Homeಕರ್ನಾಟಕಮೂರೇ ದಿನಕ್ಕೆ ಅಧಿವೇಶನ ಮೊಟಕುಗೊಳಿಸಲು ಮುಂದಾದ ಸಿಎಂ ಬಿಎಸ್‌ವೈ: ಸಿದ್ದರಾಮಯ್ಯ ವಿರೋಧ

ಮೂರೇ ದಿನಕ್ಕೆ ಅಧಿವೇಶನ ಮೊಟಕುಗೊಳಿಸಲು ಮುಂದಾದ ಸಿಎಂ ಬಿಎಸ್‌ವೈ: ಸಿದ್ದರಾಮಯ್ಯ ವಿರೋಧ

ಯಾವುದೇ ಕಾರಣಕ್ಕೂ ಕಲಾಪ ಮೊಟಕುಗೊಳಿಸಲು ಬಿಡಲ್ಲ, ಇನ್ನೂ ಮೂರು ವಾರ ವಿಸ್ತರಿಸಲು ಮುಖ್ಯಮಂತ್ರಿಗಳಿಗೆ ಹೇಳಿದ್ದೇನೆ ಎಂದು ವಿಪಕ್ಷ ನಾಯಕ ಸಿದ್ದರಾಮಯ್ಯ ಹೇಳಿದ್ದಾರೆ.

- Advertisement -
- Advertisement -

ಕೊರೊನಾ ಸೋಂಕಿನ ಕಾರಣ 50 ರಿಂದ 60 ಸದಸ್ಯರು ಅಧಿವೇಶನಕ್ಕೆ ಹಾಜರಾಗಲು ಆಗುತ್ತಿಲ್ಲ. ಹೀಗಾಗಿ ವಿಧಾನಸಭೆ ಅಧಿವೇಶನವನ್ನು ಮೂರೇ ದಿನಕ್ಕೆ ಮೊಟಕುಗೊಳಿಸಲು ಸಿಎಂ ಯಡಿಯೂರಪ್ಪ ಮುಂದಾಗಿದ್ದಾರೆ. ಈ ಕುರಿತು ವಿಪಕ್ಷ ನಾಯಕರಾದ ಸಿದ್ದರಾಮಯ್ಯನವರ ಜೊತೆಗೆ ಮಾತನಾಡಿ ಅಧಿವೇಶನ ನಿಲ್ಲಿಸಲು ಸಹಕರಿಸಬೇಕೆಂದು ಮನವಿ ಮಾಡಿದ್ದಾರೆ ಎಂದು ಮೂಲಗಳು ತಿಳಿಸಿವೆ.

“ಈಗಿನ ಸಂದರ್ಭದಲ್ಲಿ ಅಧಿವೇಶನವನ್ನು ಹೆಚ್ಚು ದಿನ ನಡೆಸಲು ಸಾಧ್ಯವಾಗಿಲ್ಲ. ಈ ಕುರಿತು ಪ್ರಧಾನಿ ನರೇಂದ್ರ ಮೋದಿಯವರು ಸಹ ಬೇಗ ಅಧಿವೇಶನ ಮುಗಿಸಬೇಕೆಂದು ತಿಳಿಸಿದ್ದಾರೆ. ಹಾಗಾಗಿ ಮೂರು ದಿನದಲ್ಲಿ ಅಧಿವೇಶನ ಮುಗಿಸಬೇಕೆಂದುಕೊಂಡಿದ್ದೇವೆ. ದಯವಿಟ್ಟು ನೀವು ಸಹ ಸಹಕಾರ ನೀಡಬೇಕು” ಎಂದು ಸಿಎಂ ಬಿಎಸ್‌ವೈ ಸಿದ್ದರಾಮಯ್ಯ ಬಳಿ ಮನವಿ ಮಾಡಿದ್ದಾರೆ.

