Homeಚಳವಳಿಹರಿಯಾಣದ ಕರ್ನಾಲ್‌ನಲ್ಲಿ ಇಂದು ರೈತ ಪ್ರತಿಭಟನೆ: ಇಂಟರ್‌ನೆಟ್ ಸ್ಥಗಿತಗೊಳಿಸಿದ ಸರ್ಕಾರ

ಹರಿಯಾಣದ ಕರ್ನಾಲ್‌ನಲ್ಲಿ ಇಂದು ರೈತ ಪ್ರತಿಭಟನೆ: ಇಂಟರ್‌ನೆಟ್ ಸ್ಥಗಿತಗೊಳಿಸಿದ ಸರ್ಕಾರ

- Advertisement -
- Advertisement -

ಹರಿಯಾಣದ ಕರ್ನಾಲ್‌ನಲ್ಲಿ ರೈತರ ಮೇಲೆ ನಡೆದಿದ್ದ ಮಾರಣಾಂತಿಕ ಲಾಠಿಚಾರ್ಜ್ ವಿರೋಧಿಸಿ ಇಂದು (ಮಂಗಳವಾರ) ರೈತರು ಕರ್ನಾಲ್ ಮಿನಿ ಸೆಕ್ರೆಟರಿಯೇಟ್‌ಗೆ ಮುತ್ತಿಗೆ ಹಾಕಿ ಪ್ರತಿಭಟನೆ ನಡೆಸಲಿದ್ದಾರೆ. ಜೊತೆಗೆ   ಕಿಸಾನ್ ಮಹಾಪಂಚಾಯತ್ ಕೂಡ ನಡೆಯಲಿದೆ. ಸಂಯುಕ್ತ ಕಿಸಾನ್ ಮೋರ್ಚಾ ಪ್ರತಿಭಟನೆಗೆ ಬೆಂಬಲ ಸೂಚಿಸಿದೆ.

ಪ್ರತಿಭಟನೆ ಜೊತೆಗೆ ಕರ್ನಾಲ್ ಕಿಸಾನ್ ಮಹಾಪಂಚಾಯತ್ ನಡೆಯಲಿದೆ. ಲಾಠಿಚಾರ್ಜ್ ನಡೆಸಿ ರೈತರ ಮೇಲೆ ಹಲ್ಲೆ ಮಾಡಿದ್ದ ಸರ್ಕಾರ ಈಗ ಕರ್ನಾಲ್‌ನಲ್ಲಿ 144 ಸೆಕ್ಷನ್ ಜಾರಿ ಮಾಡಿದೆ. ಜೆತೆಗೆ ಇಂಟರ್‌ನೆಟ್ ಸ್ಥಗಿತಗೊಳಿಸಿದೆ.

ಈ ಹೋರಾಟವನ್ನು ಹತ್ತಿಕ್ಕಲು ಕರ್ನಾಲ್ ಜಿಲ್ಲಾಡಳಿತ ಮಧ್ಯರಾತ್ರಿ 12.30 ರಿಂದಲೇ ಇಂಟರ್ನೆಟ್‌ ಸೇವೆ ಬಂದ್‌ ಮಾಡಿದೆ. ಕರ್ನಾಲ್‌ ಸೇರಿದಂತೆ 5 ಜಿಲ್ಲೆಗಳಲ್ಲಿ ಮೊಬೈಲ್‌ ಇಂಟರ್ನೆಟ್‌ ಸೇವೆಯನ್ನು ಸ್ಥಗಿತಗೊಳಿಸಲಾಗಿದ್ದು, ಸೆಪ್ಟೆಂಬರ್ 7ರ ಮಧ್ಯರಾತ್ರಿ (11.59 pm) ಹಿಂಪಡೆಯಲಿದೆ ಕಾನೂನು ಸುವ್ಯವಸ್ಥೆಯನ್ನು ಕಾಪಾಡಲು ಈ ಕ್ರಮಕೈಗೊಳ್ಳಲಾಗಿದೆ ಎಂದು ಜಿಲ್ಲಾಡಳಿತ ತಿಳಿಸಿದೆ.

