Homeಕರ್ನಾಟಕಪ್ರಾಥಮಿಕ ಚರ್ಚೆಗೆ ಅವಕಾಶ: ಪ್ರತಿಪಕ್ಷಗಳ ಒತ್ತಡಕ್ಕೆ ಮಣಿಯದ ಸ್ಪೀಕರ್‌..

ಪ್ರಾಥಮಿಕ ಚರ್ಚೆಗೆ ಅವಕಾಶ: ಪ್ರತಿಪಕ್ಷಗಳ ಒತ್ತಡಕ್ಕೆ ಮಣಿಯದ ಸ್ಪೀಕರ್‌..

- Advertisement -
- Advertisement -

ಒಂದೆಡೆ ಬರ ಮತ್ತು ಮತ್ತೊಂದೆಡೆ ನೆರೆಯ ಸಮಸ್ಯೆಗೆ ತುತ್ತಾಗಿ ಅರ್ಧ ರಾಜ್ಯವೇ ಸಂಕಷ್ಟಕ್ಕೆ ಸಿಲುಕಿರುವ ಹಿನ್ನೆಲೆಯಲ್ಲಿ ಈ ಕುರಿತು ತಾವು ನೀಡಿರುವ ನಿಲುವಳಿ ಸೂಚನೆಗೆ ಸಂಬಂಧಿಸಿದಂತೆ ಪ್ರಾಥಮಿಕ ಚರ್ಚೆಗೆ ಅವಕಾಶ ಮಾಡಿಕೊಡುವಂತೆ ಕಾಂಗ್ರೆಸ್ ಮುಖಂಡ ಸಿದ್ದರಾಮಯ್ಯ ಒತ್ತಾಯಿಸಿದರು. ಆದರೆ ಪ್ರತಿಪಕ್ಷದ ಒತ್ತಾಯಕ್ಕೆ ಮಣಿಯದೆ ಕಾರ್ಯಸೂಚಿಯಂತೆ ಸದನದ ಕಲಾಪಕ್ಕೆ ಅವಕಾಶ ಕಲ್ಪಿಸಿದ ರಾಜ್ಯ ವಿಧಾನ ಸಭೆಯ ಸಭಾಧ್ಯಕ್ಷ ವಿಶ್ವೇಶ್ವರ ಹೆಗಡೆ ಕಾಗೇರಿ ಅವರು ಇಲ್ಲಿ ಇಂದು ಪ್ರತಿಪಕ್ಷಗಳ ಕೆಂಗಣ್ಣಿಗೆ ಗುರಿಯಾದರು.

