Homeಚಳವಳಿಕರ್ನಾಲ್‌: ಮುಂದುವರೆದ ರೈತ ಪ್ರತಿಭಟನೆ, ಸರ್ಕಾರಿ ಕಚೇರಿಗಳ ಹೊರಗೆ ಜಮಾಯಿಸಿರುವ ರೈತರು

ಕರ್ನಾಲ್‌: ಮುಂದುವರೆದ ರೈತ ಪ್ರತಿಭಟನೆ, ಸರ್ಕಾರಿ ಕಚೇರಿಗಳ ಹೊರಗೆ ಜಮಾಯಿಸಿರುವ ರೈತರು

- Advertisement -
- Advertisement -

ಹರಿಯಾಣದ ಕರ್ನಾಲ್‌ನಲ್ಲಿ ರೈತರ ಮಂಗಳವಾರ (ಸೆ.7) ಆರಂಭಿಸಿರುವ ಪ್ರತಿಭಟನೆ ಮುಂದುವರೆದಿದೆ. ರೈತರ ತಲೆ ಒಡೆಯಲು ಆದೇಶ ನೀಡಿದ್ದ ಸಬ್ ಡಿವಿಷನಲ್ ಮ್ಯಾಜಿಸ್ಟ್ರೇಟ್ (ಎಸ್‌ಡಿಎಂ) ಆಗಿರುವ ಆಯುಷ್‌ ಸಿನ್ಹಾ ವಿರುದ್ಧ ಕೈಗೊಳ್ಳಬೇಕು ಎಂದು ರೈತರು  ಕರ್ನಾಲ್ ಮಿನಿ ಸೆಕ್ರೆಟರಿಯೆಟ್ ಮುತ್ತಿಗೆ ಹಾಕಿದ್ದಾರೆ.

ಮಂಗಳವಾರ ನಡೆದ ಕಿಸಾನ್ ಮಹಾಪಂಚಾಯತ್ ಬಳಿಕ ಪ್ರತಿಭಟನೆ ಅನಿರ್ಧಿಷ್ಟಾವಧಿಯ ಧರಣಿಯಾಗಿ ಮಾರ್ಪಟ್ಟಿದೆ. ಮಿನಿ ಸೆಕ್ರೆಟರಿಯೇಟ್ ಹೊರಗೆ ಬುಧವಾರ ಬೆಳಿಗ್ಗೆ ಧರಣಿ ಮುಂದುವರೆದಿದ್ದು, ರೈತರು ಅಲ್ಲಿಯೇ ರಾತ್ರಿಯನ್ನು ಕಳೆದಿದ್ದಾರೆ.

ಕಳೆದ ಆಗಸ್ಟ್ 28 ರ ಪ್ರತಿಭಟನೆಯಲ್ಲಿ ರೈತರ ಮೇಲೆ ನಡೆದ ಮಾರಣಾಂತಿಕ ಲಾಠಿ ಚಾರ್ಜ್ ಸಂತ್ರಸ್ತರಿಗೆ ನ್ಯಾಯಕ್ಕಾಗಿ ಆಗ್ರಹಿಸುತ್ತಿದ್ದಾರೆ. ರೈತರು ಮತ್ತು ಹರಿಯಾಣ ಸರ್ಕಾರದ ಜೊತೆ ನಡೆಸಿದ ಮಾತುಕತೆ ವಿಫಲವಾಗಿದ್ದರಿಂದ ಪ್ರತಿಭಟನಾ ನಿರತ ರೈತರು ಸರ್ಕಾರಿ ಕಚೇರಿಗಳ ಹೊರಗೆ ಬಿಡಾರ ಹೂಡಿ ಪ್ರತಿಭಟನೆ ಮುಂದುವರೆಸಿದ್ದಾರೆ.

