Homeಚಳವಳಿರೈತ ಹೋರಾಟ: ಕರ್ನಾಲ್ ಲಾಠಿಚಾರ್ಜ್ ಕುರಿತ ತನಿಖೆಗೆ ಸಿದ್ಧ- ಹರಿಯಾಣ ಗೃಹ ಸಚಿವ

ರೈತ ಹೋರಾಟ: ಕರ್ನಾಲ್ ಲಾಠಿಚಾರ್ಜ್ ಕುರಿತ ತನಿಖೆಗೆ ಸಿದ್ಧ- ಹರಿಯಾಣ ಗೃಹ ಸಚಿವ

ಕರ್ನಾಲ್‌ನಲ್ಲಿ ಆ.28 ರಂದು ನಡೆದ ಲಾಠಿಚಾರ್ಜ್ ವಿರುದ್ಧ ರೈತರು ಕಳೆದ 3 ದಿನಗಳಿಂದ ಪ್ರತಿಭಟನೆ ನಡೆಸುತ್ತಿದ್ದಾರೆ

- Advertisement -
- Advertisement -

ಕಳೆದ ತಿಂಗಳು ರೈತರ ಮೇಲೆ ನಡೆದ ಲಾಠಿಚಾರ್ಜ್ ಮತ್ತು ರೈತರ ತಲೆ ಒಡೆಯಲು ಆದೇಶ ನೀಡಿದ್ದ ಐಎಎಸ್ ಅಧಿಕಾರಿಯ ವಿವಾದಾತ್ಮಕ ಹೇಳಿಕೆಗಳ ಬಗ್ಗೆ ಸಂಪೂರ್ಣವಾಗಿ ತನಿಖೆ ನಡೆಸಲು ಸರ್ಕಾರ ಸಿದ್ಧವಾಗಿದೆ ಎಂದು ಹರಿಯಾಣ ಗೃಹ ಸಚಿವ ಅನಿಲ್ ವಿಜ್ ಗುರುವಾರ ಹೇಳಿದ್ದಾರೆ.

ಇದರ ಜೊತೆಗೆ “ಯಾರಾದರೂ ಬೇಡಿಕೆಯಿಟ್ಟ ಮಾತ್ರಕ್ಕೆ ತನಿಖೆ ಇಲ್ಲದೆ ಯಾರನ್ನೂ ಗಲ್ಲಿಗೇರಿಸಲು ಸಾಧ್ಯವಿಲ್ಲ” ಎಂದು ಸ್ಪಷ್ಟಪಡಿಸಿದ್ದಾರೆ.

ಆಗಸ್ಟ್ 28 ರಂದು ನಡೆದ ಲಾಠಿಚಾರ್ಜ್ ವಿರುದ್ಧ ರೈತರು ಕಳೆದ ಮೂರು ದಿನಗಳಿಂದ ಪ್ರತಿಭಟನೆ ನಡೆಸುತ್ತಿದ್ದಾರ. ಪೊಲೀಸರ ಲಾಠಿಚಾರ್ಜ್‌‌ನಲ್ಲಿ ಸುಮಾರು 10 ಮಂದಿ ರೈತರು ಗಾಯಗೊಂಡಿದ್ದರು. ಓರ್ವ ರೈತ ಸಾವನ್ನಪ್ಪಿದ್ದಾರೆ.

ಈ ಘಟನೆಗೆ ಕಾರಣರಾದ ಐಎಎಸ್ ಅಧಿಕಾರಿ ಆಯುಷ್ ಸಿನ್ಹಾ ಅವರನ್ನು ಅಮಾನತುಗೊಳಿಸಬೇಕು ಅವರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಬೇಕು ಎಂಬ ಬೇಡಿಕೆಗಳು ರೈತರ ಇಟ್ಟಿದ್ದಾರೆ. ಐಎಎಸ್ ಅಧಿಕಾರಿ ಆಯುಷ್ ಸಿನ್ಹಾ ಕಳೆದ ತಿಂಗಳು ಪ್ರತಿಭಟನಾ ನಿರತ ರೈತರ ತಲೆ ಒಡೆಯುವಂತೆ ಪೊಲೀಸರಿಗೆ ಆದೇಶ ನೀಡಿದ್ದರು. ಈ ವಿಡಿಯೊ ಸಾಮಾಜಿಕ ಮಾಧ್ಯಮಗಳಲ್ಲಿ ವೈರಲ್ ಆಗಿತ್ತು.