ಇದಕ್ಕೆ ಪ್ರತಿಕ್ರಿಯಿಯಿಸಿರುವ ವಿಪಕ್ಷ ನಾಯಕ ಸಿದ್ದರಾಮಯ್ಯ, “ನೀವು ಅಧಿವೇಶನದಲ್ಲಿ ಯಾವುದೇ ಮಸೂದೆಗಳನ್ನು ಮಂಡಿಸುವುದಿಲ್ಲ ಎಂಬ ಭರವಸೆ ನೀಡಬೇಕು. ಈ ಕೊರೊನಾ ಸಂದರ್ಭದಲ್ಲಿ ಯಾವುದೇ ಮಸೂದೆಗಳು ಚರ್ಚೆಯೇ ಇಲ್ಲದೇ ಅಂಗೀಕಾರವಾಗುವುದನ್ನು ನಾವು ವಿರೋಧಿಸುತ್ತೇವೆ. ಈ ಕುರಿತು ನೀವು ಸ್ಪಷ್ಟನೆ ನೀಡಿದರೆ ನಾವು ಯೋಚಿಸುತ್ತೇವೆ” ಎಂದು ತಿಳಿಸಿದ್ದಾರೆ.

ಕೊರೊನಾ ಸೋಂಕಿಗೆ ಒಳಗಾಗಿರುವ ಐವರು ಸಚಿವರು, 13 ಶಾಸಕರು ಮತ್ತು ವಯಸ್ಸಿನ ಕಾರಣದಿಂದ ಹಿರಿಯ ಶಾಸಕರು ಅಧಿವೇಶನಕ್ಕೆ ಬರುತ್ತಿಲ್ಲ. ಇವರನ್ನೆಲ್ಲಾ ಹೊರಗಿಟ್ಟು ಅಧಿವೇಶನ ನಡೆಸಲು ಆಗುವುದಿಲ್ಲ. ಹೀಗಾಗಿ ಪ್ರಮುಖ ವಿಷಯಗಳನ್ನು ಮಾತ್ರ ಚರ್ಚೆ ಮಾಡಿ ಅಧಿವೇಶನ ಬೇಗ ಮುಗಿಸಲು ವಿರೋಧ ಪಕ್ಷಗಳ ಸಹಕಾರ ಕೋರುತ್ತೇನೆ. ಕಲಾಪ ಸಲಹಾ ಸಮಿತಿ ಸಭೆಯಲ್ಲಿ ಈ ಬಗ್ಗೆ ನಿರ್ಧಾರ ಕೈಗೊಳ್ಳುತ್ತೇವೆ ಎಂದು ಯಡಿಯೂರಪ್ಪ ತಿಳಿಸಿದ್ದರು.

ಇದನ್ನೂ ಓದಿ: ಸಿದ್ದರಾಮಯ್ಯ ಸ್ವಾರ್ಥಿ ಮತ್ತು ಎಡಬಿಡಂಗಿತನದ ರಾಜಕಾರಣಿ: ಕುಮಾರಸ್ವಾಮಿ

ಅಧಿವೇಶನ ಮೊಟಕುಗೊಳಿಸುವ ವಿಷಯಕ್ಕೆ ಸಂಬಂಧಿಸಿದಂತೆ ವಿಧಾನಸೌಧದಲ್ಲಿ ಪ್ರತಿಕ್ರಿಯಿಸಿರುವ ವಿಪಕ್ಷ ನಾಯಕ ಸಿದ್ದರಾಮಯ್ಯ ಯಾವುದೇ ಕಾರಣಕ್ಕೂ ಕಲಾಪ ಮೊಟಕುಗೊಳಿಸಲು ಬಿಡಲ್ಲ, ಇನ್ನೂ ಮೂರು ವಾರ ಅಧಿವೇಶನ ವಿಸ್ತರಿಸಲು ಮುಖ್ಯಮಂತ್ರಿಗಳಿಗೆ ಹೇಳಿದ್ದೇನೆ. ಸುಮಾರು 30 ರಿಂದ 40 ವಿಧೇಯಕಗಳನ್ನು ತಂದಿದ್ದಾರೆ. ಅವನ್ನೆಲ್ಲಾ ವಾಪಾಸು ಪಡೆಯಲಿ ಆಗ ಅಧಿವೇಶನ ಮೊಟಕುಗೊಳಿಸುವ ಬಗ್ಗೆ ನೋಡೋಣ ಎಂದಿದ್ದಾರೆ.

ಇನ್ನು ಜೆಡಿಎಸ್ ರಾಜ್ಯಾಧ್ಯಕ್ಷ ಹೆಚ್.ಕೆ.ಕುಮಾರಸ್ವಾಮಿ ಕೂಡ ಕೊರೊನಾ ನಡುವೆ ಜನಜೀವನ ನಡೆಯುತ್ತಿದೆ. ಸಾಕಷ್ಟು ವಿಚಾರಗಳ ಬಗ್ಗೆ ಚರ್ಚೆಗಳು ನಡೆಯಬೇಕಿದೆ. ಯಾವುದೇ ಕಾರಣಕ್ಕೂ ಅಧಿವೇಶನ ಮೊಟಕುಗೊಳ್ಳಬಾರದು, ಅದು ಮುಂದುವರಿಯಬೇಕು ಎಂಬುದು ಜೆಡಿಎಸ್ ಪಕ್ಷದ ನಿಲುವು ಎಂದಿದ್ದಾರೆ.


