Homeಚಳವಳಿರೈತ ಹೋರಾಟ: ಕರ್ನಾಲ್ ಲಾಠಿಚಾರ್ಜ್ ಕುರಿತ ತನಿಖೆಗೆ ಸಿದ್ಧ- ಹರಿಯಾಣ ಗೃಹ ಸಚಿವ

ರೈತ ಹೋರಾಟ: ಕರ್ನಾಲ್ ಲಾಠಿಚಾರ್ಜ್ ಕುರಿತ ತನಿಖೆಗೆ ಸಿದ್ಧ- ಹರಿಯಾಣ ಗೃಹ ಸಚಿವ

ಕರ್ನಾಲ್‌ನಲ್ಲಿ ಆ.28 ರಂದು ನಡೆದ ಲಾಠಿಚಾರ್ಜ್ ವಿರುದ್ಧ ರೈತರು ಕಳೆದ 3 ದಿನಗಳಿಂದ ಪ್ರತಿಭಟನೆ ನಡೆಸುತ್ತಿದ್ದಾರೆ

- Advertisement -
- Advertisement -

ಕಳೆದ ತಿಂಗಳು ರೈತರ ಮೇಲೆ ನಡೆದ ಲಾಠಿಚಾರ್ಜ್ ಮತ್ತು ರೈತರ ತಲೆ ಒಡೆಯಲು ಆದೇಶ ನೀಡಿದ್ದ ಐಎಎಸ್ ಅಧಿಕಾರಿಯ ವಿವಾದಾತ್ಮಕ ಹೇಳಿಕೆಗಳ ಬಗ್ಗೆ ಸಂಪೂರ್ಣವಾಗಿ ತನಿಖೆ ನಡೆಸಲು ಸರ್ಕಾರ ಸಿದ್ಧವಾಗಿದೆ ಎಂದು ಹರಿಯಾಣ ಗೃಹ ಸಚಿವ ಅನಿಲ್ ವಿಜ್ ಗುರುವಾರ ಹೇಳಿದ್ದಾರೆ.

ಇದರ ಜೊತೆಗೆ “ಯಾರಾದರೂ ಬೇಡಿಕೆಯಿಟ್ಟ ಮಾತ್ರಕ್ಕೆ ತನಿಖೆ ಇಲ್ಲದೆ ಯಾರನ್ನೂ ಗಲ್ಲಿಗೇರಿಸಲು ಸಾಧ್ಯವಿಲ್ಲ” ಎಂದು ಸ್ಪಷ್ಟಪಡಿಸಿದ್ದಾರೆ.

ಆಗಸ್ಟ್ 28 ರಂದು ನಡೆದ ಲಾಠಿಚಾರ್ಜ್ ವಿರುದ್ಧ ರೈತರು ಕಳೆದ ಮೂರು ದಿನಗಳಿಂದ ಪ್ರತಿಭಟನೆ ನಡೆಸುತ್ತಿದ್ದಾರ. ಪೊಲೀಸರ ಲಾಠಿಚಾರ್ಜ್‌‌ನಲ್ಲಿ ಸುಮಾರು 10 ಮಂದಿ ರೈತರು ಗಾಯಗೊಂಡಿದ್ದರು. ಓರ್ವ ರೈತ ಸಾವನ್ನಪ್ಪಿದ್ದಾರೆ.

ಈ ಘಟನೆಗೆ ಕಾರಣರಾದ ಐಎಎಸ್ ಅಧಿಕಾರಿ ಆಯುಷ್ ಸಿನ್ಹಾ ಅವರನ್ನು ಅಮಾನತುಗೊಳಿಸಬೇಕು ಅವರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಬೇಕು ಎಂಬ ಬೇಡಿಕೆಗಳು ರೈತರ ಇಟ್ಟಿದ್ದಾರೆ. ಐಎಎಸ್ ಅಧಿಕಾರಿ ಆಯುಷ್ ಸಿನ್ಹಾ ಕಳೆದ ತಿಂಗಳು ಪ್ರತಿಭಟನಾ ನಿರತ ರೈತರ ತಲೆ ಒಡೆಯುವಂತೆ ಪೊಲೀಸರಿಗೆ ಆದೇಶ ನೀಡಿದ್ದರು. ಈ ವಿಡಿಯೊ ಸಾಮಾಜಿಕ ಮಾಧ್ಯಮಗಳಲ್ಲಿ ವೈರಲ್ ಆಗಿತ್ತು.