ಸಂತಾಪ ಸೂಚನಾ ನಿರ್ಣಯ ಪೂರ್ಣಗೊಂಡ ನಂತರ ಕಾರ್ಯದರ್ಶಿಗಳ ವರದಿ ಹಾಗೂ ವಿವಿಧ ಸಮಿತಿಗಳ ವರದಿ ಮಂಡನೆಯ ನಂತರ ಕಾಂಗ್ರೆಸ್ ಹಾಗೂ ಜಾತ್ಯಾತೀತ ಜನತಾ ದಳ ನೀಡಿರುವ ನಿಲುವಳಿ ಸೂಚನೆಯನ್ನು ಕೈಗೆತ್ತಿಕೊಳ್ಳುವುದಾಗಿ ಸಭಾಧ್ಯಕ್ಷರು ಹೇಳಿದರಾದರೂ, ಪ್ರಶ್ನೋತ್ತರ ವೇಳೆ ಹಾಗೂ ಶೂನ್ಯ ವೇಳೆಯ ನಂತರ ನಿಯಮ 60 ರಂತೆ ಸಾರ್ವಜನಿಕ ಮಹತ್ವದ ವಿಚಾರದ ಚರ್ಚೆಗೆ ನಿಯಮಾವಳಿಗಳಲ್ಲಿ ಅವಕಾಶವಿದೆ ಎಂಬುದನ್ನು ಉಲ್ಲೇಖಿಸಿದ ಸಿದ್ದರಾಮಯ್ಯ ಅವರು ದಿನದ ಕಾರ್ಯಸೂಚಿಯಲ್ಲಿ ಪ್ರಶ್ನೋತ್ತರ ವೇಳೆ ಹಾಗೂ ಶೂನ್ಯ ವೇಳೆಯ ಚರ್ಚೆ ಇಲ್ಲದಿರುವ ಹಿನ್ನೆಲೆಯಲ್ಲಿ ಸಭಾಧ್ಯಕ್ಷ ಪೀಠಕ್ಕೆ ತಾವು ಸಲ್ಲಿಸಿದ ನಿಲುವಳಿ ಸೂಚನೆ ಕುರಿತ ಪ್ರಾಥಮಿಕ ಚರ್ಚೆಗೆ ಪಟ್ಟುಹಿಡಿದರು. ಸಭಾನಾಯಕ ಬಿ.ಎಸ್ ಯಡಿಯೂರಪ್ಪ ಅವರು ಮಧ್ಯ ಪ್ರವೇಶಿಸಿ ಚರ್ಚೆಗೆ ತಾವು ಸಿದ್ಧ ಎಂದು ಭರವಸೆ ನೀಡಿದರೂ ಪ್ರತಿಪಕ್ಷದವರು ಮುಖ್ಯಮಂತ್ರಿಯವರ ಮನವಿಯನ್ನು ಪುರಸ್ಕರಿಸಲಿಲ್ಲ.

ತಮ್ಮ ಪಕ್ಷದ ನಾಯಕ ಸಿದ್ದರಾಮಯ್ಯ ಅವರ ಬೆಂಬಲಕ್ಕೆ ನಿಂತ ಸದಸ್ಯರಾದ ಕೆ ಆರ್ ರಮೇಶ್ ಕುಮಾರ್ ಕೃಷ್ಣ ಬೈರೇಗೌಡ ಹಾಗೂ ಹೆಚ್ ಕೆ ಪಾಟೀಲ್ ಅವರು ಕಲಾಪದ ಕಾರ್ಯವಿಧಾನದಲ್ಲಿನ ನಿಯಮಾವಳಿಗಳನ್ನು ಉಲ್ಲೇಖಿಸಿದರೂ ಸಭಾಧ್ಯಕ್ಷರ ಮನವೊಲಿಸಲು ಸಾಧ್ಯವಾಗಲಿಲ್ಲ. ಒಂದು ಹಂತದಲ್ಲಿ ಸಿದ್ದರಾಮಯ್ಯ ಅವರು ಪ್ರಜಾಪ್ರಭುತ್ವದ ಧ್ವನಿ ಅಡಗಿಸಲು ಸಾಧ್ಯವಿಲ್ಲ ಎಂದು ಏರಿದ ಧ್ವನಿಯಲ್ಲಿ ಕೂಗಿ ಸಭಾಧ್ಯಕ್ಷರ ನಡೆಯನ್ನು ಪ್ರತಿಭಟಿಸಿದರಲ್ಲದೆ, ಸಭಾಧ್ಯಕ್ಷರು ಸರ್ಕಾರದ ಜೊತೆಗೆ ಶಾಮೀಲಾಗಿದ್ದಾರೆ ಎಂದು ಆರೋಪಿಸಿದರು. ಇದಾವುದಕ್ಕೂ ಜಗ್ಗದ ಸಭಾಧ್ಯಕ್ಷರು ಕಾರ್ಯಸೂಚಿಯಂತೆ ಕಲಾಪವನ್ನು ಮುಂದುವರೆಸಿದರು.