ಇದನ್ನೂ ಓದಿ: ರಾಜ್ಯಸಭೆಯಲ್ಲಿ ಕೃಷಿ ಮಸೂದೆ ವಿರೋಧಿಸಿ ಗದ್ದಲ: ಅಧಿವೇಶನದಿಂದ 8 ಸಂಸದರ ಅಮಾನತು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಮುಂಗಾರು ಮಳೆ ಕೊರತೆ: ಇಡೀ ದೇಶದಲ್ಲಿ ಆತಂಕದ ಕಾರ್ಮೋಡ

ಭಾರತದ ಆಕಾಶದಲ್ಲಿ ಸದ್ಯ ಮೂಡುತ್ತಿರುವ ಉಪಗ್ರಹ ಚಿತ್ರಗಳು ಮತ್ತು ಹವಾಮಾನ ಇಲಾಖೆಯ ದತ್ತಾಂಶಗಳು ದೇಶಕ್ಕೆ ದೊಡ್ಡ ಗಂಡಾಂತರದ ಮುನ್ಸೂಚನೆ ನೀಡುತ್ತಿವೆ. ಕೃಷಿ ಚಟುವಟಿಕೆಗಳ ಅತ್ಯಂತ ನಿರ್ಣಾಯಕ ಅವಧಿಯಾದ ಜೂನ್ ತಿಂಗಳಲ್ಲೇ ಮುಂಗಾರು ಮಳೆ...

ನೀಟ್ ಪರೀಕ್ಷೆ ಪದೇ ಪದೇ ಬರೆಯುವಂತೆ ಮಾಡಿದ್ದು ಯಾರು? : ಬಿ.ಕೆ ಹರಿಪ್ರಸಾದ್

ನೀಟ್ ಪರೀಕ್ಷೆ ಪದೇ ಪದೇ ಬರೆಯುವಂತೆ ಮಾಡಿದ್ದು ಯಾರು? ಬಿಜೆಪಿ ನಾಯಕರ ಆರೋಪಗಳನ್ನು ನೋಡಿದರೆ, ತಪ್ಪು ಮಾಡಿದವರೇ ಉಪದೇಶ ಮಾಡುವ ಸ್ಥಿತಿಗೆ ಬಂದಂತಿದೆ ಎಂದು ಕೆಪಿಸಿಸಿ ನೂತನ ಅಧ್ಯಕ್ಷ ಬಿ.ಕೆ ಹರಿಪ್ರಸಾದ್ ಹೇಳಿದರು....

ಎಸ್‌ಐಆರ್‌ನಲ್ಲಿ ಕೈಬಿಟ್ಟ ವ್ಯಕ್ತಿ ಕುರಿತು ಮಹತ್ವದ ಹೇಳಿಕೆ ನೀಡಿದ ಸುಪ್ರೀಂ ಕೋರ್ಟ್

ವಿಶೇಷ ತೀವ್ರ ಪರಿಷ್ಕರಣೆಯ (Special Intensive Revision) ಸಂದರ್ಭದಲ್ಲಿ ಮತದಾರರ ಪಟ್ಟಿಯಿಂದ ಹೆಸರು ಕೈಬಿಟ್ಟಿರುವ ಅಥವಾ ಹೊರಗಿಟ್ಟಿರುವ ಬಂಗಾಳದ ಮುರ್ಷಿದಾಬಾದ್‌ನ 75 ವರ್ಷದ ವಕೀಲರೊಬ್ಬರು "ಪಶ್ಚಿಮ ಬಂಗಾಳದ ನಿಜವಾದ ಮತ್ತು ವಿಶ್ವಾಸಾರ್ಹ ನಾಗರಿಕ" ನಂತೆ...

