Homeಕರ್ನಾಟಕರಾಷ್ಟ್ರಧ್ವಜಕ್ಕೆ ಅವಮಾನ: ಈಶ್ವರಪ್ಪ ವಜಾಕ್ಕೆ ಆಗ್ರಹಿಸಿ ಅಹೋರಾತ್ರಿ ಧರಣಿ ನಡೆಸಿದ ಕಾಂಗ್ರೆಸ್‌

ರಾಷ್ಟ್ರಧ್ವಜಕ್ಕೆ ಅವಮಾನ: ಈಶ್ವರಪ್ಪ ವಜಾಕ್ಕೆ ಆಗ್ರಹಿಸಿ ಅಹೋರಾತ್ರಿ ಧರಣಿ ನಡೆಸಿದ ಕಾಂಗ್ರೆಸ್‌

- Advertisement -
- Advertisement -

ರಾಷ್ಟ್ರಧ್ವಜ ಬದಲಾವಣೆ ಕುರಿತು ವಿವಾದಾತ್ಮಕ ಹೇಳಿಕೆ ನೀಡಿರುವ ಗ್ರಾಮೀಣಾಭಿವೃದ್ಧಿ ಸಚಿವ ಕೆ.ಎಸ್. ಈಶ್ವರಪ್ಪ ಅವರ ವಜಾಕ್ಕೆ ಒತ್ತಾಯಿಸಿರುವ ಕಾಂಗ್ರೆಸ್ ಶಾಸಕರು ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದಲ್ಲಿ ವಿಧಾನಸಭೆಯಲ್ಲಿ ಅಹೋರಾತ್ರಿ ಧರಣಿ ನಡೆಸಿದ್ದಾರೆ.

ಗುರುವಾರ (ಫೆ.17) ರಾತ್ರಿ ವಿಧಾನಸಭೆಯೊಳಗೆ ಕೆಪಿಸಿಸಿ ಅಧ್ಯಕ್ಷ ಡಿ.ಕೆ ಶಿವಕುಮಾರ್ ಮತ್ತು ಇತರ ವಿರೋಧ ಪಕ್ಷದ ಶಾಸಕರು ಧರಣಿ ನಡೆಸಿ, ಘೋಷಣೆ ಕೂಗುತ್ತಿರುವ ದೃಶ್ಯಗಳು ಕಂಡು ಬಂದವು. ಸಚಿವ ಈಶ್ವರಪ್ಪ ವಿರುದ್ಧ ದೇಶದ್ರೋಹ ಪ್ರಕರಣ ದಾಖಲಿಸಬೇಕು ಎಂದು ಕಾಂಗ್ರೆಸ್ ಒತ್ತಾಯಿಸಿದೆ.

“ಕಾಂಗ್ರೆಸ್‌ನ ತ್ಯಾಗ, ಬಲಿದಾನಗಳಿಂದ ರೂಪುಗೊಂಡ ಈ ದೇಶದ ಗೌರವಕ್ಕೆ, ಘನತೆಗೆ, ಐಕ್ಯತೆಗೆ ಧಕ್ಕೆ ಬಂದರೆ ಕಾಂಗ್ರೆಸ್ ಪಕ್ಷ ಎಂದಿಗೂ ಕೈಕಟ್ಟಿ ಕೂರುವುದಿಲ್ಲ. ಬಿಜೆಪಿಯವರ ದೇಶದ್ರೋಹವನ್ನು, ದೇಶಕ್ಕೆ ಎಸಗುವ ಅವಮಾನವನ್ನು ನೋಡಿ ಸುಮ್ಮನಿರಲಾರೆವು. ಈಶ್ವರಪ್ಪನವರ ರಾಜೀನಾಮೆಗೆ ಆಗ್ರಹಿಸಿ ನಮ್ಮ ಅಹೋರಾತ್ರಿ ಧರಣಿ ಮುಂದುವರೆದಿದೆ”ಎಂದು ಕರ್ನಾಟಕ ಕಾಂಗ್ರೆಸ್ ಟ್ವೀಟ್ ಮಾಡಿದೆ.

