Homeಕರ್ನಾಟಕಸದನದಲ್ಲಿ ಮಹತ್ವದ ಚರ್ಚೆ, ಹಾಸ್ಯ, ನೋವು: ಕಲಾಪ ಸೋಮವಾರಕ್ಕೆ..

ಸದನದಲ್ಲಿ ಮಹತ್ವದ ಚರ್ಚೆ, ಹಾಸ್ಯ, ನೋವು: ಕಲಾಪ ಸೋಮವಾರಕ್ಕೆ..

- Advertisement -
- Advertisement -

ರಾಜ್ಯ ಸರ್ಕಾರದ ಹಾವು ಏಣಿ ಆಟ ಮುಂದುವರೆದಿದ್ದು ಇಂದು ಸಹ ಸದನದಲ್ಲಿ ಮಹತ್ವದ ಚರ್ಚೆ, ವಾಗ್ವಾದ ಮತ್ತು ಗದ್ದಲ ನಡೆದು ಕೊನೆಗೆ ಕಲಾಪವನ್ನು ಸ್ಪೀಕರ್ ರಮೇಶ್ ಕುಮಾರ್ ರವರು ಸೋಮವಾರಕ್ಕೆ ಮುಂದೂಡಿದರು.

ಸೋಮವಾರ ಏನೇ ಆಗಲಿ ಒಂದು ಇತ್ಯರ್ಥ ಮಾಡುತ್ತೇವೆ ಎಂದು ಮಾತುಕೊಟ್ಟ ಬಳಿಕವಷ್ಟೇ ಸದನದ ಕಲಾಪವನ್ನು ಮುಂದೂಡಿದ್ದ ಅಲ್ಲಿಯವರೆಗೂ ಬಿಜೆಪಿ ಕಾಯಬೇಕಾಗಿದೆ ಮಾತ್ರವಲ್ಲ ಬಂಡಾಯವೆದ್ದಿರುವ ಅತೃಪ್ತ ಶಾಸಕರನ್ನು ಕಾಯುವ ಕೆಲಸ ಮಾಡಬೇಕಿದೆ.

ಇನ್ನು ಮೈತ್ರಿ ಸರ್ಕಾರ ಚರ್ಚೆಯನ್ನು ಮನಬಂದಂತೆ ಎಳೆದುದ್ದಲ್ಲದೇ ಸೋಮವಾರ ಕುಮಾರಸ್ವಾಮಿಯವರು ರಾಜೀನಾಮೆ ನೀಡುವುದು ಖಚಿತವಾಗಿದ್ದು ಅಲ್ಲಿಯವರೆಗೂ ಬಿಜೆಪಿಯವರನ್ನು ಕಾಡಿಸುವ ಕೆಲಸವನ್ನು ಸಮರ್ಪಕವಾಗಿ ಮಾಡಿದೆ.

ಇಂದು ರಾತ್ರಿ 12 ಗಂಟೆಯಾದರೂ ಪರವಾಗಿಲ್ಲ, ನಾವು ಸದನದಲ್ಲಿರುತ್ತೇವೆ, ದಯವಿಟ್ಟು ಇಂದು ತೀರ್ಮಾನ ಮಾಡಿ ಎಂದು ವಿಪಕ್ಷ ನಾಯಕ ಬಿ.ಎಸ್ ಯಡಿಯೂರಪ್ಪನವರು ಪದೇ ಪದೇ ಸ್ಪೀಕರ್ ಬಳಿ ಮನವಿ ಮಾಡಿದರೂ ಸ್ಪೀಕರ್ ರವರು ಕರಗದೇ ಕೊನೆಗೂ ಕಲಾಪ ಮುಂದೂಡಿದರು.

ಇದಕ್ಕೂ ಮೊದಲು ಇಂದು 1:30ರವರೆಗೆ ಡೆಡ್ ಲೈನ್ ಕೊಟ್ಟಿದ್ದ ರಾಜ್ಯಪಾಲರು ತಮ್ಮ ಮಾತನ್ನು ಸಿಎಂ ಕುಮಾರಸ್ವಾಮಿಯವರು ಮೀರಿದ್ದರಿಂದ ಸಂಜೆ ಆರು ಗಂಟೆಯೊಳಗೆ ವಿಶ್ವಾಸಮತ ಸಾಬೀತುಪಡಿಸಿ ಎಂದು ಮತ್ತೊಮ್ಮೆ ಡೆಡ್ ಲೈನ್ ಕೊಟ್ಟರೂ ಸಹ ಸಿಎಂ ಅವರ ಮಾತಿಗೆ ಕವಡೆ ಕಾಸಿನ ಕಿಮ್ಮತ್ತು ಸಹ ಕೊಡಲಿಲ್ಲ.

