Homeಕರ್ನಾಟಕಸದನದಲ್ಲಿ ಮಹತ್ವದ ಚರ್ಚೆ, ಹಾಸ್ಯ, ನೋವು: ಕಲಾಪ ಸೋಮವಾರಕ್ಕೆ..

ಸದನದಲ್ಲಿ ಮಹತ್ವದ ಚರ್ಚೆ, ಹಾಸ್ಯ, ನೋವು: ಕಲಾಪ ಸೋಮವಾರಕ್ಕೆ..

- Advertisement -
- Advertisement -

ರಾಜ್ಯ ಸರ್ಕಾರದ ಹಾವು ಏಣಿ ಆಟ ಮುಂದುವರೆದಿದ್ದು ಇಂದು ಸಹ ಸದನದಲ್ಲಿ ಮಹತ್ವದ ಚರ್ಚೆ, ವಾಗ್ವಾದ ಮತ್ತು ಗದ್ದಲ ನಡೆದು ಕೊನೆಗೆ ಕಲಾಪವನ್ನು ಸ್ಪೀಕರ್ ರಮೇಶ್ ಕುಮಾರ್ ರವರು ಸೋಮವಾರಕ್ಕೆ ಮುಂದೂಡಿದರು.

ಸೋಮವಾರ ಏನೇ ಆಗಲಿ ಒಂದು ಇತ್ಯರ್ಥ ಮಾಡುತ್ತೇವೆ ಎಂದು ಮಾತುಕೊಟ್ಟ ಬಳಿಕವಷ್ಟೇ ಸದನದ ಕಲಾಪವನ್ನು ಮುಂದೂಡಿದ್ದ ಅಲ್ಲಿಯವರೆಗೂ ಬಿಜೆಪಿ ಕಾಯಬೇಕಾಗಿದೆ ಮಾತ್ರವಲ್ಲ ಬಂಡಾಯವೆದ್ದಿರುವ ಅತೃಪ್ತ ಶಾಸಕರನ್ನು ಕಾಯುವ ಕೆಲಸ ಮಾಡಬೇಕಿದೆ.

ಇನ್ನು ಮೈತ್ರಿ ಸರ್ಕಾರ ಚರ್ಚೆಯನ್ನು ಮನಬಂದಂತೆ ಎಳೆದುದ್ದಲ್ಲದೇ ಸೋಮವಾರ ಕುಮಾರಸ್ವಾಮಿಯವರು ರಾಜೀನಾಮೆ ನೀಡುವುದು ಖಚಿತವಾಗಿದ್ದು ಅಲ್ಲಿಯವರೆಗೂ ಬಿಜೆಪಿಯವರನ್ನು ಕಾಡಿಸುವ ಕೆಲಸವನ್ನು ಸಮರ್ಪಕವಾಗಿ ಮಾಡಿದೆ.

ಇಂದು ರಾತ್ರಿ 12 ಗಂಟೆಯಾದರೂ ಪರವಾಗಿಲ್ಲ, ನಾವು ಸದನದಲ್ಲಿರುತ್ತೇವೆ, ದಯವಿಟ್ಟು ಇಂದು ತೀರ್ಮಾನ ಮಾಡಿ ಎಂದು ವಿಪಕ್ಷ ನಾಯಕ ಬಿ.ಎಸ್ ಯಡಿಯೂರಪ್ಪನವರು ಪದೇ ಪದೇ ಸ್ಪೀಕರ್ ಬಳಿ ಮನವಿ ಮಾಡಿದರೂ ಸ್ಪೀಕರ್ ರವರು ಕರಗದೇ ಕೊನೆಗೂ ಕಲಾಪ ಮುಂದೂಡಿದರು.

ಇದಕ್ಕೂ ಮೊದಲು ಇಂದು 1:30ರವರೆಗೆ ಡೆಡ್ ಲೈನ್ ಕೊಟ್ಟಿದ್ದ ರಾಜ್ಯಪಾಲರು ತಮ್ಮ ಮಾತನ್ನು ಸಿಎಂ ಕುಮಾರಸ್ವಾಮಿಯವರು ಮೀರಿದ್ದರಿಂದ ಸಂಜೆ ಆರು ಗಂಟೆಯೊಳಗೆ ವಿಶ್ವಾಸಮತ ಸಾಬೀತುಪಡಿಸಿ ಎಂದು ಮತ್ತೊಮ್ಮೆ ಡೆಡ್ ಲೈನ್ ಕೊಟ್ಟರೂ ಸಹ ಸಿಎಂ ಅವರ ಮಾತಿಗೆ ಕವಡೆ ಕಾಸಿನ ಕಿಮ್ಮತ್ತು ಸಹ ಕೊಡಲಿಲ್ಲ.

