Homeಕರ್ನಾಟಕಕರ್ನಾಟಕ: ದೇಶಭಕ್ತಿ ಪ್ರದರ್ಶನಕ್ಕೆ 22 ರೂ. ನಿಗದಿ; ಬಾವುಟದಲ್ಲೂ ಬಿಸಿನೆಸ್!

ಕರ್ನಾಟಕ: ದೇಶಭಕ್ತಿ ಪ್ರದರ್ಶನಕ್ಕೆ 22 ರೂ. ನಿಗದಿ; ಬಾವುಟದಲ್ಲೂ ಬಿಸಿನೆಸ್!

“ನಿಜವಾಗಿಯೂ ಇವರಿಗೆ ದೇಶಭಕ್ತಿ ಇದ್ದರೆ ತ್ರಿವರ್ಣಧ್ವಜದ ಜೊತೆಗೆ ಸಂವಿಧಾನದ ಒಂದು ಪ್ರತಿಯನ್ನೂ ಉಚಿತವಾಗಿ ಹಂಚಲಿ” ಎನ್ನುತ್ತಾರೆ ಹಾಸನದ ರೈತ ಮುಖಂಡ ಎಚ್.ಆರ್‌.ನವೀನ್‌ಕುಮಾರ್‌.

- Advertisement -
- Advertisement -

ಸ್ವಾತಂತ್ರ್ಯದ ಅಮೃತ ಮಹೋತ್ಸಕ್ಕೆ ಸಜ್ಜಾಗುತ್ತಿದ್ದೇವೆ. ಮನೆಗಳ ಮೇಲೆ ತ್ರಿವರ್ಣ ಧ್ವಜವನ್ನು ಹಾರಿಸುವಂತೆ, ಸಾಮಾಜಿಕ ಮಾಧ್ಯಮಗಳ ಪ್ರೊಫೈಲ್‌ನಲ್ಲಿ ರಾಷ್ಟ್ರಧ್ವಜದ ಚಿತ್ರವನ್ನು ಹಾಕಿಕೊಳ್ಳುವಂತೆ ಪ್ರಧಾನಿ ನರೇಂದ್ರ ಮೋದಿ ಕರೆ ನೀಡಿದ್ದಾರೆ.

ಪ್ರಧಾನಿಯವರ ಮನವಿಯ ಹಿನ್ನೆಲೆಯಲ್ಲಿ ಹಲವಾರು ಬೆಳವಣಿಗೆಗಳಾಗುತ್ತಿವೆ. ಇದರ ನಡುವೆ ರಾಜ್ಯ ಸರ್ಕಾರ ಶಾಲಾ, ಕಾಲೇಜುಗಳಲ್ಲಿ ಬಾವುಟವನ್ನು ಮಾರಲು ಮುಂದಾಗಿರುವ ಸುದ್ದಿ ಲಭ್ಯವಾಗಿದೆ.

ಹಾಸನ ಜಿಲ್ಲಾಧಿಕಾರಿ ಆರ್‌.ಗಿರೀಶ್‌ ಅವರು ವಿವಿಧ ಇಲಾಖೆಗಳ ಅಧಿಕಾರಿಗಳಿಗೆ ಸೂಚನೆ ನೀಡಿದ ಹಿನ್ನಲೆಯಲ್ಲಿ ಪದವಿ ಪೂರ್ವ ಶಿಕ್ಷಣ ಇಲಾಖೆಯ ಉಪನಿರ್ದೇಶಕರು ಜ್ಞಾಪನ ಪತ್ರವನ್ನು ಹೊರಡಿಸಿದ್ದಾರೆ.

