Homeಕರ್ನಾಟಕಸದನದಲ್ಲಿ ಮಹತ್ವದ ಚರ್ಚೆ, ಹಾಸ್ಯ, ನೋವು: ಕಲಾಪ ಸೋಮವಾರಕ್ಕೆ..

ಸದನದಲ್ಲಿ ಮಹತ್ವದ ಚರ್ಚೆ, ಹಾಸ್ಯ, ನೋವು: ಕಲಾಪ ಸೋಮವಾರಕ್ಕೆ..

- Advertisement -
- Advertisement -

ರಾಜ್ಯ ಸರ್ಕಾರದ ಹಾವು ಏಣಿ ಆಟ ಮುಂದುವರೆದಿದ್ದು ಇಂದು ಸಹ ಸದನದಲ್ಲಿ ಮಹತ್ವದ ಚರ್ಚೆ, ವಾಗ್ವಾದ ಮತ್ತು ಗದ್ದಲ ನಡೆದು ಕೊನೆಗೆ ಕಲಾಪವನ್ನು ಸ್ಪೀಕರ್ ರಮೇಶ್ ಕುಮಾರ್ ರವರು ಸೋಮವಾರಕ್ಕೆ ಮುಂದೂಡಿದರು.

ಸೋಮವಾರ ಏನೇ ಆಗಲಿ ಒಂದು ಇತ್ಯರ್ಥ ಮಾಡುತ್ತೇವೆ ಎಂದು ಮಾತುಕೊಟ್ಟ ಬಳಿಕವಷ್ಟೇ ಸದನದ ಕಲಾಪವನ್ನು ಮುಂದೂಡಿದ್ದ ಅಲ್ಲಿಯವರೆಗೂ ಬಿಜೆಪಿ ಕಾಯಬೇಕಾಗಿದೆ ಮಾತ್ರವಲ್ಲ ಬಂಡಾಯವೆದ್ದಿರುವ ಅತೃಪ್ತ ಶಾಸಕರನ್ನು ಕಾಯುವ ಕೆಲಸ ಮಾಡಬೇಕಿದೆ.

ಇನ್ನು ಮೈತ್ರಿ ಸರ್ಕಾರ ಚರ್ಚೆಯನ್ನು ಮನಬಂದಂತೆ ಎಳೆದುದ್ದಲ್ಲದೇ ಸೋಮವಾರ ಕುಮಾರಸ್ವಾಮಿಯವರು ರಾಜೀನಾಮೆ ನೀಡುವುದು ಖಚಿತವಾಗಿದ್ದು ಅಲ್ಲಿಯವರೆಗೂ ಬಿಜೆಪಿಯವರನ್ನು ಕಾಡಿಸುವ ಕೆಲಸವನ್ನು ಸಮರ್ಪಕವಾಗಿ ಮಾಡಿದೆ.

ಇಂದು ರಾತ್ರಿ 12 ಗಂಟೆಯಾದರೂ ಪರವಾಗಿಲ್ಲ, ನಾವು ಸದನದಲ್ಲಿರುತ್ತೇವೆ, ದಯವಿಟ್ಟು ಇಂದು ತೀರ್ಮಾನ ಮಾಡಿ ಎಂದು ವಿಪಕ್ಷ ನಾಯಕ ಬಿ.ಎಸ್ ಯಡಿಯೂರಪ್ಪನವರು ಪದೇ ಪದೇ ಸ್ಪೀಕರ್ ಬಳಿ ಮನವಿ ಮಾಡಿದರೂ ಸ್ಪೀಕರ್ ರವರು ಕರಗದೇ ಕೊನೆಗೂ ಕಲಾಪ ಮುಂದೂಡಿದರು.

