Homeಚಳವಳಿರೈತ ಹೋರಾಟ: ಕರ್ನಾಲ್ ಲಾಠಿಚಾರ್ಜ್ ಕುರಿತ ತನಿಖೆಗೆ ಸಿದ್ಧ- ಹರಿಯಾಣ ಗೃಹ ಸಚಿವ

ರೈತ ಹೋರಾಟ: ಕರ್ನಾಲ್ ಲಾಠಿಚಾರ್ಜ್ ಕುರಿತ ತನಿಖೆಗೆ ಸಿದ್ಧ- ಹರಿಯಾಣ ಗೃಹ ಸಚಿವ

ಕರ್ನಾಲ್‌ನಲ್ಲಿ ಆ.28 ರಂದು ನಡೆದ ಲಾಠಿಚಾರ್ಜ್ ವಿರುದ್ಧ ರೈತರು ಕಳೆದ 3 ದಿನಗಳಿಂದ ಪ್ರತಿಭಟನೆ ನಡೆಸುತ್ತಿದ್ದಾರೆ

- Advertisement -
- Advertisement -

ಕಳೆದ ತಿಂಗಳು ರೈತರ ಮೇಲೆ ನಡೆದ ಲಾಠಿಚಾರ್ಜ್ ಮತ್ತು ರೈತರ ತಲೆ ಒಡೆಯಲು ಆದೇಶ ನೀಡಿದ್ದ ಐಎಎಸ್ ಅಧಿಕಾರಿಯ ವಿವಾದಾತ್ಮಕ ಹೇಳಿಕೆಗಳ ಬಗ್ಗೆ ಸಂಪೂರ್ಣವಾಗಿ ತನಿಖೆ ನಡೆಸಲು ಸರ್ಕಾರ ಸಿದ್ಧವಾಗಿದೆ ಎಂದು ಹರಿಯಾಣ ಗೃಹ ಸಚಿವ ಅನಿಲ್ ವಿಜ್ ಗುರುವಾರ ಹೇಳಿದ್ದಾರೆ.

ಇದರ ಜೊತೆಗೆ “ಯಾರಾದರೂ ಬೇಡಿಕೆಯಿಟ್ಟ ಮಾತ್ರಕ್ಕೆ ತನಿಖೆ ಇಲ್ಲದೆ ಯಾರನ್ನೂ ಗಲ್ಲಿಗೇರಿಸಲು ಸಾಧ್ಯವಿಲ್ಲ” ಎಂದು ಸ್ಪಷ್ಟಪಡಿಸಿದ್ದಾರೆ.

ಆಗಸ್ಟ್ 28 ರಂದು ನಡೆದ ಲಾಠಿಚಾರ್ಜ್ ವಿರುದ್ಧ ರೈತರು ಕಳೆದ ಮೂರು ದಿನಗಳಿಂದ ಪ್ರತಿಭಟನೆ ನಡೆಸುತ್ತಿದ್ದಾರ. ಪೊಲೀಸರ ಲಾಠಿಚಾರ್ಜ್‌‌ನಲ್ಲಿ ಸುಮಾರು 10 ಮಂದಿ ರೈತರು ಗಾಯಗೊಂಡಿದ್ದರು. ಓರ್ವ ರೈತ ಸಾವನ್ನಪ್ಪಿದ್ದಾರೆ.

ಈ ಘಟನೆಗೆ ಕಾರಣರಾದ ಐಎಎಸ್ ಅಧಿಕಾರಿ ಆಯುಷ್ ಸಿನ್ಹಾ ಅವರನ್ನು ಅಮಾನತುಗೊಳಿಸಬೇಕು ಅವರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಬೇಕು ಎಂಬ ಬೇಡಿಕೆಗಳು ರೈತರ ಇಟ್ಟಿದ್ದಾರೆ. ಐಎಎಸ್ ಅಧಿಕಾರಿ ಆಯುಷ್ ಸಿನ್ಹಾ ಕಳೆದ ತಿಂಗಳು ಪ್ರತಿಭಟನಾ ನಿರತ ರೈತರ ತಲೆ ಒಡೆಯುವಂತೆ ಪೊಲೀಸರಿಗೆ ಆದೇಶ ನೀಡಿದ್ದರು. ಈ ವಿಡಿಯೊ ಸಾಮಾಜಿಕ ಮಾಧ್ಯಮಗಳಲ್ಲಿ ವೈರಲ್ ಆಗಿತ್ತು.

