Homeಕರ್ನಾಟಕಸದನದಲ್ಲಿ ಮಹತ್ವದ ಚರ್ಚೆ, ಹಾಸ್ಯ, ನೋವು: ಕಲಾಪ ಸೋಮವಾರಕ್ಕೆ..

ಸದನದಲ್ಲಿ ಮಹತ್ವದ ಚರ್ಚೆ, ಹಾಸ್ಯ, ನೋವು: ಕಲಾಪ ಸೋಮವಾರಕ್ಕೆ..

- Advertisement -
- Advertisement -

ರಾಜ್ಯ ಸರ್ಕಾರದ ಹಾವು ಏಣಿ ಆಟ ಮುಂದುವರೆದಿದ್ದು ಇಂದು ಸಹ ಸದನದಲ್ಲಿ ಮಹತ್ವದ ಚರ್ಚೆ, ವಾಗ್ವಾದ ಮತ್ತು ಗದ್ದಲ ನಡೆದು ಕೊನೆಗೆ ಕಲಾಪವನ್ನು ಸ್ಪೀಕರ್ ರಮೇಶ್ ಕುಮಾರ್ ರವರು ಸೋಮವಾರಕ್ಕೆ ಮುಂದೂಡಿದರು.

ಸೋಮವಾರ ಏನೇ ಆಗಲಿ ಒಂದು ಇತ್ಯರ್ಥ ಮಾಡುತ್ತೇವೆ ಎಂದು ಮಾತುಕೊಟ್ಟ ಬಳಿಕವಷ್ಟೇ ಸದನದ ಕಲಾಪವನ್ನು ಮುಂದೂಡಿದ್ದ ಅಲ್ಲಿಯವರೆಗೂ ಬಿಜೆಪಿ ಕಾಯಬೇಕಾಗಿದೆ ಮಾತ್ರವಲ್ಲ ಬಂಡಾಯವೆದ್ದಿರುವ ಅತೃಪ್ತ ಶಾಸಕರನ್ನು ಕಾಯುವ ಕೆಲಸ ಮಾಡಬೇಕಿದೆ.

ಇನ್ನು ಮೈತ್ರಿ ಸರ್ಕಾರ ಚರ್ಚೆಯನ್ನು ಮನಬಂದಂತೆ ಎಳೆದುದ್ದಲ್ಲದೇ ಸೋಮವಾರ ಕುಮಾರಸ್ವಾಮಿಯವರು ರಾಜೀನಾಮೆ ನೀಡುವುದು ಖಚಿತವಾಗಿದ್ದು ಅಲ್ಲಿಯವರೆಗೂ ಬಿಜೆಪಿಯವರನ್ನು ಕಾಡಿಸುವ ಕೆಲಸವನ್ನು ಸಮರ್ಪಕವಾಗಿ ಮಾಡಿದೆ.

ಇಂದು ರಾತ್ರಿ 12 ಗಂಟೆಯಾದರೂ ಪರವಾಗಿಲ್ಲ, ನಾವು ಸದನದಲ್ಲಿರುತ್ತೇವೆ, ದಯವಿಟ್ಟು ಇಂದು ತೀರ್ಮಾನ ಮಾಡಿ ಎಂದು ವಿಪಕ್ಷ ನಾಯಕ ಬಿ.ಎಸ್ ಯಡಿಯೂರಪ್ಪನವರು ಪದೇ ಪದೇ ಸ್ಪೀಕರ್ ಬಳಿ ಮನವಿ ಮಾಡಿದರೂ ಸ್ಪೀಕರ್ ರವರು ಕರಗದೇ ಕೊನೆಗೂ ಕಲಾಪ ಮುಂದೂಡಿದರು.

ಇದಕ್ಕೂ ಮೊದಲು ಇಂದು 1:30ರವರೆಗೆ ಡೆಡ್ ಲೈನ್ ಕೊಟ್ಟಿದ್ದ ರಾಜ್ಯಪಾಲರು ತಮ್ಮ ಮಾತನ್ನು ಸಿಎಂ ಕುಮಾರಸ್ವಾಮಿಯವರು ಮೀರಿದ್ದರಿಂದ ಸಂಜೆ ಆರು ಗಂಟೆಯೊಳಗೆ ವಿಶ್ವಾಸಮತ ಸಾಬೀತುಪಡಿಸಿ ಎಂದು ಮತ್ತೊಮ್ಮೆ ಡೆಡ್ ಲೈನ್ ಕೊಟ್ಟರೂ ಸಹ ಸಿಎಂ ಅವರ ಮಾತಿಗೆ ಕವಡೆ ಕಾಸಿನ ಕಿಮ್ಮತ್ತು ಸಹ ಕೊಡಲಿಲ್ಲ.

