Homeಕರ್ನಾಟಕದೂರುದಾರರಿಂದ ಸುಲಿಗೆ ಆರೋಪ: ರವಿ ಚನ್ನಣ್ಣನವರ್‌ ಅಮಾನತಿಗೆ ಎಎಪಿ ಆಗ್ರಹ

ದೂರುದಾರರಿಂದ ಸುಲಿಗೆ ಆರೋಪ: ರವಿ ಚನ್ನಣ್ಣನವರ್‌ ಅಮಾನತಿಗೆ ಎಎಪಿ ಆಗ್ರಹ

- Advertisement -
- Advertisement -

ಪೊಲೀಸ್ ವರಿಷ್ಠಾಧಿಕಾರಿ ರವಿ ಡಿ.ಚನ್ನಣ್ಣನವರ್‌ ಸೇರಿದಂತೆ ಇತರ ಪೊಲೀಸ್ ಅಧಿಕಾರಿಗಳ ಮೇಲೆ ಸುಲಿಗೆ ಆರೋಪ ಬಂದಿದ್ದು, ದೂರು ಕೂಡ ದಾಖಲಾಗಿರುವ ಸಂಗತಿ ಬಯಲಾಗಿದೆ. ಈ ಕುರಿತು ‘ದಿ ಫೈಲ್‌.ಇನ್‌‌’ ವಿಸ್ತೃತವಾಗಿ ವರದಿ ಮಾಡಿದೆ. ಈ ಹಿನ್ನೆಲೆ ಕರ್ನಾಟಕ ಎಎಪಿ, ರವಿ ಚನ್ನಣ್ಣನವರ್‌ ಅಮಾನತಿಗೆ ಆಗ್ರಹಿಸಿದೆ.

’ಅಕ್ರಮ ಮರಳು ದಂಧೆ ಪ್ರಕರಣವನ್ನು ಮುಚ್ಚಿ ಹಾಕಲು ಲಂಚ ಪಡೆದ ಆರೋಪಕ್ಕೆ ಸಂಬಂಧಿಸಿ ಪೊಲೀಸ್‌ ವರಿಷ್ಠಾಧಿಕಾರಿ ರವಿ ಡಿ ಚನ್ನಣ್ಣನವರ್‌ ಅವರನ್ನು ಅಮಾನತು ಮಾಡಿ, ನ್ಯಾಯಾಂಗ ತನಿಖೆ ನಡೆಸಬೇಕು’ ಎಂದು ಆಮ್‌ ಆದ್ಮಿ ಪಾರ್ಟಿಯ ರಾಜ್ಯ ಮಾಧ್ಯಮ ಸಂಚಾಲಕ ಜಗದೀಶ್‌ ವಿ ಸದಂ ಆಗ್ರಹಿಸಿದ್ದಾರೆ.

“ಕ್ರಷರ್‌ ಉದ್ಯಮಿ ಸೇರಿ ಹಲವರಿಂದ 3.96 ಕೋಟಿ ಮೊತ್ತ ವಂಚನೆಯಾಗಿದೆ ಎಂದು ಸಲ್ಲಿಕೆಯಾಗಿದ್ದ ದೂರನ್ನು ಆಧರಿಸಿ ಆರೋಪಿಗಳ ವಿರುದ್ಧ ರವಿ ಡಿ ಚನ್ನಣ್ಣನವರ್‌ ಹಾಗೂ ಇತರೆ ಪೊಲೀಸ್‌ ಅಧಿಕಾರಿಗಳು ತನಿಖೆ ನಡೆಸಬೇಕಾಗಿತ್ತು. ಆದರೆ, ಪೊಲೀಸ್‌ ಅಧಿಕಾರಿಗಳೇ ಆರೋಪಿಗಳಿಂದ 50 ಲಕ್ಷ ರೂ. ಲಂಚ ಪಡೆದಿರುವ ಆರೋಪ ಕೇಳಿಬಂದಿದೆ. ಇಂತಹ ಗಂಭೀರ ಆರೋಪ ಹೊತ್ತಿರುವ ರವಿ ಡಿ ಚನ್ನಣ್ಣನವರ್‌ರವರು ಸಿಐಡಿ ಎಸ್ಪಿ ಹುದ್ದೆಯಲ್ಲಿ ಮುಂದುವರಿಯುವುದು ಸರಿಯಲ್ಲ. ತಕ್ಷಣವೇ ಅಮಾನತು ಮಾಡಿ ಸಮಗ್ರ ನ್ಯಾಯಾಂಗ ತನಿಖೆ ನಡೆಸಬೇಕು” ಎಂದಿದ್ದಾರೆ

