Homeಕರ್ನಾಟಕದೂರುದಾರರಿಂದ ಸುಲಿಗೆ ಆರೋಪ: ರವಿ ಚನ್ನಣ್ಣನವರ್‌ ಅಮಾನತಿಗೆ ಎಎಪಿ ಆಗ್ರಹ

ದೂರುದಾರರಿಂದ ಸುಲಿಗೆ ಆರೋಪ: ರವಿ ಚನ್ನಣ್ಣನವರ್‌ ಅಮಾನತಿಗೆ ಎಎಪಿ ಆಗ್ರಹ

- Advertisement -
- Advertisement -

ಪೊಲೀಸ್ ವರಿಷ್ಠಾಧಿಕಾರಿ ರವಿ ಡಿ.ಚನ್ನಣ್ಣನವರ್‌ ಸೇರಿದಂತೆ ಇತರ ಪೊಲೀಸ್ ಅಧಿಕಾರಿಗಳ ಮೇಲೆ ಸುಲಿಗೆ ಆರೋಪ ಬಂದಿದ್ದು, ದೂರು ಕೂಡ ದಾಖಲಾಗಿರುವ ಸಂಗತಿ ಬಯಲಾಗಿದೆ. ಈ ಕುರಿತು ‘ದಿ ಫೈಲ್‌.ಇನ್‌‌’ ವಿಸ್ತೃತವಾಗಿ ವರದಿ ಮಾಡಿದೆ. ಈ ಹಿನ್ನೆಲೆ ಕರ್ನಾಟಕ ಎಎಪಿ, ರವಿ ಚನ್ನಣ್ಣನವರ್‌ ಅಮಾನತಿಗೆ ಆಗ್ರಹಿಸಿದೆ.

’ಅಕ್ರಮ ಮರಳು ದಂಧೆ ಪ್ರಕರಣವನ್ನು ಮುಚ್ಚಿ ಹಾಕಲು ಲಂಚ ಪಡೆದ ಆರೋಪಕ್ಕೆ ಸಂಬಂಧಿಸಿ ಪೊಲೀಸ್‌ ವರಿಷ್ಠಾಧಿಕಾರಿ ರವಿ ಡಿ ಚನ್ನಣ್ಣನವರ್‌ ಅವರನ್ನು ಅಮಾನತು ಮಾಡಿ, ನ್ಯಾಯಾಂಗ ತನಿಖೆ ನಡೆಸಬೇಕು’ ಎಂದು ಆಮ್‌ ಆದ್ಮಿ ಪಾರ್ಟಿಯ ರಾಜ್ಯ ಮಾಧ್ಯಮ ಸಂಚಾಲಕ ಜಗದೀಶ್‌ ವಿ ಸದಂ ಆಗ್ರಹಿಸಿದ್ದಾರೆ.

“ಕ್ರಷರ್‌ ಉದ್ಯಮಿ ಸೇರಿ ಹಲವರಿಂದ 3.96 ಕೋಟಿ ಮೊತ್ತ ವಂಚನೆಯಾಗಿದೆ ಎಂದು ಸಲ್ಲಿಕೆಯಾಗಿದ್ದ ದೂರನ್ನು ಆಧರಿಸಿ ಆರೋಪಿಗಳ ವಿರುದ್ಧ ರವಿ ಡಿ ಚನ್ನಣ್ಣನವರ್‌ ಹಾಗೂ ಇತರೆ ಪೊಲೀಸ್‌ ಅಧಿಕಾರಿಗಳು ತನಿಖೆ ನಡೆಸಬೇಕಾಗಿತ್ತು. ಆದರೆ, ಪೊಲೀಸ್‌ ಅಧಿಕಾರಿಗಳೇ ಆರೋಪಿಗಳಿಂದ 50 ಲಕ್ಷ ರೂ. ಲಂಚ ಪಡೆದಿರುವ ಆರೋಪ ಕೇಳಿಬಂದಿದೆ. ಇಂತಹ ಗಂಭೀರ ಆರೋಪ ಹೊತ್ತಿರುವ ರವಿ ಡಿ ಚನ್ನಣ್ಣನವರ್‌ರವರು ಸಿಐಡಿ ಎಸ್ಪಿ ಹುದ್ದೆಯಲ್ಲಿ ಮುಂದುವರಿಯುವುದು ಸರಿಯಲ್ಲ. ತಕ್ಷಣವೇ ಅಮಾನತು ಮಾಡಿ ಸಮಗ್ರ ನ್ಯಾಯಾಂಗ ತನಿಖೆ ನಡೆಸಬೇಕು” ಎಂದಿದ್ದಾರೆ

