Homeಕರ್ನಾಟಕಕರ್ನಾಟಕ: ದೇಶಭಕ್ತಿ ಪ್ರದರ್ಶನಕ್ಕೆ 22 ರೂ. ನಿಗದಿ; ಬಾವುಟದಲ್ಲೂ ಬಿಸಿನೆಸ್!

ಕರ್ನಾಟಕ: ದೇಶಭಕ್ತಿ ಪ್ರದರ್ಶನಕ್ಕೆ 22 ರೂ. ನಿಗದಿ; ಬಾವುಟದಲ್ಲೂ ಬಿಸಿನೆಸ್!

“ನಿಜವಾಗಿಯೂ ಇವರಿಗೆ ದೇಶಭಕ್ತಿ ಇದ್ದರೆ ತ್ರಿವರ್ಣಧ್ವಜದ ಜೊತೆಗೆ ಸಂವಿಧಾನದ ಒಂದು ಪ್ರತಿಯನ್ನೂ ಉಚಿತವಾಗಿ ಹಂಚಲಿ” ಎನ್ನುತ್ತಾರೆ ಹಾಸನದ ರೈತ ಮುಖಂಡ ಎಚ್.ಆರ್‌.ನವೀನ್‌ಕುಮಾರ್‌.

- Advertisement -
- Advertisement -

ಸ್ವಾತಂತ್ರ್ಯದ ಅಮೃತ ಮಹೋತ್ಸಕ್ಕೆ ಸಜ್ಜಾಗುತ್ತಿದ್ದೇವೆ. ಮನೆಗಳ ಮೇಲೆ ತ್ರಿವರ್ಣ ಧ್ವಜವನ್ನು ಹಾರಿಸುವಂತೆ, ಸಾಮಾಜಿಕ ಮಾಧ್ಯಮಗಳ ಪ್ರೊಫೈಲ್‌ನಲ್ಲಿ ರಾಷ್ಟ್ರಧ್ವಜದ ಚಿತ್ರವನ್ನು ಹಾಕಿಕೊಳ್ಳುವಂತೆ ಪ್ರಧಾನಿ ನರೇಂದ್ರ ಮೋದಿ ಕರೆ ನೀಡಿದ್ದಾರೆ.

ಪ್ರಧಾನಿಯವರ ಮನವಿಯ ಹಿನ್ನೆಲೆಯಲ್ಲಿ ಹಲವಾರು ಬೆಳವಣಿಗೆಗಳಾಗುತ್ತಿವೆ. ಇದರ ನಡುವೆ ರಾಜ್ಯ ಸರ್ಕಾರ ಶಾಲಾ, ಕಾಲೇಜುಗಳಲ್ಲಿ ಬಾವುಟವನ್ನು ಮಾರಲು ಮುಂದಾಗಿರುವ ಸುದ್ದಿ ಲಭ್ಯವಾಗಿದೆ.

ಹಾಸನ ಜಿಲ್ಲಾಧಿಕಾರಿ ಆರ್‌.ಗಿರೀಶ್‌ ಅವರು ವಿವಿಧ ಇಲಾಖೆಗಳ ಅಧಿಕಾರಿಗಳಿಗೆ ಸೂಚನೆ ನೀಡಿದ ಹಿನ್ನಲೆಯಲ್ಲಿ ಪದವಿ ಪೂರ್ವ ಶಿಕ್ಷಣ ಇಲಾಖೆಯ ಉಪನಿರ್ದೇಶಕರು ಜ್ಞಾಪನ ಪತ್ರವನ್ನು ಹೊರಡಿಸಿದ್ದಾರೆ.

 

