Homeಕರ್ನಾಟಕಕರ್ನಾಟಕ: ಒಂದುವರೆ ವರ್ಷದಲ್ಲಿ 746 ರೈತರ ಆತ್ಮಹತ್ಯೆ; ದೇಶದಲ್ಲೇ 2ನೇ ಸ್ಥಾನ

ಕರ್ನಾಟಕ: ಒಂದುವರೆ ವರ್ಷದಲ್ಲಿ 746 ರೈತರ ಆತ್ಮಹತ್ಯೆ; ದೇಶದಲ್ಲೇ 2ನೇ ಸ್ಥಾನ

- Advertisement -
- Advertisement -

ದೇಶದಾದ್ಯಂತ ವಿವಿಧ ರೀತಿಯ ಕಾರಣಗಳು ಹಾಗೂ ಸರ್ಕಾರಗಳು ಧೋರಣೆಗಳಿಂದಾಗಿ ರೈತರ ಆತ್ಮಹತ್ಯೆ ಪ್ರಕರಣಗಳು ನಡೆಯುತ್ತಲೇ ಇವೆ. ಕೊರೊನಾ, ಲಾಕ್‌ಡೌನ್‌ ಸಂದರ್ಭದಲ್ಲಿಯೂ ರೈತರ ಆತ್ಮಹತ್ಯೆ ಪ್ರಕರಣಗಳು ವರದಿಯಾಗಿದ್ದು, ರಾಜ್ಯದಲ್ಲಿ ಕಳೆದ ಒಂದೂವರೆ ವರ್ಷದಲ್ಲಿ 746 ರೈತ ಆತ್ಮಹತ್ಯೆಗಳು ವರದಿಯಾಗಿವೆ ಎಂದು ಸರ್ಕಾರದ ಅಂಕಿ-ಅಂಶಗಳಿಂದ ತಿಳಿದು ಬಂದಿದೆ.

ಕೃಷಿ ಇಲಾಖೆ ಬಿಡುಗಡೆ ಮಾಡಿರುವ ಮಾಹಿತಿ ಪ್ರಕಾರ, ಏಪ್ರಿಲ್ 2020 ಹಾಗೂ ಸೆಪ್ಟೆಂಬರ್ 2021ರ ನಡುವೆ 746 ರೈತರು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. 2019-20ರ ವರ್ಷದಲ್ಲಿ 1076 ರೈತ ಆತ್ಮಹತ್ಯಾ ಪ್ರಕರಣಗಳು ವರದಿಯಾಗಿದ್ದವು. ವರದಿಯಾಗಿರುವ ಪ್ರಕರಣಗಳಲ್ಲಿ ಉತ್ತರ ಕರ್ನಾಟಕ, ಮೈಸೂರು, ಚಿಕ್ಕಮಗಳೂರು ಜಿಲ್ಲೆಗಳಲ್ಲಿ ರೈತ ಆತ್ಮಹತ್ಯೆ ಪ್ರಕಟಣಗಳು ಹೆಚ್ಚಾಗಿವೆ ಎಂದು ತಿಳಿದು ಬಂದಿದೆ.

ಇದನ್ನೂ ಓದಿ: ರೈತ ಹೋರಾಟದ ನೆಲದಲ್ಲಿ ಹತ್ಯೆ: ಮೃತ ವ್ಯಕ್ತಿಯ ಗ್ರಾಮಕ್ಕೆ ಪದೇ ಪದೇ ಭೇಟಿ ನೀಡುತ್ತಿದ್ದ ಕೊಲೆ ಆರೋಪಿ

