Homeಕರ್ನಾಟಕಪ್ರಾಥಮಿಕ ಚರ್ಚೆಗೆ ಅವಕಾಶ: ಪ್ರತಿಪಕ್ಷಗಳ ಒತ್ತಡಕ್ಕೆ ಮಣಿಯದ ಸ್ಪೀಕರ್‌..

ಪ್ರಾಥಮಿಕ ಚರ್ಚೆಗೆ ಅವಕಾಶ: ಪ್ರತಿಪಕ್ಷಗಳ ಒತ್ತಡಕ್ಕೆ ಮಣಿಯದ ಸ್ಪೀಕರ್‌..

- Advertisement -
- Advertisement -

ಒಂದೆಡೆ ಬರ ಮತ್ತು ಮತ್ತೊಂದೆಡೆ ನೆರೆಯ ಸಮಸ್ಯೆಗೆ ತುತ್ತಾಗಿ ಅರ್ಧ ರಾಜ್ಯವೇ ಸಂಕಷ್ಟಕ್ಕೆ ಸಿಲುಕಿರುವ ಹಿನ್ನೆಲೆಯಲ್ಲಿ ಈ ಕುರಿತು ತಾವು ನೀಡಿರುವ ನಿಲುವಳಿ ಸೂಚನೆಗೆ ಸಂಬಂಧಿಸಿದಂತೆ ಪ್ರಾಥಮಿಕ ಚರ್ಚೆಗೆ ಅವಕಾಶ ಮಾಡಿಕೊಡುವಂತೆ ಕಾಂಗ್ರೆಸ್ ಮುಖಂಡ ಸಿದ್ದರಾಮಯ್ಯ ಒತ್ತಾಯಿಸಿದರು. ಆದರೆ ಪ್ರತಿಪಕ್ಷದ ಒತ್ತಾಯಕ್ಕೆ ಮಣಿಯದೆ ಕಾರ್ಯಸೂಚಿಯಂತೆ ಸದನದ ಕಲಾಪಕ್ಕೆ ಅವಕಾಶ ಕಲ್ಪಿಸಿದ ರಾಜ್ಯ ವಿಧಾನ ಸಭೆಯ ಸಭಾಧ್ಯಕ್ಷ ವಿಶ್ವೇಶ್ವರ ಹೆಗಡೆ ಕಾಗೇರಿ ಅವರು ಇಲ್ಲಿ ಇಂದು ಪ್ರತಿಪಕ್ಷಗಳ ಕೆಂಗಣ್ಣಿಗೆ ಗುರಿಯಾದರು.

ಸಂತಾಪ ಸೂಚನಾ ನಿರ್ಣಯ ಪೂರ್ಣಗೊಂಡ ನಂತರ ಕಾರ್ಯದರ್ಶಿಗಳ ವರದಿ ಹಾಗೂ ವಿವಿಧ ಸಮಿತಿಗಳ ವರದಿ ಮಂಡನೆಯ ನಂತರ ಕಾಂಗ್ರೆಸ್ ಹಾಗೂ ಜಾತ್ಯಾತೀತ ಜನತಾ ದಳ ನೀಡಿರುವ ನಿಲುವಳಿ ಸೂಚನೆಯನ್ನು ಕೈಗೆತ್ತಿಕೊಳ್ಳುವುದಾಗಿ ಸಭಾಧ್ಯಕ್ಷರು ಹೇಳಿದರಾದರೂ, ಪ್ರಶ್ನೋತ್ತರ ವೇಳೆ ಹಾಗೂ ಶೂನ್ಯ ವೇಳೆಯ ನಂತರ ನಿಯಮ 60 ರಂತೆ ಸಾರ್ವಜನಿಕ ಮಹತ್ವದ ವಿಚಾರದ ಚರ್ಚೆಗೆ ನಿಯಮಾವಳಿಗಳಲ್ಲಿ ಅವಕಾಶವಿದೆ ಎಂಬುದನ್ನು ಉಲ್ಲೇಖಿಸಿದ ಸಿದ್ದರಾಮಯ್ಯ ಅವರು ದಿನದ ಕಾರ್ಯಸೂಚಿಯಲ್ಲಿ ಪ್ರಶ್ನೋತ್ತರ ವೇಳೆ ಹಾಗೂ ಶೂನ್ಯ ವೇಳೆಯ ಚರ್ಚೆ ಇಲ್ಲದಿರುವ ಹಿನ್ನೆಲೆಯಲ್ಲಿ ಸಭಾಧ್ಯಕ್ಷ ಪೀಠಕ್ಕೆ ತಾವು ಸಲ್ಲಿಸಿದ ನಿಲುವಳಿ ಸೂಚನೆ ಕುರಿತ ಪ್ರಾಥಮಿಕ ಚರ್ಚೆಗೆ ಪಟ್ಟುಹಿಡಿದರು. ಸಭಾನಾಯಕ ಬಿ.ಎಸ್ ಯಡಿಯೂರಪ್ಪ ಅವರು ಮಧ್ಯ ಪ್ರವೇಶಿಸಿ ಚರ್ಚೆಗೆ ತಾವು ಸಿದ್ಧ ಎಂದು ಭರವಸೆ ನೀಡಿದರೂ ಪ್ರತಿಪಕ್ಷದವರು ಮುಖ್ಯಮಂತ್ರಿಯವರ ಮನವಿಯನ್ನು ಪುರಸ್ಕರಿಸಲಿಲ್ಲ.

