Homeಕರ್ನಾಟಕದೂರುದಾರರಿಂದ ಸುಲಿಗೆ ಆರೋಪ: ರವಿ ಚನ್ನಣ್ಣನವರ್‌ ಅಮಾನತಿಗೆ ಎಎಪಿ ಆಗ್ರಹ

ದೂರುದಾರರಿಂದ ಸುಲಿಗೆ ಆರೋಪ: ರವಿ ಚನ್ನಣ್ಣನವರ್‌ ಅಮಾನತಿಗೆ ಎಎಪಿ ಆಗ್ರಹ

- Advertisement -
- Advertisement -

ಪೊಲೀಸ್ ವರಿಷ್ಠಾಧಿಕಾರಿ ರವಿ ಡಿ.ಚನ್ನಣ್ಣನವರ್‌ ಸೇರಿದಂತೆ ಇತರ ಪೊಲೀಸ್ ಅಧಿಕಾರಿಗಳ ಮೇಲೆ ಸುಲಿಗೆ ಆರೋಪ ಬಂದಿದ್ದು, ದೂರು ಕೂಡ ದಾಖಲಾಗಿರುವ ಸಂಗತಿ ಬಯಲಾಗಿದೆ. ಈ ಕುರಿತು ‘ದಿ ಫೈಲ್‌.ಇನ್‌‌’ ವಿಸ್ತೃತವಾಗಿ ವರದಿ ಮಾಡಿದೆ. ಈ ಹಿನ್ನೆಲೆ ಕರ್ನಾಟಕ ಎಎಪಿ, ರವಿ ಚನ್ನಣ್ಣನವರ್‌ ಅಮಾನತಿಗೆ ಆಗ್ರಹಿಸಿದೆ.

’ಅಕ್ರಮ ಮರಳು ದಂಧೆ ಪ್ರಕರಣವನ್ನು ಮುಚ್ಚಿ ಹಾಕಲು ಲಂಚ ಪಡೆದ ಆರೋಪಕ್ಕೆ ಸಂಬಂಧಿಸಿ ಪೊಲೀಸ್‌ ವರಿಷ್ಠಾಧಿಕಾರಿ ರವಿ ಡಿ ಚನ್ನಣ್ಣನವರ್‌ ಅವರನ್ನು ಅಮಾನತು ಮಾಡಿ, ನ್ಯಾಯಾಂಗ ತನಿಖೆ ನಡೆಸಬೇಕು’ ಎಂದು ಆಮ್‌ ಆದ್ಮಿ ಪಾರ್ಟಿಯ ರಾಜ್ಯ ಮಾಧ್ಯಮ ಸಂಚಾಲಕ ಜಗದೀಶ್‌ ವಿ ಸದಂ ಆಗ್ರಹಿಸಿದ್ದಾರೆ.

“ಕ್ರಷರ್‌ ಉದ್ಯಮಿ ಸೇರಿ ಹಲವರಿಂದ 3.96 ಕೋಟಿ ಮೊತ್ತ ವಂಚನೆಯಾಗಿದೆ ಎಂದು ಸಲ್ಲಿಕೆಯಾಗಿದ್ದ ದೂರನ್ನು ಆಧರಿಸಿ ಆರೋಪಿಗಳ ವಿರುದ್ಧ ರವಿ ಡಿ ಚನ್ನಣ್ಣನವರ್‌ ಹಾಗೂ ಇತರೆ ಪೊಲೀಸ್‌ ಅಧಿಕಾರಿಗಳು ತನಿಖೆ ನಡೆಸಬೇಕಾಗಿತ್ತು. ಆದರೆ, ಪೊಲೀಸ್‌ ಅಧಿಕಾರಿಗಳೇ ಆರೋಪಿಗಳಿಂದ 50 ಲಕ್ಷ ರೂ. ಲಂಚ ಪಡೆದಿರುವ ಆರೋಪ ಕೇಳಿಬಂದಿದೆ. ಇಂತಹ ಗಂಭೀರ ಆರೋಪ ಹೊತ್ತಿರುವ ರವಿ ಡಿ ಚನ್ನಣ್ಣನವರ್‌ರವರು ಸಿಐಡಿ ಎಸ್ಪಿ ಹುದ್ದೆಯಲ್ಲಿ ಮುಂದುವರಿಯುವುದು ಸರಿಯಲ್ಲ. ತಕ್ಷಣವೇ ಅಮಾನತು ಮಾಡಿ ಸಮಗ್ರ ನ್ಯಾಯಾಂಗ ತನಿಖೆ ನಡೆಸಬೇಕು” ಎಂದಿದ್ದಾರೆ