ಇದಕ್ಕೂ ಮೊದಲು ಇಂದು 1:30ರವರೆಗೆ ಡೆಡ್ ಲೈನ್ ಕೊಟ್ಟಿದ್ದ ರಾಜ್ಯಪಾಲರು ತಮ್ಮ ಮಾತನ್ನು ಸಿಎಂ ಕುಮಾರಸ್ವಾಮಿಯವರು ಮೀರಿದ್ದರಿಂದ ಸಂಜೆ ಆರು ಗಂಟೆಯೊಳಗೆ ವಿಶ್ವಾಸಮತ ಸಾಬೀತುಪಡಿಸಿ ಎಂದು ಮತ್ತೊಮ್ಮೆ ಡೆಡ್ ಲೈನ್ ಕೊಟ್ಟರೂ ಸಹ ಸಿಎಂ ಅವರ ಮಾತಿಗೆ ಕವಡೆ ಕಾಸಿನ ಕಿಮ್ಮತ್ತು ಸಹ ಕೊಡಲಿಲ್ಲ.

ಇನ್ನು ಆಡಳಿತ ಪಕ್ಷದ ಪರ ಒಬ್ಬರ ನಂತರ ಒಬ್ಬರಂತೆ ಭಾಷಣ ಬಿಗಿದರು. ಕಾಂಗ್ರೆಸ್ ನ ಕೃಷ್ಣಭೈರೇಗೌಡ ಮತ್ತು ಜೆಡಿಎಸ್ ಶಿವಲಿಂಗೇಗೌಡರವರು ಅದ್ಭುತವಾಗಿ ಮಾತನಾಡಿ ಮೆಚ್ಚುಗೆ ಗಳಿಸಿದರು. ತದನಂತರ ಎಚ್.ಡಿ ರೇವಣ್ಣನವರು ಮಾತಿನ ಚಟಾಕಿ ಹಾರಿಸಿದರು. ಇಡೀ ವರ್ಷಪೂರ್ತಿ ನನ್ನ ಬಗ್ಗೆಯೇ ಮಾತಾಡಿದ್ದೀರಿ ಇಂದು ನನಗೆ ಮಾತಾಡಲು ಎರಡು ಗಂಟೆ ಅವಕಾಶ ಕೊಡಬೇಕು ಸಭಾಧ್ಯಕ್ಷರೆ ಎಂದರು.

ಆಗ ರಮೇಶ್ ಕುಮಾರ್ ರವರು ಖಂಡಿತ ಸಮಯ ಕೊಡುತ್ತೇವೆ ರೇವಣ್ಣನವರೆ ಅದಕ್ಕೂ ಮೊದಲು ಯಾವಾಗ ಕೊಡಬೇಕು ಎಂದು ನಮ್ಮ ಜ್ಯೋತಿಷಿಯವರನ್ನು ಕೇಳಿ, ಯಾವ ಗಳಿಗೆ ಕೊಡಬೇಕು ಎಂದು ಹೇಳುತ್ತೀವಿ ಎಂದು ತಮಾಷೆ ಮಾಡುವ ಮೂಲಕ ಇಡೀ ಸದನ ನಗೆಗಡಲಲ್ಲಿ ಮುಳುಗುವಂತೆ ಮಾಡಿದರು. ನಂತರ ರೇವಣ್ಣನವರು ಮನೆಲೀ ಹೆಂಗಸರು ಕಾಯುತ್ತಿದ್ದಾರೆ, ಒಂದು ವಾರವಾಯಿತು ಬಂದು, ಹಾಗಾಗಿ ಇಂದಿನ ಸದನದ ಕಲಾಪವನ್ನು ಬೇಗ ಮುಗಿಸಿ ನಾವು ಮನೆಗೆ ಹೋಗಲು ಅವಕಾಶ ಕೊಡಿ ಎಂದರು.

ಸ್ಪೀಕರ್ ರಮೇಶ್ ಕುಮಾರ್ ರವರು ಕಾಂಗ್ರೆಸ್ ಶಾಸಕಾಂಗ ಪಕ್ಷದ ನಾಯಕ ಸಿದ್ದರಾಮಯ್ಯನವರ ಬಳಿ ದಯವಿಟ್ಟು ಇಂದು ಎಷ್ಟು ಗಂಟೆಗೆ ಮುಗಿಸುತ್ತೀರಿ ಹೇಳಿ ಎಂದು ಮನವಿ ಮಾಡಿದಾಗ ಸಿದ್ದರಾಮಯ್ಯನವರು “ಇನ್ನು ಬಹಳಷ್ಟು ಜನ ಮಾತಾಡುವವರಿದ್ದಾರೆ ಹಾಗಾಗಿ ಸೋಮವಾರ ಮುಂದೂಡಬೇಕಾಗಿ ಮನವಿ” ಎಂದು ಹೇಳಿದರು