ರಾಜ್ಯ ವಿಧಾನ ಸಭೆಯ ಕಾರ್ಯದರ್ಶಿ ಎಂ.ಕೆ ವಿಶಾಲಾಕ್ಷಿ ಅವರು ಕಳೆದ ಅಧಿವೇಶನದಲ್ಲಿ ವರದಿಯನ್ನು ಒಪ್ಪಿಸಿದ ನಂತರ ರಾಷ್ಟ್ರಪತಿಯವರಿಂದ – ರಾಜ್ಯಪಾಲರಿಂದ ಒಪ್ಪಿಗೆ ಪಡೆದ ವಿಧೇಯಕಗಳ ಪಟ್ಟಿಯನ್ನು ಸಭೆಯ ಮುಂದೆ ಮಂಡಿಸಿದರು. ಸ್ಥಳೀಯ ಸಂಸ್ಥೆಗಳ ಮತ್ತು ಪಂಚಾಯತ್ ರಾಜ್ ಸಂಸ್ಥೆಗಳ ಸಮಿತಿಯ ಅಧ್ಯಕ್ಷ ಅರಗ ಜ್ಞಾನೇಂದ್ರ ಅವರು 2018-19 ನೇ ಸಾಲಿನ ಸಮಿತಿಯ 28 ನೇ ವರದಿಯನ್ನು ಒಪ್ಪಿಸಿದರು. ಅನುಸೂಚಿತ ಜಾತಿ ಮತ್ತು ಅನುಸೂಚಿತ ಪಂಗಡಗಳ ಕಲ್ಯಾಣ ಸಮಿತಿಯ ಅಧ್ಯಕ್ಷ ಎಸ್.ಅಂಗಾರ ಅವರು ಸಮಿತಿಯ ಎರಡನೇ ವರದಿಯನ್ನು ಸದನಕ್ಕೆ ಒಪ್ಪಿಸಿದರು.

ನಂತರ, ಮುಖ್ಯಮಂತ್ರಿ ಬಿ ಎಸ್ ಯಡಿಯೂರಪ್ಪ ಅವರು ಭಾರತದ ಲೆಕ್ಕ ನಿಯಂತ್ರಕರು ಮತ್ತು ಮಹಾಲೆಕ್ಕಪರಿಶೋಧಕರ 2017-18 ನೇ ಸಾಲಿನ ಧನ ವಿನಿಯೋಗ ಲೆಕ್ಕಗಳು ಮತ್ತು ಹಣಕಾಸು ಲೆಕ್ಕಗಳನ್ನು ಸಭೆಯ ಮುಂದಿಟ್ಟರು. ಅಲ್ಲದೆ, ಮಾರ್ಚ್ 2018 ಕ್ಕೆ ಅಂತ್ಯಗೊಂಡ ರಾಜಸ್ವ ವಲಯದ ಮೇಲಿನ ವರದಿ ಹಾಗೂ ಆರ್ಥಿಕ ವಲಯದ ಮೇಲಿನ ವರದಿಗಳನ್ನು ಸಭೆಯ ಮುಂದಿಟ್ಟರು. ತದನಂತರ, ಉಪ ಮುಖ್ಯಮಂತ್ರಿಗಳಾದ ಗೋವಿಂದ ಎಂ ಕಾರಜೋಳ, ಡಾ. ಸಿ.ಎನ್ ಅಶ್ವಥನಾರಾಯಣ ಹಾಗೂ ಲಕ್ಷ್ಮಣ ಸವದಿ ಕಾನೂನು ಮತ್ತು ಸಂಸದೀಯ ವ್ಯವಹಾರಗಳ ಸಚಿವ ಜೆ.ಸಿ ಮಾಧುಸ್ವಾಮಿ ಅವರನ್ನು ಒಳಗೊಂಡಂತೆ ಬಿ.ಎಸ್ ಯಡಿಯೂರಪ್ಪ ಅವರ ಸಚಿವ ಸಂಪುಟ ಸಹೋದ್ಯೋಗಿಗಳು ತಮ್ಮ ಇಲಾಖೆಗೆ ಸಂಬಂಧಿಸಿದಂತೆ ವಿತ್ತೀಯ ಕಾರ್ಯಕಲಾಪಗಳಲ್ಲಿನ ಪ್ರಸಕ್ತ ಸಾಲಿನ ಅನುದಾನದ ಬೇಡಿಕೆಗಳನ್ನು ಮಂಡಿಸಿದರು.