ಇದನ್ನೂ ಓದಿ: ನಟಿಯ ಬಗ್ಗೆ ಅಸಂಬದ್ದ ಸುದ್ದಿ ಪ್ರಕಟಿಸಿ ‘ವಿಕೃತಿ’ ಮೆರೆದ ವಿಜಯವಾಣಿ.ನೆಟ್‌

’ಈ ಪ್ರಕರಣ ಸಂಬಂಧ ಮಂಜುನಾಥ್‌ ಎಂಬುವವರು ಸರ್ಕಾರದ ಮುಖ್ಯ ಕಾರ್ಯದರ್ಶಿಗೆ ದೂರು ನೀಡಿದ್ದರೂ ಯಾವುದೇ ಕ್ರಮ ಕೈಗೊಳ್ಳಲಾಗಿಲ್ಲ. ರವಿ ಚನ್ನಣ್ಣನವರ್‌ 25 ಲಕ್ಷ, ಡಿವೈಎಸ್‌ಪಿ 15 ಲಕ್ಷ ಹಾಗೂ ಮತ್ತೊಬ್ಬ ಅಧಿಕಾರಿ 10 ಲಕ್ಷ ರೂಪಾಯಿ ಸ್ವೀಕರಿಸಿರುವ ಕುರಿತು ದೂರಿನಲ್ಲಿ ಸ್ಪಷ್ವವಾಗಿ ಉಲ್ಲೇಖಿಸಿದ್ದಾರೆ. ಪ್ರಭಾವಿಗಳ ವಿರುದ್ಧ ಎಫ್‌ಐಆರ್‌ ದಾಖಲಿಸಲು ಕೂಡ ಪೊಲೀಸ್‌ ಅಧಿಕಾರಿಗಳು ಲಕ್ಷಗಟ್ಟಲೆ ಲಂಚ ಕೇಳಿರುವ ಮಾಹಿತಿ ದೂರಿನಲ್ಲಿದೆ. ಆರೋಪಗಳಿಗೆ ಸಂಬಂಧಿಸಿ ಧ್ವನಿ ಮುದ್ರಣ, ವಾಟ್ಸಪ್‌ ಸಂದೇಶ ಮುಂತಾದ ಸಾಕ್ಷಿಗಳಿವೆ ಎಂದು ಮಂಜುನಾಥ್‌ ಹೇಳಿದ್ದಾರೆ. ಅವೆಲ್ಲದರ ಆಧಾರದಲ್ಲಿ ತನಿಖೆ ನಡೆಸಿ, ನೈಸರ್ಗಿಕ ಸಂಪತ್ತನ್ನು ಕೊಳ್ಳೆ ಹೊಡೆದವರಿಗೆ ಹಾಗೂ ಅವರನ್ನು ರಕ್ಷಣೆ ಮಾಡಿದವರಿಗೆ ಕಠಿಣ ಶಿಕ್ಷೆ ನೀಡಬೇಕು” ಎಂದು ಆಗ್ರಹಿಸಿದ್ದಾರೆ.

ಇನ್ನು, ಆರೋಪಿ ಅಶೋಕ್‌ ಎಂಬವರೊಂದಿಗೆ ರವಿ ಡಿ.ಚನ್ನಣ್ಣನವರ್‌ ಹಾಗೂ ಡಿವೈಎಸ್‌ಪಿ ಮಹದೇವಪ್ಪ ಶಾಮೀಲಾಗಿ ತನಿಖೆಯಿಂದ ಆರೋಪಿ ಕೈತಪ್ಪಿಸಿಕೊಳ್ಳಲು ನೆರವಾಗಿದ್ದಾರೆ ಎಂದು ದೂರುದಾರ ಮಂಜುನಾಥ್‌ ಆರೋಪಿಸಿದ್ದಾರೆ.