ಇದನ್ನೂ ಓದಿ: ಹರಿಯಾಣ :ಕರ್ನಾಲ್‌ ಶಾಶ್ವತ ಪ್ರತಿಭಟನಾ ಸ್ಥಳವಾಗಿ ಉಳಿಯಬಹುದು- ರೈತರ ಎಚ್ಚರಿಕೆ

ಸದ್ಯ ಐಎಎಸ್ ಅಧಿಕಾರಿ ಸಿನ್ಹಾ ಅವರನ್ನು ವರ್ಗಾವಣೆ ಮಾಡಲಾಗಿದೆ. ಆದರೆ, ವರ್ಗಾವಣೆ ಶಿಕ್ಷೆಯಲ್ಲ ಎಂದು ರೈತ ಸಂಘದ ನಾಯಕರು ಹೇಳಿ, ಪ್ರತಿಭಟನೆ ನಡೆಸುತ್ತಿದ್ದಾರೆ.

“ನಾವು ನಿಷ್ಪಕ್ಷಪಾತ ತನಿಖೆಗೆ ಸಿದ್ಧರಿದ್ದೇವೆ, ಆದರೆ ಇದು ಕೇವಲ ಕರ್ನಾಲ್ ಮಾಜಿ SDM ಆಯುಷ್ ಸಿನ್ಹಾಗೆ ಮಾತ್ರ ಸಂಬಂಧಿಸಿಲ್ಲ, ಆದರೆ ಇಡೀ ಕರ್ನಾಲ್ ಘಟನೆಗೆ ಸಂಬಂಧಿಸಿರುತ್ತದೆ. ತನಿಖೆಯಲ್ಲಿ ರೈತರು ಅಥವಾ ರೈತ ನಾಯಕರು ತಪ್ಪಿತಸ್ಥರೆಂದು ಕಂಡುಬಂದಲ್ಲಿ, ಏನು ಕ್ರಮ ತೆಗೆದುಕೊಳ್ಳಬೇಕು ಎಂಬುದನ್ನು ಪರಿಗಣಿಸಬೇಕು” ಎಂದು ಗೃಹ ಸಚಿವ ಅನಿಲ್ ವಿಜ್ ಸುದ್ದಿಗಾರರಿಗೆ ತಿಳಿಸಿದ್ದಾರೆ.

“ಯಾರೋ ಹೇಳುತ್ತಾರೆ ಎಂದು ನಾವು ಯಾರನ್ನೂ ನೇಣಿಗೇರಿಸಲು ಸಾಧ್ಯವಿಲ್ಲ. ದೇಶದ ಕಾನೂನು ರೈತರಿಗೊಂದು ಬೇರೆಯವರಿಗೊಂದು ಇಲ್ಲ. ಅಪರಾಧದ ಮಾಡಿದವರಿಗೆ ಪ್ರಕಾರ ಶಿಕ್ಷೆ ನೀಡಲಾಗುತ್ತದೆ. ಅಪರಾಧ ಕಂಡುಹಿಡಿಯಲು ತನಿಖೆ ನಡೆಸಬೇಕು” ಎಂದು ಹೇಳಿದ್ದಾರೆ.

ರೈತ ಪ್ರತಿಭಟನೆ ಹಿನ್ನೆಲೆ, ಹರಿಯಾಣ ಸರ್ಕಾರವು ಕರ್ನಾಲ್ ಜಿಲ್ಲೆಯಲ್ಲಿ ಮೊಬೈಲ್ ಇಂಟರ್ನೆಟ್ ಸೇವೆಗಳ ಸ್ಥಗಿತವನ್ನು ಗುರುವಾರ ಮಧ್ಯರಾತ್ರಿಯವರೆಗೆ ವಿಸ್ತರಿಸಿದೆ. “ಕರ್ನಾಲ್ ಜಿಲ್ಲೆಯಲ್ಲಿ ಮೊಬೈಲ್ ಇಂಟರ್ನೆಟ್ ಸೇವೆಗಳನ್ನು ಸೆಪ್ಟೆಂಬರ್ 9 ರ 23:59 ಗಂಟೆಗಳ ವರೆಗೆ ಸ್ಥಗಿತಗೊಳಿಸಲಾಗುತ್ತದೆ” ಎಂದು ರಾಜ್ಯ ಗೃಹ ಇಲಾಖೆ ಆದೇಶ ಹೊರಡಿಸಿದೆ.

