Homeಕರ್ನಾಟಕವೇತನ ಸೇರಿದಂತೆ ವಿವಿಧ ಬೇಡಿಕೆಗಳ ಈಡೇರಿಕೆಗಾಗಿ ಆಶಾ ಕಾರ್ಯಕರ್ತೆಯರ ಆನ್‌ಲೈನ್ ಪ್ರತಿಭಟನೆ

ವೇತನ ಸೇರಿದಂತೆ ವಿವಿಧ ಬೇಡಿಕೆಗಳ ಈಡೇರಿಕೆಗಾಗಿ ಆಶಾ ಕಾರ್ಯಕರ್ತೆಯರ ಆನ್‌ಲೈನ್ ಪ್ರತಿಭಟನೆ

- Advertisement -
- Advertisement -

ಬಾಕಿಯಿರುವ ವೇತನ, ಗೌರವಧನ ಸೇರಿದಂತೆ ಹಲವು ಬೇಡಿಕೆಗಳನ್ನು ಈಡೇರಿಸಬೇಕು ಎಂದು ಆಗ್ರಹಿಸಿ ಸೋಮವಾರ ಆಶಾ ಕಾರ್ಯಕರ್ತೆಯರು ರಾಜ್ಯ ವ್ಯಾಪಿ ಆನ್‌ಲೈನ್ ಪ್ರತಿಭಟನೆ ನಡೆಸಿದ್ದಾರೆ. ತಮ್ಮ ಕೆಲಸದ ಸ್ಥಳಗಳಿಂದ ಬೇಡಿಕೆಗಳನ್ನು ಈಡೇರಿಸುವಂತೆ ಆಗ್ರಹಿಸಿದ್ದಾರೆ.

ರಾಜ್ಯ ವ್ಯಾಪಿ ನಡೆಸಿದ ಪ್ರತಿಭಟನೆಯ ಫೋಟೋಗಳನ್ನು ಸಾಮಾಜಿಕ ಜಾಲತಾಣದಲ್ಲಿ ಹರಿಬಿಟು ರಾಜ್ಯ  ಸರ್ಕಾರಕ್ಕೆ ಮತ್ತು ಆರೋಗ್ಯ ಇಲಾಖೆಗೆ ತಮ್ಮ ಹಕ್ಕೊತ್ತಾಯಗಳಿಗೆ ತಕ್ಷಣ ಪರಿಹಾರ ಒದಗಿಸಬೇಕೆಂದು ಮನವಿ ಮಾಡಿದ್ದಾರೆ.

ಕರ್ನಾಟಕ ರಾಜ್ಯ ಸಂಯುಕ್ತ ಆಶಾ ಕಾರ್ಯಕರ್ತೆಯರ ಸಂಘದ ರಾಜ್ಯ ಅಧ್ಯಕ್ಷರಾದ ಕೆ. ಸೋಮಶೇಖರ ಯಾದಗಿರಿ, ರಾಜ್ಯ ಕಾರ್ಯದರ್ಶಿ ಶ್ರೀಮತಿ ಡಿ. ನಾಗಲಕ್ಷ್ಮಿ, ರಾಜ್ಯ ಉಪಾಧ್ಯಕ್ಷೆ ರಮಾ.ಟಿ.ಸಿ ಸೇರಿದಂತೆ ಅನೇಕ ಆಶಾ ಕಾರ್ಯಕರ್ತೆಯರು ತಮ್ಮ ಸ್ಥಳಗಳಿಂದಲೇ ಭಿತ್ತಿಪತ್ರಗಳನ್ನು ಪ್ರದರ್ಶಿಸಿ ಪ್ರತಿಭಟಿಸಿದ್ದಾರೆ.

