Homeಕರ್ನಾಟಕಕರ್ನಾಟಕ: ದೇಶಭಕ್ತಿ ಪ್ರದರ್ಶನಕ್ಕೆ 22 ರೂ. ನಿಗದಿ; ಬಾವುಟದಲ್ಲೂ ಬಿಸಿನೆಸ್!

ಕರ್ನಾಟಕ: ದೇಶಭಕ್ತಿ ಪ್ರದರ್ಶನಕ್ಕೆ 22 ರೂ. ನಿಗದಿ; ಬಾವುಟದಲ್ಲೂ ಬಿಸಿನೆಸ್!

“ನಿಜವಾಗಿಯೂ ಇವರಿಗೆ ದೇಶಭಕ್ತಿ ಇದ್ದರೆ ತ್ರಿವರ್ಣಧ್ವಜದ ಜೊತೆಗೆ ಸಂವಿಧಾನದ ಒಂದು ಪ್ರತಿಯನ್ನೂ ಉಚಿತವಾಗಿ ಹಂಚಲಿ” ಎನ್ನುತ್ತಾರೆ ಹಾಸನದ ರೈತ ಮುಖಂಡ ಎಚ್.ಆರ್‌.ನವೀನ್‌ಕುಮಾರ್‌.

- Advertisement -
- Advertisement -

ಸ್ವಾತಂತ್ರ್ಯದ ಅಮೃತ ಮಹೋತ್ಸಕ್ಕೆ ಸಜ್ಜಾಗುತ್ತಿದ್ದೇವೆ. ಮನೆಗಳ ಮೇಲೆ ತ್ರಿವರ್ಣ ಧ್ವಜವನ್ನು ಹಾರಿಸುವಂತೆ, ಸಾಮಾಜಿಕ ಮಾಧ್ಯಮಗಳ ಪ್ರೊಫೈಲ್‌ನಲ್ಲಿ ರಾಷ್ಟ್ರಧ್ವಜದ ಚಿತ್ರವನ್ನು ಹಾಕಿಕೊಳ್ಳುವಂತೆ ಪ್ರಧಾನಿ ನರೇಂದ್ರ ಮೋದಿ ಕರೆ ನೀಡಿದ್ದಾರೆ.

ಪ್ರಧಾನಿಯವರ ಮನವಿಯ ಹಿನ್ನೆಲೆಯಲ್ಲಿ ಹಲವಾರು ಬೆಳವಣಿಗೆಗಳಾಗುತ್ತಿವೆ. ಇದರ ನಡುವೆ ರಾಜ್ಯ ಸರ್ಕಾರ ಶಾಲಾ, ಕಾಲೇಜುಗಳಲ್ಲಿ ಬಾವುಟವನ್ನು ಮಾರಲು ಮುಂದಾಗಿರುವ ಸುದ್ದಿ ಲಭ್ಯವಾಗಿದೆ.

ಹಾಸನ ಜಿಲ್ಲಾಧಿಕಾರಿ ಆರ್‌.ಗಿರೀಶ್‌ ಅವರು ವಿವಿಧ ಇಲಾಖೆಗಳ ಅಧಿಕಾರಿಗಳಿಗೆ ಸೂಚನೆ ನೀಡಿದ ಹಿನ್ನಲೆಯಲ್ಲಿ ಪದವಿ ಪೂರ್ವ ಶಿಕ್ಷಣ ಇಲಾಖೆಯ ಉಪನಿರ್ದೇಶಕರು ಜ್ಞಾಪನ ಪತ್ರವನ್ನು ಹೊರಡಿಸಿದ್ದಾರೆ.