ಪ್ರತಿಭಟನೆ ನಡೆಸುತ್ತಿರುವ ರೈತರು ನಿನ್ನೆಯಷ್ಟೇ ಕರ್ನಾಲ್‌ ಶಾಶ್ವತ ಪ್ರತಿಭಟನಾ ಸ್ಥಳವಾಗಿ ಉಳಿಯಬಹುದು ಎಂದು ಎಚ್ಚರಿಕೆ ನೀಡಿದ್ದರು.


ಇದನ್ನೂ ಓದಿ: ಕರ್ನಾಲ್‌: ಮುಂದುವರೆದ ರೈತ ಪ್ರತಿಭಟನೆ, ಸರ್ಕಾರಿ ಕಚೇರಿಗಳ ಹೊರಗೆ ಜಮಾಯಿಸಿರುವ ರೈತರು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಚುನಾವಣಾ ಸಮಯದಲ್ಲಿ ಉಚಿತ ಕೊಡುಗೆಗಳ ಪ್ರವೃತ್ತಿ ಪ್ರಶ್ನಿಸಿದ ಸುಪ್ರೀಂ ಕೋರ್ಟ್

ರಾಜಕೀಯ ಪಕ್ಷಗಳು ಮತ್ತು ರಾಜ್ಯ ಸರ್ಕಾರಗಳು ಚುನಾವಣೆಗೆ ಮುನ್ನ "ಉಚಿತ ಕೊಡುಗೆಗಳ" ಜಾಹೀರಾತು ನೀಡುವ ಅಭ್ಯಾಸ ಹೆಚ್ಚುತ್ತಿರುವ ಬಗ್ಗೆ ಸುಪ್ರೀಂ ಕೋರ್ಟ್ ಗುರುವಾರ ಬಲವಾದ ಮೌಖಿಕ ಅವಲೋಕನಗಳನ್ನು ನೀಡಿದೆ. ವಿದ್ಯುತ್ (ತಿದ್ದುಪಡಿ) ನಿಯಮಗಳು, 2024...

ರಾಹುಲ್ ಗಾಂಧಿಗೆ ಕರ್ಣಿ ಸೇನೆಯಿಂದ ಜೀವ ಬೆದರಿಕೆ: ಬಿಜೆಪಿ-ಆರ್‌ಎಸ್‌ಎಸ್ ಜಾಲವೇ ‘ಗೋಡ್ಸೆ ಕಾರ್ಖಾನೆ’ ಎಂದ ಕಾಂಗ್ರೆಸ್

ನವದೆಹಲಿ: ಲೋಕಸಭಾ ಸ್ಪೀಕರ್ ಓಂ ಬಿರ್ಲಾ ವಿರುದ್ಧ ನಡೆದ ಪ್ರತಿಭಟನೆಗೆ ಸಂಬಂಧಿಸಿದಂತೆ ಲೋಕಸಭೆಯ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಅವರಿಗೆ ಕರ್ಣಿ ಸೇನೆ ಜೀವ ಬೆದರಿಕೆ ಹಾಕಿದ್ದು, ಇದು "ಏಕಾಂಗಿ ಸ್ಫೋಟವಲ್ಲ"...

ಬಿಹಾರ| ವಿಧಾನಸಭೆಯಲ್ಲಿ ‘ತಂಬಾಕು’ ತಿಂದ ಉಪಮುಖ್ಯಮಂತ್ರಿ ಸಾಮ್ರಾಟ್ ಚೌಧರಿ

ಬಿಹಾರ ವಿಧಾನಸಭೆಯ ಬಜೆಟ್ ಅಧಿವೇಶನದ ವಿಡಿಯೋ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆದ ಬಳಿಕ ರಾಜಕೀಯ ವಿವಾದಕ್ಕೆ ಕಾರಣವಾಗಿದೆ. ವಿಡಿಯೋದಲ್ಲಿ, ಉಪಮುಖ್ಯಮಂತ್ರಿ ಹಾಗೂ ಹಿರಿಯ ಬಿಜೆಪಿ ನಾಯಕ ಸಾಮ್ರಾಟ್ ಚೌಧರಿ ಕಲಾಪದ ಸಮಯದಲ್ಲಿ ವಸ್ತುವೊಂದನ್ನು...