ಇನ್ನು ಆಡಳಿತ ಪಕ್ಷದ ಪರ ಒಬ್ಬರ ನಂತರ ಒಬ್ಬರಂತೆ ಭಾಷಣ ಬಿಗಿದರು. ಕಾಂಗ್ರೆಸ್ ನ ಕೃಷ್ಣಭೈರೇಗೌಡ ಮತ್ತು ಜೆಡಿಎಸ್ ಶಿವಲಿಂಗೇಗೌಡರವರು ಅದ್ಭುತವಾಗಿ ಮಾತನಾಡಿ ಮೆಚ್ಚುಗೆ ಗಳಿಸಿದರು. ತದನಂತರ ಎಚ್.ಡಿ ರೇವಣ್ಣನವರು ಮಾತಿನ ಚಟಾಕಿ ಹಾರಿಸಿದರು. ಇಡೀ ವರ್ಷಪೂರ್ತಿ ನನ್ನ ಬಗ್ಗೆಯೇ ಮಾತಾಡಿದ್ದೀರಿ ಇಂದು ನನಗೆ ಮಾತಾಡಲು ಎರಡು ಗಂಟೆ ಅವಕಾಶ ಕೊಡಬೇಕು ಸಭಾಧ್ಯಕ್ಷರೆ ಎಂದರು.

ಆಗ ರಮೇಶ್ ಕುಮಾರ್ ರವರು ಖಂಡಿತ ಸಮಯ ಕೊಡುತ್ತೇವೆ ರೇವಣ್ಣನವರೆ ಅದಕ್ಕೂ ಮೊದಲು ಯಾವಾಗ ಕೊಡಬೇಕು ಎಂದು ನಮ್ಮ ಜ್ಯೋತಿಷಿಯವರನ್ನು ಕೇಳಿ, ಯಾವ ಗಳಿಗೆ ಕೊಡಬೇಕು ಎಂದು ಹೇಳುತ್ತೀವಿ ಎಂದು ತಮಾಷೆ ಮಾಡುವ ಮೂಲಕ ಇಡೀ ಸದನ ನಗೆಗಡಲಲ್ಲಿ ಮುಳುಗುವಂತೆ ಮಾಡಿದರು. ನಂತರ ರೇವಣ್ಣನವರು ಮನೆಲೀ ಹೆಂಗಸರು ಕಾಯುತ್ತಿದ್ದಾರೆ, ಒಂದು ವಾರವಾಯಿತು ಬಂದು, ಹಾಗಾಗಿ ಇಂದಿನ ಸದನದ ಕಲಾಪವನ್ನು ಬೇಗ ಮುಗಿಸಿ ನಾವು ಮನೆಗೆ ಹೋಗಲು ಅವಕಾಶ ಕೊಡಿ ಎಂದರು.

ಸ್ಪೀಕರ್ ರಮೇಶ್ ಕುಮಾರ್ ರವರು ಕಾಂಗ್ರೆಸ್ ಶಾಸಕಾಂಗ ಪಕ್ಷದ ನಾಯಕ ಸಿದ್ದರಾಮಯ್ಯನವರ ಬಳಿ ದಯವಿಟ್ಟು ಇಂದು ಎಷ್ಟು ಗಂಟೆಗೆ ಮುಗಿಸುತ್ತೀರಿ ಹೇಳಿ ಎಂದು ಮನವಿ ಮಾಡಿದಾಗ ಸಿದ್ದರಾಮಯ್ಯನವರು “ಇನ್ನು ಬಹಳಷ್ಟು ಜನ ಮಾತಾಡುವವರಿದ್ದಾರೆ ಹಾಗಾಗಿ ಸೋಮವಾರ ಮುಂದೂಡಬೇಕಾಗಿ ಮನವಿ” ಎಂದು ಹೇಳಿದರು

