Homeಕರ್ನಾಟಕಪ್ರಾಥಮಿಕ ಚರ್ಚೆಗೆ ಅವಕಾಶ: ಪ್ರತಿಪಕ್ಷಗಳ ಒತ್ತಡಕ್ಕೆ ಮಣಿಯದ ಸ್ಪೀಕರ್‌..

ಪ್ರಾಥಮಿಕ ಚರ್ಚೆಗೆ ಅವಕಾಶ: ಪ್ರತಿಪಕ್ಷಗಳ ಒತ್ತಡಕ್ಕೆ ಮಣಿಯದ ಸ್ಪೀಕರ್‌..

- Advertisement -
- Advertisement -

ಒಂದೆಡೆ ಬರ ಮತ್ತು ಮತ್ತೊಂದೆಡೆ ನೆರೆಯ ಸಮಸ್ಯೆಗೆ ತುತ್ತಾಗಿ ಅರ್ಧ ರಾಜ್ಯವೇ ಸಂಕಷ್ಟಕ್ಕೆ ಸಿಲುಕಿರುವ ಹಿನ್ನೆಲೆಯಲ್ಲಿ ಈ ಕುರಿತು ತಾವು ನೀಡಿರುವ ನಿಲುವಳಿ ಸೂಚನೆಗೆ ಸಂಬಂಧಿಸಿದಂತೆ ಪ್ರಾಥಮಿಕ ಚರ್ಚೆಗೆ ಅವಕಾಶ ಮಾಡಿಕೊಡುವಂತೆ ಕಾಂಗ್ರೆಸ್ ಮುಖಂಡ ಸಿದ್ದರಾಮಯ್ಯ ಒತ್ತಾಯಿಸಿದರು. ಆದರೆ ಪ್ರತಿಪಕ್ಷದ ಒತ್ತಾಯಕ್ಕೆ ಮಣಿಯದೆ ಕಾರ್ಯಸೂಚಿಯಂತೆ ಸದನದ ಕಲಾಪಕ್ಕೆ ಅವಕಾಶ ಕಲ್ಪಿಸಿದ ರಾಜ್ಯ ವಿಧಾನ ಸಭೆಯ ಸಭಾಧ್ಯಕ್ಷ ವಿಶ್ವೇಶ್ವರ ಹೆಗಡೆ ಕಾಗೇರಿ ಅವರು ಇಲ್ಲಿ ಇಂದು ಪ್ರತಿಪಕ್ಷಗಳ ಕೆಂಗಣ್ಣಿಗೆ ಗುರಿಯಾದರು.

