Homeಕರ್ನಾಟಕಕರ್ನಾಟಕ: ಒಂದುವರೆ ವರ್ಷದಲ್ಲಿ 746 ರೈತರ ಆತ್ಮಹತ್ಯೆ; ದೇಶದಲ್ಲೇ 2ನೇ ಸ್ಥಾನ

ಕರ್ನಾಟಕ: ಒಂದುವರೆ ವರ್ಷದಲ್ಲಿ 746 ರೈತರ ಆತ್ಮಹತ್ಯೆ; ದೇಶದಲ್ಲೇ 2ನೇ ಸ್ಥಾನ

- Advertisement -
- Advertisement -

ದೇಶದಾದ್ಯಂತ ವಿವಿಧ ರೀತಿಯ ಕಾರಣಗಳು ಹಾಗೂ ಸರ್ಕಾರಗಳು ಧೋರಣೆಗಳಿಂದಾಗಿ ರೈತರ ಆತ್ಮಹತ್ಯೆ ಪ್ರಕರಣಗಳು ನಡೆಯುತ್ತಲೇ ಇವೆ. ಕೊರೊನಾ, ಲಾಕ್‌ಡೌನ್‌ ಸಂದರ್ಭದಲ್ಲಿಯೂ ರೈತರ ಆತ್ಮಹತ್ಯೆ ಪ್ರಕರಣಗಳು ವರದಿಯಾಗಿದ್ದು, ರಾಜ್ಯದಲ್ಲಿ ಕಳೆದ ಒಂದೂವರೆ ವರ್ಷದಲ್ಲಿ 746 ರೈತ ಆತ್ಮಹತ್ಯೆಗಳು ವರದಿಯಾಗಿವೆ ಎಂದು ಸರ್ಕಾರದ ಅಂಕಿ-ಅಂಶಗಳಿಂದ ತಿಳಿದು ಬಂದಿದೆ.

ಕೃಷಿ ಇಲಾಖೆ ಬಿಡುಗಡೆ ಮಾಡಿರುವ ಮಾಹಿತಿ ಪ್ರಕಾರ, ಏಪ್ರಿಲ್ 2020 ಹಾಗೂ ಸೆಪ್ಟೆಂಬರ್ 2021ರ ನಡುವೆ 746 ರೈತರು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. 2019-20ರ ವರ್ಷದಲ್ಲಿ 1076 ರೈತ ಆತ್ಮಹತ್ಯಾ ಪ್ರಕರಣಗಳು ವರದಿಯಾಗಿದ್ದವು. ವರದಿಯಾಗಿರುವ ಪ್ರಕರಣಗಳಲ್ಲಿ ಉತ್ತರ ಕರ್ನಾಟಕ, ಮೈಸೂರು, ಚಿಕ್ಕಮಗಳೂರು ಜಿಲ್ಲೆಗಳಲ್ಲಿ ರೈತ ಆತ್ಮಹತ್ಯೆ ಪ್ರಕಟಣಗಳು ಹೆಚ್ಚಾಗಿವೆ ಎಂದು ತಿಳಿದು ಬಂದಿದೆ.

ಇದನ್ನೂ ಓದಿ: ರೈತ ಹೋರಾಟದ ನೆಲದಲ್ಲಿ ಹತ್ಯೆ: ಮೃತ ವ್ಯಕ್ತಿಯ ಗ್ರಾಮಕ್ಕೆ ಪದೇ ಪದೇ ಭೇಟಿ ನೀಡುತ್ತಿದ್ದ ಕೊಲೆ ಆರೋಪಿ

“ಕಳೆದ ಎರಡು ವರ್ಷಗಳಲ್ಲಿ ರಾಜ್ಯದಲ್ಲಿ ಉತ್ತಮ ಮಳೆಯಾಗುತ್ತಿದೆ. ಇದರಿಂದ ಅಂತರ್ಜಲದ ಮಟ್ಟ ಗಣನೀಯವಾಗಿ ಏರಿಕೆ ಕಂಡಿದೆ. ಉತ್ತಮ ಮಳೆಯು ರೈತರಲ್ಲಿ ಸಂಕಷ್ಟವನ್ನು ಕಡಿಮೆ ಮಾಡಿದೆ. ಇದು, ಕೆಳೆದ ವರ್ಷಕ್ಕಿಂತ ಈ ವರ್ಷ ರೈತರ ಆತ್ಮಹತ್ಯೆ ಪ್ರಕರಣಗಳು ಕಡಿಮೆಯಾಗಲು ಒಂದು ಕಾರಣವಾಗಿದೆ” ಎಂದು ರಾಜ್ಯ ನೈಸರ್ಗಿಕ ವಿಪತ್ತು ಮತ್ತು ನಿರ್ವಹಣಾ ಕೇಂದ್ರದ ಮಾಜಿ ನಿರ್ದೇಶಕ ಶ್ರೀನಿವಾಸರೆಡ್ಡಿ ಹೇಳಿದ್ದಾರೆ.

