Homeಕರ್ನಾಟಕಕರ್ನಾಟಕ: ಒಂದುವರೆ ವರ್ಷದಲ್ಲಿ 746 ರೈತರ ಆತ್ಮಹತ್ಯೆ; ದೇಶದಲ್ಲೇ 2ನೇ ಸ್ಥಾನ

ಕರ್ನಾಟಕ: ಒಂದುವರೆ ವರ್ಷದಲ್ಲಿ 746 ರೈತರ ಆತ್ಮಹತ್ಯೆ; ದೇಶದಲ್ಲೇ 2ನೇ ಸ್ಥಾನ

- Advertisement -
- Advertisement -

ದೇಶದಾದ್ಯಂತ ವಿವಿಧ ರೀತಿಯ ಕಾರಣಗಳು ಹಾಗೂ ಸರ್ಕಾರಗಳು ಧೋರಣೆಗಳಿಂದಾಗಿ ರೈತರ ಆತ್ಮಹತ್ಯೆ ಪ್ರಕರಣಗಳು ನಡೆಯುತ್ತಲೇ ಇವೆ. ಕೊರೊನಾ, ಲಾಕ್‌ಡೌನ್‌ ಸಂದರ್ಭದಲ್ಲಿಯೂ ರೈತರ ಆತ್ಮಹತ್ಯೆ ಪ್ರಕರಣಗಳು ವರದಿಯಾಗಿದ್ದು, ರಾಜ್ಯದಲ್ಲಿ ಕಳೆದ ಒಂದೂವರೆ ವರ್ಷದಲ್ಲಿ 746 ರೈತ ಆತ್ಮಹತ್ಯೆಗಳು ವರದಿಯಾಗಿವೆ ಎಂದು ಸರ್ಕಾರದ ಅಂಕಿ-ಅಂಶಗಳಿಂದ ತಿಳಿದು ಬಂದಿದೆ.

ಕೃಷಿ ಇಲಾಖೆ ಬಿಡುಗಡೆ ಮಾಡಿರುವ ಮಾಹಿತಿ ಪ್ರಕಾರ, ಏಪ್ರಿಲ್ 2020 ಹಾಗೂ ಸೆಪ್ಟೆಂಬರ್ 2021ರ ನಡುವೆ 746 ರೈತರು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. 2019-20ರ ವರ್ಷದಲ್ಲಿ 1076 ರೈತ ಆತ್ಮಹತ್ಯಾ ಪ್ರಕರಣಗಳು ವರದಿಯಾಗಿದ್ದವು. ವರದಿಯಾಗಿರುವ ಪ್ರಕರಣಗಳಲ್ಲಿ ಉತ್ತರ ಕರ್ನಾಟಕ, ಮೈಸೂರು, ಚಿಕ್ಕಮಗಳೂರು ಜಿಲ್ಲೆಗಳಲ್ಲಿ ರೈತ ಆತ್ಮಹತ್ಯೆ ಪ್ರಕಟಣಗಳು ಹೆಚ್ಚಾಗಿವೆ ಎಂದು ತಿಳಿದು ಬಂದಿದೆ.

ಇದನ್ನೂ ಓದಿ: ರೈತ ಹೋರಾಟದ ನೆಲದಲ್ಲಿ ಹತ್ಯೆ: ಮೃತ ವ್ಯಕ್ತಿಯ ಗ್ರಾಮಕ್ಕೆ ಪದೇ ಪದೇ ಭೇಟಿ ನೀಡುತ್ತಿದ್ದ ಕೊಲೆ ಆರೋಪಿ