ಸಂತಾಪ ಸೂಚನಾ ನಿರ್ಣಯ ಪೂರ್ಣಗೊಂಡ ನಂತರ ಕಾರ್ಯದರ್ಶಿಗಳ ವರದಿ ಹಾಗೂ ವಿವಿಧ ಸಮಿತಿಗಳ ವರದಿ ಮಂಡನೆಯ ನಂತರ ಕಾಂಗ್ರೆಸ್ ಹಾಗೂ ಜಾತ್ಯಾತೀತ ಜನತಾ ದಳ ನೀಡಿರುವ ನಿಲುವಳಿ ಸೂಚನೆಯನ್ನು ಕೈಗೆತ್ತಿಕೊಳ್ಳುವುದಾಗಿ ಸಭಾಧ್ಯಕ್ಷರು ಹೇಳಿದರಾದರೂ, ಪ್ರಶ್ನೋತ್ತರ ವೇಳೆ ಹಾಗೂ ಶೂನ್ಯ ವೇಳೆಯ ನಂತರ ನಿಯಮ 60 ರಂತೆ ಸಾರ್ವಜನಿಕ ಮಹತ್ವದ ವಿಚಾರದ ಚರ್ಚೆಗೆ ನಿಯಮಾವಳಿಗಳಲ್ಲಿ ಅವಕಾಶವಿದೆ ಎಂಬುದನ್ನು ಉಲ್ಲೇಖಿಸಿದ ಸಿದ್ದರಾಮಯ್ಯ ಅವರು ದಿನದ ಕಾರ್ಯಸೂಚಿಯಲ್ಲಿ ಪ್ರಶ್ನೋತ್ತರ ವೇಳೆ ಹಾಗೂ ಶೂನ್ಯ ವೇಳೆಯ ಚರ್ಚೆ ಇಲ್ಲದಿರುವ ಹಿನ್ನೆಲೆಯಲ್ಲಿ ಸಭಾಧ್ಯಕ್ಷ ಪೀಠಕ್ಕೆ ತಾವು ಸಲ್ಲಿಸಿದ ನಿಲುವಳಿ ಸೂಚನೆ ಕುರಿತ ಪ್ರಾಥಮಿಕ ಚರ್ಚೆಗೆ ಪಟ್ಟುಹಿಡಿದರು. ಸಭಾನಾಯಕ ಬಿ.ಎಸ್ ಯಡಿಯೂರಪ್ಪ ಅವರು ಮಧ್ಯ ಪ್ರವೇಶಿಸಿ ಚರ್ಚೆಗೆ ತಾವು ಸಿದ್ಧ ಎಂದು ಭರವಸೆ ನೀಡಿದರೂ ಪ್ರತಿಪಕ್ಷದವರು ಮುಖ್ಯಮಂತ್ರಿಯವರ ಮನವಿಯನ್ನು ಪುರಸ್ಕರಿಸಲಿಲ್ಲ.

ತಮ್ಮ ಪಕ್ಷದ ನಾಯಕ ಸಿದ್ದರಾಮಯ್ಯ ಅವರ ಬೆಂಬಲಕ್ಕೆ ನಿಂತ ಸದಸ್ಯರಾದ ಕೆ ಆರ್ ರಮೇಶ್ ಕುಮಾರ್ ಕೃಷ್ಣ ಬೈರೇಗೌಡ ಹಾಗೂ ಹೆಚ್ ಕೆ ಪಾಟೀಲ್ ಅವರು ಕಲಾಪದ ಕಾರ್ಯವಿಧಾನದಲ್ಲಿನ ನಿಯಮಾವಳಿಗಳನ್ನು ಉಲ್ಲೇಖಿಸಿದರೂ ಸಭಾಧ್ಯಕ್ಷರ ಮನವೊಲಿಸಲು ಸಾಧ್ಯವಾಗಲಿಲ್ಲ. ಒಂದು ಹಂತದಲ್ಲಿ ಸಿದ್ದರಾಮಯ್ಯ ಅವರು ಪ್ರಜಾಪ್ರಭುತ್ವದ ಧ್ವನಿ ಅಡಗಿಸಲು ಸಾಧ್ಯವಿಲ್ಲ ಎಂದು ಏರಿದ ಧ್ವನಿಯಲ್ಲಿ ಕೂಗಿ ಸಭಾಧ್ಯಕ್ಷರ ನಡೆಯನ್ನು ಪ್ರತಿಭಟಿಸಿದರಲ್ಲದೆ, ಸಭಾಧ್ಯಕ್ಷರು ಸರ್ಕಾರದ ಜೊತೆಗೆ ಶಾಮೀಲಾಗಿದ್ದಾರೆ ಎಂದು ಆರೋಪಿಸಿದರು. ಇದಾವುದಕ್ಕೂ ಜಗ್ಗದ ಸಭಾಧ್ಯಕ್ಷರು ಕಾರ್ಯಸೂಚಿಯಂತೆ ಕಲಾಪವನ್ನು ಮುಂದುವರೆಸಿದರು.