ತಮ್ಮ ಪಕ್ಷದ ನಾಯಕ ಸಿದ್ದರಾಮಯ್ಯ ಅವರ ಬೆಂಬಲಕ್ಕೆ ನಿಂತ ಸದಸ್ಯರಾದ ಕೆ ಆರ್ ರಮೇಶ್ ಕುಮಾರ್ ಕೃಷ್ಣ ಬೈರೇಗೌಡ ಹಾಗೂ ಹೆಚ್ ಕೆ ಪಾಟೀಲ್ ಅವರು ಕಲಾಪದ ಕಾರ್ಯವಿಧಾನದಲ್ಲಿನ ನಿಯಮಾವಳಿಗಳನ್ನು ಉಲ್ಲೇಖಿಸಿದರೂ ಸಭಾಧ್ಯಕ್ಷರ ಮನವೊಲಿಸಲು ಸಾಧ್ಯವಾಗಲಿಲ್ಲ. ಒಂದು ಹಂತದಲ್ಲಿ ಸಿದ್ದರಾಮಯ್ಯ ಅವರು ಪ್ರಜಾಪ್ರಭುತ್ವದ ಧ್ವನಿ ಅಡಗಿಸಲು ಸಾಧ್ಯವಿಲ್ಲ ಎಂದು ಏರಿದ ಧ್ವನಿಯಲ್ಲಿ ಕೂಗಿ ಸಭಾಧ್ಯಕ್ಷರ ನಡೆಯನ್ನು ಪ್ರತಿಭಟಿಸಿದರಲ್ಲದೆ, ಸಭಾಧ್ಯಕ್ಷರು ಸರ್ಕಾರದ ಜೊತೆಗೆ ಶಾಮೀಲಾಗಿದ್ದಾರೆ ಎಂದು ಆರೋಪಿಸಿದರು. ಇದಾವುದಕ್ಕೂ ಜಗ್ಗದ ಸಭಾಧ್ಯಕ್ಷರು ಕಾರ್ಯಸೂಚಿಯಂತೆ ಕಲಾಪವನ್ನು ಮುಂದುವರೆಸಿದರು.

ರಾಜ್ಯ ವಿಧಾನ ಸಭೆಯ ಕಾರ್ಯದರ್ಶಿ ಎಂ.ಕೆ ವಿಶಾಲಾಕ್ಷಿ ಅವರು ಕಳೆದ ಅಧಿವೇಶನದಲ್ಲಿ ವರದಿಯನ್ನು ಒಪ್ಪಿಸಿದ ನಂತರ ರಾಷ್ಟ್ರಪತಿಯವರಿಂದ – ರಾಜ್ಯಪಾಲರಿಂದ ಒಪ್ಪಿಗೆ ಪಡೆದ ವಿಧೇಯಕಗಳ ಪಟ್ಟಿಯನ್ನು ಸಭೆಯ ಮುಂದೆ ಮಂಡಿಸಿದರು. ಸ್ಥಳೀಯ ಸಂಸ್ಥೆಗಳ ಮತ್ತು ಪಂಚಾಯತ್ ರಾಜ್ ಸಂಸ್ಥೆಗಳ ಸಮಿತಿಯ ಅಧ್ಯಕ್ಷ ಅರಗ ಜ್ಞಾನೇಂದ್ರ ಅವರು 2018-19 ನೇ ಸಾಲಿನ ಸಮಿತಿಯ 28 ನೇ ವರದಿಯನ್ನು ಒಪ್ಪಿಸಿದರು. ಅನುಸೂಚಿತ ಜಾತಿ ಮತ್ತು ಅನುಸೂಚಿತ ಪಂಗಡಗಳ ಕಲ್ಯಾಣ ಸಮಿತಿಯ ಅಧ್ಯಕ್ಷ ಎಸ್.ಅಂಗಾರ ಅವರು ಸಮಿತಿಯ ಎರಡನೇ ವರದಿಯನ್ನು ಸದನಕ್ಕೆ ಒಪ್ಪಿಸಿದರು.