ಇದನ್ನೂ ಓದಿ: ಸುಲಿಗೆ ಆರೋಪ: ರವಿ ಡಿ.ಚನ್ನಣ್ಣವರ್‌ ಸೇರಿದಂತೆ ಕೆಲವು ಪೊಲೀಸ್ ಅಧಿಕಾರಿಗಳ ಮೇಲೆ ದೂರು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ದುಬಾರಿ ರ‍್ಯಾಲಿ, ರೋಡ್ ಶೋ ನಡೆಸುತ್ತಾ ದೇಶದ ಜನರಿಗೆ ಮಿತವ್ಯಯದ ಸಲಹೆ ನೀಡಿದ ಪ್ರಧಾನಿ ಮೋದಿ

ನಾಲ್ಕು ರಾಜ್ಯಗಳು ಮತ್ತು ಒಂದು ಕೇಂದ್ರಾಡಳಿತ ಪ್ರದೇಶದ ವಿಧಾನಸಭೆ ಚುನಾವಣೆಗಳು ಪೂರ್ಣಗೊಂಡ ಬಳಿಕ, ಮೇ 10ರಂದು ಪ್ರಧಾನಿ ನರೇಂದ್ರ ಮೋದಿಯವರು ದೇಶದ ಜನರಿಗೆ ಕೆಲವು ಸಲಹೆಗಳನ್ನು ನೀಡಿದ್ದು, ಕೋವಿಡ್ ಸಂದರ್ಭದ ಮಿತಿಗಳನ್ನು ಹಾಕಿಕೊಳ್ಳುವಂತೆ...

ಮೇ 15 ರಂದು ರಾಷ್ಟ್ರವ್ಯಾಪಿ ಮನರೇಗಾ ಕಾರ್ಮಿಕರ ಮುಷ್ಕರ; ದೇಶದಾದ್ಯಂತ ಕಾರ್ಮಿಕ ಸಂಘಟನೆಗಳ ಬೆಂಬಲ

ವಿಬಿ ಜಿರಾಮ್‌ (ಜಿ) ಕಾಯ್ದೆಯನ್ನು ಹಿಂಪಡೆಯುವ ಜೊತೆಗೆ ಗ್ರಾಮೀಣ ಉದ್ಯೋಗ ಯೋಜನೆಯಡಿಯಲ್ಲಿ ಬಲವಾದ ಉದ್ಯೋಗ ಖಾತರಿಗಳನ್ನು ನೀಡುವಂತೆ ಒತ್ತಾಯಿಸಿ ಕೃಷಿ ಮತ್ತು ಗ್ರಾಮೀಣ ಕಾರ್ಮಿಕರ ಸಂಘಗಳ ಜಂಟಿ ವೇದಿಕೆ ಮತ್ತು ಮನರೇಗಾ ಸಂಘರ್ಷ...

ಕಾಂಗ್ರೆಸ್‌ಗೆ ಕಗ್ಗಂಟಾದ ಕೇರಳ ಸಿಎಂ ಆಯ್ಕೆ : ಮೂವರು ಪ್ರಭಾವಿಗಳಲ್ಲಿ ಹೈಕಮಾಂಡ್ ಒಲವು ಯಾರ ಪರ?

ಕೇರಳ ವಿಧಾನಸಭಾ ಚುನಾವಣೆಯಲ್ಲಿ ಭರ್ಜರಿ ಜಯ ಗಳಿಸಿರುವ ಕಾಂಗ್ರೆಸ್ ನೇತೃತ್ವದ ಯುನೈಟೆಡ್ ಡೆಮಾಕ್ರಟಿಕ್ ಫ್ರಂಟ್ (ಯುಡಿಎಫ್)ಗೆ ಮುಖ್ಯಮಂತ್ರಿ ಆಯ್ಕೆ ಕಗ್ಗಂಟಾಗಿದೆ. ಯುಡಿಎಫ್‌ ಮೈತ್ರಿಕೂಟ ಗೆದ್ದಿರುವ ಒಟ್ಟು 102 ಸ್ಥಾನಗಳ ಪೈಕಿ 63 ಸ್ಥಾನಗಳನ್ನು...

