Homeಕರ್ನಾಟಕಕರ್ನಾಟಕ: ಒಂದುವರೆ ವರ್ಷದಲ್ಲಿ 746 ರೈತರ ಆತ್ಮಹತ್ಯೆ; ದೇಶದಲ್ಲೇ 2ನೇ ಸ್ಥಾನ

ಕರ್ನಾಟಕ: ಒಂದುವರೆ ವರ್ಷದಲ್ಲಿ 746 ರೈತರ ಆತ್ಮಹತ್ಯೆ; ದೇಶದಲ್ಲೇ 2ನೇ ಸ್ಥಾನ

- Advertisement -
- Advertisement -

ದೇಶದಾದ್ಯಂತ ವಿವಿಧ ರೀತಿಯ ಕಾರಣಗಳು ಹಾಗೂ ಸರ್ಕಾರಗಳು ಧೋರಣೆಗಳಿಂದಾಗಿ ರೈತರ ಆತ್ಮಹತ್ಯೆ ಪ್ರಕರಣಗಳು ನಡೆಯುತ್ತಲೇ ಇವೆ. ಕೊರೊನಾ, ಲಾಕ್‌ಡೌನ್‌ ಸಂದರ್ಭದಲ್ಲಿಯೂ ರೈತರ ಆತ್ಮಹತ್ಯೆ ಪ್ರಕರಣಗಳು ವರದಿಯಾಗಿದ್ದು, ರಾಜ್ಯದಲ್ಲಿ ಕಳೆದ ಒಂದೂವರೆ ವರ್ಷದಲ್ಲಿ 746 ರೈತ ಆತ್ಮಹತ್ಯೆಗಳು ವರದಿಯಾಗಿವೆ ಎಂದು ಸರ್ಕಾರದ ಅಂಕಿ-ಅಂಶಗಳಿಂದ ತಿಳಿದು ಬಂದಿದೆ.

ಕೃಷಿ ಇಲಾಖೆ ಬಿಡುಗಡೆ ಮಾಡಿರುವ ಮಾಹಿತಿ ಪ್ರಕಾರ, ಏಪ್ರಿಲ್ 2020 ಹಾಗೂ ಸೆಪ್ಟೆಂಬರ್ 2021ರ ನಡುವೆ 746 ರೈತರು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. 2019-20ರ ವರ್ಷದಲ್ಲಿ 1076 ರೈತ ಆತ್ಮಹತ್ಯಾ ಪ್ರಕರಣಗಳು ವರದಿಯಾಗಿದ್ದವು. ವರದಿಯಾಗಿರುವ ಪ್ರಕರಣಗಳಲ್ಲಿ ಉತ್ತರ ಕರ್ನಾಟಕ, ಮೈಸೂರು, ಚಿಕ್ಕಮಗಳೂರು ಜಿಲ್ಲೆಗಳಲ್ಲಿ ರೈತ ಆತ್ಮಹತ್ಯೆ ಪ್ರಕಟಣಗಳು ಹೆಚ್ಚಾಗಿವೆ ಎಂದು ತಿಳಿದು ಬಂದಿದೆ.

ಇದನ್ನೂ ಓದಿ: ರೈತ ಹೋರಾಟದ ನೆಲದಲ್ಲಿ ಹತ್ಯೆ: ಮೃತ ವ್ಯಕ್ತಿಯ ಗ್ರಾಮಕ್ಕೆ ಪದೇ ಪದೇ ಭೇಟಿ ನೀಡುತ್ತಿದ್ದ ಕೊಲೆ ಆರೋಪಿ