 

ಸ್ವಾತಂತ್ರ್ಯದ ಅಮೃತ ಮಹೋತ್ಸವದ ಅಂಗವಾಗಿ ‘ಹರ್‌ ಘರ್‌ ತಿರಂಗಾ’ ಅಭಿಯಾನವನ್ನು ಹಮ್ಮಿಕೊಂಡಿರುವ ಕುರಿತು ಈ ಜ್ಞಾಪನ ಪತ್ರವಿದೆ. “…ಆಗಸ್ಟ್‌ 13ರಿಂದ 15ರವರೆಗೆ ದೇಶದ ಪ್ರತಿ ಮನೆಮನೆಗಳಲ್ಲೂ ರಾಷ್ಟ್ರಧ್ವಜವನ್ನು ಹಾರಿಸಿ ದೇಶಭಕ್ತಿ, ದೇಶಾಭಿಮಾನ ಬಿಂಬಿಸಲು ಉದ್ದೇಶಿಸಿರುವುದರಿಂದ ಪದವಿ ಪೂರ್ವ ಕಾಲೇಜುಗಳ ವಿದ್ಯಾರ್ಥಿಗಳಿಗೆ ಧ್ವಜವನ್ನು ಖರೀದಿಸಲು ಪದವಿ ಪೂರ್ವ ಕಾಲೇಜಿನ ಪ್ರಥಮ ಮತ್ತು ದ್ವಿತೀಯ ಪಿಯುಸಿ ವಿದ್ಯಾರ್ಥಿಗಳ ಸಂಖ್ಯೆಗೆ ಅನುಗುಣವಾಗಿ ಪ್ರತಿ ವಿದ್ಯಾರ್ಥಿಯಿಂದ ರೂ. 22 ರಂತೆ ಸಂಗ್ರಹಿಸಿ ಬಾವುಟವನ್ನು ಖರೀದಿಸಲು (ಜಿಲ್ಲಾಧಿಕಾರಿ) ಸೂಚಿಸಿರುತ್ತಾರೆ. ಜಿಲ್ಲೆಯ ಪದವಿಪುರ್ವ ಕಾಲೇಜಿನ ಪ್ರಾಂಶುಪಾಲರು ಬಾವುಟಗಳನ್ನು ಮೋಹನ್‌ ಎಂ.ಪಿ. (ಪ್ರಾಂಶುಪಾಲರು, ಸರ್ಕಾರಿ ಪದವಿಪೂರ್ವ ಕಾಲೇಜು, ವಿದ್ಯಾನಗರ, ಆಕಾಶವಾಣಿ ಹತ್ತಿರ, ಹಾಸನ) ಅವರನ್ನು ಸಂಪರ್ಕಿಸಿ ಬಾವುಟಗಳನ್ನು ಪ್ರದರ್ಶಿಸಲು ಸೂಚಿಸಲಾಗಿದೆ..” ಎಂದು ಪತ್ರದಲ್ಲಿ ತಿಳಿಸಲಾಗಿದೆ.

ಭಾನುವಾರ ‘ನಾನುಗೌರಿ.ಕಾಂ’ ಜೊತೆ ಮಾತನಾಡಿದ ಹಾಸನ ಡಿಡಿಪಿಯು ಸಿ.ಎಂ.ಮಹಲಿಂಗಯ್ಯ ಅವರು, “ಜಿಲ್ಲಾಧಿಕಾರಿಗಳ ಸೂಚನೆ ಮೇರೆಗೆ ಬಾವುಟ ಹಂಚಿಕೆ ಮಾಡಲು ಮುಂದಾಗಿದ್ದೇವೆ. ಜಿಲ್ಲಾಧಿಕಾರಿಯವರು ವಿವಿಧ ಇಲಾಖೆಗೆ ಇಂತಿಷ್ಟು ಬಾವುಟಗಳನ್ನು ನೀಡಿದ್ದಾರೆ. ಆಸಕ್ತರು ಮಾತ್ರ ಖರೀದಿಸಬಹುದು. 10,000 ಬಾವುಟಗಳನ್ನು ಮಾರುವಂತೆ ನಮ್ಮ ಇಲಾಖೆಗೆ ಟಾರ್ಗೆಟ್ ನೀಡಲಾಗಿದೆ. ಮಾರಾಟವಾಗದ ಬಾವುಟಗಳನ್ನು ವಾಪಸ್ ಕಳುಹಿಸುತ್ತೇವೆ. ನಮ್ಮ ವ್ಯಾಪ್ತಿಯಲ್ಲಿ 31,000 ವಿದ್ಯಾರ್ಥಿಗಳಿದ್ದಾರೆ. ಖಾದಿ ಬಾವುಟವನ್ನೇ ನೀಡಿದ್ದಾರೆ. ಪಿಯು ವಿದ್ಯಾರ್ಥಿಗಳಿಗಷ್ಟೇ ಅಲ್ಲ, ಪ್ರೌಢಶಾಲಾ ವಿದ್ಯಾರ್ಥಿಗಳಿಗೂ ಬಾವುಟ ಮಾರಲಾಗುತ್ತಿದೆ” ಎಂದು ಮಾಹಿತಿ ನೀಡಿದರು.