ನಂತರ, ಮುಖ್ಯಮಂತ್ರಿ ಬಿ ಎಸ್ ಯಡಿಯೂರಪ್ಪ ಅವರು ಭಾರತದ ಲೆಕ್ಕ ನಿಯಂತ್ರಕರು ಮತ್ತು ಮಹಾಲೆಕ್ಕಪರಿಶೋಧಕರ 2017-18 ನೇ ಸಾಲಿನ ಧನ ವಿನಿಯೋಗ ಲೆಕ್ಕಗಳು ಮತ್ತು ಹಣಕಾಸು ಲೆಕ್ಕಗಳನ್ನು ಸಭೆಯ ಮುಂದಿಟ್ಟರು. ಅಲ್ಲದೆ, ಮಾರ್ಚ್ 2018 ಕ್ಕೆ ಅಂತ್ಯಗೊಂಡ ರಾಜಸ್ವ ವಲಯದ ಮೇಲಿನ ವರದಿ ಹಾಗೂ ಆರ್ಥಿಕ ವಲಯದ ಮೇಲಿನ ವರದಿಗಳನ್ನು ಸಭೆಯ ಮುಂದಿಟ್ಟರು. ತದನಂತರ, ಉಪ ಮುಖ್ಯಮಂತ್ರಿಗಳಾದ ಗೋವಿಂದ ಎಂ ಕಾರಜೋಳ, ಡಾ. ಸಿ.ಎನ್ ಅಶ್ವಥನಾರಾಯಣ ಹಾಗೂ ಲಕ್ಷ್ಮಣ ಸವದಿ ಕಾನೂನು ಮತ್ತು ಸಂಸದೀಯ ವ್ಯವಹಾರಗಳ ಸಚಿವ ಜೆ.ಸಿ ಮಾಧುಸ್ವಾಮಿ ಅವರನ್ನು ಒಳಗೊಂಡಂತೆ ಬಿ.ಎಸ್ ಯಡಿಯೂರಪ್ಪ ಅವರ ಸಚಿವ ಸಂಪುಟ ಸಹೋದ್ಯೋಗಿಗಳು ತಮ್ಮ ಇಲಾಖೆಗೆ ಸಂಬಂಧಿಸಿದಂತೆ ವಿತ್ತೀಯ ಕಾರ್ಯಕಲಾಪಗಳಲ್ಲಿನ ಪ್ರಸಕ್ತ ಸಾಲಿನ ಅನುದಾನದ ಬೇಡಿಕೆಗಳನ್ನು ಮಂಡಿಸಿದರು.

ಇದೇ ಸಂದರ್ಭದಲ್ಲಿ ಸಿದ್ದರಾಮಯ್ಯ ಅವರನ್ನು ಪ್ರತಿಪಕ್ಷ ನಾಯಕರಾಗಿ ಹಾಗೂ ಸರ್ಕಾರದ ಸಚೇತಕರಾಗಿ ವಿ ಸುನೀಲ್ ಕುಮಾರ್ ಅವರನ್ನು ಮಾನ್ಯ ಮಾಡಿರುವುದಾಗಿ ರಾಜ್ಯ ವಿಧಾನ ಸಭೆಯ ಸಭಾಧ್ಯಕ್ಷ ವಿಶ್ವೇಶ್ವರ ಹೆಗಡೆ ಕಾಗೇರಿ ಅಧಿಕೃತವಾಗಿ ಪ್ರಕಟಿಸಿದರು.