ಇದನ್ನೂ ಓದಿ: ಹರಿಯಾಣ :ಕರ್ನಾಲ್‌ ಶಾಶ್ವತ ಪ್ರತಿಭಟನಾ ಸ್ಥಳವಾಗಿ ಉಳಿಯಬಹುದು- ರೈತರ ಎಚ್ಚರಿಕೆ

ಸದ್ಯ ಐಎಎಸ್ ಅಧಿಕಾರಿ ಸಿನ್ಹಾ ಅವರನ್ನು ವರ್ಗಾವಣೆ ಮಾಡಲಾಗಿದೆ. ಆದರೆ, ವರ್ಗಾವಣೆ ಶಿಕ್ಷೆಯಲ್ಲ ಎಂದು ರೈತ ಸಂಘದ ನಾಯಕರು ಹೇಳಿ, ಪ್ರತಿಭಟನೆ ನಡೆಸುತ್ತಿದ್ದಾರೆ.

“ನಾವು ನಿಷ್ಪಕ್ಷಪಾತ ತನಿಖೆಗೆ ಸಿದ್ಧರಿದ್ದೇವೆ, ಆದರೆ ಇದು ಕೇವಲ ಕರ್ನಾಲ್ ಮಾಜಿ SDM ಆಯುಷ್ ಸಿನ್ಹಾಗೆ ಮಾತ್ರ ಸಂಬಂಧಿಸಿಲ್ಲ, ಆದರೆ ಇಡೀ ಕರ್ನಾಲ್ ಘಟನೆಗೆ ಸಂಬಂಧಿಸಿರುತ್ತದೆ. ತನಿಖೆಯಲ್ಲಿ ರೈತರು ಅಥವಾ ರೈತ ನಾಯಕರು ತಪ್ಪಿತಸ್ಥರೆಂದು ಕಂಡುಬಂದಲ್ಲಿ, ಏನು ಕ್ರಮ ತೆಗೆದುಕೊಳ್ಳಬೇಕು ಎಂಬುದನ್ನು ಪರಿಗಣಿಸಬೇಕು” ಎಂದು ಗೃಹ ಸಚಿವ ಅನಿಲ್ ವಿಜ್ ಸುದ್ದಿಗಾರರಿಗೆ ತಿಳಿಸಿದ್ದಾರೆ.

“ಯಾರೋ ಹೇಳುತ್ತಾರೆ ಎಂದು ನಾವು ಯಾರನ್ನೂ ನೇಣಿಗೇರಿಸಲು ಸಾಧ್ಯವಿಲ್ಲ. ದೇಶದ ಕಾನೂನು ರೈತರಿಗೊಂದು ಬೇರೆಯವರಿಗೊಂದು ಇಲ್ಲ. ಅಪರಾಧದ ಮಾಡಿದವರಿಗೆ ಪ್ರಕಾರ ಶಿಕ್ಷೆ ನೀಡಲಾಗುತ್ತದೆ. ಅಪರಾಧ ಕಂಡುಹಿಡಿಯಲು ತನಿಖೆ ನಡೆಸಬೇಕು” ಎಂದು ಹೇಳಿದ್ದಾರೆ.

ರೈತ ಪ್ರತಿಭಟನೆ ಹಿನ್ನೆಲೆ, ಹರಿಯಾಣ ಸರ್ಕಾರವು ಕರ್ನಾಲ್ ಜಿಲ್ಲೆಯಲ್ಲಿ ಮೊಬೈಲ್ ಇಂಟರ್ನೆಟ್ ಸೇವೆಗಳ ಸ್ಥಗಿತವನ್ನು ಗುರುವಾರ ಮಧ್ಯರಾತ್ರಿಯವರೆಗೆ ವಿಸ್ತರಿಸಿದೆ. “ಕರ್ನಾಲ್ ಜಿಲ್ಲೆಯಲ್ಲಿ ಮೊಬೈಲ್ ಇಂಟರ್ನೆಟ್ ಸೇವೆಗಳನ್ನು ಸೆಪ್ಟೆಂಬರ್ 9 ರ 23:59 ಗಂಟೆಗಳ ವರೆಗೆ ಸ್ಥಗಿತಗೊಳಿಸಲಾಗುತ್ತದೆ” ಎಂದು ರಾಜ್ಯ ಗೃಹ ಇಲಾಖೆ ಆದೇಶ ಹೊರಡಿಸಿದೆ.

ಪ್ರತಿಭಟನೆ ನಡೆಸುತ್ತಿರುವ ರೈತರು ನಿನ್ನೆಯಷ್ಟೇ ಕರ್ನಾಲ್‌ ಶಾಶ್ವತ ಪ್ರತಿಭಟನಾ ಸ್ಥಳವಾಗಿ ಉಳಿಯಬಹುದು ಎಂದು ಎಚ್ಚರಿಕೆ ನೀಡಿದ್ದರು.