“ಕಳೆದ ಎರಡು ವರ್ಷಗಳಲ್ಲಿ ರಾಜ್ಯದಲ್ಲಿ ಉತ್ತಮ ಮಳೆಯಾಗುತ್ತಿದೆ. ಇದರಿಂದ ಅಂತರ್ಜಲದ ಮಟ್ಟ ಗಣನೀಯವಾಗಿ ಏರಿಕೆ ಕಂಡಿದೆ. ಉತ್ತಮ ಮಳೆಯು ರೈತರಲ್ಲಿ ಸಂಕಷ್ಟವನ್ನು ಕಡಿಮೆ ಮಾಡಿದೆ. ಇದು, ಕೆಳೆದ ವರ್ಷಕ್ಕಿಂತ ಈ ವರ್ಷ ರೈತರ ಆತ್ಮಹತ್ಯೆ ಪ್ರಕರಣಗಳು ಕಡಿಮೆಯಾಗಲು ಒಂದು ಕಾರಣವಾಗಿದೆ” ಎಂದು ರಾಜ್ಯ ನೈಸರ್ಗಿಕ ವಿಪತ್ತು ಮತ್ತು ನಿರ್ವಹಣಾ ಕೇಂದ್ರದ ಮಾಜಿ ನಿರ್ದೇಶಕ ಶ್ರೀನಿವಾಸರೆಡ್ಡಿ ಹೇಳಿದ್ದಾರೆ.

ಮಾತ್ರವಲ್ಲದೆ, ರೈತರು ಸಾಮಾಜಿಕ, ಆರ್ಥಿಕ ಸಮಸ್ಯೆ ಸೇರಿದಂತೆ ಹಲವು ಇತರೆ ಸಮಸ್ಯಗಳನ್ನು ಎದುರಿಸುತ್ತಿದ್ದಾರೆ. ಇದೆಲ್ಲರ ನಡುವೆಯೂ, ಉತ್ತಮ ಮಳೆಯಿಂದಾಗಿ ರಾಜ್ಯವು 150 ಲಕ್ಷ ಟನ್‌ಗಳಿಗಿಂತ ಹೆಚ್ಚು ಆಹಾರ ಧಾನ್ಯಗಳನ್ನು ಉತ್ಪಾದಿಸಿದೆ ಎಂದು ಅವರು ಹೇಳಿದ್ದಾರೆ.

ನಾವು ಕಳೆದ ಎರಡು ವರ್ಷಗಳಲ್ಲಿ 10 ಲಕ್ಷ ಟನ್‌ಗಳಷ್ಟು ಕಡಿಮೆ ಗುಣಮಟ್ಟದ ಬಿತ್ತನೆ ಬೀಜಗಳನ್ನು ವಶಪಡಿಸಿಕೊಂಡಿದ್ದೇವೆ. ಅಂತಹ ಬೀಜಗಳನ್ನು ಮಾರಾಟ ಮಾಡುವವವರು ಮತ್ತು ಕಂಪನಿಗಳ ವಿರುದ್ಧ ಎಫ್‌ಐಆರ್ ದಾಖಲಾಗಿದೆ. ಬೀಜಗಳ ಗುಣಮಟ್ಟ ಕಳಪೆಯಾಗಿದ್ದರೆ ಇಳುವರಿ ಕಡಿಮೆಯಾಗುತ್ತದೆ ಎಂದು ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

ಇದನ್ನೂ ಓದಿ: ಲಖ್ಬೀರ್ ಹತ್ಯೆ ಪ್ರಕರಣ: ರೈತ ಸಂಘಟನೆಗಳ‌ ಹೊಣೆಯ ಕುರಿತು ಎರಡು ನೋಟಗಳು

ರೈತರ ಆತ್ಮಹತ್ಯೆ ಪ್ರಕರಣದಲ್ಲಿ ಕರ್ನಾಟಕಕ್ಕೆ 2ನೇ ಸ್ಥಾನ

2020ರಲ್ಲಿ ದೇಶದಲ್ಲಿ ಒಟ್ಟು 10,281 ರೈತರು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಈ ಪ್ರಕರಣಗಳ ಪೈಕಿ ಕರ್ನಾಟಕವು 2ನೇ ಸ್ಥಾನದಲ್ಲಿದೆ ಎಂದು ರಾಷ್ಟ್ರೀಯ ಅಪರಾಧ ದಾಖಲೆ ವಿಭಾಗ (ಎನ್‌ಸಿಆರ್‌ಬಿ) ಬಿಡುಗಡೆ ಮಾಡಿರುವ ಅಂಕಿ- ಅಂಶಗಳಿಂದ ತಿಳಿದುಬಂದಿದೆ. 2020ರಲ್ಲಿ 1076 ರೈತರು ಆತ್ಮಹತ್ಯೆಗೆ ಬಲಿಯಾಗಿದ್ದಾರೆ.