ಇದನ್ನೂ ಓದಿ: ಸಂಪುಟದಿಂದ ಈಶ್ವರಪ್ಪ ವಜಾಕ್ಕೆ ಕಾಂಗ್ರೆಸ್‌ ಆಗ್ರಹ: ಸದನದಲ್ಲಿ ರಾಷ್ಟ್ರಧ್ವಜ ಹಿಡಿದು ಪ್ರತಿಭಟನೆ

“ಅವರು ಸಂವಿಧಾನವನ್ನು ಬದಲಾಯಿಸಲು ಬಯಸುತ್ತಾರೆ. ಅವರು ರಾಷ್ಟ್ರಧ್ವಜವನ್ನು ಬದಲಾಯಿಸಲು ಬಯಸುತ್ತಾರೆ. ಸಚಿವರು ತಾವು ಹೇಳಿದ್ದನ್ನು ಸಮರ್ಥಿಸಿಕೊಳ್ಳುತ್ತಿದ್ದಾರೆ. ಮುಖ್ಯಮಂತ್ರಿ ಅವರನ್ನು ಇನ್ನು ವಜಾ ಮಾಡಿಲ್ಲ. ಹಾಗಾಗಿ ಅವರು ರಾಜೀನಾಮೆ ನೀಡಬೇಕು ಎಂದು ನಾವು ಒತ್ತಾಯಿಸುತ್ತಿದ್ದೇವೆ” ಎಂದು ಡಿ.ಕೆ ಶಿವಕುಮಾರ್ ಗುರುವಾರ ರಾತ್ರಿ ಸುದ್ದಿಗಾರರಿಗೆ ತಿಳಿಸಿದ್ದಾರೆ.

“ಈಶ್ವರಪ್ಪ ದೇಶದ್ರೋಹ ಮಾಡಿದ್ದಾರೆ. ನಮ್ಮ ಹೆಮ್ಮೆ ಮತ್ತು ರಾಷ್ಟ್ರದ ಸಾರ್ವಭೌಮತ್ವದ ಪ್ರತೀಕವಾಗಿರುವ ರಾಷ್ಟ್ರಧ್ವಜಕ್ಕೆ ಅಪಮಾನ ಮಾಡಿದ್ದಾರೆ’’ ಎಂದು ಆರೋಪಿಸಿದ್ದ ಕಾಂಗ್ರೆಸ್, ನಾವು ಅಹೋರಾತ್ರಿ ಪ್ರತಿಭಟನೆ ನಡೆಸಲು ನಿರ್ಧರಿಸಿದ್ದೇವೆ. ನಾವು ಇದನ್ನು ತಾರ್ಕಿಕ ಅಂತ್ಯಕ್ಕೆ ತೆಗೆದುಕೊಳ್ಳಲು ನಿರ್ಧರಿಸಿದ್ದೇವೆ” ಎಂದು  ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ನಿನ್ನೆ ತಿಳಿಸಿದ್ದರು.

’ಕೆಂಪು ಕೋಟೆಯಲ್ಲಿ ರಾಷ್ಟ್ರಧ್ವಜ ಹಾರಿಸಲಾಗುವುದು, ತ್ರಿವರ್ಣ ಧ್ವಜದ ಬದಲು ಕೇಸರಿ ಧ್ವಜ ಹಾಕಲಾಗುವುದದು’ ಎಂದು ಈಶ್ವರಪ್ಪ ಫೆಬ್ರವರಿ 9 ರಂದು ಹೇಳಿಕೆ ನೀಡಿದ್ದರು. ಇದು ದೇಶದ್ರೋಹ ಎಂದು ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್ ಸದನದ ಬಾವಿಗಿಳಿದು ಪ್ರತಿಭಟನೆ ನಡೆಸಿತ್ತು.