“ಕಳೆದ ಎರಡು ವರ್ಷಗಳಲ್ಲಿ ರಾಜ್ಯದಲ್ಲಿ ಉತ್ತಮ ಮಳೆಯಾಗುತ್ತಿದೆ. ಇದರಿಂದ ಅಂತರ್ಜಲದ ಮಟ್ಟ ಗಣನೀಯವಾಗಿ ಏರಿಕೆ ಕಂಡಿದೆ. ಉತ್ತಮ ಮಳೆಯು ರೈತರಲ್ಲಿ ಸಂಕಷ್ಟವನ್ನು ಕಡಿಮೆ ಮಾಡಿದೆ. ಇದು, ಕೆಳೆದ ವರ್ಷಕ್ಕಿಂತ ಈ ವರ್ಷ ರೈತರ ಆತ್ಮಹತ್ಯೆ ಪ್ರಕರಣಗಳು ಕಡಿಮೆಯಾಗಲು ಒಂದು ಕಾರಣವಾಗಿದೆ” ಎಂದು ರಾಜ್ಯ ನೈಸರ್ಗಿಕ ವಿಪತ್ತು ಮತ್ತು ನಿರ್ವಹಣಾ ಕೇಂದ್ರದ ಮಾಜಿ ನಿರ್ದೇಶಕ ಶ್ರೀನಿವಾಸರೆಡ್ಡಿ ಹೇಳಿದ್ದಾರೆ.

ಮಾತ್ರವಲ್ಲದೆ, ರೈತರು ಸಾಮಾಜಿಕ, ಆರ್ಥಿಕ ಸಮಸ್ಯೆ ಸೇರಿದಂತೆ ಹಲವು ಇತರೆ ಸಮಸ್ಯಗಳನ್ನು ಎದುರಿಸುತ್ತಿದ್ದಾರೆ. ಇದೆಲ್ಲರ ನಡುವೆಯೂ, ಉತ್ತಮ ಮಳೆಯಿಂದಾಗಿ ರಾಜ್ಯವು 150 ಲಕ್ಷ ಟನ್‌ಗಳಿಗಿಂತ ಹೆಚ್ಚು ಆಹಾರ ಧಾನ್ಯಗಳನ್ನು ಉತ್ಪಾದಿಸಿದೆ ಎಂದು ಅವರು ಹೇಳಿದ್ದಾರೆ.

ನಾವು ಕಳೆದ ಎರಡು ವರ್ಷಗಳಲ್ಲಿ 10 ಲಕ್ಷ ಟನ್‌ಗಳಷ್ಟು ಕಡಿಮೆ ಗುಣಮಟ್ಟದ ಬಿತ್ತನೆ ಬೀಜಗಳನ್ನು ವಶಪಡಿಸಿಕೊಂಡಿದ್ದೇವೆ. ಅಂತಹ ಬೀಜಗಳನ್ನು ಮಾರಾಟ ಮಾಡುವವವರು ಮತ್ತು ಕಂಪನಿಗಳ ವಿರುದ್ಧ ಎಫ್‌ಐಆರ್ ದಾಖಲಾಗಿದೆ. ಬೀಜಗಳ ಗುಣಮಟ್ಟ ಕಳಪೆಯಾಗಿದ್ದರೆ ಇಳುವರಿ ಕಡಿಮೆಯಾಗುತ್ತದೆ ಎಂದು ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