ಮಾತ್ರವಲ್ಲದೆ, ರೈತರು ಸಾಮಾಜಿಕ, ಆರ್ಥಿಕ ಸಮಸ್ಯೆ ಸೇರಿದಂತೆ ಹಲವು ಇತರೆ ಸಮಸ್ಯಗಳನ್ನು ಎದುರಿಸುತ್ತಿದ್ದಾರೆ. ಇದೆಲ್ಲರ ನಡುವೆಯೂ, ಉತ್ತಮ ಮಳೆಯಿಂದಾಗಿ ರಾಜ್ಯವು 150 ಲಕ್ಷ ಟನ್‌ಗಳಿಗಿಂತ ಹೆಚ್ಚು ಆಹಾರ ಧಾನ್ಯಗಳನ್ನು ಉತ್ಪಾದಿಸಿದೆ ಎಂದು ಅವರು ಹೇಳಿದ್ದಾರೆ.

ನಾವು ಕಳೆದ ಎರಡು ವರ್ಷಗಳಲ್ಲಿ 10 ಲಕ್ಷ ಟನ್‌ಗಳಷ್ಟು ಕಡಿಮೆ ಗುಣಮಟ್ಟದ ಬಿತ್ತನೆ ಬೀಜಗಳನ್ನು ವಶಪಡಿಸಿಕೊಂಡಿದ್ದೇವೆ. ಅಂತಹ ಬೀಜಗಳನ್ನು ಮಾರಾಟ ಮಾಡುವವವರು ಮತ್ತು ಕಂಪನಿಗಳ ವಿರುದ್ಧ ಎಫ್‌ಐಆರ್ ದಾಖಲಾಗಿದೆ. ಬೀಜಗಳ ಗುಣಮಟ್ಟ ಕಳಪೆಯಾಗಿದ್ದರೆ ಇಳುವರಿ ಕಡಿಮೆಯಾಗುತ್ತದೆ ಎಂದು ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

ಇದನ್ನೂ ಓದಿ: ಲಖ್ಬೀರ್ ಹತ್ಯೆ ಪ್ರಕರಣ: ರೈತ ಸಂಘಟನೆಗಳ‌ ಹೊಣೆಯ ಕುರಿತು ಎರಡು ನೋಟಗಳು

ರೈತರ ಆತ್ಮಹತ್ಯೆ ಪ್ರಕರಣದಲ್ಲಿ ಕರ್ನಾಟಕಕ್ಕೆ 2ನೇ ಸ್ಥಾನ

2020ರಲ್ಲಿ ದೇಶದಲ್ಲಿ ಒಟ್ಟು 10,281 ರೈತರು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಈ ಪ್ರಕರಣಗಳ ಪೈಕಿ ಕರ್ನಾಟಕವು 2ನೇ ಸ್ಥಾನದಲ್ಲಿದೆ ಎಂದು ರಾಷ್ಟ್ರೀಯ ಅಪರಾಧ ದಾಖಲೆ ವಿಭಾಗ (ಎನ್‌ಸಿಆರ್‌ಬಿ) ಬಿಡುಗಡೆ ಮಾಡಿರುವ ಅಂಕಿ- ಅಂಶಗಳಿಂದ ತಿಳಿದುಬಂದಿದೆ. 2020ರಲ್ಲಿ 1076 ರೈತರು ಆತ್ಮಹತ್ಯೆಗೆ ಬಲಿಯಾಗಿದ್ದಾರೆ.

2019ರಲ್ಲಿ ಕರ್ನಾಟಕದಲ್ಲಿ 1,992 ಮಂದಿ ರೈತರು ಆತ್ಮಹತ್ಯೆಗೆ ಶರಣಾಗಿದ್ದಾರೆ. 2018ರಲ್ಲಿ 2,405 ರೈತರು ಸಾವಿಗೆ ಶರಣಾಗಿದ್ದರು. 2017ರಲ್ಲಿ ಕರ್ನಾಟಕದಲ್ಲಿ 2079 ಮಂದಿ, 2016ರಲ್ಲಿ 2,160 ರೈತರು ಆತ್ಮಹತ್ಯೆ ಮಾಡಿಕೊಂಡಿದ್ದರು.