ಇದನ್ನೂ ಓದಿ: ಹರಿಯಾಣ :ಕರ್ನಾಲ್‌ ಶಾಶ್ವತ ಪ್ರತಿಭಟನಾ ಸ್ಥಳವಾಗಿ ಉಳಿಯಬಹುದು- ರೈತರ ಎಚ್ಚರಿಕೆ

ಸದ್ಯ ಐಎಎಸ್ ಅಧಿಕಾರಿ ಸಿನ್ಹಾ ಅವರನ್ನು ವರ್ಗಾವಣೆ ಮಾಡಲಾಗಿದೆ. ಆದರೆ, ವರ್ಗಾವಣೆ ಶಿಕ್ಷೆಯಲ್ಲ ಎಂದು ರೈತ ಸಂಘದ ನಾಯಕರು ಹೇಳಿ, ಪ್ರತಿಭಟನೆ ನಡೆಸುತ್ತಿದ್ದಾರೆ.

“ನಾವು ನಿಷ್ಪಕ್ಷಪಾತ ತನಿಖೆಗೆ ಸಿದ್ಧರಿದ್ದೇವೆ, ಆದರೆ ಇದು ಕೇವಲ ಕರ್ನಾಲ್ ಮಾಜಿ SDM ಆಯುಷ್ ಸಿನ್ಹಾಗೆ ಮಾತ್ರ ಸಂಬಂಧಿಸಿಲ್ಲ, ಆದರೆ ಇಡೀ ಕರ್ನಾಲ್ ಘಟನೆಗೆ ಸಂಬಂಧಿಸಿರುತ್ತದೆ. ತನಿಖೆಯಲ್ಲಿ ರೈತರು ಅಥವಾ ರೈತ ನಾಯಕರು ತಪ್ಪಿತಸ್ಥರೆಂದು ಕಂಡುಬಂದಲ್ಲಿ, ಏನು ಕ್ರಮ ತೆಗೆದುಕೊಳ್ಳಬೇಕು ಎಂಬುದನ್ನು ಪರಿಗಣಿಸಬೇಕು” ಎಂದು ಗೃಹ ಸಚಿವ ಅನಿಲ್ ವಿಜ್ ಸುದ್ದಿಗಾರರಿಗೆ ತಿಳಿಸಿದ್ದಾರೆ.

“ಯಾರೋ ಹೇಳುತ್ತಾರೆ ಎಂದು ನಾವು ಯಾರನ್ನೂ ನೇಣಿಗೇರಿಸಲು ಸಾಧ್ಯವಿಲ್ಲ. ದೇಶದ ಕಾನೂನು ರೈತರಿಗೊಂದು ಬೇರೆಯವರಿಗೊಂದು ಇಲ್ಲ. ಅಪರಾಧದ ಮಾಡಿದವರಿಗೆ ಪ್ರಕಾರ ಶಿಕ್ಷೆ ನೀಡಲಾಗುತ್ತದೆ. ಅಪರಾಧ ಕಂಡುಹಿಡಿಯಲು ತನಿಖೆ ನಡೆಸಬೇಕು” ಎಂದು ಹೇಳಿದ್ದಾರೆ.

ರೈತ ಪ್ರತಿಭಟನೆ ಹಿನ್ನೆಲೆ, ಹರಿಯಾಣ ಸರ್ಕಾರವು ಕರ್ನಾಲ್ ಜಿಲ್ಲೆಯಲ್ಲಿ ಮೊಬೈಲ್ ಇಂಟರ್ನೆಟ್ ಸೇವೆಗಳ ಸ್ಥಗಿತವನ್ನು ಗುರುವಾರ ಮಧ್ಯರಾತ್ರಿಯವರೆಗೆ ವಿಸ್ತರಿಸಿದೆ. “ಕರ್ನಾಲ್ ಜಿಲ್ಲೆಯಲ್ಲಿ ಮೊಬೈಲ್ ಇಂಟರ್ನೆಟ್ ಸೇವೆಗಳನ್ನು ಸೆಪ್ಟೆಂಬರ್ 9 ರ 23:59 ಗಂಟೆಗಳ ವರೆಗೆ ಸ್ಥಗಿತಗೊಳಿಸಲಾಗುತ್ತದೆ” ಎಂದು ರಾಜ್ಯ ಗೃಹ ಇಲಾಖೆ ಆದೇಶ ಹೊರಡಿಸಿದೆ.

