Homeಚಳವಳಿಹರಿಯಾಣದ ಕರ್ನಾಲ್‌ನಲ್ಲಿ ಇಂದು ರೈತ ಪ್ರತಿಭಟನೆ: ಇಂಟರ್‌ನೆಟ್ ಸ್ಥಗಿತಗೊಳಿಸಿದ ಸರ್ಕಾರ

ಹರಿಯಾಣದ ಕರ್ನಾಲ್‌ನಲ್ಲಿ ಇಂದು ರೈತ ಪ್ರತಿಭಟನೆ: ಇಂಟರ್‌ನೆಟ್ ಸ್ಥಗಿತಗೊಳಿಸಿದ ಸರ್ಕಾರ

- Advertisement -
- Advertisement -

ಹರಿಯಾಣದ ಕರ್ನಾಲ್‌ನಲ್ಲಿ ರೈತರ ಮೇಲೆ ನಡೆದಿದ್ದ ಮಾರಣಾಂತಿಕ ಲಾಠಿಚಾರ್ಜ್ ವಿರೋಧಿಸಿ ಇಂದು (ಮಂಗಳವಾರ) ರೈತರು ಕರ್ನಾಲ್ ಮಿನಿ ಸೆಕ್ರೆಟರಿಯೇಟ್‌ಗೆ ಮುತ್ತಿಗೆ ಹಾಕಿ ಪ್ರತಿಭಟನೆ ನಡೆಸಲಿದ್ದಾರೆ. ಜೊತೆಗೆ   ಕಿಸಾನ್ ಮಹಾಪಂಚಾಯತ್ ಕೂಡ ನಡೆಯಲಿದೆ. ಸಂಯುಕ್ತ ಕಿಸಾನ್ ಮೋರ್ಚಾ ಪ್ರತಿಭಟನೆಗೆ ಬೆಂಬಲ ಸೂಚಿಸಿದೆ.

ಪ್ರತಿಭಟನೆ ಜೊತೆಗೆ ಕರ್ನಾಲ್ ಕಿಸಾನ್ ಮಹಾಪಂಚಾಯತ್ ನಡೆಯಲಿದೆ. ಲಾಠಿಚಾರ್ಜ್ ನಡೆಸಿ ರೈತರ ಮೇಲೆ ಹಲ್ಲೆ ಮಾಡಿದ್ದ ಸರ್ಕಾರ ಈಗ ಕರ್ನಾಲ್‌ನಲ್ಲಿ 144 ಸೆಕ್ಷನ್ ಜಾರಿ ಮಾಡಿದೆ. ಜೆತೆಗೆ ಇಂಟರ್‌ನೆಟ್ ಸ್ಥಗಿತಗೊಳಿಸಿದೆ.

ಈ ಹೋರಾಟವನ್ನು ಹತ್ತಿಕ್ಕಲು ಕರ್ನಾಲ್ ಜಿಲ್ಲಾಡಳಿತ ಮಧ್ಯರಾತ್ರಿ 12.30 ರಿಂದಲೇ ಇಂಟರ್ನೆಟ್‌ ಸೇವೆ ಬಂದ್‌ ಮಾಡಿದೆ. ಕರ್ನಾಲ್‌ ಸೇರಿದಂತೆ 5 ಜಿಲ್ಲೆಗಳಲ್ಲಿ ಮೊಬೈಲ್‌ ಇಂಟರ್ನೆಟ್‌ ಸೇವೆಯನ್ನು ಸ್ಥಗಿತಗೊಳಿಸಲಾಗಿದ್ದು, ಸೆಪ್ಟೆಂಬರ್ 7ರ ಮಧ್ಯರಾತ್ರಿ (11.59 pm) ಹಿಂಪಡೆಯಲಿದೆ ಕಾನೂನು ಸುವ್ಯವಸ್ಥೆಯನ್ನು ಕಾಪಾಡಲು ಈ ಕ್ರಮಕೈಗೊಳ್ಳಲಾಗಿದೆ ಎಂದು ಜಿಲ್ಲಾಡಳಿತ ತಿಳಿಸಿದೆ.