ಇನ್ನು ಆಡಳಿತ ಪಕ್ಷದ ಪರ ಒಬ್ಬರ ನಂತರ ಒಬ್ಬರಂತೆ ಭಾಷಣ ಬಿಗಿದರು. ಕಾಂಗ್ರೆಸ್ ನ ಕೃಷ್ಣಭೈರೇಗೌಡ ಮತ್ತು ಜೆಡಿಎಸ್ ಶಿವಲಿಂಗೇಗೌಡರವರು ಅದ್ಭುತವಾಗಿ ಮಾತನಾಡಿ ಮೆಚ್ಚುಗೆ ಗಳಿಸಿದರು. ತದನಂತರ ಎಚ್.ಡಿ ರೇವಣ್ಣನವರು ಮಾತಿನ ಚಟಾಕಿ ಹಾರಿಸಿದರು. ಇಡೀ ವರ್ಷಪೂರ್ತಿ ನನ್ನ ಬಗ್ಗೆಯೇ ಮಾತಾಡಿದ್ದೀರಿ ಇಂದು ನನಗೆ ಮಾತಾಡಲು ಎರಡು ಗಂಟೆ ಅವಕಾಶ ಕೊಡಬೇಕು ಸಭಾಧ್ಯಕ್ಷರೆ ಎಂದರು.

ಆಗ ರಮೇಶ್ ಕುಮಾರ್ ರವರು ಖಂಡಿತ ಸಮಯ ಕೊಡುತ್ತೇವೆ ರೇವಣ್ಣನವರೆ ಅದಕ್ಕೂ ಮೊದಲು ಯಾವಾಗ ಕೊಡಬೇಕು ಎಂದು ನಮ್ಮ ಜ್ಯೋತಿಷಿಯವರನ್ನು ಕೇಳಿ, ಯಾವ ಗಳಿಗೆ ಕೊಡಬೇಕು ಎಂದು ಹೇಳುತ್ತೀವಿ ಎಂದು ತಮಾಷೆ ಮಾಡುವ ಮೂಲಕ ಇಡೀ ಸದನ ನಗೆಗಡಲಲ್ಲಿ ಮುಳುಗುವಂತೆ ಮಾಡಿದರು. ನಂತರ ರೇವಣ್ಣನವರು ಮನೆಲೀ ಹೆಂಗಸರು ಕಾಯುತ್ತಿದ್ದಾರೆ, ಒಂದು ವಾರವಾಯಿತು ಬಂದು, ಹಾಗಾಗಿ ಇಂದಿನ ಸದನದ ಕಲಾಪವನ್ನು ಬೇಗ ಮುಗಿಸಿ ನಾವು ಮನೆಗೆ ಹೋಗಲು ಅವಕಾಶ ಕೊಡಿ ಎಂದರು.

ಸ್ಪೀಕರ್ ರಮೇಶ್ ಕುಮಾರ್ ರವರು ಕಾಂಗ್ರೆಸ್ ಶಾಸಕಾಂಗ ಪಕ್ಷದ ನಾಯಕ ಸಿದ್ದರಾಮಯ್ಯನವರ ಬಳಿ ದಯವಿಟ್ಟು ಇಂದು ಎಷ್ಟು ಗಂಟೆಗೆ ಮುಗಿಸುತ್ತೀರಿ ಹೇಳಿ ಎಂದು ಮನವಿ ಮಾಡಿದಾಗ ಸಿದ್ದರಾಮಯ್ಯನವರು “ಇನ್ನು ಬಹಳಷ್ಟು ಜನ ಮಾತಾಡುವವರಿದ್ದಾರೆ ಹಾಗಾಗಿ ಸೋಮವಾರ ಮುಂದೂಡಬೇಕಾಗಿ ಮನವಿ” ಎಂದು ಹೇಳಿದರು