ಇದನ್ನೂ ಓದಿ: ಒಟ್ಟಿಗೆ ಕೈ ಕೈ ಹಿಡಿದು ಕಾಲೇಜಿಗೆ ಬಂದು ಸೌಹಾರ್ದತೆ ಸಾರಿದ ಉಡುಪಿ ವಿದ್ಯಾರ್ಥಿನಿಯರು: ಫೋಟೊ, ವಿಡಿಯೋ ವೈರಲ್

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಜಾಗತಿಕವಾಗಿ ಮೂರು ವರ್ಷಗಳಲ್ಲಿ 600 ಪರಿಸರ ರಕ್ಷಕರ ಹತ್ಯೆ: ವಿಶ್ವಸಂಸ್ಥೆ ತೀವ್ರ ಕಳವಳ: ಜಾಗತಿಕ ತಾಪಮಾನಕ್ಕೆ ಸಾಕ್ಷಿಯಾಗುತ್ತಿರುವ ಭಾರತ

ಜೂನ್ 5 ವಿಶ್ವ ಪರಿಸರ ದಿನ. ಜಗತ್ತಿನಾದ್ಯಂತ ಗಿಡ ನೆಡುವ, ಹಸಿರು ಭಾಷಣ ಬಿಗಿಯುವ ಮತ್ತು ಪರಿಸರ ಕಾಳಜಿಯ ಸಡಗರದ ಆಚರಣೆಗಳು ಎಲ್ಲೆಡೆ ವಿಭಿನ್ನ ರೀತಿಗಳಲ್ಲಿ ವಿಜೃಂಭಿಸುತ್ತಿವೆ. ಆದರೆ, ಇದೇ ಹೊತ್ತಿನಲ್ಲಿ ವಿಶ್ವಸಂಸ್ಥೆಯು...

ಮಣಿಪುರ ಎಸ್‌ಐಆರ್ ವಿರೋಧಿಸಿದ ಕುಕಿ-ಝೋ ಗುಂಪುಗಳು

ಮಣಿಪುರ ರಾಜ್ಯದಲ್ಲಿ ಪ್ರಸ್ತುತ ನಡೆಯುತ್ತಿರುವ ಮತದಾರರ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ಪ್ರಕ್ರಿಯೆ ವಿರುದ್ಧ ಪ್ರತಿಭಟನೆ ವ್ಯಕ್ತವಾಗಿದೆ. ಕುಕಿ-ಝೋ ಬುಡಕಟ್ಟು ಜನಾಂಗದ ಸಾಂಪ್ರದಾಯಿಕ ಗುಂಪಾದ ಕುಕಿ ಇನ್ಪಿ ಮಣಿಪುರ (ಕೆಐಎಂ) ಮತದಾರರ ಪಟ್ಟಿ...

ಹೇಗಿತ್ತು ‘ಕಾಕ್ರೋಚ್ ಜನತಾ ಪಕ್ಷ’ದ ಮೊದಲ ಸುದ್ದಿಗೋಷ್ಠಿ…? ಧರ್ಮೇಂದ್ರ ಪ್ರಧಾನ್‌ ರಾಜೀನಾಮೆಗೆ ಕರೆ

ಜೂನ್ 6, 2026 ರಂದು ಜಂತರ್ ಮಂತರ್‌ನಲ್ಲಿ ನಡೆಯಲಿರುವ 'ಶಾಂತಿಯುತ ಪ್ರತಿಭಟನೆ'ಗೆ ಮುನ್ನ ಜಿರಳೆ ಜನತಾ ಪಕ್ಷ (ಸಿಜೆಪಿ) ತನ್ನ ಮೊದಲ ಪತ್ರಿಕಾಗೋಷ್ಠಿಯನ್ನು ನಡೆಸಿದೆ. ಬುಧವಾರ ಸಂಜೆ (ಜೂ.3) ಸಿಜೆಪಿಯ ಮೂವರು ವಕ್ತಾರರು...

‘ಇದು ಆತ್ಮಹತ್ಯೆಯಲ್ಲ, ಮೋದಿ ಸರ್ಕಾರದ ಭ್ರಷ್ಟ ವ್ಯವಸ್ಥೆ ಮಾಡಿದ ಕೊಲೆ’: ನೀಟ್ ಆಕಾಂಕ್ಷಿಯ ಸಾವಿಗೆ ರಾಹುಲ್ ಗಾಂಧಿ ಆಕ್ರೋಶ