“ಕಳೆದ ಎರಡು ವರ್ಷಗಳಲ್ಲಿ ರಾಜ್ಯದಲ್ಲಿ ಉತ್ತಮ ಮಳೆಯಾಗುತ್ತಿದೆ. ಇದರಿಂದ ಅಂತರ್ಜಲದ ಮಟ್ಟ ಗಣನೀಯವಾಗಿ ಏರಿಕೆ ಕಂಡಿದೆ. ಉತ್ತಮ ಮಳೆಯು ರೈತರಲ್ಲಿ ಸಂಕಷ್ಟವನ್ನು ಕಡಿಮೆ ಮಾಡಿದೆ. ಇದು, ಕೆಳೆದ ವರ್ಷಕ್ಕಿಂತ ಈ ವರ್ಷ ರೈತರ ಆತ್ಮಹತ್ಯೆ ಪ್ರಕರಣಗಳು ಕಡಿಮೆಯಾಗಲು ಒಂದು ಕಾರಣವಾಗಿದೆ” ಎಂದು ರಾಜ್ಯ ನೈಸರ್ಗಿಕ ವಿಪತ್ತು ಮತ್ತು ನಿರ್ವಹಣಾ ಕೇಂದ್ರದ ಮಾಜಿ ನಿರ್ದೇಶಕ ಶ್ರೀನಿವಾಸರೆಡ್ಡಿ ಹೇಳಿದ್ದಾರೆ.

ಮಾತ್ರವಲ್ಲದೆ, ರೈತರು ಸಾಮಾಜಿಕ, ಆರ್ಥಿಕ ಸಮಸ್ಯೆ ಸೇರಿದಂತೆ ಹಲವು ಇತರೆ ಸಮಸ್ಯಗಳನ್ನು ಎದುರಿಸುತ್ತಿದ್ದಾರೆ. ಇದೆಲ್ಲರ ನಡುವೆಯೂ, ಉತ್ತಮ ಮಳೆಯಿಂದಾಗಿ ರಾಜ್ಯವು 150 ಲಕ್ಷ ಟನ್‌ಗಳಿಗಿಂತ ಹೆಚ್ಚು ಆಹಾರ ಧಾನ್ಯಗಳನ್ನು ಉತ್ಪಾದಿಸಿದೆ ಎಂದು ಅವರು ಹೇಳಿದ್ದಾರೆ.

ನಾವು ಕಳೆದ ಎರಡು ವರ್ಷಗಳಲ್ಲಿ 10 ಲಕ್ಷ ಟನ್‌ಗಳಷ್ಟು ಕಡಿಮೆ ಗುಣಮಟ್ಟದ ಬಿತ್ತನೆ ಬೀಜಗಳನ್ನು ವಶಪಡಿಸಿಕೊಂಡಿದ್ದೇವೆ. ಅಂತಹ ಬೀಜಗಳನ್ನು ಮಾರಾಟ ಮಾಡುವವವರು ಮತ್ತು ಕಂಪನಿಗಳ ವಿರುದ್ಧ ಎಫ್‌ಐಆರ್ ದಾಖಲಾಗಿದೆ. ಬೀಜಗಳ ಗುಣಮಟ್ಟ ಕಳಪೆಯಾಗಿದ್ದರೆ ಇಳುವರಿ ಕಡಿಮೆಯಾಗುತ್ತದೆ ಎಂದು ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

ಇದನ್ನೂ ಓದಿ: ಲಖ್ಬೀರ್ ಹತ್ಯೆ ಪ್ರಕರಣ: ರೈತ ಸಂಘಟನೆಗಳ‌ ಹೊಣೆಯ ಕುರಿತು ಎರಡು ನೋಟಗಳು

ರೈತರ ಆತ್ಮಹತ್ಯೆ ಪ್ರಕರಣದಲ್ಲಿ ಕರ್ನಾಟಕಕ್ಕೆ 2ನೇ ಸ್ಥಾನ

2020ರಲ್ಲಿ ದೇಶದಲ್ಲಿ ಒಟ್ಟು 10,281 ರೈತರು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಈ ಪ್ರಕರಣಗಳ ಪೈಕಿ ಕರ್ನಾಟಕವು 2ನೇ ಸ್ಥಾನದಲ್ಲಿದೆ ಎಂದು ರಾಷ್ಟ್ರೀಯ ಅಪರಾಧ ದಾಖಲೆ ವಿಭಾಗ (ಎನ್‌ಸಿಆರ್‌ಬಿ) ಬಿಡುಗಡೆ ಮಾಡಿರುವ ಅಂಕಿ- ಅಂಶಗಳಿಂದ ತಿಳಿದುಬಂದಿದೆ. 2020ರಲ್ಲಿ 1076 ರೈತರು ಆತ್ಮಹತ್ಯೆಗೆ ಬಲಿಯಾಗಿದ್ದಾರೆ.