ಇದನ್ನೂ ಓದಿ: ಜನಾಕ್ರೋಶದ ಸ್ಫೋಟ: ರಾಜ್ಯಾದ್ಯಂತ ಮನೆಗಳಲ್ಲಿಯೇ ಭುಗಿಲೆದ್ದ ಪ್ರತಿಭಟನೆಗಳು

ಗ್ರಾಮಾಂತರ ಪ್ರದೇಶಗಳಲ್ಲಿ ವ್ಯಾಪಕವಾಗಿ ಹರಡುತ್ತಿರುವ ಈ ಕೊರೊನಾ ಸಾಂಕ್ರಾಮಿಕ ಹಬ್ಬುತ್ತಿರುವ  ಸಂದರ್ಭದಲ್ಲಿ ಜನತೆಗೆ ಭರವಸೆಯ ಆತ್ಮವಿಶ್ವಾಸವನ್ನು, ಮುನ್ನೆಚ್ಚರಿಕೆಯನ್ನು, ಜಾಗೃತಿಯನ್ನು ಆಶಾ ಕಾರ್ಯಕರ್ತೆಯರು ಮೂಡಿಸುತ್ತಿದ್ದಾರೆ. ಇವರಿಗೆ ಮೇ ತಿಂಗಳು ಸೇರಿ 3 ತಿಂಗಳಿಂದ ವೇತನ ಕೂಡ ನೀಡಿಲ್ಲ ಎಂದು ಸಂಘಟನೆ ಸದಸ್ಯರು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಆಶಾ ಕಾರ್ಯಕರ್ತೆಯರ ಬೇಡಿಕೆಗಳು ಹೀಗಿವೆ.

೧. ಲಾಕ್‌ಡೌನ್ ಸಂದರ್ಭದಲ್ಲಿ ಕಳೆದ 2 ತಿಂಗಳ ಮತ್ತು ಮೇ ತಿಂಗಳು ಸೇರಿದರೆ 3 ತಿಂಗಳಿಂದ ವೇತನ

೨. ಕಾರ್ಯಕರ್ತೆಯರಿಗೆ ಕೆಲಸ ಮಾಡುವುದಕ್ಕೆ ಅಗತ್ಯವಿರುವಷು  ಮಾಸ್ಕ್, ಸ್ಯಾನಿಟೈಸರ್ ಹಾಗೂ ಗ್ಲೌಸ್ ನೀಡಬೇಕು.

೩. ಪ್ರತಿ ಜಿಲ್ಲೆಯಲಿ  20 ರಿಂದ 40 ಮಂದಿ ಆಶಾ ಕಾರ್ಯಕರ್ತೆಯರು ಸೋಂಕಿಗೋಳಗಾಗಿರುವ ಹಿನ್ನೆಲೆಯಲ್ಲಿ, ಅವರ ಕುಟುಂಬವನ್ನು ಸಶಕ್ತಗೊಳಿಸಲು ಪ್ರತಿ ಆಶಾ ಕಾರ್ಯಕರ್ತೆಯರಿಗೆ ರೂ. 25,000 ಪರಿಹಾರ ನೀಡಬೇಕು.

೪. ಕೊರೊನಾ ಸಂದರ್ಭದಲ್ಲಿನ ವಿಶೇಷ ಸೇವೆಗೆಂದು ಇತರ ಕೊರೊನಾ ವಾರಿಯರ್ಸ್‌ಗಳಿಗೆ ಆರೋಗ್ಯ ಇಲಾಖೆಯಲ್ಲಿ ನೀಡಲಾಗುವ ಮಾಸಿಕ 5000 ರೂಪಾಯಿ ವಿಶೇಷ ಭತ್ಯೆ(ರಿಸ್ಕ್ ಅಲೋಯನ್ )ಯನ್ನು ಆಶಾ ಕಾರ್ಯಕರ್ತೆರಿಗೂ ನೀಡಬೇಕು.

೫. ಕಳೆದ ವರ್ಷ ಕೋವಿಡ್ ಮೊದಲ ಅಲೆಯಲ್ಲಿ  ಮತ್ತು ಈಗ ಕೋವಿಡ್‌ಯಿಂದ ಸಾವಿಗೀಡಾದ ಕುಟುಂಬಕ್ಕೆ ಘೋಷಣೆಯಾದ 50 ಲಕ್ಷ ರೂಪಾಯಿ ಪರಿಹಾರ ನೀಡಬೇಕು.