ಇದೇ ಸಂದರ್ಭದಲ್ಲಿ ಸಿದ್ದರಾಮಯ್ಯ ಅವರನ್ನು ಪ್ರತಿಪಕ್ಷ ನಾಯಕರಾಗಿ ಹಾಗೂ ಸರ್ಕಾರದ ಸಚೇತಕರಾಗಿ ವಿ ಸುನೀಲ್ ಕುಮಾರ್ ಅವರನ್ನು ಮಾನ್ಯ ಮಾಡಿರುವುದಾಗಿ ರಾಜ್ಯ ವಿಧಾನ ಸಭೆಯ ಸಭಾಧ್ಯಕ್ಷ ವಿಶ್ವೇಶ್ವರ ಹೆಗಡೆ ಕಾಗೇರಿ ಅಧಿಕೃತವಾಗಿ ಪ್ರಕಟಿಸಿದರು.

ಅಂತೆಯೇ, ಸದನದ ಕಾರ್ಯಕಲಾಪಗಳನ್ನು ಸುಗಮವಾಗಿ ನಡೆಸಲು ಆಡಳಿತಾರೂಢಾ ಹಾಗೂ ಪ್ರತಿಪಕ್ಷಗಳ ಸದನ ನಾಯಕರನ್ನು ಕಲಾಪ ಸಲಹಾ ಸಮಿತಿಯ ಸಭೆಗೆ ಆಮಂತ್ರಿಸಿದ ಸಭಾಧ್ಯಕ್ಷರು ಪ್ರತಿಪಕ್ಷ ಹಾಗೂ ಆಡಳಿತ ಪಕ್ಷಗಳ ಘೋಷಣೆ ಮತ್ತು ಪ್ರತಿ-ಘೋಘಣೆಗಳ ನಡುವೆಯೇ ಸದನವನ್ನು ಮುಂದೂಡಿದರು.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಅಲಿಗಢ ಮುಸ್ಲಿಂ ವಿವಿ ಪ್ರತಿಭಟನೆಯ ‘ಪಕ್ಷಪಾತಿ’ ನಿರೂಪಣೆ : ಝೀ ನ್ಯೂಸ್‌ಗೆ ₹2 ಲಕ್ಷ ದಂಡ ವಿಧಿಸಿದ ಎನ್‌ಬಿಡಿಎಸ್‌ಎ

ಅಲಿಗಢ ಮುಸ್ಲಿಂ ವಿಶ್ವವಿದ್ಯಾಲಯದಲ್ಲಿ (AMU) ನಡೆದ ವಿದ್ಯಾರ್ಥಿ ಪ್ರತಿಭಟನೆಯ ವೇಳೆ ಪ್ಯಾಲೆಸ್ತೀನ್ ಪರ ಘೋಷಣೆಗಳನ್ನು ಕೂಗಿದ ಘಟನೆಯನ್ನು ವರದಿ ಮಾಡುವಾಗ ಪ್ರಸಾರ ನೀತಿ ಸಂಹಿತೆಯನ್ನು ಉಲ್ಲಂಘಿಸಿದೆ ಎಂದು ಪರಿಗಣಿಸಿ, 'ಝೀ ನ್ಯೂಸ್' (Zee...

‘ಕೆಲವರು ಮುಸ್ಲಿಮರನ್ನು ಬೈದ್ರೆ ಮಾತ್ರ ಲೀಡರ್‌ ಆಗೋದು ಅನ್ಕೊಂಡಿದಾರೆ!’: ಆರ್‌. ಅಶೋಕ್‌ ಹಳೆಯ ಹೇಳಿಕೆ ಮುಂದಿಟ್ಟು ಪ್ರಿಯಾಂಕ್ ಖರ್ಗೆ ಟೀಕೆ!