2019ರಲ್ಲಿ ಕರ್ನಾಟಕದಲ್ಲಿ 1,992 ಮಂದಿ ರೈತರು ಆತ್ಮಹತ್ಯೆಗೆ ಶರಣಾಗಿದ್ದಾರೆ. 2018ರಲ್ಲಿ 2,405 ರೈತರು ಸಾವಿಗೆ ಶರಣಾಗಿದ್ದರು. 2017ರಲ್ಲಿ ಕರ್ನಾಟಕದಲ್ಲಿ 2079 ಮಂದಿ, 2016ರಲ್ಲಿ 2,160 ರೈತರು ಆತ್ಮಹತ್ಯೆ ಮಾಡಿಕೊಂಡಿದ್ದರು.

ರೈತರ ಆತ್ಮಹತ್ಯೆಯಲ್ಲಿ ಮಹಾರಾಷ್ಟ್ರ ಮೊದಲ ಸ್ಥಾನದಲ್ಲಿದೆ. 2020ರಲ್ಲಿ 3,927 ರೈತರು ಅಲ್ಲಿ ಸಾವಿಗೆ ಶರಣಾಗಿದ್ದಾರೆ. ಮೂರನೇ ಸ್ಥಾನದಲ್ಲಿರುವ ಆಂಧ್ರ ಪ್ರದೇಶವಿದ್ದು, 1,029 ರೈತರು ಪ್ರಾಣ ಕಳೆದುಕೊಂಡಿದ್ದಾರೆ.

2018ರಲ್ಲಿ ಸಂಭವಿಸಿದ 10,349 ರೈತರ ಆತ್ಮಹತ್ಯೆಗೆ ಹೋಲಿಸಿದರೆ ದೇಶದಲ್ಲಿ ರೈತರ ಆತ್ಮಹತ್ಯೆ ಪ್ರಮಾಣ ಕೊಂಚ ಇಳಿಕೆ ಕಂಡಿದೆ. 2017ರಲ್ಲಿ 10,665, 2016 ರಲ್ಲಿ 11,379 ಮಂದಿ ರೈತರು ಪ್ರಾಣ ಕಳೆದುಕೊಂಡಿದ್ದರು.

ಇದನ್ನೂ ಓದಿ: ಮಾನಸಿಕ ದೌರ್ಬಲ್ಯವಿರುವ ರೈತರು ಆತ್ಮಹತ್ಯೆ ಮಾಡಿಕೊಳ್ಳುತ್ತಿದ್ದಾರೆ: ನಾಲಗೆ ಹರಿಬಿಟ್ಟ ಬಿ.ಸಿ ಪಾಟೀಲ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ದೆಹಲಿ ಗಲಭೆ ಪ್ರಕರಣದಿಂದ ಒಂಬತ್ತು ಜನರನ್ನು ಖುಲಾಸೆಗೊಳಿಸಿದ ನ್ಯಾಯಾಲಯ

2020 ರ ದೆಹಲಿ ಗಲಭೆಗೆ ಸಂಬಂಧಿಸಿದ ಪ್ರಕರಣದಲ್ಲಿ ಒಂಬತ್ತು ಜನರನ್ನು ನ್ಯಾಯಾಲಯವು ಖುಲಾಸೆಗೊಳಿಸಿದೆ. ಸಾಕ್ಷ್ಯಗಳು ನಿರ್ದಿಷ್ಟತೆಯ ಕೊರತೆ ಮತ್ತು ಸಾಮಾನ್ಯ ಸ್ವರೂಪದ್ದಾಗಿರುವುದರಿಂದ ಪ್ರಕರಣದಲ್ಲಿ ಅವುಗಳನ್ನು ನಂಬಲಾಗುವುದಿಲ್ಲ ಎಂ ನ್ಯಾಯಾಲಯ ಹೇಳಿದೆ. ಹೆಚ್ಚುವರಿ ಸೆಷನ್ಸ್ ನ್ಯಾಯಾಧೀಶ...