ಹಾಸನ ಜಿಲ್ಲಾಧಿಕಾರಿ ಆರ್‌.ಗಿರೀಶ್‌ ‘ನಾನುಗೌರಿ.ಕಾಂ’ಗೆ ಪ್ರತಿಕ್ರಿಯೆ ನೀಡಿ, “ಬಾವುಟವನ್ನು ಹೇಗೆ ಕೊಡಬೇಕು, ಎಲ್ಲಿ ಕೊಡಬೇಕು ಎಂದು ಯೋಜನೆ ರೂಪಿಸುತ್ತಿದ್ದೇವೆ. ಬಹುಶಃ ನಾಳೆ (ಸೋಮವಾರ) ಪತ್ರಿಕಾಗೋಷ್ಠಿ ಕರೆಯುತ್ತೇನೆ. ಜಿಲ್ಲಾ ಪಂಚಾಯಿತಿ ಮೂಲಕ 1.1 ಲಕ್ಷ ಬಾವುಟಗಳನ್ನು ಹಂಚುತ್ತಿದ್ದೇವೆ. ಸ್ಥಳೀಯ ಸಂಸ್ಥೆಗಳಿಂದ 50 ಸಾವಿರ ಬಾವುಟ, ಶಾಲಾ ಮಕ್ಕಳಿಗೆ ಸುಮಾರು 20,000 ಭಾವುಟವನ್ನು ಮಾರಲು ಇಚ್ಛಿಸಿದ್ದೇವೆ. ಬಾವುಟವನ್ನು ಉಚಿತವಾಗಿ ನೀಡುತ್ತಿಲ್ಲ. ಹಣ ನಿಗದಿ ಮಾಡಿದ್ದೇವೆ” ಎಂದು ಸ್ಪಷ್ಟಪಡಿಸಿದರು.

“ಹಾಸನ ಜಿಲ್ಲೆಯಷ್ಟೇ ಅಲ್ಲ. ಇಡೀ ರಾಜ್ಯದಲ್ಲಿ ಈ ಕಾರ್ಯಕ್ರಮ ನಡೆಯಲಿದೆ” ಎಂದ ಅವರು, ಸರ್ಕಾರದ ಮಟ್ಟದಿಂದಲೇ ಸೂಚನೆ ಬಂದಿರುವ ಕುರಿತು ಸುಳಿವು ನೀಡಿದರು.

“ದೇಶಭಕ್ತಿಯ ಹೆಸರಲ್ಲಿ ದುಡ್ಡು ಮಾಡುವ ಬಿಸಿನೆಟ್ ಇಲ್ಲಿ ನಡೆಯುತ್ತಿದೆಯೇ? ವಿದ್ಯಾರ್ಥಿಗಳಿಗೆ ಉಚಿತವಾಗಿ ಬಾವುಟವನ್ನು ಹಂಚಬಹುದಿತ್ತಲ್ಲ? ಸರಿಯಾದ ಸೂರಿಲ್ಲದ ಜನರು ಬಾವುಟವನ್ನು ಎಲ್ಲಿ ಹಾರಿಸಬೇಕು?” ಮೊದಲಾದ ಪ್ರಶ್ನೆಗಳು ಮುಂದೆ ಬಂದಿವೆ.