ಇದನ್ನೂ ಓದಿ: ಹರಿಯಾಣ: ಹಲ್ಲೆಯಲ್ಲಿ ಸಾವನ್ನಪ್ಪಿದ ರೈತರ ಕುಟುಂಬಕ್ಕೆ 25 ಲಕ್ಷ ರೂ. ಪರಿಹಾರ ನೀಡಲು ಒತ್ತಾಯ

“ರಾಜ್ಯ ಸರ್ಕಾರವು ಕಿಸಾನ್ ಮಹಾಪಂಚಾಯತ್‌ಗಾಗಿ ಎಲ್ಲಾ ವ್ಯವಸ್ಥೆಗಳನ್ನು ಮಾಡಿದೆ. ಕಾನೂನನ್ನು ಕೈಗೆ ತೆಗೆದುಕೊಳ್ಳಲು ಯಾರಿಗೂ ಅವಕಾಶವಿಲ್ಲ. ಶಾಂತಿಯುತವಾಗಿ ತಮ್ಮ ಸಾರ್ವಜನಿಕ ಸಭೆಯನ್ನು ನಡೆಸುವಂತೆ ನಾವು ನಮ್ಮ ರೈತರಿಗೆ ಮನವಿ ಮಾಡುತ್ತೇವೆ” ಎಂದು ಹರಿಯಾಣ ಗೃಹ ಸಚಿವ ಅನಿಲ್ ವಿಜ್ ಹೇಳಿದ್ದಾರೆ.

144 ಸೆಕ್ಷನ್ ಜಾರಿ ಮತ್ತು ಮೊಬೈಲ್‌ ಇಂಟರ್ನೆಟ್‌ ಸೇವೆಯನ್ನು ಸ್ಥಗಿತಗೊಳಿಸಿರುವುದಕ್ಕೆ ಸಂಯುಕ್ತ ಕಿಸಾನ್ ಮೋರ್ಚಾ ಆಕ್ರೋಶ ವ್ಯಕ್ತಪಡಿಸಿದೆ. ಇದು ನಾಚಿಕೆಗೇಡಿನ ಸಂಗತಿ ಎಂದು ಮುಖ್ಯಮಂತ್ರಿ ಮನೋಹರ್ ಲಾಲ್ ಸಿಂಗ್ ಅವರನ್ನು ಟೀಕಿಸಿದೆ.

ಇದನ್ನೂ ಓದಿ: ಐತಿಹಾಸಿಕ ಕಿಸಾನ್ ಮಹಾಪಂಚಾಯತ್: ಬಿಜೆಪಿ ಸರ್ಕಾರಕ್ಕೆ ಸವಾಲು ಹಾಕಿದ ರೈತರು

ಆಗಸ್ಟ್ 28 ರ ಶನಿವಾರದಂದು ಹರಿಯಾಣದ ಕರ್ನಾಲ್ ಬಳಿ ಪ್ರತಿಭಟನೆ ನಡೆಸುತ್ತಿದ್ದ ರೈತರ ಮೇಲೆ ಲಾಠಿಚಾರ್ಜ್ ನಡೆಸಲಾಗಿತ್ತು. ರೈತರ ತಲೆ ಬುರುಡೆ ಹೊಡೆಯಿರಿ ಎಂದು ಸಬ್ ಡಿವಿಷನಲ್ ಮ್ಯಾಜಿಸ್ಟ್ರೇಟ್ (ಎಸ್‌ಡಿಎಂ) ಆಗಿರುವ ಆಯುಷ್‌ ಸಿನ್ಹಾ ಆದೇಶ ನೀಡಿದ್ದರು. ಇವರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಬೇಕೆಂದು ರೈತರು ಆಗ್ರಹಿಸಿ ಪ್ರತಿಭಟನೆ ನಡೆಸುತ್ತಿದ್ದಾರೆ.

ಹವಾಮಾನ ವೈಪರೀತ್ಯ ಮತ್ತು ಪೊಲೀಸರ ಭಾರೀ ನಿಯೋಜನೆಯ ನಡುವೆ, ರೈತರು ಕರ್ನಾಲ್‌ನ ಧಾನ್ಯ ಮಾರುಕಟ್ಟೆಯನ್ನು ತಲುಪಲು ಆರಂಭಿಸಿದ್ದಾರೆ. ಎಸ್‌ಕೆಎಂ ಮುಖಂಡರಾದ ರಾಕೇಶ್ ಟಿಕಾಯತ್, ಯೋಗೇಂದ್ರ ಯಾದವ್, ರಾಜೇವಾಲ್, ಗುರ್ನಾಮ್ ಸಿಂಗ್ ಚಾರುಣಿ ಮತ್ತು ದರ್ಶನ್ ಪಾಲ್ ಕೂಡ ಕಿಸಾನ್ ಮಹಾಪಂಚಾಯತ್‌ಗೆ ಆಗಮಿಸುತ್ತಿದ್ದಾರೆ.