ದೇಶದ ವೈದ್ಯಕೀಯ ಪ್ರವೇಶ ಪರೀಕ್ಷೆಯಾದ ‘ನೀಟ್-ಯುಜಿ’ (NEET-UG) ವಿವಾದ ಮತ್ತು ವಿದ್ಯಾರ್ಥಿಗಳ ಸಾವುಗಳು ಭಾರತದ ಒಟ್ಟಾರೆ ಶಿಕ್ಷಣ ವ್ಯವಸ್ಥೆಯ ದಯನೀಯ ಸ್ಥಿತಿಗೆ ಕನ್ನಡಿ ಹಿಡಿದಿವೆ. ಪರೀಕ್ಷಾ ಅಕ್ರಮಗಳು, ಪ್ರಶ್ನೆ ಪತ್ರಿಕೆ ಸೋರಿಕೆ ಮತ್ತು...

ತಕ್ಷಣವೇ ‘SIR ಹೆಲ್ಪ್‌ ಡೆಸ್ಕ್‌’ ಸ್ಥಾಪಿಸುವಂತೆ ಅಧಿಕಾರಿಗಳಿಗೆ ಸಿಎಂ ಸೂಚನೆ

ರಾಜ್ಯದಲ್ಲಿ ಭಾರತೀಯ ಚುನಾವಣಾ ಆಯೋಗದಿಂದ ನಡೆಯುತ್ತಿರುವ ಎಸ್‌ಐಆರ್ (Special Electoral Roll Purification) ಪ್ರಕ್ರಿಯೆ ಸಂದರ್ಭದಲ್ಲಿ ರಾಜ್ಯದ ಯಾವುದೇ ಪ್ರಜೆಯೂ ತನ್ನ ಅತ್ಯಮೂಲ್ಯವಾದ ಮತದಾನದ ಹಕ್ಕನ್ನು ಕಳೆದುಕೊಳ್ಳಬಾರದು ಎಂದು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್...

ವಿಷಾಹಾರಕ್ಕೆ ಜಾಗತಿಕವಾಗಿ ವರ್ಷಕ್ಕೆ 15 ಲಕ್ಷ ಜನರು ಬಲಿ: ಮಕ್ಕಳಿಗೆ ಹೆಚ್ಚಿನ ಅಪಾಯ: ಭಾರತದ ಸ್ಥಿತಿಯೂ ಆತಂಕಕಾರಿ! 

ನಾವು ದಿನನಿತ್ಯ ಸೇವಿಸುವ ಆಹಾರವೇ ನಮ್ಮ ಜೀವಕ್ಕೆ ಕಂಟಕವಾಗುತ್ತಿದೆಯೇ? ಹೌದು ಎನ್ನುತ್ತದೆ ವಿಶ್ವ ಆರೋಗ್ಯ ಸಂಸ್ಥೆಯ (WHO) ಇತ್ತೀಚಿನ ಆಘಾತಕಾರಿ ವರದಿ. ಜಾಗತಿಕವಾಗಿ ಅಸುರಕ್ಷಿತ ಮತ್ತು ಕಲುಷಿತ ಆಹಾರದ ಸೇವನೆಯಿಂದಾಗಿ ಪ್ರತಿ ವರ್ಷ...

ಡಿಕೆಶಿ ಸಂಪುಟದಲ್ಲಿ ಅಲ್ಪಸಂಖ್ಯಾತರಿಗೆ ಸಿಗುತ್ತಾ ಸೂಕ್ತ ಪ್ರಾತಿನಿಧ್ಯ?

ಮಹತ್ವದ ರಾಜಕೀಯ ಬೆಳವಣಿಗೆಯಲ್ಲಿ ರಾಜ್ಯದ ಮುಖ್ಯಮಂತ್ರಿ ಸ್ಥಾನಕ್ಕೆ ಸಿದ್ದರಾಮಯ್ಯ ಅವರು ರಾಜೀನಾಮೆ ನೀಡಿ, ಡಿ.ಕೆ ಶಿವಕುಮಾರ್ ಹೊಸ ಮುಖ್ಯಮಂತ್ರಿಯಾಗಿ ಅಧಿಕಾರ ವಹಿಸಿಕೊಂಡಾಗಿದೆ. ಈ ಮೂಲಕ ಕಳೆದ ಒಂದು ವರ್ಷದಿಂದ ನಡೆಯುತ್ತಿದ್ದ ಸಿಎಂ ಬದಲಾವಣೆಯ...