ಹಾಸನ ಜಿಲ್ಲೆಯ ರೈತ ಮುಖಂಡ ಎಚ್.ಆರ್‌.ನವೀನ್‌ಕುಮಾರ್ ಪ್ರತಿಕ್ರಿಯೆ ನೀಡಿ, “ಸ್ವಾತಂತ್ರ್ಯದ ಅಮೃತ ಮಹೋತ್ಸವದ ಹೆಸರಲ್ಲಿ ರಾಜ್ಯ ಮತ್ತು ಕೇಂದ್ರ ಸರ್ಕಾರಗಳು ಜನರನ್ನು ಮರಳು ಮಾಡುತ್ತಿವೆ. ಭಾವನಾತ್ಮಕವಾಗಿ ಸೆಳೆಯಲು ಬಾವುಟದ ವಿಚಾರವನ್ನು ತರುತ್ತಿದ್ದಾರೆ. ಜನರ ನೈಜ ಸಮಸ್ಯೆಗಳನ್ನು ವ್ಯವಸ್ಥಿತವಾಗಿ ಮರೆಮಾಚಲು ಹರ್‌ ಘರ್‌ ತಿರಂಗ ಎಂಬ ಕಾರ್ಯಕ್ರಮವನ್ನು ಬಳಸಿಕೊಳ್ಳಲಾಗುತ್ತಿದೆ” ಎಂದು ವಿಷಾದಿಸಿದರು.

ಇದನ್ನೂ ಓದಿರಿ: ಪ್ರತಿ ಮನೆಯಲ್ಲಿ ತ್ರಿವರ್ಣ ಧ್ವಜ ಹಾರಿಸಲು ಪ್ರಧಾನಿ ಮೋದಿ ಕರೆ: ಮನೆಯೇ ಇಲ್ಲದವರು ಏನು ಮಾಡಬೇಕು?

“ಒಂದು ಕಾರ್ಟೂನ್‌ ನೋಡಿದೆ. ನನಗೂ ತಿರಂಗ ಹಾರಿಸಲು ಇಷ್ಟ. ಆದರೆ ಮನೆಯಿಲ್ಲ. ಮೊದಲು ಮನೆ ನಿರ್ಮಿಸಿಕೊಡಿ ಎಂದು ಆ ಕಾರ್ಟೂನ್ ಆಗ್ರಹಿಸಿತ್ತು. ಸರ್ಕಾರ ಜನರ ನೈಜ ಪ್ರಶ್ನೆಗಳಿಗೆ ಗಮನ ಕೊಡುತ್ತಿಲ್ಲ. ಬೆಲೆ ಏರಿಕೆ, ಶಿಕ್ಷಣದ ಖಾಸಗೀಕರಣ, ಪಠ್ಯಪುಸ್ತಕಗಳ ಅಧ್ವಾನ ಮೊದಲಾದ ಸಮಸ್ಯೆಗಳಿಂದ ತಪ್ಪಿಸಿಕೊಳ್ಳಲು, ಜನರನ್ನು ಬೇರೆ ದಿಕ್ಕಿಗೆ ತಿರುಗಿಸಲು ಯತ್ನಿಸುತ್ತಿದ್ದಾರೆ. ಭಾವುಟ, ಸೈನಿಕರು, ದೇಶಭಕ್ತಿ- ಇವೆಲ್ಲವೂ ಭಾವನಾತ್ಮಕ ಸಂಗತಿಗಳು. ಇವುಗಳ ಬಗ್ಗೆ ಮಾತನಾಡಿದರೆ ದೇಶದ್ರೋಹ ಎಂಬ ಮನಸ್ಥಿತಿಯನ್ನು ಬೆಳೆಸಲಾಗುತ್ತಿದೆ” ಎಂದು ಬೇಸರ ವ್ಯಕ್ತಪಡಿಸಿದರು.