ಪ್ರತಿಭಟನೆ ನಡೆಸುತ್ತಿರುವ ರೈತರು ನಿನ್ನೆಯಷ್ಟೇ ಕರ್ನಾಲ್‌ ಶಾಶ್ವತ ಪ್ರತಿಭಟನಾ ಸ್ಥಳವಾಗಿ ಉಳಿಯಬಹುದು ಎಂದು ಎಚ್ಚರಿಕೆ ನೀಡಿದ್ದರು.


ಇದನ್ನೂ ಓದಿ: ಕರ್ನಾಲ್‌: ಮುಂದುವರೆದ ರೈತ ಪ್ರತಿಭಟನೆ, ಸರ್ಕಾರಿ ಕಚೇರಿಗಳ ಹೊರಗೆ ಜಮಾಯಿಸಿರುವ ರೈತರು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

BJP ವಿರುದ್ಧದ ಆಕ್ರೋಶವೇ Gen-Z ಹೋರಾಟದ ಮೂಲ: ವಿಪಕ್ಷಗಳಿಗೆ ಇದು ದೊಡ್ಡ ಪಾಠ

ಜಂತರ್ ಮಂತರ್‌ನಲ್ಲಿ ನಡೆದ ವಿದ್ಯಾರ್ಥಿಗಳ ಹೋರಾಟವನ್ನು ನಿಮ್ಮ ರಾಜಕೀಯ ದೃಷ್ಟಿಕೋನಕ್ಕೆ ತಕ್ಕಂತೆ ನೀವು ಕ್ರಾಂತಿ ಎಂದಾದರೂ ನೋಡಬಹುದು, ಅಥವಾ ಕ್ಷಣಿಕವಾಗಿ ಎದ್ದ ಬಿರುಗಾಳಿ ಎಂದಾದರೂ ಭಾವಿಸಬಹುದು. ಆದರೆ ಇಲ್ಲಿ ನಿಜವಾಗಿಯೂ ಆಗಿದ್ದೇನು ಮತ್ತು...

ಇನ್‌ಸ್ಟಾಗ್ರಾಮ್‌ನಲ್ಲಿ ಕ್ಷಮಿಸಿದರೆ ಸಾಲದು, ವಿದ್ಯಾರ್ಥಿಗಳ ಮೇಲಿನ ಕೇಸ್ ವಾಪಸ್ ಪಡೆಯಿರಿ: ಪ್ರಧಾನಿಗೆ ದೀಪ್ಕೆ ನೇರ ಪ್ರಶ್ನೆ

ಪ್ರಧಾನಿ ನರೇಂದ್ರ ಮೋದಿ ಅವರು ಇನ್‌ಸ್ಟಾಗ್ರಾಮ್ ವಿಡಿಯೋವೊಂದರಲ್ಲಿ ತಮ್ಮ ವಿರುದ್ಧ ನಿಂದನಾತ್ಮಕ ಪದ ಬಳಸಿದ್ದ ‘ಕಾಕ್ರೋಚ್ ಜನತಾ ಪಾರ್ಟಿ’ (CJP) ಪ್ರತಿಭಟನಾ ನಿರತ ವಿದ್ಯಾರ್ಥಿಗಳನ್ನು ಕ್ಷಮಿಸಿದ್ದೇನೆ ಎಂದು ಹೇಳಿರುವುದಕ್ಕೆ ಸಿಜೆಪಿ ಸಂಸ್ಥಾಪಕ ಅಭಿಜೀತ್...

ಪ್ರತಿಭಟನೆ ಭೀತಿ : ಸಿಜೆಐ ಸೂರ್ಯಕಾಂತ್ ಭಾಗವಹಿಸಬೇಕಿದ್ದ ಘಟಿಕೋತ್ಸವ ದಿಢೀರ್ ಮುಂದೂಡಿದ TISS

ಮುಂಬೈನ ಟಾಟಾ ಇನ್‌ಸ್ಟಿಟ್ಯೂಟ್ ಆಫ್ ಸೋಷಿಯಲ್ ಸೈನ್ಸಸ್ (ಟಿಐಎಸ್‌ಎಸ್‌) ಸಂಸ್ಥೆಯು ಆಗಸ್ಟ್ 2ರಂದು ನಡೆಸಲು ನಿಗದಿಪಡಿಸಿದ್ದ ತನ್ನ 86ನೇ ವಾರ್ಷಿಕ ಘಟಿಕೋತ್ಸವವನ್ನು ದಿಢೀರ್ ಮುಂದೂಡಿದೆ. ಕ್ಯಾಂಪಸ್ ಭದ್ರತೆಯ ಬಗೆಗಿನ ಕಳವಳಗಳು ಮತ್ತು ವಿದ್ಯಾರ್ಥಿಗಳ...