ಸ್ವಾತಂತ್ರ್ಯದ ಅಮೃತ ಮಹೋತ್ಸವದ ಅಂಗವಾಗಿ ‘ಹರ್‌ ಘರ್‌ ತಿರಂಗಾ’ ಅಭಿಯಾನವನ್ನು ಹಮ್ಮಿಕೊಂಡಿರುವ ಕುರಿತು ಈ ಜ್ಞಾಪನ ಪತ್ರವಿದೆ. “…ಆಗಸ್ಟ್‌ 13ರಿಂದ 15ರವರೆಗೆ ದೇಶದ ಪ್ರತಿ ಮನೆಮನೆಗಳಲ್ಲೂ ರಾಷ್ಟ್ರಧ್ವಜವನ್ನು ಹಾರಿಸಿ ದೇಶಭಕ್ತಿ, ದೇಶಾಭಿಮಾನ ಬಿಂಬಿಸಲು ಉದ್ದೇಶಿಸಿರುವುದರಿಂದ ಪದವಿ ಪೂರ್ವ ಕಾಲೇಜುಗಳ ವಿದ್ಯಾರ್ಥಿಗಳಿಗೆ ಧ್ವಜವನ್ನು ಖರೀದಿಸಲು ಪದವಿ ಪೂರ್ವ ಕಾಲೇಜಿನ ಪ್ರಥಮ ಮತ್ತು ದ್ವಿತೀಯ ಪಿಯುಸಿ ವಿದ್ಯಾರ್ಥಿಗಳ ಸಂಖ್ಯೆಗೆ ಅನುಗುಣವಾಗಿ ಪ್ರತಿ ವಿದ್ಯಾರ್ಥಿಯಿಂದ ರೂ. 22 ರಂತೆ ಸಂಗ್ರಹಿಸಿ ಬಾವುಟವನ್ನು ಖರೀದಿಸಲು (ಜಿಲ್ಲಾಧಿಕಾರಿ) ಸೂಚಿಸಿರುತ್ತಾರೆ. ಜಿಲ್ಲೆಯ ಪದವಿಪುರ್ವ ಕಾಲೇಜಿನ ಪ್ರಾಂಶುಪಾಲರು ಬಾವುಟಗಳನ್ನು ಮೋಹನ್‌ ಎಂ.ಪಿ. (ಪ್ರಾಂಶುಪಾಲರು, ಸರ್ಕಾರಿ ಪದವಿಪೂರ್ವ ಕಾಲೇಜು, ವಿದ್ಯಾನಗರ, ಆಕಾಶವಾಣಿ ಹತ್ತಿರ, ಹಾಸನ) ಅವರನ್ನು ಸಂಪರ್ಕಿಸಿ ಬಾವುಟಗಳನ್ನು ಪ್ರದರ್ಶಿಸಲು ಸೂಚಿಸಲಾಗಿದೆ..” ಎಂದು ಪತ್ರದಲ್ಲಿ ತಿಳಿಸಲಾಗಿದೆ.

ಭಾನುವಾರ ‘ನಾನುಗೌರಿ.ಕಾಂ’ ಜೊತೆ ಮಾತನಾಡಿದ ಹಾಸನ ಡಿಡಿಪಿಯು ಸಿ.ಎಂ.ಮಹಲಿಂಗಯ್ಯ ಅವರು, “ಜಿಲ್ಲಾಧಿಕಾರಿಗಳ ಸೂಚನೆ ಮೇರೆಗೆ ಬಾವುಟ ಹಂಚಿಕೆ ಮಾಡಲು ಮುಂದಾಗಿದ್ದೇವೆ. ಜಿಲ್ಲಾಧಿಕಾರಿಯವರು ವಿವಿಧ ಇಲಾಖೆಗೆ ಇಂತಿಷ್ಟು ಬಾವುಟಗಳನ್ನು ನೀಡಿದ್ದಾರೆ. ಆಸಕ್ತರು ಮಾತ್ರ ಖರೀದಿಸಬಹುದು. 10,000 ಬಾವುಟಗಳನ್ನು ಮಾರುವಂತೆ ನಮ್ಮ ಇಲಾಖೆಗೆ ಟಾರ್ಗೆಟ್ ನೀಡಲಾಗಿದೆ. ಮಾರಾಟವಾಗದ ಬಾವುಟಗಳನ್ನು ವಾಪಸ್ ಕಳುಹಿಸುತ್ತೇವೆ. ನಮ್ಮ ವ್ಯಾಪ್ತಿಯಲ್ಲಿ 31,000 ವಿದ್ಯಾರ್ಥಿಗಳಿದ್ದಾರೆ. ಖಾದಿ ಬಾವುಟವನ್ನೇ ನೀಡಿದ್ದಾರೆ. ಪಿಯು ವಿದ್ಯಾರ್ಥಿಗಳಿಗಷ್ಟೇ ಅಲ್ಲ, ಪ್ರೌಢಶಾಲಾ ವಿದ್ಯಾರ್ಥಿಗಳಿಗೂ ಬಾವುಟ ಮಾರಲಾಗುತ್ತಿದೆ” ಎಂದು ಮಾಹಿತಿ ನೀಡಿದರು.