ಇನ್ನು ಆಡಳಿತ ಪಕ್ಷದ ಪರ ಒಬ್ಬರ ನಂತರ ಒಬ್ಬರಂತೆ ಭಾಷಣ ಬಿಗಿದರು. ಕಾಂಗ್ರೆಸ್ ನ ಕೃಷ್ಣಭೈರೇಗೌಡ ಮತ್ತು ಜೆಡಿಎಸ್ ಶಿವಲಿಂಗೇಗೌಡರವರು ಅದ್ಭುತವಾಗಿ ಮಾತನಾಡಿ ಮೆಚ್ಚುಗೆ ಗಳಿಸಿದರು. ತದನಂತರ ಎಚ್.ಡಿ ರೇವಣ್ಣನವರು ಮಾತಿನ ಚಟಾಕಿ ಹಾರಿಸಿದರು. ಇಡೀ ವರ್ಷಪೂರ್ತಿ ನನ್ನ ಬಗ್ಗೆಯೇ ಮಾತಾಡಿದ್ದೀರಿ ಇಂದು ನನಗೆ ಮಾತಾಡಲು ಎರಡು ಗಂಟೆ ಅವಕಾಶ ಕೊಡಬೇಕು ಸಭಾಧ್ಯಕ್ಷರೆ ಎಂದರು.

ಆಗ ರಮೇಶ್ ಕುಮಾರ್ ರವರು ಖಂಡಿತ ಸಮಯ ಕೊಡುತ್ತೇವೆ ರೇವಣ್ಣನವರೆ ಅದಕ್ಕೂ ಮೊದಲು ಯಾವಾಗ ಕೊಡಬೇಕು ಎಂದು ನಮ್ಮ ಜ್ಯೋತಿಷಿಯವರನ್ನು ಕೇಳಿ, ಯಾವ ಗಳಿಗೆ ಕೊಡಬೇಕು ಎಂದು ಹೇಳುತ್ತೀವಿ ಎಂದು ತಮಾಷೆ ಮಾಡುವ ಮೂಲಕ ಇಡೀ ಸದನ ನಗೆಗಡಲಲ್ಲಿ ಮುಳುಗುವಂತೆ ಮಾಡಿದರು. ನಂತರ ರೇವಣ್ಣನವರು ಮನೆಲೀ ಹೆಂಗಸರು ಕಾಯುತ್ತಿದ್ದಾರೆ, ಒಂದು ವಾರವಾಯಿತು ಬಂದು, ಹಾಗಾಗಿ ಇಂದಿನ ಸದನದ ಕಲಾಪವನ್ನು ಬೇಗ ಮುಗಿಸಿ ನಾವು ಮನೆಗೆ ಹೋಗಲು ಅವಕಾಶ ಕೊಡಿ ಎಂದರು.

ಸ್ಪೀಕರ್ ರಮೇಶ್ ಕುಮಾರ್ ರವರು ಕಾಂಗ್ರೆಸ್ ಶಾಸಕಾಂಗ ಪಕ್ಷದ ನಾಯಕ ಸಿದ್ದರಾಮಯ್ಯನವರ ಬಳಿ ದಯವಿಟ್ಟು ಇಂದು ಎಷ್ಟು ಗಂಟೆಗೆ ಮುಗಿಸುತ್ತೀರಿ ಹೇಳಿ ಎಂದು ಮನವಿ ಮಾಡಿದಾಗ ಸಿದ್ದರಾಮಯ್ಯನವರು “ಇನ್ನು ಬಹಳಷ್ಟು ಜನ ಮಾತಾಡುವವರಿದ್ದಾರೆ ಹಾಗಾಗಿ ಸೋಮವಾರ ಮುಂದೂಡಬೇಕಾಗಿ ಮನವಿ” ಎಂದು ಹೇಳಿದರು