ಇದನ್ನೂ ಓದಿ: ನಟಿಯ ಬಗ್ಗೆ ಅಸಂಬದ್ದ ಸುದ್ದಿ ಪ್ರಕಟಿಸಿ ‘ವಿಕೃತಿ’ ಮೆರೆದ ವಿಜಯವಾಣಿ.ನೆಟ್‌

’ಈ ಪ್ರಕರಣ ಸಂಬಂಧ ಮಂಜುನಾಥ್‌ ಎಂಬುವವರು ಸರ್ಕಾರದ ಮುಖ್ಯ ಕಾರ್ಯದರ್ಶಿಗೆ ದೂರು ನೀಡಿದ್ದರೂ ಯಾವುದೇ ಕ್ರಮ ಕೈಗೊಳ್ಳಲಾಗಿಲ್ಲ. ರವಿ ಚನ್ನಣ್ಣನವರ್‌ 25 ಲಕ್ಷ, ಡಿವೈಎಸ್‌ಪಿ 15 ಲಕ್ಷ ಹಾಗೂ ಮತ್ತೊಬ್ಬ ಅಧಿಕಾರಿ 10 ಲಕ್ಷ ರೂಪಾಯಿ ಸ್ವೀಕರಿಸಿರುವ ಕುರಿತು ದೂರಿನಲ್ಲಿ ಸ್ಪಷ್ವವಾಗಿ ಉಲ್ಲೇಖಿಸಿದ್ದಾರೆ. ಪ್ರಭಾವಿಗಳ ವಿರುದ್ಧ ಎಫ್‌ಐಆರ್‌ ದಾಖಲಿಸಲು ಕೂಡ ಪೊಲೀಸ್‌ ಅಧಿಕಾರಿಗಳು ಲಕ್ಷಗಟ್ಟಲೆ ಲಂಚ ಕೇಳಿರುವ ಮಾಹಿತಿ ದೂರಿನಲ್ಲಿದೆ. ಆರೋಪಗಳಿಗೆ ಸಂಬಂಧಿಸಿ ಧ್ವನಿ ಮುದ್ರಣ, ವಾಟ್ಸಪ್‌ ಸಂದೇಶ ಮುಂತಾದ ಸಾಕ್ಷಿಗಳಿವೆ ಎಂದು ಮಂಜುನಾಥ್‌ ಹೇಳಿದ್ದಾರೆ. ಅವೆಲ್ಲದರ ಆಧಾರದಲ್ಲಿ ತನಿಖೆ ನಡೆಸಿ, ನೈಸರ್ಗಿಕ ಸಂಪತ್ತನ್ನು ಕೊಳ್ಳೆ ಹೊಡೆದವರಿಗೆ ಹಾಗೂ ಅವರನ್ನು ರಕ್ಷಣೆ ಮಾಡಿದವರಿಗೆ ಕಠಿಣ ಶಿಕ್ಷೆ ನೀಡಬೇಕು” ಎಂದು ಆಗ್ರಹಿಸಿದ್ದಾರೆ.

ಇನ್ನು, ಆರೋಪಿ ಅಶೋಕ್‌ ಎಂಬವರೊಂದಿಗೆ ರವಿ ಡಿ.ಚನ್ನಣ್ಣನವರ್‌ ಹಾಗೂ ಡಿವೈಎಸ್‌ಪಿ ಮಹದೇವಪ್ಪ ಶಾಮೀಲಾಗಿ ತನಿಖೆಯಿಂದ ಆರೋಪಿ ಕೈತಪ್ಪಿಸಿಕೊಳ್ಳಲು ನೆರವಾಗಿದ್ದಾರೆ ಎಂದು ದೂರುದಾರ ಮಂಜುನಾಥ್‌ ಆರೋಪಿಸಿದ್ದಾರೆ.