ಚುನಾವಣಾ ಕಾರ್ಯಕ್ಕೆ ಅರಣ್ಯ ಸಿಬ್ಬಂದಿ : ಅಸ್ಸಾಂ ಸರ್ಕಾರದ ಆದೇಶಕ್ಕೆ ಎನ್‌ಜಿಟಿ ತಡೆ

ವಿಧಾನಸಭೆ ಚುನಾವಣೆಗೆ ಅಸ್ಸಾಂ ಅರಣ್ಯ ಸಂರಕ್ಷಣಾ ಪಡೆಯ 1,600 ಸಿಬ್ಬಂದಿಯನ್ನು ನಿಯೋಜಿಸಲು ಕೋರಿದ್ದ ಅಸ್ಸಾಂ ಸರ್ಕಾರದ ಆದೇಶವನ್ನು ರಾಷ್ಟ್ರೀಯ ಹಸಿರು ನ್ಯಾಯಮಂಡಳಿಯ (ಎನ್‌ಜಿಟಿ) ಪೂರ್ವ ವಲಯ ಪೀಠ ಗುರುವಾರ (ಮಾ.2) ತಡೆಹಿಡಿದಿದೆ. ಈ ಆದೇಶವನ್ನು...

‘ಕರೂರು ದುರಂತದಲ್ಲಿ ಪಿತೂರಿ ಇದೆ’ ಈ ಘಟನೆಯಲ್ಲಿ ನನಗೂ ನ್ಯಾಯ ಬೇಕು: ಟಿವಿಕೆ ಮುಖ್ಯಸ್ಥ ನಟ, ರಾಜಕಾರಣಿ ವಿಜಯ್ ಆರೋಪ  

ಕರೂರಿನಲ್ಲಿ ನಡೆದ ದುರಂತ ಕಾಲ್ತುಳಿತ ಮತ್ತು ಅವರ ಕೊನೆಯ ಚಿತ್ರ ಜನನಾಯಗನ್ ಬಿ ಡುಗಡೆಯ ಹಿಂದೆ ಜಂಟಿ ಕುತಂತ್ರ ಮತ್ತು ಪಿತೂರಿ ಇದೆ ಎಂದು ಟಿವಿಕೆ ಮುಖ್ಯಸ್ಥ ವಿಜಯ್ ಗುರುವಾರ ಆರೋಪಿಸಿದ್ದಾರೆ ಮತ್ತು...

ತೆಲಂಗಾಣ| ಗೋಮಾಂಸ ಮಾರಾಟ ಆರೋಪ; ಮುಸ್ಲಿಂ ಸಮುದಾಯದ ತಂದೆ-ಮಗನ ಮೇಲೆ ಹಲ್ಲೆ

ಹನುಮಾನ್ ಜಯಂತಿ ಸಂದರ್ಭದಲ್ಲಿ ಗೋಮಾಂಸ ಮಾರಾಟ ಮಾಡಿದ ಆರೋಪದ ಮೇಲೆ ಹಿಂದುತ್ವವಾದಿ ಗುಂಪೊಂದು 60 ವರ್ಷದ ಮುಸ್ಲಿಂ ವ್ಯಕ್ತಿ ಮತ್ತು ಆತನ ಹದಿಹರೆಯದ ಮಗನ ಮೇಲೆ ಹಲ್ಲೆ ನಡೆಸಿರುವ ಘಟನೆ ತೆಲಂಗಾಣದ ಜಗ್ತಿಯಾಲ್...