ಇದನ್ನೂ ಓದಿ: ಲಖ್ಬೀರ್ ಹತ್ಯೆ ಪ್ರಕರಣ: ರೈತ ಸಂಘಟನೆಗಳ‌ ಹೊಣೆಯ ಕುರಿತು ಎರಡು ನೋಟಗಳು

ರೈತರ ಆತ್ಮಹತ್ಯೆ ಪ್ರಕರಣದಲ್ಲಿ ಕರ್ನಾಟಕಕ್ಕೆ 2ನೇ ಸ್ಥಾನ

2020ರಲ್ಲಿ ದೇಶದಲ್ಲಿ ಒಟ್ಟು 10,281 ರೈತರು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಈ ಪ್ರಕರಣಗಳ ಪೈಕಿ ಕರ್ನಾಟಕವು 2ನೇ ಸ್ಥಾನದಲ್ಲಿದೆ ಎಂದು ರಾಷ್ಟ್ರೀಯ ಅಪರಾಧ ದಾಖಲೆ ವಿಭಾಗ (ಎನ್‌ಸಿಆರ್‌ಬಿ) ಬಿಡುಗಡೆ ಮಾಡಿರುವ ಅಂಕಿ- ಅಂಶಗಳಿಂದ ತಿಳಿದುಬಂದಿದೆ. 2020ರಲ್ಲಿ 1076 ರೈತರು ಆತ್ಮಹತ್ಯೆಗೆ ಬಲಿಯಾಗಿದ್ದಾರೆ.

2019ರಲ್ಲಿ ಕರ್ನಾಟಕದಲ್ಲಿ 1,992 ಮಂದಿ ರೈತರು ಆತ್ಮಹತ್ಯೆಗೆ ಶರಣಾಗಿದ್ದಾರೆ. 2018ರಲ್ಲಿ 2,405 ರೈತರು ಸಾವಿಗೆ ಶರಣಾಗಿದ್ದರು. 2017ರಲ್ಲಿ ಕರ್ನಾಟಕದಲ್ಲಿ 2079 ಮಂದಿ, 2016ರಲ್ಲಿ 2,160 ರೈತರು ಆತ್ಮಹತ್ಯೆ ಮಾಡಿಕೊಂಡಿದ್ದರು.

ರೈತರ ಆತ್ಮಹತ್ಯೆಯಲ್ಲಿ ಮಹಾರಾಷ್ಟ್ರ ಮೊದಲ ಸ್ಥಾನದಲ್ಲಿದೆ. 2020ರಲ್ಲಿ 3,927 ರೈತರು ಅಲ್ಲಿ ಸಾವಿಗೆ ಶರಣಾಗಿದ್ದಾರೆ. ಮೂರನೇ ಸ್ಥಾನದಲ್ಲಿರುವ ಆಂಧ್ರ ಪ್ರದೇಶವಿದ್ದು, 1,029 ರೈತರು ಪ್ರಾಣ ಕಳೆದುಕೊಂಡಿದ್ದಾರೆ.

2018ರಲ್ಲಿ ಸಂಭವಿಸಿದ 10,349 ರೈತರ ಆತ್ಮಹತ್ಯೆಗೆ ಹೋಲಿಸಿದರೆ ದೇಶದಲ್ಲಿ ರೈತರ ಆತ್ಮಹತ್ಯೆ ಪ್ರಮಾಣ ಕೊಂಚ ಇಳಿಕೆ ಕಂಡಿದೆ. 2017ರಲ್ಲಿ 10,665, 2016 ರಲ್ಲಿ 11,379 ಮಂದಿ ರೈತರು ಪ್ರಾಣ ಕಳೆದುಕೊಂಡಿದ್ದರು.

ಇದನ್ನೂ ಓದಿ: ಮಾನಸಿಕ ದೌರ್ಬಲ್ಯವಿರುವ ರೈತರು ಆತ್ಮಹತ್ಯೆ ಮಾಡಿಕೊಳ್ಳುತ್ತಿದ್ದಾರೆ: ನಾಲಗೆ ಹರಿಬಿಟ್ಟ ಬಿ.ಸಿ ಪಾಟೀಲ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಮುಂಗಾರು ಮಳೆ ಕೊರತೆ: ಇಡೀ ದೇಶದಲ್ಲಿ ಆತಂಕದ ಕಾರ್ಮೋಡ

ಭಾರತದ ಆಕಾಶದಲ್ಲಿ ಸದ್ಯ ಮೂಡುತ್ತಿರುವ ಉಪಗ್ರಹ ಚಿತ್ರಗಳು ಮತ್ತು ಹವಾಮಾನ ಇಲಾಖೆಯ ದತ್ತಾಂಶಗಳು ದೇಶಕ್ಕೆ ದೊಡ್ಡ ಗಂಡಾಂತರದ ಮುನ್ಸೂಚನೆ ನೀಡುತ್ತಿವೆ. ಕೃಷಿ ಚಟುವಟಿಕೆಗಳ ಅತ್ಯಂತ ನಿರ್ಣಾಯಕ ಅವಧಿಯಾದ ಜೂನ್ ತಿಂಗಳಲ್ಲೇ ಮುಂಗಾರು ಮಳೆ...