 

ಸ್ವಾತಂತ್ರ್ಯದ ಅಮೃತ ಮಹೋತ್ಸವದ ಅಂಗವಾಗಿ ‘ಹರ್‌ ಘರ್‌ ತಿರಂಗಾ’ ಅಭಿಯಾನವನ್ನು ಹಮ್ಮಿಕೊಂಡಿರುವ ಕುರಿತು ಈ ಜ್ಞಾಪನ ಪತ್ರವಿದೆ. “…ಆಗಸ್ಟ್‌ 13ರಿಂದ 15ರವರೆಗೆ ದೇಶದ ಪ್ರತಿ ಮನೆಮನೆಗಳಲ್ಲೂ ರಾಷ್ಟ್ರಧ್ವಜವನ್ನು ಹಾರಿಸಿ ದೇಶಭಕ್ತಿ, ದೇಶಾಭಿಮಾನ ಬಿಂಬಿಸಲು ಉದ್ದೇಶಿಸಿರುವುದರಿಂದ ಪದವಿ ಪೂರ್ವ ಕಾಲೇಜುಗಳ ವಿದ್ಯಾರ್ಥಿಗಳಿಗೆ ಧ್ವಜವನ್ನು ಖರೀದಿಸಲು ಪದವಿ ಪೂರ್ವ ಕಾಲೇಜಿನ ಪ್ರಥಮ ಮತ್ತು ದ್ವಿತೀಯ ಪಿಯುಸಿ ವಿದ್ಯಾರ್ಥಿಗಳ ಸಂಖ್ಯೆಗೆ ಅನುಗುಣವಾಗಿ ಪ್ರತಿ ವಿದ್ಯಾರ್ಥಿಯಿಂದ ರೂ. 22 ರಂತೆ ಸಂಗ್ರಹಿಸಿ ಬಾವುಟವನ್ನು ಖರೀದಿಸಲು (ಜಿಲ್ಲಾಧಿಕಾರಿ) ಸೂಚಿಸಿರುತ್ತಾರೆ. ಜಿಲ್ಲೆಯ ಪದವಿಪುರ್ವ ಕಾಲೇಜಿನ ಪ್ರಾಂಶುಪಾಲರು ಬಾವುಟಗಳನ್ನು ಮೋಹನ್‌ ಎಂ.ಪಿ. (ಪ್ರಾಂಶುಪಾಲರು, ಸರ್ಕಾರಿ ಪದವಿಪೂರ್ವ ಕಾಲೇಜು, ವಿದ್ಯಾನಗರ, ಆಕಾಶವಾಣಿ ಹತ್ತಿರ, ಹಾಸನ) ಅವರನ್ನು ಸಂಪರ್ಕಿಸಿ ಬಾವುಟಗಳನ್ನು ಪ್ರದರ್ಶಿಸಲು ಸೂಚಿಸಲಾಗಿದೆ..” ಎಂದು ಪತ್ರದಲ್ಲಿ ತಿಳಿಸಲಾಗಿದೆ.

ಭಾನುವಾರ ‘ನಾನುಗೌರಿ.ಕಾಂ’ ಜೊತೆ ಮಾತನಾಡಿದ ಹಾಸನ ಡಿಡಿಪಿಯು ಸಿ.ಎಂ.ಮಹಲಿಂಗಯ್ಯ ಅವರು, “ಜಿಲ್ಲಾಧಿಕಾರಿಗಳ ಸೂಚನೆ ಮೇರೆಗೆ ಬಾವುಟ ಹಂಚಿಕೆ ಮಾಡಲು ಮುಂದಾಗಿದ್ದೇವೆ. ಜಿಲ್ಲಾಧಿಕಾರಿಯವರು ವಿವಿಧ ಇಲಾಖೆಗೆ ಇಂತಿಷ್ಟು ಬಾವುಟಗಳನ್ನು ನೀಡಿದ್ದಾರೆ. ಆಸಕ್ತರು ಮಾತ್ರ ಖರೀದಿಸಬಹುದು. 10,000 ಬಾವುಟಗಳನ್ನು ಮಾರುವಂತೆ ನಮ್ಮ ಇಲಾಖೆಗೆ ಟಾರ್ಗೆಟ್ ನೀಡಲಾಗಿದೆ. ಮಾರಾಟವಾಗದ ಬಾವುಟಗಳನ್ನು ವಾಪಸ್ ಕಳುಹಿಸುತ್ತೇವೆ. ನಮ್ಮ ವ್ಯಾಪ್ತಿಯಲ್ಲಿ 31,000 ವಿದ್ಯಾರ್ಥಿಗಳಿದ್ದಾರೆ. ಖಾದಿ ಬಾವುಟವನ್ನೇ ನೀಡಿದ್ದಾರೆ. ಪಿಯು ವಿದ್ಯಾರ್ಥಿಗಳಿಗಷ್ಟೇ ಅಲ್ಲ, ಪ್ರೌಢಶಾಲಾ ವಿದ್ಯಾರ್ಥಿಗಳಿಗೂ ಬಾವುಟ ಮಾರಲಾಗುತ್ತಿದೆ” ಎಂದು ಮಾಹಿತಿ ನೀಡಿದರು.