ನಂತರ ಸ್ಪೀಕರ್ ರವರು ಕಲಾಪವನ್ನು ಸೋಮವಾರಕ್ಕೆ ಮುಂದೂಡಿದರು.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರೈಲುಗಳಲ್ಲಿ ಹಲಾಲ್ ಮಾಂಸ; ರೈಲ್ವೆಗೆ ಮಾನವ ಹಕ್ಕುಗಳ ಆಯೋಗ ನೋಟಿಸ್

ಭಾರತೀಯ ರೈಲ್ವೆ ತನ್ನ ರೈಲುಗಳಲ್ಲಿ ಹಲಾಲ್-ಸಂಸ್ಕರಿಸಿದ ಮಾಂಸವನ್ನು ಮಾತ್ರ ಪೂರೈಸುತ್ತದೆ ಎಂಬ ದೂರು ಬಂದ ನಂತರ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ (ಎನ್‌ಎಚ್‌ಆರ್‌ಸಿ) ರೈಲ್ವೆ ಮಂಡಳಿಗೆ ನೋಟಿಸ್ ನೀಡಿದೆ. "ಇದು ತಾರತಮ್ಯವನ್ನು ಸೃಷ್ಟಿಸುತ್ತದೆ,...

ಕರ್ತವ್ಯದಲ್ಲಿದ್ದಾಗ ಧಾರ್ಮಿಕ ಆಚರಣೆಗೆ ನಿರಾಕರಣೆ; ಹೈದರಾಬಾದ್ ಪೊಲೀಸರ ವಿರುದ್ಧ ಹಿಂದುತ್ವ ಗುಂಪಿನಿಂದ ಪ್ರತಿಭಟನೆ

ಕರ್ತವ್ಯದಲ್ಲಿರುವಾಗ ಸಬ್-ಇನ್ಸ್‌ಪೆಕ್ಟರ್ ಅವರಿಗೆ ಅಯ್ಯಪ್ಪ ದೀಕ್ಷಾ ಪದ್ಧತಿಗಳನ್ನು ಅನುಸರಿಸಲು ಅನುಮತಿ ನಿರಾಕರಿಸಿದ ಪೊಲೀಸ್ ಆಂತರಿಕ ಜ್ಞಾಪಕ ಪತ್ರವು ಸಾರ್ವಜನಿಕವಾಗಿ ಪ್ರಸಾರವಾದ ನಂತರ ಹೈದರಾಬಾದ್‌ನ ಆಗ್ನೇಯ ವಲಯ ಪೊಲೀಸರು ರಾಜಕೀಯ ವಿವಾದದ ಮಧ್ಯದಲ್ಲಿ ಸಿಲುಕಿದ್ದಾರೆ. ಮೇಲಧಿಕಾರಿಗಳು...

ಆನ್‌ಲೈನ್‌ ವಿಷಯಗಳ ನಿಯಂತ್ರಣ : ಸ್ವಾಯತ್ತ ಸಂಸ್ಥೆಯ ಅಗತ್ಯವಿದೆ ಎಂದ ಸುಪ್ರೀಂ ಕೋರ್ಟ್

ಆನ್‌ಲೈನ್ ಪ್ಲಾಟ್‌ಫಾರ್ಮ್‌ಗಳಲ್ಲಿ ಅಶ್ಲೀಲ, ಆಕ್ರಮಣಕಾರಿ ಅಥವಾ ಕಾನೂನುಬಾಹಿರ ವಿಷಯವನ್ನು ನಿಯಂತ್ರಿಸಲು 'ತಟಸ್ಥ, ಸ್ವತಂತ್ರ ಮತ್ತು ಸ್ವಾಯತ್ತ' ಸಂಸ್ಥೆಯ ಅಗತ್ಯವಿದೆ ಎಂದು ಸುಪ್ರೀಂ ಕೋರ್ಟ್ ಗುರುವಾರ (ನ. 27) ಒತ್ತಿ ಹೇಳಿದೆ. ಮಾಧ್ಯಮ ಸಂಸ್ಥೆಗಳು...