ಇದನ್ನೂ ಓದಿ: ಹರಿಯಾಣ: ಹಲ್ಲೆಯಲ್ಲಿ ಸಾವನ್ನಪ್ಪಿದ ರೈತರ ಕುಟುಂಬಕ್ಕೆ 25 ಲಕ್ಷ ರೂ. ಪರಿಹಾರ ನೀಡಲು ಒತ್ತಾಯ

“ರಾಜ್ಯ ಸರ್ಕಾರವು ಕಿಸಾನ್ ಮಹಾಪಂಚಾಯತ್‌ಗಾಗಿ ಎಲ್ಲಾ ವ್ಯವಸ್ಥೆಗಳನ್ನು ಮಾಡಿದೆ. ಕಾನೂನನ್ನು ಕೈಗೆ ತೆಗೆದುಕೊಳ್ಳಲು ಯಾರಿಗೂ ಅವಕಾಶವಿಲ್ಲ. ಶಾಂತಿಯುತವಾಗಿ ತಮ್ಮ ಸಾರ್ವಜನಿಕ ಸಭೆಯನ್ನು ನಡೆಸುವಂತೆ ನಾವು ನಮ್ಮ ರೈತರಿಗೆ ಮನವಿ ಮಾಡುತ್ತೇವೆ” ಎಂದು ಹರಿಯಾಣ ಗೃಹ ಸಚಿವ ಅನಿಲ್ ವಿಜ್ ಹೇಳಿದ್ದಾರೆ.

144 ಸೆಕ್ಷನ್ ಜಾರಿ ಮತ್ತು ಮೊಬೈಲ್‌ ಇಂಟರ್ನೆಟ್‌ ಸೇವೆಯನ್ನು ಸ್ಥಗಿತಗೊಳಿಸಿರುವುದಕ್ಕೆ ಸಂಯುಕ್ತ ಕಿಸಾನ್ ಮೋರ್ಚಾ ಆಕ್ರೋಶ ವ್ಯಕ್ತಪಡಿಸಿದೆ. ಇದು ನಾಚಿಕೆಗೇಡಿನ ಸಂಗತಿ ಎಂದು ಮುಖ್ಯಮಂತ್ರಿ ಮನೋಹರ್ ಲಾಲ್ ಸಿಂಗ್ ಅವರನ್ನು ಟೀಕಿಸಿದೆ.

ಇದನ್ನೂ ಓದಿ: ಐತಿಹಾಸಿಕ ಕಿಸಾನ್ ಮಹಾಪಂಚಾಯತ್: ಬಿಜೆಪಿ ಸರ್ಕಾರಕ್ಕೆ ಸವಾಲು ಹಾಕಿದ ರೈತರು

ಆಗಸ್ಟ್ 28 ರ ಶನಿವಾರದಂದು ಹರಿಯಾಣದ ಕರ್ನಾಲ್ ಬಳಿ ಪ್ರತಿಭಟನೆ ನಡೆಸುತ್ತಿದ್ದ ರೈತರ ಮೇಲೆ ಲಾಠಿಚಾರ್ಜ್ ನಡೆಸಲಾಗಿತ್ತು. ರೈತರ ತಲೆ ಬುರುಡೆ ಹೊಡೆಯಿರಿ ಎಂದು ಸಬ್ ಡಿವಿಷನಲ್ ಮ್ಯಾಜಿಸ್ಟ್ರೇಟ್ (ಎಸ್‌ಡಿಎಂ) ಆಗಿರುವ ಆಯುಷ್‌ ಸಿನ್ಹಾ ಆದೇಶ ನೀಡಿದ್ದರು. ಇವರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಬೇಕೆಂದು ರೈತರು ಆಗ್ರಹಿಸಿ ಪ್ರತಿಭಟನೆ ನಡೆಸುತ್ತಿದ್ದಾರೆ.