ಹಾಸನ ಜಿಲ್ಲಾಧಿಕಾರಿ ಆರ್‌.ಗಿರೀಶ್‌ ‘ನಾನುಗೌರಿ.ಕಾಂ’ಗೆ ಪ್ರತಿಕ್ರಿಯೆ ನೀಡಿ, “ಬಾವುಟವನ್ನು ಹೇಗೆ ಕೊಡಬೇಕು, ಎಲ್ಲಿ ಕೊಡಬೇಕು ಎಂದು ಯೋಜನೆ ರೂಪಿಸುತ್ತಿದ್ದೇವೆ. ಬಹುಶಃ ನಾಳೆ (ಸೋಮವಾರ) ಪತ್ರಿಕಾಗೋಷ್ಠಿ ಕರೆಯುತ್ತೇನೆ. ಜಿಲ್ಲಾ ಪಂಚಾಯಿತಿ ಮೂಲಕ 1.1 ಲಕ್ಷ ಬಾವುಟಗಳನ್ನು ಹಂಚುತ್ತಿದ್ದೇವೆ. ಸ್ಥಳೀಯ ಸಂಸ್ಥೆಗಳಿಂದ 50 ಸಾವಿರ ಬಾವುಟ, ಶಾಲಾ ಮಕ್ಕಳಿಗೆ ಸುಮಾರು 20,000 ಭಾವುಟವನ್ನು ಮಾರಲು ಇಚ್ಛಿಸಿದ್ದೇವೆ. ಬಾವುಟವನ್ನು ಉಚಿತವಾಗಿ ನೀಡುತ್ತಿಲ್ಲ. ಹಣ ನಿಗದಿ ಮಾಡಿದ್ದೇವೆ” ಎಂದು ಸ್ಪಷ್ಟಪಡಿಸಿದರು.

“ಹಾಸನ ಜಿಲ್ಲೆಯಷ್ಟೇ ಅಲ್ಲ. ಇಡೀ ರಾಜ್ಯದಲ್ಲಿ ಈ ಕಾರ್ಯಕ್ರಮ ನಡೆಯಲಿದೆ” ಎಂದ ಅವರು, ಸರ್ಕಾರದ ಮಟ್ಟದಿಂದಲೇ ಸೂಚನೆ ಬಂದಿರುವ ಕುರಿತು ಸುಳಿವು ನೀಡಿದರು.

“ದೇಶಭಕ್ತಿಯ ಹೆಸರಲ್ಲಿ ದುಡ್ಡು ಮಾಡುವ ಬಿಸಿನೆಟ್ ಇಲ್ಲಿ ನಡೆಯುತ್ತಿದೆಯೇ? ವಿದ್ಯಾರ್ಥಿಗಳಿಗೆ ಉಚಿತವಾಗಿ ಬಾವುಟವನ್ನು ಹಂಚಬಹುದಿತ್ತಲ್ಲ? ಸರಿಯಾದ ಸೂರಿಲ್ಲದ ಜನರು ಬಾವುಟವನ್ನು ಎಲ್ಲಿ ಹಾರಿಸಬೇಕು?” ಮೊದಲಾದ ಪ್ರಶ್ನೆಗಳು ಮುಂದೆ ಬಂದಿವೆ.