ರಾಜ್ಯ ವಿಧಾನ ಸಭೆಯ ಕಾರ್ಯದರ್ಶಿ ಎಂ.ಕೆ ವಿಶಾಲಾಕ್ಷಿ ಅವರು ಕಳೆದ ಅಧಿವೇಶನದಲ್ಲಿ ವರದಿಯನ್ನು ಒಪ್ಪಿಸಿದ ನಂತರ ರಾಷ್ಟ್ರಪತಿಯವರಿಂದ – ರಾಜ್ಯಪಾಲರಿಂದ ಒಪ್ಪಿಗೆ ಪಡೆದ ವಿಧೇಯಕಗಳ ಪಟ್ಟಿಯನ್ನು ಸಭೆಯ ಮುಂದೆ ಮಂಡಿಸಿದರು. ಸ್ಥಳೀಯ ಸಂಸ್ಥೆಗಳ ಮತ್ತು ಪಂಚಾಯತ್ ರಾಜ್ ಸಂಸ್ಥೆಗಳ ಸಮಿತಿಯ ಅಧ್ಯಕ್ಷ ಅರಗ ಜ್ಞಾನೇಂದ್ರ ಅವರು 2018-19 ನೇ ಸಾಲಿನ ಸಮಿತಿಯ 28 ನೇ ವರದಿಯನ್ನು ಒಪ್ಪಿಸಿದರು. ಅನುಸೂಚಿತ ಜಾತಿ ಮತ್ತು ಅನುಸೂಚಿತ ಪಂಗಡಗಳ ಕಲ್ಯಾಣ ಸಮಿತಿಯ ಅಧ್ಯಕ್ಷ ಎಸ್.ಅಂಗಾರ ಅವರು ಸಮಿತಿಯ ಎರಡನೇ ವರದಿಯನ್ನು ಸದನಕ್ಕೆ ಒಪ್ಪಿಸಿದರು.

ನಂತರ, ಮುಖ್ಯಮಂತ್ರಿ ಬಿ ಎಸ್ ಯಡಿಯೂರಪ್ಪ ಅವರು ಭಾರತದ ಲೆಕ್ಕ ನಿಯಂತ್ರಕರು ಮತ್ತು ಮಹಾಲೆಕ್ಕಪರಿಶೋಧಕರ 2017-18 ನೇ ಸಾಲಿನ ಧನ ವಿನಿಯೋಗ ಲೆಕ್ಕಗಳು ಮತ್ತು ಹಣಕಾಸು ಲೆಕ್ಕಗಳನ್ನು ಸಭೆಯ ಮುಂದಿಟ್ಟರು. ಅಲ್ಲದೆ, ಮಾರ್ಚ್ 2018 ಕ್ಕೆ ಅಂತ್ಯಗೊಂಡ ರಾಜಸ್ವ ವಲಯದ ಮೇಲಿನ ವರದಿ ಹಾಗೂ ಆರ್ಥಿಕ ವಲಯದ ಮೇಲಿನ ವರದಿಗಳನ್ನು ಸಭೆಯ ಮುಂದಿಟ್ಟರು. ತದನಂತರ, ಉಪ ಮುಖ್ಯಮಂತ್ರಿಗಳಾದ ಗೋವಿಂದ ಎಂ ಕಾರಜೋಳ, ಡಾ. ಸಿ.ಎನ್ ಅಶ್ವಥನಾರಾಯಣ ಹಾಗೂ ಲಕ್ಷ್ಮಣ ಸವದಿ ಕಾನೂನು ಮತ್ತು ಸಂಸದೀಯ ವ್ಯವಹಾರಗಳ ಸಚಿವ ಜೆ.ಸಿ ಮಾಧುಸ್ವಾಮಿ ಅವರನ್ನು ಒಳಗೊಂಡಂತೆ ಬಿ.ಎಸ್ ಯಡಿಯೂರಪ್ಪ ಅವರ ಸಚಿವ ಸಂಪುಟ ಸಹೋದ್ಯೋಗಿಗಳು ತಮ್ಮ ಇಲಾಖೆಗೆ ಸಂಬಂಧಿಸಿದಂತೆ ವಿತ್ತೀಯ ಕಾರ್ಯಕಲಾಪಗಳಲ್ಲಿನ ಪ್ರಸಕ್ತ ಸಾಲಿನ ಅನುದಾನದ ಬೇಡಿಕೆಗಳನ್ನು ಮಂಡಿಸಿದರು.