ಅಂತೆಯೇ, ಸದನದ ಕಾರ್ಯಕಲಾಪಗಳನ್ನು ಸುಗಮವಾಗಿ ನಡೆಸಲು ಆಡಳಿತಾರೂಢಾ ಹಾಗೂ ಪ್ರತಿಪಕ್ಷಗಳ ಸದನ ನಾಯಕರನ್ನು ಕಲಾಪ ಸಲಹಾ ಸಮಿತಿಯ ಸಭೆಗೆ ಆಮಂತ್ರಿಸಿದ ಸಭಾಧ್ಯಕ್ಷರು ಪ್ರತಿಪಕ್ಷ ಹಾಗೂ ಆಡಳಿತ ಪಕ್ಷಗಳ ಘೋಷಣೆ ಮತ್ತು ಪ್ರತಿ-ಘೋಘಣೆಗಳ ನಡುವೆಯೇ ಸದನವನ್ನು ಮುಂದೂಡಿದರು.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ವೆನೆಜುವೆಲಾದ ತೈಲ ಖರೀದಿಗೆ ಅಮೆರಿಕದ ಅನುಮತಿ ಪಡೆಯಲು ರಿಲಯನ್ಸ್ ಮಾತುಕತೆ : ವರದಿ

ಭಾರತದ ರಿಲಯನ್ಸ್ ಇಂಡಸ್ಟ್ರೀಸ್ ವೆನೆಜುವೆಲಾದ ಕಚ್ಚಾ ತೈಲ ಖರೀದಿಯನ್ನು ಪುನರಾರಂಭಿಸಲು ಅಮೆರಿಕದ ಅನುಮೋದನೆಯನ್ನು ಕೋರುತ್ತಿದೆ ಎಂದು ಈ ವಿಷಯದ ಬಗ್ಗೆ ಗೊತ್ತಿರುವ ಎರಡು ಮೂಲಗಳು ಶುಕ್ರವಾರ ತಿಳಿಸಿವೆ ಎಂದು ಸುದ್ದಿ ಸಂಸ್ಥೆ ರಾಯಿಟರ್ಸ್...

ಐ-ಪ್ಯಾಕ್‌ ಮೇಲೆ ದಾಳಿ | ಇಡಿ ಅಧಿಕಾರಿಗಳ ವಿರುದ್ಧ ತನಿಖೆ ಪ್ರಾರಂಭಿಸಿದ ಕೋಲ್ಕತ್ತಾ ಪೊಲೀಸರು : ಸುಪ್ರೀಂ ಕೋರ್ಟ್‌ನಲ್ಲಿ ಕೇವಿಯಟ್ ಸಲ್ಲಿಸಿದ ಪ. ಬಂಗಾಳ ಸರ್ಕಾರ

ಐ-ಪ್ಯಾಕ್ ಕಚೇರಿ ಮತ್ತು ಅದರ ಮುಖ್ಯಸ್ಥ ಪ್ರತೀಕ್ ಜೈನ್ ಅವರ ಮನೆ ಮೇಲೆ ಜಾರಿ ನಿರ್ದೇಶನಾಲಯ (ಇಡಿ) ದಾಳಿ ನಡೆಸಿದ ಸಂದರ್ಭದಲ್ಲಿ ದಾಖಲೆಗಳ ಕಳ್ಳತನದ ಆರೋಪದ ಮೇಲೆ ಕೋಲ್ಕತ್ತಾ ಪೊಲೀಸರು ಶನಿವಾರ (ಜ.10)...

ಟ್ರಂಪ್ ಸಂಚಿಗೆ ತಿರುಗೇಟು : ನಾವು ಯಾರ ಅಡಿಯಾಳಾಗಲು ಸಿದ್ದರಿಲ್ಲ ಎಂದ ಗ್ರೀನ್‌ಲ್ಯಾಂಡ್‌ನ ರಾಜಕೀಯ ಪಕ್ಷಗಳು

ವೆನೆಜುವೆಲಾ ಬಳಿಕ ಖನಿಜ-ಸಮೃದ್ಧ ಡ್ಯಾನಿಶ್ (ಡೆನ್ಮಾರ್ಕ್‌) ಸ್ವಾಯತ್ತ ಪ್ರದೇಶವಾದ ಗ್ರೀನ್‌ ಲ್ಯಾಂಡ್‌ ಮೇಲೆ ಬಲಪ್ರಯೋಗ ಮಾಡಲು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಯೋಜಿಸುತ್ತಿದ್ದಾರೆ. ಈ ಬಗ್ಗೆ ಪ್ರತಿಕ್ರಿಯೆ ನೀಡಿರುವ ಗ್ರೀನ್‌ಲ್ಯಾಂಡ್‌ನ ರಾಜಕೀಯ ಪಕ್ಷಗಳು...