ನಂತರ ಸ್ಪೀಕರ್ ರವರು ಕಲಾಪವನ್ನು ಸೋಮವಾರಕ್ಕೆ ಮುಂದೂಡಿದರು.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕೇಂದ್ರದ ವಿಬಿ-ಜಿ ರಾಮ್ ಜಿಗೆ ಟಕ್ಕರ್ : ಪ. ಬಂಗಾಳದ ‘ಕರ್ಮಶ್ರೀ’ ಯೋಜನೆಗೆ ಮಹಾತ್ಮ ಗಾಂಧಿ ಹೆಸರಿಡುವುದಾಗಿ ಘೋಷಿಸಿದ ಮಮತಾ ಬ್ಯಾನರ್ಜಿ

ಪಶ್ಚಿಮ ಬಂಗಾಳ ಸರ್ಕಾರದ ಉದ್ಯೋಗ ಖಾತರಿ ಯೋಜನೆ 'ಕರ್ಮಶ್ರೀ'ಯನ್ನು ಮಹಾತ್ಮ ಗಾಂಧಿ ಹೆಸರಿನಲ್ಲಿ ಮರುನಾಮಕರಣ ಮಾಡುವುದಾಗಿ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಗುರುವಾರ (ಡಿಸೆಂಬರ್ 18) ಘೋಷಿಸಿದ್ದಾರೆ. ನರೇಗಾ ಯೋಜನೆಯಿಂದ ಮಹಾತ್ಮಾ ಗಾಂಧಿಯವರ ಹೆಸರನ್ನು ಕೈಬಿಟ್ಟಿರುವುದಕ್ಕೆ...

ಕೃಷಿ ಸಹಕಾರ ಸಂಘಗಳಿಗೆ ಹಣ ಬಿಡುಗಡೆ: ಶಾಸಕ ಕುಣಿಗಲ್ ರಂಗನಾಥ್ ವಿರುದ್ಧ ಕೆ.ಎನ್. ರಾಜಣ್ಣ ವಾಗ್ದಾಳಿ

ಕೃಷಿ ಸಹಕಾರ ಸಂಘಗಳಿಗೆ ಹಣ ಬಿಡುಗಡೆ ಮಾಡುವುದನ್ನು ಮಾಜಿ ಸಹಕಾರಿ ಸಚಿವ ಕೆ.ಎನ್. ರಾಜಣ್ಣ ಗುರುವಾರ ಬಲವಾಗಿ ಸಮರ್ಥಿಸಿಕೊಂಡಿದ್ದಾರೆ. ಆಡಳಿತ ಪಕ್ಷದೊಳಗಿನ ಸಾರ್ವಜನಿಕ ಭಿನ್ನಾಭಿಪ್ರಾಯದ ನಡುವೆಯೂ, "ಸಂಘಗಳಿಗೆ ವಿತರಿಸಲಾದ ನಿಧಿ ಠೇವಣಿದಾರರ ಹಣ,...

ತನ್ನದೇ ಶಾಸಕರ ಅನರ್ಹತೆ ಕೋರಿ ಬಿಆರ್‌ಎಸ್‌ ಅರ್ಜಿ : ತಿರಸ್ಕರಿಸಿದ ತೆಲಂಗಾಣ ಸ್ಪೀಕರ್

ಆಡಳಿತಾರೂಢ ಕಾಂಗ್ರೆಸ್‌ಗೆ ನಿಷ್ಠೆ ಬದಲಾಯಿಸಿದ್ದಾರೆಂದು ಹೇಳಲಾದ ಹತ್ತು ಬಿಆರ್‌ಎಸ್ ಶಾಸಕರನ್ನು ಅನರ್ಹಗೊಳಿಸುವಂತೆ ಕೋರಿದ್ದ ಅರ್ಜಿಗಳ ಪೈಕಿ ಐದು ಅರ್ಜಿಗಳನ್ನು ತೆಲಂಗಾಣ ವಿಧಾನಸಭೆಯ ಸ್ಪೀಕರ್ ಗದ್ದಂ ಪ್ರಸಾದ್ ಕುಮಾರ್ ಬುಧವಾರ (ಡಿಸೆಂಬರ್ 18) ತಿರಸ್ಕರಿಸಿದ್ದಾರೆ....