ಹವಾಮಾನ ವೈಪರೀತ್ಯ ಮತ್ತು ಪೊಲೀಸರ ಭಾರೀ ನಿಯೋಜನೆಯ ನಡುವೆ, ರೈತರು ಕರ್ನಾಲ್‌ನ ಧಾನ್ಯ ಮಾರುಕಟ್ಟೆಯನ್ನು ತಲುಪಲು ಆರಂಭಿಸಿದ್ದಾರೆ. ಎಸ್‌ಕೆಎಂ ಮುಖಂಡರಾದ ರಾಕೇಶ್ ಟಿಕಾಯತ್, ಯೋಗೇಂದ್ರ ಯಾದವ್, ರಾಜೇವಾಲ್, ಗುರ್ನಾಮ್ ಸಿಂಗ್ ಚಾರುಣಿ ಮತ್ತು ದರ್ಶನ್ ಪಾಲ್ ಕೂಡ ಕಿಸಾನ್ ಮಹಾಪಂಚಾಯತ್‌ಗೆ ಆಗಮಿಸುತ್ತಿದ್ದಾರೆ.

ಪ್ರತಿಭಟನೆ ಮತ್ತು ಕಿಸಾನ್ ಮಹಾಪಂಚಾಯತ್ ಹಿನ್ನೆಲೆ ಹರಿಯಾಣ ಸರ್ಕಾರ ಬಿಗಿ ಪೊಲೀಸ್ ಬಂದೋಬಸ್ ಮಾಡಿದೆ.


ಇದನ್ನೂ ಓದಿ: ‘ರೈತರ ತಲೆ ಒಡೆಯಿರಿ’ ಎಂದು ಆದೇಶಿಸಿದ ಅಧಿಕಾರಿಯ ವಿರುದ್ಧ ಕ್ರಮ: ಹರಿಯಾಣ ಡಿಸಿಎಂ ಹೇಳಿಕೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಸಾವರ್ಕರ್ ದೇವರನ್ನು, ಧಾರ್ಮಿಕ ನಂಬಿಕೆಗಳನ್ನು ಪ್ರಶ್ನಿಸಿದ್ದರು’: ಪುಣೆ ನ್ಯಾಯಾಲಯದಲ್ಲಿ ಮೊಮ್ಮಗ ಸತ್ಯಕಿ ಸಾವರ್ಕರ್ ಒಪ್ಪಿಗೆ

ಪುಣೆ: ಕಾಂಗ್ರೆಸ್ ನಾಯಕ ಹಾಗೂ ಸಂಸತ್ತಿನ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯ ವಿಚಾರಣೆಯು ಅತ್ಯಂತ ಕುತೂಹಲಕಾರಿ ಮತ್ತು ರಾಜಕೀಯ-ಸೈದ್ಧಾಂತಿಕ ತಿರುವನ್ನು ಪಡೆದುಕೊಂಡಿದೆ. ವಿನಾಯಕ ದಾಮೋದರ್...

ಮಾಜಿ ಸಚಿವ ಧರ್ಮೇಂದ್ರ ಪ್ರಧಾನ್ ಮಗಳ ಫೋನ್ ಬಿಲ್ ವಿವಾದ: ₹68 ಸಾವಿರ ಬಿಲ್-ಪೇ ಆಗಿದ್ದು ಸರ್ಕಾರಿ ಹಣದಲ್ಲಾ?

ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ಪುತ್ರಿ ನೈಮಿಷಾ ಪ್ರಧಾನ್ ಅವರು ಮತ್ತೊಮ್ಮೆ ವಿವಾದದ ಕೇಂದ್ರಬಿಂದುವಾಗಿದ್ದಾರೆ. ವಾರಗಳ ಹಿಂದೆ ನೀಟ್ ಪರೀಕ್ಷೆಯ ಪತ್ರಿಕೆ ಸೋರಿಕೆ ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ...