ನಂತರ ಸ್ಪೀಕರ್ ರವರು ಕಲಾಪವನ್ನು ಸೋಮವಾರಕ್ಕೆ ಮುಂದೂಡಿದರು.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಐದು ವರ್ಷಗಳಲ್ಲಿ 84 ಸಾವಿರ ಸರ್ಕಾರಿ ಶಾಲೆಗಳು ಬಿಸಿಯೂಟ ಯೋಜನೆಯಿಂದ ಹೊರಕ್ಕೆ : ಸಂಸತ್ತಿಗೆ ತಿಳಿಸಿದ ಕೇಂದ್ರ

ಕಳೆದ ಐದು ವರ್ಷಗಳಲ್ಲಿ 84 ಸಾವಿರ ಸರ್ಕಾರಿ ಶಾಲೆಗಳು 'ಪ್ರಧಾನಮಂತ್ರಿ ಪೋಷಣ್ ಯೋಜನೆ'ಯಿಂದ (ಮಧ್ಯಾಹ್ನದ ಬಿಸಿಯೂಟ) ಹೊರ ಬಿದ್ದಿವೆ. 2020-21ರಲ್ಲಿ 11.19 ಲಕ್ಷ ಇದ್ದ ಶಾಲೆಗಳ ಸಂಖ್ಯೆ 2024-25ರಲ್ಲಿ 10.35ಕ್ಕೆ ಕುಸಿದಿದೆ ಎಂದು...

ಭೀಮಾ ಕೋರೆಗಾಂವ್ ಪ್ರಕರಣ: ಗೌತಮ್ ನವಲಖಾಗೆ ಜಾಮೀನಿನ ಮೇಲೆ ದೆಹಲಿಗೆ ತೆರಳಲು ಅನುಮತಿ ನೀಡಿದ ಬಾಂಬೆ ಹೈಕೋರ್ಟ್

ಭೀಮಾ ಕೋರೆಗಾಂವ್ ಯುಎಪಿಎ ಪ್ರಕರಣದಲ್ಲಿ ಜಾಮೀನಿನ ಮೇಲೆ ಹೊರಗಿರುವ ಮಾನವ ಹಕ್ಕುಗಳ ಕಾರ್ಯಕರ್ತ ಗೌತಮ್ ನವಲಖಾ ಅವರಿಗೆ ಪ್ರಕರಣದ ವಿಚಾರಣೆ ನಡೆಯುತ್ತಿರುವಾಗ ನವದೆಹಲಿಯಲ್ಲಿ ವಾಸಿಸಲು ಬಾಂಬೆ ಹೈಕೋರ್ಟ್ ಬುಧವಾರ ಅನುಮತಿ ನೀಡಿದೆ. ಆದಾಗಲೂ, ಮಾನವ...

ಕಾರವಾರ ನೌಕಾ ಪ್ರದೇಶದ ಸುತ್ತಮುತ್ತ ಆತಂಕ ಮೂಡಿಸಿದ ‘ಸೀಗಲ್‌’ ಪಕ್ಷಿ; ಚೀನಾ ನಿರ್ಮಿತ ಜಿಪಿಎಸ್ ಸಾಧನ ಪತ್ತೆ

ಉತ್ತರ ಕನ್ನಡ ಜಿಲ್ಲೆಯ ಕಾರವಾರದ ಕರಾವಳಿ ಪ್ರದೇಶದ ಬಳಿ, ಸೂಕ್ಷ್ಮ ನೌಕಾ ವಲಯದ ಬಳಿ ಚೀನಾ ನಿರ್ಮಿತ ಜಿಪಿಎಸ್ ಟ್ರ್ಯಾಕಿಂಗ್ ಸಾಧನವೊಂದು 'ಸೀಗಲ್' (ಸಮುದ್ರಹಕ್ಕಿ) ಪಕ್ಷಿಗೆ ಅಳವಡಿಸಿರುವುದು ಕಂಡುಬಂದ ನಂತರ ಭದ್ರತಾ ಸಂಸ್ಥೆಗಳು...