ಹಾಸನ ಜಿಲ್ಲಾಧಿಕಾರಿ ಆರ್‌.ಗಿರೀಶ್‌ ‘ನಾನುಗೌರಿ.ಕಾಂ’ಗೆ ಪ್ರತಿಕ್ರಿಯೆ ನೀಡಿ, “ಬಾವುಟವನ್ನು ಹೇಗೆ ಕೊಡಬೇಕು, ಎಲ್ಲಿ ಕೊಡಬೇಕು ಎಂದು ಯೋಜನೆ ರೂಪಿಸುತ್ತಿದ್ದೇವೆ. ಬಹುಶಃ ನಾಳೆ (ಸೋಮವಾರ) ಪತ್ರಿಕಾಗೋಷ್ಠಿ ಕರೆಯುತ್ತೇನೆ. ಜಿಲ್ಲಾ ಪಂಚಾಯಿತಿ ಮೂಲಕ 1.1 ಲಕ್ಷ ಬಾವುಟಗಳನ್ನು ಹಂಚುತ್ತಿದ್ದೇವೆ. ಸ್ಥಳೀಯ ಸಂಸ್ಥೆಗಳಿಂದ 50 ಸಾವಿರ ಬಾವುಟ, ಶಾಲಾ ಮಕ್ಕಳಿಗೆ ಸುಮಾರು 20,000 ಭಾವುಟವನ್ನು ಮಾರಲು ಇಚ್ಛಿಸಿದ್ದೇವೆ. ಬಾವುಟವನ್ನು ಉಚಿತವಾಗಿ ನೀಡುತ್ತಿಲ್ಲ. ಹಣ ನಿಗದಿ ಮಾಡಿದ್ದೇವೆ” ಎಂದು ಸ್ಪಷ್ಟಪಡಿಸಿದರು.

“ಹಾಸನ ಜಿಲ್ಲೆಯಷ್ಟೇ ಅಲ್ಲ. ಇಡೀ ರಾಜ್ಯದಲ್ಲಿ ಈ ಕಾರ್ಯಕ್ರಮ ನಡೆಯಲಿದೆ” ಎಂದ ಅವರು, ಸರ್ಕಾರದ ಮಟ್ಟದಿಂದಲೇ ಸೂಚನೆ ಬಂದಿರುವ ಕುರಿತು ಸುಳಿವು ನೀಡಿದರು.

“ದೇಶಭಕ್ತಿಯ ಹೆಸರಲ್ಲಿ ದುಡ್ಡು ಮಾಡುವ ಬಿಸಿನೆಟ್ ಇಲ್ಲಿ ನಡೆಯುತ್ತಿದೆಯೇ? ವಿದ್ಯಾರ್ಥಿಗಳಿಗೆ ಉಚಿತವಾಗಿ ಬಾವುಟವನ್ನು ಹಂಚಬಹುದಿತ್ತಲ್ಲ? ಸರಿಯಾದ ಸೂರಿಲ್ಲದ ಜನರು ಬಾವುಟವನ್ನು ಎಲ್ಲಿ ಹಾರಿಸಬೇಕು?” ಮೊದಲಾದ ಪ್ರಶ್ನೆಗಳು ಮುಂದೆ ಬಂದಿವೆ.