ಇದೇ ಸಂದರ್ಭದಲ್ಲಿ ಸಿದ್ದರಾಮಯ್ಯ ಅವರನ್ನು ಪ್ರತಿಪಕ್ಷ ನಾಯಕರಾಗಿ ಹಾಗೂ ಸರ್ಕಾರದ ಸಚೇತಕರಾಗಿ ವಿ ಸುನೀಲ್ ಕುಮಾರ್ ಅವರನ್ನು ಮಾನ್ಯ ಮಾಡಿರುವುದಾಗಿ ರಾಜ್ಯ ವಿಧಾನ ಸಭೆಯ ಸಭಾಧ್ಯಕ್ಷ ವಿಶ್ವೇಶ್ವರ ಹೆಗಡೆ ಕಾಗೇರಿ ಅಧಿಕೃತವಾಗಿ ಪ್ರಕಟಿಸಿದರು.

ಅಂತೆಯೇ, ಸದನದ ಕಾರ್ಯಕಲಾಪಗಳನ್ನು ಸುಗಮವಾಗಿ ನಡೆಸಲು ಆಡಳಿತಾರೂಢಾ ಹಾಗೂ ಪ್ರತಿಪಕ್ಷಗಳ ಸದನ ನಾಯಕರನ್ನು ಕಲಾಪ ಸಲಹಾ ಸಮಿತಿಯ ಸಭೆಗೆ ಆಮಂತ್ರಿಸಿದ ಸಭಾಧ್ಯಕ್ಷರು ಪ್ರತಿಪಕ್ಷ ಹಾಗೂ ಆಡಳಿತ ಪಕ್ಷಗಳ ಘೋಷಣೆ ಮತ್ತು ಪ್ರತಿ-ಘೋಘಣೆಗಳ ನಡುವೆಯೇ ಸದನವನ್ನು ಮುಂದೂಡಿದರು.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಪ್ರತಿಭಟನೆಗೆ ಹೋಗುವ ಮಹಿಳೆಯರು ಗ್ಯಾಂಗ್‌ರೇಪ್‌ ಆನಂದಿಸುತ್ತಾರೆ ಎಂದಿದ್ದ ಟಿ.ಜಿ. ಮೋಹನ್‌ದಾಸ್‌ ವಿರುದ್ಧ ಎಫ್‌ಐಆರ್‌ ದಾಖಲು

ದೆಹಲಿಯ ಜಂತರ್ ಮಂತರ್‌ನಲ್ಲಿ ಪ್ರತಿಭಟನೆ ನಡೆಸುತ್ತಿರುವವರ ಮೇಲೆ, ನನ್ನ ಕೈಯಲ್ಲಿ ಅಧಿಕಾರವಿದ್ದರೆ ಗುಂಡು ಹಾರಿಸುತ್ತಿದ್ದೆ ಎಂದು ಇತ್ತೀಚಿನ ಯೂಟ್ಯೂಬ್ ವೀಡಿಯೊದಲ್ಲಿ ಹೇಳಿಕೆ ನೀಡಿದ್ದ ಹಿಂದುತ್ವವಾದಿ ಚಿಂತಕ ಟಿ.ಜಿ. ಮೋಹನ್‌ದಾಸ್ ವಿರುದ್ಧ ತಿರುವನಂತಪುರಂ ಸಿಟಿ...