‘ಕೇವಲ ಮುಸ್ಲಿಮರೇ ಶಾಸಕರಾಗಿದ್ದಾರೆ’..ಚುನಾವಣೆ ಗೆಲ್ಲಲು ಧರ್ಮ ಮುಂದಿಟ್ಟ ಗುರುವಾಯೂರು ಬಿಜೆಪಿ ಅಭ್ಯರ್ಥಿ

ಕೇರಳದ ಗುರುವಾಯೂರು ವಿಧಾನಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಬಿ. ಗೋಪಾಲಕೃಷ್ಣನ್ ಚುನಾವಣೆ ಗೆಲ್ಲಲು ಧರ್ಮವನ್ನೇ ಮುಖ್ಯ ಅಸ್ತ್ರವನ್ನಾಗಿ ಬಳಸಿಕೊಂಡಿದ್ದು, ಕಳೆದ 50 ವರ್ಷಗಳಲ್ಲಿ ಕೇವಲ ಮುಸ್ಲಿಮರೇ ಶಾಸಕರಾಗಿದ್ದಾರೆ ಎಂಬುವುದನ್ನು ಪುನರುಚ್ಚರಿಸಿದ್ದಾರೆ. ಚುನಾವಣಾ ಪ್ರಚಾರದ ಭಾಗವಾಗಿ...

ಹೊಸ ಹಿಂದೂ ದೇವಾಲಯಕ್ಕೆ ಭೂಮಿ ಮಂಜೂರು ಮಾಡಿದ ಸಿಂಗಾಪುರ ಆಡಳಿತ

ಸಿಂಗಪುರದಲ್ಲಿ ಹೆಚ್ಚುತ್ತಿರುವ ಹಿಂದೂ ಸಮುದಾಯದ ಅಗತ್ಯಗಳನ್ನು ಪೂರೈಸಲು ಸಿಂಗಾಪುರ ಸರ್ಕಾರವು ನಗರ-ರಾಜ್ಯದ ಯಿಶುನ್ ಅವೆನ್ಯೂ 3 ರಲ್ಲಿ ಹೊಸ ಹಿಂದೂ ದೇವಾಲಯವನ್ನು ನಿರ್ಮಿಸಲು ಭೂಮಿ ಮಂಜೂರು ಮಾಡಿದೆ. ಏಪ್ರಿಲ್ 1 ರ ಬುಧವಾರದ ಮಾಧ್ಯಮ...

ಕೇರಳ ಚುನಾವಣೆಗೆ ಮುನ್ನ ಕಾಂಗ್ರೆಸ್ ನೇತೃತ್ವದ ಯುಡಿಎಫ್ ಗೆ ಬೆಂಬಲ ಘೋಷಿಸಿದ ‘ಅಂಬೇಡ್ಕರ್‌ವಾದಿ ಪ್ರಜಾಸತ್ತಾತ್ಮಕ ರಂಗ’

ಎಡ ಸರ್ಕಾರ ಕೈಗೊಂಡ ಅಭಿವೃದ್ಧಿ ಉಪಕ್ರಮಗಳು ಆದಿವಾಸಿ, ದಲಿತ ಮತ್ತು ಇತರ ಅಂಚಿನಲ್ಲಿರುವ ಸಮುದಾಯಗಳನ್ನು ಬದಿಗಿಟ್ಟಿವೆ ಎಂದು ಆರೋಪಿಸಿ, ಅಂಬೇಡ್ಕರ್‌ವಾದಿ ಪ್ರಜಾಸತ್ತಾತ್ಮಕ ರಂಗ (ಎಡಿಎಫ್) ಬುಧವಾರ ಕಾಂಗ್ರೆಸ್ ನೇತೃತ್ವದ ಯುನೈಟೆಡ್ ಪ್ರಜಾಸತ್ತಾತ್ಮಕ ರಂಗ...