‘ಕರ್ನಾಟಕದಲ್ಲಿ SIR’ ಮತ ಉಳಿಸಿಕೊಳ್ಳುವಂತೆ ಕಾರ್ಯಕರ್ತರಿಗೆ CM ಡಿ.ಕೆ ಶಿವಕುಮಾರ್ ಕರೆ!

ಕರ್ನಾಟಕ ರಾಜಕಾರಣದಲ್ಲಿ ಹೊಸ ಯುಗ ಆರಂಭವಾಗಿದೆ. ರಾಜ್ಯದ 25ನೇ ಮುಖ್ಯಮಂತ್ರಿಯಾಗಿ ಡಿ.ಕೆ. ಶಿವಕುಮಾರ್ ಅವರು ಪ್ರಮಾಣವಚನ ಸ್ವೀಕರಿಸಿದ್ದಾರೆ. ಅಧಿಕಾರ ವಹಿಸಿಕೊಂಡ ಬೆನ್ನಲ್ಲೇ ಕೆಲಸ ಮಾಡದಿರುವ ಸಚಿವ ಮತ್ತು ಶಾಸಕರನ್ನು ಸುಮ್ಮನೆ ಬಿಡುವುದಿಲ್ಲ ಎಂದು...

ವೋಟರ್ ಐಡಿ, ಆಧಾರ್ ಇದ್ದರೂ ನೆಮ್ಮದಿ ಇಲ್ಲ, ಪಶ್ಚಿಮ ಬಂಗಾಳದಲ್ಲಿ ಶುರುವಾಯ್ತು ‘ಹೋಲ್ಡಿಂಗ್ ಸೆಂಟರ್’ಗಳ ಭಯ

ಪಶ್ಚಿಮ ಬಂಗಾಳದಲ್ಲಿ "ಯಾರು ಈಗಾಗಲೇ ಮತದಾರರ ಪಟ್ಟಿಯಿಂದ ಹೊರಗುಳಿದಿದ್ದಾರೋ ಮತ್ತು ಟ್ರಿಬ್ಯೂನಲ್‌ನ (ನ್ಯಾಯಮಂಡಳಿ) ಅನುಮೋದನೆಗಾಗಿ ಕಾಯುತ್ತಿದ್ದಾರೋ, ಅಂತಹವರಲ್ಲಿ ಹೊಸ ಪೊಲೀಸ್ ವ್ಯವಸ್ಥೆ ಮತ್ತು ಬಂಧನ ಕೇಂದ್ರಗಳು (ಡಿಟೆಂಷನ್ ಸೆಂಟರ್) ತಮ್ಮನ್ನು ವಿದೇಶಿಯರಂತೆ ನಡೆಸಿಕೊಳ್ಳಲ್ಪಡಬಹುದು...

ಕೇಂದ್ರ ಶಿಕ್ಷಣ ಸಚಿವರ ರಾಜೀನಾಮೆಗೆ ಆಗ್ರಹ : ಮೊದಲ ಬೀದಿ ಹೋರಾಟಕ್ಕೆ ಸಜ್ಜಾದ ಕಾಕ್ರೋಚ್ ಜನತಾ ಪಾರ್ಟಿ

ಸಾಮಾಜಿಕ ಜಾಲತಾಣಗಳಲ್ಲಿ ಹೊಸ ಅಲೆಯನ್ನು ಸೃಷ್ಟಿಸಿರುವ ಕಾಕ್ರೋಚ್ ಜನತಾ ಪಾರ್ಟಿ (ಸಿಜೆಪಿ) ತನ್ನ ಮೊದಲ ಬೀದಿ ಹೋರಾಟಕ್ಕೆ ಸಜ್ಜಾಗಿದೆ. ಜೂನ್ 6, 2026ರಂದು ನವದೆಹಲಿಯ ಜಂತರ್ ಮಂತರ್‌ನಲ್ಲಿ ಸಿಜೆಪಿ ಪ್ರತಿಭಟನೆ ಆಯೋಜಿಸಿದ್ದು, ಇದರ...