ಮತ್ತೆ ಒಂದಾದ ಎನ್‌ಸಿಪಿ ಬಣಗಳು : ಸುಪ್ರಿಯಾ ಸುಳೆ ಜೊತೆ ವೇದಿಕೆ ಹಂಚಿಕೊಂಡ ಅಜಿತ್ ಪವಾರ್, ಜಂಟಿ ಪ್ರಣಾಳಿಕೆ ಬಿಡುಗಡೆ

ಮಹಾರಾಷ್ಟ್ರದ ಉಪಮುಖ್ಯಮಂತ್ರಿ ಅಜಿತ್ ಪವಾರ್ ನೇತೃತ್ವದ ಎನ್‌ಸಿಪಿ ಮತ್ತು ಅವರ ಚಿಕ್ಕಪ್ಪ ಶರದ್ ಪವಾರ್ ನೇತೃತ್ವದ ಎನ್‌ಸಿಪಿ (ಎಸ್‌ಪಿ) ಶನಿವಾರ (ಜ.10) ಪುಣೆ ಮಹಾನಗರ ಪಾಲಿಕೆಗೆ ನಡೆಯಲಿರುವ ಚುನಾವಣೆಗೆ ಜಂಟಿ ಪ್ರಣಾಳಿಕೆಯನ್ನು ಬಿಡುಗಡೆ...

ಮಹಾರಾಷ್ಟ್ರ : ಲೈಂಗಿಕ ದೌರ್ಜನ್ಯ ಪ್ರಕರಣದ ಆರೋಪಿಯನ್ನು ಕೌನ್ಸಿಲರ್ ಮಾಡಿದ ಬಿಜೆಪಿ

ಬದ್ಲಾಪುರ ಲೈಂಗಿಕ ದೌರ್ಜನ್ಯ ಪ್ರಕರಣದ ಸಹ ಆರೋಪಿ ಮತ್ತು ಶಾಲೆಯೊಂದರ ಮಾಜಿ ಕಾರ್ಯದರ್ಶಿ ತುಷಾರ್ ಆಪ್ಟೆ ಎಂಬಾತನನ್ನು ಥಾಣೆ ಜಿಲ್ಲೆಯ ಕುಲ್ಗಾಂವ್-ಬದ್ಲಾಪುರ ಮುನ್ಸಿಪಲ್ ಕೌನ್ಸಿಲ್‌ಗೆ ಬಿಜೆಪಿ ನಾಮನಿರ್ದೇಶನ ಮಾಡಿದೆ. ಮುನ್ಸಿಪಲ್ ಕೌನ್ಸಿಲ್ ಅಧ್ಯಕ್ಷೆ ರುಚಿತಾ...

ಕಳ್ಳನೆಂದು ಸುಳ್ಳಾರೋಪ ಹೊರಿಸಿ ಜೈಲಿಗಟ್ಟಿದ ಪೊಲೀಸರು : ಸಂತ್ರಸ್ತಗೆ 14 ಲಕ್ಷ ರೂ. ಪರಿಹಾರ ನೀಡಲು ಕೋರ್ಟ್ ಆದೇಶ

ಕಳ್ಳನೆಂದು ಸುಳ್ಳಾರೋಪ ಹೊರಿಸಿ ಪೊಲೀಸರು ಜೈಲಿಗಟ್ಟಿದ ವ್ಯಕ್ತಿಗೆ 14 ಲಕ್ಷ ರೂಪಾಯಿ ಪರಿಹಾರ ಒದಗಿಸುವಂತೆ ಕೇರಳ ಸರ್ಕಾರಕ್ಕೆ ಹೈಕೋರ್ಟ್ ಆದೇಶಿಸಿದೆ. ಕಣ್ಣೂರು ಮೂಲದ ವಿ.ಕೆ ತಾಜುದ್ದೀನ್ ಕಾನೂನು ಹೋರಾಟದಲ್ಲಿ ಗೆದ್ದು ಪರಿಹಾರ ಪಡೆದ ವ್ಯಕ್ತಿ....