ರೈತರ ಆತ್ಮಹತ್ಯೆಯಲ್ಲಿ ಮಹಾರಾಷ್ಟ್ರ ಮೊದಲ ಸ್ಥಾನದಲ್ಲಿದೆ. 2020ರಲ್ಲಿ 3,927 ರೈತರು ಅಲ್ಲಿ ಸಾವಿಗೆ ಶರಣಾಗಿದ್ದಾರೆ. ಮೂರನೇ ಸ್ಥಾನದಲ್ಲಿರುವ ಆಂಧ್ರ ಪ್ರದೇಶವಿದ್ದು, 1,029 ರೈತರು ಪ್ರಾಣ ಕಳೆದುಕೊಂಡಿದ್ದಾರೆ.

2018ರಲ್ಲಿ ಸಂಭವಿಸಿದ 10,349 ರೈತರ ಆತ್ಮಹತ್ಯೆಗೆ ಹೋಲಿಸಿದರೆ ದೇಶದಲ್ಲಿ ರೈತರ ಆತ್ಮಹತ್ಯೆ ಪ್ರಮಾಣ ಕೊಂಚ ಇಳಿಕೆ ಕಂಡಿದೆ. 2017ರಲ್ಲಿ 10,665, 2016 ರಲ್ಲಿ 11,379 ಮಂದಿ ರೈತರು ಪ್ರಾಣ ಕಳೆದುಕೊಂಡಿದ್ದರು.

ಇದನ್ನೂ ಓದಿ: ಮಾನಸಿಕ ದೌರ್ಬಲ್ಯವಿರುವ ರೈತರು ಆತ್ಮಹತ್ಯೆ ಮಾಡಿಕೊಳ್ಳುತ್ತಿದ್ದಾರೆ: ನಾಲಗೆ ಹರಿಬಿಟ್ಟ ಬಿ.ಸಿ ಪಾಟೀಲ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

2020ರ ದೆಹಲಿ ಗಲಭೆ ಪ್ರಕರಣ: ಐವರು ಆರೋಪಿಗಳನ್ನು ಖುಲಾಸೆಗೊಳಿಸಿದ ನ್ಯಾಯಾಲಯ

2020 ರ ದೆಹಲಿ ಗಲಭೆಗೆ ಸಂಬಂಧಿಸಿದಂತೆ ಬೆಂಕಿ ಹಚ್ಚುವಿಕೆ, ಗಲಭೆ ಮತ್ತು ವಿಧ್ವಂಸಕ ಕೃತ್ಯದ ಆರೋಪ ಹೊತ್ತಿರುವ ಐವರನ್ನು ನ್ಯಾಯಾಲಯ ಖುಲಾಸೆಗೊಳಿಸಿದೆ. ಅಬ್ದುಲ್ ಸತ್ತಾರ್, ಮುಹಮ್ಮದ್ ಖಾಲಿದ್, ಹುನೈನ್, ತನ್ವೀರ್ ಮತ್ತು ಆರಿಫ್ ವಿರುದ್ಧದ...

ಕಾರ್‌ ಚಲಾಯಿಸುವಾಗ ಫೋನ್‌ನಲ್ಲಿ ಮಾತನಾಡದಂತೆ ಹೇಳಿದ್ದಕ್ಕೆ ಪತ್ರಕರ್ತನ ಮೇಲೆ ರಾಡ್‌ನಿಂದ ಹಲ್ಲೆ

ಆ್ಯಪ್ ಆಧಾರಿತ ಟ್ಯಾಕ್ಸಿ ಬುಕಿಂಗ್‌ ಮಾಡುವ ಪ್ರಯಾಣಿಕರ ಸುರಕ್ಷತೆ ಮತ್ತು ಚಾಲಕರ ನಡವಳಿಕೆಯ ಕುರಿತ ಕಳವಳವಳಕಾರಿ ಘಟನೆಯೊಂದು ಹರಿಯಾಣದ ಫರಿದಾಬಾದ್‌ನಲ್ಲಿ ಬೆಳಕಿಗೆ ಬಂದಿದೆ. ರ್ಯಾಪಿಡೋ ಟ್ಯಾಕ್ಸಿ ಚಾಲಕನೊಬ್ಬ ಪ್ರಯಾಣಿಕನ ಮೇಲೆ ಕಬ್ಬಿಣದ ರಾಡ್‌ನಿಂದ...

