಹಿರಿಯ ಕಾಂಗ್ರೆಸ್ ನಾಯಕ ಶಶಿ ತರೂರ್ ಶನಿವಾರ ಅಭಿನಂದಿಸಿದ್ದಾರೆ. ಜನರ ತೀರ್ಪನ್ನು ಗೌರವಿಸಬೇಕು ಎಂದು ಹೇಳಿದ್ದಾರೆ. ಎಕ್ಸ್‌ನಲ್ಲಿ ದೀರ್ಘ...

ಆಳಂದ ಮತಗಳ್ಳತನ | ಬಿಜೆಪಿ ಮಾಜಿ ಶಾಸಕ ಸುಭಾಷ್ ಗುತ್ತೇದಾರ್ ಸೇರಿ 7 ಮಂದಿ ವಿರುದ್ಧ ಎಸ್‌ಐಟಿ ಚಾರ್ಜ್‌ಶೀಟ್‌

ಕಲಬುರಗಿಯ ಆಳಂದ ವಿಧಾನಸಭಾ ಕ್ಷೇತ್ರದಲ್ಲಿ ನಡೆದ ಮತಗಳ್ಳತನ (ಚುನಾವಣಾ ಆಕ್ರಮ) ಪ್ರಕರಣದ ತನಿಖೆ ನಡೆಸುತ್ತಿರುವ ವಿಶೇಷ ತನಿಖಾ ತಂಡ (ಎಸ್‌ಐಟಿ) ನ್ಯಾಯಾಲಯಕ್ಕೆ ಆರೋಪಪಟ್ಟಿ ಸಲ್ಲಿಸಿದ್ದು, ಆಳಂದದ ಬಿಜೆಪಿ ಮಾಜಿ ಶಾಸಕ ಸುಭಾಷ್ ಗುತ್ತೇದಾರ್...

ಉತ್ತರ ಪ್ರದೇಶ| ಗಸ್ತು ವಾಹನ ಹಳ್ಳಕ್ಕೆ ಉರುಳಿಸಿದ ಪಾನಮತ್ತ ಪೊಲೀಸರು; ಕ್ರೇನ್ ಚಾಲಕನ ಮೇಲೆ ಹಲ್ಲೆ

ಶುಕ್ರವಾರ (ಡಿಸೆಂಬರ್ 12) ರಾತ್ರಿ ಪೊಲೀಸರೊಬ್ಬರು ಕಾರಿನ ನಿಯಂತ್ರಣ ಕಳೆದುಕೊಂಡ ಬಳಿಕ '112' ಪೊಲೀಸ್ ಪ್ರತಿಕ್ರಿಯೆ ವಾಹನ (ಪಿಆರ್‌ವಿ) ಹಳ್ಳಕ್ಕೆ ಉರುಳಿದೆ. ವರದಿಗಳ ಪ್ರಕಾರ, ಘಟನೆಯ ಸಮಯದಲ್ಲಿ ಪೊಲೀಸರು ಪಾನಮತ್ತರಾಗಿದ್ದರು. ಕಾರ್ ಕಂದಕಕ್ಕೆ...

ಲಿಯೋನೆಲ್ ಮೆಸ್ಸಿ ಇಂಡಿಯಾ ಪ್ರವಾಸ; ಅಭೂತಪೂರ್ವ ಸ್ವಾಗತ ಕೋರಿದ ಕೋಲ್ಕತ್ತಾ ಅಭಿಮಾನಿಗಳು

ಇಂಡಿಯಾ ಪ್ರವಾಸ ಪ್ರಾರಂಭಿಸಿರುವ ಅರ್ಜೆಂಟೀನಾದ ಪುಟ್‌ಬಾಲ್‌ ತಾರೆ ಲಿಯೋನೆಲ್ ಮೆಸ್ಸಿ ಕೋಲ್ಕತ್ತಾಗೆ ಬಂದಿಳಿದಿದ್ದಾರೆ. ಶನಿವಾರ ಬೆಳಗಿನ ಜಾವ ವಿಮಾನ ನಿಲ್ದಾಣದಲ್ಲಿ ನೆರೆದಿದ್ದ ಸಾವಿರಾರು ಅಭಿಮಾನಿಗಳಿಂದ ಅವರಿಗೆ ಅಭೂತಪೂರ್ವ ಸ್ವಾಗತ ಕೋರಿದರು. ಅರ್ಜೆಂಟೀನಾದ ಸೂಪರ್‌ಸ್ಟಾರ್ ದುಬೈ...

ನಟಿಯ ಅಪಹರಣ, ಅತ್ಯಾಚಾರ ಪ್ರಕರಣ : ಆರು ಅಪರಾಧಿಗಳಿಗೆ 20 ವರ್ಷ ಕಠಿಣ ಜೈಲು ಶಿಕ್ಷೆ

ಮಲಯಾಳಂ ಮೂಲದ ಬಹುಭಾಷಾ ನಟಿಯ ಅಪಹರಣ ಮತ್ತು ಅತ್ಯಾಚಾರ ಪ್ರಕರಣದ (2017ರ ಪ್ರಕರಣ) ಆರು ಅಪರಾಧಿಗಳಿಗೆ ಇಪ್ಪತ್ತು ವರ್ಷಗಳ ಕಠಿಣ ಜೈಲು ಶಿಕ್ಷೆ ವಿಧಿಸಿ ಶುಕ್ರವಾರ (ಡಿಸೆಂಬರ್ 12) ಕೇರಳ ನ್ಯಾಯಾಲಯ ಆದೇಶಿಸಿದೆ. ಡಿಸೆಂಬರ್...