ಇರಾನ್‌ನಲ್ಲಿ ತೀವ್ರಗೊಂಡ ಆಡಳಿತ ವಿರೋಧಿ ಪ್ರತಿಭಟನೆ : ಟ್ರಂಪ್ ಮಧ್ಯಪ್ರವೇಶ ಕೋರಿದ ಮಾಜಿ ದೊರೆಯ ಮಗ

ಇರಾನ್‌ನಲ್ಲಿ ಭುಗಿಲೆದ್ದಿರುವ ಆಡಳಿತ ವಿರೋಧಿ ಪ್ರತಿಭಟನೆ ತೀವ್ರ ಸ್ವರೂಪ ಪಡೆದುಕೊಂಡಿದೆ. 2025ರ ಡಿಸೆಂಬರ್ 28ರಂದು ಪ್ರಾರಂಭಗೊಂಡ ಪ್ರತಿಭಟನೆಗಳು ಹಿಂಸಾಚಾರ ರೂಪ ಪಡೆದುಕೊಂಡು 13ನೇ ದಿನವೂ ಮುಂದುವರಿದಿದೆ. ಆರ್ಥಿಕ ಬಿಕ್ಕಟ್ಟಿನ ವಿರುದ್ದ (ರಿಯಾಲ್ ಕರೆನ್ಸಿ ಮೌಲ್ಯ...

ಮತದಾರರ ಹೆಸರು ಅಳಿಸಲು ಯತ್ನ : ಬಿಜೆಪಿ ವಿರುದ್ಧ 5 ವಿಪಕ್ಷಗಳಿಂದ ದೂರು ದಾಖಲು

ಅಸ್ಸಾಂನ ಐದು ವಿರೋಧ ಪಕ್ಷಗಳು ಶುಕ್ರವಾರ (ಜ.9) ಪೊಲೀಸ್ ದೂರು ದಾಖಲಿಸಿದ್ದು, ಆಡಳಿತಾರೂಢ ಭಾರತೀಯ ಜನತಾ ಪಾರ್ಟಿ (ಬಿಜೆಪಿ) ರಾಜ್ಯದ ಮತದಾರರ ಪಟ್ಟಿಯಿಂದ ಹೆಚ್ಚಿನ ಸಂಖ್ಯೆಯ ನಿಜವಾದ ಮತದಾರರ ಹೆಸರನ್ನು ಅಳಿಸಲು ಸಂಚು...

ಐ-ಪ್ಯಾಕ್ ಮೇಲೆ ದಾಳಿ ಪ್ರಕರಣ: ಮಮತಾ ಬ್ಯಾನರ್ಜಿ ದೂರಿನ ಬೆನ್ನಲ್ಲೇ ಜಾರಿ ನಿರ್ದೇಶನಾಲಯದ ವಿರುದ್ಧ ಎಫ್‌ಐಆರ್

ಕೋಲ್ಕತ್ತಾ: ರಾಜಕೀಯ ಸಲಹಾ ಸಂಸ್ಥೆ ಐ-ಪಿಎಸಿ (ಐ-ಪ್ಯಾಕ್) ಕಚೇರಿ ಮತ್ತು ಅದರ ಮುಖ್ಯಸ್ಥ ಪ್ರತೀಕ್ ಜೈನ್ ಅವರ ನಿವಾಸದ ಮೇಲೆ ಜಾರಿ ನಿರ್ದೇಶನಾಲಯ ನಡೆಸಿದ ದಾಳಿಗೆ ಸಂಬಂಧಿಸಿದಂತೆ ಟಿಎಂಸಿ ಅಧ್ಯಕ್ಷೆ ಮಮತಾ ಬ್ಯಾನರ್ಜಿ...

‘ಭ್ರಷ್ಟ ಜನತಾ ಪಾರ್ಟಿ’: ಬಿಜೆಪಿ ಡಬಲ್ ಎಂಜಿನ್ ಆಡಳಿತದ ವಿರುದ್ಧ ರಾಹುಲ್ ಗಾಂಧಿ ವಾಗ್ದಾಳಿ

ನವದೆಹಲಿ: ವಿವಿಧ ರಾಜ್ಯಗಳಲ್ಲಿ ಬಿಜೆಪಿಯ ಡಬಲ್ ಎಂಜಿನ್ ಸರ್ಕಾರಗಳ ವಿರುದ್ಧ ಲೋಕಸಭೆ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಾಗ್ದಾಳಿ ನಡೆಸಿದ್ದಾರೆ.  ತಮ್ಮ ಸಾಮಾಜಿಕ ಮಾಧ್ಯಮ ಎಕ್ಸ್‌ನಲ್ಲಿ ಪೋಸ್ಟ್ ಮಾಡಿರುವ ರಾಹುಲ್, ಉತ್ತರಾಖಂಡದಲ್ಲಿ ಅಂಕಿತ...