ಇರಾನ್ ವಸತಿ ಕಟ್ಟಡದ ಮೇಲೆ ಅಮೆರಿಕಾ ದಾಳಿ: ಎರಡು ವರ್ಷದ ಮಗು ಸೇರಿ ಒಂದೇ ಕುಟುಂಬದ ಮೂವರ ಸಾವು

ಮಧ್ಯಪ್ರಾಚ್ಯದಲ್ಲಿ ಅಮೆರಿಕ ತನ್ನ ಸಾಮ್ರಾಜ್ಯಶಾಹಿ ಆಧಿಪತ್ಯ ಸ್ಥಾಪನೆಗಾಗಿ ನಡೆಸುತ್ತಿರುವ ಯುದ್ಧಕೋರ ನೀತಿ ಮತ್ತೊಮ್ಮೆ ನಿರಪರಾಧಿ ಸಾರ್ವಜನಿಕರ ರಕ್ತ ಹರಿಸಿದೆ. ಇರಾನ್ ಮೇಲಿನ ಅಮೆರಿಕ ಪಡೆಗಳ ಸರಣಿ ಮತ್ತು ಭೀಕರ ಬಾಂಬ್ ದಾಳಿಗಳು ಕೇವಲ...

SIR: ASDDO ಪಟ್ಟಿಯಲ್ಲಿ ಬೆಂಗಳೂರಿಗೆ ಪ್ರಥಮ ಸ್ಥಾನ, ರಾಜ್ಯದಲ್ಲಿ 2 ಕೋಟಿ ಮತದಾರರ ಹೆಸರು ರದ್ದಾಗುವ ಬೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ರಾಜಧಾನಿ ಬೆಂಗಳೂರು ಅತ್ಯಂತ ಪ್ರಮುಖ ಹಾಗೂ ಕಳವಳಕಾರಿ ಕೇಂದ್ರವಾಗಿ ಹೊರಹೊಮ್ಮಿದೆ. ರಾಜ್ಯದಲ್ಲಿರುವ ಒಟ್ಟು 5.54 ಕೋಟಿ ನೋಂದಾಯಿತ ಮತದಾರರ ಪೈಕಿ...

ಉಮರ್ ಖಾಲಿದ್ ಜಾಮೀನು ಅರ್ಜಿ; ಪೊಲೀಸರ ನಿಲುವು ಕೇಳಿದ ದೆಹಲಿ ಹೈಕೋರ್ಟ್

ಫೆಬ್ರವರಿ 2020 ರಲ್ಲಿ ಈಶಾನ್ಯ ದೆಹಲಿಯಲ್ಲಿ ನಡೆದ ಗಲಭೆಯ ಹಿಂದಿನ "ದೊಡ್ಡ ಪಿತೂರಿ"ಗೆ ಸಂಬಂಧಿಸಿದಂತೆ ಭಯೋತ್ಪಾದನಾ ವಿರೋಧಿ ಕಾನೂನು ಯುಎಪಿಎ ಅಡಿಯಲ್ಲಿ ಪ್ರಕರಣದಲ್ಲಿ ಜಾಮೀನು ಕೋರಿ ಉಮರ್ ಖಾಲಿದ್ ಸಲ್ಲಿಸಿದ ಅರ್ಜಿಯ ಕುರಿತು...

ಮುಂಬೈ: ‘ಶಾಲಾ ಜಿಹಾದ್’ ಎಂಬ ಬಿಜೆಪಿ ನಾಯಕನ ಕೋಮುದ್ವೇಷಕ್ಕೆ ಶಾಲೆಗೆ ನುಗ್ಗಿದ ಬುಲ್ಡೋಜರ್: ಬಿಎಂಸಿಗೆ ಚಾಟಿ ಬೀಸಿದ ಬಾಂಬೆ ಹೈಕೋರ್ಟ್

ಬಿಜೆಪಿ ನಾಯಕ ಕಿರೀಟ್ ಸೋಮಯ್ಯ ಅವರ “ಶಾಲಾ ಜಿಹಾದ್” ಎಂಬ ವಿಷಕಾರಿ ಹೇಳಿಕೆಯ ನಂತರ ಮುಂಬೈನ ಗೋವಂಡಿಯಲ್ಲಿ ಬಡ ಮುಸ್ಲಿಂ ಮಕ್ಕಳ ಶಿಕ್ಷಣದ ಆಶಾಕಿರಣವಾಗಿದ್ದ ತೆಹ್ಜೀಬ್ ಇಸ್ಲಾಮಿಕ್ ಇಂಗ್ಲಿಷ್ ಶಾಲೆಯನ್ನು ಬೃಹನ್ಮುಂಬೈ ಮುನ್ಸಿಪಲ್...