ಇದನ್ನೂ ಓದಿ: ಕರ್ನಾಲ್‌: ಮುಂದುವರೆದ ರೈತ ಪ್ರತಿಭಟನೆ, ಸರ್ಕಾರಿ ಕಚೇರಿಗಳ ಹೊರಗೆ ಜಮಾಯಿಸಿರುವ ರೈತರು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಮತ್ತೆ ಒಂದಾದ ಎನ್‌ಸಿಪಿ ಬಣಗಳು : ಸುಪ್ರಿಯಾ ಸುಳೆ ಜೊತೆ ವೇದಿಕೆ ಹಂಚಿಕೊಂಡ ಅಜಿತ್ ಪವಾರ್, ಜಂಟಿ ಪ್ರಣಾಳಿಕೆ ಬಿಡುಗಡೆ

ಮಹಾರಾಷ್ಟ್ರದ ಉಪಮುಖ್ಯಮಂತ್ರಿ ಅಜಿತ್ ಪವಾರ್ ನೇತೃತ್ವದ ಎನ್‌ಸಿಪಿ ಮತ್ತು ಅವರ ಚಿಕ್ಕಪ್ಪ ಶರದ್ ಪವಾರ್ ನೇತೃತ್ವದ ಎನ್‌ಸಿಪಿ (ಎಸ್‌ಪಿ) ಶನಿವಾರ (ಜ.10) ಪುಣೆ ಮಹಾನಗರ ಪಾಲಿಕೆಗೆ ನಡೆಯಲಿರುವ ಚುನಾವಣೆಗೆ ಜಂಟಿ ಪ್ರಣಾಳಿಕೆಯನ್ನು ಬಿಡುಗಡೆ...

ಮಹಾರಾಷ್ಟ್ರ : ಲೈಂಗಿಕ ದೌರ್ಜನ್ಯ ಪ್ರಕರಣದ ಆರೋಪಿಯನ್ನು ಕೌನ್ಸಿಲರ್ ಮಾಡಿದ ಬಿಜೆಪಿ

ಬದ್ಲಾಪುರ ಲೈಂಗಿಕ ದೌರ್ಜನ್ಯ ಪ್ರಕರಣದ ಸಹ ಆರೋಪಿ ಮತ್ತು ಶಾಲೆಯೊಂದರ ಮಾಜಿ ಕಾರ್ಯದರ್ಶಿ ತುಷಾರ್ ಆಪ್ಟೆ ಎಂಬಾತನನ್ನು ಥಾಣೆ ಜಿಲ್ಲೆಯ ಕುಲ್ಗಾಂವ್-ಬದ್ಲಾಪುರ ಮುನ್ಸಿಪಲ್ ಕೌನ್ಸಿಲ್‌ಗೆ ಬಿಜೆಪಿ ನಾಮನಿರ್ದೇಶನ ಮಾಡಿದೆ. ಮುನ್ಸಿಪಲ್ ಕೌನ್ಸಿಲ್ ಅಧ್ಯಕ್ಷೆ ರುಚಿತಾ...

ಕಳ್ಳನೆಂದು ಸುಳ್ಳಾರೋಪ ಹೊರಿಸಿ ಜೈಲಿಗಟ್ಟಿದ ಪೊಲೀಸರು : ಸಂತ್ರಸ್ತಗೆ 14 ಲಕ್ಷ ರೂ. ಪರಿಹಾರ ನೀಡಲು ಕೋರ್ಟ್ ಆದೇಶ

ಕಳ್ಳನೆಂದು ಸುಳ್ಳಾರೋಪ ಹೊರಿಸಿ ಪೊಲೀಸರು ಜೈಲಿಗಟ್ಟಿದ ವ್ಯಕ್ತಿಗೆ 14 ಲಕ್ಷ ರೂಪಾಯಿ ಪರಿಹಾರ ಒದಗಿಸುವಂತೆ ಕೇರಳ ಸರ್ಕಾರಕ್ಕೆ ಹೈಕೋರ್ಟ್ ಆದೇಶಿಸಿದೆ. ಕಣ್ಣೂರು ಮೂಲದ ವಿ.ಕೆ ತಾಜುದ್ದೀನ್ ಕಾನೂನು ಹೋರಾಟದಲ್ಲಿ ಗೆದ್ದು ಪರಿಹಾರ ಪಡೆದ ವ್ಯಕ್ತಿ....