ಪ್ರತಿಭಟನೆ ಮತ್ತು ಕಿಸಾನ್ ಮಹಾಪಂಚಾಯತ್ ಹಿನ್ನೆಲೆ ಹರಿಯಾಣ ಸರ್ಕಾರ ಬಿಗಿ ಪೊಲೀಸ್ ಬಂದೋಬಸ್ ಮಾಡಿದೆ.


ಇದನ್ನೂ ಓದಿ: ‘ರೈತರ ತಲೆ ಒಡೆಯಿರಿ’ ಎಂದು ಆದೇಶಿಸಿದ ಅಧಿಕಾರಿಯ ವಿರುದ್ಧ ಕ್ರಮ: ಹರಿಯಾಣ ಡಿಸಿಎಂ ಹೇಳಿಕೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಲೆಬನಾನ್‌ನಲ್ಲಿ ಯೇಸುವಿನ ಪ್ರತಿಮೆ ಧ್ವಂಸ ಮಾಡಿದ ಇಸ್ರೇಲಿ ಸೈನಿಕ; ಫೋಟೋ ವೈರಲ್

ಇಸ್ರೇಲಿ ಸೈನಿಕನೊಬ್ಬ ದಕ್ಷಿಣ ಲೆಬನಾನ್‌ನಲ್ಲಿ ಸ್ಲೆಡ್ಜ್ ಹ್ಯಾಮರ್‌ನಿಂದ ಯೇಸುಕ್ರಿಸ್ತನ ಪ್ರತಿಮೆಯನ್ನು ಧ್ವಂಸ ಮಾಡುತ್ತಿರುವುದನ್ನು ತೋರಿಸುವ ವೈರಲ್ ಚಿತ್ರದ ಸತ್ಯಾಸತ್ಯತೆಯನ್ನು ಇಸ್ರೇಲ್ ರಕ್ಷಣಾ ಪಡೆಗಳು (ಐಡಿಎಫ್‌) ದೃಢಪಡಿಸಿದ್ದು, ವ್ಯಾಪಕ ಆಕ್ರೋಶಕ್ಕೆ ಕಾರಣವಾಗಿದೆ. ಎಕ್ಸ್ ನಲ್ಲಿ 6.8...

TCS ನಾಸಿಕ್ ಪ್ರಕರಣ : ಮಾಧ್ಯಮಗಳ ಸುಳ್ಳು ಮತ್ತು ಕಂಪನಿ ಹೇಳಿದ ಸತ್ಯ

ಮಹಾರಾಷ್ಟ್ರದ ನಾಸಿಕ್‌ನಲ್ಲಿರುವ ಟಾಟಾ ಕನ್ಸಲ್ಟೆನ್ಸಿ ಸರ್ವಿಸಸ್ (ಟಿಸಿಎಸ್‌) ಕಂಪನಿಯ ಬಿಪಿಒ ಘಟಕದಲ್ಲಿ ನಡೆದಿದೆ ಎನ್ನಲಾದ ಪ್ರಕರಣವೊಂದು ಪ್ರಸ್ತುತ ಇಡೀ ದೇಶದಾದ್ಯಂತ ಭಾರೀ ಚರ್ಚೆಯ ವಿಷಯವಾಗಿದೆ. ಈ ಪ್ರಕರಣದಲ್ಲಿ ಮುಖ್ಯವಾಗಿ ಲೈಂಗಿಕ ಕಿರುಕುಳ ಮತ್ತು...

‘ಅಮೆರಿಕದೊಂದಿಗೆ ಮಾತುಕತೆ ಇಲ್ಲ..’; ಇಸ್ಲಾಮಾಬಾದ್‌ ಸಭೆಯಲ್ಲಿ ಇರಾನ್ ಭಾಗವಹಿಸುವುದು ಅನುಮಾನ

ಯುನೈಟೆಡ್ ಸ್ಟೇಟ್ಸ್ (ಅಮೆರಿಕ) ಜೊತೆ ಹೊಸ ಸುತ್ತಿನ ಮಾತುಕತೆಗಾಗಿ ಇಸ್ಲಾಮಾಬಾದ್‌ಗೆ ಸಂಧಾನಕಾರರನ್ನು ಕಳುಹಿಸುವ ಯಾವುದೇ ಯೋಜನೆ ಇಲ್ಲ ಎಂದು ಇರಾನ್ ಸೂಚಿಸಿದೆ. ಕದನ ವಿರಾಮ ಮುಕ್ತಾಯಗೊಳ್ಳಲು 48 ಗಂಟೆಗಳ ಮೊದಲು ಯುದ್ಧ ನಿರತ...