ಇದನ್ನೂ ಓದಿ: ಸುಲಿಗೆ ಆರೋಪ: ರವಿ ಡಿ.ಚನ್ನಣ್ಣವರ್‌ ಸೇರಿದಂತೆ ಕೆಲವು ಪೊಲೀಸ್ ಅಧಿಕಾರಿಗಳ ಮೇಲೆ ದೂರು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರಾಜಸ್ಥಾನ ಸ್ಥಳೀಯ ಸಂಸ್ಥೆ ಚುನಾವಣೆ: ಬಿಕಾನೇರ್‌ನ ನೋಖಾದಲ್ಲಿ ಸಿಪಿಐ(ಎಂ) ಐತಿಹಾಸಿಕ ಜಯಭೇರಿ

ರಾಜಸ್ಥಾನ ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಎಡಪಕ್ಷವಾದ ಸಿಪಿಐ(ಎಂ) (CPI-M) ಐತಿಹಾಸಿಕ ಸಾಧನೆ ಮಾಡಿದ್ದು, ಬಿಕಾನೇರ್ ಜಿಲ್ಲೆಯ ನೋಖಾ ನಗರ ಪಾಲಿಕೆಯ ಆಡಳಿತದ ಚುಕ್ಕಾಣಿಯನ್ನು ತನ್ನದಾಗಿಸಿಕೊಂಡಿದೆ. ಹಲವು ವರ್ಷಗಳಿಂದ ಬಿಜೆಪಿ ಹಾಗೂ ಎನ್‌ಸಿಪಿ (NCP)...

ಏಕರೂಪ ನಾಗರಿಕ ಸಂಹಿತೆಯನ್ನು ಸಂಸತ್ತಿನ ಬದಲು ರಾಜ್ಯಗಳ ಮೂಲಕವೇ ಜಾರಿಗೆ ಅಮಿತ್ ಶಾ ಮುಂದಾಗಿದ್ದೇಕೆ?

ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಸೆಪ್ಟೆಂಬರ್ 13ರಂದು ಮುಂಬೈನಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ, 2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ಮತ್ತು ಎನ್‌ಡಿಎ ಆಡಳಿತವಿರುವ ಎಲ್ಲಾ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ...

ದಿಶಾ ಸಾಲಿಯಾನ್ ಸಾವಿನ ಪ್ರಕರಣ : ಸಿಬಿಐ ಎಫ್ಐಆರ್‌ನಲ್ಲಿ ಆದಿತ್ಯ ಠಾಕ್ರೆ, ರಿಯಾ ಚಕ್ರವರ್ತಿ ಸೇರಿದಂತೆ ಹಲವರ ಹೆಸರು

ಬಾಂಬೆ ಹೈಕೋರ್ಟ್ ಆದೇಶದ ಮೇರೆಗೆ, ಕೇಂದ್ರೀಯ ತನಿಖಾ ದಳವು (ಸಿಬಿಐ) ನಟ ಸುಶಾಂತ್ ಸಿಂಗ್ ರಜಪೂತ್ ಅವರ ಮಾಜಿ ಮ್ಯಾನೇಜರ್ ದಿಶಾ ಸಾಲಿಯಾನ್ ಅವರ ನಿಗೂಢ ಸಾವಿಗೆ ಸಂಬಂಧಿಸಿದಂತೆ ಸೋಮವಾರ(ಸೆ.14) ಎಫ್‌ಐಆರ್ ದಾಖಲಿಸಿದೆ. ಶಿವಸೇನೆ...

ಟಿ. ನರಸೀಪುರ ಇನ್ಸ್‌ಪೆಕ್ಟರ್‌ ಧನಂಜಯ್‌ ಹೇಳಿದ್ದರಲ್ಲಿ ತಪ್ಪೇನಿದೆ? ಸಾರ್ವಜನಿಕರಿಂದ ಬೆಂಬಲ

ಮಸೀದಿಗಳ ಮುಂಭಾಗ ಯಾವುದೇ ಪ್ರಚೋದನಕಾರಿ ಕೃತ್ಯಗಳಿಗೆ ಆಸ್ಪದ ನೀಡದೆ, ರಾತ್ರಿ 10:30ರ ಒಳಗಾಗಿ ಡಿಜೆ ಸದ್ದಿಲ್ಲದೆ ನಿಯಮಾನುಸಾರ ಮೆರವಣಿಗೆ ಮುಗಿಸಲು ಕಟ್ಟುನಿಟ್ಟಿನ ಕ್ರಮ ಕೈಗೊಂಡ ಇನ್ಸ್‌ಪೆಕ್ಟರ್ ಧನಂಜಯ್ ಅವರ ಪರವಾಗಿ ಈಗ ಸಾಮಾಜಿಕ...