ಇದನ್ನೂ ಓದಿ: ರೈತ ಹೋರಾಟ: ಸೆ.27ಕ್ಕೆ ಭಾರತ್‌ ಬಂದ್‌ಗೆ ಕರೆ ನೀಡಿದ ರೈತ ಸಂಘಟನೆಗಳು

 

“ಹರಿಯಾಣ ಆಡಳಿತವು ಎಸ್‌ಡಿಎಮ್‌ನ ಹಿಂದಿನ ಕ್ರಮದ ವಿವರಣೆಯನ್ನು ನೀಡಲು ಪ್ರಯತ್ನಿಸಿದೆ. ನಾವು ನಮ್ಮ ಮುಂದಿನ ಕ್ರಮಗಳ ಬಗ್ಗೆ ನಿರ್ಧಾರ ತೆಗೆದುಕೊಳ್ಳಲು ರೈತರೊಂದಿಗೆ ಸಭೆ ನಡೆಸುತ್ತೇವೆ” ಎಂದು ಕರ್ನಾಲ್‌ನಲ್ಲಿ ಬಿಕೆಯು ನಾಯಕ ರಾಕೇಶ್ ಟಿಕಾಯತ್ ಹೇಳಿದ್ದಾರೆ.

ಮಂಗಳವಾರ ಸಂಜೆ ಕರ್ನಾಲ್‌ನ ಮಹಾಪಂಚಾಯತ್ ಸ್ಥಳದಿಂದ ಸರ್ಕಾರಿ ಕಚೇರಿಗಳಿಗೆ ಘೇರಾವ್ ಮಾಡಲು ರೈತ ಸಂಘಗಳು ಮಿನಿ ಸೆಕ್ರೆಟರಿಯೇಟ್ ಕಡೆಗೆ ಹೊರಟಿದ್ದವು. ಕೆಲವು ರೈತರು ಬ್ಯಾರಿಕೇಡ್‌ಗಳನ್ನು ತಳ್ಳಿ ಮುಂದೆ ಹೋದ ಕಾರಣ ಪೊಲೀಸರು ರೈತರ ಮೇಲೆ ಜಲ ಫಿರಂಗಿಗಳನ್ನು ಬಳಸಿದ್ದಾರೆ. ಆದರೂ, ಈ ಸ್ಥಳಕ್ಕೆ ತಲುಪುವ ದಾರಿಯಲ್ಲಿ ಪೊಲೀಸರೊಂದಿಗೆ ಯಾವುದೇ ಗಂಭೀರ ಘರ್ಷಣೆ ನಡೆದಿಲ್ಲ.

ಸದ್ಯ ರೈತರು ಪ್ರತಿಭಟನೆ ನಡೆಸುತ್ತಿರುವ ಮಿನಿ ಸೆಕ್ರೆಟರಿಯೇಟ್ ಹೊರಗೆ ರೈತರಿಗಾಗಿ ಲಾಂಗರ್‌ಗಳನ್ನು ಆಯೋಜಿಸಲಾಗಿದೆ.

ಹರಿಯಾಣ ಭಾರತೀಯ ಕಿಸಾನ್ ಒಕ್ಕೂಟದ ಮುಖ್ಯಸ್ಥರಾಗಿರುವ ಗುರ್ನಾಮ್ ಸಿಂಗ್ ಚೌದುನಿ, ತಮ್ಮ ಬೇಡಿಕೆಗಳನ್ನು ಈಡೇರಿಸುವವರೆಗೂ ಧರಣಿ ಮುಂದುವರಿಯಲಿದೆ ಎಂದು ಹೇಳಿದ್ದಾರೆ.