ಏಪ್ರಿಲ್‌ನಲ್ಲಿ ಗಾಜಾ ಮತ್ತು ಪಶ್ಚಿಮ ದಂಡೆಯಾದ್ಯಂತ ಇಸ್ರೇಲಿ ಪಡೆಗಳಿಂದ 122 ಪ್ಯಾಲೆಸ್ಟೀನಿಯನ್ನರ ಹತ್ಯೆ: ವಿಶ್ವಸಂಸ್ಥೆಯ ಹಕ್ಕುಗಳ ಕಚೇರಿ

ಏಪ್ರಿಲ್‌ನಲ್ಲಿ ಆಕ್ರಮಿತ ಪ್ಯಾಲೆಸ್ಟೀನಿಯನ್ ಪ್ರದೇಶಗಳಲ್ಲಿ ಇಸ್ರೇಲಿ ಪಡೆಗಳು ಮತ್ತು ವಸಾಹತುಗಾರರು 22 ಮಕ್ಕಳು ಮತ್ತು ಎಂಟು ಮಹಿಳೆಯರು ಸೇರಿದಂತೆ ಕನಿಷ್ಠ 122 ಪ್ಯಾಲೆಸ್ಟೀನಿಯನ್ನರನ್ನು ಕೊಂದಿದ್ದಾರೆ ಎಂದು ಆಕ್ರಮಿತ ಪ್ಯಾಲೆಸ್ಟೀನಿಯನ್ ಪ್ರದೇಶದಲ್ಲಿನ ವಿಶ್ವಸಂಸ್ಥೆಯ ಮಾನವ...

2026ರ ತಮಿಳುನಾಡು ವಿಧಾನಸಭಾ ಚುನಾವಣೆಯ ಫಲಿತಾಂಶ: ರಾಜಕೀಯ ಸ್ಥಿತ್ಯಂತರಗಳ ಅವಲೋಕನ

"2026ರ ತಮಿಳುನಾಡು ವಿಧಾನಸಭಾ ಚುನಾವಣೆಯು ರಾಜ್ಯದ ರಾಜಕೀಯ ಇತಿಹಾಸದ ಹಾದಿಯನ್ನೇ ಬದಲಿಸಿದೆ. ಟಿವಿಕೆ ಪಕ್ಷದ ನಾಯಕ ಜೋಸೆಫ್ ವಿಜಯ್ ರಾಜ್ಯದ ನೂತನ ಮುಖ್ಯಮಂತ್ರಿಯಾಗಿ ಪದಗ್ರಹಣ ಮಾಡುವ ಮೂಲಕ ದಶಕಗಳ ಕಾಲ ನಡೆದಿದ್ದ ಡಿಎಂಕೆ-ಎಐಎಡಿಎಂಕೆ...

ಬಂಗಾಳದಲ್ಲಿ ‘ಅಧಿಕಾರಿ’ ಆಡಳಿತ: ಜಾತ್ಯತೀತ ಮುಖವಾಡ ಕಳಚಿ ಹಿಂದುತ್ವದ ಅಸ್ತ್ರ ಹಿಡಿದು ಗದ್ದುಗೆ ಏರಿದ ಸುವೇಂದು! 

ಕೋಲ್ಕತ್ತಾ/ನವದೆಹಲಿ: ಪಶ್ಚಿಮ ಬಂಗಾಳದ ಮುಖ್ಯಮಂತ್ರಿ ಗಾದಿಗೆ ಸುವೇಂದು ಅಧಿಕಾರಿ ಅವರ ಪದಾರ್ಪಣೆಯು, ಹಳೆಯ ಭ್ರಷ್ಟ ವ್ಯವಸ್ಥೆಯನ್ನು ಗುಡಿಸಿ ಹಾಕಲು ಬಂದ 'ಹೊರಗಿನ' ವ್ಯಕ್ತಿಯ ಕಥೆಯಲ್ಲ. ಬದಲಿಗೆ, ಬಂಗಾಳದ ಹಿಂಸಾತ್ಮಕ, ಬಣ ರಾಜಕೀಯ ಮತ್ತು...