ನೀಟ್ ಅಕ್ರಮ, ವ್ಯವಸ್ಥೆಯ ವೈಫಲ್ಯಕ್ಕೆ ಮತ್ತೊಂದು ಬಲಿ: ಮರು ಪರೀಕ್ಷೆ ಹಿಂದಿನ ದಿನವೇ ಆತ್ಮಹತ್ಯೆಗೆ ಶರಣಾದ ಪ್ರತಿಭಾವಂತ ವಿದ್ಯಾರ್ಥಿನಿ 

ಹೈದರಾಬಾದ್: ದೇಶದಲ್ಲಿ ವೈದ್ಯಕೀಯ ಶಿಕ್ಷಣದ ಪ್ರವೇಶಾತಿಗಾಗಿ ನಡೆಯುವ ರಾಷ್ಟ್ರೀಯ ಅರ್ಹತಾ ಮತ್ತು ಪ್ರವೇಶ ಪರೀಕ್ಷೆಯ (NEET) ಸುತ್ತ ಹಬ್ಬಿರುವ ಅಕ್ರಮಗಳ ಜಾಲ ಮತ್ತು ವ್ಯವಸ್ಥೆಯ ನಿರಂತರ ಗೊಂದಲಗಳು ಮತ್ತೊಂದು ಯುವ ಜೀವವನ್ನು ಬಲಿಪಡೆದಿವೆ.  ಜೂನ್...

ಸತತ ಮೂರನೇ ದಿನವೂ ಜಂತರ್ ಮಂತರ್‌ನಲ್ಲಿ ಮುಂದುವರೆದ ಸಿಜೆಪಿ ಪ್ರತಿಭಟನೆ; ಪ್ರಧಾನ್ ರಾಜೀನಾಮೆಗೆ ಪಟ್ಟು

ಪರೀಕ್ಷಾ ಅಕ್ರಮಗಳು ಮತ್ತು ಮೇ 3 ರ ನೀಟ್ ಪತ್ರಿಕೆ ಸೋರಿಕೆಯ ವಿರುದ್ಧ ತಮ್ಮ ಪ್ರತಿಭಟನೆಯನ್ನು ಮುಂದುವರಿಸಿರುವ ಜಿರಳೆ ಜನತಾ ಪಕ್ಷ (ಸಿಜೆಪಿ) ಸೋಮವಾರ ಸತತ ಮೂರನೇ ದಿನವೂ ಜಂತರ್ ಮಂತರ್‌ನಲ್ಲಿಯೇ ಕುಳಿತಿದ್ದಾರೆ. ಶನಿವಾರ...

ಸಂವಿಧಾನದ ಬುಡಕ್ಕೆ ಕೊಡಲಿ ಏಟು: ಆರ್‌ಎಸ್‌ಎಸ್-ಬಿಜೆಪಿಯ ಷಡ್ಯಂತ್ರ ಸೋಲಿಸಲು ಎರಡನೇ ಸ್ವಾತಂತ್ರ್ಯ ಸಂಗ್ರಾಮ ಅನಿವಾರ್ಯ – ಬಿ.ಕೆ. ಹರಿಪ್ರಸಾದ್

ಎಸ್‌ಐಆರ್ (SIR) ವಿರೋಧಿ ಹೋರಾಟದಲ್ಲಿ ನಮ್ಮ ಪಕ್ಷ ನಿಮ್ಮ ಜೊತೆಗಿದೆ ಎಂದು ಹೇಳಲು ಸರ್ಕಾರದ ಪ್ರತಿನಿಧಿಯಾಗಿ ನಾನು ಇಲ್ಲಿ ಬಂದಿದ್ದೇನೆ. ನೀವು ಮಂಡಿಸಿರುವ ಹಕ್ಕೊತ್ತಾಯಗಳ ಕುರಿತು ನೂತನ ಮುಖ್ಯಮಂತ್ರಿಗಳು, ಸಿದ್ದರಾಮಯ್ಯ ಸೇರಿದಂತೆ ಪಕ್ಷದ...