2019ರಲ್ಲಿ ಕರ್ನಾಟಕದಲ್ಲಿ 1,992 ಮಂದಿ ರೈತರು ಆತ್ಮಹತ್ಯೆಗೆ ಶರಣಾಗಿದ್ದಾರೆ. 2018ರಲ್ಲಿ 2,405 ರೈತರು ಸಾವಿಗೆ ಶರಣಾಗಿದ್ದರು. 2017ರಲ್ಲಿ ಕರ್ನಾಟಕದಲ್ಲಿ 2079 ಮಂದಿ, 2016ರಲ್ಲಿ 2,160 ರೈತರು ಆತ್ಮಹತ್ಯೆ ಮಾಡಿಕೊಂಡಿದ್ದರು.

ರೈತರ ಆತ್ಮಹತ್ಯೆಯಲ್ಲಿ ಮಹಾರಾಷ್ಟ್ರ ಮೊದಲ ಸ್ಥಾನದಲ್ಲಿದೆ. 2020ರಲ್ಲಿ 3,927 ರೈತರು ಅಲ್ಲಿ ಸಾವಿಗೆ ಶರಣಾಗಿದ್ದಾರೆ. ಮೂರನೇ ಸ್ಥಾನದಲ್ಲಿರುವ ಆಂಧ್ರ ಪ್ರದೇಶವಿದ್ದು, 1,029 ರೈತರು ಪ್ರಾಣ ಕಳೆದುಕೊಂಡಿದ್ದಾರೆ.

2018ರಲ್ಲಿ ಸಂಭವಿಸಿದ 10,349 ರೈತರ ಆತ್ಮಹತ್ಯೆಗೆ ಹೋಲಿಸಿದರೆ ದೇಶದಲ್ಲಿ ರೈತರ ಆತ್ಮಹತ್ಯೆ ಪ್ರಮಾಣ ಕೊಂಚ ಇಳಿಕೆ ಕಂಡಿದೆ. 2017ರಲ್ಲಿ 10,665, 2016 ರಲ್ಲಿ 11,379 ಮಂದಿ ರೈತರು ಪ್ರಾಣ ಕಳೆದುಕೊಂಡಿದ್ದರು.

ಇದನ್ನೂ ಓದಿ: ಮಾನಸಿಕ ದೌರ್ಬಲ್ಯವಿರುವ ರೈತರು ಆತ್ಮಹತ್ಯೆ ಮಾಡಿಕೊಳ್ಳುತ್ತಿದ್ದಾರೆ: ನಾಲಗೆ ಹರಿಬಿಟ್ಟ ಬಿ.ಸಿ ಪಾಟೀಲ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಪ.ಬಂಗಾಳ ಎಸ್‌ಐಆರ್‌ : ದೇಶ ಕಾದ ಯೋಧನಿಂದ ತೀರ್ಪು ಕೊಟ್ಟ ನ್ಯಾಯಾಧೀಶರವರೆಗೆ.. ಮತ ಹಕ್ಕು ಕಳೆದುಕೊಂಡ ಲಕ್ಷಾಂತರ ಜನರು

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ದೇಶದಲ್ಲಿ ಪ್ರಸ್ತುತ ಚರ್ಚೆಯಲ್ಲಿರುವ ಪ್ರಮುಖ ವಿಚಾರ. ಹಲವು ಗೊಂದಲಗಳ ನಡುವೆ ಮೊದಲ ಹಂತದಲ್ಲಿ ಬಿಹಾರದಲ್ಲಿ ಎಸ್‌ಐಆರ್‌ ಪೂರ್ತಿಗೊಳಿಸಿದ ಚುನಾವಣಾ ಆಯೋಗ, ನಂತರ ಅಲ್ಲಿ ವಿಧಾನಸಭಾ...