ಅಣು ಶಕ್ತಿಯ ಖಾಸಗೀಕರಣ : ‘ಶಾಂತಿ’ ಮಸೂದೆಗೆ ಲೋಕಸಭೆ ಅಸ್ತು

ಭಾರತದ ಅಣು ವಿದ್ಯುತ್ ಕ್ಷೇತ್ರದಲ್ಲಿ ಖಾಸಗಿ ವಲಯದ ಪ್ರವೇಶಕ್ಕೆ ದಾರಿ ಮಾಡಿಕೊಡುವ, 'ಭಾರತದ ಪ್ರಗತಿಗಾಗಿ ಅಣು ಶಕ್ತಿಯ ಸುಸ್ಥಿರ ಉತ್ಪಾದನೆ (ಎಸ್‌ಎಚ್‌ಎಎನ್‌ಟಿಐ– ಶಾಂತಿ ಮಸೂದೆ) ಮಸೂದೆಯನ್ನು ಲೋಕಸಭೆ ಬುಧವಾರ (ಡಿ.17) ಅಂಗೀಕರಿಸಿತು. ವಿಪಕ್ಷಗಳ ಸದಸ್ಯರು...

ಮಾದಕ ದ್ರವ್ಯ ಸೇವನೆ, ಲೈಂಗಿಕ ಕಿರುಕುಳಕ್ಕೆ 3 ಲಕ್ಷ ರೂ. ದಂಡ ವಸೂಲಿ: ಬೆಂಗಳೂರಿನ ಅಪಾರ್ಟ್‌ಮೆಂಟ್ ಅಸೋಸಿಯೇಷನ್ ​​ವಿರುದ್ಧ ಪ್ರಕರಣ ದಾಖಲು

ಬೆಂಗಳೂರು: ಪಶ್ಚಿಮ ಬೆಂಗಳೂರಿನ ದೊಡ್ಡಬೆಲೆ ಬಳಿಯ ವಸತಿ ಸಂಕೀರ್ಣವೊಂದರ ಅಪಾರ್ಟ್‌ಮೆಂಟ್ ಮಾಲೀಕರ ಸಂಘದ ವಿರುದ್ಧ ಅಪರಾಧ ಚಟುವಟಿಕೆಗಳಲ್ಲಿ ತೊಡಗಿರುವ ನಿವಾಸಿಗಳಿಂದ ದಂಡ ವಸೂಲಿ ಮಾಡಿದ ಮತ್ತು ಅಪರಾಧಗಳನ್ನು ಮುಚ್ಚಿಟ್ಟ ಆರೋಪದ ಮೇಲೆ ಕುಂಬಳಗೋಡು...

2020ರ ದೆಹಲಿ ಗಲಭೆ ಪ್ರಕರಣ: ಐವರು ಆರೋಪಿಗಳನ್ನು ಖುಲಾಸೆಗೊಳಿಸಿದ ನ್ಯಾಯಾಲಯ

2020 ರ ದೆಹಲಿ ಗಲಭೆಗೆ ಸಂಬಂಧಿಸಿದಂತೆ ಬೆಂಕಿ ಹಚ್ಚುವಿಕೆ, ಗಲಭೆ ಮತ್ತು ವಿಧ್ವಂಸಕ ಕೃತ್ಯದ ಆರೋಪ ಹೊತ್ತಿರುವ ಐವರನ್ನು ನ್ಯಾಯಾಲಯ ಖುಲಾಸೆಗೊಳಿಸಿದೆ. ಅಬ್ದುಲ್ ಸತ್ತಾರ್, ಮುಹಮ್ಮದ್ ಖಾಲಿದ್, ಹುನೈನ್, ತನ್ವೀರ್ ಮತ್ತು ಆರಿಫ್ ವಿರುದ್ಧದ...

ಕಾರ್‌ ಚಲಾಯಿಸುವಾಗ ಫೋನ್‌ನಲ್ಲಿ ಮಾತನಾಡದಂತೆ ಹೇಳಿದ್ದಕ್ಕೆ ಪತ್ರಕರ್ತನ ಮೇಲೆ ರಾಡ್‌ನಿಂದ ಹಲ್ಲೆ