ಹಾಸನ ಜಿಲ್ಲೆಯ ರೈತ ಮುಖಂಡ ಎಚ್.ಆರ್‌.ನವೀನ್‌ಕುಮಾರ್ ಪ್ರತಿಕ್ರಿಯೆ ನೀಡಿ, “ಸ್ವಾತಂತ್ರ್ಯದ ಅಮೃತ ಮಹೋತ್ಸವದ ಹೆಸರಲ್ಲಿ ರಾಜ್ಯ ಮತ್ತು ಕೇಂದ್ರ ಸರ್ಕಾರಗಳು ಜನರನ್ನು ಮರಳು ಮಾಡುತ್ತಿವೆ. ಭಾವನಾತ್ಮಕವಾಗಿ ಸೆಳೆಯಲು ಬಾವುಟದ ವಿಚಾರವನ್ನು ತರುತ್ತಿದ್ದಾರೆ. ಜನರ ನೈಜ ಸಮಸ್ಯೆಗಳನ್ನು ವ್ಯವಸ್ಥಿತವಾಗಿ ಮರೆಮಾಚಲು ಹರ್‌ ಘರ್‌ ತಿರಂಗ ಎಂಬ ಕಾರ್ಯಕ್ರಮವನ್ನು ಬಳಸಿಕೊಳ್ಳಲಾಗುತ್ತಿದೆ” ಎಂದು ವಿಷಾದಿಸಿದರು.

ಇದನ್ನೂ ಓದಿರಿ: ಪ್ರತಿ ಮನೆಯಲ್ಲಿ ತ್ರಿವರ್ಣ ಧ್ವಜ ಹಾರಿಸಲು ಪ್ರಧಾನಿ ಮೋದಿ ಕರೆ: ಮನೆಯೇ ಇಲ್ಲದವರು ಏನು ಮಾಡಬೇಕು?

“ಒಂದು ಕಾರ್ಟೂನ್‌ ನೋಡಿದೆ. ನನಗೂ ತಿರಂಗ ಹಾರಿಸಲು ಇಷ್ಟ. ಆದರೆ ಮನೆಯಿಲ್ಲ. ಮೊದಲು ಮನೆ ನಿರ್ಮಿಸಿಕೊಡಿ ಎಂದು ಆ ಕಾರ್ಟೂನ್ ಆಗ್ರಹಿಸಿತ್ತು. ಸರ್ಕಾರ ಜನರ ನೈಜ ಪ್ರಶ್ನೆಗಳಿಗೆ ಗಮನ ಕೊಡುತ್ತಿಲ್ಲ. ಬೆಲೆ ಏರಿಕೆ, ಶಿಕ್ಷಣದ ಖಾಸಗೀಕರಣ, ಪಠ್ಯಪುಸ್ತಕಗಳ ಅಧ್ವಾನ ಮೊದಲಾದ ಸಮಸ್ಯೆಗಳಿಂದ ತಪ್ಪಿಸಿಕೊಳ್ಳಲು, ಜನರನ್ನು ಬೇರೆ ದಿಕ್ಕಿಗೆ ತಿರುಗಿಸಲು ಯತ್ನಿಸುತ್ತಿದ್ದಾರೆ. ಭಾವುಟ, ಸೈನಿಕರು, ದೇಶಭಕ್ತಿ- ಇವೆಲ್ಲವೂ ಭಾವನಾತ್ಮಕ ಸಂಗತಿಗಳು. ಇವುಗಳ ಬಗ್ಗೆ ಮಾತನಾಡಿದರೆ ದೇಶದ್ರೋಹ ಎಂಬ ಮನಸ್ಥಿತಿಯನ್ನು ಬೆಳೆಸಲಾಗುತ್ತಿದೆ” ಎಂದು ಬೇಸರ ವ್ಯಕ್ತಪಡಿಸಿದರು.

“ದೇಶಭಕ್ತಿ ಬಗ್ಗೆ ಮಾತನಾಡೋರು ಕರ್ನಾಟಕದ ಖಾದಿ ಉದ್ಯಮಕ್ಕೆ ಪ್ರೋತ್ಸಾಹ ಕೊಡಬೇಕಿತ್ತು. ನಿಜವಾಗಿಯೂ ಇವರಿಗೆ ದೇಶಭಕ್ತಿ ಇದ್ದರೆ ತ್ರಿವರ್ಣಧ್ವಜದ ಜೊತೆಗೆ ಸಂವಿಧಾನ ಒಂದು ಪ್ರತಿಯನ್ನು ಉಚಿತವಾಗಿ ಹಂಚಲಿ. ದುಡ್ಡು ಪಡೆದು ಬಾವುಟವನ್ನು ಮಾರುತ್ತಿರುವುದು ದೇಶಭಕ್ತಿಯೂ ಅಲ್ಲ, ಅಮೃತ ಮಹೋತ್ಸವಕ್ಕೆ ಕೊಡುತ್ತಿರುವ ಗೌರವವೂ ಅಲ್ಲ” ಎಂದು ಅಭಿಪ್ರಾಯಪಟ್ಟರು.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