ನೀಟ್ ಪರೀಕ್ಷೆ ಪದೇ ಪದೇ ಬರೆಯುವಂತೆ ಮಾಡಿದ್ದು ಯಾರು? : ಬಿ.ಕೆ ಹರಿಪ್ರಸಾದ್

ನೀಟ್ ಪರೀಕ್ಷೆ ಪದೇ ಪದೇ ಬರೆಯುವಂತೆ ಮಾಡಿದ್ದು ಯಾರು? ಬಿಜೆಪಿ ನಾಯಕರ ಆರೋಪಗಳನ್ನು ನೋಡಿದರೆ, ತಪ್ಪು ಮಾಡಿದವರೇ ಉಪದೇಶ ಮಾಡುವ ಸ್ಥಿತಿಗೆ ಬಂದಂತಿದೆ ಎಂದು ಕೆಪಿಸಿಸಿ ನೂತನ ಅಧ್ಯಕ್ಷ ಬಿ.ಕೆ ಹರಿಪ್ರಸಾದ್ ಹೇಳಿದರು....

ಎಸ್‌ಐಆರ್‌ನಲ್ಲಿ ಕೈಬಿಟ್ಟ ವ್ಯಕ್ತಿ ಕುರಿತು ಮಹತ್ವದ ಹೇಳಿಕೆ ನೀಡಿದ ಸುಪ್ರೀಂ ಕೋರ್ಟ್

ವಿಶೇಷ ತೀವ್ರ ಪರಿಷ್ಕರಣೆಯ (Special Intensive Revision) ಸಂದರ್ಭದಲ್ಲಿ ಮತದಾರರ ಪಟ್ಟಿಯಿಂದ ಹೆಸರು ಕೈಬಿಟ್ಟಿರುವ ಅಥವಾ ಹೊರಗಿಟ್ಟಿರುವ ಬಂಗಾಳದ ಮುರ್ಷಿದಾಬಾದ್‌ನ 75 ವರ್ಷದ ವಕೀಲರೊಬ್ಬರು "ಪಶ್ಚಿಮ ಬಂಗಾಳದ ನಿಜವಾದ ಮತ್ತು ವಿಶ್ವಾಸಾರ್ಹ ನಾಗರಿಕ" ನಂತೆ...

ನೀಟ್ ಅಕ್ರಮ, ವ್ಯವಸ್ಥೆಯ ವೈಫಲ್ಯಕ್ಕೆ ಮತ್ತೊಂದು ಬಲಿ: ಮರು ಪರೀಕ್ಷೆ ಹಿಂದಿನ ದಿನವೇ ಆತ್ಮಹತ್ಯೆಗೆ ಶರಣಾದ ಪ್ರತಿಭಾವಂತ ವಿದ್ಯಾರ್ಥಿನಿ 

ಹೈದರಾಬಾದ್: ದೇಶದಲ್ಲಿ ವೈದ್ಯಕೀಯ ಶಿಕ್ಷಣದ ಪ್ರವೇಶಾತಿಗಾಗಿ ನಡೆಯುವ ರಾಷ್ಟ್ರೀಯ ಅರ್ಹತಾ ಮತ್ತು ಪ್ರವೇಶ ಪರೀಕ್ಷೆಯ (NEET) ಸುತ್ತ ಹಬ್ಬಿರುವ ಅಕ್ರಮಗಳ ಜಾಲ ಮತ್ತು ವ್ಯವಸ್ಥೆಯ ನಿರಂತರ ಗೊಂದಲಗಳು ಮತ್ತೊಂದು ಯುವ ಜೀವವನ್ನು ಬಲಿಪಡೆದಿವೆ.  ಜೂನ್...