ಇದನ್ನೂ ಓದಿ: ನಟಿಯ ಬಗ್ಗೆ ಅಸಂಬದ್ದ ಸುದ್ದಿ ಪ್ರಕಟಿಸಿ ‘ವಿಕೃತಿ’ ಮೆರೆದ ವಿಜಯವಾಣಿ.ನೆಟ್‌

’ಈ ಪ್ರಕರಣ ಸಂಬಂಧ ಮಂಜುನಾಥ್‌ ಎಂಬುವವರು ಸರ್ಕಾರದ ಮುಖ್ಯ ಕಾರ್ಯದರ್ಶಿಗೆ ದೂರು ನೀಡಿದ್ದರೂ ಯಾವುದೇ ಕ್ರಮ ಕೈಗೊಳ್ಳಲಾಗಿಲ್ಲ. ರವಿ ಚನ್ನಣ್ಣನವರ್‌ 25 ಲಕ್ಷ, ಡಿವೈಎಸ್‌ಪಿ 15 ಲಕ್ಷ ಹಾಗೂ ಮತ್ತೊಬ್ಬ ಅಧಿಕಾರಿ 10 ಲಕ್ಷ ರೂಪಾಯಿ ಸ್ವೀಕರಿಸಿರುವ ಕುರಿತು ದೂರಿನಲ್ಲಿ ಸ್ಪಷ್ವವಾಗಿ ಉಲ್ಲೇಖಿಸಿದ್ದಾರೆ. ಪ್ರಭಾವಿಗಳ ವಿರುದ್ಧ ಎಫ್‌ಐಆರ್‌ ದಾಖಲಿಸಲು ಕೂಡ ಪೊಲೀಸ್‌ ಅಧಿಕಾರಿಗಳು ಲಕ್ಷಗಟ್ಟಲೆ ಲಂಚ ಕೇಳಿರುವ ಮಾಹಿತಿ ದೂರಿನಲ್ಲಿದೆ. ಆರೋಪಗಳಿಗೆ ಸಂಬಂಧಿಸಿ ಧ್ವನಿ ಮುದ್ರಣ, ವಾಟ್ಸಪ್‌ ಸಂದೇಶ ಮುಂತಾದ ಸಾಕ್ಷಿಗಳಿವೆ ಎಂದು ಮಂಜುನಾಥ್‌ ಹೇಳಿದ್ದಾರೆ. ಅವೆಲ್ಲದರ ಆಧಾರದಲ್ಲಿ ತನಿಖೆ ನಡೆಸಿ, ನೈಸರ್ಗಿಕ ಸಂಪತ್ತನ್ನು ಕೊಳ್ಳೆ ಹೊಡೆದವರಿಗೆ ಹಾಗೂ ಅವರನ್ನು ರಕ್ಷಣೆ ಮಾಡಿದವರಿಗೆ ಕಠಿಣ ಶಿಕ್ಷೆ ನೀಡಬೇಕು” ಎಂದು ಆಗ್ರಹಿಸಿದ್ದಾರೆ.

ಇನ್ನು, ಆರೋಪಿ ಅಶೋಕ್‌ ಎಂಬವರೊಂದಿಗೆ ರವಿ ಡಿ.ಚನ್ನಣ್ಣನವರ್‌ ಹಾಗೂ ಡಿವೈಎಸ್‌ಪಿ ಮಹದೇವಪ್ಪ ಶಾಮೀಲಾಗಿ ತನಿಖೆಯಿಂದ ಆರೋಪಿ ಕೈತಪ್ಪಿಸಿಕೊಳ್ಳಲು ನೆರವಾಗಿದ್ದಾರೆ ಎಂದು ದೂರುದಾರ ಮಂಜುನಾಥ್‌ ಆರೋಪಿಸಿದ್ದಾರೆ.