ಮತದಾರರ ಪಟ್ಟಿಯಿಂದ 65 ಲಕ್ಷ ಜನರನ್ನು ಹೊರಹಾಕಿದ್ದು ಯಾರು? ಈ ಅಕ್ರಮಕ್ಕೆ ಚುನಾವಣಾ ಆಯೋಗವೇ ಉತ್ತರಿಸಬೇಕು: ಮೊಹಮ್ಮದ್ ಯೂಸುಫ್ ಕನ್ನಿ

"ಬ್ರಿಟಿಷರ ವಿರುದ್ಧ ಹೋರಾಡಿ ದೇಶಕ್ಕೆ ಸ್ವಾತಂತ್ರ್ಯ ತಂದುಕೊಟ್ಟಿದ್ದೇವೆ. 1952ರ ಮೊದಲ ಚುನಾವಣೆಯ ಸಂದರ್ಭದಲ್ಲಿ ಸುಮಾರು 17.32 ಕೋಟಿ ಮತದಾರರಿದ್ದರು. 1955ರಲ್ಲಿ ಸಿಟಿಜನ್‌ಶಿಪ್ ಆಕ್ಟ್ ಜಾರಿಯಾದ ಬಳಿಕ ನಡೆದ 1957ರ ಚುನಾವಣೆಯಲ್ಲಿ ಈ ಸಂಖ್ಯೆ...

ಸರ್ಕಾರ-ನ್ಯಾಯಾಂಗ ವ್ಯವಸ್ಥೆ ಕೈಬಿಟ್ಟರೆ ರಾಜ್ಯದ ಜನ ಅನಾಥರಾಗುತ್ತಾರೆ : ಹಿರಿಯ ಸಾಹಿತಿ ಬಿ.ಟಿ. ಲಲಿತಾ ನಾಯ್ಕ್

ಎಸ್‌ಐಆರ್‌ ವಿಚಾರದಲ್ಲಿ ಇಂದು ನಾಡಿನ ಜನತೆ ಭೀಕರ ಸಂಕಷ್ಟದಲ್ಲಿದ್ದಾರೆ. ಈ ಗೊಂದಲವನ್ನು ಉಂಟು ಮಾಡಿದವರು ಯಾರು? ಕೇಂದ್ರ ಸರ್ಕಾರವೋ ಅಥವಾ ಕರ್ನಾಟಕ ಸರ್ಕಾರದ ಅಲಕ್ಷ್ಯ ಇದಕ್ಕೆ ಕಾರಣವೇ? ಅಥವಾ ನಮಗೆ ಸಂಬಂಧವೇ ಇಲ್ಲ...

ಎಸ್ಐಆರ್ ಹೆಸರಿನಲ್ಲಿ ನಡೆಯುತ್ತಿರುವ ಜನವಿರೋಧಿ ಹುನ್ನಾರಗಳನ್ನು ಸೋಲಿಸಬೇಕಿದೆ: ಎಸ್. ವರಲಕ್ಷ್ಮಿ

ಬೆಂಗಳೂರು: ರಾಜ್ಯಾದ್ಯಂತ ಎಸ್ಐಆರ್ (SIR) ವಿರುದ್ಧ ನಡೆಯುತ್ತಿರುವ ಸಮಾವೇಶವು ಆಕ್ರಮಣಕಾರಿ ಧೋರಣೆಯ ವಿರುದ್ಧದ ಬೃಹತ್ ಪ್ರತಿರೋಧವಾಗಿದೆ ಎಂದು ಸಿಐಟಿಯು ರಾಜ್ಯ ಪ್ರಧಾನ ಕಾರ್ಯದರ್ಶಿ ಎಸ್. ವರಲಕ್ಷ್ಮಿ ತಿಳಿಸಿದರು. ಎಸ್ಐಆರ್ ಸಮಸ್ಯೆಯಲ್ಲ ಎಂದು ಬಿಂಬಿಸುವ ಸಂಘಪರಿವಾರದವರ...

ಮತದಾನ ನಮ್ಮ ಜನ್ಮಸಿದ್ದ ಹಕ್ಕು, ಎಸ್‌ಐಆರ್ ಕುರಿತು ಜನ ಜಾಗೃತಿ ಅಗತ್ಯ: ಪೀಟರ್ ಮಚಾಡೋ

'ಮತದಾನ ನಮ್ಮ ಜನ್ಮಸಿದ್ದ ಹಕ್ಕು ಅದನ್ನು ನಾವು ಬಿಟ್ಟು ಕೊಡುವುದಿಲ್ಲ' ಎಂದು ಕರ್ನಾಟಕ ಕ್ರೈಸ್ತ ಸಮುದಾಯದ ಮಹಾ ಧರ್ಮಾಧ್ಯಕ್ಷ ರೆವೆಂಡರ್ ಫಾದರ್ ಪೀಟರ್ ಮಚಾಡೋ ಹೇಳಿದರು. ಬೆಂಗಳೂರಿನ ಫ್ರೀಡಂ ಪಾರ್ಕ್‌ನಲ್ಲಿ...