ಇರಾನ್‌ನಲ್ಲಿ ತೀವ್ರಗೊಂಡ ಆಡಳಿತ ವಿರೋಧಿ ಪ್ರತಿಭಟನೆ : ಟ್ರಂಪ್ ಮಧ್ಯಪ್ರವೇಶ ಕೋರಿದ ಮಾಜಿ ದೊರೆಯ ಮಗ

ಇರಾನ್‌ನಲ್ಲಿ ಭುಗಿಲೆದ್ದಿರುವ ಆಡಳಿತ ವಿರೋಧಿ ಪ್ರತಿಭಟನೆ ತೀವ್ರ ಸ್ವರೂಪ ಪಡೆದುಕೊಂಡಿದೆ. 2025ರ ಡಿಸೆಂಬರ್ 28ರಂದು ಪ್ರಾರಂಭಗೊಂಡ ಪ್ರತಿಭಟನೆಗಳು ಹಿಂಸಾಚಾರ ರೂಪ ಪಡೆದುಕೊಂಡು 13ನೇ ದಿನವೂ ಮುಂದುವರಿದಿದೆ. ಆರ್ಥಿಕ ಬಿಕ್ಕಟ್ಟಿನ ವಿರುದ್ದ (ರಿಯಾಲ್ ಕರೆನ್ಸಿ ಮೌಲ್ಯ...

ಮತದಾರರ ಹೆಸರು ಅಳಿಸಲು ಯತ್ನ : ಬಿಜೆಪಿ ವಿರುದ್ಧ 5 ವಿಪಕ್ಷಗಳಿಂದ ದೂರು ದಾಖಲು

ಅಸ್ಸಾಂನ ಐದು ವಿರೋಧ ಪಕ್ಷಗಳು ಶುಕ್ರವಾರ (ಜ.9) ಪೊಲೀಸ್ ದೂರು ದಾಖಲಿಸಿದ್ದು, ಆಡಳಿತಾರೂಢ ಭಾರತೀಯ ಜನತಾ ಪಾರ್ಟಿ (ಬಿಜೆಪಿ) ರಾಜ್ಯದ ಮತದಾರರ ಪಟ್ಟಿಯಿಂದ ಹೆಚ್ಚಿನ ಸಂಖ್ಯೆಯ ನಿಜವಾದ ಮತದಾರರ ಹೆಸರನ್ನು ಅಳಿಸಲು ಸಂಚು...

ಐ-ಪ್ಯಾಕ್ ಮೇಲೆ ದಾಳಿ ಪ್ರಕರಣ: ಮಮತಾ ಬ್ಯಾನರ್ಜಿ ದೂರಿನ ಬೆನ್ನಲ್ಲೇ ಜಾರಿ ನಿರ್ದೇಶನಾಲಯದ ವಿರುದ್ಧ ಎಫ್‌ಐಆರ್

ಕೋಲ್ಕತ್ತಾ: ರಾಜಕೀಯ ಸಲಹಾ ಸಂಸ್ಥೆ ಐ-ಪಿಎಸಿ (ಐ-ಪ್ಯಾಕ್) ಕಚೇರಿ ಮತ್ತು ಅದರ ಮುಖ್ಯಸ್ಥ ಪ್ರತೀಕ್ ಜೈನ್ ಅವರ ನಿವಾಸದ ಮೇಲೆ ಜಾರಿ ನಿರ್ದೇಶನಾಲಯ ನಡೆಸಿದ ದಾಳಿಗೆ ಸಂಬಂಧಿಸಿದಂತೆ ಟಿಎಂಸಿ ಅಧ್ಯಕ್ಷೆ ಮಮತಾ ಬ್ಯಾನರ್ಜಿ...

‘ಭ್ರಷ್ಟ ಜನತಾ ಪಾರ್ಟಿ’: ಬಿಜೆಪಿ ಡಬಲ್ ಎಂಜಿನ್ ಆಡಳಿತದ ವಿರುದ್ಧ ರಾಹುಲ್ ಗಾಂಧಿ ವಾಗ್ದಾಳಿ

ನವದೆಹಲಿ: ವಿವಿಧ ರಾಜ್ಯಗಳಲ್ಲಿ ಬಿಜೆಪಿಯ ಡಬಲ್ ಎಂಜಿನ್ ಸರ್ಕಾರಗಳ ವಿರುದ್ಧ ಲೋಕಸಭೆ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಾಗ್ದಾಳಿ ನಡೆಸಿದ್ದಾರೆ.  ತಮ್ಮ ಸಾಮಾಜಿಕ ಮಾಧ್ಯಮ ಎಕ್ಸ್‌ನಲ್ಲಿ ಪೋಸ್ಟ್ ಮಾಡಿರುವ ರಾಹುಲ್, ಉತ್ತರಾಖಂಡದಲ್ಲಿ ಅಂಕಿತ...