ರಾಜಸ್ಥಾನ| ಎಥೆನಾಲ್ ಸ್ಥಾವರದ ವಿರುದ್ಧ ಪ್ರತಿಭಟನೆ: 40 ಜನರ ಬಂಧನ

ರಾಜಸ್ಥಾನದ ಹನುಮಾನ್‌ಗಢ ಜಿಲ್ಲೆಯ ರೈತರು, ಪ್ರಸ್ತಾವಿತ ಎಥೆನಾಲ್ ಕಾರ್ಖಾನೆಯ ವಿರುದ್ಧ ಎರಡನೇ ದಿನವೂ ಪ್ರತಿಭಟನೆ ಮುಂದುವರೆಸಿದ್ದಾರೆ, ಈ ಪ್ರದೇಶದಲ್ಲಿ ಹೆಚ್ಚಿನ ಭದ್ರತೆ ಮತ್ತು ಇಂಟರ್ನೆಟ್ ಸೇವೆಗಳನ್ನು ಸ್ಥಗಿತಗೊಳಿಸಲಾಗಿದೆ. ಗುರುವಾರ ಮುಂಜಾನೆ ಟಿಬ್ಬಿ ಬಳಿಯ ಗುರುದ್ವಾರದಲ್ಲಿ...

ವಿಧಾನಸಭೆಯಲ್ಲಿ ‘ಗೃಹಲಕ್ಷ್ಮಿ’ ಗದ್ದಲ : ಬಿಜೆಪಿ ಸದಸ್ಯರಿಂದ ಸಭಾತ್ಯಾಗ, ಕ್ಷಮೆ ಕೋರಿದ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್

ಗೃಹಲಕ್ಷಿ ಯೋಜನೆಯ ಹಣ ಬಿಡುಗಡೆ ಸಂಬಂಧ ಸಚಿವರು ಸದನಕ್ಕೆ ತಪ್ಪು ಮಾಹಿತಿ ನೀಡಿದ್ದಾರೆ ಎಂಬ ವಿಚಾರ ಇಂದು (ಡಿ.17 ಬುಧವಾರ) ವಿಧಾನಸಭೆಯಲ್ಲಿ ದೊಡ್ಡ ಮಟ್ಟದ ವಾಗ್ವಾದ, ಆರೋಪ-ಪ್ರತ್ಯಾರೋಪ, ಗದ್ದಲ, ಪ್ರತಿಭಟನೆ, ಸಭಾತ್ಯಾಗ ಮತ್ತು...

ತಂಪು ಪಾನೀಯದಲ್ಲಿ ಮತ್ತು ಬರುವ ಔಷಧ ಬೆರೆಸಿ ಅಪ್ರಾಪ್ತ ಬಾಲಕಿಯರ ಮೇಲೆ ಅತ್ಯಾಚಾರ: ಆರೋಪಿ ಬಂಧನ

ಮುಂಬೈ ನಗರವನ್ನೇ ಬೆಚ್ಚಿಬೀಳಿಸಿದ ಆಘಾತಕಾರಿ ಘಟನೆಯಲ್ಲಿ, ವಕ್ತಿಯೋರ್ವ ಮತ್ತು ಬರುವ ತಂಪು ಪಾನೀಯ ನೀಡಿ ಅಪ್ರಾಪ್ತ ಬಾಲಕಿಯರ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ್ದಾನೆ. ಅಪರಾಧದ ಅಶ್ಲೀಲ ವೀಡಿಯೊಗಳನ್ನು ರೆಕಾರ್ಡ್ ಮಾಡಿ, ನಂತರ ವೀಡಿಯೊಗಳನ್ನು...

ಮನರೇಗಾ ಬದಲು ವಿಬಿ-ಜಿ ರಾಮ್ ಜಿ : ಲೋಕಸಭೆಯಲ್ಲಿ ಮಸೂದೆ ಅಂಗೀಕಾರದ ವೇಳೆ ಸಭಾತ್ಯಾಗಕ್ಕೆ ನಿರ್ಧರಿಸಿದ ವಿಪಕ್ಷಗಳು

ನರೇಗಾ ಬದಲು ತಂದಿರುವ ವಿಕಸಿತ್ ಭಾರತ್-ಗ್ಯಾರಂಟಿ ಫಾರ್ ರೋಜ್‌ಗಾರ್ ಅಂಡ್ ಅಜೀವಿಕಾ ಮಿಷನ್ (ಗ್ರಾಮೀಣ್) ಮಸೂದೆ, 2025 (ವಿಬಿ–ಜಿ ರಾಮ್ ಜಿ ಮಸೂದೆ) ಲೋಕಸಭೆಯಲ್ಲಿ ಅಂಗೀಕಾರದ ವೇಳೆ ಸಹಕರಿಸದಿರಲು ವಿರೋಧ ಪಕ್ಷಗಳ ಸಂಸದರು...