ತೆಲಂಗಾಣ ಜಾತಿ ಸಮೀಕ್ಷೆ: ಜನರ ಆರ್ಥಿಕ ಭವಿಷ್ಯ ನಿರ್ಧರಿಸುತ್ತಿರುವ ಜಾತಿ ಹಿನ್ನೆಲೆ

ತೆಲಂಗಾಣದಲ್ಲಿರುವ ಎಲ್ಲಾ ಪರಿಶಿಷ್ಟ ಜಾತಿ ಕಾರ್ಮಿಕರಲ್ಲಿ ಸುಮಾರು ಅರ್ಧದಷ್ಟು ಜನರು ದಿನಗೂಲಿ ಕಾರ್ಮಿಕರು. ಆದರೆ, ಸಾಮಾನ್ಯ ಜಾತಿ ಕಾರ್ಮಿಕರಲ್ಲಿ 10 ರಲ್ಲಿ ಒಬ್ಬರು ಮಾತ್ರ ದಿನಗೂಲಿ ಮಾಡುತ್ತಾರೆ. ಬ್ರಾಹ್ಮಣರು ಎಸ್‌ಟಿ ಸಮುದಾಯದ ಕೋಲಂಗಿಂತ...

ಲೆಬನಾನ್‌ನಲ್ಲಿ ಯೇಸುವಿನ ಪ್ರತಿಮೆ ಧ್ವಂಸ ಮಾಡಿದ ಇಸ್ರೇಲಿ ಸೈನಿಕ; ಫೋಟೋ ವೈರಲ್

ಇಸ್ರೇಲಿ ಸೈನಿಕನೊಬ್ಬ ದಕ್ಷಿಣ ಲೆಬನಾನ್‌ನಲ್ಲಿ ಸ್ಲೆಡ್ಜ್ ಹ್ಯಾಮರ್‌ನಿಂದ ಯೇಸುಕ್ರಿಸ್ತನ ಪ್ರತಿಮೆಯನ್ನು ಧ್ವಂಸ ಮಾಡುತ್ತಿರುವುದನ್ನು ತೋರಿಸುವ ವೈರಲ್ ಚಿತ್ರದ ಸತ್ಯಾಸತ್ಯತೆಯನ್ನು ಇಸ್ರೇಲ್ ರಕ್ಷಣಾ ಪಡೆಗಳು (ಐಡಿಎಫ್‌) ದೃಢಪಡಿಸಿದ್ದು, ವ್ಯಾಪಕ ಆಕ್ರೋಶಕ್ಕೆ ಕಾರಣವಾಗಿದೆ. ಎಕ್ಸ್ ನಲ್ಲಿ 6.8...

TCS ನಾಸಿಕ್ ಪ್ರಕರಣ : ಮಾಧ್ಯಮಗಳ ಸುಳ್ಳು ಮತ್ತು ಕಂಪನಿ ಹೇಳಿದ ಸತ್ಯ

ಮಹಾರಾಷ್ಟ್ರದ ನಾಸಿಕ್‌ನಲ್ಲಿರುವ ಟಾಟಾ ಕನ್ಸಲ್ಟೆನ್ಸಿ ಸರ್ವಿಸಸ್ (ಟಿಸಿಎಸ್‌) ಕಂಪನಿಯ ಬಿಪಿಒ ಘಟಕದಲ್ಲಿ ನಡೆದಿದೆ ಎನ್ನಲಾದ ಪ್ರಕರಣವೊಂದು ಪ್ರಸ್ತುತ ಇಡೀ ದೇಶದಾದ್ಯಂತ ಭಾರೀ ಚರ್ಚೆಯ ವಿಷಯವಾಗಿದೆ. ಈ ಪ್ರಕರಣದಲ್ಲಿ ಮುಖ್ಯವಾಗಿ ಲೈಂಗಿಕ ಕಿರುಕುಳ ಮತ್ತು...