ಇರಾನ್, ಇಸ್ರೇಲ್-ಅಮೆರಿಕ ಯುದ್ಧ : ವಿನಾಶದ ನಡುವೆಯೂ ಲಾಭ ಪಡೆದವರು ಯಾರು?

ಅಂತಾರಾಷ್ಟ್ರೀಯ ಹಣಕಾಸು ನಿಧಿ (ಐಎಂಎಫ್‌) 2026ರ ಜಾಗತಿಕ ಬೆಳವಣಿಗೆಯ ಅಂದಾಜನ್ನು ಶೇಕಡ 3.3 ರಿಂದ 3.1ಕ್ಕೆ ಇಳಿಸಿದೆ. ಇರಾನ್ ವಿರುದ್ಧದ ಅಮೆರಿಕ-ಇಸ್ರೇಲ್ ಯುದ್ಧದ ಪರಿಣಾಮ ಮತ್ತು ಹಾರ್ಮುಝ್ ಜಲಸಂಧಿಯನ್ನು ಮುಚ್ಚಿರುವುದು ವಿಶ್ವ ಆರ್ಥಿಕತೆಯ...

ಕ್ಷೇತ್ರ ಮರುವಿಂಗಡಣೆ ವಿರುದ್ಧ ದಕ್ಷಿಣದ ರಾಜ್ಯಗಳ ಪಟ್ಟು: ಭವಿಷ್ಯದ ಮರುಚಿಂತನೆಗೆ ಇದುವೇ ಸೂಕ್ತ ಕಾಲ

ಲೋಕಸಭೆಯಲ್ಲಿ 131 ನೇ ಸಾಂವಿಧಾನಿಕ ತಿದ್ದುಪಡಿ ಮಸೂದೆಯನ್ನು ತಿರಸ್ಕರಿಸಿರುವುದು ಭಾರತದ ಪ್ರಜಾಪ್ರಭುತ್ವ ಪಥದಲ್ಲಿ ಮಹತ್ವದ ಕ್ಷಣವಾಗಿದೆ. ಇದು ಕೇವಲ ಶಾಸಕಾಂಗದ ಹಿನ್ನಡೆಯನ್ನು ಮಾತ್ರವಲ್ಲ, ಒಕ್ಕೂಟ ವ್ಯವಸ್ಥೆಯ ಸೂಕ್ಷ್ಮ ಸಮತೋಲನವನ್ನು ಹಾಳುಮಾಡುವ ಅಪಾಯವನ್ನುಂಟುಮಾಡುವ ಪ್ರಸ್ತಾಪಗಳ...

ಮೋದಿ ಸರ್ಕಾರದ ಯೂಟರ್ನ್ : ಜನಸಂಖ್ಯಾ ಸ್ಫೋಟದ ಕಳವಳದಿಂದ ಹೆಚ್ಚು ಜನಸಂಖ್ಯೆಯ ರಾಜ್ಯಗಳಿಗೆ ಗಿಫ್ಟ್ ಕೊಡುವವರೆಗೆ

ಭಾರತದ ಜನಸಂಖ್ಯೆಯ ಬಗ್ಗೆ ಪ್ರಧಾನಮಂತ್ರಿ ನರೇಂದ್ರ ಮೋದಿ ಮತ್ತು ಅವರ ಸರ್ಕಾರ ನಿಜವಾಗಿಯೂ ಬಹಳ ಕಳವಳ ವ್ಯಕ್ತಪಡಿಸುತ್ತಿದೆ– ಅಥವಾ ಅವರು ನಮಗೆ ಆ ರೀತಿ ನಂಬುವಂತೆ ಮಾಡಿದ್ದಾರೆ. ಏಕೆಂದರೆ... 2019ರ ಸ್ವಾತಂತ್ರ್ಯ ದಿನಾಚರಣೆಯಂದು ಮೋದಿಯವರು,...