ಇತ್ತ, ಜಿಲ್ಲೆಯಲ್ಲಿ ಇನ್ನೊಂದು ದಿನ ಮೊಬೈಲ್ ಇಂಟರ್ನೆಟ್ ಸ್ಥಗಿತವನ್ನು ಬುಧವಾರ ಮಧ್ಯರಾತ್ರಿಯವರೆಗೆ (23:59 ಗಂಟೆ) ವಿಸ್ತರಿಸಲಾಗಿದೆ. ಸೆಕ್ಷನ್ 144 ಸಿಆರ್‌ಪಿಸಿ ಅಡಿಯಲ್ಲಿ ಜನರು ಸೇರುವುದನ್ನು ನಿಷೇಧಿಸಲಾಗಿದೆ.


ಇದನ್ನೂ ಓದಿ: ಹರಿಯಾಣದ ಕರ್ನಾಲ್‌ನಲ್ಲಿ ಇಂದು ರೈತ ಪ್ರತಿಭಟನೆ: ಇಂಟರ್‌ನೆಟ್ ಸ್ಥಗಿತಗೊಳಿಸಿದ ಸರ್ಕಾರ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಸಾವರ್ಕರ್ ದೇವರನ್ನು, ಧಾರ್ಮಿಕ ನಂಬಿಕೆಗಳನ್ನು ಪ್ರಶ್ನಿಸಿದ್ದರು’: ಪುಣೆ ನ್ಯಾಯಾಲಯದಲ್ಲಿ ಮೊಮ್ಮಗ ಸತ್ಯಕಿ ಸಾವರ್ಕರ್ ಒಪ್ಪಿಗೆ

ಪುಣೆ: ಕಾಂಗ್ರೆಸ್ ನಾಯಕ ಹಾಗೂ ಸಂಸತ್ತಿನ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯ ವಿಚಾರಣೆಯು ಅತ್ಯಂತ ಕುತೂಹಲಕಾರಿ ಮತ್ತು ರಾಜಕೀಯ-ಸೈದ್ಧಾಂತಿಕ ತಿರುವನ್ನು ಪಡೆದುಕೊಂಡಿದೆ. ವಿನಾಯಕ ದಾಮೋದರ್...

ಮಾಜಿ ಸಚಿವ ಧರ್ಮೇಂದ್ರ ಪ್ರಧಾನ್ ಮಗಳ ಫೋನ್ ಬಿಲ್ ವಿವಾದ: ₹68 ಸಾವಿರ ಬಿಲ್-ಪೇ ಆಗಿದ್ದು ಸರ್ಕಾರಿ ಹಣದಲ್ಲಾ?

ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ಪುತ್ರಿ ನೈಮಿಷಾ ಪ್ರಧಾನ್ ಅವರು ಮತ್ತೊಮ್ಮೆ ವಿವಾದದ ಕೇಂದ್ರಬಿಂದುವಾಗಿದ್ದಾರೆ. ವಾರಗಳ ಹಿಂದೆ ನೀಟ್ ಪರೀಕ್ಷೆಯ ಪತ್ರಿಕೆ ಸೋರಿಕೆ ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ...

ಇರಾನ್ ವಸತಿ ಕಟ್ಟಡದ ಮೇಲೆ ಅಮೆರಿಕಾ ದಾಳಿ: ಎರಡು ವರ್ಷದ ಮಗು ಸೇರಿ ಒಂದೇ ಕುಟುಂಬದ ಮೂವರ ಸಾವು

ಮಧ್ಯಪ್ರಾಚ್ಯದಲ್ಲಿ ಅಮೆರಿಕ ತನ್ನ ಸಾಮ್ರಾಜ್ಯಶಾಹಿ ಆಧಿಪತ್ಯ ಸ್ಥಾಪನೆಗಾಗಿ ನಡೆಸುತ್ತಿರುವ ಯುದ್ಧಕೋರ ನೀತಿ ಮತ್ತೊಮ್ಮೆ ನಿರಪರಾಧಿ ಸಾರ್ವಜನಿಕರ ರಕ್ತ ಹರಿಸಿದೆ. ಇರಾನ್ ಮೇಲಿನ ಅಮೆರಿಕ ಪಡೆಗಳ ಸರಣಿ ಮತ್ತು ಭೀಕರ ಬಾಂಬ್ ದಾಳಿಗಳು ಕೇವಲ...