ನಂತರ ಸ್ಪೀಕರ್ ರವರು ಕಲಾಪವನ್ನು ಸೋಮವಾರಕ್ಕೆ ಮುಂದೂಡಿದರು.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಮಮತಾ ಬ್ಯಾನರ್ಜಿಗೆ ಬಿಗ್ ಶಾಕ್: ನೇಮಕಗೊಂಡ ತಿಂಗಳಲ್ಲೇ ಟಿಎಂಸಿ ರಾಜ್ಯಾಧ್ಯಕ್ಷೆ ಚಂದ್ರಿಮಾ ಭಟ್ಟಾಚಾರ್ಯ ರಾಜೀನಾಮೆ

ಪಶ್ಚಿಮ ಬಂಗಾಳದ ವಿಧಾನಸಭಾ ಚುನಾವಣೆಯ ಹೀನಾಯ ಸೋಲಿನ ಹಿನ್ನೆಲೆಯಲ್ಲಿ, ಅತ್ಯಂತ ನಿರ್ಣಾಯಕವಾದ ಸಾಂಸ್ಥಿಕ ಜವಾಬ್ದಾರಿಗೆ ನೇಮಕಗೊಂಡ ಕೇವಲ ಒಂದು ತಿಂಗಳ ಒಳಗಾಗಿಯೇ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಪಕ್ಷದ ರಾಜ್ಯ ಘಟಕದ ಅಧ್ಯಕ್ಷೆ ಚಂದ್ರಿಮಾ...

ಜಿಲ್ಲಾ ನ್ಯಾಯಾಧೀಶೆ ತಬಸ್ಸುಮ್ ಖಾನ್‌ಗೆ ಬಲಪಂಥೀಯರಿಂದ ಬೆದರಿಕೆ : ಗಂಭೀರವಾಗಿ ಪರಿಗಣಿಸಿದ ಹೈಕೋರ್ಟ್

ನರ್ಮದಾಪುರಂ ಜಿಲ್ಲಾ ನ್ಯಾಯಾಧೀಶರಾದ ತಬಸ್ಸುಮ್ ಖಾನ್ ಅವರು ತಮ್ಮ ಕರ್ತವ್ಯ ನಿರ್ವಹಣೆಯ ಕಾರಣಕ್ಕಾಗಿ ಬೆದರಿಕೆ ಮತ್ತು ನಿಂದನೆಗೆ ಒಳಗಾಗಿರುವುದನ್ನು ಗಂಭೀರವಾಗಿ ಪರಿಗಣಿಸಿರುವ ಮಧ್ಯಪ್ರದೇಶ ಹೈಕೋರ್ಟ್, ಅವರಿಗೆ ಸೂಕ್ತ ರಕ್ಷಣೆ ನೀಡುವಂತೆ ಮತ್ತು ಅಪರಾಧಿಗಳನ್ನು ಪತ್ತೆಹಚ್ಚಲು ಕೈಗೊಂಡಿರುವ...

ಎಸ್ಐಆರ್ ಪ್ರಕ್ರಿಯೆಯಲ್ಲಿ ಚುನಾವಣಾ ಆಯೋಗದ ಪಕ್ಷಪಾತದ ಬಗ್ಗೆ ಸಿಜೆಐಗೆ ಪ್ರತಿಪಕ್ಷಗಳಿಂದ ಪತ್ರ: ‘ಪ್ರಜಾಪ್ರಭುತ್ವ ಅಪಾಯದಲ್ಲಿದೆ’ ಎಂದು ಆರೋಪ

ದೇಶದಲ್ಲಿ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ಭಾರತೀಯ ಚುನಾವಣಾ ಆಯೋಗವು (ECI) ಪಕ್ಷಪಾತ ಧೋರಣೆ ತಳೆದಿದೆ ಎಂದು ಆರೋಪಿಸಿ, 24 ವಿರೋಧ ಪಕ್ಷಗಳ ನಾಯಕರು ಹಾಗೂ ಒಬ್ಬರು ಸ್ವತಂತ್ರ...