ದೇಶವನ್ನುದ್ದೇಶಿಸಿ ಮೋದಿ ಭಾಷಣ : ಚುನಾವಣಾ ನೀತಿ ಸಂಹಿತೆಯ ಉಲ್ಲಂಘನೆ

ಕ್ಷೇತ್ರ ಮರುವಿಂಗಡನೆಗೆ ಉದ್ದೇಶಿಸಿದ್ದ ಸಂವಿಧಾನದ 131ನೇ ತಿದ್ದುಪಡಿ ಮಸೂದೆಗೆ ಲೋಕಸಭೆಯಲ್ಲಿ ಸೋಲಾದ ಬೆನ್ನಲ್ಲೇ ಶನಿವಾರ (ಏ.18) ದೇಶವನ್ನುದ್ದೇಶಿಸಿ ಮಾತನಾಡಿದ ಪ್ರಧಾನಿ ನರೇಂದ್ರ ಮೋದಿ, ಪ್ರತಿಪಕ್ಷಗಳ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ದು, ಸಂಸತ್ತಿನಲ್ಲಿ ವಿರೋಧ...

ಫ್ಯಾಕ್ಟ್‌ಚೆಕ್ : ಅತ್ಯಾಚಾರ ಅಪರಾಧಿ ಪರ ವಕೀಲೆಗೆ ಟಿಎಂಸಿಯಿಂದ ರಾಜ್ಯಸಭೆ ಸೀಟ್; ಬಿಜೆಪಿ ಆರೋಪದ ಸತ್ಯಾಸತ್ಯತೆ ಏನು?

ಪಶ್ಚಿಮ ಬಂಗಾಳ ವಿಧಾನಸಭೆ ಚುನಾವಣೆಗೆ ಪಾಣಿಹತಿ ಕ್ಷೇತ್ರದಿಂದ ಬಿಜೆಪಿ ಅಭ್ಯರ್ಥಿಯಾಗಿರುವ ಆರ್‌ಜಿ ಕರ್‌ ಸಂತ್ರಸ್ತೆಯ ತಾಯಿ ಮತ್ತು ವಕೀಲೆ ಹಾಗೂ ತೃಣಮೂಲ ಕಾಂಗ್ರೆಸ್ (ಟಿಎಂಸಿ) ರಾಜ್ಯಸಭಾ ಸದಸ್ಯೆ ಮೇನಕಾ ಗುರುಸ್ವಾಮಿ ಅವರ ಎಐ-ರಚಿತ...

ತಾರತಮ್ಯ ಮುಕ್ತ ಕ್ಯಾಂಪಸ್ ನಿರ್ಮಾಣದತ್ತ ಮಹತ್ವದ ಹೆಜ್ಜೆ; ‘ರೋಹಿತ್ ವೇಮುಲ ಮಸೂದೆ’ಗೆ ಸಚಿವ ಸಂಪುಟ ಅನುಮೋದನೆ

ಕರ್ನಾಟಕ ಸರ್ಕಾರದ ಸಚಿವ ಸಂಪುಟ ಗುರುವಾರ (ಏ.16) ದಂದು ಕರ್ನಾಟಕ ರೋಹಿತ್ ವೇಮುಲ (ಹೊರಗಿಡುವಿಕೆ ಅಥವಾ ಅನ್ಯಾಯ ತಡೆಗಟ್ಟುವಿಕೆ) (ಶಿಕ್ಷಣ ಮತ್ತು ಘನತೆಯ ಹಕ್ಕು) ಮಸೂದೆ’ಗೆ ಅನುಮೋದನೆ ನೀಡಿದೆ. ಹೈದರಾಬಾದ್‌ನ ಕೆಂದ್ರೀಯ ವಿಶ್ವವಿದ್ಯಾಲಯದಲ್ಲಿ...

ಕ್ಷೇತ್ರ ಮರುವಿಂಗಡನೆ : ಗೃಹ ಸಚಿವ ಅಮಿತ್ ಶಾ ಹೇಳಿದ್ದೆಲ್ಲವು ನಿಜವೇ?..ಇಲ್ಲಿದೆ ವಾಸ್ತವಾಂಶ

ದೇಶದ ಗೃಹ ಸಚಿವರು ಸಂಸತ್ತಿನಲ್ಲಿ ಪ್ರಮುಖ ಕಾನೂನಿನ ಬಗ್ಗೆ ವಿವರಿಸುವಾಗ ವಿಷಯ ಸ್ಪಷ್ಟವಾಗಿರಬೇಕು. ಆದರೆ, ಕ್ಷೇತ್ರ ಮರುವಿಂಗಡನೆ ಕುರಿತು ಗೃಹ ಸಚಿವ ಅಮಿತ್ ಶಾ ಮಾತನಾಡಿರುವುದು ಹಾಗಿರಲಿಲ್ಲ. ದಕ್ಷಿಣ ಭಾರತದ ರಾಜ್ಯಗಳು ತಮ್ಮ...