ಐಎಎಸ್‌ ಅಧಿಕಾರಿ ರೋಹಿಣಿ ಸಿಂಧೂರಿ ವಿರುದ್ಧ ತನಿಖೆಗೆ ಪೂರ್ವಾನುಮತಿ ನೀಡಲು ಹೈಕೋರ್ಟ್ ನಿರ್ದೇಶನ

ಪರಿಸರ ಸ್ನೇಹಿ ಬಟ್ಟೆ ಚೀಲಗಳ ಖರೀದಿಯಲ್ಲಿ ನಡೆದಿದೆ ಎನ್ನಲಾದ ಅಕ್ರಮಗಳಿಗೆ ಸಂಬಂಧಿಸಿದಂತೆ, ಐಎಎಸ್ ಅಧಿಕಾರಿ ರೋಹಿಣಿ ಸಿಂಧೂರಿ ವಿರುದ್ಧ ಎಫ್‌ಐಆರ್ ದಾಖಲಿಸಲು ಅನುಮತಿಸುವಂತೆ ಹೈಕೋರ್ಟ್ ರಾಜ್ಯ ಸರ್ಕಾರಕ್ಕೆ ನಿರ್ದೇಶನ ನೀಡಿದೆ ಎಂದು ವರದಿಯಾಗಿದೆ....

ನ್ಯಾಯಾಂಗ ಅಧಿಕಾರಿಗಳನ್ನು ರಕ್ಷಿಸುವಲ್ಲಿ ಚುನಾವಣಾ ಆಯೋಗ ವಿಫಲವಾಗಿದೆ: ಮಮತಾ ಬ್ಯಾನರ್ಜಿ

ಪಶ್ಚಿಮ ಬಂಗಾಳದ ಮಾಲ್ಡಾ ಜಿಲ್ಲೆಯಲ್ಲಿ ಎಸ್‌ಐಆರ್ ಕಾರ್ಯದಲ್ಲಿ ತೊಡಗಿರುವ ನ್ಯಾಯಾಂಗ ಅಧಿಕಾರಿಗಳನ್ನು 'ರಕ್ಷಿಸುವಲ್ಲಿ ಚುನಾವಣಾ ಆಯೋಗ ವಿಫಲವಾಗಿದೆ' ಎಂದು ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ದೂಷಿಸಿದ್ದಾರೆ. ಮತದಾರರ ಪಟ್ಟಿಯಿಂದ ಹೆಸರುಗಳನ್ನು ಅಳಿಸಿಹಾಕಿದ್ದಕ್ಕಾಗಿ ಬುಧವಾರ ಪ್ರತಿಭಟನಾಕಾರರು ಹಲವಾರು...

ಎಎಪಿಯ ರಾಜ್ಯಸಭಾ ಉಪನಾಯಕ ಸ್ಥಾನದಿಂದ ರಾಘವ್ ಚಡ್ಡಾಗೆ ಕೋಕ್, ಅಶೋಕ್ ಮಿತ್ತಲ್ ಗೆ ಅಧಿಕಾರ: ವರದಿ

ಮಹತ್ವದ ಬೆಳವಣಿಗೆಯೊಂದರಲ್ಲಿ, ಆಮ್ ಆದ್ಮಿ ಪಕ್ಷ (ಎಎಪಿ) ರಾಜ್ಯಸಭೆಯಲ್ಲಿ ರಾಘವ್ ಚಡ್ಡಾ ಅವರನ್ನು ಉಪನಾಯಕ ಹುದ್ದೆಯಿಂದ ಬದಲಾಯಿಸಲು ಮುಂದಾಗಿದ್ದು, ಇದು ಪಕ್ಷದೊಳಗಿನ ಆಂತರಿಕ ಬಿರುಕು ಉಂಟಾಗಿರುವ ಲಕ್ಷಣಗಳನ್ನು ಸೂಚಿಸುತ್ತದೆ. ಮೇಲ್ಮನೆಯಲ್ಲಿ ಪಕ್ಷದ ಹೊಸ...