“ದೇಶಭಕ್ತಿ ಬಗ್ಗೆ ಮಾತನಾಡೋರು ಕರ್ನಾಟಕದ ಖಾದಿ ಉದ್ಯಮಕ್ಕೆ ಪ್ರೋತ್ಸಾಹ ಕೊಡಬೇಕಿತ್ತು. ನಿಜವಾಗಿಯೂ ಇವರಿಗೆ ದೇಶಭಕ್ತಿ ಇದ್ದರೆ ತ್ರಿವರ್ಣಧ್ವಜದ ಜೊತೆಗೆ ಸಂವಿಧಾನ ಒಂದು ಪ್ರತಿಯನ್ನು ಉಚಿತವಾಗಿ ಹಂಚಲಿ. ದುಡ್ಡು ಪಡೆದು ಬಾವುಟವನ್ನು ಮಾರುತ್ತಿರುವುದು ದೇಶಭಕ್ತಿಯೂ ಅಲ್ಲ, ಅಮೃತ ಮಹೋತ್ಸವಕ್ಕೆ ಕೊಡುತ್ತಿರುವ ಗೌರವವೂ ಅಲ್ಲ” ಎಂದು ಅಭಿಪ್ರಾಯಪಟ್ಟರು.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

  1. ಸರ್ ನಮಸ್ತೆ…ಇದು ಕೇವಲ ಪದವಿಪೂರ್ವ ಇಲಾಖೆ ಮಾತ್ರವಲ್ಲ ಎಲ್ಲಾ ಇಲಾಖೆಗಳು ,ಕಛೇರಿಗಳ ಕತೆಯೂ ಹೀಗೆಯೇ ಇದೆ..ಪ್ರಥಮ ದರ್ಜೆ ಕಾಲೇಜುಗಳಿಗೂ ಹೀಗೆಯೆ ಸುತ್ತೊಲೆ ಇದೆ ಜೊತೆಗೆ ಎನ್ ಎಸ್ ಎಸ್ ಘಟಕಗಳು ಇದರ ಹಿಂದೆ ಬಿದ್ದು ಕೊಳ್ಳುವಂತೆ ಸೂಚಿಸುತ್ತಿವೆ ಅದನ್ನು ಮಾರಲು ಕಾಲೇಜುಗಳು ವಿದ್ಯಾರ್ಥಿಗಳನ್ನ ಮನೆ ಮನೆಗೆ ಕಳುಹಿಸಿ ಮನೆಯವರಿಗೆ ಮಾರಿ ಫೋಟೊ ತೆಗೆದು ಗುಂಪುಗಳಲದಲಿ ಹಾಕುತ್ತಿದ್ದಾರೆ…ಎಲ್ಲಾ ಆಷಾಢಭೂತಿತನವಷ್ಟೆ.ಮಂಗ ಮಾಡ್ತಾ ಇದಾರೆ ಜನರನ್ನು

LEAVE A REPLY

Please enter your comment!
Please enter your name here

- Advertisment -

ಪಶ್ಚಿಮ ಬಂಗಾಳ| ಚುನಾವಣಾ ಫಲಿತಾಂಶದ ಬಳಿಕ ಮುಸ್ಲಿಂ ಸಮುದಾಯದ ಮನೆ- ಅಂಗಡಿಗಳ ಮೇಲೆ ದಾಳಿ: ಎಪಿಸಿಆರ್

ಪಶ್ಚಿಮ ಬಂಗಾಳದ ಇತ್ತೀಚಿನ ಚುನಾವಣಾ ಫಲಿತಾಂಶದ ಬಳಿಕ ಭಾರತೀಯ ಜನತಾ ಪಕ್ಷದ ಸದಸ್ಯರು ಸರಣಿ ಹಿಂಸಾತ್ಮಕ ಘಟನೆಗಳನ್ನು ನಡೆಸಿದ್ದಾರೆ ಎಂದು ನಾಗರಿಕ ಹಕ್ಕುಗಳ ರಕ್ಷಣಾ ಸಂಘ (ಎಪಿಸಿಆರ್) ದಾಖಲಿಸಿದೆ. ವಿಶೇಷವಾಗಿ, ಮುಸ್ಲಿಮರ ವಿರುದ್ಧ...