ಅತ್ಯಾಚಾರ ಪ್ರಕರಣದಲ್ಲಿ 10 ವರ್ಷ ಜೈಲು ಶಿಕ್ಷೆ: ‘ತೆಹಲ್ಕಾ’ ಸಂಸ್ಥಾಪಕ ತರುಣ್ ತೇಜ್‌ಪಾಲ್ ನ್ಯಾಯಾಲಯಕ್ಕೆ ಶರಣು, ಜೈಲಿಗೆ ರವಾನೆ 

ಪಣಜಿ: 2013ರ ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಬಾಂಬೆ ಹೈಕೋರ್ಟ್‌ನ ಗೋವಾ ಪೀಠದಿಂದ ದೋಷಿ ಎಂದು ತೀರ್ಪುಗೊಂಡು 10 ವರ್ಷಗಳ ಕಠಿಣ ಕಾರಾಗೃಹ ಶಿಕ್ಷೆಗೆ ಗುರಿಯಾಗಿರುವ ‘ತೆಹಲ್ಕಾ’ ಸಂಸ್ಥಾಪಕ ಹಾಗೂ ಮಾಜಿ ಪ್ರಧಾನ ಸಂಪಾದಕ...

ಹೈದರಾಬಾದ್‌ನಲ್ಲಿ ಗಣೇಶ ವಿಗ್ರಹ ಖರೀದಿ ವಿಚಾರಕ್ಕೆ ಘರ್ಷಣೆ: 34 ವರ್ಷದ ವ್ಯಕ್ತಿ ಸಾವು: ತಪ್ಪಿತಸ್ಥರ ವಿರುದ್ಧ ಕ್ರಮಕ್ಕೆ ಆಗ್ರಹ

ಹೈದರಾಬಾದ್: ಗಣೇಶ ಚತುರ್ಥಿ ಆಚರಣೆಗೆ ಮುನ್ನ ಗಣೇಶ ವಿಗ್ರಹ ಖರೀದಿಸುವ ವಿಚಾರಕ್ಕೆ ಸಂಬಂಧಿಸಿದಂತೆ ನಡೆದ ವಾಗ್ವಾದವು ಹಿಂಸಾತ್ಮಕ ಘರ್ಷಣೆಗೆ ತಿರುಗಿ 34 ವರ್ಷದ ವ್ಯಕ್ತಿಯೊಬ್ಬರು ಮೃತಪಟ್ಟಿರುವ ಘಟನೆ ಹೈದರಾಬಾದ್‌ನ ಜೋಡಿಮೆಟ್ಲಾ ಪ್ರದೇಶದಲ್ಲಿ ನಡೆದಿದೆ....

ಮಹಿಳಾ ಬೈಕರ್‌ಗೆ ಬೇಕಂತಲೇ ಢಿಕ್ಕಿ ಹೊಡೆದು ಪರಾರಿಯಾದ ಕಾರು ಸವಾರ! ಬೆಚ್ಚಿಬೀಳಿಸುವ ವಿಡಿಯೋ ವೈರಲ್

ಹರ್ಯಾಣದ ಗುರುಗ್ರಾಮದ ಗಾಲ್ಫ್ ಕೋರ್ಸ್ ರಸ್ತೆಯಲ್ಲಿ ಅತಿವೇಗವಾಗಿ ಬಂದ ಕಾರೊಂದು ಮಹಿಳಾ ಬೈಕ್ ಸವಾರಿಗೆ ಉದ್ದೇಶಪೂರ್ವಕವಾಗಿ ಢಿಕ್ಕಿ ಹೊಡೆದು ಪರಾರಿಯಾಗಿರುವ ಭೀಕರ ಘಟನೆ ನಡೆದಿದೆ. ಹಿಟ್ ಆ್ಯಂಡ್ ರನ್ ಶಂಕೆ ವ್ಯಕ್ತವಾಗಿರುವ ಈ...