ಸಾಮಾಜಿಕ ಬಹಿಷ್ಕಾರ, ದ್ವೇಷ ಭಾಷಣ ತಡೆ ವಿಧೇಯಕಗಳು ವಿಧಾನಸಭೆಯಲ್ಲಿ ಅಂಗೀಕಾರ

ಕರ್ನಾಟಕ ಸಾಮಾಜಿಕ ಬಹಿಷ್ಕಾರ (ಪ್ರತಿಬಂಧ, ನಿಷೇಧ ಮತ್ತು ಪರಿಹಾರ) ವಿಧೇಯಕ-2025 ಗುರುವಾರ (ಡಿ.18) ವಿಧಾನಸಭೆಯಲ್ಲಿ ಸರ್ವಾನುಮತದ ಅಂಗೀಕಾರಗೊಂಡಿತು. ಬೆಳಗಾವಿ ಸುವರ್ಣ ಸೌಧದಲ್ಲಿ ನಡೆಯುತ್ತಿರುವ ಚಳಿಗಾಲದ ವಿಧಾನಮಂಡಲ ಅಧಿವೇಶನದ ವಿಧಾನಸಭೆ ಕಲಾಪದಲ್ಲಿ ಸಮಾಜ ಕಲ್ಯಾಣ ಇಲಾಖೆ...

ಆಕ್ರಮಿತ ಪೂರ್ವ ಜೆರುಸಲೆಮ್ ವಸಾಹತು ಪ್ರದೇಶದಲ್ಲಿ 9000 ವಸತಿ ಘಟಕಗಳ ಯೋಜನೆ ಮುಂದಿಟ್ಟ ಇಸ್ರೇಲ್ 

ಆಕ್ರಮಿತ ಪೂರ್ವ ಜೆರುಸಲೆಮ್‌ನಲ್ಲಿರುವ ಕೈಬಿಟ್ಟ ಖಲಾಂಡಿಯಾ ವಿಮಾನ ನಿಲ್ದಾಣದ ಸ್ಥಳ ಬಳಿ ಅಕ್ರಮ ವಸಾಹತು ಪ್ರದೇಶದಲ್ಲಿ ಸುಮಾರು 9,000 ಹೊಸ ವಸತಿ ಘಟಕಗಳನ್ನು ನಿರ್ಮಿಸಲು ಇಸ್ರೇಲಿ ಆಕ್ರಮಿತ ಅಧಿಕಾರಿಗಳು ಯೋಜನೆಗಳನ್ನು ರೂಪಿಸಲು ಸಜ್ಜಾಗಿದ್ದಾರೆ....

ವಿಪಕ್ಷಗಳ ತೀವ್ರ ವಿರೋಧದ ನಡುವೆಯೇ ಲೋಕಸಭೆಯಲ್ಲಿ ‘ವಿಬಿ-ಜಿ ರಾಮ್ ಜಿ ಮಸೂದೆ’ ಅಂಗೀಕಾರ

ಪ್ರತಿಪಕ್ಷಗಳ ತೀವ್ರ ವಿರೋಧದ ನಡುವೆಯೇ ಗುರುವಾರ (ಡಿ.18) ಲೋಕಸಭೆಯಲ್ಲಿ 'ವಿಕ್ಷಿತ್ ಭಾರತ್ ಗ್ಯಾರಂಟಿ ಫಾರ್ ರೋಜ್‌ಗಾರ್ ಅಂಡ್ ಅಜೀವಿಕ ಮಿಷನ್ (ಗ್ರಾಮೀಣ್ ) (ವಿಬಿ-ಜಿ ರಾಮ್ ಜಿ) ಮಸೂದೆ ಅಂಗೀಕಾರಗೊಂಡಿತು. ಈ ಮಸೂದೆ 2005ರಲ್ಲಿ...

ರಾಹುಲ್ ಗಾಂಧಿ ಆಪ್ತ ಸಹಾಯಕನ ಪತ್ನಿ ಪ್ರಜ್ಞಾ ಸತವ್ ಕಾಂಗ್ರೆಸ್ ಎಂಎಲ್‌ಸಿ ಸ್ಥಾನಕ್ಕೆ ರಾಜೀನಾಮೆ; ಬಿಜೆಪಿ ಸೇರುವ ನಿರೀಕ್ಷೆ

ಕಾಂಗ್ರೆಸ್ಸಿಗ ಮತ್ತು ಲೋಕಸಭಾ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿಯವರ ಆಪ್ತರಾಗಿದ್ದ ದಿವಂಗತ ರಾಜೀವ್ ಸತವ್ ಅವರ ಪತ್ನಿ ಸತವ್ ಬಿಜೆಪಿಗೆ ಸೇರುವ ನಿರೀಕ್ಷೆಯಿದೆ. ಮಹಾರಾಷ್ಟ್ರದ ಕಾಂಗ್ರೆಸ್ ನಾಯಕಿ ಪ್ರಜ್ಞಾ ಸತವ್ ಅವರು ಗುರುವಾರ...