SIR: ASDDO ಪಟ್ಟಿಯಲ್ಲಿ ಬೆಂಗಳೂರಿಗೆ ಪ್ರಥಮ ಸ್ಥಾನ, ರಾಜ್ಯದಲ್ಲಿ 2 ಕೋಟಿ ಮತದಾರರ ಹೆಸರು ರದ್ದಾಗುವ ಬೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ರಾಜಧಾನಿ ಬೆಂಗಳೂರು ಅತ್ಯಂತ ಪ್ರಮುಖ ಹಾಗೂ ಕಳವಳಕಾರಿ ಕೇಂದ್ರವಾಗಿ ಹೊರಹೊಮ್ಮಿದೆ. ರಾಜ್ಯದಲ್ಲಿರುವ ಒಟ್ಟು 5.54 ಕೋಟಿ ನೋಂದಾಯಿತ ಮತದಾರರ ಪೈಕಿ...

ಉಮರ್ ಖಾಲಿದ್ ಜಾಮೀನು ಅರ್ಜಿ; ಪೊಲೀಸರ ನಿಲುವು ಕೇಳಿದ ದೆಹಲಿ ಹೈಕೋರ್ಟ್

ಫೆಬ್ರವರಿ 2020 ರಲ್ಲಿ ಈಶಾನ್ಯ ದೆಹಲಿಯಲ್ಲಿ ನಡೆದ ಗಲಭೆಯ ಹಿಂದಿನ "ದೊಡ್ಡ ಪಿತೂರಿ"ಗೆ ಸಂಬಂಧಿಸಿದಂತೆ ಭಯೋತ್ಪಾದನಾ ವಿರೋಧಿ ಕಾನೂನು ಯುಎಪಿಎ ಅಡಿಯಲ್ಲಿ ಪ್ರಕರಣದಲ್ಲಿ ಜಾಮೀನು ಕೋರಿ ಉಮರ್ ಖಾಲಿದ್ ಸಲ್ಲಿಸಿದ ಅರ್ಜಿಯ ಕುರಿತು...

ಮುಂಬೈ: ‘ಶಾಲಾ ಜಿಹಾದ್’ ಎಂಬ ಬಿಜೆಪಿ ನಾಯಕನ ಕೋಮುದ್ವೇಷಕ್ಕೆ ಶಾಲೆಗೆ ನುಗ್ಗಿದ ಬುಲ್ಡೋಜರ್: ಬಿಎಂಸಿಗೆ ಚಾಟಿ ಬೀಸಿದ ಬಾಂಬೆ ಹೈಕೋರ್ಟ್

ಬಿಜೆಪಿ ನಾಯಕ ಕಿರೀಟ್ ಸೋಮಯ್ಯ ಅವರ “ಶಾಲಾ ಜಿಹಾದ್” ಎಂಬ ವಿಷಕಾರಿ ಹೇಳಿಕೆಯ ನಂತರ ಮುಂಬೈನ ಗೋವಂಡಿಯಲ್ಲಿ ಬಡ ಮುಸ್ಲಿಂ ಮಕ್ಕಳ ಶಿಕ್ಷಣದ ಆಶಾಕಿರಣವಾಗಿದ್ದ ತೆಹ್ಜೀಬ್ ಇಸ್ಲಾಮಿಕ್ ಇಂಗ್ಲಿಷ್ ಶಾಲೆಯನ್ನು ಬೃಹನ್ಮುಂಬೈ ಮುನ್ಸಿಪಲ್...