ಇದನ್ನೂ ಓದಿ: ಸುಲಿಗೆ ಆರೋಪ: ರವಿ ಡಿ.ಚನ್ನಣ್ಣವರ್‌ ಸೇರಿದಂತೆ ಕೆಲವು ಪೊಲೀಸ್ ಅಧಿಕಾರಿಗಳ ಮೇಲೆ ದೂರು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಗುಜರಾತ್‌| ಜಾತಿ ಆಧಾರಿತ ಜಗಳದಲ್ಲಿ ದಲಿತ ಯುವಕನ ಮೇಲೆ ಚಾಕುವಿನಿಂದ ದಾಳಿ

ಶನಿವಾರ ತಡರಾತ್ರಿ ರಾಣಿಪ್‌ನಲ್ಲಿ ನಡೆದ ಸಣ್ಣ ಭಿನ್ನಾಭಿಪ್ರಾಯವೊಂದು ಹಿಂಸಾಚಾರಕ್ಕೆ ತಿರುಗಿದ್ದು, 25 ವರ್ಷದ ದಲಿತ ಯುವಕ ಸಾಹಿಲ್ ವಘೇಲಾ ಮೇಲೆ ಚಾಕುವಿನಿಂದ ಹಲ್ಲೆ ನಡೆಸಲಾಗಿದೆ. ಯುವಕ ಗಂಭೀರವಾಗಿ ಗಾಯಗೊಂಡಿದ್ದು, ಘಟನೆಯು ಈ ಪ್ರದೇಶದಲ್ಲಿ...

ಮುಂಬೈ| ಬುರ್ಖಾ ಧರಿಸಿ ಲೋಕಲ್‌ ಟ್ರೈನ್‌ನ ಮಹಿಳಾ ಬೋಗಿಯಲ್ಲಿ ಪ್ರಯಾಣಿಸಿದ ವ್ಯಕ್ತಿ ಬಂಧನ

ಮುಂಬೈನ ಉಪನಗರ ರೈಲಿನ ಮಹಿಳಾ ಬೋಗಿಯಲ್ಲಿ ಬುರ್ಖಾ ಧರಿಸಿ ಪ್ರಯಾಣಿಸುತ್ತಿದ್ದ ಆರೋಪದ ಮೇಲೆ ನಾಸಿಕ್‌ನ 57 ವರ್ಷದ ವ್ಯಕ್ತಿಯನ್ನು ಬಂಧಿಸಲಾಗಿದೆ ಎಂದು ಅಧಿಕಾರಿಗಳು ಬುಧವಾರ ತಿಳಿಸಿದ್ದಾರೆ. ಈ ಘಟನೆ ಫೆಬ್ರವರಿ 6 ರಂದು ಘಾಟ್ಕೋಪರ್...

ಎಪ್‌ಸ್ಟೀನ್‌ ಫೈಲ್ಸ್ ಜನಾಕ್ರೋಶ : ಎಐ ಶೃಂಗಸಭೆಯಿಂದ ದೂರ ಉಳಿದ ಬಿಲ್‌ ಗೇಟ್ಸ್‌

ಎಪ್‌ಸ್ಟೀನ್‌ ಫೈಲ್ಸ್‌ ಮುಂದಿಟ್ಟುಕೊಂಡು ಜನರು ತೀವ್ರ ವಿರೋಧ ವ್ಯಕ್ತಪಡಿಸಿದ ಬೆನ್ನಲ್ಲೇ, 'ಇಂಡಿಯಾ ಎಐ ಇಂಪ್ಯಾಕ್ಟ್ ಶೃಂಗಸಭೆ'ಯಿಂದ ಮೈಕ್ರೋಸಾಫ್ಟ್‌ ಸಹ-ಸಂಸ್ಥಾಪಕ ಬಿಲ್ ಗೇಟ್ಸ್ ದೂರ ಉಳಿದಿದ್ದಾರೆ. ಈ ಕುರಿತು ಗೇಟ್ಸ್ ಫೌಂಡೇಶನ್ ಇಂಡಿಯಾ ಗುರುವಾರ...

ಬೆಂಗಳೂರಿನಲ್ಲಿ ರಂಜಾನ್ ಆಹಾರ ಮೇಳ ನಡೆಸದಂತೆ ಹೋಟೆಲ್‌ಗಳಿಗೆ ಎಚ್ಚರಿಕೆ

ಬೆಂಗಳೂರು: ಫ್ರೇಸರ್ ಟೌನ್ ಮತ್ತು ಸುತ್ತಮುತ್ತಲಿನ ಪ್ರದೇಶಗಳಲ್ಲಿನ ಎಂಎಂ ರಸ್ತೆಯಲ್ಲಿ ರಂಜಾನ್ ಆಹಾರ ಮೇಳ ನಡೆಸದಂತೆ ಹೋಟೆಲ್ ಮಾಲೀಕರಿಗೆ ಸ್ಥಳೀಯ ನಿವಾಸಿಗಳು ಎಚ್ಚರಿಕೆ ನೀಡಿದ್ದಾರೆ. ರಂಜಾನ್ ಆಹಾರ ಮೇಳದಿಂದ ಸಂಚಾರ ದಟ್ಟಣೆ. ಅವ್ಯವಸ್ಥೆಯ ಜೊತೆಗೆ...