ಹಾಸನ ಜಿಲ್ಲೆಯ ರೈತ ಮುಖಂಡ ಎಚ್.ಆರ್‌.ನವೀನ್‌ಕುಮಾರ್ ಪ್ರತಿಕ್ರಿಯೆ ನೀಡಿ, “ಸ್ವಾತಂತ್ರ್ಯದ ಅಮೃತ ಮಹೋತ್ಸವದ ಹೆಸರಲ್ಲಿ ರಾಜ್ಯ ಮತ್ತು ಕೇಂದ್ರ ಸರ್ಕಾರಗಳು ಜನರನ್ನು ಮರಳು ಮಾಡುತ್ತಿವೆ. ಭಾವನಾತ್ಮಕವಾಗಿ ಸೆಳೆಯಲು ಬಾವುಟದ ವಿಚಾರವನ್ನು ತರುತ್ತಿದ್ದಾರೆ. ಜನರ ನೈಜ ಸಮಸ್ಯೆಗಳನ್ನು ವ್ಯವಸ್ಥಿತವಾಗಿ ಮರೆಮಾಚಲು ಹರ್‌ ಘರ್‌ ತಿರಂಗ ಎಂಬ ಕಾರ್ಯಕ್ರಮವನ್ನು ಬಳಸಿಕೊಳ್ಳಲಾಗುತ್ತಿದೆ” ಎಂದು ವಿಷಾದಿಸಿದರು.

ಇದನ್ನೂ ಓದಿರಿ: ಪ್ರತಿ ಮನೆಯಲ್ಲಿ ತ್ರಿವರ್ಣ ಧ್ವಜ ಹಾರಿಸಲು ಪ್ರಧಾನಿ ಮೋದಿ ಕರೆ: ಮನೆಯೇ ಇಲ್ಲದವರು ಏನು ಮಾಡಬೇಕು?

“ಒಂದು ಕಾರ್ಟೂನ್‌ ನೋಡಿದೆ. ನನಗೂ ತಿರಂಗ ಹಾರಿಸಲು ಇಷ್ಟ. ಆದರೆ ಮನೆಯಿಲ್ಲ. ಮೊದಲು ಮನೆ ನಿರ್ಮಿಸಿಕೊಡಿ ಎಂದು ಆ ಕಾರ್ಟೂನ್ ಆಗ್ರಹಿಸಿತ್ತು. ಸರ್ಕಾರ ಜನರ ನೈಜ ಪ್ರಶ್ನೆಗಳಿಗೆ ಗಮನ ಕೊಡುತ್ತಿಲ್ಲ. ಬೆಲೆ ಏರಿಕೆ, ಶಿಕ್ಷಣದ ಖಾಸಗೀಕರಣ, ಪಠ್ಯಪುಸ್ತಕಗಳ ಅಧ್ವಾನ ಮೊದಲಾದ ಸಮಸ್ಯೆಗಳಿಂದ ತಪ್ಪಿಸಿಕೊಳ್ಳಲು, ಜನರನ್ನು ಬೇರೆ ದಿಕ್ಕಿಗೆ ತಿರುಗಿಸಲು ಯತ್ನಿಸುತ್ತಿದ್ದಾರೆ. ಭಾವುಟ, ಸೈನಿಕರು, ದೇಶಭಕ್ತಿ- ಇವೆಲ್ಲವೂ ಭಾವನಾತ್ಮಕ ಸಂಗತಿಗಳು. ಇವುಗಳ ಬಗ್ಗೆ ಮಾತನಾಡಿದರೆ ದೇಶದ್ರೋಹ ಎಂಬ ಮನಸ್ಥಿತಿಯನ್ನು ಬೆಳೆಸಲಾಗುತ್ತಿದೆ” ಎಂದು ಬೇಸರ ವ್ಯಕ್ತಪಡಿಸಿದರು.