ದುಬಾರಿ ರ‍್ಯಾಲಿ, ರೋಡ್ ಶೋ ನಡೆಸುತ್ತಾ ದೇಶದ ಜನರಿಗೆ ಮಿತವ್ಯಯದ ಸಲಹೆ ನೀಡಿದ ಪ್ರಧಾನಿ ಮೋದಿ

ನಾಲ್ಕು ರಾಜ್ಯಗಳು ಮತ್ತು ಒಂದು ಕೇಂದ್ರಾಡಳಿತ ಪ್ರದೇಶದ ವಿಧಾನಸಭೆ ಚುನಾವಣೆಗಳು ಪೂರ್ಣಗೊಂಡ ಬಳಿಕ, ಮೇ 10ರಂದು ಪ್ರಧಾನಿ ನರೇಂದ್ರ ಮೋದಿಯವರು ದೇಶದ ಜನರಿಗೆ ಕೆಲವು ಸಲಹೆಗಳನ್ನು ನೀಡಿದ್ದು, ಕೋವಿಡ್ ಸಂದರ್ಭದ ಮಿತಿಗಳನ್ನು ಹಾಕಿಕೊಳ್ಳುವಂತೆ...

ಮೇ 15 ರಂದು ರಾಷ್ಟ್ರವ್ಯಾಪಿ ಮನರೇಗಾ ಕಾರ್ಮಿಕರ ಮುಷ್ಕರ; ದೇಶದಾದ್ಯಂತ ಕಾರ್ಮಿಕ ಸಂಘಟನೆಗಳ ಬೆಂಬಲ

ವಿಬಿ ಜಿರಾಮ್‌ (ಜಿ) ಕಾಯ್ದೆಯನ್ನು ಹಿಂಪಡೆಯುವ ಜೊತೆಗೆ ಗ್ರಾಮೀಣ ಉದ್ಯೋಗ ಯೋಜನೆಯಡಿಯಲ್ಲಿ ಬಲವಾದ ಉದ್ಯೋಗ ಖಾತರಿಗಳನ್ನು ನೀಡುವಂತೆ ಒತ್ತಾಯಿಸಿ ಕೃಷಿ ಮತ್ತು ಗ್ರಾಮೀಣ ಕಾರ್ಮಿಕರ ಸಂಘಗಳ ಜಂಟಿ ವೇದಿಕೆ ಮತ್ತು ಮನರೇಗಾ ಸಂಘರ್ಷ...

ಕಾಂಗ್ರೆಸ್‌ಗೆ ಕಗ್ಗಂಟಾದ ಕೇರಳ ಸಿಎಂ ಆಯ್ಕೆ : ಮೂವರು ಪ್ರಭಾವಿಗಳಲ್ಲಿ ಹೈಕಮಾಂಡ್ ಒಲವು ಯಾರ ಪರ?

ಕೇರಳ ವಿಧಾನಸಭಾ ಚುನಾವಣೆಯಲ್ಲಿ ಭರ್ಜರಿ ಜಯ ಗಳಿಸಿರುವ ಕಾಂಗ್ರೆಸ್ ನೇತೃತ್ವದ ಯುನೈಟೆಡ್ ಡೆಮಾಕ್ರಟಿಕ್ ಫ್ರಂಟ್ (ಯುಡಿಎಫ್)ಗೆ ಮುಖ್ಯಮಂತ್ರಿ ಆಯ್ಕೆ ಕಗ್ಗಂಟಾಗಿದೆ. ಯುಡಿಎಫ್‌ ಮೈತ್ರಿಕೂಟ ಗೆದ್ದಿರುವ ಒಟ್ಟು 102 ಸ್ಥಾನಗಳ ಪೈಕಿ 63 ಸ್ಥಾನಗಳನ್ನು...