ಸತತ ಮೂರನೇ ದಿನವೂ ಜಂತರ್ ಮಂತರ್‌ನಲ್ಲಿ ಮುಂದುವರೆದ ಸಿಜೆಪಿ ಪ್ರತಿಭಟನೆ; ಪ್ರಧಾನ್ ರಾಜೀನಾಮೆಗೆ ಪಟ್ಟು

ಪರೀಕ್ಷಾ ಅಕ್ರಮಗಳು ಮತ್ತು ಮೇ 3 ರ ನೀಟ್ ಪತ್ರಿಕೆ ಸೋರಿಕೆಯ ವಿರುದ್ಧ ತಮ್ಮ ಪ್ರತಿಭಟನೆಯನ್ನು ಮುಂದುವರಿಸಿರುವ ಜಿರಳೆ ಜನತಾ ಪಕ್ಷ (ಸಿಜೆಪಿ) ಸೋಮವಾರ ಸತತ ಮೂರನೇ ದಿನವೂ ಜಂತರ್ ಮಂತರ್‌ನಲ್ಲಿಯೇ ಕುಳಿತಿದ್ದಾರೆ. ಶನಿವಾರ...

ಸಂವಿಧಾನದ ಬುಡಕ್ಕೆ ಕೊಡಲಿ ಏಟು: ಆರ್‌ಎಸ್‌ಎಸ್-ಬಿಜೆಪಿಯ ಷಡ್ಯಂತ್ರ ಸೋಲಿಸಲು ಎರಡನೇ ಸ್ವಾತಂತ್ರ್ಯ ಸಂಗ್ರಾಮ ಅನಿವಾರ್ಯ – ಬಿ.ಕೆ. ಹರಿಪ್ರಸಾದ್

ಎಸ್‌ಐಆರ್ (SIR) ವಿರೋಧಿ ಹೋರಾಟದಲ್ಲಿ ನಮ್ಮ ಪಕ್ಷ ನಿಮ್ಮ ಜೊತೆಗಿದೆ ಎಂದು ಹೇಳಲು ಸರ್ಕಾರದ ಪ್ರತಿನಿಧಿಯಾಗಿ ನಾನು ಇಲ್ಲಿ ಬಂದಿದ್ದೇನೆ. ನೀವು ಮಂಡಿಸಿರುವ ಹಕ್ಕೊತ್ತಾಯಗಳ ಕುರಿತು ನೂತನ ಮುಖ್ಯಮಂತ್ರಿಗಳು, ಸಿದ್ದರಾಮಯ್ಯ ಸೇರಿದಂತೆ ಪಕ್ಷದ...

ಮತದಾರರ ಪಟ್ಟಿಯಿಂದ 65 ಲಕ್ಷ ಜನರನ್ನು ಹೊರಹಾಕಿದ್ದು ಯಾರು? ಈ ಅಕ್ರಮಕ್ಕೆ ಚುನಾವಣಾ ಆಯೋಗವೇ ಉತ್ತರಿಸಬೇಕು: ಮೊಹಮ್ಮದ್ ಯೂಸುಫ್ ಕನ್ನಿ

"ಬ್ರಿಟಿಷರ ವಿರುದ್ಧ ಹೋರಾಡಿ ದೇಶಕ್ಕೆ ಸ್ವಾತಂತ್ರ್ಯ ತಂದುಕೊಟ್ಟಿದ್ದೇವೆ. 1952ರ ಮೊದಲ ಚುನಾವಣೆಯ ಸಂದರ್ಭದಲ್ಲಿ ಸುಮಾರು 17.32 ಕೋಟಿ ಮತದಾರರಿದ್ದರು. 1955ರಲ್ಲಿ ಸಿಟಿಜನ್‌ಶಿಪ್ ಆಕ್ಟ್ ಜಾರಿಯಾದ ಬಳಿಕ ನಡೆದ 1957ರ ಚುನಾವಣೆಯಲ್ಲಿ ಈ ಸಂಖ್ಯೆ...