ಅಸುರಕ್ಷತೆ ಮಧ್ಯೆ ಕೆಲಸ ಮಾಡುತ್ತಿರುವ ಆಶಾ ಕಾರ್ಯಕರ್ತೆಯರ ಬೇಡಿಕೆಗಳನ್ನು ಕೂಡಲೇ ಪರಿಹರಿಸಬೇಕು ಎಂದು ಆಗ್ರಹಿಸಿ, ಸೋಮವಾರ ಕೆಲಸದ ಸ್ಥಳಗಳಿಂದಲೇ ಆನ್‌ಲೈನ್ ಪ್ರತಿಭಟನೆ ನಡೆಸಲಾಗಿದೆ.


ಇದನ್ನೂ ಓದಿ: ಬಾಯಿಮಾತಿನಲ್ಲಿ ಕೊರೊನಾ ವಾರಿಯರ್ಸ್ ಎನ್ನದೆ, ದುಡಿದವರಿಗೆ ಗೌರವಧನ ನೀಡಿ- ಕುಮಾರಸ್ವಾಮಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಸಾವರ್ಕರ್ ದೇವರನ್ನು, ಧಾರ್ಮಿಕ ನಂಬಿಕೆಗಳನ್ನು ಪ್ರಶ್ನಿಸಿದ್ದರು’: ಪುಣೆ ನ್ಯಾಯಾಲಯದಲ್ಲಿ ಮೊಮ್ಮಗ ಸತ್ಯಕಿ ಸಾವರ್ಕರ್ ಒಪ್ಪಿಗೆ

ಪುಣೆ: ಕಾಂಗ್ರೆಸ್ ನಾಯಕ ಹಾಗೂ ಸಂಸತ್ತಿನ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯ ವಿಚಾರಣೆಯು ಅತ್ಯಂತ ಕುತೂಹಲಕಾರಿ ಮತ್ತು ರಾಜಕೀಯ-ಸೈದ್ಧಾಂತಿಕ ತಿರುವನ್ನು ಪಡೆದುಕೊಂಡಿದೆ. ವಿನಾಯಕ ದಾಮೋದರ್...

ಮಾಜಿ ಸಚಿವ ಧರ್ಮೇಂದ್ರ ಪ್ರಧಾನ್ ಮಗಳ ಫೋನ್ ಬಿಲ್ ವಿವಾದ: ₹68 ಸಾವಿರ ಬಿಲ್-ಪೇ ಆಗಿದ್ದು ಸರ್ಕಾರಿ ಹಣದಲ್ಲಾ?

ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ಪುತ್ರಿ ನೈಮಿಷಾ ಪ್ರಧಾನ್ ಅವರು ಮತ್ತೊಮ್ಮೆ ವಿವಾದದ ಕೇಂದ್ರಬಿಂದುವಾಗಿದ್ದಾರೆ. ವಾರಗಳ ಹಿಂದೆ ನೀಟ್ ಪರೀಕ್ಷೆಯ ಪತ್ರಿಕೆ ಸೋರಿಕೆ ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ...

ಇರಾನ್ ವಸತಿ ಕಟ್ಟಡದ ಮೇಲೆ ಅಮೆರಿಕಾ ದಾಳಿ: ಎರಡು ವರ್ಷದ ಮಗು ಸೇರಿ ಒಂದೇ ಕುಟುಂಬದ ಮೂವರ ಸಾವು

ಮಧ್ಯಪ್ರಾಚ್ಯದಲ್ಲಿ ಅಮೆರಿಕ ತನ್ನ ಸಾಮ್ರಾಜ್ಯಶಾಹಿ ಆಧಿಪತ್ಯ ಸ್ಥಾಪನೆಗಾಗಿ ನಡೆಸುತ್ತಿರುವ ಯುದ್ಧಕೋರ ನೀತಿ ಮತ್ತೊಮ್ಮೆ ನಿರಪರಾಧಿ ಸಾರ್ವಜನಿಕರ ರಕ್ತ ಹರಿಸಿದೆ. ಇರಾನ್ ಮೇಲಿನ ಅಮೆರಿಕ ಪಡೆಗಳ ಸರಣಿ ಮತ್ತು ಭೀಕರ ಬಾಂಬ್ ದಾಳಿಗಳು ಕೇವಲ...