‘ದಿ ಕೇರಳ ಸ್ಟೋರಿ-2’ ಚಲನಚಿತ್ರ ಜಾತ್ಯತೀತತೆಗೆ ಬೆದರಿಕೆ: ಮುಖ್ಯಮಂತ್ರಿ ಪಿಣರಾಯಿ ವಿಜಯನ್

'ದಿ ಕೇರಳ ಸ್ಟೋರಿ' ಚಿತ್ರದ ಎರಡನೇ ಭಾಗ ಬಿಡುಗಡೆಯಾಗುತ್ತಿರುವ ಬಗ್ಗೆ ಕೇರಳ ಮುಖ್ಯಮಂತ್ರಿ ಪಿಣರಾಯಿ ವಿಜಯನ್ ಕಳವಳ ವ್ಯಕ್ತಪಡಿಸಿದ್ದು, ಇದರ ಮೊದಲ ಭಾಗವು "ರಾಜ್ಯದ ವಿರುದ್ಧ ದ್ವೇಷವನ್ನು ಹರಡುವ ಮತ್ತು ನಮ್ಮ ಜಾತ್ಯತೀತ...

ಬಿಜೆಪಿ ಸೇರಲು ಸಿದ್ದರಾದ ಭೂಪೇನ್ ಬೋರಾ : ಪ್ರಿಯಾಂಕಾ, ಡಿಕೆಶಿ ಸೇರಿದಂತೆ ‘ಕೈ ಟ್ರಬಲ್ ಶೂಟರ್‌ಗಳು’ ಅಸ್ಸಾಂಗೆ ದೌಡು

ರಾಜ್ಯ ಕಾಂಗ್ರೆಸ್‌ ಘಟಕದ ಮಾಜಿ ಅಧ್ಯಕ್ಷ ಭೂಪೇನ್ ಬೋರಾ ಬಿಜೆಪಿಗೆ ಹಾರಲು ಸಿದ್ದರಾಗಿರುವ ನಡುವೆ ಪ್ರಿಯಾಂಕಾ ಗಾಂಧಿ, ಡಿ.ಕೆ ಶಿವಕುಮಾರ್ ಸೇರಿದಂತೆ ಕಾಂಗ್ರೆಸ್‌ನ ಟ್ರಬಲ್ ಶೂಟರ್‌ಗಳ ತಂಡ ಅಸ್ಸಾಂಗೆ ದೌಡಾಯಿಸಿದೆ. ಅಸ್ಸಾಂ ಕಾಂಗ್ರೆಸ್ ಅಭ್ಯರ್ಥಿಗಳ...

ಸರ್ಕಾರದ ಭರವಸೆಗೆ ಮಣಿಯದ ಸಾರಿಗೆ ಸಿಬ್ಬಂದಿ : ಮುಷ್ಕರ ಮುಂದುವರಿಸಲು ನಿರ್ಧಾರ

ಹಿಂಬಾಕಿ ಪಾವತಿ, ವೇತನ ಪರಿಷ್ಕರಣೆ ಸೇರಿದಂತೆ ವಿವಿಧ ಬೇಡಿಕೆಗಳನ್ನು ಮುಂದಿಟ್ಟುಕೊಂಡು ರಾಜ್ಯದ ನಾಲ್ಕು ಸಾರಿಗೆ ನಿಗಮಗಳಾದ ಕೆಎಸ್‌ಆರ್‌ಟಿಸಿ, ಕೆಕೆಆರ್‌ಟಿಸಿ, ಎನ್‌ಡಬ್ಲ್ಯುಕೆಆರ್‌ಟಿಸಿ ಹಾಗೂ ಬಿಎಂಟಿಸಿಯ ನೌಕರರು ಇಂದು (ಫೆ.19) ಮುಷ್ಕರಕ್ಕೆ ಕರೆ ಕೊಟ್ಟಿದ್ದಾರೆ. ನೌಕರರ ಪ್ರತಿಭಟನೆ...