‘ಬೆದರಿಕೆ, ಚಿತ್ರಹಿಂಸೆ, ಅತ್ಯಾಚಾರ ‘: ಇಸ್ರೇಲ್‌ ಜೈಲಿನ ದೌರ್ಜನ್ಯ ಬಿಚ್ಚಿಟ್ಟ ಪ್ಯಾಲೆಸ್ತೀನ್ ಪತ್ರಕರ್ತರು

ಇಸ್ರೇಲ್ ಜೈಲುಗಳಲ್ಲಿ ಬಂಧಿತರಾಗಿರುವ ಪ್ಯಾಲೆಸ್ತೀನ್ ಪತ್ರಕರ್ತರು ತೀವ್ರವಾದ ದೌರ್ಜನ್ಯಗಳನ್ನು ಎದುರಿಸುತ್ತಿದ್ದಾರೆ ಎಂದು ಅಂತಾರಾಷ್ಟ್ರೀಯ ಪತ್ರಕರ್ತರ ರಕ್ಷಣಾ ಸಮಿತಿ (ಸಿಪಿಜೆ) ಹೇಳಿದೆ. ಬಂಧನದಿಂದ ಬಿಡುಗಡೆಯಾಗಿರುವ ಪತ್ರಕರ್ತರನ್ನು ಸಂದರ್ಶಿಸಿರುವ ಸಿಪಿಜೆ, ಜೈಲಿನಲ್ಲಿರುವ ಪತ್ರಕರ್ತರು ನಿರಂತರವಾಗಿ ದೈಹಿಕ...

ಪಾಕಿಸ್ತಾನದ ಕರಾಚಿಯಲ್ಲಿ ಶಂಕಿತ ಅನಿಲ ಸೋರಿಕೆ: ಮಕ್ಕಳು ಸೇರಿದಂತೆ 16 ಮಂದಿ ಸಾವು

ಕರಾಚಿ: ಪಾಕಿಸ್ತಾನದ ಕರಾಚಿಯಲ್ಲಿ ಗುರುವಾರ ಬೆಳಿಗ್ಗೆ ವಸತಿ ಕಟ್ಟಡವೊಂದರಲ್ಲಿ ಶಂಕಿತ ಅನಿಲ ಸೋರಿಕೆಯಿಂದಾಗಿ ಸ್ಫೋಟ ಸಂಭವಿಸಿ, ಮಕ್ಕಳು ಸೇರಿದಂತೆ ಕನಿಷ್ಠ 16 ಜನರು ಸಾವನ್ನಪ್ಪಿದ್ದು, 14 ಜನರು ಗಾಯಗೊಂಡಿದ್ದಾರೆ. "ಓಲ್ಡ್ ಸೋಲ್ಜರ್ ಬಜಾರ್...

ಮಹಾರಾಷ್ಟ್ರ| 10 ದಿನಗಳ ಮಗುವಿನೊಂದಿಗೆ 12 ನೇ ತರಗತಿ ಪರೀಕ್ಷೆ ಬರೆದ ಮಹಿಳೆ

ಮಹಾರಾಷ್ಟ್ರದ ನಾಂದೇಡ್ ನಗರದಲ್ಲಿ 12 ನೇ ತರಗತಿಯ ಮಹಾರಾಷ್ಟ್ರ ಬೋರ್ಡ್ ಪರೀಕ್ಷೆಗೆ ಹಾಜರಾದ ಮಹಿಳೆಯೊಬ್ಬರು ತನ್ನ 10 ದಿನಗಳ ಮಗುವನ್ನು ಪರೀಕ್ಷಾ ಕೇಂದ್ರಕ್ಕೆ ಕರೆತಂದಿದ್ದಾರೆ. ಮಹಿಳೆ ಪರೀಕ್ಷೆ ಬರೆಯುವ ಕಾರಣಕ್ಕೆ ಕೇಂದ್ರದ ವಿಶೇಷ...

ಒಡಿಶಾ| ದಲಿತರು ವಾಸಿಸುವ ಪ್ರದೇಶಕ್ಕೆ ಕುಡಿಯುವ ನೀರು-ವಿದ್ಯುತ್ ಸಂಪರ್ಕ ಕಡಿತ

ಒಡಿಶಾದ ಬಲಂಗೀರ್ ಜಿಲ್ಲೆಯಲ್ಲಿ ಜಾತಿ ಆಧಾರಿತ ತಾರತಮ್ಯವಿದೆ ಎಂದು ಸ್ಥಳೀಯ ನಿವಾಸಿಗಳು ಆರೋಪಿಸಿದ್ದಾರೆ. ಆದರೆ, ಗ್ರಾಮದ ಅಧಿಕಾರಿಯೊಬ್ಬರು ಈ ಅಡಚಣೆಗೆ ಸ್ಥಳೀಯ ಕಲಹ ಕಾರಣ ಎಂದು ಆರೋಪಿಸಿದ್ದಾರೆ. ಜಿಲ್ಲೆಯ ತುರೆಕೆಲಾ ಬ್ಲಾಕ್‌ನ ಡುಮೆರ್ಚುವಾನ್ ಗ್ರಾಮದಲ್ಲಿ...