‘ಅಮೆರಿಕದೊಂದಿಗೆ ಮಾತುಕತೆ ಇಲ್ಲ..’; ಇಸ್ಲಾಮಾಬಾದ್‌ ಸಭೆಯಲ್ಲಿ ಇರಾನ್ ಭಾಗವಹಿಸುವುದು ಅನುಮಾನ

ಯುನೈಟೆಡ್ ಸ್ಟೇಟ್ಸ್ (ಅಮೆರಿಕ) ಜೊತೆ ಹೊಸ ಸುತ್ತಿನ ಮಾತುಕತೆಗಾಗಿ ಇಸ್ಲಾಮಾಬಾದ್‌ಗೆ ಸಂಧಾನಕಾರರನ್ನು ಕಳುಹಿಸುವ ಯಾವುದೇ ಯೋಜನೆ ಇಲ್ಲ ಎಂದು ಇರಾನ್ ಸೂಚಿಸಿದೆ. ಕದನ ವಿರಾಮ ಮುಕ್ತಾಯಗೊಳ್ಳಲು 48 ಗಂಟೆಗಳ ಮೊದಲು ಯುದ್ಧ ನಿರತ...

ಇರಾನ್, ಇಸ್ರೇಲ್-ಅಮೆರಿಕ ಯುದ್ಧ : ವಿನಾಶದ ನಡುವೆಯೂ ಲಾಭ ಪಡೆದವರು ಯಾರು?

ಅಂತಾರಾಷ್ಟ್ರೀಯ ಹಣಕಾಸು ನಿಧಿ (ಐಎಂಎಫ್‌) 2026ರ ಜಾಗತಿಕ ಬೆಳವಣಿಗೆಯ ಅಂದಾಜನ್ನು ಶೇಕಡ 3.3 ರಿಂದ 3.1ಕ್ಕೆ ಇಳಿಸಿದೆ. ಇರಾನ್ ವಿರುದ್ಧದ ಅಮೆರಿಕ-ಇಸ್ರೇಲ್ ಯುದ್ಧದ ಪರಿಣಾಮ ಮತ್ತು ಹಾರ್ಮುಝ್ ಜಲಸಂಧಿಯನ್ನು ಮುಚ್ಚಿರುವುದು ವಿಶ್ವ ಆರ್ಥಿಕತೆಯ...

ಕ್ಷೇತ್ರ ಮರುವಿಂಗಡಣೆ ವಿರುದ್ಧ ದಕ್ಷಿಣದ ರಾಜ್ಯಗಳ ಪಟ್ಟು: ಭವಿಷ್ಯದ ಮರುಚಿಂತನೆಗೆ ಇದುವೇ ಸೂಕ್ತ ಕಾಲ

ಲೋಕಸಭೆಯಲ್ಲಿ 131 ನೇ ಸಾಂವಿಧಾನಿಕ ತಿದ್ದುಪಡಿ ಮಸೂದೆಯನ್ನು ತಿರಸ್ಕರಿಸಿರುವುದು ಭಾರತದ ಪ್ರಜಾಪ್ರಭುತ್ವ ಪಥದಲ್ಲಿ ಮಹತ್ವದ ಕ್ಷಣವಾಗಿದೆ. ಇದು ಕೇವಲ ಶಾಸಕಾಂಗದ ಹಿನ್ನಡೆಯನ್ನು ಮಾತ್ರವಲ್ಲ, ಒಕ್ಕೂಟ ವ್ಯವಸ್ಥೆಯ ಸೂಕ್ಷ್ಮ ಸಮತೋಲನವನ್ನು ಹಾಳುಮಾಡುವ ಅಪಾಯವನ್ನುಂಟುಮಾಡುವ ಪ್ರಸ್ತಾಪಗಳ...