SIR: ASDDO ಪಟ್ಟಿಯಲ್ಲಿ ಬೆಂಗಳೂರಿಗೆ ಪ್ರಥಮ ಸ್ಥಾನ, ರಾಜ್ಯದಲ್ಲಿ 2 ಕೋಟಿ ಮತದಾರರ ಹೆಸರು ರದ್ದಾಗುವ ಬೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ರಾಜಧಾನಿ ಬೆಂಗಳೂರು ಅತ್ಯಂತ ಪ್ರಮುಖ ಹಾಗೂ ಕಳವಳಕಾರಿ ಕೇಂದ್ರವಾಗಿ ಹೊರಹೊಮ್ಮಿದೆ. ರಾಜ್ಯದಲ್ಲಿರುವ ಒಟ್ಟು 5.54 ಕೋಟಿ ನೋಂದಾಯಿತ ಮತದಾರರ ಪೈಕಿ...

ಉಮರ್ ಖಾಲಿದ್ ಜಾಮೀನು ಅರ್ಜಿ; ಪೊಲೀಸರ ನಿಲುವು ಕೇಳಿದ ದೆಹಲಿ ಹೈಕೋರ್ಟ್

ಫೆಬ್ರವರಿ 2020 ರಲ್ಲಿ ಈಶಾನ್ಯ ದೆಹಲಿಯಲ್ಲಿ ನಡೆದ ಗಲಭೆಯ ಹಿಂದಿನ "ದೊಡ್ಡ ಪಿತೂರಿ"ಗೆ ಸಂಬಂಧಿಸಿದಂತೆ ಭಯೋತ್ಪಾದನಾ ವಿರೋಧಿ ಕಾನೂನು ಯುಎಪಿಎ ಅಡಿಯಲ್ಲಿ ಪ್ರಕರಣದಲ್ಲಿ ಜಾಮೀನು ಕೋರಿ ಉಮರ್ ಖಾಲಿದ್ ಸಲ್ಲಿಸಿದ ಅರ್ಜಿಯ ಕುರಿತು...

ಮುಂಬೈ: ‘ಶಾಲಾ ಜಿಹಾದ್’ ಎಂಬ ಬಿಜೆಪಿ ನಾಯಕನ ಕೋಮುದ್ವೇಷಕ್ಕೆ ಶಾಲೆಗೆ ನುಗ್ಗಿದ ಬುಲ್ಡೋಜರ್: ಬಿಎಂಸಿಗೆ ಚಾಟಿ ಬೀಸಿದ ಬಾಂಬೆ ಹೈಕೋರ್ಟ್

ಬಿಜೆಪಿ ನಾಯಕ ಕಿರೀಟ್ ಸೋಮಯ್ಯ ಅವರ “ಶಾಲಾ ಜಿಹಾದ್” ಎಂಬ ವಿಷಕಾರಿ ಹೇಳಿಕೆಯ ನಂತರ ಮುಂಬೈನ ಗೋವಂಡಿಯಲ್ಲಿ ಬಡ ಮುಸ್ಲಿಂ ಮಕ್ಕಳ ಶಿಕ್ಷಣದ ಆಶಾಕಿರಣವಾಗಿದ್ದ ತೆಹ್ಜೀಬ್ ಇಸ್ಲಾಮಿಕ್ ಇಂಗ್ಲಿಷ್ ಶಾಲೆಯನ್ನು ಬೃಹನ್ಮುಂಬೈ ಮುನ್ಸಿಪಲ್...