“ದೇಶಭಕ್ತಿ ಬಗ್ಗೆ ಮಾತನಾಡೋರು ಕರ್ನಾಟಕದ ಖಾದಿ ಉದ್ಯಮಕ್ಕೆ ಪ್ರೋತ್ಸಾಹ ಕೊಡಬೇಕಿತ್ತು. ನಿಜವಾಗಿಯೂ ಇವರಿಗೆ ದೇಶಭಕ್ತಿ ಇದ್ದರೆ ತ್ರಿವರ್ಣಧ್ವಜದ ಜೊತೆಗೆ ಸಂವಿಧಾನ ಒಂದು ಪ್ರತಿಯನ್ನು ಉಚಿತವಾಗಿ ಹಂಚಲಿ. ದುಡ್ಡು ಪಡೆದು ಬಾವುಟವನ್ನು ಮಾರುತ್ತಿರುವುದು ದೇಶಭಕ್ತಿಯೂ ಅಲ್ಲ, ಅಮೃತ ಮಹೋತ್ಸವಕ್ಕೆ ಕೊಡುತ್ತಿರುವ ಗೌರವವೂ ಅಲ್ಲ” ಎಂದು ಅಭಿಪ್ರಾಯಪಟ್ಟರು.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

  1. ಸರ್ ನಮಸ್ತೆ…ಇದು ಕೇವಲ ಪದವಿಪೂರ್ವ ಇಲಾಖೆ ಮಾತ್ರವಲ್ಲ ಎಲ್ಲಾ ಇಲಾಖೆಗಳು ,ಕಛೇರಿಗಳ ಕತೆಯೂ ಹೀಗೆಯೇ ಇದೆ..ಪ್ರಥಮ ದರ್ಜೆ ಕಾಲೇಜುಗಳಿಗೂ ಹೀಗೆಯೆ ಸುತ್ತೊಲೆ ಇದೆ ಜೊತೆಗೆ ಎನ್ ಎಸ್ ಎಸ್ ಘಟಕಗಳು ಇದರ ಹಿಂದೆ ಬಿದ್ದು ಕೊಳ್ಳುವಂತೆ ಸೂಚಿಸುತ್ತಿವೆ ಅದನ್ನು ಮಾರಲು ಕಾಲೇಜುಗಳು ವಿದ್ಯಾರ್ಥಿಗಳನ್ನ ಮನೆ ಮನೆಗೆ ಕಳುಹಿಸಿ ಮನೆಯವರಿಗೆ ಮಾರಿ ಫೋಟೊ ತೆಗೆದು ಗುಂಪುಗಳಲದಲಿ ಹಾಕುತ್ತಿದ್ದಾರೆ…ಎಲ್ಲಾ ಆಷಾಢಭೂತಿತನವಷ್ಟೆ.ಮಂಗ ಮಾಡ್ತಾ ಇದಾರೆ ಜನರನ್ನು

LEAVE A REPLY

Please enter your comment!
Please enter your name here

- Advertisment -

ತೆಲಂಗಾಣ ಜಾತಿ ಸಮೀಕ್ಷೆ: ಜನರ ಆರ್ಥಿಕ ಭವಿಷ್ಯ ನಿರ್ಧರಿಸುತ್ತಿರುವ ಜಾತಿ ಹಿನ್ನೆಲೆ

ತೆಲಂಗಾಣದಲ್ಲಿರುವ ಎಲ್ಲಾ ಪರಿಶಿಷ್ಟ ಜಾತಿ ಕಾರ್ಮಿಕರಲ್ಲಿ ಸುಮಾರು ಅರ್ಧದಷ್ಟು ಜನರು ದಿನಗೂಲಿ ಕಾರ್ಮಿಕರು. ಆದರೆ, ಸಾಮಾನ್ಯ ಜಾತಿ ಕಾರ್ಮಿಕರಲ್ಲಿ 10 ರಲ್ಲಿ ಒಬ್ಬರು ಮಾತ್ರ ದಿನಗೂಲಿ ಮಾಡುತ್ತಾರೆ. ಬ್ರಾಹ್ಮಣರು ಎಸ್‌ಟಿ ಸಮುದಾಯದ ಕೋಲಂಗಿಂತ...