  1. ಸರ್ ನಮಸ್ತೆ…ಇದು ಕೇವಲ ಪದವಿಪೂರ್ವ ಇಲಾಖೆ ಮಾತ್ರವಲ್ಲ ಎಲ್ಲಾ ಇಲಾಖೆಗಳು ,ಕಛೇರಿಗಳ ಕತೆಯೂ ಹೀಗೆಯೇ ಇದೆ..ಪ್ರಥಮ ದರ್ಜೆ ಕಾಲೇಜುಗಳಿಗೂ ಹೀಗೆಯೆ ಸುತ್ತೊಲೆ ಇದೆ ಜೊತೆಗೆ ಎನ್ ಎಸ್ ಎಸ್ ಘಟಕಗಳು ಇದರ ಹಿಂದೆ ಬಿದ್ದು ಕೊಳ್ಳುವಂತೆ ಸೂಚಿಸುತ್ತಿವೆ ಅದನ್ನು ಮಾರಲು ಕಾಲೇಜುಗಳು ವಿದ್ಯಾರ್ಥಿಗಳನ್ನ ಮನೆ ಮನೆಗೆ ಕಳುಹಿಸಿ ಮನೆಯವರಿಗೆ ಮಾರಿ ಫೋಟೊ ತೆಗೆದು ಗುಂಪುಗಳಲದಲಿ ಹಾಕುತ್ತಿದ್ದಾರೆ…ಎಲ್ಲಾ ಆಷಾಢಭೂತಿತನವಷ್ಟೆ.ಮಂಗ ಮಾಡ್ತಾ ಇದಾರೆ ಜನರನ್ನು

LEAVE A REPLY

Please enter your comment!
Please enter your name here

- Advertisment -

‘ಸಾವರ್ಕರ್ ದೇವರನ್ನು, ಧಾರ್ಮಿಕ ನಂಬಿಕೆಗಳನ್ನು ಪ್ರಶ್ನಿಸಿದ್ದರು’: ಪುಣೆ ನ್ಯಾಯಾಲಯದಲ್ಲಿ ಮೊಮ್ಮಗ ಸತ್ಯಕಿ ಸಾವರ್ಕರ್ ಒಪ್ಪಿಗೆ

ಪುಣೆ: ಕಾಂಗ್ರೆಸ್ ನಾಯಕ ಹಾಗೂ ಸಂಸತ್ತಿನ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯ ವಿಚಾರಣೆಯು ಅತ್ಯಂತ ಕುತೂಹಲಕಾರಿ ಮತ್ತು ರಾಜಕೀಯ-ಸೈದ್ಧಾಂತಿಕ ತಿರುವನ್ನು ಪಡೆದುಕೊಂಡಿದೆ. ವಿನಾಯಕ ದಾಮೋದರ್...

ಮಾಜಿ ಸಚಿವ ಧರ್ಮೇಂದ್ರ ಪ್ರಧಾನ್ ಮಗಳ ಫೋನ್ ಬಿಲ್ ವಿವಾದ: ₹68 ಸಾವಿರ ಬಿಲ್-ಪೇ ಆಗಿದ್ದು ಸರ್ಕಾರಿ ಹಣದಲ್ಲಾ?

ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ಪುತ್ರಿ ನೈಮಿಷಾ ಪ್ರಧಾನ್ ಅವರು ಮತ್ತೊಮ್ಮೆ ವಿವಾದದ ಕೇಂದ್ರಬಿಂದುವಾಗಿದ್ದಾರೆ. ವಾರಗಳ ಹಿಂದೆ ನೀಟ್ ಪರೀಕ್ಷೆಯ ಪತ್ರಿಕೆ ಸೋರಿಕೆ ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ...