ಅಪ್ರಾಪ್ತ ಬಾಲಕಿ ಮೇಲೆ ಅತ್ಯಾಚಾರ ಆರೋಪ: ಮ್ಯೂಸಿಕ್ ಮೈಲಾರಿ ಮೇಲೆ ಪೋಕ್ಸೋ ಪ್ರಕರಣ ದಾಖಲು 

ಬೆಂಗಳೂರು: ಉತ್ತರ ಕರ್ನಾಟಕದ ಜನಪದ ಗಾಯಕ ಹಾಗೂ ಯೂಟ್ಯೂಬ್ ಸ್ಟಾರ್ ಎಂದೇ ಖ್ಯಾತಿ ಪಡೆದಿದ್ದ ‘ಮ್ಯೂಸಿಕ್ ಮೈಲಾರಿ’ಎಂಬಾತನನ್ನು ಅಪ್ರಾಪ್ತೆ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪದಡಿ ಮಹಾಲಿಂಗಪುರ ಪೊಲೀಸರು ಬಂಧಿಸಿದ್ದಾರೆ. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಮೈಲಾರಿ...

ಇಂಧನ ಖರೀದಿಗೆ ‘ಮಾಲಿನ್ಯ ನಿಯಂತ್ರಣ ಪ್ರಮಾಣಪತ್ರ’ ಕಡ್ಡಾಯಗೊಳಿಸಿದ ದೆಹಲಿ ಸರ್ಕಾರ

ರಾಷ್ಟ್ರ ರಾಜಧಾನಿ ದೆಹಲಿಯ ವಾಹನ ಮಾಲೀಕರು ಕಟ್ಟುನಿಟ್ಟಾದ ಆದೇಶ ಎದುರಿಸುತ್ತಾರೆ. ಡಿಸೆಂಬರ್ 18 ರಿಂದ ನಗರದಾದ್ಯಂತದ ಪೆಟ್ರೋಲ್ ಬಂಕ್‌ಗಳಲ್ಲಿ ಇಂಧನ ಖರೀದಿಗೆ ಮಾಲಿನ್ಯ ನಿಯಂತ್ರಣ ಪ್ರಮಾಣಪತ್ರ (ಪಿಯುಸಿ) ಕಡ್ಡಾಯಗೊಳಿಸಲಾಗಿದೆ. ದೆಹಲಿ ಪರಿಸರ ಸಚಿವ ಮಂಜಿಂದರ್...

ವೈದ್ಯೆಯ ಹಿಜಾಬ್ ಎಳೆದ ಬಿಹಾರ ಸಿಎಂ, ಅವಹೇಳನ ಮಾಡಿದ ಯುಪಿ ಸಚಿವನ ವಿರುದ್ದ ದೂರು ದಾಖಲು

ವೈದ್ಯೆಯ ಹಿಜಾಬ್ ಎಳೆದ ಬಿಹಾರದ ಮುಖ್ಯಮಂತ್ರಿ ನಿತೀಶ್ ಕುಮಾರ್ ಮತ್ತು ಈ ಘಟನೆಯ ಕುರಿತು ಮಾತನಾಡುವಾಗ ಮಹಿಳೆಯನ್ನು ಅವಮಾನಿಸಿದ ಉತ್ತರ ಪ್ರದೇಶದ ಸಂಪುಟ ಸಚಿವ ಸಂಜಯ್ ನಿಶಾದ್ ವಿರುದ್ದ ಲಕ್ನೋದ ಕೈಸರ್‌ಬಾಗ್ ಪೊಲೀಸ್...

1 ಲಕ್ಷ ರೂಪಾಯಿ ಸಾಲ 74 ಲಕ್ಷ ರೂಪಾಯಿಗೆ ಏರಿಕೆ, ಸಾಲ ತೀರಿಸಲು ಕಿಡ್ನಿ ಮಾರಿದ ರೈತ 

ಅಕ್ರಮವಾಗಿ ಸಾಲ ನೀಡುವವರಿಂದ 1 ಲಕ್ಷ ಸಾಲ ಪಡೆದಿದ್ದು, ಅದಕ್ಕೆ ಹೆಚ್ಚಿನ ದಿನದ ಬಡ್ಡಿ ಸೇರಿ 75 ಲಕ್ಷ ಸಾಲ ಏರಿಕೆಯಾದ ಕಾರಣ ವ್ಯಕ್ತಿಯೊಬ್ಬ ತನ್ನ ಕಿಡ್ನಿಯನ್ನೇ ಮಾರಾಟ ಮಾಡಿರುವ ಘಟನೆ ಮಹಾರಾಷ್ಟ್ರದಲ್ಲಿ...