ಮೈಸೂರಿನ ಟಿ. ನರಸೀಪುರದಲ್ಲಿ ಗಣಪತಿ ಮೆರವಣಿಗೆ ಸಾಗುವ ಮಾರ್ಗದ ವಿಚಾರವಾಗಿ ಬಿಜೆಪಿ ಪ್ರತಿಭಟನೆಗೆ ಮುಂದಾಗಿರುವ ಬೆನ್ನಲ್ಲೇ, ವಿಧಾನಸಭೆ ವಿರೋಧ ಪಕ್ಷದ ನಾಯಕ ಆರ್‌. ಅಶೋಕ್‌ ವಿರುದ್ಧ ಗೃಹ ಸಚಿವ ಪ್ರಿಯಾಂಕ್ ಖರ್ಗೆ ವಾಗ್ದಾಳಿ...

ಠಾಣೆಗೆ ನುಸುಳುತ್ತೇನೆ ಎಂದ ಪ್ರತಾಪ್ ಸಿಂಹನಿಗೆ ಪರಪ್ಪನ ಜೈಲಿಗೂ ರೆಡಿಯಾಗಿ ಎಂದ ಸಚಿವ ಪ್ರಿಯಾಂಕ್ ಖರ್ಗೆ

ಮಾಜಿ ಸಂಸದ ಪ್ರತಾಪ್ ಸಿಂಹ ಅವರನ್ನು ನೇರವಾಗಿ ಗುರಿಯಾಗಿಸಿಕೊಂಡು ಸಚಿವ ಪ್ರಿಯಾಂಕ್ ಖರ್ಗೆ ತೀವ್ರ ವಾಗ್ದಾಳಿ ನಡೆಸಿದ್ದು, ಪೊಲೀಸರ ಕರ್ತವ್ಯಕ್ಕೆ ಅಡ್ಡಿಪಡಿಸುವ ಅಥವಾ ಅವರಿಗೆ ಬೆದರಿಕೆ ಹಾಕುವ ರೀತಿಯಲ್ಲಿ ಮಾತನಾಡುವವರ ವಿರುದ್ಧ ಸರ್ಕಾರ...

ಆಹಾರ ಪದ್ಧತಿ- ಧಾರ್ಮಿಕ ಆಚರಣೆಗಳನ್ನು ಆರಿಸಿಕೊಳ್ಳಲು ಜನರಿಗೆ ಸ್ವಾತಂತ್ರ್ಯವಿದೆ: ಬಂಗಾಳ ಮುಖ್ಯಮಂತ್ರಿ ಸುವೇಂದು ಅಧಿಕಾರಿ

ದುರ್ಗಾ ಪೂಜೆಯ ಸಂದರ್ಭದಲ್ಲಿ ಬಂಗಾಳಿಗಳು ಮಾಂಸಾಹಾರ ಸೇವಿಸುವುದರ ಕುರಿತು ಬಾಗೇಶ್ವರ ಬಾಬಾ ಎಂದೇ ಜನಪ್ರಿಯರಾಗಿರುವ ಧೀರೇಂದ್ರ ಶಾಸ್ತ್ರಿ ಅವರ ಹೇಳಿಕೆಗೆ ಪರೋಕ್ಷವಾಗಿ ಪ್ರತಿಕ್ರಿಯಿಸಿರುವ ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಸುವೇಂದು ಅಧಿಕಾರಿ, "ತಮ್ಮ ಆಹಾರ...