ಇರಾನ್ ವಸತಿ ಕಟ್ಟಡದ ಮೇಲೆ ಅಮೆರಿಕಾ ದಾಳಿ: ಎರಡು ವರ್ಷದ ಮಗು ಸೇರಿ ಒಂದೇ ಕುಟುಂಬದ ಮೂವರ ಸಾವು

ಮಧ್ಯಪ್ರಾಚ್ಯದಲ್ಲಿ ಅಮೆರಿಕ ತನ್ನ ಸಾಮ್ರಾಜ್ಯಶಾಹಿ ಆಧಿಪತ್ಯ ಸ್ಥಾಪನೆಗಾಗಿ ನಡೆಸುತ್ತಿರುವ ಯುದ್ಧಕೋರ ನೀತಿ ಮತ್ತೊಮ್ಮೆ ನಿರಪರಾಧಿ ಸಾರ್ವಜನಿಕರ ರಕ್ತ ಹರಿಸಿದೆ. ಇರಾನ್ ಮೇಲಿನ ಅಮೆರಿಕ ಪಡೆಗಳ ಸರಣಿ ಮತ್ತು ಭೀಕರ ಬಾಂಬ್ ದಾಳಿಗಳು ಕೇವಲ...

SIR: ASDDO ಪಟ್ಟಿಯಲ್ಲಿ ಬೆಂಗಳೂರಿಗೆ ಪ್ರಥಮ ಸ್ಥಾನ, ರಾಜ್ಯದಲ್ಲಿ 2 ಕೋಟಿ ಮತದಾರರ ಹೆಸರು ರದ್ದಾಗುವ ಬೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ರಾಜಧಾನಿ ಬೆಂಗಳೂರು ಅತ್ಯಂತ ಪ್ರಮುಖ ಹಾಗೂ ಕಳವಳಕಾರಿ ಕೇಂದ್ರವಾಗಿ ಹೊರಹೊಮ್ಮಿದೆ. ರಾಜ್ಯದಲ್ಲಿರುವ ಒಟ್ಟು 5.54 ಕೋಟಿ ನೋಂದಾಯಿತ ಮತದಾರರ ಪೈಕಿ...

ಉಮರ್ ಖಾಲಿದ್ ಜಾಮೀನು ಅರ್ಜಿ; ಪೊಲೀಸರ ನಿಲುವು ಕೇಳಿದ ದೆಹಲಿ ಹೈಕೋರ್ಟ್

ಫೆಬ್ರವರಿ 2020 ರಲ್ಲಿ ಈಶಾನ್ಯ ದೆಹಲಿಯಲ್ಲಿ ನಡೆದ ಗಲಭೆಯ ಹಿಂದಿನ "ದೊಡ್ಡ ಪಿತೂರಿ"ಗೆ ಸಂಬಂಧಿಸಿದಂತೆ ಭಯೋತ್ಪಾದನಾ ವಿರೋಧಿ ಕಾನೂನು ಯುಎಪಿಎ ಅಡಿಯಲ್ಲಿ ಪ್ರಕರಣದಲ್ಲಿ ಜಾಮೀನು ಕೋರಿ ಉಮರ್ ಖಾಲಿದ್ ಸಲ್ಲಿಸಿದ ಅರ್ಜಿಯ ಕುರಿತು...

ಮುಂಬೈ: ‘ಶಾಲಾ ಜಿಹಾದ್’ ಎಂಬ ಬಿಜೆಪಿ ನಾಯಕನ ಕೋಮುದ್ವೇಷಕ್ಕೆ ಶಾಲೆಗೆ ನುಗ್ಗಿದ ಬುಲ್ಡೋಜರ್: ಬಿಎಂಸಿಗೆ ಚಾಟಿ ಬೀಸಿದ ಬಾಂಬೆ ಹೈಕೋರ್ಟ್

ಬಿಜೆಪಿ ನಾಯಕ ಕಿರೀಟ್ ಸೋಮಯ್ಯ ಅವರ “ಶಾಲಾ ಜಿಹಾದ್” ಎಂಬ ವಿಷಕಾರಿ ಹೇಳಿಕೆಯ ನಂತರ ಮುಂಬೈನ ಗೋವಂಡಿಯಲ್ಲಿ ಬಡ ಮುಸ್ಲಿಂ ಮಕ್ಕಳ ಶಿಕ್ಷಣದ ಆಶಾಕಿರಣವಾಗಿದ್ದ ತೆಹ್ಜೀಬ್ ಇಸ್ಲಾಮಿಕ್ ಇಂಗ್ಲಿಷ್ ಶಾಲೆಯನ್ನು ಬೃಹನ್ಮುಂಬೈ ಮುನ್ಸಿಪಲ್...