ಏಪ್ರಿಲ್‌ನಲ್ಲಿ ಗಾಜಾ ಮತ್ತು ಪಶ್ಚಿಮ ದಂಡೆಯಾದ್ಯಂತ ಇಸ್ರೇಲಿ ಪಡೆಗಳಿಂದ 122 ಪ್ಯಾಲೆಸ್ಟೀನಿಯನ್ನರ ಹತ್ಯೆ: ವಿಶ್ವಸಂಸ್ಥೆಯ ಹಕ್ಕುಗಳ ಕಚೇರಿ

ಏಪ್ರಿಲ್‌ನಲ್ಲಿ ಆಕ್ರಮಿತ ಪ್ಯಾಲೆಸ್ಟೀನಿಯನ್ ಪ್ರದೇಶಗಳಲ್ಲಿ ಇಸ್ರೇಲಿ ಪಡೆಗಳು ಮತ್ತು ವಸಾಹತುಗಾರರು 22 ಮಕ್ಕಳು ಮತ್ತು ಎಂಟು ಮಹಿಳೆಯರು ಸೇರಿದಂತೆ ಕನಿಷ್ಠ 122 ಪ್ಯಾಲೆಸ್ಟೀನಿಯನ್ನರನ್ನು ಕೊಂದಿದ್ದಾರೆ ಎಂದು ಆಕ್ರಮಿತ ಪ್ಯಾಲೆಸ್ಟೀನಿಯನ್ ಪ್ರದೇಶದಲ್ಲಿನ ವಿಶ್ವಸಂಸ್ಥೆಯ ಮಾನವ...

2026ರ ತಮಿಳುನಾಡು ವಿಧಾನಸಭಾ ಚುನಾವಣೆಯ ಫಲಿತಾಂಶ: ರಾಜಕೀಯ ಸ್ಥಿತ್ಯಂತರಗಳ ಅವಲೋಕನ

"2026ರ ತಮಿಳುನಾಡು ವಿಧಾನಸಭಾ ಚುನಾವಣೆಯು ರಾಜ್ಯದ ರಾಜಕೀಯ ಇತಿಹಾಸದ ಹಾದಿಯನ್ನೇ ಬದಲಿಸಿದೆ. ಟಿವಿಕೆ ಪಕ್ಷದ ನಾಯಕ ಜೋಸೆಫ್ ವಿಜಯ್ ರಾಜ್ಯದ ನೂತನ ಮುಖ್ಯಮಂತ್ರಿಯಾಗಿ ಪದಗ್ರಹಣ ಮಾಡುವ ಮೂಲಕ ದಶಕಗಳ ಕಾಲ ನಡೆದಿದ್ದ ಡಿಎಂಕೆ-ಎಐಎಡಿಎಂಕೆ...

ಬಂಗಾಳದಲ್ಲಿ ‘ಅಧಿಕಾರಿ’ ಆಡಳಿತ: ಜಾತ್ಯತೀತ ಮುಖವಾಡ ಕಳಚಿ ಹಿಂದುತ್ವದ ಅಸ್ತ್ರ ಹಿಡಿದು ಗದ್ದುಗೆ ಏರಿದ ಸುವೇಂದು! 

ಕೋಲ್ಕತ್ತಾ/ನವದೆಹಲಿ: ಪಶ್ಚಿಮ ಬಂಗಾಳದ ಮುಖ್ಯಮಂತ್ರಿ ಗಾದಿಗೆ ಸುವೇಂದು ಅಧಿಕಾರಿ ಅವರ ಪದಾರ್ಪಣೆಯು, ಹಳೆಯ ಭ್ರಷ್ಟ ವ್ಯವಸ್ಥೆಯನ್ನು ಗುಡಿಸಿ ಹಾಕಲು ಬಂದ 'ಹೊರಗಿನ' ವ್ಯಕ್ತಿಯ ಕಥೆಯಲ್ಲ. ಬದಲಿಗೆ, ಬಂಗಾಳದ ಹಿಂಸಾತ್ಮಕ, ಬಣ ರಾಜಕೀಯ ಮತ್ತು...