ತಮಿಳುನಾಡು ವಿಧಾನಸಭಾ ಚುನಾವಣೆ: ಡಿಎಂಕೆ ನೇತೃತ್ವದ ಮೈತ್ರಿಕೂಟಕ್ಕೆ ಡಿಎಂಡಿಕೆ ಸೇರ್ಪಡೆ

ಚೆನ್ನೈ: ದಿವಂಗತ ನಟ ವಿಜಯಕಾಂತ್ ಅವರ ದೇಶೀಯ ಮುರ್ಪೋಕ್ಕು ದ್ರಾವಿಡ ಕಳಗಂ (ಡಿಎಂಡಿಕೆ) ಗುರುವಾರ ದ್ರಾವಿಡ ಮುನ್ನೇತ್ರ ಕಳಗಂ ನೇತೃತ್ವದ ಜಾತ್ಯತೀತ ಪ್ರಗತಿಪರ ಒಕ್ಕೂಟ (ಎಸ್‌ಪಿಎ)ವನ್ನು 21ವರ್ಷಗಳ ಅಸ್ತಿತ್ವದ ನಂತರ ಮೊದಲ ಬಾರಿಗೆ...

ಟ್ರಕ್ ಚಾಲಕ ರಸ್ತೆಯಲ್ಲಿ ನಮಾಝ್ ಮಾಡಿದ್ದರಿಂದ ಟ್ರಾಫಿಕ್ ಜಾಮ್ ಎಂದು ಸುಳ್ಳು ಸುದ್ದಿ ಪ್ರಸಾರ : ಝೀ ನ್ಯೂಸ್‌ಗೆ 1 ಲಕ್ಷ ರೂ. ದಂಡ

ಮುಸ್ಲಿಂ ವ್ಯಕ್ತಿಯೊಬ್ಬರು ನಮಾಝ್ ಮಾಡಲು ಹೆದ್ದಾರಿ ಮಧ್ಯೆ ಟ್ರಕ್‌ ನಿಲ್ಲಿಸಿದ್ದರಿಂದ ಟ್ರಾಫಿಕ್ ಜಾಮ್‌ ಉಂಟಾಗಿದೆ ಎಂದು ಸುಳ್ಳು ಸುದ್ದಿ ಹಬ್ಬಿದ ಝೀ ನ್ಯೂಸ್‌ ಚಾನೆಲ್‌ಗೆ ಸುದ್ದಿ ಪ್ರಸಾರಕರು ಮತ್ತು ಡಿಜಿಟಲ್ ಮಾನದಂಡಗಳ ಪ್ರಾಧಿಕಾರ(ಎನ್‌ಬಿಡಿಎಸ್‌ಎ)...

ಗುಜರಾತ್‌| ಜಾತಿ ಆಧಾರಿತ ಜಗಳದಲ್ಲಿ ದಲಿತ ಯುವಕನ ಮೇಲೆ ಚಾಕುವಿನಿಂದ ದಾಳಿ

ಶನಿವಾರ ತಡರಾತ್ರಿ ರಾಣಿಪ್‌ನಲ್ಲಿ ನಡೆದ ಸಣ್ಣ ಭಿನ್ನಾಭಿಪ್ರಾಯವೊಂದು ಹಿಂಸಾಚಾರಕ್ಕೆ ತಿರುಗಿದ್ದು, 25 ವರ್ಷದ ದಲಿತ ಯುವಕ ಸಾಹಿಲ್ ವಘೇಲಾ ಮೇಲೆ ಚಾಕುವಿನಿಂದ ಹಲ್ಲೆ ನಡೆಸಲಾಗಿದೆ. ಯುವಕ ಗಂಭೀರವಾಗಿ ಗಾಯಗೊಂಡಿದ್ದು, ಘಟನೆಯು ಈ ಪ್ರದೇಶದಲ್ಲಿ...