ಪ್ರಧಾನಿಗಳೇ ನಿಮ್ಮ ರೀಲ್‌ಗಳನ್ನು ಅಂಧಭಕ್ತರು ಮೆಚ್ಚಬಹುದು, ಆದರೆ ಇತಿಹಾಸ ನಿಮ್ಮನ್ನು ಕ್ಷಮಿಸುವುದಿಲ್ಲ: ಬಿ.ಕೆ. ಹರಿಪ್ರಸಾದ್

ಪ್ರಧಾನಿ ನರೇಂದ್ರ ಮೋದಿ ಬಿಡುಗಡೆ ಮಾಡಿರುವ ಇತ್ತೀಚಿನ ವಿಡಿಯೋ (ರೀಲ್) ಕುರಿತು ಕಾಂಗ್ರೆಸ್ ಹಿರಿಯ ನಾಯಕ ಮತ್ತು ಕೆಪಿಸಿಸಿ ಅಧ್ಯಕ್ಷರಾದ ಬಿ.ಕೆ. ಹರಿಪ್ರಸಾದ್ ತೀವ್ರ ವಾಗ್ದಾಳಿ ನಡೆಸಿದ್ದಾರೆ. ತಾನು ಮಾಡಿದರೆ ರಾಜತಂತ್ರ, ಬೇರೆಯವರು...

ಪ್ರಧಾನಿ ಮೋದಿ ವಿರುದ್ಧ ನಿಂದನೆ: ನನಗೆ ಕೇವಲ 15 ವರ್ಷ ‘ಅನ್ಯರ ಪ್ರಭಾವಕ್ಕೆ ಒಳಗಾಗಿದ್ದೆ’ ಎಂದು ಕ್ಷಮೆ ಕೇಳಿದ ವಿದ್ಯಾರ್ಥಿನಿ ವಿಡಿಯೋ ವೈರಲ್

ಪ್ರಧಾನಮಂತ್ರಿ ನರೇಂದ್ರ ಮೋದಿ ಅವರ ವಿರುದ್ಧ ಆಕ್ಷೇಪಾರ್ಹ ಹೇಳಿಕೆ ನೀಡಿ ಭಾರಿ ಆಕ್ರೋಶಕ್ಕೆ ಗುರಿಯಾಗಿದ್ದ ಸಿಜೆಪಿ (CJP) ಪ್ರತಿಭಟನಾಕಾರ ಯುವತಿಯೊಬ್ಬಳು ಸೋಶಿಯಲ್ ಮೀಡಿಯಾದಲ್ಲಿ ಕ್ಷಮೆಯಾಚಿಸಿದ್ದಾಳೆ ಎನ್ನಲಾದ ವೀಡಿಯೊವೊಂದು ಹರಿದಾಡುತ್ತಿದೆ. ಸಾಮಾಜಿಕ ಮಾಧ್ಯಮಗಳಲ್ಲಿ ವೈರಲ್...

ಸ್ಪೇನ್‌ಗೆ ನುಗ್ಗಿದ ಸಾವಿರಾರು ಮೊರಾಕನ್ನರು : ಬೃಹತ್ ವಲಸೆಯ ಹಿಂದೆ ಇಸ್ರೇಲ್ ಕುತಂತ್ರ?

ಮೊರಾಕೊದಿಂದ ಸ್ಪೇನ್‌ನ ಸಿಯುಟಾ ನಗರಕ್ಕೆ ಸಾವಿರಾರು ವಲಸಿಗರು ನುಗ್ಗಿದ ಬಿಕ್ಕಟ್ಟಿನ ಹಿಂದೆ ಇಸ್ರೇಲ್ ಕೈವಾಡವಿದೆ ಎಂಬ ಆರೋಪಗಳು ಕೇಳಿ ಬಂದಿದ್ದು, ಸಾಮಾಜಿಕ ಜಾಲತಾಣಗಳಲ್ಲಿ ಇಸ್ರೇಲ್‌ನ ಕುತಂತ್ರ ಬುದ್ದಿಯ ಬಗ್ಗೆ ಭಾರೀ ಚರ್ಚೆಗಳು ನಡೆಯುತ್ತಿವೆ. ಇದೇ...