ಫ್ರಾನ್ಸ್‌ನಲ್ಲಿ ಕೆಲಸದ ಸಮಯ ಟ್ರ್ಯಾಕಿಂಗ್ ಲೋಪ: ಇನ್ಫೋಸಿಸ್‌ಗೆ ₹1.9 ಕೋಟಿ ದಂಡ: ನಾರಾಯಣಮೂರ್ತಿಯವರ ‘70 ಗಂಟೆ ಶ್ರಮ’ದ ಮಾದರಿ ಟ್ರೋಲ್

ಭಾರತೀಯ ಐಟಿ ರಫ್ತು ಸೇವಾ ರಂಗದ ಬೃಹತ್ ಸಂಸ್ಥೆಯಾದ ಇನ್ಫೋಸಿಸ್‌ಗೆ ಫ್ರಾನ್ಸ್‌ನಲ್ಲಿ ಹಿನ್ನಡೆಯಾಗಿದೆ. ಉದ್ಯೋಗಿಗಳ ಕೆಲಸದ ಸಮಯವನ್ನು ದಾಖಲಿಸುವ ವ್ಯವಸ್ಥೆಯಲ್ಲಿನ ನ್ಯೂನತೆಗಳು ಹಾಗೂ ಸ್ಥಳೀಯ ಕಾರ್ಮಿಕ ನಿಯಮಾವಳಿಗಳ ಪಾಲನೆಯಲ್ಲಿ ಕಂಡುಬಂದ ಲೋಪಗಳ ಹಿನ್ನೆಲೆಯಲ್ಲಿ...

ವೋಟರ್ ಐಡಿ, ಬ್ಯಾಂಕ್ ಪಾಸ್‌ಬುಕ್, ಆಧಾರ್, ಜಮೀನಿನ ಹಕ್ಕು ಪತ್ರ ಇದ್ದ ಮಾತ್ರಕ್ಕೆ ಭಾರತೀಯ ಪ್ರಜೆಯಾಗಲ್ಲ: ಕಲ್ಕತ್ತಾ ಹೈಕೋರ್ಟ್

ಆಧಾರ್ ಕಾರ್ಡ್, ಪಾನ್ ಕಾರ್ಡ್, ಮತದಾರರ ಗುರುತಿನ ಚೀಟಿ, ಬ್ಯಾಂಕ್ ಪಾಸ್‌ಬುಕ್ ಮತ್ತು ಪಿತ್ರಾರ್ಜಿತ ಜಮೀನಿನ ದಾಖಲೆಗಳು ಭಾರತೀಯ ಪೌರತ್ವವನ್ನು ನಿರೂಪಿಸಲು ಅಂತಿಮ ಅಥವಾ ನಿರ್ಣಾಯಕ ಪುರಾವೆಗಳಲ್ಲ ಎಂದು ಕಲ್ಕತ್ತಾ ಹೈಕೋರ್ಟ್ ಮಹತ್ವದ...

‘ನಿಮ್ಮ ಸಮಯ ಬಂದಿದೆ’: ಟೌನ್‌ಶಿಪ್ ಯೋಜನೆ ವಿರುದ್ಧದ ಪ್ರತಿಭಟನೆಗೆ 500 ದಿನ: ‘Gen-Z’ ಯುವಕರ ಬೆಂಬಲ ಕೋರಿದ ಬಿಡದಿ ರೈತರು

ಬೆಂಗಳೂರು: ಪ್ರಸ್ತಾವಿತ ಬಿಡದಿ ಟೌನ್‌ಶಿಪ್ ಯೋಜನೆ ವಿರುದ್ಧ ಕೃಷಿ ಭೂಮಿ ಉಳಿವಿಗಾಗಿ ನಡೆಯುತ್ತಿರುವ ರೈತರ ಸುದೀರ್ಘ ಹೋರಾಟವು ಇದೀಗ ಒಂದು ಪ್ರಮುಖ ಘಟ್ಟಕ್ಕೆ ಬಂದು ತಲುಪಿದೆ. ಭೂಸ್ವಾಧೀನದ ವಿರುದ್ಧ ಸತತವಾಗಿ ನಡೆಯುತ್ತಿರುವ ಈ...