ಸರ್ಕಾರ-ನ್ಯಾಯಾಂಗ ವ್ಯವಸ್ಥೆ ಕೈಬಿಟ್ಟರೆ ರಾಜ್ಯದ ಜನ ಅನಾಥರಾಗುತ್ತಾರೆ : ಹಿರಿಯ ಸಾಹಿತಿ ಬಿ.ಟಿ. ಲಲಿತಾ ನಾಯ್ಕ್

ಎಸ್‌ಐಆರ್‌ ವಿಚಾರದಲ್ಲಿ ಇಂದು ನಾಡಿನ ಜನತೆ ಭೀಕರ ಸಂಕಷ್ಟದಲ್ಲಿದ್ದಾರೆ. ಈ ಗೊಂದಲವನ್ನು ಉಂಟು ಮಾಡಿದವರು ಯಾರು? ಕೇಂದ್ರ ಸರ್ಕಾರವೋ ಅಥವಾ ಕರ್ನಾಟಕ ಸರ್ಕಾರದ ಅಲಕ್ಷ್ಯ ಇದಕ್ಕೆ ಕಾರಣವೇ? ಅಥವಾ ನಮಗೆ ಸಂಬಂಧವೇ ಇಲ್ಲ...

ಎಸ್ಐಆರ್ ಹೆಸರಿನಲ್ಲಿ ನಡೆಯುತ್ತಿರುವ ಜನವಿರೋಧಿ ಹುನ್ನಾರಗಳನ್ನು ಸೋಲಿಸಬೇಕಿದೆ: ಎಸ್. ವರಲಕ್ಷ್ಮಿ

ಬೆಂಗಳೂರು: ರಾಜ್ಯಾದ್ಯಂತ ಎಸ್ಐಆರ್ (SIR) ವಿರುದ್ಧ ನಡೆಯುತ್ತಿರುವ ಸಮಾವೇಶವು ಆಕ್ರಮಣಕಾರಿ ಧೋರಣೆಯ ವಿರುದ್ಧದ ಬೃಹತ್ ಪ್ರತಿರೋಧವಾಗಿದೆ ಎಂದು ಸಿಐಟಿಯು ರಾಜ್ಯ ಪ್ರಧಾನ ಕಾರ್ಯದರ್ಶಿ ಎಸ್. ವರಲಕ್ಷ್ಮಿ ತಿಳಿಸಿದರು. ಎಸ್ಐಆರ್ ಸಮಸ್ಯೆಯಲ್ಲ ಎಂದು ಬಿಂಬಿಸುವ ಸಂಘಪರಿವಾರದವರ...

ಮತದಾನ ನಮ್ಮ ಜನ್ಮಸಿದ್ದ ಹಕ್ಕು, ಎಸ್‌ಐಆರ್ ಕುರಿತು ಜನ ಜಾಗೃತಿ ಅಗತ್ಯ: ಪೀಟರ್ ಮಚಾಡೋ

'ಮತದಾನ ನಮ್ಮ ಜನ್ಮಸಿದ್ದ ಹಕ್ಕು ಅದನ್ನು ನಾವು ಬಿಟ್ಟು ಕೊಡುವುದಿಲ್ಲ' ಎಂದು ಕರ್ನಾಟಕ ಕ್ರೈಸ್ತ ಸಮುದಾಯದ ಮಹಾ ಧರ್ಮಾಧ್ಯಕ್ಷ ರೆವೆಂಡರ್ ಫಾದರ್ ಪೀಟರ್ ಮಚಾಡೋ ಹೇಳಿದರು. ಬೆಂಗಳೂರಿನ ಫ್ರೀಡಂ ಪಾರ್ಕ್‌ನಲ್ಲಿ...