ಪ. ಬಂಗಾಳ | 252 ಮದ್ರಸಾಗಳನ್ನು ಮುಚ್ಚಲು ಆದೇಶಿಸಿದ ಬಿಜೆಪಿ ಸರ್ಕಾರ; 100 ಸಂಸ್ಥೆಗಳಿಗೆ ಕಾರಣ ಕೇಳಿ ನೋಟಿಸ್

ರಾಜ್ಯದಾದ್ಯಂತ ಮದ್ರಸಾಗಳ ಸಮೀಕ್ಷೆಯನ್ನು ಪ್ರಾರಂಭಿಸಿದ ಮೂರು ತಿಂಗಳ ನಂತರ, ಬಿಜೆಪಿ ನೇತೃತ್ವದ ಪಶ್ಚಿಮ ಬಂಗಾಳ ಸರ್ಕಾರವು ಅನುಮೋದನೆಯ ಕೊರತೆ ಅಥವಾ ಇತರ ಅಕ್ರಮಗಳನ್ನು ಉಲ್ಲೇಖಿಸಿ 252 ಸಂಸ್ಥೆಗಳನ್ನು ಮುಚ್ಚಲು ಆದೇಶಿಸಿದೆ ಮತ್ತು ಇತರ...

ಟಿ. ನರಸೀಪುರ ಪ್ರತಿಭಟನೆ ವೇಳೆ ವಾಕ್ಸಮರ: ಪ್ರತಾಪ್ ಸಿಂಹ ಹಾಗೂ ಎಲ್. ನಾಗೇಂದ್ರ ನಡುವೆ ಬಹಿರಂಗ ನೂಕಾಟ-ತಳ್ಳಾಟ!

ಟಿ. ನರಸೀಪುರದಲ್ಲಿ ಗಣೇಶೋತ್ಸವ ಮೆರವಣಿಗೆಗೆ ಸಂಬಂಧಿಸಿದ ವಿವಾದದ ಹಿನ್ನೆಲೆಯಲ್ಲಿ ಬಿಜೆಪಿ ಹಮ್ಮಿಕೊಂಡಿದ್ದ ಪ್ರತಿಭಟನೆ ವೇಳೆ ಮೈಸೂರು ಬಿಜೆಪಿಯಲ್ಲಿನ ಆಂತರಿಕ ಭಿನ್ನಮತ ಬಹಿರಂಗಗೊಂಡಿದೆ. ಪೊಲೀಸ್ ಇನ್ಸ್‌ಪೆಕ್ಟರ್ ಧನಂಜಯ್ ವಿರುದ್ಧ ನಡೆದ ಪ್ರತಿಭಟನೆಯ ಸಂದರ್ಭದಲ್ಲಿ ಮಾಜಿ...

ಉಮರ್ ಖಾಲಿದ್ ಕುರಿತ ಸಾಕ್ಷ್ಯಚಿತ್ರ ಪ್ರದರ್ಶನ ಮುಂದೂಡಿದ NLSIU ವಿದ್ಯಾರ್ಥಿ ಸಂಘ; ಯಾವುದೇ ಒತ್ತಡಕ್ಕೆ ಮಣಿದಿಲ್ಲವೆಂದು ಸ್ಪಷ್ಟನೆ

ಬೆಂಗಳೂರಿನ ನ್ಯಾಷನಲ್ ಲಾ ಸ್ಕೂಲ್ ಆಫ್ ಇಂಡಿಯಾ ಯೂನಿವರ್ಸಿಟಿಯ (NLSIU) ಲಾ ಅಂಡ್ ಸೊಸೈಟಿ ಕಮಿಟಿಯು (LawSoc) ಉಮರ್ ಖಾಲಿದ್ ಅವರ ಜೈಲುವಾಸದ ಕುರಿತು ಲಲಿತ್ ವಾಚಾನಿ ನಿರ್ಮಿಸಿರುವ 'ಪ್ರಿಸನರ್ ನಂ. 626710...