ಹಾಕಿ ತಂಡಕ್ಕೆ ಕೇಸರಿ ಜರ್ಸಿ: ‘ನಮ್ಮ ಗುರುತೇ ನೀಲಿ, ಕೇಸರಿ ಬಣ್ಣದ ತರ್ಕವೇನು?’: ಮಾಜಿ ಹಾಕಿ ಪಟು ಆಕ್ರೋಶ: ಬಿಜೆಪಿ ನಡೆಗೆ ವಿಪಕ್ಷಗಳ ಟೀಕೆ

ಭಾರತೀಯ ಕ್ರೀಡಾರಂಗದ ಹೆಮ್ಮೆಯ ಸಾಂಪ್ರದಾಯಿಕ 'ನೀಲಿ' (ಬ್ಲೂ) ಬಣ್ಣವನ್ನು ಕಳಚಿ, ಹಾಕಿ ತಂಡಕ್ಕೆ ಬಲವಂತವಾಗಿ ಕೇಸರಿ ಬಣ್ಣದ ಜೆರ್ಸಿ ತೊಡಿಸಲು ಹೊರಟಿರುವುದು ಇದೀಗ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ಮುಂಬರುವ ಎಫ್‌ಐಎಚ್ (FIH) ವಿಶ್ವಕಪ್‌ಗಾಗಿ...

ತಮಿಳುನಾಡು: ಶಾಲಾ ಮಕ್ಕಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡಲು ಚಿಂತನೆ

ತಮಿಳುನಾಡಿನ ಸರ್ಕಾರಿ ಶಾಲೆಗಳ ಮಧ್ಯಾಹ್ನದ ಬಿಸಿಊಟದ ಯೋಜನೆಯಡಿಯಲ್ಲಿ ವಿದ್ಯಾರ್ಥಿಗಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡುವ ಪ್ರಸ್ತಾವನೆಯನ್ನು ತಮಿಳುನಾಡು ಸರ್ಕಾರ ಪರಿಶೀಲಿಸುತ್ತಿದ್ದು, ಶಾಲಾ ಶಿಕ್ಷಣ ಸಚಿವ ರಾಜ್‌ಮೋಹನ್ ಅವರು ಈ ಕುರಿತು ಮುಖ್ಯಮಂತ್ರಿ ಸಿ....

ಪ್ರಶ್ನೆಪತ್ರಿಕೆ ಸೋರಿಕೆ ವಿರೋಧಿ ಮಸೂದೆಯಲ್ಲಿ ಸುಧಾರಣೆಗಳಿಲ್ಲ, ರಾಜಕೀಯ ಮಾತ್ರ: ಕೇಂದ್ರದ ವಿರುದ್ಧ ಖರ್ಗೆ ವಾಗ್ದಾಳಿ

ಪಬ್ಲಿಕ್ ಪರೀಕ್ಷೆಗಳ (ಅನ್ಯಾಯಯುತ ವಿಧಾನಗಳ ತಡೆಗಟ್ಟುವಿಕೆ) ತಿದ್ದುಪಡಿ ಮಸೂದೆ 2026 ರ ಚರ್ಚೆಯ ಸಂದರ್ಭದಲ್ಲಿ ಮಾತನಾಡಿದ ರಾಜ್ಯಸಭೆ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ಕೇಂದ್ರ ಸರ್ಕಾರದ ಮೇಲೆ ತೀವ್ರ ವಾಗ್ದಾಳಿ ನಡೆಸಿದರು....

ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಕೆ ಆರೋಪ; ಗೃಹ ಸಚಿವ ಅಮಿತ್‌ ಶಾ ಮೌನ ಪ್ರಶ್ನಿಸಿದ ಕಪಿಲ್ ಸಿಬಲ್

ಜುಲೈ 20 ರಂದು ದೆಹಲಿಯಲ್ಲಿ ನಡೆದ ಸಂಶತ್ ಚಲೋ ಪ್ರತಿಭಟನಾ ಮೆರವಣಿಗೆಯಲ್ಲಿ ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಸಲಾಗಿದೆ ಎಂಬ ಆರೋಪದ ಬಗ್ಗೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ಮೌನವನ್ನು...