ಬೆಂಗಳೂರು| ಕೆ.ಆರ್. ವೃತ್ತದ ಬಳಿ ಬಿಎಂಟಿಸಿ ಬಸ್‌ಗಳ ನಡುವೆ ಅಪಘಾತ; ಹಲವರಿಗೆ ಗಾಯ

ಇಂದು ಬೆಳಿಗ್ಗೆ ವಿಧಾನಸೌಧದಿಂದ ಸ್ವಲ್ಪ ದೂರದಲ್ಲಿರುವ ಜನನಿಬಿಡ ಕೆ.ಆರ್. ವೃತ್ತ ಜಂಕ್ಷನ್ ಬಳಿ ಎರಡು ಬಿಎಂಟಿಸಿ ಬಸ್‌ಗಳು ಡಿಕ್ಕಿ ಹೊಡೆದ ಪರಿಣಾಮ ಹಲವಾರು ಪ್ರಯಾಣಿಕರು ಗಾಯಗೊಂಡರು. ಡಿಕ್ಕಿಯ ಪರಿಣಾಮ ಬಸ್ಸಿನೊಳಗೆ ಹಲವಾರು ಪ್ರಯಾಣಿಕರು...

ಎಸ್‌ಐಆರ್ ಪ್ರಕ್ರಿಯೆಯಲ್ಲಿ ಲೋಪ ಆರೋಪ; ಕೋಲಾರ-ಮೈಸೂರಿನ ಅಧಿಕಾರಿಗಳಿಗೆ ನೋಟಿಸ್ ಜಾರಿ

ರಾಜ್ಯದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಗಳ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್)ಗೆ ಸಂಬಂಧಿಸಿದಂತೆ, ಕೋಲಾರ ಮತ್ತು ಮೈಸೂರಿನಲ್ಲಿ ನಡೆದ ಕಾರ್ಯವಿಧಾನದಲ್ಲಿ ನಿಯಮ ಉಲ್ಲಂಘನೆ ಆರೋಪ ಕೇಳಿಬಂದೆ. ಕೋಲಾರದಲ್ಲಿ, ಪರಿಷ್ಕರಣಾ ಕಾರ್ಯದ ಸಮಯದಲ್ಲಿ ಕರ್ತವ್ಯ...

ಸೂರತ್ ಧ್ವಂಸ ಕಾರ್ಯಾಚರಣೆ ಸಂಪೂರ್ಣ ‘ಕಾನೂನುಬಾಹಿರ’: 100 ನಿರಾಶ್ರಿತ ಕುಟುಂಬಗಳ ಪುನರ್ವಸತಿಗೆ ಗುಜರಾತ್ ಹೈಕೋರ್ಟ್ ಆದೇಶ

ಅಹಮದಾಬಾದ್: ಗುಜರಾತ್‌ನ ಸೂರತ್‌ನ ನಾಸಿರ್ ನಗರದಲ್ಲಿ ನಡೆದ ಮನೆಗಳ ಧ್ವಂಸ ಕಾರ್ಯಾಚರಣೆಯನ್ನು ತೀವ್ರವಾಗಿ ಖಂಡಿಸಿರುವ ಗುಜರಾತ್ ಹೈಕೋರ್ಟ್, ಇದನ್ನು "ಸಂಪೂರ್ಣ ಕಾನೂನುಬಾಹಿರ" ಎಂದು ಕರೆದಿದೆ. ಮೇ 30 ರಂದು ನಡೆದ ಈ "ಅನಧಿಕೃತ"...

ವಿದ್ಯುತ್ ಖಾಸಗೀಕರಣ ವಿರುದ್ದದ ಹೋರಾಟಕ್ಕೆ ಗೆಲುವು: ಅರ್ಜಿ ಹಿಂಪಡೆದ ಟಾಟಾ ಪವರ್ ಕಂಪನಿ

ರಾಜ್ಯದಲ್ಲಿ ವಿದ್ಯುತ್ ಕ್ಷೇತ್ರದಲ್ಲಿ ಖಾಸಗೀಕರಣದ ಹೆಜ್ಜೆ ಇಡಲು ಮುಂದಾಗಿದ್ದ ಟಾಟಾ ಪವರ್ ಕಂಪನಿಗೆ ಭಾರಿ ಹಿನ್ನಡೆಯಾಗಿದೆ. ಕರ್ನಾಟಕ ವಿದ್ಯುತ್ ನಿಯಂತ್ರಣ ಆಯೋಗದ (KERC) ಮುಂದೆ ರಾಜ್ಯದ 19 ಕಂದಾಯ ಜಿಲ್ಲೆಗಳಿಗೆ ಸಂಬಂಧಿಸಿದಂತೆ ತಾನು...