ಹಾಕಿ ತಂಡಕ್ಕೆ ಕೇಸರಿ ಜರ್ಸಿ: ‘ನಮ್ಮ ಗುರುತೇ ನೀಲಿ, ಕೇಸರಿ ಬಣ್ಣದ ತರ್ಕವೇನು?’: ಮಾಜಿ ಹಾಕಿ ಪಟು ಆಕ್ರೋಶ: ಬಿಜೆಪಿ ನಡೆಗೆ ವಿಪಕ್ಷಗಳ ಟೀಕೆ

ಭಾರತೀಯ ಕ್ರೀಡಾರಂಗದ ಹೆಮ್ಮೆಯ ಸಾಂಪ್ರದಾಯಿಕ 'ನೀಲಿ' (ಬ್ಲೂ) ಬಣ್ಣವನ್ನು ಕಳಚಿ, ಹಾಕಿ ತಂಡಕ್ಕೆ ಬಲವಂತವಾಗಿ ಕೇಸರಿ ಬಣ್ಣದ ಜೆರ್ಸಿ ತೊಡಿಸಲು ಹೊರಟಿರುವುದು ಇದೀಗ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ಮುಂಬರುವ ಎಫ್‌ಐಎಚ್ (FIH) ವಿಶ್ವಕಪ್‌ಗಾಗಿ...

ತಮಿಳುನಾಡು: ಶಾಲಾ ಮಕ್ಕಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡಲು ಚಿಂತನೆ

ತಮಿಳುನಾಡಿನ ಸರ್ಕಾರಿ ಶಾಲೆಗಳ ಮಧ್ಯಾಹ್ನದ ಬಿಸಿಊಟದ ಯೋಜನೆಯಡಿಯಲ್ಲಿ ವಿದ್ಯಾರ್ಥಿಗಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡುವ ಪ್ರಸ್ತಾವನೆಯನ್ನು ತಮಿಳುನಾಡು ಸರ್ಕಾರ ಪರಿಶೀಲಿಸುತ್ತಿದ್ದು, ಶಾಲಾ ಶಿಕ್ಷಣ ಸಚಿವ ರಾಜ್‌ಮೋಹನ್ ಅವರು ಈ ಕುರಿತು ಮುಖ್ಯಮಂತ್ರಿ ಸಿ....

ಪ್ರಶ್ನೆಪತ್ರಿಕೆ ಸೋರಿಕೆ ವಿರೋಧಿ ಮಸೂದೆಯಲ್ಲಿ ಸುಧಾರಣೆಗಳಿಲ್ಲ, ರಾಜಕೀಯ ಮಾತ್ರ: ಕೇಂದ್ರದ ವಿರುದ್ಧ ಖರ್ಗೆ ವಾಗ್ದಾಳಿ

ಪಬ್ಲಿಕ್ ಪರೀಕ್ಷೆಗಳ (ಅನ್ಯಾಯಯುತ ವಿಧಾನಗಳ ತಡೆಗಟ್ಟುವಿಕೆ) ತಿದ್ದುಪಡಿ ಮಸೂದೆ 2026 ರ ಚರ್ಚೆಯ ಸಂದರ್ಭದಲ್ಲಿ ಮಾತನಾಡಿದ ರಾಜ್ಯಸಭೆ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ಕೇಂದ್ರ ಸರ್ಕಾರದ ಮೇಲೆ ತೀವ್ರ ವಾಗ್ದಾಳಿ ನಡೆಸಿದರು....

ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಕೆ ಆರೋಪ; ಗೃಹ ಸಚಿವ ಅಮಿತ್‌ ಶಾ ಮೌನ ಪ್ರಶ್ನಿಸಿದ ಕಪಿಲ್ ಸಿಬಲ್

ಜುಲೈ 20 ರಂದು ದೆಹಲಿಯಲ್ಲಿ ನಡೆದ ಸಂಶತ್ ಚಲೋ ಪ್ರತಿಭಟನಾ ಮೆರವಣಿಗೆಯಲ್ಲಿ ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಸಲಾಗಿದೆ ಎಂಬ ಆರೋಪದ ಬಗ್ಗೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ಮೌನವನ್ನು...