ಹಾಕಿ ತಂಡಕ್ಕೆ ಕೇಸರಿ ಜರ್ಸಿ: ‘ನಮ್ಮ ಗುರುತೇ ನೀಲಿ, ಕೇಸರಿ ಬಣ್ಣದ ತರ್ಕವೇನು?’: ಮಾಜಿ ಹಾಕಿ ಪಟು ಆಕ್ರೋಶ: ಬಿಜೆಪಿ ನಡೆಗೆ ವಿಪಕ್ಷಗಳ ಟೀಕೆ

ಭಾರತೀಯ ಕ್ರೀಡಾರಂಗದ ಹೆಮ್ಮೆಯ ಸಾಂಪ್ರದಾಯಿಕ 'ನೀಲಿ' (ಬ್ಲೂ) ಬಣ್ಣವನ್ನು ಕಳಚಿ, ಹಾಕಿ ತಂಡಕ್ಕೆ ಬಲವಂತವಾಗಿ ಕೇಸರಿ ಬಣ್ಣದ ಜೆರ್ಸಿ ತೊಡಿಸಲು ಹೊರಟಿರುವುದು ಇದೀಗ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ಮುಂಬರುವ ಎಫ್‌ಐಎಚ್ (FIH) ವಿಶ್ವಕಪ್‌ಗಾಗಿ...

ತಮಿಳುನಾಡು: ಶಾಲಾ ಮಕ್ಕಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡಲು ಚಿಂತನೆ

ತಮಿಳುನಾಡಿನ ಸರ್ಕಾರಿ ಶಾಲೆಗಳ ಮಧ್ಯಾಹ್ನದ ಬಿಸಿಊಟದ ಯೋಜನೆಯಡಿಯಲ್ಲಿ ವಿದ್ಯಾರ್ಥಿಗಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡುವ ಪ್ರಸ್ತಾವನೆಯನ್ನು ತಮಿಳುನಾಡು ಸರ್ಕಾರ ಪರಿಶೀಲಿಸುತ್ತಿದ್ದು, ಶಾಲಾ ಶಿಕ್ಷಣ ಸಚಿವ ರಾಜ್‌ಮೋಹನ್ ಅವರು ಈ ಕುರಿತು ಮುಖ್ಯಮಂತ್ರಿ ಸಿ....

ಪ್ರಶ್ನೆಪತ್ರಿಕೆ ಸೋರಿಕೆ ವಿರೋಧಿ ಮಸೂದೆಯಲ್ಲಿ ಸುಧಾರಣೆಗಳಿಲ್ಲ, ರಾಜಕೀಯ ಮಾತ್ರ: ಕೇಂದ್ರದ ವಿರುದ್ಧ ಖರ್ಗೆ ವಾಗ್ದಾಳಿ

ಪಬ್ಲಿಕ್ ಪರೀಕ್ಷೆಗಳ (ಅನ್ಯಾಯಯುತ ವಿಧಾನಗಳ ತಡೆಗಟ್ಟುವಿಕೆ) ತಿದ್ದುಪಡಿ ಮಸೂದೆ 2026 ರ ಚರ್ಚೆಯ ಸಂದರ್ಭದಲ್ಲಿ ಮಾತನಾಡಿದ ರಾಜ್ಯಸಭೆ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ಕೇಂದ್ರ ಸರ್ಕಾರದ ಮೇಲೆ ತೀವ್ರ ವಾಗ್ದಾಳಿ ನಡೆಸಿದರು....

ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಕೆ ಆರೋಪ; ಗೃಹ ಸಚಿವ ಅಮಿತ್‌ ಶಾ ಮೌನ ಪ್ರಶ್ನಿಸಿದ ಕಪಿಲ್ ಸಿಬಲ್

ಜುಲೈ 20 ರಂದು ದೆಹಲಿಯಲ್ಲಿ ನಡೆದ ಸಂಶತ್ ಚಲೋ ಪ್ರತಿಭಟನಾ ಮೆರವಣಿಗೆಯಲ್ಲಿ ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಸಲಾಗಿದೆ ಎಂಬ ಆರೋಪದ ಬಗ್ಗೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ಮೌನವನ್ನು...