ಬಂಗಾಳ ಚುನಾವಣೆ : SIRನಲ್ಲಿ ಅತಿ ಹೆಚ್ಚು ಹೆಸರು ಅಳಿಸಿದ ಕ್ಷೇತ್ರಗಳು ಬಿಜೆಪಿ ಪಾಲು

ಪಶ್ಚಿಮ ಬಂಗಾಳದ ವಿಧಾನಸಭೆ ಚುನಾವಣೆಯಲ್ಲಿ ಭರ್ಜರಿ ಗೆಲುವು ಸಾಧಿಸಿರುವ ಬಿಜೆಪಿ, ಸರ್ಕಾರ ರಚಿಸಲು ಅಣಿಯಾಗಿದೆ. ಈ ನಡುವೆ ಹಲವು ಪ್ರಶ್ನೆಗಳು, ಗೊಂದಲಗಳು ಹಾಗೆಯೇ ಮುಂದುವರಿದಿದೆ. ಚುನಾವಣೆ ಘೋಷಣೆಗೆ ಮುನ್ನವೇ ಬಂಗಾಳದ ಮತದಾರರ ಪಟ್ಟಿಯ ವಿಶೇಷ...

ತಮಿಳುನಾಡು ರಾಜ್ಯಪಾಲರ ನಡೆ ಎಷ್ಟು ಸಮಂಜಸ?

'ಮಳೆ ನಿಂತರೂ ಮರದ ಹನಿ ನಿಲ್ಲಲ್ಲ' ಎಂಬ ಮಾತಿಗೆ ಅನ್ವರ್ಥದಂತೆ ಚುನಾವಣೆ ಮುಗಿದರೂ ಸರ್ಕಾರ ರಚನೆಯ ಸರ್ಕಸ್ ಮಾತ್ರ ನಿಲ್ಲುವ ಸೂಚನೆ ಕಾಣುತ್ತಿಲ್ಲ. ತಮಿಳುನಾಡಿನ ರಾಜಕೀಯ ವಿದ್ಯಮಾನಗಳನ್ನು ನೋಡುತ್ತಿದ್ದರೆ ಅಲ್ಲಿ ನಡೆಯುತ್ತಿರವ ಬೆಳವಣಿಗೆಗಳು...

ಬಿಜೆಪಿಯಿಂದ ಯಡಿಯೂರಪ್ಪ ಅಭಿಮಾನೋತ್ಸವ: ಲಿಂಗಾಯತ ಮತಕ್ಕಾಗಿ ಮಾಸ್ಟರ್ ಫ್ಲಾನ್…?  

ದಕ್ಷಿಣ ಭಾರತದ ರಾಜಕಾರಣದಲ್ಲಿ ಬಿಜೆಪಿ ಎನ್ನುವುದು ಒಂದು ಕಾಲಕ್ಕೆ ಕೇವಲ ನಗರ ಪ್ರದೇಶಗಳಿಗೆ ಸೀಮಿತವಾಗಿದ್ದ ಪಕ್ಷ. ಆದರೆ, ಅದೇ ಬಿಜೆಪಿಯನ್ನು ಕರ್ನಾಟಕದಲ್ಲಿ ಬೇರೂರುವಂತೆ ಮಾಡಿದ್ದು ಬೂಕನಕೆರೆ ಸಿದ್ದಲಿಂಗಪ್ಪ ಯಡಿಯೂರಪ್ಪ ಅಂದರೆ ಬಿ.ಎಸ್. ಯಡಿಯೂರಪ್ಪ....