ಮೋದಿ ಸರ್ಕಾರದ ಯೂಟರ್ನ್ : ಜನಸಂಖ್ಯಾ ಸ್ಫೋಟದ ಕಳವಳದಿಂದ ಹೆಚ್ಚು ಜನಸಂಖ್ಯೆಯ ರಾಜ್ಯಗಳಿಗೆ ಗಿಫ್ಟ್ ಕೊಡುವವರೆಗೆ

ಭಾರತದ ಜನಸಂಖ್ಯೆಯ ಬಗ್ಗೆ ಪ್ರಧಾನಮಂತ್ರಿ ನರೇಂದ್ರ ಮೋದಿ ಮತ್ತು ಅವರ ಸರ್ಕಾರ ನಿಜವಾಗಿಯೂ ಬಹಳ ಕಳವಳ ವ್ಯಕ್ತಪಡಿಸುತ್ತಿದೆ– ಅಥವಾ ಅವರು ನಮಗೆ ಆ ರೀತಿ ನಂಬುವಂತೆ ಮಾಡಿದ್ದಾರೆ. ಏಕೆಂದರೆ... 2019ರ ಸ್ವಾತಂತ್ರ್ಯ ದಿನಾಚರಣೆಯಂದು ಮೋದಿಯವರು,...

ದೇಶವನ್ನುದ್ದೇಶಿಸಿ ಮೋದಿ ಭಾಷಣ : ಚುನಾವಣಾ ನೀತಿ ಸಂಹಿತೆಯ ಉಲ್ಲಂಘನೆ

ಕ್ಷೇತ್ರ ಮರುವಿಂಗಡನೆಗೆ ಉದ್ದೇಶಿಸಿದ್ದ ಸಂವಿಧಾನದ 131ನೇ ತಿದ್ದುಪಡಿ ಮಸೂದೆಗೆ ಲೋಕಸಭೆಯಲ್ಲಿ ಸೋಲಾದ ಬೆನ್ನಲ್ಲೇ ಶನಿವಾರ (ಏ.18) ದೇಶವನ್ನುದ್ದೇಶಿಸಿ ಮಾತನಾಡಿದ ಪ್ರಧಾನಿ ನರೇಂದ್ರ ಮೋದಿ, ಪ್ರತಿಪಕ್ಷಗಳ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ದು, ಸಂಸತ್ತಿನಲ್ಲಿ ವಿರೋಧ...

ಫ್ಯಾಕ್ಟ್‌ಚೆಕ್ : ಅತ್ಯಾಚಾರ ಅಪರಾಧಿ ಪರ ವಕೀಲೆಗೆ ಟಿಎಂಸಿಯಿಂದ ರಾಜ್ಯಸಭೆ ಸೀಟ್; ಬಿಜೆಪಿ ಆರೋಪದ ಸತ್ಯಾಸತ್ಯತೆ ಏನು?

ಪಶ್ಚಿಮ ಬಂಗಾಳ ವಿಧಾನಸಭೆ ಚುನಾವಣೆಗೆ ಪಾಣಿಹತಿ ಕ್ಷೇತ್ರದಿಂದ ಬಿಜೆಪಿ ಅಭ್ಯರ್ಥಿಯಾಗಿರುವ ಆರ್‌ಜಿ ಕರ್‌ ಸಂತ್ರಸ್ತೆಯ ತಾಯಿ ಮತ್ತು ವಕೀಲೆ ಹಾಗೂ ತೃಣಮೂಲ ಕಾಂಗ್ರೆಸ್ (ಟಿಎಂಸಿ) ರಾಜ್ಯಸಭಾ ಸದಸ್ಯೆ ಮೇನಕಾ ಗುರುಸ್ವಾಮಿ ಅವರ ಎಐ-ರಚಿತ...