ಲೆಬನಾನ್‌ನಲ್ಲಿ ಯೇಸುವಿನ ಪ್ರತಿಮೆ ಧ್ವಂಸ ಮಾಡಿದ ಇಸ್ರೇಲಿ ಸೈನಿಕ; ಫೋಟೋ ವೈರಲ್

ಇಸ್ರೇಲಿ ಸೈನಿಕನೊಬ್ಬ ದಕ್ಷಿಣ ಲೆಬನಾನ್‌ನಲ್ಲಿ ಸ್ಲೆಡ್ಜ್ ಹ್ಯಾಮರ್‌ನಿಂದ ಯೇಸುಕ್ರಿಸ್ತನ ಪ್ರತಿಮೆಯನ್ನು ಧ್ವಂಸ ಮಾಡುತ್ತಿರುವುದನ್ನು ತೋರಿಸುವ ವೈರಲ್ ಚಿತ್ರದ ಸತ್ಯಾಸತ್ಯತೆಯನ್ನು ಇಸ್ರೇಲ್ ರಕ್ಷಣಾ ಪಡೆಗಳು (ಐಡಿಎಫ್‌) ದೃಢಪಡಿಸಿದ್ದು, ವ್ಯಾಪಕ ಆಕ್ರೋಶಕ್ಕೆ ಕಾರಣವಾಗಿದೆ. ಎಕ್ಸ್ ನಲ್ಲಿ 6.8...

TCS ನಾಸಿಕ್ ಪ್ರಕರಣ : ಮಾಧ್ಯಮಗಳ ಸುಳ್ಳು ಮತ್ತು ಕಂಪನಿ ಹೇಳಿದ ಸತ್ಯ

ಮಹಾರಾಷ್ಟ್ರದ ನಾಸಿಕ್‌ನಲ್ಲಿರುವ ಟಾಟಾ ಕನ್ಸಲ್ಟೆನ್ಸಿ ಸರ್ವಿಸಸ್ (ಟಿಸಿಎಸ್‌) ಕಂಪನಿಯ ಬಿಪಿಒ ಘಟಕದಲ್ಲಿ ನಡೆದಿದೆ ಎನ್ನಲಾದ ಪ್ರಕರಣವೊಂದು ಪ್ರಸ್ತುತ ಇಡೀ ದೇಶದಾದ್ಯಂತ ಭಾರೀ ಚರ್ಚೆಯ ವಿಷಯವಾಗಿದೆ. ಈ ಪ್ರಕರಣದಲ್ಲಿ ಮುಖ್ಯವಾಗಿ ಲೈಂಗಿಕ ಕಿರುಕುಳ ಮತ್ತು...

‘ಅಮೆರಿಕದೊಂದಿಗೆ ಮಾತುಕತೆ ಇಲ್ಲ..’; ಇಸ್ಲಾಮಾಬಾದ್‌ ಸಭೆಯಲ್ಲಿ ಇರಾನ್ ಭಾಗವಹಿಸುವುದು ಅನುಮಾನ

ಯುನೈಟೆಡ್ ಸ್ಟೇಟ್ಸ್ (ಅಮೆರಿಕ) ಜೊತೆ ಹೊಸ ಸುತ್ತಿನ ಮಾತುಕತೆಗಾಗಿ ಇಸ್ಲಾಮಾಬಾದ್‌ಗೆ ಸಂಧಾನಕಾರರನ್ನು ಕಳುಹಿಸುವ ಯಾವುದೇ ಯೋಜನೆ ಇಲ್ಲ ಎಂದು ಇರಾನ್ ಸೂಚಿಸಿದೆ. ಕದನ ವಿರಾಮ ಮುಕ್ತಾಯಗೊಳ್ಳಲು 48 ಗಂಟೆಗಳ ಮೊದಲು ಯುದ್ಧ ನಿರತ...