ಕರ್ನಾಟಕದಲ್ಲಿ 2 ಗಂಟೆಗಳ ಬೃಹತ್ ಕಾರ್ಯಾಚರಣೆ: 800 ಬಾಲಕಾರ್ಮಿಕರ ರಕ್ಷಣೆ; ಬೆಂಗಳೂರಿನಲ್ಲೇ 503 ಮಕ್ಕಳು

ಬಾಲಕಾರ್ಮಿಕ ಪದ್ಧತಿಯ ವಿರುದ್ಧ ಕರ್ನಾಟಕ ಪೊಲೀಸರು ಹಾಗೂ ಕಾರ್ಮಿಕ ಇಲಾಖೆ ಶನಿವಾರ ರಾಜ್ಯಾದ್ಯಂತ ನಡೆಸಿದ ವಿಶೇಷ ಕಾರ್ಯಾಚರಣೆಯಲ್ಲಿ 800 ಮಕ್ಕಳನ್ನು ರಕ್ಷಿಸಲಾಗಿದೆ. ರಾಜ್ಯದ 962 ಪೊಲೀಸ್ ಠಾಣೆಗಳು ಹಾಗೂ ಘಟಕಗಳ ವ್ಯಾಪ್ತಿಯಲ್ಲಿ 16,951...

‘ದಿ ಹಿಂದೂ’, ‘ದೈನಿಕ್ ಭಾಸ್ಕರ್’ ಗಳಲ್ಲಿ ಅತ್ಯಾಚಾರ ಅಪರಾಧಿ ಗುರ್ಮೀತ್ ರಾಮ್ ರಹೀಮ್ ಸಮರ್ಥಿಸುವ ಜಾಹೀರಾತು: ಓದುಗರಲ್ಲಿ ಕ್ಷಮೆಯಾಚಿಸಿದ ‘ದಿ ಹಿಂದೂ’

ನವದೆಹಲಿ: ಇಬ್ಬರು ಮಹಿಳಾ ಶಿಷ್ಯೆಯರ ಮೇಲೆ ಅತ್ಯಾಚಾರ ಎಸಗಿದ ಪ್ರಕರಣದಲ್ಲಿ ಶಿಕ್ಷೆಗೊಳಗಾಗಿರುವ ಡೇರಾ ಸಚ್ಚಾ ಸೌದಾ ಮುಖ್ಯಸ್ಥ ಗುರ್ಮೀತ್ ರಾಮ್ ರಹೀಮ್ ಸಿಂಗ್ ಅವರನ್ನು ಸಮರ್ಥಿಸುವ ರೀತಿಯಲ್ಲಿ ಪೂರ್ಣ ಪುಟದ ಮುಖಪುಟ ಜಾಹೀರಾತು...

ದ್ವಿ-ರಾಷ್ಟ್ರ ಪರಿಹಾರ : ಬ್ರಿಕ್ಸ್ ನಿಲುವು ಸ್ವಾಗತಿಸಿದ ಪ್ಯಾಲೆಸ್ತೀನ್

ಪ್ಯಾಲೆಸ್ತೀನ್-ಇಸ್ರೇಲ್ ವಿವಾದಕ್ಕೆ ದ್ವಿ-ರಾಷ್ಟ್ರ ಪರಿಹಾರವನ್ನು ಕಂಡುಕೊಳ್ಳುವಂತೆ ಕರೆ ನೀಡಿರುವ ಬ್ರಿಕ್ಸ್ (BRICS) ಜಂಟಿ ಘೋಷಣೆಯನ್ನು ಪ್ಯಾಲೆಸ್ತೀನ್ ವಿದೇಶಾಂಗ ಮತ್ತು ವಲಸಿಗರ ಸಚಿವಾಲಯವು ಮುಕ್ತಕಂಠದಿಂದ ಸ್ವಾಗತಿಸಿದೆ. ಬ್ರಿಕ್ಸ್‌ ಶೃಂಗಸಭೆ, ಜೆರುಸಲೆಮ್ ಸೇರಿದಂತೆ ಪ್ಯಾಲೆಸ್ತೀನಿಯರನ್ನು ಅವರದೇ ಭೂಮಿಯಿಂದ...