ಬೆಂಗಳೂರಿನ ಅಪಾರ್ಟ್‌ಮೆಂಟ್‌ನಲ್ಲಿ ಪತ್ನಿಯ ಕತ್ತು ಹಿಸುಕಿ ಕೊಂದ ನಿವೃತ್ತ ಇಸ್ರೋ ಉದ್ಯೋಗಿ ಬಂಧನ

ಬೆಂಗಳೂರು: ಆಘಾತಕಾರಿ ಘಟನೆಯೊಂದರಲ್ಲಿ, 72 ವರ್ಷದ ನಿವೃತ್ತ ಇಸ್ರೋ ಉದ್ಯೋಗಿಯೊಬ್ಬರು ವೈಟ್‌ಫೀಲ್ಡ್ ವಿಭಾಗದ ಆವಲಹಳ್ಳಿ ಪೊಲೀಸ್ ಠಾಣೆ ವ್ಯಾಪ್ತಿಯ ತಮ್ಮ ಅಪಾರ್ಟ್‌ಮೆಂಟ್‌ನಲ್ಲಿ ಬುಧವಾರ ಪತ್ನಿಯನ್ನು ಕತ್ತು ಹಿಸುಕಿ ಕೊಂದಿರುವುದಾಗಿ ವರದಿಯಾಗಿದೆ.  ಬೊಮ್ಮನಹಳ್ಳಿಯ ಅಪಾರ್ಟ್‌ಮೆಂಟ್‌ನಲ್ಲಿ ಬೆಳಿಗ್ಗೆ...

ಮಧ್ಯಪ್ರದೇಶದಲ್ಲಿ ಶಾಸಕ ರಾಜಾ ಸಿಂಗ್‌ನಿಂದ ದ್ವೇಷ ಭಾಷಣ; ಪ್ರಚೋದನಕಾರಿ ‘ಶಿರಚ್ಛೇದನ’ ಹೇಳಿಕೆಗೆ ವಿರೋಧ

ತಮ್ಮ ಪ್ರಚೋದನಕಾರಿ ಹೇಳಿಕೆಗಳಿಂದಲೇ ಕುಖ್ಯಾತರಾಗಿರುವ ಹೈದರಾಬಾದ್‌ನ ಗೋಶಮಹಲ್ ಶಾಸಕ ಟಿ ರಾಜಾ ಸಿಂಗ್ ಸಾರ್ವಜನಿಕ ರ‍್ಯಾಲಿಯಲ್ಲಿ ಮತ್ತೊಮ್ಮೆ ಪ್ರಚೋದನಕಾರಿ ಹೇಳಿಕೆಗಳನ್ನು ನೀಡಿದ್ದಾರೆ. ಮಧ್ಯಪ್ರದೇಶದಲ್ಲಿ ಅವರು ಆಡಿದ ಮಾತುಗಳು ವಿವಾದಕ್ಕೆ ಕಾರಣವಾಗಿದೆ. "ಪ್ರತಿಯೊಬ್ಬ ಬಜರಂಗಿಗಳು...

ಪಂಜಾಬ್ ವಿಶ್ವವಿದ್ಯಾಲಯದಲ್ಲಿ ಜಾತಿ ಆಧಾರಿತ ತಾರತಮ್ಯ ಆರೋಪ; ‘ಬಡ್ತಿ ವಿಳಂಬವಾಗಿದೆ..’; ಎಂದ ದಲಿತ ಪ್ರಾಧ್ಯಾಪಕ

ಪಂಜಾಬ್ ವಿಶ್ವವಿದ್ಯಾಲಯದ ದಲಿತ ಸಹಾಯಕ ಪ್ರಾಧ್ಯಾಪಕ ಹರ್‌ಪ್ರೀತ್ ಸಿಂಗ್ ಅವರು ವಿಶ್ವವಿದ್ಯಾಲಯದಲ್ಲಿ ಜಾತಿ ಆಧಾರಿತ ತಾರತಮ್ಯ ಇದೆ ಎಂದು ಸಾರ್ವಜನಿಕವಾಗಿ ಆರೋಪಿಸಿದ್ದಾರೆ. ತನ್ನ ಜಾತಿಯ ಕಾರಣದಿಂದಾಗಿ ಉದ್ದೇಶಪೂರ್ವಕವಾಗಿ ಬಡ್ತಿ ವಿಳಂಬ ಮಾಡಲಾಗಿದೆ...