ಆರು ವರ್ಷದ ಬಾಲಕಿ ಮೇಲೆ ಅತ್ಯಾಚಾರ: ಕೃತ್ಯ ಎಸಗಿದವನನ್ನು ಗಲ್ಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಆಗ್ರಹ

ಮಧ್ಯಪ್ರದೇಶದ ಪಂಜ್ರಾ ಗ್ರಾಮದಲ್ಲಿ ಆರು ವರ್ಷದ ಬಾಲಕಿಯ ಮೇಲೆ ನಡೆದ ಅತ್ಯಾಚಾರ ಪ್ರಕರಣ ಪ್ರತಿಭಟನೆಗೆ ಕಾರಣವಾಯಿತು. ಕೃತ್ಯ ಎಸಗಿದ ಸಲ್ಮಾನ್‌ನನ್ನು ಗಲಗಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಒಗ್ಗಟ್ಟಾಗಿ ಆಗ್ರಹಿಸಿದೆ. ನ್ಯಾಯಕ್ಕಾಗಿ ಒತ್ತಾಯಿಸುತ್ತಿರುವ ಎರಡೂ ಸಮುದಾಯಗಳು ಕೃತ್ಯವನ್ನು...

ತೆಲಂಗಾಣ ಮಾಜಿ ಸರಪಂಚ್ ಭೀಕರ ಹತ್ಯೆ ಪ್ರಕರಣ; ಸುಪಾರಿ ಗ್ಯಾಂಗ್ ಬಂಧನ

ತೆಲಂಗಾಣ ರಾಜ್ಯದ ಗದ್ವಾಲ ಜಿಲ್ಲೆಯ ನಂದಿನ್ನಿ ಗ್ರಾಮದ ಮಾಜಿ ಸರಪಂಚ ಚಿನ್ನ ಭೀಮರಾಯ ಎಂಬುವವರನ್ನು ಕಳೆದ ಶುಕ್ರವಾರ ಮಧ್ಯಾಹ್ನ ಜಾಂಪಲ್ಲಿ ಗ್ರಾಮದ ಹತ್ತಿರ ದ್ವಿಚಕ್ರ ವಾಹನಕ್ಕೆ ಕಾರಿನಿಂದ ಡಿಕ್ಕಿ ಹೊಡೆದು ಕೊಲೆ ಮಾಡಲಾಗಿತ್ತು....

ಹಿರಿಯ ನಾಯಕರೊಂದಿಗೆ ಚರ್ಚಿಸಿ ಸಿಎಂ ಬದಲಾವಣೆ ಗೊಂದಲಕ್ಕೆ ತೆರೆ : ಮಲ್ಲಿಕಾರ್ಜುನ ಖರ್ಗೆ

ಕರ್ನಾಟಕದಲ್ಲಿ ಹೆಚ್ಚುತ್ತಿರುವ ನಾಯಕತ್ವದ ಜಗಳವನ್ನು ಪರಿಹರಿಸಲು ರಾಹುಲ್ ಗಾಂಧಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಸೇರಿದಂತೆ ಪಕ್ಷದ ಹಿರಿಯ ನಾಯಕರೊಂದಿಗೆ ನವದೆಹಲಿಯಲ್ಲಿ ಸಭೆ ನಡೆಸುವುದಾಗಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ...

ದಲಿತ ಎಂಬ ಕಾರಣಕ್ಕೆ ಅಯೋಧ್ಯೆ ಧ್ವಜಾರೋಹಣಕ್ಕೆ ನನ್ನನ್ನು ಆಹ್ವಾನಿಸಿಲ್ಲ: ಎಸ್‌ಪಿ ಸಂಸದ ಅವಧೇಶ್ ಪ್ರಸಾದ್

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಾಲಯದಲ್ಲಿ ನಡೆದ ಧ್ವಜಾರೋಹಣ ಸಮಾರಂಭಕ್ಕೆ ತಮ್ಮನ್ನು ಆಹ್ವಾನಿಸಲಾಗಿಲ್ಲ ಎಂದು ಸಮಾಜವಾದಿ ಪಕ್ಷದ ಸಂಸದ ಅವಧೇಶ್ ಪ್ರಸಾದ್ ಹೇಳಿದ್ದಾರೆ. ದಲಿತ ಸಮುದಾಯಕ್ಕೆ ಸೇರಿದವರಾಗಿರುವುದರಿಂದ ನನ್ನನ್ನು ಹೊರಗಿಡಲಾಗಿದೆ ಎಂದು ಅವರು...