ಕೊಡಗಿನ ಆದಿವಾಸಿ ಹಾಡಿಗಳಲ್ಲಿ ಎಸ್‌ಐಆರ್ ಅವ್ಯವಸ್ಥೆ : ಬಿಎಲ್‌ಒಗಳಿಗೆ ತರಬೇತಿಯ ಕೊರತೆ, ಇನ್ನೂ ತಲುಪದ ಗಣತಿ ಫಾರಂ

ಕರ್ನಾಟಕದಲ್ಲಿ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಪ್ರಕ್ರಿಯೆ ಬಹಳ ಯಶಸ್ವಿಯಾಗಿ ನಡೆಯುತ್ತಿದೆ, ಮತದಾರರಿಗೆ ಎಲ್ಲಾ ರೀತಿಯ ಸಹಾಯಗಳನ್ನು ಒದಗಿಸಲಾಗುತ್ತಿದೆ ಎಂದು ರಾಜ್ಯ ಮುಖ್ಯ ಚುನಾವಣಾ ಆಯುಕ್ತ ಅನ್ಬುಕುಮಾರ್ ಅವರು ಪದೇ...

SIR: ಉಡುಪಿಯಲ್ಲಿ ಕರ್ತವ್ಯನಿರತ BLO ಮೇಲೆ ಹಲ್ಲೆಗೆತ್ನಿಸಿದ ಮಾಜಿ ಪಂಚಾಯತ್ ಅಧ್ಯಕ್ಷ, FIR ದಾಖಲು

ಚುನಾವಣಾ ಮತದಾರರ ಪಟ್ಟಿ ಪರಿಷ್ಕರಣೆ (SIR) ಕರ್ತವ್ಯದಲ್ಲಿದ್ದ ಅಂಗನವಾಡಿ ಕಾರ್ಯಕರ್ತೆ ಹಾಗೂ ಬಿಎಲ್‌ಒ (BLO) ಮಹಿಳೆ ಮೇಲೆ ಕರ್ತವ್ಯಕ್ಕೆ ಅಡ್ಡಿಪಡಿಸಿ, ಅವಾಚ್ಯ ಶಬ್ದಗಳಿಂದ ನಿಂದಿಸಿ, ಕೊಲೆ ಬೆದರಿಕೆ ಹಾಕಿದ ಗಂಭೀರ ಆರೋಪ ಉಡುಪಿ...

ಕೋಟ್ಯಾಂತರ ವಿದ್ಯಾರ್ಥಿಗಳ ಭವಿಷ್ಯದ ಜೊತೆ NTA ಚೆಲ್ಲಾಟ: RTI ನಲ್ಲಿ ಬಯಲಾಯ್ತು NTA ಕರ್ಮಕಾಂಡ

ನ್ಯಾಷನಲ್ ಟೆಸ್ಟಿಂಗ್ ಏಜೆನ್ಸಿ (NTA) ಎನ್ನುವ ಈ ಸರ್ಕಾರಿ ಸಂಸ್ಥೆಯ ಮೇಲೆ ಪ್ರತಿವರ್ಷ ಕೋಟ್ಯಂತರ ವಿದ್ಯಾರ್ಥಿಗಳು ತಮ್ಮ ಭವಿಷ್ಯದ ಕನಸುಗಳನ್ನು ಇಟ್ಟುಕೊಳ್ಳುತ್ತಾರೆ. 2018ರಲ್ಲಿ ಸ್ಥಾಪನೆಯಾದ ದಿನದಿಂದ ಇಲ್ಲಿಯವರೆಗೆ ಎನ್‌ಟಿಎ ಸುಮಾರು 270ಕ್ಕೂ ಹೆಚ್ಚು...