ಬಂಗಾಳ ಚುನಾವಣೆ : SIRನಲ್ಲಿ ಅತಿ ಹೆಚ್ಚು ಹೆಸರು ಅಳಿಸಿದ ಕ್ಷೇತ್ರಗಳು ಬಿಜೆಪಿ ಪಾಲು

ಪಶ್ಚಿಮ ಬಂಗಾಳದ ವಿಧಾನಸಭೆ ಚುನಾವಣೆಯಲ್ಲಿ ಭರ್ಜರಿ ಗೆಲುವು ಸಾಧಿಸಿರುವ ಬಿಜೆಪಿ, ಸರ್ಕಾರ ರಚಿಸಲು ಅಣಿಯಾಗಿದೆ. ಈ ನಡುವೆ ಹಲವು ಪ್ರಶ್ನೆಗಳು, ಗೊಂದಲಗಳು ಹಾಗೆಯೇ ಮುಂದುವರಿದಿದೆ. ಚುನಾವಣೆ ಘೋಷಣೆಗೆ ಮುನ್ನವೇ ಬಂಗಾಳದ ಮತದಾರರ ಪಟ್ಟಿಯ ವಿಶೇಷ...

ತಮಿಳುನಾಡು ರಾಜ್ಯಪಾಲರ ನಡೆ ಎಷ್ಟು ಸಮಂಜಸ?

'ಮಳೆ ನಿಂತರೂ ಮರದ ಹನಿ ನಿಲ್ಲಲ್ಲ' ಎಂಬ ಮಾತಿಗೆ ಅನ್ವರ್ಥದಂತೆ ಚುನಾವಣೆ ಮುಗಿದರೂ ಸರ್ಕಾರ ರಚನೆಯ ಸರ್ಕಸ್ ಮಾತ್ರ ನಿಲ್ಲುವ ಸೂಚನೆ ಕಾಣುತ್ತಿಲ್ಲ. ತಮಿಳುನಾಡಿನ ರಾಜಕೀಯ ವಿದ್ಯಮಾನಗಳನ್ನು ನೋಡುತ್ತಿದ್ದರೆ ಅಲ್ಲಿ ನಡೆಯುತ್ತಿರವ ಬೆಳವಣಿಗೆಗಳು...

ಬಿಜೆಪಿಯಿಂದ ಯಡಿಯೂರಪ್ಪ ಅಭಿಮಾನೋತ್ಸವ: ಲಿಂಗಾಯತ ಮತಕ್ಕಾಗಿ ಮಾಸ್ಟರ್ ಫ್ಲಾನ್…?  

ದಕ್ಷಿಣ ಭಾರತದ ರಾಜಕಾರಣದಲ್ಲಿ ಬಿಜೆಪಿ ಎನ್ನುವುದು ಒಂದು ಕಾಲಕ್ಕೆ ಕೇವಲ ನಗರ ಪ್ರದೇಶಗಳಿಗೆ ಸೀಮಿತವಾಗಿದ್ದ ಪಕ್ಷ. ಆದರೆ, ಅದೇ ಬಿಜೆಪಿಯನ್ನು ಕರ್ನಾಟಕದಲ್ಲಿ ಬೇರೂರುವಂತೆ ಮಾಡಿದ್ದು ಬೂಕನಕೆರೆ ಸಿದ್ದಲಿಂಗಪ್ಪ ಯಡಿಯೂರಪ್ಪ ಅಂದರೆ ಬಿ.ಎಸ್. ಯಡಿಯೂರಪ್ಪ....

ವಿಜಯ್ ಹೇಳಿದ ಭ್ರಷ್ಟಾಚಾರ ನಿರ್ಮೂಲನೆ ಮತ್ತು ಟಿವಿಕೆ ಶಾಸಕರ ಕ್ರಿಮಿನಲ್ ಹಿನ್ನೆಲೆ

ಎರಡು ವರ್ಷಗಳ ಹಿಂದೆ ಅಸ್ತಿತ್ವಕ್ಕೆ ಬಂದ ಟಿವಿಕೆ ಎಂಬ ಪಕ್ಷ, 75 ವರ್ಷಗಳ ಅನುಭವಿ ಪಕ್ಷವಾದ ಡಿಎಂಕೆಯನ್ನು ಸೋಲಿಸಿರುವುದು, ಕಳೆದ ಅರವತ್ತು ವರ್ಷಗಳಲ್ಲಿ ಮೊಟ್ಟ ಮೊದಲ ಬಾರಿಗೆ ದ್ರಾವಿಡ ಚಳುವಳಿ ಹಿನ್ನೆಲೆಯ ಪಕ್ಷವನ್ನು...