ಇರಾನ್, ಇಸ್ರೇಲ್-ಅಮೆರಿಕ ಯುದ್ಧ : ವಿನಾಶದ ನಡುವೆಯೂ ಲಾಭ ಪಡೆದವರು ಯಾರು?

ಅಂತಾರಾಷ್ಟ್ರೀಯ ಹಣಕಾಸು ನಿಧಿ (ಐಎಂಎಫ್‌) 2026ರ ಜಾಗತಿಕ ಬೆಳವಣಿಗೆಯ ಅಂದಾಜನ್ನು ಶೇಕಡ 3.3 ರಿಂದ 3.1ಕ್ಕೆ ಇಳಿಸಿದೆ. ಇರಾನ್ ವಿರುದ್ಧದ ಅಮೆರಿಕ-ಇಸ್ರೇಲ್ ಯುದ್ಧದ ಪರಿಣಾಮ ಮತ್ತು ಹಾರ್ಮುಝ್ ಜಲಸಂಧಿಯನ್ನು ಮುಚ್ಚಿರುವುದು ವಿಶ್ವ ಆರ್ಥಿಕತೆಯ...

ಕ್ಷೇತ್ರ ಮರುವಿಂಗಡಣೆ ವಿರುದ್ಧ ದಕ್ಷಿಣದ ರಾಜ್ಯಗಳ ಪಟ್ಟು: ಭವಿಷ್ಯದ ಮರುಚಿಂತನೆಗೆ ಇದುವೇ ಸೂಕ್ತ ಕಾಲ

ಲೋಕಸಭೆಯಲ್ಲಿ 131 ನೇ ಸಾಂವಿಧಾನಿಕ ತಿದ್ದುಪಡಿ ಮಸೂದೆಯನ್ನು ತಿರಸ್ಕರಿಸಿರುವುದು ಭಾರತದ ಪ್ರಜಾಪ್ರಭುತ್ವ ಪಥದಲ್ಲಿ ಮಹತ್ವದ ಕ್ಷಣವಾಗಿದೆ. ಇದು ಕೇವಲ ಶಾಸಕಾಂಗದ ಹಿನ್ನಡೆಯನ್ನು ಮಾತ್ರವಲ್ಲ, ಒಕ್ಕೂಟ ವ್ಯವಸ್ಥೆಯ ಸೂಕ್ಷ್ಮ ಸಮತೋಲನವನ್ನು ಹಾಳುಮಾಡುವ ಅಪಾಯವನ್ನುಂಟುಮಾಡುವ ಪ್ರಸ್ತಾಪಗಳ...

ಮೋದಿ ಸರ್ಕಾರದ ಯೂಟರ್ನ್ : ಜನಸಂಖ್ಯಾ ಸ್ಫೋಟದ ಕಳವಳದಿಂದ ಹೆಚ್ಚು ಜನಸಂಖ್ಯೆಯ ರಾಜ್ಯಗಳಿಗೆ ಗಿಫ್ಟ್ ಕೊಡುವವರೆಗೆ

ಭಾರತದ ಜನಸಂಖ್ಯೆಯ ಬಗ್ಗೆ ಪ್ರಧಾನಮಂತ್ರಿ ನರೇಂದ್ರ ಮೋದಿ ಮತ್ತು ಅವರ ಸರ್ಕಾರ ನಿಜವಾಗಿಯೂ ಬಹಳ ಕಳವಳ ವ್ಯಕ್ತಪಡಿಸುತ್ತಿದೆ– ಅಥವಾ ಅವರು ನಮಗೆ ಆ ರೀತಿ ನಂಬುವಂತೆ ಮಾಡಿದ್ದಾರೆ. ಏಕೆಂದರೆ... 2019ರ ಸ್ವಾತಂತ್ರ್ಯ ದಿನಾಚರಣೆಯಂದು ಮೋದಿಯವರು,...