ಆ್ಯಪ್ ಆಧಾರಿತ ಟ್ಯಾಕ್ಸಿ ಬುಕಿಂಗ್‌ ಮಾಡುವ ಪ್ರಯಾಣಿಕರ ಸುರಕ್ಷತೆ ಮತ್ತು ಚಾಲಕರ ನಡವಳಿಕೆಯ ಕುರಿತ ಕಳವಳವಳಕಾರಿ ಘಟನೆಯೊಂದು ಹರಿಯಾಣದ ಫರಿದಾಬಾದ್‌ನಲ್ಲಿ ಬೆಳಕಿಗೆ ಬಂದಿದೆ. ರ್ಯಾಪಿಡೋ ಟ್ಯಾಕ್ಸಿ ಚಾಲಕನೊಬ್ಬ ಪ್ರಯಾಣಿಕನ ಮೇಲೆ ಕಬ್ಬಿಣದ ರಾಡ್‌ನಿಂದ...

ರಾಜಸ್ಥಾನ| ಎಥೆನಾಲ್ ಸ್ಥಾವರದ ವಿರುದ್ಧ ಪ್ರತಿಭಟನೆ: 40 ಜನರ ಬಂಧನ

ರಾಜಸ್ಥಾನದ ಹನುಮಾನ್‌ಗಢ ಜಿಲ್ಲೆಯ ರೈತರು, ಪ್ರಸ್ತಾವಿತ ಎಥೆನಾಲ್ ಕಾರ್ಖಾನೆಯ ವಿರುದ್ಧ ಎರಡನೇ ದಿನವೂ ಪ್ರತಿಭಟನೆ ಮುಂದುವರೆಸಿದ್ದಾರೆ, ಈ ಪ್ರದೇಶದಲ್ಲಿ ಹೆಚ್ಚಿನ ಭದ್ರತೆ ಮತ್ತು ಇಂಟರ್ನೆಟ್ ಸೇವೆಗಳನ್ನು ಸ್ಥಗಿತಗೊಳಿಸಲಾಗಿದೆ. ಗುರುವಾರ ಮುಂಜಾನೆ ಟಿಬ್ಬಿ ಬಳಿಯ ಗುರುದ್ವಾರದಲ್ಲಿ...

ವಿಧಾನಸಭೆಯಲ್ಲಿ ‘ಗೃಹಲಕ್ಷ್ಮಿ’ ಗದ್ದಲ : ಬಿಜೆಪಿ ಸದಸ್ಯರಿಂದ ಸಭಾತ್ಯಾಗ, ಕ್ಷಮೆ ಕೋರಿದ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್

ಗೃಹಲಕ್ಷಿ ಯೋಜನೆಯ ಹಣ ಬಿಡುಗಡೆ ಸಂಬಂಧ ಸಚಿವರು ಸದನಕ್ಕೆ ತಪ್ಪು ಮಾಹಿತಿ ನೀಡಿದ್ದಾರೆ ಎಂಬ ವಿಚಾರ ಇಂದು (ಡಿ.17 ಬುಧವಾರ) ವಿಧಾನಸಭೆಯಲ್ಲಿ ದೊಡ್ಡ ಮಟ್ಟದ ವಾಗ್ವಾದ, ಆರೋಪ-ಪ್ರತ್ಯಾರೋಪ, ಗದ್ದಲ, ಪ್ರತಿಭಟನೆ, ಸಭಾತ್ಯಾಗ ಮತ್ತು...

ತಂಪು ಪಾನೀಯದಲ್ಲಿ ಮತ್ತು ಬರುವ ಔಷಧ ಬೆರೆಸಿ ಅಪ್ರಾಪ್ತ ಬಾಲಕಿಯರ ಮೇಲೆ ಅತ್ಯಾಚಾರ: ಆರೋಪಿ ಬಂಧನ

ಮುಂಬೈ ನಗರವನ್ನೇ ಬೆಚ್ಚಿಬೀಳಿಸಿದ ಆಘಾತಕಾರಿ ಘಟನೆಯಲ್ಲಿ, ವಕ್ತಿಯೋರ್ವ ಮತ್ತು ಬರುವ ತಂಪು ಪಾನೀಯ ನೀಡಿ ಅಪ್ರಾಪ್ತ ಬಾಲಕಿಯರ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ್ದಾನೆ. ಅಪರಾಧದ ಅಶ್ಲೀಲ ವೀಡಿಯೊಗಳನ್ನು ರೆಕಾರ್ಡ್ ಮಾಡಿ, ನಂತರ ವೀಡಿಯೊಗಳನ್ನು...