ನೂರಾರು ಹುಡುಗಿಯರ ಮೇಲೆ ಲೈಂಗಿಕ ದೌರ್ಜನ್ಯ, ಜೈಲಿನಲ್ಲಿ ನಿಗೂಢ ಸಾವು : ಅಮೆರಿಕವನ್ನು ತಲ್ಲಣಗೊಳಿಸಿದ ಜೆಫ್ರಿ ಎಪ್‌ಸ್ಟೀನ್ ಯಾರು?

ಜೆಫ್ರಿ ಎಪ್‌ಸ್ಟೀನ್ ಎಂಬ ಅಮೆರಿಕದ ಈ ಪ್ರಭಾವಿ ವ್ಯಕ್ತಿಯ ಹೆಸರು ಕಳೆದ ದಿನಗಳಿಂದ ಭಾರೀ ಚರ್ಚೆಯಲ್ಲಿದೆ. 2019ರಿಂದಲೂ ಈತನ ಬಗ್ಗೆ ಜಾಗತಿಕ ಮಟ್ಟದಲ್ಲಿ ಚರ್ಚೆಗಳು ನಡೆದರೂ, ಈಗ ಮತ್ತೊಮ್ಮೆ ಈತನ ವಿಷಯ ಮುನ್ನೆಲೆಗೆ...

ಎಕ್ಸ್‌ಪ್ರೆಸ್ ರೈಲಿನಲ್ಲಿ ನೂಡಲ್ಸ್‌ ಬೇಯಿಸಿದ ಮಹಿಳೆ ಪುಣೆಯಲ್ಲಿ ಪತ್ತೆ; ಕ್ಷಮೆಯಾಚನೆ

ಎಕ್ಸ್‌ಪ್ರೆಸ್ ರೈಲಿನ ಕೋಚ್‌ನ ಪವರ್ ಸಾಕೆಟ್‌ಗೆ ಪ್ಲಗ್ ಮಾಡಲಾದ ಎಲೆಕ್ಟ್ರಿಕ್ ಕೆಟಲ್‌ನಿಂದ ಬಳಸಿ ನೂಡಲ್ಸ್ ತಯಾರಿಸುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿತ್ತು; ಆ ಮಹಿಳೆಯನ್ನು ಕೇಂದ್ರ ರೈಲ್ವೆ ಪತ್ತೆಹಚ್ಚಿದೆ. ಸರಿತಾ ಲಿಂಗಾಯತ್...

ಬೆಂಗಳೂರು ಪೊಲೀಸರಲ್ಲಿ ವಿಶ್ವಾಸಾರ್ಹತೆಯ ಬಿಕ್ಕಟ್ಟು: ಕಳೆದ ಹತ್ತು ತಿಂಗಳಲ್ಲಿ 124 ಪೊಲೀಸ್ ಸಿಬ್ಬಂದಿ ಅಮಾನತು

ಕಳೆದ ಹತ್ತು ತಿಂಗಳಲ್ಲಿ ಬೆಂಗಳೂರಿನಲ್ಲಿ ಕಾನ್‌ಸ್ಟೆಬಲ್‌ಗಳಿಂದ ಹಿಡಿದು ಐಪಿಎಸ್ ಅಧಿಕಾರಿಗಳವರೆಗೆ ಸುಮಾರು 124 ಪೊಲೀಸ್ ಸಿಬ್ಬಂದಿಯನ್ನು, ಭ್ರಷ್ಟಾಚಾರ, ಸುಲಿಗೆ, ದರೋಡೆ, ಕರ್ತವ್ಯ ಲೋಪ ಮತ್ತು ಮಾದಕವಸ್ತು ಮಾರಾಟದಂತಹ ಅಪರಾಧಗಳಿಗಾಗಿ ಅಮಾನತುಗೊಳಿಸಲಾಗಿದೆ. ಆದರೆ ಯಾವುದೇ ಪ್ರಕರಣವೂ...