ದೇಶವನ್ನುದ್ದೇಶಿಸಿ ಮೋದಿ ಭಾಷಣ : ಚುನಾವಣಾ ನೀತಿ ಸಂಹಿತೆಯ ಉಲ್ಲಂಘನೆ

ಕ್ಷೇತ್ರ ಮರುವಿಂಗಡನೆಗೆ ಉದ್ದೇಶಿಸಿದ್ದ ಸಂವಿಧಾನದ 131ನೇ ತಿದ್ದುಪಡಿ ಮಸೂದೆಗೆ ಲೋಕಸಭೆಯಲ್ಲಿ ಸೋಲಾದ ಬೆನ್ನಲ್ಲೇ ಶನಿವಾರ (ಏ.18) ದೇಶವನ್ನುದ್ದೇಶಿಸಿ ಮಾತನಾಡಿದ ಪ್ರಧಾನಿ ನರೇಂದ್ರ ಮೋದಿ, ಪ್ರತಿಪಕ್ಷಗಳ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ದು, ಸಂಸತ್ತಿನಲ್ಲಿ ವಿರೋಧ...

ಫ್ಯಾಕ್ಟ್‌ಚೆಕ್ : ಅತ್ಯಾಚಾರ ಅಪರಾಧಿ ಪರ ವಕೀಲೆಗೆ ಟಿಎಂಸಿಯಿಂದ ರಾಜ್ಯಸಭೆ ಸೀಟ್; ಬಿಜೆಪಿ ಆರೋಪದ ಸತ್ಯಾಸತ್ಯತೆ ಏನು?

ಪಶ್ಚಿಮ ಬಂಗಾಳ ವಿಧಾನಸಭೆ ಚುನಾವಣೆಗೆ ಪಾಣಿಹತಿ ಕ್ಷೇತ್ರದಿಂದ ಬಿಜೆಪಿ ಅಭ್ಯರ್ಥಿಯಾಗಿರುವ ಆರ್‌ಜಿ ಕರ್‌ ಸಂತ್ರಸ್ತೆಯ ತಾಯಿ ಮತ್ತು ವಕೀಲೆ ಹಾಗೂ ತೃಣಮೂಲ ಕಾಂಗ್ರೆಸ್ (ಟಿಎಂಸಿ) ರಾಜ್ಯಸಭಾ ಸದಸ್ಯೆ ಮೇನಕಾ ಗುರುಸ್ವಾಮಿ ಅವರ ಎಐ-ರಚಿತ...

ತಾರತಮ್ಯ ಮುಕ್ತ ಕ್ಯಾಂಪಸ್ ನಿರ್ಮಾಣದತ್ತ ಮಹತ್ವದ ಹೆಜ್ಜೆ; ‘ರೋಹಿತ್ ವೇಮುಲ ಮಸೂದೆ’ಗೆ ಸಚಿವ ಸಂಪುಟ ಅನುಮೋದನೆ

ಕರ್ನಾಟಕ ಸರ್ಕಾರದ ಸಚಿವ ಸಂಪುಟ ಗುರುವಾರ (ಏ.16) ದಂದು ಕರ್ನಾಟಕ ರೋಹಿತ್ ವೇಮುಲ (ಹೊರಗಿಡುವಿಕೆ ಅಥವಾ ಅನ್ಯಾಯ ತಡೆಗಟ್ಟುವಿಕೆ) (ಶಿಕ್ಷಣ ಮತ್ತು ಘನತೆಯ ಹಕ್ಕು) ಮಸೂದೆ’ಗೆ ಅನುಮೋದನೆ ನೀಡಿದೆ. ಹೈದರಾಬಾದ್‌ನ ಕೆಂದ್ರೀಯ ವಿಶ್ವವಿದ್ಯಾಲಯದಲ್ಲಿ...