ತೆಲಂಗಾಣ| ಅಂತರ್ಜಾತಿ ವಿವಾಹಕ್ಕೆ ಯುವತಿ ಕುಟುಂಬದ ವಿರೋಧ; ದಲಿತ ಯುವಕನ ಮನೆ ಧ್ವಂಸ

ಹೈದರಾಬಾದ್ ಸಮೀಪದ ಗದ್ವಾಲ್ ಜಿಲ್ಲೆಯ ರೆಪಲ್ಲೆ ಗ್ರಾಮದಲ್ಲಿ ಅಂತರ್ಜಾತಿ ವಿವಾಹದ ಹಿನ್ನೆಲೆಯಲ್ಲಿ ದಲಿತ ಯುವಕನ ಮನೆಯನ್ನು ಧ್ವಂಸಗೊಳಿಸಿರುವ ಘಟನೆಗೆ ಸಂಬಂಧಿಸಿದಂತೆ, ತಪ್ಪಿತಸ್ಥರ ವಿರುದ್ಧ ಕಠಿಣ ಕ್ರಮ ಕೈಗೊಳ್ಳುವಂತೆ ದಲಿತ ಬಹುಜನ ಫ್ರಂಟ್, ಹ್ಯೂಮನ್...

ಸತೀಶ್‌ ಜಾರಕಿಹೊಳಿ ಮೇಲಿನ ಇಡಿ ದಾಳಿಯನ್ನು ‘ಚಾರಿತ್ರ್ಯ ಹರಣ’ ಎಂದ ವಿಜಯ್ ಮಲ್ಯ

ಲೋಕೋಪಯೋಗಿ ಸಚಿವ ಸತೀಶ್ ಜಾರಕಿಹೊಳಿ ಅವರ ಮನೆ ಹಾಗೂ ಕಚೇರಿಗಳ ಮೇಲೆ ಜಾರಿ ನಿರ್ದೇಶನಾಲಯವು (ಇಡಿ) ನಡೆಸಿದ ದಾಳಿಯನ್ನು ಮಾಜಿ ಸಂಸದ ಮತ್ತು ದೇಶದಿಂದ ಪರಾರಿಯಾಗಿರುವ ಉದ್ಯಮಿ ವಿಜಯ್ ಮಲ್ಯ, "ಸಾರ್ವಜನಿಕವಾಗಿ ಚಾರಿತ್ರ್ಯ...

ಒಗ್ಗಟ್ಟಿನ ಮಾತುಗಳಷ್ಟೇ ಸಾಲದು, ಕೃತಿಯಲ್ಲಿರಲಿ ದಿಟ್ಟತನ : ಬ್ರಿಕ್ಸ್ ವಿಚಾರದಲ್ಲಿ ಕೇಂದ್ರಕ್ಕೆ ಕಾಂಗ್ರೆಸ್ ಚಾಟಿ

ಜಾಗತಿಕ ಮಟ್ಟದಲ್ಲಿ ಬ್ರಿಕ್ಸ್ (BRICS) ಒಕ್ಕೂಟದ ಪ್ರಭಾವ ಹೆಚ್ಚುತ್ತಿರುವುದನ್ನು ಸ್ವಾಗತಿಸಿರುವ ಕಾಂಗ್ರೆಸ್, ಈ ಒಕ್ಕೂಟದ ಅಧ್ಯಕ್ಷತೆಯನ್ನು ವಹಿಸಿರುವ ಭಾರತವು ‘ಗ್ಲೋಬಲ್ ಸೌತ್’ (Global South) ರಾಷ್ಟ್ರಗಳ ನಡುವೆ ತನ್ನ ರಾಜತಾಂತ್ರಿಕ ಸ್ಥಾನಮಾನವನ್ನು ಮರುಸ್ಥಾಪಿಸಲು...