ಬಾಗಲಕೋಟೆ: ಪತಿಯಿಂದ 23 ವರ್ಷದ ಪತ್ನಿಯ ಕ್ರೂರ ಕೊಲೆ, ಪೋಷಕರಿಗೆ ವೀಡಿಯೊ ಕರೆ ಮಾಡಿ ಮಗಳ ಸಾವು-ಬದುಕಿನ ಹೋರಾಟ ತೋರಿಸಿದ ವಿಕೃತ ಪತಿ

ಬಾಗಲಕೋಟೆ: ಪತಿಯೋರ್ವ ತನ್ನ 23 ವರ್ಷದ ಪತ್ನಿಯ ಮೇಲೆ ವಿವಾಹೇತರ ಅನೈತಿಕ ಸಂಬಂಧದ ಶಂಕೆ ವ್ಯಕ್ತಪಡಿಸಿ, ಆಕೆಯ ಮೇಲೆ ಮರದ ದಿಮ್ಮಿಯಿಂದ ಕ್ರೂರವಾಗಿ ಹಲ್ಲೆ ನಡೆಸಿ, ತದನಂತರ ನೇಣಿಗೆ ಬಿಗಿದು ಅತ್ಯಂತ ಅಮಾನವೀಯವಾಗಿ...

ಕಾನೂನು-ಸುವ್ಯವಸ್ಥೆಗೆ ವಿದ್ಯಾರ್ಥಿಗಳು ಸಮಸ್ಯೆಯಾಗುತ್ತಾರೆ ಎಂದು ಪರಿಗಣಿಸಿದ್ದು ಏಕೆ: ಅಭಿಷೇಕ್ ಬ್ಯಾನರ್ಜಿ

ರಾಷ್ಟ್ರ ರಾಜಧಾನಿ ದೆಹಲಿ ಮತ್ತು ದೆಶದಾದ್ಯಂತ ಕಾಕ್ರೋಚ್ ಜನತಾ ಪಕ್ಷದ (ಸಿಜೆಪಿ) ನೇತೃತ್ವದಲ್ಲಿ ನಡೆದ ಪ್ರತಿಭಟನೆಗಳ ಸಂದರ್ಭದಲ್ಲಿ ವಿದ್ಯಾರ್ಥಿಗಳ ಮೇಲೆ ನಡೆದ ಭಾರೀ ಪೊಲೀಸ್ ಬಲಪ್ರಯೋವನ್ನು ವಿಪಕ್ಷಗಳು ಇಂದು ಲೋಕಸಭೆಯಲ್ಲಿ ಖಂಡಿಸಿವೆ. ವಿದ್ಯಾರ್ಥಿಗಳ...

ಪಬ್ಲಿಕ್ ಟಿವಿ ನಿರೂಪಕ ಅರುಣ್ ಬಡಿಗೇರ್ ವಿರುದ್ದ ಮೈಸೂರಿನಲ್ಲಿ ದೂರು ದಾಖಲು

ಸಂವಿಧಾನಬದ್ಧ ಮೀಸಲಾತಿಯ ಕುರಿತು ಅತ್ಯಂತ ನಿಂದನಾತ್ಮಕ, ಅವಹೇಳನಕಾರಿ ಹಾಗೂ ಸಮಾಜದಲ್ಲಿ ದ್ವೇಷ ಪ್ರಚೋದಿಸುವ ರೀತಿಯ ಹೇಳಿಕೆ ನೀಡಿರುವ 'ಪಬ್ಲಿಕ್ ಟಿವಿ' ನಿರೂಪಕ ಅರುಣ್ ಬಡಿಗೇರ್ ವಿರುದ್ಧ ಮೈಸೂರಿನಲ್ಲಿ ಕಾನೂನು ಕ್ರಮಕ್ಕೆ ಆಗ್ರಹಿಸಿ ಪೊಲೀಸ್‌...