‘ಸಾವರ್ಕರ್ ದೇವರನ್ನು, ಧಾರ್ಮಿಕ ನಂಬಿಕೆಗಳನ್ನು ಪ್ರಶ್ನಿಸಿದ್ದರು’: ಪುಣೆ ನ್ಯಾಯಾಲಯದಲ್ಲಿ ಮೊಮ್ಮಗ ಸತ್ಯಕಿ ಸಾವರ್ಕರ್ ಒಪ್ಪಿಗೆ

ಪುಣೆ: ಕಾಂಗ್ರೆಸ್ ನಾಯಕ ಹಾಗೂ ಸಂಸತ್ತಿನ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯ ವಿಚಾರಣೆಯು ಅತ್ಯಂತ ಕುತೂಹಲಕಾರಿ ಮತ್ತು ರಾಜಕೀಯ-ಸೈದ್ಧಾಂತಿಕ ತಿರುವನ್ನು ಪಡೆದುಕೊಂಡಿದೆ. ವಿನಾಯಕ ದಾಮೋದರ್...

ಮಾಜಿ ಸಚಿವ ಧರ್ಮೇಂದ್ರ ಪ್ರಧಾನ್ ಮಗಳ ಫೋನ್ ಬಿಲ್ ವಿವಾದ: ₹68 ಸಾವಿರ ಬಿಲ್-ಪೇ ಆಗಿದ್ದು ಸರ್ಕಾರಿ ಹಣದಲ್ಲಾ?

ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ಪುತ್ರಿ ನೈಮಿಷಾ ಪ್ರಧಾನ್ ಅವರು ಮತ್ತೊಮ್ಮೆ ವಿವಾದದ ಕೇಂದ್ರಬಿಂದುವಾಗಿದ್ದಾರೆ. ವಾರಗಳ ಹಿಂದೆ ನೀಟ್ ಪರೀಕ್ಷೆಯ ಪತ್ರಿಕೆ ಸೋರಿಕೆ ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ...

ಇರಾನ್ ವಸತಿ ಕಟ್ಟಡದ ಮೇಲೆ ಅಮೆರಿಕಾ ದಾಳಿ: ಎರಡು ವರ್ಷದ ಮಗು ಸೇರಿ ಒಂದೇ ಕುಟುಂಬದ ಮೂವರ ಸಾವು

ಮಧ್ಯಪ್ರಾಚ್ಯದಲ್ಲಿ ಅಮೆರಿಕ ತನ್ನ ಸಾಮ್ರಾಜ್ಯಶಾಹಿ ಆಧಿಪತ್ಯ ಸ್ಥಾಪನೆಗಾಗಿ ನಡೆಸುತ್ತಿರುವ ಯುದ್ಧಕೋರ ನೀತಿ ಮತ್ತೊಮ್ಮೆ ನಿರಪರಾಧಿ ಸಾರ್ವಜನಿಕರ ರಕ್ತ ಹರಿಸಿದೆ. ಇರಾನ್ ಮೇಲಿನ ಅಮೆರಿಕ ಪಡೆಗಳ ಸರಣಿ ಮತ್ತು ಭೀಕರ ಬಾಂಬ್ ದಾಳಿಗಳು ಕೇವಲ...

SIR: ASDDO ಪಟ್ಟಿಯಲ್ಲಿ ಬೆಂಗಳೂರಿಗೆ ಪ್ರಥಮ ಸ್ಥಾನ, ರಾಜ್ಯದಲ್ಲಿ 2 ಕೋಟಿ ಮತದಾರರ ಹೆಸರು ರದ್ದಾಗುವ ಬೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ರಾಜಧಾನಿ ಬೆಂಗಳೂರು ಅತ್ಯಂತ ಪ್ರಮುಖ ಹಾಗೂ ಕಳವಳಕಾರಿ ಕೇಂದ್ರವಾಗಿ ಹೊರಹೊಮ್ಮಿದೆ. ರಾಜ್ಯದಲ್ಲಿರುವ ಒಟ್ಟು 5.54 ಕೋಟಿ ನೋಂದಾಯಿತ ಮತದಾರರ ಪೈಕಿ...