ಭೂ ಕಬಳಿಕೆ ಆರೋಪ : ಸದನದಲ್ಲಿ ಚರ್ಚೆಗೆ ಸಿದ್ದ ಎಂದ ಸಚಿವ ಕೃಷ್ಣ ಬೈರೇಗೌಡ

"ಸದನದ ಸದಸ್ಯನಾಗಿ ನನ್ನ ಹಕ್ಕನ್ನು ಬಿಟ್ಟುಕೊಡಲು ಸಿದ್ದನಿದ್ದೇನೆ. ನನ್ನ ಬಗ್ಗೆ ಎತ್ತಿರುವ ವೈಯಕ್ತಿಕ ಆರೋಪದ ಬಗ್ಗೆ ಚರ್ಚೆಗೆ ಸಿದ್ದ" ಎಂದು ಸಚಿವ ಕೃಷ್ಣ ಬೈರೇಗೌಡ ಹೇಳಿದರು. ಗುರುವಾರ (ಡಿ.18) ವಿಧಾನಸಭೆಯ ಶೂನ್ಯ ವೇಳೆಯಲ್ಲಿ, ವಿಧಾನಪರಿಷತ್...

ಡಿಸೆಂಬರ್ 15 ರ ಪ್ರತಿಭಟನೆಯಲ್ಲಿ ಭಾಗವಹಿಸಿದ್ದಕ್ಕಾಗಿ ಜಾಮಿಯಾ ಮಿಲಿಯಾ ವಿದ್ಯಾರ್ಥಿಗಳಿಗೆ ವಿಶ್ವವಿದ್ಯಾಲಯದಿಂದ ಶೋಕಾಸ್ ನೋಟಿಸ್‌

2019 ರಲ್ಲಿ ವಿದ್ಯಾರ್ಥಿಗಳ ಮೇಲಿನ ಹಿಂಸಾಚಾರ ನಡೆದು ಆರು ವರ್ಷಗಳು ತುಂಬಿದ್ದು, ಅದರ ವಾರ್ಷಿಕ ನೆನಪಿನಲ್ಲಿ ಜಾಮಿಯಾ ಮಿಲಿಯಾ ಇಸ್ಲಾಮಿಯಾ ವಿದ್ಯಾರ್ಥಿಗಳು ಡಿಸೆಂಬರ್ 15 ರಂದು ಕ್ಯಾಂಪಸ್ ಒಳಗೆ ದೊಡ್ಡ ಪ್ರತಿಭಟನೆ ನಡೆಸಿದ್ದರು....

ಅಮೆರಿಕದ ಸುಂಕಗಳು ತಮಿಳುನಾಡಿನ ರಫ್ತು ಕೈಗಾರಿಕೆಗಳನ್ನು ಅಂಚಿಗೆ ತಳ್ಳುತ್ತವೆ: ಪ್ರಧಾನಿ ಮೋದಿಗೆ ಸಿಎಂ ಸ್ಟಾಲಿನ್ ಎಚ್ಚರಿಕೆ

ತಮಿಳುನಾಡು ಮುಖ್ಯಮಂತ್ರಿ ಎಂ.ಕೆ. ಸ್ಟಾಲಿನ್ ಅವರು ಪ್ರಧಾನಿ ನರೇಂದ್ರ ಮೋದಿ ಅವರಿಗೆ ಪತ್ರ ಬರೆದಿದ್ದು, ಭಾರತದ ರಫ್ತಿನ ಮೇಲೆ ಅಮೆರಿಕ ವಿಧಿಸಿರುವ ಭಾರೀ ಸುಂಕಗಳು ರಾಜ್ಯದ ಕೆಲವು ಉದ್ಯೋಗ- ಕೈಗಾರಿಕೆಗಳನ್ನು ತೀವ್ರ ಬಿಕ್ಕಟ್ಟಿನತ್ತ...