SIR: ಮತದಾರರ ಮನೆಗೆ ಹೋಗದೆ ಕಚೇರಿಯಲ್ಲೇ ಕುಳಿತು ಫಾರ್ಮ್ ವಿತರಣೆ ಆರೋಪ, BLO ಗಳಿಗೆ ಎಚ್ಚರಿಕೆ ನೀಡಿದ ಆಯೋಗ

ರಾಜ್ಯದಲ್ಲಿ ಪ್ರಸ್ತುತ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ಸಾರ್ವಜನಿಕರಿಂದ ವ್ಯಾಪಕ ದೂರುಗಳು ಕೇಳಿಬಂದ ಬೆನ್ನಲ್ಲೇ, ರಾಜ್ಯ ಚುನಾವಣಾ ಆಯೋಗವು ತೀವ್ರ ಆಕ್ಷೇಪ ವ್ಯಕ್ತಪಡಿಸಿದೆ. ಮತದಾರರ ಮನೆ-ಮನೆಗೆ ಭೇಟಿ...

ಅಳುವ ಕಂದಮ್ಮಗಳನ್ನು ವಾಷಿಂಗ್ ಮೆಷಿನ್‌ನಲ್ಲಿ ಕೂಡಿಹಾಕ್ತಿದ್ದ ಇಬ್ಬರು ಕೇರ್‌ಟೇಕರ್ ಅರೆಸ್ಟ್

ಸಿಲಿಕಾನ್ ಸಿಟಿಯ ಬ್ರೂಕ್‌ಫೀಲ್ಡ್‌ನಲ್ಲಿರುವ ಪ್ರಮುಖ ಐಟಿ ಸಂಸ್ಥೆ 'ಕ್ಯಾಪ್‌ಜೆಮಿನಿ' ಕ್ಯಾಂಪಸ್‌ನ ಡೇ-ಕೇರ್ ಸೆಂಟರ್‌ನಲ್ಲಿ ಪುಟ್ಟ ಕಂದಮ್ಮಗಳನ್ನು ಬಾತ್‌ರೂಮ್ ಹಾಗೂ ವಾಷಿಂಗ್ ಮೆಷಿನ್‌ಗಳಲ್ಲಿ ಕೂಡಿಹಾಕಿ ವಿಕೃತಿ ಮೆರೆದಿದ್ದ ಪ್ರಕರಣದಲ್ಲಿ ಪೊಲೀಸರು ಭರ್ಜರಿ ಬೇಟೆಯಾಡಿದ್ದಾರೆ. ಪ್ರಕರಣದ...

“ನಾಗರಿಕರು ಸರ್ಕಾರದ ಗುಲಾಮರಲ್ಲ”: ಸಿಎಎ, ಜ್ಞಾನವಾಪಿ ವಿರೋಧಿ ಪ್ರತಿಭಟನೆ ಸಂಬಂಧ ಎಸ್‌ಡಿಪಿಐ ನಾಯಕನ ಗಡಿಪಾರು ಪ್ರಶ್ನಿಸಿದ ಬಾಂಬೆ ಹೈಕೋರ್ಟ್

“ದೇಶದ ನಾಗರಿಕರು ಸರ್ಕಾರದ ಗುಲಾಮರಲ್ಲ. ಕೇವಲ ಸರ್ಕಾರದ ನಿರ್ಧಾರಗಳನ್ನು ವಿರೋಧಿಸುವುದು ಅಥವಾ ಆಡಳಿತ ವ್ಯವಸ್ಥೆಯ ವಿರುದ್ಧ ಘೋಷಣೆಗಳನ್ನು ಕೂಗುವುದು ಒಬ್ಬ ನಾಗರಿಕನನ್ನು ಗಡಿಪಾರು ಮಾಡಲು ಕಾನೂನಾತ್ಮಕ ಕಾರಣವಾಗಲಾರದು,” ಎಂದು ಬಾಂಬೆ ಹೈಕೋರ್ಟ್‌ ಐತಿಹಾಸಿಕ...