ಹಾಕಿ ತಂಡಕ್ಕೆ ಕೇಸರಿ ಜರ್ಸಿ: ‘ನಮ್ಮ ಗುರುತೇ ನೀಲಿ, ಕೇಸರಿ ಬಣ್ಣದ ತರ್ಕವೇನು?’: ಮಾಜಿ ಹಾಕಿ ಪಟು ಆಕ್ರೋಶ: ಬಿಜೆಪಿ ನಡೆಗೆ ವಿಪಕ್ಷಗಳ ಟೀಕೆ

ಭಾರತೀಯ ಕ್ರೀಡಾರಂಗದ ಹೆಮ್ಮೆಯ ಸಾಂಪ್ರದಾಯಿಕ 'ನೀಲಿ' (ಬ್ಲೂ) ಬಣ್ಣವನ್ನು ಕಳಚಿ, ಹಾಕಿ ತಂಡಕ್ಕೆ ಬಲವಂತವಾಗಿ ಕೇಸರಿ ಬಣ್ಣದ ಜೆರ್ಸಿ ತೊಡಿಸಲು ಹೊರಟಿರುವುದು ಇದೀಗ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ಮುಂಬರುವ ಎಫ್‌ಐಎಚ್ (FIH) ವಿಶ್ವಕಪ್‌ಗಾಗಿ...

ತಮಿಳುನಾಡು: ಶಾಲಾ ಮಕ್ಕಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡಲು ಚಿಂತನೆ

ತಮಿಳುನಾಡಿನ ಸರ್ಕಾರಿ ಶಾಲೆಗಳ ಮಧ್ಯಾಹ್ನದ ಬಿಸಿಊಟದ ಯೋಜನೆಯಡಿಯಲ್ಲಿ ವಿದ್ಯಾರ್ಥಿಗಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡುವ ಪ್ರಸ್ತಾವನೆಯನ್ನು ತಮಿಳುನಾಡು ಸರ್ಕಾರ ಪರಿಶೀಲಿಸುತ್ತಿದ್ದು, ಶಾಲಾ ಶಿಕ್ಷಣ ಸಚಿವ ರಾಜ್‌ಮೋಹನ್ ಅವರು ಈ ಕುರಿತು ಮುಖ್ಯಮಂತ್ರಿ ಸಿ....

ಪ್ರಶ್ನೆಪತ್ರಿಕೆ ಸೋರಿಕೆ ವಿರೋಧಿ ಮಸೂದೆಯಲ್ಲಿ ಸುಧಾರಣೆಗಳಿಲ್ಲ, ರಾಜಕೀಯ ಮಾತ್ರ: ಕೇಂದ್ರದ ವಿರುದ್ಧ ಖರ್ಗೆ ವಾಗ್ದಾಳಿ

ಪಬ್ಲಿಕ್ ಪರೀಕ್ಷೆಗಳ (ಅನ್ಯಾಯಯುತ ವಿಧಾನಗಳ ತಡೆಗಟ್ಟುವಿಕೆ) ತಿದ್ದುಪಡಿ ಮಸೂದೆ 2026 ರ ಚರ್ಚೆಯ ಸಂದರ್ಭದಲ್ಲಿ ಮಾತನಾಡಿದ ರಾಜ್ಯಸಭೆ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ಕೇಂದ್ರ ಸರ್ಕಾರದ ಮೇಲೆ ತೀವ್ರ ವಾಗ್ದಾಳಿ ನಡೆಸಿದರು....

ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಕೆ ಆರೋಪ; ಗೃಹ ಸಚಿವ ಅಮಿತ್‌ ಶಾ ಮೌನ ಪ್ರಶ್ನಿಸಿದ ಕಪಿಲ್ ಸಿಬಲ್

ಜುಲೈ 20 ರಂದು ದೆಹಲಿಯಲ್ಲಿ ನಡೆದ ಸಂಶತ್ ಚಲೋ ಪ್ರತಿಭಟನಾ ಮೆರವಣಿಗೆಯಲ್ಲಿ ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಸಲಾಗಿದೆ ಎಂಬ ಆರೋಪದ ಬಗ್ಗೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ಮೌನವನ್ನು...