ಇಂದೋರ್‌ನಲ್ಲಿ ಕಲುಷಿತ ನೀರಿಗೆ 8 ಮಂದಿ ಬಲಿ: ಆರ್‌ಎಸ್‌ಎಸ್ ಕಚೇರಿಯಲ್ಲಿ ಜಿಲ್ಲಾಧಿಕಾರಿ ಮತ್ತು ಮೇಯರ್: ಭುಗಿಲೆದ್ದ ವಿವಾದ

ಇಂದೋರ್: ಆರ್‌ಎಸ್‌ಎಸ್ ಕಚೇರಿಯಲ್ಲಿ ಬುಧವಾರ ತಡರಾತ್ರಿ ನಡೆದ ಸಭೆಯಲ್ಲಿ ಜಿಲ್ಲಾಧಿಕಾರಿ ಮತ್ತು ಮೇಯರ್ ಭಾಗವಹಿಸಿದ್ದು ಕಂಡುಬಂದ ನಂತರ ಗುರುವಾರ ಇಂದೋರ್‌ನಲ್ಲಿ ರಾಜಕೀಯ ವಿವಾದ ಭುಗಿಲೆದ್ದಿದೆ.  ಕನಿಷ್ಠ ಎಂಟು ಮಂದಿ ಜೀವಗಳನ್ನು ಬಲಿ ಪಡೆದಿರುವ ಕಲುಷಿತ...

ಐ-ಪ್ಯಾಕ್ ಮೇಲೆ ಇಡಿ ದಾಳಿ: ಕೋಲ್ಕತ್ತಾದಲ್ಲಿ ಮಮತಾ ಪ್ರತಿಭಟನೆ: ಅಮಿತ್ ಶಾ ಕಚೇರಿಯ ಹೊರಗೆ ಪ್ರತಿಭಟಿಸುತ್ತಿದ್ದ ಟಿಎಂಸಿ ಶಾಸಕರ ಬಂಧನ

ಗುರುವಾರ (ಜ.8) ಬೆಳಿಗ್ಗೆ ಕೋಲ್ಕತ್ತಾದ ಸಾಲ್ಟ್ ಲೇಕ್‌ನಲ್ಲಿರುವ ರಾಜಕೀಯ ಸಲಹಾ ಸಂಸ್ಥೆ ಐ-ಪಿಎಸಿ (ಐ-ಪ್ಯಾಕ್) ಕಚೇರಿ ಮತ್ತು ಅದರ ಮುಖ್ಯಸ್ಥ ಪ್ರತೀಕ್ ಜೈನ್ ಅವರ ಮನೆ ಮೇಲೆ ಜಾರಿ ನಿರ್ದೇಶನಾಲಯ (ಇಡಿ) ನಡೆಸಿದ...

ಮಹಾರಾಷ್ಟ್ರ ಜಲ್ನಾ ಮಹಾನಗರ ಪಾಲಿಕೆ ಚುನಾವಣೆಯಲ್ಲಿ ಪತ್ರಕರ್ತೆ ಗೌರಿ ಲಂಕೇಶ್ ಹತ್ಯೆ ಪ್ರಕರಣದ ಪ್ರಮುಖ ಆರೋಪಿ ಸ್ಪರ್ಧೆ!

ಪತ್ರಕರ್ತೆ ಗೌರಿ ಲಂಕೇಶ್ ಹತ್ಯೆಯ ಆರೋಪಿ ಶ್ರೀಕಾಂತ್ ಪಂಗಾರ್ಕರ್ ಮುಂಬರುವ ಜಲ್ನಾ ಮುನ್ಸಿಪಲ್ ಕಾರ್ಪೊರೇಷನ್ ಚುನಾವಣೆಯಲ್ಲಿ ಸ್ವತಂತ್ರ ಅಭ್ಯರ್ಥಿಯಾಗಿ ಸ್ಪರ್ಧಿಸುತ್ತಿದ್ದಾರೆ ಎಂಬ ಸುದ್ದಿ  ಹಲವು ರಾಷ್ಟ್ರೀಯ ಮಾಧ್ಯಮಗಳಲ್ಲಿ ವರದಿಯಾಗಿದೆ.  ಗೌರಿ ಲಂಕೇಶ್ ಹತ್ಯೆ ಸೇರಿದಂತೆ...